Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದಂತ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಹೀಗೆ ಪ್ರತಿಭಟಿಸಿದ್ದವರು ಪ್ರತಿಭಟನೆ ಅನುಮತಿ ಪಡೆದಿದ್ದ ಕಾರಣ, ಅಂತವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ನಮ್ಮ ಕರುನಾಡ ಯುವ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದರು. ಆದರೇ ಪ್ರತಿಭಟನೆ ನಡೆಸೋದಕ್ಕೆ ಪೊಲೀಸರಿಂದ ಅನುಮತಿ ಪಡೆಯಬೇಕಿದ್ದಂತ ಪ್ರತಿಭಟನಾಕಾರರು ಆ ಕೆಲಸವನ್ನೇ ಮಾಡಿರಲಿಲ್ಲ. ಈ ಹಿನ್ನಲೆಯಲ್ಲಿ ನಟ ಕಮಲ್ ಹಾಸನ್ ಕನ್ನಡದ ಬಗ್ಗೆ ವಿವಾದಾತ್ಮಕವಾಗಿ ನೀಡಿದಂತ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದಂತ ನಮ್ಮ ಕರುನಾಡು ಯುವ ಸೇನೆಯ ಕಾರ್ಯಕರ್ತರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. https://kannadanewsnow.com/kannada/breaking-illegal-ipl-ticket-selling-racket-case-by-police-two-constables-suspended/ https://kannadanewsnow.com/kannada/breaking-another-tragedy-due-to-rain-in-mangalore-a-country-boat-capsized-in-the-sea-two-drowned/
ಬೆಂಗಳೂರು: ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ಇದರಿಂದ ನಷ್ಟವಾಗುತ್ತಿರುವುದು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯಕ್ಕೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧ ಆವರಣ ಹಾಗೂ ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. “ನಾವು ಎಲ್ಲಾ ಸಮಾಜ ರಕ್ಷಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ವತಿಯಿಂದ ಒಂದು ತಂಡ ಕಳುಹಿಸಿ ವರದಿ ನೀಡಲು ಹೇಳಿದ್ದೇವೆ. ಅಧಿಕಾರಿಗಳು ನೀಡುವ ವರದಿ ಬೇರೆ, ಸಾರ್ವಜನಿಕರ ಜತೆ ಚರ್ಚೆ ಮಾಡಿ ವರದಿ ನೀಡಲು ನಮ್ಮ ಪಕ್ಷದವರಿಗೆ ತಿಳಿಸಿದ್ದೇನೆ. ಕರಾವಳಿ ಭಾಗದಲ್ಲಿ ಶಾಂತಿ ನೆಲೆಸಬೇಕು. ಇದು ಒಂದು ಸಾವು, ಎರಡು ಸಾವಿನ ವಿಚಾರ ಮಾತ್ರವಲ್ಲ. ಇದು ಇಡೀ ಕರಾವಳಿ ಭಾಗಕ್ಕೆ ಬಿದ್ದಿರುವ ಕೊಡಲಿಪೆಟ್ಟು. ಜನರು ಆಂತಕಕ್ಕೆ ಒಳಗಾಗುವುದು, ಬಂಡವಾಳ ಹೂಡಿಕೆದಾರರು ಅಲ್ಲಿ ಹೂಡಿಕೆ ಮಾಡಲು ಹಿಂಜರಿಯುತ್ತಿರುವುದನ್ನು ಎಲ್ಲರೂ ಅರಿತುಕೊಳ್ಳಬೇಕು. ಈ ಪರಿಸ್ಥಿತಿಯನ್ನು ಅರಿತುಕೊಳ್ಳಬೇಕು ಎಂದು ಬಿಜೆಪಿ ಸ್ನೇಹಿತರು ಹಾಗೂ ಬೇರೆ ಬೇರೆ ಸಂಘಟನೆಗಳಿಗೆ ಮನವಿ ಮಾಡುತ್ತೇನೆ”…
ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ಮಾಡಲಿಕ್ಕಾ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಈ ಬಗ್ಗೆ ಬೆಂಗಳೂರು ಮಹಾಜನತೆಗೆ ಬೆಂಗಳೂರು ಉಸ್ತುವಾರಿ ಸಚಿವರು ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ. ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು!! ಪಾಪ.. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ ‘ಭಾರೀ ಆಸಾಮಿ’ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ!! ಕೊನೆಪಕ್ಷ ಅವರ…
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು. Justice delayed is justice denied ಎನ್ನುವ ಮಾತನ್ನು ನೆನಪಿಡಿ. ಇದನ್ನು ಸಹಿಸಲು ಸಾಧ್ಯವಿಲ್ಲ. ಉಳಿದ ಜಿಲ್ಲೆಗಳಲ್ಲಿ ಪ್ರಗತಿ ಕಾಣುವಾಗ ಕೆಲವು ಮಾತ್ರ ಆಗುತ್ತಿಲ್ಲ ಎಂದರೆ ಸಹಿಸಲು ಸಾಧ್ಯವಿಲ್ಲ ಎಂದರು. ಈ ಬಗ್ಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚಿಸಿದರು. ಅಗತ್ಯವಿದ್ದರೆ ಹೇಳಿ ಹಚ್ಚುವರಿ AC, DC ಗಳನ್ನು ಕೊಡಬಹುದು ಎಂದರು.
ಬೆಂಗಳೂರು: ರಾಜ್ಯ ಸರ್ಕಾರದಿಂದ ಎನ್ ಹೆಚ್ ಎಂ ಕಾರ್ಯಕ್ರಮದಡಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಎಂಬಿಬಿಎಸ್ ವೈದ್ಯಾಧಿಕಾರಿಗಳು, ಎನ್ ಎಸ್ ಸಿಯು, ಐಸಿಯು ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶುಶ್ರೂಷಕರು, ಪ್ರಮುಖ ಕ್ಲಿನಿಕಲ್ ತಜ್ಞರ ವೇತನ ಪರಿಷ್ಕರಿಸಿ ಆದೇಶಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರವು ಎನ್ ಹೆಚ್ ಎಂ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವಂತ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಸಿಹಿಸುದ್ದಿ ನೀಡಿದೆ. ಇಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯ / ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ MBBS ವೈದ್ಯಾಧಿಕಾರಿಗಳು, SNCU/ICU ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶುಶೂಷಕರುಗಳಿಗೆ ಮತ್ತು ಪ್ರಮುಖ ಕ್ಲಿನಿಕಲ್ ತಜ್ಞರ (OBG, Paediatric, Anaesthesia, General Medicine, Ortho, Surgeon, Ophthalmologist) ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಪುಸ್ತಾವನೆಯನ್ನು ಸಲ್ಲಿಸಲಾಗಿದ್ದು, ಉಲ್ಲೇಖದನ್ವಯ 2024-26 ಅನುಮೋದನೆಗೊಂಡಿರುತ್ತದೆ. ವಿವರ ಈ ಕೆಳಕಂಡಂತಿದೆ ಎಂದು ತಿಳಿಸಿದೆ. ಮೇಜರ್ ಕ್ಲಿನಿಕಲ್ ಸ್ಪೆಷಲಿಸ್ಟ್ ಹುದ್ದೆಯ ನೇಮಕಾತಿಗೆ ಮಾನದಂಡಗಳು: 1.…
ಬೆಂಗಳೂರು: ರಾಜ್ಯದಲ್ಲಿ ಕೋಮು ಹಿಂಸೆಗೆ ಬ್ರೇಕ್ ಹಾಕುವಂತ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಸಂಬಂಧ ಕೋಮು ಹಿಂಸೆ ನಿಗ್ರಹಕ್ಕಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಿ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು,ರಾಜ್ಯದಲ್ಲಿ ನಕ್ಸಲೈಟ್ ಚಟುವಟಿಕೆಗಳ ನಿಗ್ರಹಕ್ಕಾಗಿ Anti Naxal Force (ANF) ಅನ್ನು ಸೃಜಿಸಿ ಆದೇಶಿಸಲಾಗಿದೆ ಎಂದಿದ್ದಾರೆ. ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರು ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ತುಳು, ಕೊಂಕಣಿ ಮುಂತಾದ ವಿಶಿಷ್ಟ ಭಾಷೆಗಳು ಮತ್ತು ಅದರ ಸಾಂಸ್ಕೃತಿಕ ಪರಂಪರೆಯಿಂದ ಗುರುತನ್ನು ರೂಪಿಸಿದ್ದು, ಜನರಲ್ಲಿ ಆಳವಾದ ಸಮುದಾಯದ ಪ್ರಜ್ಞೆ ಮತ್ತು ಪ್ರಾದೇಶಿಕ ಹೆಮ್ಮೆಯನ್ನು ಬೆಳೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯು ಸಾಂಪ್ರದಾಯಿಕವಾಗಿ ಉನ್ನತ ಮಟ್ಟದ ಶಿಕ್ಷಣ ಮತ್ತು ಸಾಕ್ಷರತೆಯೊಂದಿಗೆ ಸ್ಥಿರವಾದ ಆರ್ಥಿಕ ಪುಗತಿಯನ್ನು ಕಂಡಿದ್ದು, ಇದರ ಹೊರತಾಗಿಯೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪುಸ್ತುತ ಕೋಮು ಸಂವೇದನೆಗಳು ಹೆಚ್ಚಾಗುತ್ತಿದ್ದು, ಸಣ್ಣ ಘಟನೆಗಳು ಸಹ ಪುಮುಖ ಕಾನೂನು…
ಬೆಂಗಳೂರು: ರಾಜ್ಯದ ರಾಷ್ಟ್ರೀಯ ಆರೋಗ್ಯ ಯೋಜನೆಯ ಸಿಬ್ಬಂದಿಗಳಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಗುತ್ತಿಗೆ ವೈದ್ಯರು, ಸ್ಟಾಫ್ ನರ್ಸ್ ವೇತನವನ್ನು ಹೆಚ್ಚಳ ಮಾಡಿ ಆದೇಶಿಸಿದೆ. ಇಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಆರೋಗ್ಯ ಸೇವೆ ಒದಗಿಸುವಲ್ಲಿ ತಜ್ಞ ವೈದ್ಯರ ಸೇವೆ ಮುಖ್ಯವಾದದ್ದು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಮಹತ್ವದ ತೀರ್ಮಾನ ಎನ್ನುವಂತೆ ವೇತನ ಹೆಚ್ಚಳ ಮಾಡಲಾಗಿದೆ ಎಂದಿದೆ. ಎನ್ ಹೆಚ್ ಎಂ ಅಡಿ ನೇಮಕವಾದಂತ ಗುತ್ತಿಗೆ ವೈದ್ಯರು, ಶುಶ್ರೂಷಕರ ವೇತನವನ್ನು ಕೇಂದ್ರದ ಅನುಮತಿ ಪಡೆದು ಶೇ.25ರಿಂದ 50ರಷಅಟು ಹೆಚ್ಚಳ ಮಾಡಲಾಗಿದೆ ಎಂದು ಹೇಳಿದೆ. ಎಂಬಿಬಿಎಸ್ ವೈದ್ಯರ ವೇತನವನ್ನು ರೂ.45,000ದಿಂದ ರೂ.75,000ಕ್ಕೆ ಹೆಚ್ಚಳ ಮಾಡಲಾಗಿದೆ. 1,10,000 ಇದ್ದಂತ ತಜ್ಞ ವೈದ್ಯರ ವೇತನವನ್ನು ರೂ.1,40,000 ಮಾಡಲಾಗಿದೆ. ನರ್ಸ್ ವೇತನವನ್ನು ರೂ.18,000ದಿಂದ ರೂ.22,000ಕ್ಕೆ ಹೆಚ್ಚಳ ಮಾಡಲಾಗಿದೆ. ಪ್ರಸ್ತಾಪಿತ ಪರಿಷ್ಕರಿಸಲ್ಪಟ್ಟ ವೇತನವು ಹೊಸದಾಗಿ ನೇಮಕಗೊಂಡ ಸಿಬ್ಬಂದಿಗಳಿಗೆ ಮಾತ್ರ ಅನ್ವಯಿಸುತ್ತದೆ. ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಹಾಲಿ ಪಡೆಯುತ್ತಿರುವ ವೇತನ ಶ್ರೇಣಿಯಲ್ಲಿಯೇ ಮಂದುವರಿಯುತ್ತಾರೆ. ಈ ನೌಕರರು ರಾಜೀನಾಮೆ ಸಲ್ಲಿಸಿ, ಹೊಸ…
ಬೆಂಗಳೂರು: ನಗರದಲ್ಲಿನ ಮೆಟ್ರೋ ನಿಲ್ದಾಣಗಳಲ್ಲಿ ಇರುವಂತ ಶೌಚಾಲಯ ಬಳಕೆಗೆ ಶುಲ್ಕ ಪಾವತಿಯಿಲ್ಲ ಎಂಬುದಾಗಿ ಬಿಎಂಆರ್ ಸಿಎಲ್ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಮೆಟ್ರೋ ರೈಲು ನಿಯಮಿತವು, ಮೆಟ್ರೋ ಸ್ವೈಪ್ ಗೇಟ್ಗಿಂತ ಹೊರಗೆ ಇರುವ ಶೌಚಾಲಯಗಳನ್ನು ಬಳಕೆ ಮಾಡುವವರಿಗೆ ಕನಿಷ್ಠ ಶುಲ್ಕ ಸಂಗ್ರಹಿಸಲು ನಿರ್ಧರಿಸಲಾಗಿತ್ತು. ಈಗ ಅದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ. https://twitter.com/KarnatakaVarthe/status/1928084694429569338 https://kannadanewsnow.com/kannada/in-the-financial-year-of-2025-the-amount-of-bank-fraud-has-increased-threefold-to-reach-36014-crores-rbi/ https://kannadanewsnow.com/kannada/from-now-on-a-break-on-communal-violence-in-karnataka-state-government-orders-the-formation-of-a-special-task-force/
