Author: kannadanewsnow09

ಬೆಂಗಳೂರು : ರಾಜ್ಯದ 10 ಜಿಲ್ಲೆಗಳ ವ್ಯಾಪ್ತಿಯ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಒತ್ತುವರಿಯನ್ನು ತತ್ ಕ್ಷಣದಿಂದಲೇ ತೆರವು ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ 24 ಗಂಟೆಯಲ್ಲಿ ನೂತನ ಕಾರ್ಯಪಡೆ 31 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಹೋಬಳಿಯ ಮಾಗುಂಡಿ ಸರ್ವೆ ನಂ. 29ರಲ್ಲಿ 17 ಎಕರೆ 17 ಗುಂಟೆ, ಹಲಸೂರು ಸರ್ವೆ ನಂ. 55ರಲ್ಲಿ 13 ಎಕರೆ 38 ಗುಂಟೆ ಹಾಗೂ ತನುಡಿ ಸರ್ವೆ ನಂ. 9, 21, 22,23, 72ಮತ್ತು 97ರಲ್ಲಿ ಒಟ್ಟು 36 ಎಕರೆ ಸೇರಿ ಒಟ್ಟು 69 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಿಸಲಾಗುತ್ತಿದೆ. ಪಶ್ಚಿಮಘಟ್ಟ ಮತ್ತು ಅರಣ್ಯ ಒತ್ತುವರಿ ತೆರವು ಕಾರ್ಯಪಡೆಯ ಅಧ್ಯಕ್ಷರಾಗಿರುವ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ದೀಕ್ಷಿತ್ ಅವರ ಆದೇಶದಂತೆ ಈ ಕ್ರಮ ಜರುಗಿಸಲಾಗಿದೆ. https://kannadanewsnow.com/kannada/renewable-energy-sector-neglected-in-some-states-including-karnataka-hdd/ https://kannadanewsnow.com/kannada/7-locations-identified-for-construction-of-second-airport-in-bengaluru-dk-shivakumar/ https://kannadanewsnow.com/kannada/are-you-asking-for-an-account-of-my-assets-i-will-give-everything-give-your-brothers-account-first-dk-shivakumar-to-hdk/

Read More

ನವದೆಹಲಿ: ನವೀಕರಿಸಬಹುದಾದ ಇಂಧನ ಶಕ್ತಿಗಳ ಬಗ್ಗೆ ರಾಜ್ಯಸಭೆಯಲ್ಲಿ ಇಂದು ಮಹತ್ವದ ಭಾಷಣ ಮಾಡಿದ ಮಾಜಿ ಪ್ರಧಾನಿಗಳಾದ ಹೆಚ್‌.ಡಿ.ದೇವೇಗೌಡರು, ಈ ಕ್ಷೇತ್ರವನ್ನು ಕರ್ನಾಟಕವೂ ಸೇರಿ ಹಲವಾರು ರಾಜ್ಯಗಳು ಕಡೆಗಣಿಸುತ್ತಿದೆ ಎಂದು ಅತ್ಯಂತ ಬೇಸರದಿಂದ ಹೇಳಿದರು. ರಾಜ್ಯಸಭೆಯಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲಿನ ಚರ್ಚೆಯಲ್ಲಿ ಸೋಮವಾರ ಪಾಲ್ಗೊಂಡು ಮಾತನಾಡಿದರು ಅವರು. ಹಿಂದೆ ಕರ್ನಾಟಕ ರಾಜ್ಯವು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಇಡೀ ದೇಶಕ್ಕೆ ನಾಯಕತ್ವ ನೀಡಿತ್ತು. ಈ ಕ್ಷೇತ್ರದಲ್ಲಿ ಗಣನೀಯ ದಾಪುಗಾಲು ಇರಿಸಿತ್ತು. ಆದರೆ ಕೆಲ ವರ್ಷಗಳಿಂದ ಈಚೆಗೆ ಕರ್ನಾಟಕದಲ್ಲಿ ಈ ಕ್ಷೇತ್ರ ಗಣನೀಯವಾಗಿ ಹಿನ್ನೆಡೆ ಅನುಭವಿಸಿದೆ ಎಂದು ಅವರು ಹೇಳಿದರು. ನಮ್ಮ ದೇಶದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದ ಬೆಳವಣಿಗೆ ಪ್ರಮಾಣ ಶೇಕಡಾ 14ರಷ್ಟು ಇದ್ದು, ಕರ್ನಾಟಕ ರಾಜ್ಯದಲ್ಲಿ ಆ ಪ್ರಮಾಣ ಶೇಕಡಾ 2.58ರಷ್ಟು ಇದೆ. ಈ ಸಂದರ್ಭದಲ್ಲಿ ಈ ಕ್ಷೇತ್ರದ ಬೆಳವಣಿಗೆಯ ದರ ಕುಂಠಿತವಾಗಿರುವ ಬಗ್ಗೆ ಎಲ್ಲಾರೂ ಗಂಭೀರ ಚಿಂತನೆ ನಡೆಸಬೇಕು ಎಂದು ಮಾಜಿ ಪ್ರಧಾನಿಗಳು ಸಲಹೆ ಮಾಡಿದರು. ಈ ಕ್ಷೇತ್ರದಲ್ಲಿ…

