Author: kannadanewsnow09

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವಂತ ಪಂಚ ಗ್ಯಾರಂಟಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಬಂದ್ ಮಾಡಲ್ಲ. ಇದನ್ನು ಸಿಎಂ ಸಿದ್ಧರಾಮಯ್ಯ ಕೂಡ ಸ್ಪಷ್ಟ ಪಡಿಸಿದ್ದಾರೆ ಎಂಬುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ಪ್ರವಾಸಿ ಮಂದಿರದಲ್ಲಿ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಿಎಂ ಸಿದ್ಧರಾಮಯ್ಯ ಮಂಡಿಸಿದಂತ ಮೊದಲ ಬಜೆಟ್ ಅರ್ಧ ವಾರ್ಷಿಕ ಬಜೆಟ್ ಆಗಿದೆ. ಶಾಸಕರಿಗೆ ಬರುವ ಅನುದಾನ ಬಂದಿದೆ. ಈ ಸಾರಿ ಬಜೆಟ್ ನಲ್ಲಿ ಶಾಸಕರಿಗೆ ಮತ್ತಷ್ಟು ಅನುದಾನ ಸಿಗಲಿದೆ. ಶಾಸಕರಿಗೆ ನೀಡುವಂತ ಅನುದಾನದಲ್ಲಿ ಯಾವುದೇ ಕೊರತೆಯಾಗಿಲ್ಲ ಅಂತ ಹೇಳಿದರು. ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೂಢೀಕರಣಕ್ಕಾಗಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿಲ್ಲ. ಪಂಚ ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಈಗಾಗಲೇ ಅನುದಾನ ಮೀಸಲಿಟ್ಟಿದೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನದಲ್ಲಿ ಯಾವುದೇ ಕೊರತೆಯಿಲ್ಲ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಕೂಡ ಸ್ಪಷ್ಟಪಡಿಸಿದ್ದಾರೆ ಎಂದರು.…

Read More

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ 3 ರೂ ತೈಲ ಬೆಲೆ ಏರಿಕೆ ಮಾಡಿದ್ದಕ್ಕೆ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರ ಅವಧಿಯಲ್ಲಿ ರೂ.90 ಏರಿಕೆ ಕಂಡಾಗ ಏಕೆ ಮಾತನಾಡಲಿಲ್ಲ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು. ಅಲ್ಲದೇ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ತೈಲ ಬೆಲೆ ಏರಿಕೆ ಮಾಡಿರುವುದನ್ನು ಅವರು ಸಮರ್ಥಿಸಿಕೊಂಡರು. ಸಾಗರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಹಣ ಕ್ರೂಢೀಕರಣದ ಸಲುವಾಗಿ ತೈಲ ಬೆಲೆ ಏರಿಕೆ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಾಣಿಕೆ ಮಾಡೋದಕ್ಕೆ ಅಲ್ಲ. ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆಯೂ ಇಲ್ಲ ಎಂಬುದಾಗಿ ಹೇಳಿದರು. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 60 ರೂ ಇದ್ದಂತ ತೈಲಬೆಲೆ ರೂ.90ಕ್ಕೆ ಏರಿಕೆಯಾಗಿತ್ತು. ಆಗ ಯಾರೂ ಮಾತನಾಡಲಿಲ್ಲ. ಈಗ ಕೇವಲ 3 ರೂ ಏರಿಕೆ ಮಾಡಿದ ತಕ್ಷಣ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ. ಆಗ ಯಾಕೆ ಮಾತನಾಡಲಿಲ್ಲ ಅಂತ ಪ್ರಶ್ನಿಸಿದರು. ತೈಲ ಬೆಲೆ ಏರಿಕೆಯ ಹಿಂದೆ ಗ್ಯಾರಂಟಿ ಯೋಜನೆಗೆ ಹಣ…

