Subscribe to Updates
Get the latest creative news from FooBar about art, design and business.
Author: kannadanewsnow09
ತಿರುಮಲ: ತಿರುಪತಿ ತಿರುಮಲ ಲಡ್ಡು ಪ್ರಸಾದ ಈಗ ವಿವಾದದ ಸ್ವರೂಪ ಪಡೆದಿದೆ. ಜೊತೆ ಜೊತೆಗೆ ದನದ ಕೊಬ್ಬು ಮಾತ್ರವೇ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಬಳಕೆ ಮಾತ್ರ ಆಗುತ್ತಿಲ್ಲ. ಇದರೊಂದಿಗೆ ಇತರೆ ಕೊಬ್ಬಿನ ಅಂಶಗಳು ಕೂಡ ಬಳಕೆಯಾಗಿರುವುಂತ ಆಘಾತಕಾರಿ ಮಾಹಿತಿಯು ಲ್ಯಾಬ್ ರಿಪೋರ್ಟ್ ವರದಿಯಿಂದ ಬಹಿರಂಗವಾಗಿದೆ. ಹೌದು ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ಅಂಶವಷ್ಟೇ ಅಲ್ಲದೇ ಇತರೆ ಕೊಬ್ಬಿನ ಅಂಶಗಳು ಪತ್ತೆಯಾಗಿರುವುದಾಗಿ ಲ್ಯಾಬ್ ವರದಿಯಿಂದ ತಿಳಿದು ಬಂದಿದೆ. ಇದಕ್ಕೆ ಕಲಬೆರೆಕೆಯ ತುಪ್ಪ ಸರಬರಾಜು ಕಾರಣ ಎಂಬುದಾಗಿ ಟಿಟಿಡಿ ಕಾರ್ಯಕಾರಿ ಅಧಿಕಾರಿ ಶ್ಯಾಮಲಾ ರಾವ್ ಸ್ಪಷ್ಟ ಪಡಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತಿರುಪತಿ ತಿರುಮಲ ಪ್ರಸಾದವಾದಂತ ಲಡ್ಡು ತಯಾರಿಕೆಗಾಗಿ ಎಆರ್ ಡೈರಿಯಿಂದ ತುಪ್ಪವನ್ನು ಸರಬರಾಜು ಮಾಡಲಾಗುತ್ತಿತ್ತು. ಕಲಬೆರೆಕೆಯಿಂದ ಕೂಡಿರುವ ಅನುಮಾನದಿಂದ ಗುಜರಾತ್ ನಲ್ಲಿನ ಸರ್ಕಾರಿ ಲ್ಯಾಬ್ ಗೆ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು ಎಂದಿದ್ದಾರೆ. ಲ್ಯಾಬ್ ರಿಪೋರ್ಟ್ ನೋಡಿ ನಮಗೆ ಶಾಕ್ ಆಗಿದೆ. ವರದಿಯಂತೆ ತಿರುಪತಿ ತಿರುಮಲ ಲಡ್ಡು ಪ್ರಸಾದಕ್ಕೆ ಎಆರ್ ಡೈರಿಯಿಂದ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಚೆನ್ನೈನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಂದು ಜಸ್ಪ್ರೀತ್ ಬುಮ್ರಾ ಪ್ರಮುಖ ಮೈಲಿಗಲ್ಲನ್ನು ಸಾಧಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ 400 ವಿಕೆಟ್ ಪಡೆದ ಭಾರತದ 10ನೇ ಬೌಲರ್ ಹಾಗೂ 6ನೇ ವೇಗಿ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾಗಿದ್ದಾರೆ. ಬಾಂಗ್ಲಾದೇಶದ ಹಸನ್ ಮಹಮೂದ್ ಅವರು ಬುಮ್ರಾ ಅವರ 400ನೇ ವ್ಯಕ್ತಿಯಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ಶುಕ್ರವಾರ ಮೊದಲ ಎರಡು ಸೆಷನ್ಗಳಲ್ಲಿ ಮೂರು ವಿಕೆಟ್ಗಳನ್ನು ಪಡೆಯುವ ಮೂಲಕ ತವರು ಪರಿಸ್ಥಿತಿಗಳಲ್ಲಿ ತಮ್ಮ ಪ್ರಾಬಲ್ಯವನ್ನು ಮುಂದುವರಿಸಿದರು. ಬುಮ್ರಾ ತಮ್ಮ ಮೊದಲ ಓವರ್ನಲ್ಲಿ ಶತಕ ಬಾರಿಸಿ, ಬಾಂಗ್ಲಾದೇಶದ ಆರಂಭಿಕ ಬ್ಯಾಟ್ಸ್ಮನ್ ಶದ್ಮಾನ್ ಇಸ್ಲಾಂ ಅವರನ್ನು ಹಿಂದಕ್ಕೆ ಕಳುಹಿಸಿದರು. ನಂತರ ಅವರು ಎರಡನೇ ಸೆಷನ್ನಲ್ಲಿ ಮುಷ್ಫಿಕರ್ ರಹೀಮ್ ಮತ್ತು ಮಹಮೂದ್ ಅವರನ್ನು ಔಟ್ ಮಾಡುವ ಮೂಲಕ ತಮ್ಮ ಖಾತೆಗೆ ಇನ್ನೂ ಎರಡು ಸೇರಿಸಿದರು. ಹೀಗಿದೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಬುಮ್ರಾ ಸಾಧನೆ 162 ಟೆಸ್ಟ್, 149 ಏಕದಿನ…
ನವದೆಹಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ವಿವಾದ ತೀವ್ರ ಸ್ವರೂಪ ಪಡೆಯುತ್ತಿದೆ. ದನದ ಕೊಬ್ಬಿಗೆ ಕಲಬೆರೆಕೆ ತುಪ್ಪ ಸರಬರಾಜೇ ಕಾರಣ ಎಂಬುದಾಗಿ ಟಿಟಿಡಿ ಸ್ಪಷ್ಟ ಪಡಿಸಿದೆ. ಈ ಬೆನ್ನಲ್ಲೇ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮಧ್ಯ ಪ್ರವೇಶಕ್ಕೆ ಮನವಿ ಮಾಡಲಾಗಿದೆ. ಈ ಸಂಬಂಧ ಇಂದು ಸುಪ್ರೀಂ ಕೋರ್ಟ್ ಗೆ ಪತ್ರಕರ್ತ ಸುರೇಶ್ ಎಂಬುವರು ಅರ್ಜಿಯೊಂದನ್ನು ಸಲ್ಲಿಸಿದ್ದು, ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ಅಂಶ ಪತ್ತೆಯಾಗಿರುವುದು ತೀವ್ರ ವಿವಾದವನ್ನು ಪಡೆಯುತ್ತಿದೆ. ಸಾರ್ವಜನಿಕರ ಹಿತದೃಷ್ಠಿಯಿಂದ ಕೂಡಲೇ ಮಧ್ಯ ಪ್ರವೇಶಿಸುವಂತೆ ಕೋರಲಾಗಿದೆ. ಈ ನಡುವೆ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತಿರುಪತಿ ತಿಮ್ಮಪ್ಪನ ಪ್ರಸಾದವಾಗಿರುವಂತ ಲಡ್ಡು ಪ್ರಸಾದ ತಯಾರಿಕೆಗಾಗಿ ಈ ಮೊದಲು ಕಂಪನಿಯೊಂದರಿಂದ ತುಪ್ಪವನ್ನು ಖರೀದಿಸಲಾಗುತ್ತಿತ್ತು. ಆ ತುಪ್ಪ ಕಲಬೆರೆಕೆಯಿಂದ ಕೂಡಿದ್ದೇ ವಿವಾದಕ್ಕೆ ಕಾರಣವಾಗಿದೆ ಎಂಬುದಾಗಿ ತಿಳಿಸಿದರು. ತುಪ್ಪ ಕಲಬೆರೆಕೆಯ ಬಗ್ಗೆ ಸರ್ಕಾರಿ ಲ್ಯಾಬ್ ಗೆ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿತ್ತು. ಲಡ್ಡು ತಯಾರಿಕೆಗೆ ಬಳಸುತ್ತಿದ್ದಂತ ತುಪ್ಪದಲ್ಲಿ ದನದ ಕೊಬ್ಬು ಸೇರಿಸುವಂತ ಅಂಶವಿರುವ ವರದಿಯನ್ನು ನೋಡಿ…
ತಿರುಪತಿ: ತಿರುಪತಿ ತಿರುಮಲ ದೇವಸ್ಥಾನದಲ ಲಡ್ಡು ಪ್ರಸಾದದಲ್ಲಿ ಕೊಬ್ಬು ಬಳಕೆ ಆಗಿರುವುದು ನಿಜವೆಂಬುದಾಗಿ ಟಿಟಿಡಿ ತಪ್ಪೊಪ್ಪಿಕೊಂಡಿದೆ. ಅಲ್ಲದೇ ಕಲಬೆರೆಕೆ ತುಪ್ಪ ಬಳಕೆಯಿಂದಲೇ ಲಡ್ಡು ಪ್ರಸಾದಲ್ಲಿ ದನದ ಕೊಬ್ಬು ಮಿಕ್ಸ್ ಆಗಲು ಕಾರಣ ಎಂಬುದಾಗಿ ಟಿಟಿಡಿ ಕಾರ್ಯಕಾರಿ ಅಧಿಕಾರಿ ಶ್ಯಾಮಲಾ ರಾವ್ ಸ್ಪಷ್ಟ ಪಡಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತಿರುಪತಿ ತಿಮ್ಮಪ್ಪನ ಪ್ರಸಾದವಾಗಿರುವಂತ ಲಡ್ಡು ಪ್ರಸಾದ ತಯಾರಿಕೆಗಾಗಿ ಈ ಮೊದಲು ಕಂಪನಿಯೊಂದರಿಂದ ತುಪ್ಪವನ್ನು ಖರೀದಿಸಲಾಗುತ್ತಿತ್ತು. ಆ ತುಪ್ಪ ಕಲಬೆರೆಕೆಯಿಂದ ಕೂಡಿದ್ದೇ ವಿವಾದಕ್ಕೆ ಕಾರಣವಾಗಿದೆ ಎಂಬುದಾಗಿ ತಿಳಿಸಿದರು. ತುಪ್ಪ ಕಲಬೆರೆಕೆಯ ಬಗ್ಗೆ ಸರ್ಕಾರಿ ಲ್ಯಾಬ್ ಗೆ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿತ್ತು. ಲಡ್ಡು ತಯಾರಿಕೆಗೆ ಬಳಸುತ್ತಿದ್ದಂತ ತುಪ್ಪದಲ್ಲಿ ದನದ ಕೊಬ್ಬು ಸೇರಿಸುವಂತ ಅಂಶವಿರುವ ವರದಿಯನ್ನು ನೋಡಿ ನಾವು ಶಾಕ್ ಆದೆವು ಎಂದಿದ್ದಾರೆ. ಕಲಬೆರೆಕೆ ತುಪ್ಪವನ್ನು ಸರಬರಾಜು ಮಾಡಿದಂತ ಕಂಪನಿಯನ್ನು ಬ್ಲಾಕ್ ಲೀಸ್ಟ್ ಗೆ ಹಾಕಲಾಗಿದೆ. ಅತ್ಯಂತ ಕೆಳ ಮಟ್ಟದ ತುಪ್ಪವನ್ನು ಸರಬರಾಜು ಮಾಡಿದಂತ ಕಂಪನಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ಟಿಟಿಡಿ ಕಾರ್ಯಕಾರಿ ಅಧಿಕಾರಿ…
