Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಪಾಕಿಸ್ತಾನ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ವಾಯುಪ್ರದೇಶವನ್ನು ಸ್ಥಗಿತಗೊಳಿಸಿದ ನಂತರ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಪಾಕಿಸ್ತಾನವು ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚುವುದಾಗಿ ಘೋಷಿಸಿದ ನಂತರ, ಏರ್ ಇಂಡಿಯಾ ಮತ್ತು ಇಂಡಿಗೊ ಗುರುವಾರ ವಿಸ್ತೃತ ಮಾರ್ಗಗಳಿಂದಾಗಿ ಕೆಲವು ವಿಮಾನಗಳ ಮೇಲೆ ಪರಿಣಾಮ ಬೀರಬಹುದು ಎಂದು ಘೋಷಿಸಿವೆ. ಉತ್ತರ ಅಮೆರಿಕಾ, ಯುಕೆ, ಯುರೋಪ್, ಎಂಇಗೆ ಹೋಗುವ ಅಥವಾ ಅಲ್ಲಿಂದ ಹೊರಡುವ ವಿಮಾನಗಳು ಪರ್ಯಾಯ ವಿಸ್ತೃತ ಮಾರ್ಗವನ್ನು ತೆಗೆದುಕೊಳ್ಳುತ್ತವೆ ಎಂದು ಏರ್ ಇಂಡಿಯಾ ಹೇಳಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದಾಗಿ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಪಾಕಿಸ್ತಾನ ಗುರುವಾರ ಇಂಡಿಯನ್ ಏರ್ಲೈನ್ಸ್ಗೆ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ. ಪಹಲ್ಗಾಮ್ ದಾಳಿಯ ನಂತರ ನವದೆಹಲಿಯ ಕ್ರಮಗಳನ್ನು ಎದುರಿಸಲು ವಾಘಾ ಗಡಿ ದಾಟುವಿಕೆಯನ್ನು ಸಹ ಮುಚ್ಚಿದೆ ಮತ್ತು ಭಾರತದೊಂದಿಗಿನ ಎಲ್ಲಾ ವ್ಯಾಪಾರವನ್ನು ಸ್ಥಗಿತಗೊಳಿಸಿದೆ. ಮಂಗಳವಾರ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದ ನಂತರ ಇಬ್ಬರು ವಿದೇಶಿಯರು…
ಮಂಡ್ಯ : ಮಳವಳ್ಳಿ ತಾಲ್ಲೂಕಿನ ಹೊಸಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-209(948)ರ ಗಗನಚುಕ್ಕಿ ಪ್ರೀ ಪ್ಲಾಜಾಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಟೋಲ್ ಫ್ರೀ ಪ್ಲಾಜಾ ಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಅಪೂರ್ಣ ಹಾಗೂ ಅವೈಜ್ಞಾನಿಕತೆಯಾಗಿದೆ ಎಂದು ಸ್ಥಳೀಯರು ಹಾಗೂ ರೈತ ಮುಖಂಡರು ಆರೋಪಿಸಿದ್ದು, ಕಳೆದ ತಿಂಗಳು ಪ್ರತಿಭಟನೆ ಕೂಡ ನಡೆಸಿದ್ದರು. ಶಾಸಕ ಪಿ.ಎಂ.ನರೇಂದ್ರಸ್ವಾಮಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುರುವಾರ ಟೋಲ್ಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಬಳಿ ಸುಗಮ ಸಂಚಾರ ವ್ಯವಸ್ಥೆ ಕುರಿತು ಕೈಗೊಳ್ಳಬಹುದಾದ…
ಮಂಡ್ಯ : ಜಮ್ಮು ಕಾಶ್ಮೀರದ ಪಹಲ್ಗಾಮ್ ಗೆ ಪ್ರವಾಸಕ್ಕೆ ತೆರಳಿದ್ದರ ಮೇಲೆ ಪಾಕಿಸ್ತಾನದ ಭಯೋತ್ಪಾದಕರು ಅತ್ಯಂತ ಅಮಾನುಷವಾಗಿ ಗುಂಡಿಕ್ಕಿ ಹತ್ಯೆ ಮಾಡಿರುವುದು ಖಂಡನೀಯವಾಗಿದ್ದು, ಈ ವಿಷಯದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಭಯೋತ್ಪಾದನೆಯ ಹುಟ್ಟಡಗಿಸುವ ಕೆಲಸವನ್ನು ಮಾಡಬೇಕಿದೆ ಎಂದು ಶಾಸಕ ಕೆ.ಎಂ.