Author: kannadanewsnow09

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಕೇಸ್ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸಿಎಂ ಸಿದ್ಧರಾಮಯ್ಯ ಕೂಡ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು, ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ. ಈ ನಡುವೆ ನಟ ಪ್ರಕಾಶ್ ರಾಜ್ ಬಾಯಲ್ಲಿ ರಾಮಬಾಣ, ಒಳಗೆಲ್ಲ ಕಾಮಾಯಣ ಎಂಬುದಾಗಿ ಜೆಡಿಎಸ್ ಪಕ್ಷದ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ಕಳೆದ ಮೂರು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಇದೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಹೆಚ್.ಡಿ ರೇವಣ್ಣ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ರಾಜ್ಯ ಸರ್ಕಾರವು ಮಹಿಳಾ ಆಯೋಗದ ಪತ್ರದ ಬೆನ್ನಲ್ಲೇ ಸಿಐಡಿಯ ಎಸ್ಐಟಿ ತಂಡವನ್ನು ಪ್ರಕರಣದ ತನಿಖೆಗಾಗಿ ರಚಿಸಿ ಆದೇಶಿಸಿದೆ. ಈಗಾಗಲೇ ಎಸ್ಐಟಿ ತಂಡದಿಂದ ತನಿಖೆ ಚುರುಕುಗೊಳಿಸಲಾಗಿದ್ದು, ಸಂತ್ರಸ್ತೆಯರ ಹೇಳಿಕೆಯನ್ನು ಪಡೆಯೋ ಕೆಲಸ ಮಾಡಲಾಗುತ್ತಿದೆ. ಹಾಸನ ಅಶ್ಲೀಲ ವೀಡಿಯೋ ಪ್ರಕರಣದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಕೂಡ ಧ್ವನಿ ಎತ್ತಿದ್ದಾರೆ.…

Read More

ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರದ ಕಾವು ಬಿರು ಬಿಸಿಲಿನ ನಡುವೆ ಹೆಚ್ಚಾಗಿದೆ. ಈ ವೇಳೆಯಲ್ಲಿ ಚುನಾವಣಾ ಪ್ರಚಾರದ ವೇಳೆಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದಂತ ತೆಲಂಗಾಣ ಮಾಡಿ ಸಿಎಂ ಕೆ.ಚಂದ್ರಶೇಖರ ರಾವ್ ಅವರಿಗೆ ಚುನಾವಣಾ ಆಯೋಗವು 48 ಗಂಟೆ ಪ್ರಚಾರ ಮಾಡದಂತೆ ನಿಷೇಧ ಹೇರಿದೆ. ಈ ಬಗ್ಗೆ ಎಎನ್ಐ ಮಾಹಿತಿ ನೀಡಿದ್ದು, ಸಿರ್ಸಿಲ್ಲಾದಲ್ಲಿ ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಮತ್ತು ಬಿಆರ್ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ ಅವರನ್ನು ಚುನಾವಣಾ ಆಯೋಗವು ಮೇ 1 ರಂದು ರಾತ್ರಿ 8 ಗಂಟೆಯಿಂದ 48 ಗಂಟೆಗಳ ಕಾಲ ಪ್ರಚಾರದಿಂದ ನಿಷೇಧಿಸಿದೆ ಎಂದಿದೆ. https://twitter.com/ANI/status/1785652296506052855 https://kannadanewsnow.com/kannada/severe-heat-wave-conditions-in-these-districts-of-the-state-from-today-till-may-5-imd-issues-red-alert/ https://kannadanewsnow.com/kannada/this-is-proof-that-the-congress-government-is-emptying-the-treasury-by-not-giving-milk-incentives-opposition-leader-r-ashoka/