ಬೆಂಗಳೂರು: ಮುಂದಿನ ಮೂರು ವಾರಗಳಲ್ಲಿ ಬೆಂಗಳೂರಿನ ಎಲ್ಲಾ 20 ಲಕ್ಷ ಆಸ್ತಿ ಮಾಲೀಕರಿಗೆ ಬಿಬಿಎಂಪಿಯಿಂದ ಹೊಸ ಇ-ಖಾತಾ ವಿತರಣಾ ವ್ಯವಸ್ಥೆಯ ಭಾಗವಾಗಿ ಎಸ್ಎಂಎಸ್ ಸಿಗಲಿದೆ. ಅದಕ್ಕೂ ಮುನ್ನವೇ ಬಿಬಿಎಂಪಿಯಿಂದ 21 ಲಕ್ಷ ಆಸ್ತಿಗಳನ್ನು ಜಿಪಿಎಸ್ ತಂತ್ರಾಂಶದಲ್ಲಿ ಬಿಬಿಎಂಪಿ ಅಳವಡಿಸಿದೆ. ಇಲ್ಲಿಯವರೆಗೆ, ಅಧಿಕಾರಿಗಳು ಸುಮಾರು ಮೂರು ಲಕ್ಷ ಆಸ್ತಿಗಳಿಗೆ ಪ್ರಸಾರ ಸಂದೇಶಗಳನ್ನು ಕಳುಹಿಸಿದ್ದಾರೆ. ಇ-ಖಾತಾ ಪಡೆಯಲು ಅಗತ್ಯವಿರುವ ಜಿಪಿಎಸ್ ನಿರ್ದೇಶಾಂಕಗಳನ್ನು ಸೆರೆಹಿಡಿಯಲು ಬಿಬಿಎಂಪಿ ಸಿಬ್ಬಂದಿ ತಮ್ಮ ಆಸ್ತಿಗೆ ಭೇಟಿ ನೀಡುತ್ತಾರೆ ಎಂದು ಎಸ್ಎಂಎಸ್ ಸ್ವೀಕರಿಸುವವರಿಗೆ ತಿಳಿಸುತ್ತದೆ. ಎಸ್ಎಂಎಸ್ನಲ್ಲಿ ಹೀಗೆ ಬರೆಯಲಾಗಿದೆ: “ಬಿಬಿಎಂಪಿ ಪ್ರತಿ ಆಸ್ತಿಗೆ ಇ-ಖಾತಾ ರಚಿಸುತ್ತಿದೆ. ಇ-ಖಾತಾ ಪಡೆಯಲು ಜಿಪಿಎಸ್ ನಿರ್ದೇಶಾಂಕಗಳು ಕಡ್ಡಾಯ. ಜಿಪಿಎಸ್ ವಿವರಗಳನ್ನು ಸೆರೆಹಿಡಿಯಲು ಬಿಬಿಎಂಪಿ ಸಿಬ್ಬಂದಿ ಕೆಲವೇ ದಿನಗಳಲ್ಲಿ ನಿಮ್ಮ ಆಸ್ತಿಗೆ ಭೇಟಿ ನೀಡುತ್ತಾರೆ. ದಯವಿಟ್ಟು ನಿಮ್ಮ ಆಸ್ತಿ ತೆರಿಗೆ ರಸೀದಿಯನ್ನು ಸಿದ್ಧವಾಗಿರಿಸಿಕೊಳ್ಳಿ ಮತ್ತು ನಿಖರವಾದ ಜಿಪಿಎಸ್ ಟ್ಯಾಗಿಂಗ್ ಖಚಿತಪಡಿಸಿಕೊಳ್ಳಲು ಬಿಬಿಎಂಪಿ ಸಿಬ್ಬಂದಿಯೊಂದಿಗೆ ಸಹಕರಿಸಿ. ಆಸ್ತಿ ಜಿಪಿಎಸ್ ಬಿಎಚ್ಯು ಆಧಾರ್ ಆಗಿ ಕಾರ್ಯನಿರ್ವಹಿಸುತ್ತದೆ, ಆಸ್ತಿಯ ವಿಶಿಷ್ಟ ಗುರುತಿಸುವಿಕೆಯಾಗಿ…
ನವದೆಹಲಿ: ತಿರುಪತಿ ದೇವಸ್ಥಾನದಲ್ಲಿ ದೇವರಿಗೆ ಪ್ರಸಾದವಾಗಿ ನೀಡಲಾಗುವ ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದಲ್ಲಿನ ಪ್ರಾಣಿಗಳ ಕೊಬ್ಬಿನ ಬಗ್ಗೆ ಮತ್ತು ಪ್ರತಿವರ್ಷ ಭೇಟಿ ನೀಡುವ ಕೋಟ್ಯಂತರ ಭಕ್ತರಿಗೆ ಸಂಬಂಧಿಸಿದ ವಿವಾದದ ಬಗ್ಗೆ ವಿವರವಾದ ವರದಿಯನ್ನು ನೀಡುವಂತೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರನ್ನು ಕೇಳಿದ್ದಾರೆ. ತಮ್ಮ ಪ್ರತಿಸ್ಪರ್ಧಿ ವೈಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಅಧಿಕಾರದಲ್ಲಿದ್ದಾಗ ಬಳಸಿದ ತುಪ್ಪದ ಮಾದರಿಗಳಲ್ಲಿ ಗೋಮಾಂಸ ಟಾಲೋ, ಮೀನಿನ ಎಣ್ಣೆ ಮತ್ತು ಹಂದಿ ಕೊಬ್ಬು ಅಥವಾ ಹಂದಿಮಾಂಸದ ಕುರುಹುಗಳಿವೆ ಎಂದು ಗುಜರಾತ್ನ ಸರ್ಕಾರಿ ಪ್ರಯೋಗಾಲಯದಿಂದ ಜುಲೈನಲ್ಲಿ ವರದಿಯನ್ನು ನಾಯ್ಡು ಅವರ ತೆಲುಗು ದೇಶಂ ಪಕ್ಷ ಈ ವಾರ ಉಲ್ಲೇಖಿಸಿದೆ. ಚಂದ್ರಬಾಬು ನಾಯ್ಡು ಮತ್ತು ಅವರ ಉಪ ಮುಖ್ಯಮಂತ್ರಿ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ವೈಎಸ್ಆರ್ಸಿಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಜಗನ್ ಮೋಹನ್ ರೆಡ್ಡಿ ದೇವಾಲಯವನ್ನು ಅಪವಿತ್ರಗೊಳಿಸಿದ್ದಾರೆ ಮತ್ತು ‘ಸನಾತನ ಧರ್ಮ’ವನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಕೇಂದ್ರದಲ್ಲಿ ಟಿಡಿಪಿ…
ಮೈಸೂರು : ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ. ಕರ್ನಾಟಕ ಬಹುತ್ವದ ಬೀಡು. ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಜಂಟಿಯಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ “ಕರ್ನಾಟಕ ಸಾಂಸ್ಕೃತಿಕ ಮುನ್ನೋಟ: ಚಿಂತನಾ ಸಮಾವೇಶ” ವನ್ನು ಉದ್ಘಾಟಿಸಿ ಮಾತನಾಡಿದರು. ದೇವರಾಜ ಅರಸರು 1973ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ನಾಮಕರಣಗೊಂಡು 50 ವರ್ಷದ ಸುವರ್ಣ ಸಂಭ್ರಮವನ್ನು ಬಿಜೆಪಿ ಸರ್ಕಾರ ಮಾಡಬೇಕಿತ್ತು. ಅವರು ಮಾಡಲಿಲ್ಲ. ಹೀಗಾಗಿ ನಾನು ಸುವರ್ಣ ಸಂಭ್ರಮವನ್ನು ಬಜೆಟ್ ನಲ್ಲೇ ಘೋಷಿಸಿ ಇದನ್ನು ಕನ್ನಡ ಜನೋತ್ಸವವನ್ನಾಗಿ ಆಚರಿಸಲಾಗುತ್ತಿದೆ ಎಂದರು. ಕರ್ನಾಟಕ ಮತ್ತು ಕನ್ನಡ ಏಳು ಕೋಟಿ ಜನರ ಉಸಿರಾಗಲಿ. ಇಲ್ಲಿ ಬದುಕನ್ನು ಕಟ್ಟಿಕೊಂಡಿರುವ ಇತರೆ ಭಾಷಿಕರು ಕನ್ನಡ ಮಾತಾಡುವಂತಾದರೆ ಒಳ್ಳೆಯದು. ನಾವು ಯಾವ ಭಾಷೆಗೂ ದ್ವೇಷಿಗಳಲ್ಲ. ಸಾಧ್ಯವಿರುವಷ್ಟು…