Read More

ವಿಜಯಪುರ: ಜಿಲ್ಲೆಯಲ್ಲಿ ಇಂದು ಘೋರ ದುರಂತವೊಂದು ಸಂಭವಿಸಿದೆ. ತಮ್ಮ ಜಮೀನಿನಲ್ಲಿ ನೀರು ತುಂಬಿದ್ದಂತ ಗುಂಡಿಗೆ ಬಿದ್ದಂತ ಓರ್ವನನ್ನು ರಕ್ಷಿಸಲು ಹೋಗಿ, ಮೂವರು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ಎಮ್ಮೆ ಮೇಯಿಸಲು ನೀಲಮ್ಮ ಎಂಬುವರು ಹೋಗಿದ್ದರು. ಜಮೀನಿನ ಗುಂಡಿಯಲ್ಲಿ ನಿಂತಿದ್ದಂತ ನೀರನ್ನು ಎಮ್ಮೆಗೆ ಕುಡಿಸೋದಕ್ಕೆ ಹೋಗಿ, ಗುಂಡಿಗೆ ತಾವು ಬಿದ್ದಿದ್ದಾರೆ. ಈ ವೇಳೆ ರಕ್ಷಣೆಗಾಗಿ ಹೊಲದಲ್ಲೇ ಇದ್ದಂತ ಮುತ್ತಪ್ಪ ಕಿಲಾರಹಟ್ಟಿ ಎಂಬುವರನ್ನು ಕೂಗಿದ್ದಾರೆ. ನೀಲಮ್ಮನನ್ನು ರಕ್ಷಿಸಲು ಹೋಗಿ ಮುತ್ತಪ್ಪ ಕಿಲಾರಹಟ್ಟಿ ನೀರಲ್ಲಿ ಮುಳುಗಿದ್ದಾರೆ. ಇವರು ಸಾವು ಬದುಕಿನ ನಡುವೆ ಮುಳುಗುತ್ತ ಹೋರಾಡುತ್ತಿದ್ದದ್ದು ಕಂಡಂತ ಶಿವು ಯಾಳವಾರ ಅವರು ಇಬ್ಬರನ್ನು ರಕ್ಷಿಸೋದಕ್ಕೆ ಹೋಗಿ, ತಾವು ನೀರಿನಿಂದ ಅವರನ್ನು ರಕ್ಷಿಸಿ ಮೇಲೆ ಬರಲಾಗದೇ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಮೂಲಕ ನೀಲಮ್ಮ ಕಿಲಾರಹಟ್ಟಿ (16), ಮುತ್ತಪ್ಪ ಕಿಲಾರಹಟ್ಟಿ (24) ಹಾಗೂ ಶಿವ ಯಾಳವಾರ(25) ಎಂಬುವರು ಧಾರುಣವಾಗಿ ಸಾವನ್ನಪ್ಪಿದ್ದಾರೆ.  ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಮೇಲೆತ್ತಿದ್ದಾರೆ. ಈ ಸಂಬಂಧ…

Read More

ಇರಾನ್ : ಇಲ್ಲಿನ ಈಶಾನ್ಯ ನಗರ ಕಶ್ಮಾರ್ನಲ್ಲಿ ಮಂಗಳವಾರ ಸಂಭವಿಸಿದ 4.9 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು 120 ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಮಾಧ್ಯಮ ವರದಿ ಮಾಡಿದೆ. ಮಧ್ಯಾಹ್ನ 1:24 ಕ್ಕೆ (0954 ಜಿಎಂಟಿ) ಭೂಕಂಪ ಸಂಭವಿಸಿದೆ ಎಂದು ರಾಜ್ಯ ದೂರದರ್ಶನ ಮತ್ತು ಸ್ಥಳೀಯ ಗವರ್ನರ್ ಹೇಳಿದರೆ, ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯು 10 ಕಿಲೋಮೀಟರ್ (ಆರು ಮೈಲಿ) ಆಳದಲ್ಲಿ ಸಂಭವಿಸಿದೆ ಎಂದು ಹೇಳಿದೆ. https://twitter.com/shortnewsenergy/status/1803091116352315841 https://kannadanewsnow.com/kannada/all-diploma-semester-exams-diploma-result-declared/ https://kannadanewsnow.com/kannada/breaking-drunken-driving-singer-justin-timberlake-arrested/