Read More

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ರಾಷ್ಟ್ರವ್ಯಾಪಿ ಸದ್ದು ಮಾಡುತ್ತಿದೆ. ಕರ್ನಾಟಕದಲ್ಲೇ ಕೇಂದ್ರ ಗೃಹ ಸಚಿವರಿದ್ದರೂ ಇದರ ಬಗ್ಗೆ ಸೊಲ್ಲೆತ್ತುತ್ತಿಲ್ಲ. ಈ ನಡುವೆ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮೊದಲು ಮಾಹಿತಿ ಸಿಕ್ಕಿದ್ದೇ ಅಮಿತ್ ಶಾಗೆ ಎಂಬುದಾಗಿ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಇಂದು ಎಕ್ಸ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ಕೇಂದ್ರ ಗೃಹಸಚಿವರಾದ ಅಮಿತ್ ಶಾ ಅವರು ಕರ್ನಾಟಕದಲ್ಲಿದ್ದಾರೆ, ಪಾಪ,, ಅವರೇ ಹೇಳಿಕೊಂಡಂತೆ ಅವರಿಗೆ ನಾರಿಶಕ್ತಿ, ಮಾತೃಶಕ್ತಿಯ ಬಗ್ಗೆ ಬಹಳ ಗೌರವವಿದೆಯಂತೆ! ಅವರ ಪಕ್ಷ ಬಿಜೆಪಿಯೇ ಬೆಂಬಲಿಸಿದ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಂದ ಸಂತ್ರಸ್ತರಾದ ಮಹಿಳೆಯರು ತೀವ್ರ ಆತಂಕ, ನೋವಿನಲ್ಲಿದ್ದಾರೆ, ನಾರಿಶಕ್ತಿಯ ಬಗ್ಗೆ ಗೌರವ ಇರುವ ಅಮಿತ್ ಶಾ ಅವರು ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆಯರನ್ನು ಭೇಟಿಯಾಗಿ ಧೈರ್ಯ ತುಂಬಿಲ್ಲ ಏಕೆ?ಎಂದು ಪ್ರಶ್ನಿಸಿದೆ. ಜಾಗತಿಕ ಮಟ್ಟದಲ್ಲಿ ಈ ಪ್ರಕರಣ ಸದ್ದು ಮಾಡಿದ್ದರೂ ದೇಶದ ಗೃಹಸಚಿವರಾಗಿ ತಮ್ಮ ಹೊಣೆಗಾರಿಕೆ ಪ್ರದರ್ಶಿಸಿಲ್ಲವೇಕೆ? ಪ್ರಜ್ವಲ್ ರೇವಣ್ಣನ ಪ್ರಕರಣದ ಬಗ್ಗೆ ಮೊದಲು ಮಾಹಿತಿ ಸಿಕ್ಕಿದ್ದೇ ಅಮಿತ್…

Read More

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ಮಂಗಳ ಮಂಗಳ ಗ್ರಹವು ಆಕ್ರಮಣಶೀಲತೆಯನ್ನು ಸೂಚಿಸುತ್ತದೆ ಮತ್ತು ಆದ್ದರಿಂದ ಜ್ಯೋತಿಷ್ಯದಲ್ಲಿ…