Read More

ಬೆಂಗಳೂರು : ಸ್ಥಳ, ನೀರು, ಸಂಪರ್ಕ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಅನುಕೂಲಗಳನ್ನು ನೋಡಿಕೊಂಡು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕಿದೆ. ಈ ಕಾರಣಕ್ಕೆ ಎಂಟು ಸ್ಥಳಗಳನ್ನು ಗುರುತಿಸಲಾಗಿದೆ” ಎಂದು ತಿಳಿಸಿದರು. ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ವಿಧಾನಸೌಧದಲ್ಲಿ ಸೋಮವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಅವರು “ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮೂರನೇ ಅತಿದೊಡ್ಡ ನಿಲ್ದಾಣವಾಗಿದೆ. ಮುಂಬೈ, ದೆಹಲಿ ಬಿಟ್ಟರೇ ದಕ್ಷಿಣ ಭಾರತದಲ್ಲೇ ದೊಡ್ಡ ನಿಲ್ದಾಣವಾಗಿದ್ದು 70 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ 110 ಮಿಲಿಯನ್ ಗೆ ತಲುಪುತ್ತದೆ ಎಂದು ಅಂದಾಜಿಸಲಾಗಿದೆ” ಎಂದರು. ಕೆಂಪೇಗೌಡ ಅಂತರರಾಷ್ಟ್ರೀಯ ನಿಲ್ದಾಣವನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಾಣ ಮಾಡಲಾಗಿತ್ತು. ಹೊಸ ನಿಲ್ದಾಣವನ್ನು ಇದೇ ರೀತಿ ನಿರ್ಮಾಣ ಮಾಡಲಾಗುವುದು. ಇದರಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳ ಪಾಲೂ ಇರುತ್ತದೆ. ಮೂಲಸೌಕರ್ಯ ವ್ಯವಸ್ಥೆ ನೋಡಿ ಜಾಗಕ್ಕೆ ಹಸಿರು ನಿಶಾನೆ ನೀಡಲಾಗುತ್ತದೆ. ಸಚಿವರಾದ ಎಂ.ಬಿ.ಪಾಟೀಲರು ಅತ್ಯಂತ ಅಚ್ಚುಕಟ್ಟಾಗಿ ಯೋಜನೆ ಸಿದ್ದಪಡಿಸಿಕೊಂಡಿದ್ದಾರೆ.…

Read More

ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಸದುದ್ದೇಶದಿಂದ ಶಿವಾಜಿ ನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಾ ಬೌರಿಂಗ್ ಆಸ್ಪತ್ರೆ ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ. ಈ ಹಿಂದೆ ಇದ್ದ ಬೌರಿಂಗ್ ಆಸ್ಪತ್ರೆಯನ್ನು ನೆಲಸಮಗೊಳಿಸಿದ ನಂತರ ನೂತನ ಹತ್ತು ಅಂತಸ್ತಿನ 500 ಹಾಸಿಗೆಗಳ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸೋಮವಾರ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಭೇಟಿ ನೀಡಿದ ವೇಳೆ ವರಿದಿಗಾರರಿಗೆ ಹೇಳಿದರು. ಇದೆ ವೇಳೆ ಅಲ್ಲಿನ ಡೆಂಘೀ ವಾರ್ಡ್ ಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಅಸ್ಪತ್ರೆಯಲ್ಲಿ ವೈದ್ಯರು ಸೂಕ್ತವಾದ ಚಿಕಿತ್ಸೆ ನೀಡುತ್ತಿದ್ದಾರೆಯೇ? ಬೆಳಗಿನ ಉಪಹಾರ, ಮಧ್ಯಾಹ್ನಾದ ಬೋಜನ ಸಮಯಕ್ಕೆ ಸರಿಯಾಗಿ ನೀಡುತ್ತಿದ್ದಾರೆಯೇ ಎಂದು ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ಇನ್ನೊಂದು ತಿಂಗಳಲ್ಲಿ ಚರಕ ಆಸ್ಪತ್ರೆ ಲೋಕಾರ್ಪಣೆಗೊಳ್ಳಲಿದೆ ಅಟಲ್…