Read More

ಶಿವಮೊಗ್ಗ: ಮಳೆಗಾಲ ಆರಂಭಗೊಂಡ ನಂತ್ರ ಸಾಗರ ತಾಲೂಕಿನಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಇವುಗಳ ನಿಯಂತ್ರಣ ಸಂಬಂಧ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದಂತ ಶಾಸಕ ಬೇಳೂರು ಗೋಪಾಲಕೃಷ್ಣ, ನಿಯಂತ್ರಣಕ್ಕಾಗಿ ಕೆಲ ಖಡಕ್ ಸೂಚನೆ ನೀಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಇಂದು ಸಾಗರದ ಪ್ರವಾಸಿ ಮಂದಿರದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದಂತ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಡೆಂಗ್ಯೂನಿಂದ ಆಸ್ಪತ್ರೆಯ ಸಿಬ್ಬಂದಿಯೇ ಸಾವನ್ನಪ್ಪಿದ್ದು ದುರಾದೃಷ್ಠಕರ ಸಂಗತಿಯಾಗಿದೆ. ಸಾಗರ ತಾಲೂಕಿನಲ್ಲಿ ಡೆಂಗ್ಯೂ ನಿಯಂತ್ರಣದ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು. ಡಾ.ನಾಗೇಂದ್ರಪ್ಪ ವರ್ಗಾವಣೆಗೆ ಸೂಚನೆ ಪ್ರಸೂತಿ ತಜ್ಞ ವೈದ್ಯ ಡಾ.ನಾಗೇಂದ್ರಪ್ಪ ಅವರ ಯಡವಟ್ಟುಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಅದರೊಟ್ಟಿಗೆ ಅವರ ವಿರುದ್ಧ ದೂರುಗಳು ಜಾಸ್ತಿಯಾಗುತ್ತಿದ್ದಾವೆ. ಅವರನ್ನು ಹೊಸನಗರ ಆಸ್ಪತ್ರೆಗೆ ವರ್ಗಾವಣೆ ಮಾಡಬೇಕು. ಅಲ್ಲಿನ ಪ್ರಸೂತಿ ವೈದ್ಯರನ್ನು ಈ ಕೂಡಲೇ ಸಾಗರ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ವರ್ಗಾವಣೆ ಮಾಡಬೇಕು ಅಂತ…

Read More

ಬೆಂಗಳೂರು: ಮಹಾರಾಷ್ಟ್ರ ಸರ್ಕಾರದಿಂದ ಗಡಿ ಭಾಗದ ಕನ್ನಡ ಮಾಧ್ಯಮ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಕ ಮಾಡಿ, ನಿಯಮ ಉಲ್ಲಂಘಿಸಿ, ಕರ್ನಾಟಕಕ್ಕೆ ಮೋಸ ಮಾಡುತ್ತಿರೋದು ಬೆಳಕಿಗೆ ಬಂದಿದೆ. ಇದನ್ನು ಪ್ರಶ್ನಿಸಿರುವಂತ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದಂತ ಸೋಮಣ್ಣ ಬೇವಿನಮರದ  ಅವರು ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದು ಕೂಡಲೇ ಸಮಸ್ಯೆ ಸರಿ ಪಡಿಸುವಂತೆ ಒತ್ತಾಯಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಇಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದಂತ ಸೋಮಣ್ಣ ಬೇವಿನಮರದ ಅವರು ಪತ್ರ ಬರೆದಿದ್ದಾರೆ. ಅದರಲ್ಲಿ ಉಲ್ಲೇಖ (1) ರಲ್ಲಿನ ಆದೇಶಗಳಲ್ಲಿ ಕ್ರಮವಾಗಿ ಪ್ರಾಥಮಿಕ ಶಿಕ್ಷಣ ವಿಭಾಗ, ಜಿಲ್ಲಾಪಂಚಾಯತ್ ಸಾಂಗ್ಲಿ ಹಾಗೂ ಸೊಲ್ಲಾಪುರ ಇವರಿಂದ ಜತ್ತ ಮತ್ತು ಅಕ್ಕಲಕೋಟೆ ತಾಲ್ಲೂಕಿನ ಕನ್ನಡ ಮಾಧ್ಯಮ ಶಾಲೆಗಳಿಗೆ ಕ್ರಮವಾಗಿ 7 ಹಾಗೂ 8 ಸಂಖ್ಯೆಯ ಕನ್ನಡ ಬಾಗದ ಶಿಕ್ಷಕರನ್ನು ನೇಮಕಾತಿ ಮಾಡಿ ಆದೇಶ ಹೊರಡಿಸಲಾಗಿರುತ್ತದೆ ಎಂದಿದ್ದಾರೆ. ಈ ಅನ್ಯಾಯವನ್ನು ವಿರೋಧಿಸಿ ಅಲ್ಲಿನ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ಮತ್ತು ಪ್ರತಿಭಟನೆಯನ್ನು…