ನವದೆಹಲಿ: ಭಾರತದ ಸುಪ್ರೀಂ ಕೋರ್ಟ್ನ ಯೂಟ್ಯೂಬ್ ಚಾನೆಲ್ ಅನ್ನು ಹ್ಯಾಕ್ ಮಾಡಲಾಗಿದೆ. ಪ್ರಸ್ತುತ ಯುಎಸ್ ಮೂಲದ ಕಂಪನಿ ರಿಪ್ಪಲ್ ಲ್ಯಾಬ್ಸ್ ಅಭಿವೃದ್ಧಿಪಡಿಸಿದ ಕ್ರಿಪ್ಟೋಕರೆನ್ಸಿ ಎಕ್ಸ್ಆರ್ಪಿಯನ್ನು ಉತ್ತೇಜಿಸುವ ವೀಡಿಯೊಗಳನ್ನು ತೋರಿಸುತ್ತಿದೆ. ಸಾಂವಿಧಾನಿಕ ಪೀಠಗಳ ಮುಂದೆ ಪಟ್ಟಿ ಮಾಡಲಾದ ಪ್ರಕರಣಗಳ ವಿಚಾರಣೆಗಳು ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳ ವಿಚಾರಣೆಯನ್ನು ಸ್ಟ್ರೀಮ್ ಮಾಡಲು ಉನ್ನತ ನ್ಯಾಯಾಲಯವು ಯೂಟ್ಯೂಬ್ ಅನ್ನು ಬಳಸುತ್ತಿದೆ. ಇತ್ತೀಚೆಗೆ, ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಯನ್ನು ಯೂಟ್ಯೂಬ್ನಲ್ಲಿ ನೇರ ಪ್ರಸಾರ ಮಾಡಲಾಯಿತು. ಹಿಂದಿನ ವಿಚಾರಣೆಗಳ ವೀಡಿಯೊಗಳನ್ನು ಹ್ಯಾಕರ್ ಗಳು ಖಾಸಗಿಗೊಳಿಸಿದ್ದಾರೆ. “ಬ್ರಾಡ್ ಗಾರ್ಲಿಂಗ್ಹೌಸ್: ರಿಪ್ಪಲ್ ಎಸ್ಇಸಿಯ 2 ಬಿಲಿಯನ್ ಡಾಲರ್ ದಂಡಕ್ಕೆ ಪ್ರತಿಕ್ರಿಯಿಸುತ್ತದೆ! ಎಕ್ಸ್ಆರ್ಪಿ ಪ್ರೈಸ್ ಪ್ರಿಡಿಕ್ಷನ್ ” ಪ್ರಸ್ತುತ ಹ್ಯಾಕ್ ಮಾಡಿದ ಚಾನೆಲ್ನಲ್ಲಿ ಲೈವ್ ಆಗಿದೆ. ಸ್ಕ್ಯಾಮರ್ಗಳಿಂದ ಜನಪ್ರಿಯ ವೀಡಿಯೊ ಚಾನೆಲ್ಗಳ ಹ್ಯಾಕಿಂಗ್ ವ್ಯಾಪಕವಾಗಿದೆ ಮತ್ತು ಹ್ಯಾಕರ್ಗಳು ಅದರ ಸಿಇಒ ಬ್ರಾಡ್ ಗಾರ್ಲಿಂಗ್ಹೌಸ್ನಂತೆ ನಟಿಸುವುದನ್ನು ತಡೆಯಲು ವಿಫಲವಾದ ಕಾರಣ ರಿಪ್ಪಲ್ ಸ್ವತಃ…
ಬೆಂಗಳೂರು : ರಾಜಧಾನಿ ಬೆಂಗಳೂರು, ಪೂರ್ವ ತಾಲೂಕು, ಕೆ.ಆರ್.ಪುರ ಹೋಬಳಿ ಕೊತ್ತನೂರಿನ ಸರ್ವೆ ನಂ.48ರಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22. ಎಕರೆ 8 ಗುಂಟೆ ಜಮೀನಿನ ಮರು ವಶಕ್ಕೆ ಪ್ರಕ್ರಿಯೆ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು 1999-2000 ಸಾಲಿನಲ್ಲಿ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 22.08 ಎಕರೆ ಜಮೀನಿನಲ್ಲಿ ನೆಡುತೋಪು ಅಭಿವೃದ್ಧಿಪಡಿಸುವ ಸಲುವಾಗಿ ಈ ಭೂಮಿಯನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ. ಆದರೆ ಈ ಜಮೀನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ವಿಫಲವಾಗಿರುವ ಇಲಾಖೆಯ ಹಿಂದಿನ ಅಧಿಕಾರಿಗಳ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆಗೆ ಮಂಜೂರಾದ 22.08 ಎಕರೆ ಭೂಮಿಯ ಪೈಕಿ 13 ಎಕರೆ ಜಮೀನನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ ಎಂದು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಆದೇಶ ಸಂಖ್ಯೆ ಆರ್.ಎಚ್.ಎಸ್.(2) 44/82-83 ಡಿ.ಟಿ. 25.01.2000ರ ಆದೇಶದಂತೆ ಪಹಣಿ (ಆರ್.ಟಿ.ಸಿ.)ಯಲ್ಲಿ ನಮೂದಾಗಿದೆ. ಈ ಜಮೀನಿನ…
ಬೆಂಗಳೂರು: ದೇಶದ್ರೋಹಿಗಳ ವಿರುದ್ಧ ರಾಜ್ಯ ಕಾಂಗ್ರೆಸ್ ಸರಕಾರದ ಮೃದು ಧೋರಣೆಯಿಂದ ಶಾಂತಿ- ಸುವ್ಯವಸ್ಥೆ ಕದಡುವ ಕೆಲಸ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಾಗಮಂಗಲ ಗಲಾಟೆ ಸಂಭದ ಸತ್ಯ ಶೋಧನಾ ಸಮಿತಿಯಿಂದ ವರದಿಯನ್ನು ಪಡೆದ ಬಳಿಕ ಮಾತನಾಡಿದ ಅವರು, ನಾಗಮಂಗಲ, ದಾವಣಗೆರೆ ಮತ್ತಿತರ ಕಡೆ ನಡೆದ ಗಲಭೆಗಳ ಕುರಿತು ನಿಮ್ಮ ನೇತೃತ್ವದಲ್ಲಿ ಸಮರ್ಪಕ ತನಿಖೆ ನಡೆಯಲು ಸಾಧ್ಯವಿಲ್ಲ. ಈ ಘಟನೆಗಳ ಬಗ್ಗೆ ಎನ್ಐಎ ಯಿಂದ ತನಿಖೆ ಆಗಬೇಕೆಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣ ಬದಿಗಿಡಿ. ಎಲ್ಲ ಸಮಾಜದ ಜನರು ನೆಮ್ಮದಿಯಿಂದ ಬದುಕುವಂತಾಗಲು ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಬದಿಗಿಟ್ಟು, ಎಲ್ಲ ಘಟನೆಗಳ ತನಿಖೆಯನ್ನು ಎನ್ಐಎಗೆ ಕೊಡಿ ಎಂದು ಒತ್ತಾಯಿಸಿದರು. ಹಿಂದೂಗಳ ಮೇಲೆ ಬಲಾತ್ಕಾರ ಆಗುತ್ತಿದೆ. ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಪೊಲೀಸರ ಕಣ್ಮುಂದೆ ಇದೆಲ್ಲ ನಡೆದರೂ ಅವರು ಕಣ್ಮುಚ್ಚಿ ಕೂತಿದ್ದಾರೆ. ಅವರಿಗೆ ಯಾವುದೇ ಅಧಿಕಾರ…