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ದೇಶದ ಜನರು ತೀರ್ಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು. ಕಲಬುರಗಿ ಲೋಕಸಭಾ ಕ್ಷೇತ್ರದ ಚಿತ್ತಾಪುರದಲ್ಲಿ ಇಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಡಾ. ಉಮೇಶ್ ಜಾಧವ್ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ರಾಜ್ಯ ಮಾತ್ರವಲ್ಲದೆ, ರಾಷ್ಟ್ರದಾದ್ಯಂತ ಜನರು ದೇಶದ ಸುರಕ್ಷತೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಬಯಸುತ್ತಿದ್ದಾರೆ ಎಂದು ವಿಶ್ಲೇಷಿಸಿದರು. ಸಾಮಾನ್ಯ ಜನರಲ್ಲೂ ಮೋದಿಯವರ ನಾಯಕತ್ವದ ಕುರಿತು ವಿಶ್ವಾಸ ಹೆಚ್ಚಾಗಿದೆ. ಕಳೆದ 10 ವರ್ಷಗಳಲ್ಲಿ ಮೋದಿಯವರು ದೇಶದ ಪ್ರಧಾನಿಯಾದ ಬಳಿಕ ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಅವರು ಕೆಲಸ ಮಾಡುತ್ತಿದ್ದಾರೆ. ಹಿಂದೆ ರಾಜೀವ್ ಗಾಂಧಿಯವರು ಪ್ರಧಾನಿಯಾಗಿದ್ದಾಗ ‘ನಾನು ಪ್ರಧಾನಿಯಾಗಿ 100 ರೂ. ಕಳಿಸಿದರೆ ಅದು ಚಿತ್ತಾಪುರಕ್ಕೆ ಹೋಗಿ ತಲುಪಿದಾಗ ಬರೀ 15-20 ರೂ. ಆಗುತ್ತದೆ’ ಎಂದಿದ್ದರು. ಇನ್ನುಳಿದ 80-85 ರೂಪಾಯಿ ಮಧ್ಯಸ್ಥಿಕೆದಾರರ ಪಾಲಾಗುತ್ತದೆ ಎಂದು ತಿಳಿಸಿದ್ದರು ಎಂದು ನೆನಪಿಸಿದರು. ಮೋದಿಜೀ ಅವರು…

Read More

ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಲೋಕಸಭಾ ಚುನಾವಣಾ ಸಮಾವೇಶದಲ್ಲಿ ಭಾಗಿಯಾಗಿದ್ದಂತ ವ್ಯಕ್ತಿಯೊಬ್ಬರು ನಿಶ್ಯಕ್ತಿಯಿಂದ ಸಾವನ್ನಪ್ಪಿರೋ ಘಟನೆ ನಡೆದಿದೆ. ಬಾಗಲಕೋಟೆಯಲ್ಲಿ ಏಪ್ರಿಲ್.29ರಂದು ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆ ಸಂಬಂಧ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ್ದರು. ಈ ಕಾರ್ಯಕ್ರಮದಲ್ಲಿ ಮೋದಿಯವರ ಅಭಿಮಾನಿಯಾಗಿದ್ದಂತ ಶ್ರೀಶೈಲ ದೇಸಾಯಿ(45) ಎಂಬುವರು ಭಾಗಿಯಾಗಿದ್ದರು. ಮೊದಲೇ ಅನಾರೋಗ್ಯದಿಂದ ಬಳಲುತ್ತಿದ್ದಂತ ಅವರು, ಅದರ ನಡುವೆಯೂ ತಮ್ಮ ಊರಿನಿಂದ ಬಂದಿದ್ದಂತ ವಾಹನದಲ್ಲಿ ಬಾಗಲಕೋಟೆಯ ಮೋದಿ ಸಮಾವೇಶಕ್ಕೆ ಆಗಮಿಸಿದ್ದರು. ಮೋದಿಯವರ ಕಾರ್ಯಕ್ರಮದ ನಂತ್ರ ಊರಿನವರ ಜೊತೆಗೆ ಬಂದಿದ್ದಂತ ಅವರು, ಅವರಿಂದ ತಪ್ಪಿಸಿಕೊಂಡಿದ್ದರು. ಅವರನ್ನು ಹುಡುಕಾಡಿದಂತ ಊರಿನವರು ಸಿಗದೇ ಇದ್ದಾಗ, ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮಕ್ಕೆ ತೆರಳಿದ್ದರು. ತಮ್ಮೂರಿನವರನ್ನು ಹುಡುಕಿ ಹುಡುಕಿ ಸಾಕಾಗಿ, ನಿಶ್ಯಕ್ತಿಯಿಂದ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಶ್ರೀಶೈಲ ದೇಸಾಯಿ ಅವರ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ಹಂದಿಗಳು ತಿಂದು ಎಳೆದಾಡಿದ್ದಾವೆ. ಈ ಸಂಬಂಧ ಬಾಗಲಕೋಟೆ ನವನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/we-will-commit-suicide-if-we-dont-want-to-victims-reluctant-to-comment-before-sit/ https://kannadanewsnow.com/kannada/pornographic-video-case-prajwal-revanna-seeks-7-days-to-appear-before-sit/

