Author: kannadanewsnow09

ಬೆಂಗಳೂರು : ಕರ್ನಾಟಕ ಗೃಹಮಂಡಳಿ ವತಿಯಿಂದ ರಾಜಧಾನಿ ಬೆಂಗಳೂರು ಹೊರವಲಯದಲ್ಲಿ 500 ಎಕರೆ ಪ್ರದೇಶದಲ್ಲಿ ನೂತನ ಬಡಾವಣೆ (ಮಿನಿ ಟೌನ್ ಶಿಪ್ ) ನಿರ್ಮಾಣ ಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿ ಹಾಗೂ ರಾಮನಗರ ಜಿಲ್ಲೆ ಬಿಡದಿ ಹೋಬಳಿ ಯ ಏಳು ಗ್ರಾಮಗಳ 500 ಎಕರೆ ಪ್ರದೇಶದಲ್ಲಿ 50:50 ಅನುಪಾತದಲ್ಲಿ ಬಡಾವಣೆ ನಿರ್ಮಾಣ ವಾಗಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. 1066.50ಕೋಟಿ ರೂ. ಮೊತ್ತದ ಯೋಜನೆಗೆ ರೈತರು ಜಮೀನು ನೀಡಲು ರೈತರು ಒಪ್ಪಿಗೆ ಪತ್ರ ನೀಡಿದ್ದಾರೆ. ಈ ಯೋಜನೆ ಬೆಂಗಳೂರು -ಮೈಸೂರು ರಾಷ್ಟ್ರೀಯ ಹೆದ್ದಾರಿ ಯಿಂದ 5.5 ಕಿ. ಮೀ. ವ್ಯಾಪ್ತಿಯಲ್ಲಿ ಬರಲಿದೆ. ರೈತರ ಜತೆ ಪಾಲುದಾರಿಕೆ ಯಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಸತಿ ಯೋಜನೆ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದ್ದಾರೆ. ಈ ಹಿಂದೆ ಕೆಂಗೇರಿ ಹೋಬಳಿ ಹಾಗೂ ಬಿಡದಿ ಹೋಬಳಿಯಲ್ಲಿ ನಿವೇಶನ ಬೇಡಿಕೆ ಸಮೀಕ್ಷೆ ಮಾಡಿದ್ದು, 2666 ಅರ್ಜಿಗಳು ಬಂದಿದ್ದು,…

Read More

ಬೆಂಗಳೂರು : ಸ್ವಚ್ಛ, ಹಸಿರು ಮತ್ತು ಹೆಚ್ಚು ಸುಸ್ಥಿರ ನಾಳೆಗಾಗಿ ಭಾರತದ ಬದ್ಧತೆಗಳನ್ನು ಬೆಂಬಲಿಸುವ ಗುರಿಯೊಂದಿಗೆ; ಮತ್ತು UN SDG #12 ರಲ್ಲಿ ವಿವರಿಸಿದಂತೆ, Sunfeast YiPPee! ‘ಎ ಬೆಟರ್ ವರ್ಲ್ಡ್’ ಕಾರ್ಯಕ್ರಮವನ್ನು ರೂಪಿಸಿದ್ದು, ತನ್ನ ಬ್ರಾಂಡ್ ಮಿಷನ್‌ಗೆ ಅನುಗುಣವಾಗಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯ ಕುರಿತು ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿದೆ. YiPPee ಮೂಲಕ! ಬೆಟರ್ ವರ್ಲ್ಡ್ ಪ್ರೋಗ್ರಾಂ’, ಬೆಂಗಳೂರಿನ 500 ಶಾಲೆಗಳಲ್ಲಿ 2.5 ಲಕ್ಷ ಶಾಲಾ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಅಭ್ಯಾಸಗಳ ಬಗ್ಗೆ ಶಿಕ್ಷಣ ನೀಡಲಾಗಿದೆ. ಪ್ಲಾಸ್ಟಿಕ್ ತ್ಯಾಜ್ಯ, ಪರಿಸರದ ಮೇಲೆ ಅದರ ಪರಿಣಾಮ ಮತ್ತು ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡಿಮೆ ಮಾಡುವ, ಮರುಬಳಕೆ ಮಾಡುವ ತಂತ್ರಗಳ ಕುರಿತು ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳ ಮೂಲಕ ಬೆಂಗಳೂರಿನಾದ್ಯಂತ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಈ ಉಪಕ್ರಮವನ್ನು ವಿನ್ಯಾಸಗೊಳಿಸಲಾಗಿದೆ. ವಿದ್ಯಾರ್ಥಿಗಳು ಮನೆಯ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಲು ಮತ್ತು ಶಾಲೆಗಳಲ್ಲಿ ಗೊತ್ತುಪಡಿಸಿದ ಸಂಗ್ರಹಣಾ ಕೇಂದ್ರಗಳಲ್ಲಿ ಠೇವಣಿ ಮಾಡಲು ಪ್ರೋತ್ಸಾಹಿಸಲಾಯಿತು. ಸಂಗ್ರಹಿಸಿದ ಈ ಪ್ಲಾಸ್ಟಿಕ್ ತ್ಯಾಜ್ಯಗಳ ಮರುಬಳಕೆ…

