Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ದರ್ಜೆ-03 ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತು ಕೆಎಸ್ಆರ್ ಟಿಸಿಯ ಆಯ್ಕೆ ಸಮಿತಿಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ತಾಂತ್ರಿಕ ಸಹಾಯಕ ಹುದ್ದೆಗೆ ಆಯ್ಕೆಗೊಂಡಿದ್ದ ಅಭ್ಯರ್ಥಿಗಳ ಸಂಭವನೀಯ ಆಯ್ಕೆ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿತ್ತು. ಅದಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ 12-01-2023ರವರೆಗೆ ಅವಕಾಶ ನೀಡಲಾಗಿತ್ತು ಎಂದಿದ್ದಾರೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅರ್ಹ ಆಕ್ಷೇಪಣೆಗಳನ್ನು ಪರಿಗಣಿಸಿ, ಇದೀಗ ಅಂತಿಮ ಆಯ್ಕೆ ಪಟ್ಟಿಯನ್ನು ದಿನಾಂಕ 13-01-2024ರಂದು ನಿಗಮದ ಕೇಂದ್ರ ಕಚೇರಿಯ ಸೂಚನಾ ಫಲಕ ಮತ್ತು ನಿಗಮದ ಅಧಿಕೃತ ವೆಬ್ ಸೈಟ್ www.ksrtcjobs.com ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/applications-invited-for-subsidy-loan-facility-up-to-rs-2-5-lakh-for-acid-affected-women/ https://kannadanewsnow.com/kannada/lok-sabha-elections-2019-it-would-be-good-if-yathindra-siddaramaiah-is-my-opponent-says-pratap-simha/
ಬೆಂಗಳೂರು: ರಾಜ್ಯ ಸರ್ಕಾರದಿಂದ ಆ್ಯಸಿಡ್ ಸಂತ್ರಸ್ತರಿಗೆ ನೆರವಾಗೋ ನಿಟ್ಟಿನಲ್ಲಿ ಮಹತ್ವದ ಕ್ರಮ ವಹಿಸಿದೆ. ಅದಕ್ಕಾಗಿ 2.5 ಲಕ್ಷದವರೆಗೆ ಸಹಾಯಧನ, ಸಾಲಸೌಲಭ್ಯಕ್ಕೆ ಆರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ವಾರ್ತಾ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಮಹಿಳೆಯರ ಮೇಲೆ ಆ್ಯಸಿಡ್ ದಾಳಿಯು ಅತ್ಯಂತ ಅಮಾನವೀಯ ಕೃತ್ಯವಾಗಿದೆ. ಕೃತ್ಯ ಎಸಗಿದವರನ್ನು ಎಷ್ಟೇ ಉಗ್ರ ಶಿಕ್ಷೆಗೆ ಗುರಿಮಾಡಿದರೂ ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಟ್ಟಂತಾಗುವುದಿಲ್ಲ. ಆದರೆ ಸಂತ್ರಸ್ತೆಯ ನೋವಿಗೆ ಸ್ಪಂದಿಸುವ ಮೂಲಕ ಆಕೆಗೆ ವೈದ್ಯಕೀಯ ನೆರವು, ಆಪ್ತಸಮಾಲೋಚನೆ, ಕಾನೂನು ನೆರವು ಇತ್ಯಾದಿ ಸೌಲಭ್ಯಗಳ ಜೊತೆಗೆ ಆಕೆಗೆ ಪುನರ್ಜೀವನ ಕಟ್ಟಿಕೊಡಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಸಂತ್ರಸ್ತೆಯರಿಗೆ ರೂ. 5 ಲಕ್ಷದ ವರೆಗೆ ಆರ್ಥಿಕ ನೆರವು ನೀಡುತ್ತಿದೆ ಎಂದು ಹೇಳಿದೆ. ರಾಜ್ಯದ ಆಸಿಡ್ ಸಂತ್ರಸ್ತ ಮಹಿಳೆಯರಿಗೆ ಪುನರ್ ಜೀವನ ಕಲ್ಪಿಸೋದಕ್ಕಾಗಿ 2.5 ಲಕ್ಷ ಸಹಾಯಧನ, ಸಾಲ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದಿದೆ. ಜನವರಿ 31ರ ಒಳಗಾಗಿ ಅರ್ಜಿಯನ್ನು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, 6ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್,…