Read More

ಬೆಂಗಳೂರು: ಕಳೆದ ಎಂಟು ತಿಂಗಳಿಂದ ರೈತರಿಗೆ ಸರ್ಕಾರ ಹಾಲಿನ ಪ್ರೋತ್ಸಾಹಧನ ನೀಡಿಲ್ಲ. ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಖಜಾನೆ ಖಾಲಿಯಾಗಿದ್ದು, ಎಂಟು ತಿಂಗಳಿಂದ ಹಾಲಿನ 5 ರೂ. ಪ್ರೋತ್ಸಾಹಧನ ನೀಡಿಲ್ಲ. ಸುಮಾರು 700 ಕೋಟಿ ರೂಪಾಯಿಯನ್ನು ಬಾಕಿ ಉಳಿಸಿಕೊಂಡಿದ್ದಾರೆ. ಜನರಿಗೆ ತೆರಿಗೆ ಹಾಕಿ ಅವರಿಂದ ವಸೂಲಿ ಮಾಡಿ ನಂತರ ಮಹಿಳೆಯರಿಗೆ ಹಣ ನೀಡುತ್ತೇವೆ ಎಂದು ನಾಟಕವಾಡಿದ್ದಾರೆ. ಉಚಿತ ಕೊಡುವ ಬದಲು ವಿದ್ಯಾರ್ಥಿಗಳಿಗೆ ಉಚಿತ ಪಾಸ್‌, ಶಾಲೆ, ಆಸ್ಪತ್ರೆ ನಿರ್ಮಾಣ ಮೊದಲಾದ ಯೋಜನೆಗಳನ್ನು ನೀಡಬೇಕಿತ್ತು. ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಡ ಎಂದರು. ಖಜಾನೆ ಖಾಲಿ ಮಾಡಿಕೊಂಡ ಬಳಿಕ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಕಳೆದ 50 ವರ್ಷದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯಕ್ಕೆ ಎಷ್ಟು ಹಣ ಬಂದಿದೆ ಎಂದು ತಿಳಿಸಲು ಸವಾಲು ಹಾಕುತ್ತೇನೆ. ಕಾಂಗ್ರೆಸ್‌ನ ಯೋಗ್ಯತೆಗೆ…