Read More

ಶಿವಮೊಗ್ಗ: ಜಿಲ್ಲೆಯ ಸೊರಬ, ಶಿರಾಳಕೊಪ್ಪ ಪುರಸಭೆ, ಹೊಳೆಹೊನ್ನೂರು, ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿ ಹಾಗೂ ಭದ್ರಾವತಿ, ಸಾಗರ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗೆ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದ್ದು, ಸೊರಬ ಪುರಸಭೆಯ ಅಧ್ಯಕ್ಷರ ಹುದ್ದೆಯನ್ನು ಎಸ್ಸಿ ಮಹಿಳೆ ಹಾಗೂ ಉಪಾಧ್ಯಕ್ಷರ ಹುದ್ದೆಯನ್ನು ಜನರಲ್ ಮಹಿಳೆಗೆ ಮೀಸಲಿರಿಸಲಾಗಿದೆ. ಶಿರಾಳಕೊಪ್ಪ ಪುರಸಭೆಯ ಅಧ್ಯಕ್ಷರ ಹುದ್ದೆಯನ್ನು ಎಸ್ಸಿ ಮಹಿಳೆ ಹಾಗೂ ಉಪಾಧ್ಯಕ್ಷರ ಹುದ್ದೆಯನ್ನು ಬಿಸಿಎಗೆ ಮೀಸಲಿಡಲಾಗಿದೆ. ಹೊಳೆ ಹೊನ್ನೂರು ಪಟ್ಟಣ ಪಂಚಾಯ್ತಿಯ ಅಧ್ಯಕ್ಷರ ಹುದ್ದೆಯನ್ನು ಎಸ್ಟಿ ಮಹಿಳೆ ಹಾಗೂ ಉಪಾಧ್ಯಕ್ಷರ ಹುದ್ದೆಯನ್ನು ಜನರಲ್ ಮಹಿಳೆಗೆ ಮೀಸರಿಲಿಸಲಾಗಿದೆ. ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಸ್ಥಾನವನ್ನು ಜನರಲ್, ಉಪಾಧ್ಯಕ್ಷ ಸ್ಥಾನವನ್ನು ಬಿಸಿಎ ಮಹಿಳೆಗೆ ಮೀಸರಿಲಿಸಲಾಗಿದೆ.   ಭದ್ರಾವತಿ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಜನರಲ್ ಮಹಿಳೆ, ಉಪಾಧ್ಯಕ್ಷ ಸ್ಥಾನವನ್ನು ಜನರಲ್ ಗೆ ಮೀಸಲಾತಿ ನೀಡಲಾಗಿದೆ. ಸಾಗರ ನಗರಸಭೆಯ ಅಧ್ಯಕ್ಷ ಸ್ಥಾನವನ್ನು ಜನರಲ್ ಮಹಿಳೆ, ಉಪಾಧ್ಯಕ್ಷ ಸ್ಥಾನವನ್ನು ಬಿಸಿಎಗೆ ಮೀಸಲಿರಿಸಿ ರಾಜ್ಯ…