ಉದಯ್ ಆಕ್ರೋಶ ವ್ಯಕ್ತಪಡಿಸಿದರು. ಮದ್ದೂರು ತಾಲೂಕಿನ ಕಬ್ಬಾರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಮತ್ತು ಅರುವನಹಳ್ಳಿ ಗ್ರಾಮದಲ್ಲಿ ಶಾಲಾಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರದ ಪಹಲ್ಗಾಮ್ನಲ್ಲಿ 28 ಮಂದಿ ಮುಗ್ಧ ನಾಗರಿಕರು ಬಲಿಯಾಗಿದ್ದಾರೆ. ಇದು ಸಹಿಸಲು ಅಸಾಧ್ಯವಾದ ಕೃತ್ಯವಾದದ್ದು, ನರರಾಕ್ಷಕರಿಗೆ ತಕ್ಷ ಶಿಕ್ಷೆ ಆಗಬೇಕು. ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ನೂರಾರು ಕೋಟಿ ರೂ ವೆಚ್ಚದಲ್ಲಿ ನೀರಾವರಿ, ಕೆರೆ ಅಭಿವೃದ್ಧಿ, ಗ್ರಾಮೀಣ ಭಾಗದ ರಸ್ತೆಗಳು, ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬೇಸಿಗೆ ಕಾಲ ಮುಗಿಯುವುದರೊಳಗೆ ದುಸ್ಥಿತಿಯಲ್ಲಿರುವ ಶಾಲಾ ಕೊಠಡಿಗಳನ್ನು…
ಚಾಮರಾಜನಗರ: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪ ಬಳಕೆ ಮಾಡಲಾಗುತ್ತಿದೆ. ಇದೀಗ ಮಲೆಮಹದೇಶ್ವರ ಸ್ವಾಮಿಯ ಲಡ್ಡು ಪ್ರಸಾದಕ್ಕೂ ನಂದಿನಿ ತುಪ್ಪ ಬಳಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ , ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು. ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು. *ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ…
ಜೈಪುರ: ಜಲ ಜೀವನ್ ಮಿಷನ್ ಹಗರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಮಹೇಶ್ ಜೋಶಿ ( Former Rajasthan minister and Congress leader Mahesh Joshi ) ಅವರನ್ನು ಜಾರಿ ನಿರ್ದೇಶನಾಲಯ (Enforcement Directorate -ED) ಗುರುವಾರ ಜೈಪುರದಲ್ಲಿ ಬಂಧಿಸಿದೆ. ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಆಪ್ತ ಸಹಾಯಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ಜೋಶಿ ಅವರನ್ನು ಕೇಂದ್ರ ಏಜೆನ್ಸಿ ಹಲವಾರು ಸುತ್ತಿನ ವಿಚಾರಣೆಯ ನಂತರ ವಶಕ್ಕೆ ತೆಗೆದುಕೊಂಡಿದೆ. ಒಟ್ಟಾರೆಯಾಗಿ ಜಲ ಜೀವನ್ ಮಿಷನ್ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಮತ್ತು ರಾಜಸ್ಥಾನದ ಮಾಜಿ ಸಚಿವ ಮಹೇಶ್ ಜೋಶಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. https://kannadanewsnow.com/kannada/male-mahadeshwara-hills-to-be-alcohol-free-siddaramaiah/ https://kannadanewsnow.com/kannada/here-are-the-key-highlights-of-the-state-cabinet-meeting-held-at-male-mahadeshwara-hills-today/
ಬೆಂಗಳೂರು: ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಚಿನ್ನ ವಂಚನೆ ಎಸಗಿದ್ದ ಪ್ರಕರಣ ಸಂಬಂಧ ಐಶ್ವರ್ಯ ಗೌಡ ಅವರ ಬೆಂಗಳೂರು ಹಾಗೂ ಮಂಡ್ಯದ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು ದಾಳಿ ನಡೆಸಿದರು. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಮನೆ ಹಾಗೂ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆದಿದ್ದು, ಕಡತಗಳು ಹಾಗೂ ದಾಖಲೆಗಳ ಶೋಧ ಮಾಡಿದರು. ಈ ಬಳಿಕ ಹೆಚ್ಚಿನ ವಿಚಾರಣೆಗಾಗಿ ಅವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಶಾಸಕ ವಿನಯ್ ಕುಲಕರ್ಣಿಗೂ ED ಶಾಕ್! ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಐಶ್ವರ್ಯ ಗೌಡ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲು ಇಡಿ ಅಧಿಕಾರಿಗಳು ದಾಳಿ ಮಾಡಿ ಹಲವು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಏನಿದು ಪ್ರಕರಣ? ವಾರಾಹಿ…
ಮೈಸೂರು: ಮೈಸೂರು ನಗರದಲ್ಲಿ ಸುಸಜ್ಜಿತವಾದಂತ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು, ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಮಾಹಿತಿ ಹಂಚಿಕೊಂಡಿದ್ದು, ಮೈಸೂರಿಗೆ ಒಂದು ಸುಸಜ್ಜಿತವಾದ ಕ್ರಿಕೆಟ್ ಸ್ಟೇಡಿಯಂ ಬೇಕೆಂಬುದು ಮೈಸೂರಿಗರ ಬಹು ವರ್ಷಗಳ ಕನಸಾಗಿತ್ತು. ಮೈಸೂರು ನಗರದ ಸಾತಗಳ್ಳಿ ಸಮೀಪ ಮೂಡಾ ಗುರುತು ಮಾಡಿದಂತಹ ಸುಮಾರು19.5 ಎಕರೆ ಜಾಗವನ್ನ 2021ರಲ್ಲಿ ಶ್ರೀ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಬಂದ ನಂತರ, ಆ ಭೂಮಿಯನ್ನು ಹಸ್ತಾಂತರ ಮಾಡಲು ನಾನು ಎಲ್ಲಾ ಪ್ರಯತ್ನವನ್ನು ಮಾಡಿದ್ದೆ. ಆದರೆ ಒಂದು ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಕನಿಷ್ಠ 06 ಎಕರೆ ಮೈದಾನಕ್ಕೆ ಹಾಗೂ 05 ಎಕರೆ ಸ್ಟೇಡಿಯಂ ನಿರ್ಮಾಣಕ್ಕೆ ಬೇಕು, ಜತೆಗೆ ಪಾರ್ಕಿಂಗ್, ಕ್ಲಬ್ ಹೌಸ್ ನಿರ್ಮಾಣಕ್ಕೂ ಕೂಡ ಜಾಗ ಬೇಕಾಗಿತ್ತು. ಆದರೆ 19.5 ಎಕರೆ ಜಾಗದ ಮಧ್ಯದಲ್ಲಿ ಒಂದು ನಿರ್ಜೀವ ಕೆರೆ ಇತ್ತು, ಅದನ್ನು ಸುಪ್ರೀಂ ಕೋರ್ಟ್…
ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಇಂದು ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಬೈಕ್ ನಲ್ಲಿ ಬಂದಂತ ಇಬ್ಬರು ಕಳ್ಳರು ಕದ್ದು ಪರಾರಿಯಾಗಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಇಕ್ಕೇರಿ ರಸ್ತೆಯಲ್ಲಿ ಇಂದು ಸಂಜೆ ಈ ಘಟನೆ ನಡೆದಿದೆ. ಕೂಲಿ ಕೆಲಸ ಮಾಡುತ್ತಿದ್ದಂತ 60 ವರ್ಷದ ಮಹಿಳೆಯೊಬ್ಬರು ಇಕ್ಕೇರಿ ರಸ್ತೆಯಿಂದ ಜನ್ನತ್ ನಗರದ ತಮ್ಮ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮಹಿಳೆಯನ್ನು ಸ್ಕೂಟಿಯಲ್ಲಿ ಹಿಂಬಾಲಿಸಿ ತೆರಳಿದಂತ ಕಳ್ಳರು, ಹಿಂದಿನಿಂದ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಕಳ್ಳರು ಕದ್ದೊಯ್ದಂತ ಮಾಂಗಲ್ಯ ಸರವು 28 ಗ್ರಾಂ ತೂಕದ್ದು ಎಂಬುದಾಗಿ ಮಹಿಳೆ ತಿಳಿಸಿದ್ದಾರೆ. ಸರಗಳ್ಳತನ ಪ್ರಕರಣ ಸಂಬಂಧ ಸಾಗರ ನಗರ ಠಾಣೆಗೆ ತೆರಳಿ ಸೀತಮ್ಮ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಸಾಗರ ಟೌನ್ ಠಾಣೆಯ ಪೊಲೀಸರು ಕಾರ್ಯ ಪ್ರವೃತ್ತರಾಗಿದ್ದು, ಮಹಿಳೆ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿರುವಂತ ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/male-mahadeshwara-hills-to-be-alcohol-free-siddaramaiah/ https://kannadanewsnow.com/kannada/here-are-the-key-highlights-of-the-state-cabinet-meeting-held-at-male-mahadeshwara-hills-today/
ಬೆಂಗಳೂರು: ಶಕ್ತಿ ಯೋಜನೆಯಡಿ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಈ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಈ ವರ್ಷ 2000 ಹೊಸ ಬಸ್ ಖರೀದಿ ಮಾಡಲಾಗುತ್ತಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ಸಕ್ತ ವರ್ಷ 2,000 ಬಸ್ಗಳನ್ನು ಖರೀದಿಸಿ ವಾಯುವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ತಲಾ 700 ಬಸ್ಗಳನ್ನು ನೀಡಲಾಗುವುದು. ಉಳಿದ ಬಸ್ಗಳು ಕೆಎಸ್ಆರ್ಟಿಸಿಗೆ ಸೇರಲಿವೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1915331899838583248 https://kannadanewsnow.com/kannada/male-mahadeshwara-hills-to-be-alcohol-free-siddaramaiah/ https://kannadanewsnow.com/kannada/here-are-the-key-highlights-of-the-state-cabinet-meeting-held-at-male-mahadeshwara-hills-today/
ಬೆಂಗಳೂರು: ಕಾವೇರಿ ಮಾತೆಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನೆರವೇರಿಸುವ ಸಂಬಂಧ ರಾಜ್ಯ ಸರ್ಕಾರವು ಗುರುವಾರ ನಡೆದ ಸಚಿವ ಸಂಪುಟದಲ್ಲಿ 92 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಇದಕ್ಕೆೆ ಕಾರಣೀಕರ್ತರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚಲವರಾಯಸ್ವಾಮಿ ಅವರನ್ನು ಹಾಗೂ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ ಅವರನ್ನು ಕಾವೇರಿ ಪ್ರಾಂತ್ಯದ ಮಹಾಜನತೆ ಪರವಾಗಿ ಅಭಿನಂದಿಸುತ್ತೇನೆ ಎಂದು ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಹೇಳಿದ್ದಾರೆ. ದೇಶದ ಪುಣ್ಯ ನದಿಗಳಲ್ಲಿ ಕಾವೇರಿಯೂ ಒಂದು. ಅತ್ಯಂತ ಶ್ರೇಷ್ಠವಾದ ತಾಯಿ ಕಾವೇರಿಗೆ ಪೂಜೆ ಸಲ್ಲಿಸಲು ಈ ಅನುದಾನವನ್ನು ಬಳಸಿಕೊಳ್ಳಲಾಗುತ್ತದೆ. ಅಲ್ಲಿ ಕಾವೇರಿ ಆರತಿಗೆ ಸಂಬಂಧಪಟ್ಟಂತೆ ಎಲ್ಲ ಮೂಲಭೂತ ಸೌಕರ್ಯವನ್ನು ಕಲ್ಪಿಸಲು ಇಂದಿನ ಸಚಿವ ಸಂಪುಟವು 92 ಕೋಟಿ ರೂಪಾಯಿಗೆ ಅನುಮೋದನೆಯನ್ನು ನೀಡಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಕಾವೇರಿ ಆರತಿಗಾಗಿ ಮನವಿ ಮಾಡಿದ್ದ ಶಾಸಕರು: ಗಂಗಾರತಿ ಮಾದರಿಯಲ್ಲಿ ಕರ್ನಾಟಕದಲ್ಲಿ ಕಾವೇರಿ ಆರತಿ ಮಾಡುವ ಸಂಬಂಧ ಈ ಹಿಂದೆ…