Read More

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಸಿದ್ಧರಾಮಯ್ಯ ಕೆಳಗೆ ಇಳಿದ 24 ಗಂಟೆಯಲ್ಲೇ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕಸ್ಟಡಿಗೆ ತೆಗೆದುಕೊಳ್ತೀವಿ ಅಂತ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತಿಗೆ ಮೂರು ಕಾಸಿನ ಬೆಲೆ ಇಲ್ಲ. ಭಯೋತ್ಪಾದನಾ ಚಟುವಟಿಕೆಗೆ ಅವರು ಹೇಳಿದ ಮಾತೆಲ್ಲ ಸುಳ್ಳಾಯಿತು. ಅವರು ಗೃಹಸಚಿವ ಅಮಿತ್‌ ಶಾ ಬಗ್ಗೆ ಹೇಳಿದ ಮಾತಿಗೆ ಬೆಲೆ ಕೊಡಬೇಕಾಗಿಲ್ಲ. 28 ಸ್ಥಾನದಲ್ಲಿ ಕೆಲವು ಸ್ಥಾನಗಳನ್ನು ಜೆಡಿಎಸ್‌ಗೆ ಬಿಟ್ಟಿದ್ದು, ಅಲ್ಲಿ ಯಾರು ಸ್ಪರ್ಧಿಸಬೇಕೆಂದು ಜೆಡಿಎಸ್‌ ತೀರ್ಮಾನಿಸುತ್ತದೆ. ಪ್ರಜ್ವಲ್‌ ರೇವಣ್ಣ ನಮ್ಮ ಸಂಸದರಲ್ಲ. ಇವರೇ ಜೋಡೆತ್ತು ಎಂದು ಅವರ ಜೊತೆಗೆ ಇದ್ದು ಮೊದಲಿಗೆ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್ಸೇ ಉತ್ತರ ನೀಡಬೇಕು. ಪ್ರಜ್ವಲ್‌ ವಿದೇಶಕ್ಕೆ ಹೋಗುವಾಗ ಕರ್ನಾಟಕ ಪೊಲೀಸರು ಏನು ಮಾಡುತ್ತಿದ್ದರು? ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು? ಕಾಂಗ್ರೆಸ್‌ ಸರ್ಕಾರ ಗುಪ್ತಚರ ದಳ ವಿಫಲವಾಗಿದೆ ಎಂದು ಒಪ್ಪಿಕೊಳ್ಳಲಿ ಎಂದರು. ಈ ದೇಶದ ಕಾನೂನಿಗೆ, ಸಂವಿಧಾನಕ್ಕೆ ಬಿಜೆಪಿ ಗೌರವ ನೀಡುತ್ತದೆ. ಯಾವುದೇ ಕಾರಣಕ್ಕೂ…

Read More

ಬೆಂಗಳೂರು: ಇಂದಿನಿಂದ ಮೇ.5ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆಯ ಬಿಸಿಗಾಳಿ ಉಂಟಾಗಲಿದೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಡ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕೇಂದ್ರ ಹವಾಮಾನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, Dated: 01.05.2024 ದಿನ 1 (01.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವು ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದಿದೆ. ದಿನ 2 (02.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವು ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು…

Read More

ಬೆಂಗಳೂರು: ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಲು ಅವಕಾಶ ಮಾಡಿಕೊಟ್ಟಿದೆ. ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಕೇಸ್ ಹೊರ ಬರುತ್ತಿದ್ದಂತೆ ಎಸ್ಐಟಿ ಯಾಕೆ ಅವರ ಮೇಲೆ ಕಣ್ಣಿಡಲಿಲ್ಲ ಎಂಬುದಾಗಿ ಬಿಜೆಪಿ ವಕ್ತಾರ ಪ್ರಕಾಶ್ ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಲು ಅವಕಾಶ ಮಾಡಿದ್ದು ರಾಜ್ಯ ಸರಕಾರ. ಅವನ ವಿರುದ್ದ SIT ರಚನೆಯಾದ ತರುವಾಯ ಅವನ ಮೇಲೆ ನಿಗಾ ಇಡಬೇಕಾದ್ದು ರಾಜ್ಯ ಸರಕಾರದ ಕೆಲಸ ಎಂದು ತಿಳಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ನಿಯುಕ್ತಿಯಾಗಿರುವ ರಾಜ್ಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಅವನನ್ನು ವಿದೇಶಕ್ಕೆ ಹೋಗದಂತೆ ಯಾವ ಕಾರಣಕ್ಕೆ ತಡೆಯಲಿಲ್ಲ? ಸಿದ್ಧರಾಮಯ್ಯನವರೇ ಉತ್ತರಿಸಿ ಎಂದು ಆಗ್ರಹಿಸಿದ್ದಾರೆ. https://twitter.com/sprakaashbjp/status/1785617499964440793 https://kannadanewsnow.com/kannada/diarrhoea-cholera-cases-health-department-instructs-to-take-precautionary-measures/ https://kannadanewsnow.com/kannada/we-will-commit-suicide-if-we-dont-want-to-victims-reluctant-to-comment-before-sit/

Read More