Read More

ಚಿಕ್ಕಬಳ್ಳಾಪುರ: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ( Actor Darshan ) ಪೊಲೀಸರ ಬಂಧನದಲ್ಲಿದ್ದಾರೆ. ಜೈಲು ಪಾಲಾಗೋ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ. ಇದರ ನಡುವೆ ಕೋಠಿಮಠ ಶ್ರೀಗಳು ನಟ ದರ್ಶನ್ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಅದೇನು ಅಂತ ಮುಂದೆ ಓದಿ. ಇಂದು ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಠಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ಕೋಪದ ಕೈಗೆ ಬುದ್ಧಿ ಕೊಟ್ಟರೇ ಈ ರೀತಿಯ ಘಟನೆಗಳಿಗೆ ಸಾಕ್ಷಿಯಾಗುತ್ತದೆ ಎಂಬುದಾಗಿ ಸ್ಪೋಟಕ ಹೇಳಿಕೆ ನೀಡಿದರು. ಇನ್ನೂ ಉಮಾಪತಿ ಕೂಡ ಕೋಠಿಮಠಕ್ಕೆ ಹೋಗಾದ ಕೋಪ ಕಡಿಮೆ ಮಾಡಿಕೊಳ್ಳಬೇಕು. ತಂದೆ, ತಾಯಿ ಮಾತು ಕೇಳಬೇಕು ಅಂತ ಅಂದಿದ್ದರು. ಅದರಂತೆ ನಡೆದುಕೊಂಡ ಕಾರಣ, ಈಗ ಒಳ್ಳೆಯ ಸ್ಥಾನದಲ್ಲಿದ್ದೇನೆ ಅಂತ ಹೇಳಿದ್ದರು ಎಂಬುದಾಗಿ ನೆನಪು ಮಾಡಿಕೊಂಡರು. ನಟ ದರ್ಶನ್ ಬಗ್ಗೆ ಈ ಸ್ಪೋಟಕ ಭವಿಷ್ಯ ನುಡಿದ ಕೋಡಿ ಮಠ ಶ್ರೀ ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರಿಂದ ಬಂಧಿಸಲ್ಪಟ್ಟಿದ್ದಾರೆ. ಕೆಲ ದಿನಗಳಿಂದ ಪೊಲೀಸರ…

Read More

ಬೆಂಗಳೂರು: ಸರಳ ವೈದ್ಯರಾಗಿ ಲೋಕಸಭಾ ಚುನಾವಣೆಗೆ ಇಳಿದಿ, ಬಿಜೆಪಿ ಪಕ್ಷದಿಂದ ಡಾ.ಸಿಎನ್ ಮಂಜುನಾಥ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಇಂತಹ ಸರಣ ವೈದ್ಯ ಡಾ.ಮಂಜುನಾಥ್ ತಮ್ಮ ಅತಿಯಾದ ಹಣಕಾಸನ್ನು ಸಮರ್ಥಿಸಿಕೊಳ್ಳಬೇಕು ಅಂತ ನಟ ಚೇತನ್ ಆಗ್ರಹಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು ಸಾಮಾಜಿಕ ಕಾಳಜಿಗೆ ಹೆಸರುವಾಸಿಯಾದ ಡಾ.ಸಿಎನ್ ಮಂಜುನಾಥ ಅವರು ಸುಮಾರು 100 ಕೋಟಿ ರೂ ಆಸ್ತಿಯನ್ನು ಘೋಷಿಸಿದ್ದಾರೆ ಎಂದು ಹೇಳಿದ್ದಾರೆ. ವರ್ಷಕ್ಕೆ 20 ಲಕ್ಷ ಗಳಿಸುವ ಸರ್ಕಾರಿ ವೈದ್ಯರು 35 ವರ್ಷಗಳಲ್ಲಿ 7 ಕೋಟಿ ರೂ ಗಳಿಸುತ್ತಾರೆ. ಸೇವೆಯೇ ಆದ್ಯತೆಯಾಗಿದ್ದಾಗ ಒಬ್ಬರ ಬಳಿ ಇಷ್ಟೊಂದು ಹಣ ಇರುವುದು ಹೇಗೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಸರಳ ವೈದ್ಯರಾದ ಡಾ.ಸಿಎನ್ ಮಂಜುನಾಥ್ ಅವರು ತಮ್ಮ ಅತಿಯಾದ ಹಣಕಾಸನ್ನು ಸಮರ್ಥಿಸಿಕೊಳ್ಳಬೇಕು ಎಂಬುದಾಗಿ ಆಗ್ರಹಿಸಿದ್ದಾರೆ. https://twitter.com/ChetanAhimsa/status/1802979223805563012 https://kannadanewsnow.com/kannada/paris-olympics-2024-aditi-diksha-shubhankar-and-gaganjeet-to-represent-india-in-golf/ https://kannadanewsnow.com/kannada/high-court-judge-nagaprasanna-sets-new-record-by-disposing-of-600-cases-in-a-single-day/

Read More

ನವದೆಹಲಿ: ಅಂತಾರಾಷ್ಟ್ರೀಯ ಗಾಲ್ಫ್ ಫೆಡರೇಶನ್ (International Golf Federation -IGF) ಮಂಗಳವಾರ ಬಿಡುಗಡೆ ಮಾಡಿದ ಅರ್ಹ ಆಟಗಾರರ ಅಂತಿಮ ಪಟ್ಟಿಯ ಪ್ರಕಾರ, ಗಾಲ್ಫ್ ಆಟಗಾರ್ತಿಯರಾದ ಅದಿತಿ ಅಶೋಕ್, ದೀಕ್ಷಾ ದಾಗರ್, ಶುಭಂಕರ್ ಶರ್ಮಾ ಮತ್ತು ಗಗನ್ಜೀತ್ ಭುಲ್ಲರ್ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ (  Paris Olympics ) ಭಾರತವನ್ನು ಪ್ರತಿನಿಧಿಸಲಿದ್ದಾರೆ. ಐಜಿಎಫ್ನ ಒಲಿಂಪಿಕ್ ಅರ್ಹತಾ ಪಟ್ಟಿಯಲ್ಲಿ 60 ಪುರುಷರು ಮತ್ತು ಮಹಿಳಾ ಗಾಲ್ಫ್ ಆಟಗಾರರು ಸೇರಿದ್ದಾರೆ. ಶುಭಂಕರ್ ಮತ್ತು ಗಗನ್ಜೀತ್ ಕ್ರಮವಾಗಿ 48 ಮತ್ತು 54 ನೇ ಶ್ರೇಯಾಂಕಗಳೊಂದಿಗೆ ಒಲಿಂಪಿಕ್ ಶ್ರೇಯಾಂಕಗಳೊಂದಿಗೆ ಸ್ಥಾನ ಪಡೆದಿದ್ದಾರೆ. ಅದಿತಿ ಮತ್ತು ದೀಕ್ಷಾ ಕ್ರಮವಾಗಿ 24 ಮತ್ತು 40 ಅಂಕಗಳೊಂದಿಗೆ ಅರ್ಹತೆ ಪಡೆದರು. ಪ್ಯಾರಿಸ್ ಕ್ರೀಡಾಕೂಟಕ್ಕಾಗಿ ಪುರುಷರ (ಆಗಸ್ಟ್ 1-4) ಮತ್ತು ಮಹಿಳೆಯರ (ಆಗಸ್ಟ್ 7-10) ಗಾಲ್ಫ್ ಸ್ಪರ್ಧೆಗಳು ಸೇಂಟ್-ಕ್ವೆಂಟಿನ್-ಎನ್-ಯೆವೆಲೈನ್ಸ್ನ ಗಾಲ್ಫ್ ನ್ಯಾಷನಲ್ ಕೋರ್ಸ್ನಲ್ಲಿ ನಡೆಯಲಿವೆ. ಟೋಕಿಯೊ ಒಲಿಂಪಿಕ್ಸ್ನಲ್ಲಿ ಅದಿತಿ ನಾಲ್ಕನೇ ಸ್ಥಾನ ಪಡೆದಿದ್ದರು, ಇದು ಬೇಸಿಗೆ ಕ್ರೀಡಾಕೂಟದಲ್ಲಿ ಭಾರತೀಯ ಗಾಲ್ಫ್ ಆಟಗಾರ ಸಾಧಿಸಿದ ಅತ್ಯುತ್ತಮ ಫಲಿತಾಂಶವಾಗಿದೆ.…