ಬೆಂಗಳೂರು: ನಗರದಲ್ಲಿ ಎಷ್ಟೇ ಸಂಚಾರ ನಿಯಮ ಮೀರದಂತೆ ಎಚ್ಚರಿಕೆ ವಹಿಸಿದ್ರೂ ಕೆಲವೊಮ್ಮೆ ಆ ನಿಯಮ ಮೀರಿ ಸಂಚಾರ ದಟ್ಟಣೆ ಉಂಟಾಗುವಂತ ಸನ್ನಿವೇಶ ನಿರ್ಮಾಣವಾಗುತ್ತೆ. ಇದೀಗ ಬೆಂಗಳೂರಲ್ಲಿ ಜನದಟ್ಟಣೆ ಮೇಲೆ ನಿಗಾಕ್ಕೆ ಮಹತ್ವದ ಕ್ರಮವನ್ನು ರಾಜ್ಯ ಸರ್ಕಾರ ಕೈಗೊಳ್ಳಲಾಗಿದೆ. ಅದೇ ಅಶ್ವರೋಹಿ ಪೊಲೀಸ್ ಗಸ್ತು ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಅವರು, ಜನದಟ್ಟಣೆ ನಡುವೆ ಅನುಚಿತ ವರ್ತನೆ ತೋರುವ ಹಾಗೂ ಅಪರಾಧ ಕೃತ್ಯಗಳನ್ನು ಎಸಗುವವರ ಮೇಲೆ ಹದ್ದಿನ ಕಣ್ಣಿಡಲು ಅಶ್ವಾರೋಹಿ ಪೊಲೀಸ್ ಗಸ್ತು ಬೆಂಗಳೂರು ನಗರಕ್ಕೂ ಆಗಮಿಸಿದ್ದು, ಹೊಯ್ಸಳ, ಚೀತಾದ ಜೊತೆಗೆ ಆಯ್ದ ಸ್ಥಳಗಳಲ್ಲಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಜನದಟ್ಟಣೆಯ ಸ್ಥಳಗಳಾದಂತ ಕಬ್ಬನ್ ಉದ್ಯಾನ, ವಿಧಾನಸೌಧ, ಮೆಜೆಸ್ಟಿಕ್, ಎಂ.ಜಿ ರಸ್ತೆ ಹಾಗೂ ಚರ್ಚ್ ರಸ್ತೆ ಸೇರಿದಂತೆ ವಿವಿಧೆಡೆ ಅಶ್ವಾರೋಹಿ ಪೊಲೀಸರು ಗಸ್ತು ತಿರುಗಲಿದ್ದಾರೆ. ಈ ಮೂಲಕ ನಗರದಲ್ಲಿ ಜನದಟ್ಟಣೆಗೆ ನಿಯಂತ್ರಣ ಕ್ರಮ ವಹಿಸಲಿದ್ದಾರೆ. https://twitter.com/KarnatakaVarthe/status/1745796978557264270 https://kannadanewsnow.com/kannada/woman-kidnapped-after-hanagal-gangrape-case/ https://kannadanewsnow.com/kannada/lok-sabha-elections-2019-it-would-be-good-if-yathindra-siddaramaiah-is-my-opponent-says-pratap-simha/
ಹಾವೇರಿ: ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣದ ನಂತ್ರ, ಅದು ಗ್ಯಾಂಗ್ ರೇಪ್ ಆಗಿ ಮಾರ್ಪಟ್ಟಿತ್ತು. ಸಂತ್ರಸ್ತ ಮಹಿಳೆಯ ದೂರಿನ ಆಧಾರದ ಮೇಲೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿ, ಬಂಧನ ಕೂಡ ಆಗಿದೆ. ಈ ಬೆನ್ನಲ್ಲೇ ಹಾನಗಲ್ ನಲ್ಲಿ ಗ್ಯಾಂಗ್ ರೇಪ್ ಪ್ರಕರಣದ ಬಳಿಕ ಇದೀಗ ಯುವತಿಯೊಬ್ಬಳನ್ನು ಕಿಡ್ನಾಪ್ ಮಾಡಿರೋ ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಗ್ಯಾಂಗ್ ರೇಪ್ ಪ್ರಕರಣದ ಬಳಿಕ, ಈಗ ಅನ್ಯಕೋಮಿನ ಯುವಕರು, ಯುವತಿಯೊಬ್ಬಳನ್ನು ಅಪಹರಿಸಿದ್ದಾರೆಂಬುದಾಗಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಎಫ್ಐಆರ್ ಕೂಡ ದಾಖಲಾಗಿದೆ. ಹಾನಗಲ್ ಪಟ್ಟಣದ ನಿವಾಸಿ ಅಫ್ತಾಬ್ ವಿರುದ್ಧ ಯುವತಿಯ ತಂದೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ಮಗಳನ್ನು ಅಪಹರಿಸಿರೋದಾಗಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಅಫ್ತಾಬ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/lok-sabha-elections-2019-it-would-be-good-if-yathindra-siddaramaiah-is-my-opponent-says-pratap-simha/ https://kannadanewsnow.com/kannada/congress-leader-mallikarjun-kharge-appointed-india-bloc-chief/
ನವದೆಹಲಿ: ಜನವರಿ.22ರಂದು ರಾಮಮಂದಿರ ಉದ್ಘಾಟನೆಯ ಜೊತೆಗೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗೋದಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಗೆ ಆಹ್ವಾನ ನೀಡಲಾಗಿದೆ. ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಭಾಗವಹಿಸಲು ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರಿಗೆ ಆಹ್ವಾನಿಸಲಾಗಿದೆ. ಈಗಾಗಲೇ ರಾಮಮಂದಿರ ಉದ್ಘಾಟನೆಗೆ ಅನೇಕ ಮಠಾಧೀಶರು ಹೋಗೋದಕ್ಕೆ ನಿರಾಕರಿಸಿದ್ರೇ, ಮತ್ತೆ ಕೆಲವರು ಹೋಗೋದಾಗಿ ತಿಳಿಸಿದ್ದಾರೆ. ಆದ್ರೇ ಕಾಂಗ್ರೆಸ್ ಮಾತ್ರ ಅಪೂರ್ಣ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಾವು ಹೋಗೋದಿಲ್ಲ ಅಂತ ಹೇಳಿದೆ. ಈ ಮೂಲಕ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಸಿದೆ. ಇದೇ ಸಂದರ್ಭದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ. ಅವರು ಹೋಗ್ತಾರಾ ಅಂದು ಎನ್ನೋ ಬಗ್ಗೆ ಕಾದು ನೋಡಬೇಕಿದೆ. https://twitter.com/ANI/status/1746100585722716161 https://kannadanewsnow.com/kannada/will-former-cm-hd-kumaraswamy-become-union-minister-do-you-know-what-dodda-gowda-said-about-this/ https://kannadanewsnow.com/kannada/congress-leader-mallikarjun-kharge-appointed-india-bloc-chief/
ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿ ಆಗುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಮುಂದೆ ಅ ಬಗ್ಗೆ ಚರ್ಚೆ ಆಗಿಲ್ಲ. ಆದರೆ, ಮೋದಿ ಅವರ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿ ಉದೇಶಿಸಿ ಮಾತನಾಡಿದ ಅವರು; ಒಂದು ಬಾರಿ ಸಂಸತ್ ಸದಸ್ಯರಾದವರನ್ನು ಮಂತ್ರಿ ಮಾಡಿದ್ದಾರೆ. ಮೋದಿ ಅವರ ಆಕ್ಷನ್ ಪ್ಲ್ಯಾನ್ ಅವರ ಸಹೋದ್ಯೋಗಿಗಳಿಗೂ ಗೊತ್ತಾಗುವುದಿಲ್ಲ. ಹೀಗಾಗಿ ಅವರ ಮನಸ್ಸಿಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಾರಾ? ಇಲ್ಲವಾ? ಎಂದು ಕೇಳಲಾದ ಪ್ರಶ್ನೆಗೂ ಉತ್ತರಿಸಿದ ಅವರು; ನರೇಂದ್ರ ಮೋದಿ ಅವರು ಏನು ಹೇಳ್ತಾರೋ ನೊಡೋಣ. ಅವರ ಮನಸಿನಲ್ಲಿ ಇದೆಯೋ ಗೊತ್ತಿಲ್ಲ. ಮೋದಿ ಅವರು ಹೇಳಿದಂತೆ ಕುಮಾರಸ್ವಾಮಿ ಅವರು ಕೇಳುತ್ತಾರೆ. ಕುಮಾರಸ್ವಾಮಿ ಸ್ಪರ್ಧೆ ಮಾಡುವ ಪರಿಸ್ಥಿತಿ ಬಂದರೆ ನಾವೆಲ್ಲ ಕುಳಿತು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು. ಯಾವುದೇ ಕಾರಣಕ್ಕೂ ನಾನು…
ಬೆಂಗಳೂರು: ಕರ್ನಾಟಕ ಎದುರಿಸುತ್ತಿರುವ ಕಾವೇರಿ ಜಲ ಸಂಕಷ್ಟವನ್ನು ಪರಿಹಾರ ಮಾಡುವ ಶಕ್ತಿ ಇರುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ. ಈ ಚುನಾವಣೆ ಮುಗಿದ ನಂತರ ಮತ್ತೆ ಪ್ರಧಾನಿ ಆಗಲಿರುವ ಅವರು, ಈ ಜಲ ಸಂಕಷ್ಟಕ್ಕೆ ಪರಿಹಾರ ನೀಡಲಿದ್ದಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತಿ ವರ್ಷ ತಮಿಳುನಾಡು ರಾಜ್ಯದವರು ಕಾವೇರಿ ಜಲ ನಿರ್ವಹಣಾ ಸಮಿತಿ ಹಾಗೂ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಮುಂದೆ ಕರ್ನಾಟಕದಿಂದ ನೀರು ಕೊಡಿಸಿ ಎಂದು ಅರ್ಜಿ ಹಾಕುತ್ತಾರೆ. ನಮ್ಮ ಬಳಿ ನೀರು ಇಲ್ಲದೆ ಇದ್ದರೂ ನೀರು ಬಿಡಿ ಅಂತಾರೆ. ನಮ್ಮ ಅಧಿಕಾರಿಗಳು ಏನೇ ವಾದ ಮಾಡಿದರೂ ಪ್ರಯೋಜನ ಆಗಿಲ್ಲ. ಕಾವೇರಿ ಪ್ರಾಧಿಕಾರದವರು ಯಾವತ್ತು ಕೂಡ ನಮ್ಮ ರಾಜ್ಯಕ್ಕೆ ಬಂದು ನೀರು ಎಷ್ಟು ಇದೆ ಅಂತ ನೋಡಿಲ್ಲ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.…
ಕೂಡಲ ಸಂಗಮ: ಇಂದು ಉತ್ತರ ಕನ್ನಡದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಏಕವಚನದಲ್ಲೇ ಸಂಸದ ಅನಂತ್ ಕುಮಾರ್ ಹೆಗಡೆ ವಾಗ್ಧಾಳಿ ನಡೆಸಿದ್ದರು. ನೀನು ಬಂದ್ರೆ ಬಾ, ರಾಮಮಂದಿರ ಉದ್ಘಾಟನೆ ಏನೂ ನಿಲ್ಲೋದಿಲ್ಲ ಅಂತ ತಿಳಿಸಿದ್ದರು. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಏನು ಹೇಳಿದ್ರು ಅಂತ ಮುಂದೆ ಓದಿ. ಈ ಕುರಿತಂತೆ ಕೂಡಲಸಂಗಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಅದು ಅವರ ಸಂಸ್ಕೃತಿ ಎಂಬುದಾಗಿ ತಿರುಗೇಟು ನೀಡಿದರು. ಮಂತ್ರಿಯಾಗಿ ಸಂವಿಧಾನ ಬದಲಿಸ್ತೀವಿ ಅಂದ್ರು. ಅವ್ರಿಂದ ನಾವು ಸಂಸ್ಕೃತಿ ಬಯಸೋಕೆ ಆಗುತ್ತಾ.? ಅವರ ಸುಸಂಸ್ಕೃತ್ವ ಅವರ ಹೇಳಿಕೆಯಲ್ಲೇ ತೋರಿಸುತ್ತದೆ ಎಂಬುದಾಗಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದರು. https://kannadanewsnow.com/kannada/mallikarjun-kharge-appointed-president-of-india-alliance-nitish-kumar-appointed-convener/ https://kannadanewsnow.com/kannada/lok-sabha-elections-2019-it-would-be-good-if-yathindra-siddaramaiah-is-my-opponent-says-pratap-simha/