Read More

ಬೆಂಗಳೂರು: ಪ್ಯಾರಿಸ್‌ ನಗರದಲ್ಲಿ ನಡೆಯುತ್ತಿರುವ ಜಾಗತಿಕ ಕ್ರೀಡಾ ಹಬ್ಬವಾದ 33ನೇ ಒಲಿಂಪಿಕ್ ಕ್ರೀಡಾಕೂಟದ ಅಂಗವಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಮಕ್ಕಳಿಗಾಗಿ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಗ್ರಾಮಗಳಲ್ಲಿನ ಮಕ್ಕಳು ಮತ್ತು ಸಾರ್ವಜನಿಕರಲ್ಲಿ ಕ್ರೀಡೆಯ ಬಗ್ಗೆ ಒಲವು ಮೂಡಿಸುವ ಸಲುವಾಗಿ ಒಲಿಂಪಿಕ್ ಕ್ರೀಡಾಕೂಟದ ದಿನನಿತ್ಯದ ಮುಖ್ಯಾಂಶಗಳನ್ನು ಅರಿವು ಕೇಂದ್ರಗಳಲ್ಲಿ ಪ್ರತಿ ದಿನ ನಿಗದಿತ ಸಮಯದಲ್ಲಿ ಪ್ರದರ್ಶಿಸಲು ಕ್ರಮವಹಿಸಲಾಗಿದೆ. ಗ್ರಾಮ ಪಂಚಾಯತಿಗಳು ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಕ್ರೀಡಾ ಮನೋಭಾವ ಹಾಗೂ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ಕಳೆದ ಜೂನ್ 11ರ ಅಂತರ ರಾಷ್ಟ್ರೀಯ ಆಟದ ದಿನದ ಅಂಗವಾಗಿ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಪ್ರತಿ ತಿಂಗಳು ವಿವಿಧ ವಿಷಯಗಳ ಆಧಾರದಲ್ಲಿ ವಿವಿಧ ಆಟಗಳನ್ನು ಗುರುತಿಸುವುದು, ಹಾಗೂ ಅಂತಹ ಆಟಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. https://kannadanewsnow.com/kannada/the-state-government-published-the-reservation-list-for-the-post-of-municipal-council-municipality-town-panchayat-chairman-vice-chairman/ https://kannadanewsnow.com/kannada/are-you-asking-for-an-account-of-my-assets-i-will-give-everything-give-your-brothers-account-first-dk-shivakumar-to-hdk/ https://kannadanewsnow.com/kannada/men-beware-learn-about-the-early-symptoms-of-penile-cancer/

Read More

ಬೆಂಗಳೂರು: ರಾಜ್ಯ ರಾಜಧಾನಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏಳು ಸ್ಥಳಗಳನ್ನು ಗುರುತಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಮಂಗಳವಾರ ಅಥವಾ ಬುಧವಾರ ಚರ್ಚಿಸಿ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಕ್ಷಿಪ್ರಗತಿಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೋಮವಾರ ಇಲ್ಲಿ ನಡೆದ ನಿರ್ಣಾಯಕ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಐಡೆಕ್ ಮತ್ತು ಬೋಸ್ಟನ್ ಕನ್ಸಲ್ಟೆನ್ಸಿ ಗ್ರೂಪ್ ಸಂಸ್ಥೆಗಳು ಸಿದ್ಧಪಡಿಸಿರುವ ಪ್ರಾತ್ಯಕ್ಷಿಕೆಯನ್ನು ಅವರು ವೀಕ್ಷಿಸಿದರು. ನಂತರ ಮಾತನಾಡಿದ ಇಬ್ಬರೂ ನಾಯಕರು, ‘ನೂತನ ವಿಮಾನ ನಿಲ್ದಾಣಕ್ಕೆ ಐಡೆಕ್ ಸಂಸ್ಥೆಯು 9 ಜಾಗಗಳನ್ನು ಗುರುತಿಸಿದೆ. ಈ ಪೈಕಿ ಎರಡು ಸ್ಥಳಗಳನ್ನು ತಾಂತ್ರಿಕ ಕಾರಣಗಳಿಂದ ಕೈಬಿಡಲಾಗಿದೆ. ಉಳಿದ ಸ್ಥಳಗಳ ಮಾಹಿತಿಯೊಂದಿಗೆ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಕಳಿಸಲಾಗುವುದು. ಇದಕ್ಕೂ ಮೊದಲು ಮುಖ್ಯಮಂತ್ರಿಗಳ ಜತೆ ಅಂತಿಮ ಚರ್ಚೆ ನಡೆಸಲಾಗುವುದು’ ಎಂದರು. ವಿಮಾನ ನಿಲ್ದಾಣಕ್ಕೆ ಯಾವ ಜಾಗ ಸೂಕ್ತ ಎನ್ನುವುದನ್ನು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ನಗಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರ ಹುದ್ದೆಗೆ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ಸೂಚನೆಯನ್ನು ಕೂಡ ನೀಡಿದೆ. ಈ ಕುರಿತಂತೆ ಅಧಿಸೂಚನೆಯನ್ನು ಹೊರಡಿಸಿರುವಂತ ರಾಜ್ಯ ಸರ್ಕಾರವು, ರಾಜ್ಯದಲ್ಲಿನ 61 ನಗರಸಭೆ, 123 ಪುರಸಭೆ ಸೇರಿದಂತೆ 117 ಪಟ್ಟಣ ಪಂಚಾಯಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಅಧಿಕೃತವಾಗಿ ಬಿಡುಗಡೆ ಮಾಡಿರುವಂತ ಪಟ್ಟಿಯಲ್ಲಿ ನಗರಸಭೆಯಾದಂತ ಅಫಜಲಪುರಕ್ಕೆ ಅಧ್ಯಕ್ಷ ಸ್ಥಾನ ಬಿಸಿಬಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಜನರಲ್, ಆನೇಕಲ್ ಗೆ ಅಧ್ಯಕ್ಷ ಸ್ಥಾನ ಜನರಲ್ ಮಹಿಳೆ, ಉಪಾಧ್ಯಕ್ಷ ಸ್ಥಾನ ಜನರಲ್, ಅಂಕೋಲಾಕ್ಕೆ ಅಧ್ಯಕ್ಷ ಸ್ಥಾನ ಜನರಲ್, ಉಪಾಧ್ಯಕ್ಷ ಸ್ಥಾನ ಜನರಲ್ ಮಹಿಳೆಗೆ ಮೀಸಲಿರಿಸಲಾಗಿದೆ. ಆ ಪಟ್ಟಿ ಈ ಕೆಳಗಿನಂತಿದೆ. ಇನ್ನೂ ಪುರಸಭೆಯಾಗಿರುವಂತ ಅರಸೀಕೆರೆಗೆ ಅಧ್ಯಕ್ಷರ ಹುದ್ದೆಗೆ ಜನರಲ್, ಉಪಾಧ್ಯಕ್ಷರ ಹುದ್ದೆಯನ್ನು ಎಸ್ಸಿಗೆ, ಬಾಗಲಕೋಟೆಯ ಅಧ್ಯಕ್ಷರ ಹುದ್ದೆ ಜನರಲ್ ಮಹಿಳೆ, ಉಪಾಧ್ಯಕ್ಷರ ಹುದ್ದೆಯನ್ನು ಜನರಲ್, ಬಸವಕಲ್ಯಾಣ ಪುರಸಭೆಯ ಅಧ್ಯಕ್ಷರ…