Read More

ನವದೆಹಲಿ: ಮುಂಬೈ, ಜೈಪುರ ಮತ್ತು ಪಾಟ್ನಾ ವಿಮಾನ ನಿಲ್ದಾಣಗಳು ಸೇರಿದಂತೆ ದೇಶಾದ್ಯಂತ 40 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ. ಖಾಸಗಿ ಸುದ್ದಿ ವಾಹಿನಿಗಳ ಮೂಲಗಳ ಪ್ರಕಾರ, ಇತರ ನಗರಗಳ ಜೊತೆಗೆ ಜೈಪುರದಲ್ಲಿ ವಿಮಾನ ನಿಲ್ದಾಣವನ್ನು ಸ್ಫೋಟಿಸಲು ಟ್ರೀಟ್ ಮೇಲ್ ಸ್ವೀಕರಿಸಲಾಗಿದೆ. ಮೇಲ್ ಸ್ವೀಕರಿಸಿದ ಕೂಡಲೇ ಭದ್ರತೆಯನ್ನು ಬಿಗಿಗೊಳಿಸಲಾಯಿತು, ನಂತರ ವಿಮಾನ ನಿಲ್ದಾಣದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಆದಾಗ್ಯೂ, ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಕೆಲವು ಕಿಡಿಗೇಡಿಗಳು ಬೆದರಿಕೆ ಮೇಲ್ ಕಳುಹಿಸಿದ್ದಾರೆ. ಮೇಲ್ ಕಳುಹಿಸಿದ್ದಾರೆಂದು ನಂಬಲಾದ ವ್ಯಕ್ತಿಗಾಗಿ ಐಪಿ ವಿಳಾಸದ ಮೂಲಕ ಹುಡುಕಾಟ ನಡೆಯುತ್ತಿದೆ. “ವಿಮಾನ ನಿಲ್ದಾಣವನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ. ಆದರೆ ಇಲ್ಲಿಯವರೆಗೆ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈ, ಪಾಟ್ನಾ ವಿಮಾನ ನಿಲ್ದಾಣ ಸೇರಿದಂತೆ ಹಲವಾರು ಮೇಲ್ಗಳನ್ನು ಸ್ವೀಕರಿಸುವ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲಾಗಿದೆ. https://kannadanewsnow.com/kannada/green-signal-from-state-government-to-start-english-medium-bilingual-classes-in-government-schools/ https://kannadanewsnow.com/kannada/people-of-bengaluru-take-note-tomorrow-there-will-be-power-outages-in-these-areas-tomorrow/

Read More