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ( Reserve Bank of India-RBI) ಬ್ಯಾಂಕ್ ವಂಚನೆಗಳಲ್ಲಿ ಗಮನಾರ್ಹ ಏರಿಕೆಯನ್ನು ವರದಿ ಮಾಡಿದೆ. ಮಾರ್ಚ್ 2025ಕ್ಕೆ ಕೊನೆಗೊಂಡ ವರ್ಷದಲ್ಲಿ ಈ ಮೊತ್ತವು ಶೇ. 194 ರಷ್ಟು ಅಂದರೆ ಸುಮಾರು ಮೂರು ಪಟ್ಟು ಹೆಚ್ಚಾಗಿ 36,014 ಕೋಟಿ ರೂ.ಗಳಿಗೆ ತಲುಪಿದೆ. ಇದು ಹಿಂದಿನ ವರ್ಷಕ್ಕಿಂತ ರೂ. 12,230 ಕೋಟಿಯಷ್ಟು ಹೆಚ್ಚಾದಂತೆ ಆಗಿದೆ. ವಂಚನೆ ಪ್ರಕರಣಗಳ ಸಂಖ್ಯೆ 2024-25ರಲ್ಲಿ ಹಿಂದಿನ ವರ್ಷಕ್ಕಿಂತ 36,060 ರಿಂದ 23,953 ಕ್ಕೆ ಇಳಿದಿದೆ ಮತ್ತು ಖಾಸಗಿ ಬ್ಯಾಂಕುಗಳು ಪ್ರಕರಣಗಳಲ್ಲಿ ಶೇ. 59.42 ರಷ್ಟಿವೆ ಎಂದು ಆರ್ ಬಿ ಐ ಮಾಹಿತಿ ನೀಡಿದೆ. ಇದರಲ್ಲಿ, ಸಾರ್ವಜನಿಕ ವಲಯದ ಬ್ಯಾಂಕುಗಳಿಂದ ರೂ. 25,667 ಕೋಟಿ ಮೌಲ್ಯದ ವಂಚನೆಗಳು ವರದಿಯಾಗಿವೆ. ಇದು ಒಂದು ವರ್ಷದ ಹಿಂದೆ ರೂ. 9,254 ಕೋಟಿಗಿಂತ ದೊಡ್ಡ ಏರಿಕೆಯಾಗಿದೆ ಎಂದು 2024-25 ರ RBI ನ ವಾರ್ಷಿಕ ವರದಿ ತಿಳಿಸಿದೆ. ಕುತೂಹಲಕಾರಿಯಾಗಿ, ಖಾಸಗಿ ಬ್ಯಾಂಕುಗಳು 14,233 ವಂಚನೆಗಳನ್ನು (ಕಳೆದ ವರ್ಷ 24,207…
ಬೆಂಗಳೂರು: ರಾಜ್ಯದಲ್ಲಿ ಮುಂದಿನ 3 ತಿಂಗಳವರೆಗೆ ಆಂಟಿ ರೇಬಿಸ್ ಲಸಿಕೆ ಮತ್ತು ರೇಬೀಸ್ ಇಮ್ಯುನೊಗ್ಲೋಬ್ಯುಲಿನ್ ಔಷಧಿಯ ಕೊರತೆಯಿಲ್ಲ ಎಂಬುದಾಗಿ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲಿ ‘ರೇಬೀಸ್’ ಅನ್ನು ‘ಅಧಿಸೂಚಿತ ರೋಗ'(‘notifiable disease) ಎಂದು ಗುರುತಿಸಲಾಗಿದೆ. ರಾಜ್ಯದಲ್ಲಿ ಪ್ರತಿ ತಿಂಗಳು ಐಎಚ್ಐಪಿ (ಇಂಟಿಗ್ರೇಟೆಡ್ ಹೆಲ್ತ್ ಇನ್ಸಾರ್ಮೇಶನ್ ಪ್ಲಾಟಾರ್ಮ್) ನಲ್ಲಿ ಸುಮಾರು 40,000 ನಾಯಿ ಕಡಿತದ ಪ್ರಕರಣಗಳು ವರದಿಯಾಗುತ್ತದೆ, ಈ ಎಲ್ಲಾ ಪುಕರಣಗಳಿಗೆ ಮಾರ್ಗಸೂಚಿಗಳ ಪ್ರಕಾರ ಜೀವ ಉಳಿಸುವ ಆಂಟಿ ರೇಬಿಸ್ ಲಸಿಕೆ ಮತ್ತು ರೇಬೀಸ್ ಇಮ್ಯುನೊಗ್ಲೋಬ್ಯುಲಿನ್ ಒದಗಿಸುವುದು ಕಷ್ಟಸಾದ್ಯವಾಗಿರುತ್ತದೆ ಎಂದಿದೆ. ರಾಜ್ಯದ ಎಲ್ಲಾ ಆರೋಗ್ಯ ಸಂಸ್ಥೆಗಳಿಗೆ ಎಲ್ಲಾ ಔಷಧಿಗಳು ಮತ್ತು ಬಳಕೆಯ ವಸ್ತುಗಳನ್ನು ಒದಗಿಸಲು ಕೆಎಸ್ಎಂಎಸ್ಎಲ್ ನೋಡಲ್ ಏಜೆನ್ಸಿಯಾಗಿದೆ. ಎಆರ್ವಿ ಮತ್ತು ರೇಬೀಸ್ ಇಮ್ಯುನೊಗ್ಲೋಬುಲಿನ್ ರಾಜ್ಯದಲ್ಲಿ (“Essential Drug List ) ನ ಪಟ್ಟಿಯಲ್ಲಿ ಇರುತ್ತವೆ ಎಂದು ಹೇಳಿದೆ. ರಾಜ್ಯದ “ಔಷಧ’ ತಂತ್ರಾಂಶದ ಮಾಹಿತಿಯ ಪ್ರಕಾರ, ಪ್ರಸ್ತುತ ರಾಜ್ಯದಾದ್ಯಂತ ಆಸ್ಪತ್ರೆಗಳಲ್ಲಿ…