Read More

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಸೋಮವಾರ ಬೆಳಗಾವಿ ಜಿಲ್ಲೆಯ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಜೂನ್‌ನಿಂದ ಇದುವರೆಗೆ 565 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.62ರಷ್ಟು ಹೆಚ್ಚು ಮಳೆಯಾಗಿದೆ. ಅತಿವೃಷ್ಟಿಯಿಂದ 6ಮಂದಿ ಸಾವಿಗೀಡಾಗಿದ್ದು, ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ಒದಗಿಸಲಾಗಿದೆ. 12 ಜಾನುವಾರುಗಳು ಸಾವನ್ನಪ್ಪಿದ್ದು, ಪರಿಹಾರ ಒದಗಿಸಲಾಗಿದೆ. ಸಾವಿಗೀಡಾದ ಒಂದು ಜಾನುವಾರಿಗೆ 37,500 ರೂಪಾಯಿ ಪರಿಹಾರ ನೀಡಲಾಗುತ್ತಿದೆ. ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 48 ಮನೆಗಳು ಪೂರ್ಣ ಹಾನಿಗೀಡಾಗಿದ್ದು, 950 ಮನೆಗಳಿಗೆ ಭಾಗಶಃ ಹಾನಿಯಾಗಿವೆ. ಈ ಹಿಂದೆ ಅತಿವೃಷ್ಟಿ ಸಂದರ್ಭದಲ್ಲಿ ಮನೆ ಹಾನಿಗೆ ನೀಡಲಾದ ಪರಿಹಾರ ದುರುಪಯೋಗವಾದ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಈ ಬಾರಿ ದುರುಪಯೋಗ ತಪ್ಪಿಸಲು ಪೂರ್ಣ ಮನೆ ಹಾನಿಗೀಡಾದವರಿಗೆ ರೂ. 1.20 ಲಕ್ಷ ನಗದು ಪರಿಹಾರ ನೀಡಲಾಗುತ್ತಿದ್ದು, ಇದರೊಂದಿಗೆ ಮನೆಯನ್ನು ಸಹ…

Read More

ನಮ್ಮಲ್ಲಿ ಪ್ರತಿಯೊಬ್ಬರೂ ಕಷ್ಟಪಟ್ಟು ಸಂಪಾದಿಸುವ ಕಾರಣವೇನೆಂದರೆ ನಮ್ಮ ಭವಿಷ್ಯದ ಸಂಘಟಿಗಳು ಯಾವುದೇ ಅಭಾವವಿಲ್ಲದೆ ಉತ್ತಮವಾಗಿ ಬದುಕಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು…

Read More