ನವದೆಹಲಿ: ಇಂದು ನಡೆದಂತ ಇಂಡಿಯಾ ಮೈತ್ರಿಕೂಟದ ವರ್ಚುಯಲ್ ಸಭೆಯಲ್ಲಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಚಾಲಕರಾಗಿ ನಿತೀಶ್ ಕುಮಾರ್ ನೇಮಕಕ್ಕೆ ನಾಯಕರ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಇಂದು ಇಂಡಿಯಾ ಮೈತ್ರಿಕೂಟದ ವರ್ಚುಯಲ್ ಸಭೆ ನಡೆಯಿತು. ಈ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿರೋಧ ಪಕ್ಷದ ಬಣ ಐಎನ್ಡಿಐಎ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಶನಿವಾರ ವರದಿ ಮಾಡಿದೆ. ಐ.ಎನ್.ಡಿ.ಐ.ಎ. ಬಣದ ಸಭೆ ಇಂದು ವರ್ಚುವಲ್ ಆಗಿ ನಡೆಯಿತು. ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ವಿರೋಧ ಬಣದ ಇತರ ಉನ್ನತ ನಾಯಕರು ಸೀಟು ಹಂಚಿಕೆ, ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾಗವಹಿಸುವಿಕೆ ಮತ್ತು ಇತರ ವಿಷಯಗಳ ಬಗ್ಗೆ ಪರಿಶೀಲಿಸಲು ಸಭೆಯಲ್ಲಿ ಭಾಗವಹಿಸಿದ್ದರು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಕೆಲವು ದಿನಗಳ ಹಿಂದೆ ಮೊದಲ ಪ್ರಯತ್ನ ವಿಫಲವಾದ…
ಮುಂಬೈ: ಮುಂಬೈಗೆ ಹೊಂದಿಕೊಂಡಿರುವ ಡೊಂಬಿವ್ಲಿ ಬಳಿಯ ಖೋನಿ ಪಲಾವಾ ಡೌನ್ಟೌನ್ ಕಟ್ಟಡದಲ್ಲಿ ಶನಿವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ವರದಿಗಳ ಪ್ರಕಾರ, ಏಳನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಮತ್ತು ಜನರು ಕಟ್ಟಡದ ಮೂರನೇ ಮಹಡಿಯವರೆಗೆ ವಾಸಿಸುತ್ತಿದ್ದಾರೆ. ಎಲ್ಲಾ ನಿವಾಸಿಗಳನ್ನು ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನಾಲ್ಕಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿ ನಂದಿಸೋ ಕಾರ್ಯ ಮುಂದುವರೆದಿದೆ. ಸದಸ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. https://twitter.com/ANI/status/1746109298302980114 https://kannadanewsnow.com/kannada/traffic-violations-in-bengaluru-to-be-monitored-through-ai-technology-deputy-cm-dk-shivakumar/ https://kannadanewsnow.com/kannada/lok-sabha-elections-2019-it-would-be-good-if-yathindra-siddaramaiah-is-my-opponent-says-pratap-simha/