Read More

ಮಂಡ್ಯ: HDK ಹೊಟ್ಟೆ ಪಾಡಿಗಾಗಿ ಪಕ್ಷದ ಅಸ್ತಿತ್ವಕ್ಕಾಗಿ ಬಿಜೆಪಿ ಪಕ್ಷಕ್ಕೆ ಹೋಗವ್ರೆ ಎಂಬುದಾಗಿ ಸಚಿವ ಚಲುವರಾಯಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ. ಮಂಡ್ಯದ ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಚೆಡಿಎಸ್ ಸೆಲ್ಯುಲರ್ ಪಕ್ಷ. ಜಾತ್ಯಾತೀತ ಅಂತ ಹೇಳ್ತಿದ್ದರು. ಆದೇನಾಯ್ತು ಈಗ ಎಂಬುದಾಗಿ ಪ್ರಶ್ನಿಸಿದರು. ಪಾಪ ಈಗ ಕೋಮುವಾಗಿ ಬಿಜೆಪಿ ಪಕ್ಷದ ಜೊತೆಗೆ ಅವ್ರು ಸೇರಿಕೊಂಡಿದ್ದಾರೆ. ಈ ಮೊದಲು ದೇವೇಗೌಡ್ರು ಮೋದಿ ಪ್ರಧಾನಿ ಆದ್ರೆ ದೇಶ ಬಿಟ್ಟೋಗ್ತೀನಿ ಅಂದಿದ್ರು. ಮುಂದಿನ ಜನ್ಮಕ್ಕೆ ಮುಸ್ಲಿಂ ಆಗಿ ಹುಟ್ಬೇಕು ಅಂತಿದ್ರು ಏನಾಯ್ತು ಅವೆಲ್ಲ ಎಂದು ಕೇಳಿದರು. ಪಾಪ ಕುಮಾರಸ್ವಾಮಿ ಅದೆಷ್ಟು ಸಾರಿ ಬಿಜೆಪಿ, ಆರ್ ಎಸ್ಎಸ್, ಭಜರಂಗದಳಕ್ಕೆ ಬಯ್ದಿದ್ದಾರೆ. ಆದ್ರೇ ಅವರೇ ಹೊಟ್ಟೇಪಾಡಿಗಾಗಿ ಪಕ್ಷದ ಅಸ್ತಿತ್ವಕ್ಕಾಗಿ ಈಗ ಪಕ್ಷಕ್ಕೆ ಹೋಗವ್ರೆ ಎಂಬುದಾಗಿ ಕಿಡಿಕಾರಿದರು. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/dr-c-n-manjunath-vs-d-k-suresh-means-selfless-v-s-selfishness-service-v-s-extortion-hdk/ https://kannadanewsnow.com/kannada/breaking-news-bureaucrats-sukhbir-sandhu-gyanesh-kumar-appointed-new-election-commissioners/

Read More

ಬೆಂಗಳೂರು: ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಸಂಸದ ಡಿ.ಕೆ.ಸುರೇಶ್ ಅವರಿಗೆ ಜೆಡಿಎಸ್ ಕಟುವಾಗಿ ತಿರುಗೇಟು ಕೊಟ್ಟಿದೆ. ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಡಿ.ಕೆ.ಸುರೇಶ್ ಅವರ ಮೇಲೆ ಪ್ರಹಾರ ನಡೆಸಿರುವ ಪಕ್ಷವು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಹೋರಾಟವು ನಿಸ್ವಾರ್ಥ ಮತ್ತು ಸ್ವಾರ್ಥ, ಸೇವೆ ಮತ್ತು ಸುಲಿಗೆ, ಒಳಿತು ಮತ್ತು ಕೆಡುಕಿನ ನಡುವೆ ಹೋರಾಟ ಎಂದು ಬಣ್ಣಿಸಿದೆ. ಡಾ.ಸಿ.ಎನ್.ಮಂಜುನಾಥ್ v/s ಡಿ.ಕೆ.ಸುರೇಶ್; ನಿಸ್ವಾರ್ಥ vs ಸ್ವಾರ್ಥ!; ಸೇವೆ v/s ಸುಲಿಗೆ!!; ಒಳಿತು v/s ಕೆಡುಕು!!! ಇದಕ್ಕೆ ಮಿಗಿಲಾಗಿ ಹೆಚ್ಚಿನದನ್ನು ಹೇಳುವ ಅಗತ್ಯವಿಲ್ಲ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ. ಡಿ.ಕೆ.ಸುರೇಶ್ ರವರೇ ನೀವೇನು? ಡಾ.ಸಿ.ಎನ್. ಮಂಜುನಾಥ್ ಅವರೇನು? ಎನ್ನುವುದು ರಾಜ್ಯಕ್ಕಷ್ಟೇ ಅಲ್ಲ, ಇಡೀ ಭಾರತ ದೇಶಕ್ಕೇ ಗೊತ್ತಿದೆ. ಅನಗತ್ಯವಾಗಿ ನಾಲಿಗೆ ಜಾರಿ ಗುಣ ಹಾಳು ಮಾಡಿಕೊಳ್ಳಬೇಡಿ. ಆರೋಗ್ಯ ಕ್ಷೇತ್ರದಲ್ಲಿ ಎಣೆ ಇಲ್ಲದಷ್ಟು ಸೇವೆ ಮಾಡಿ ಲಕ್ಷಾಂತರ ಬಡಜನರ ಹೃದಯದಲ್ಲಿ ನೆಲೆಸಿರುವ ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆ ಅನಾರೋಗ್ಯಕರ ಅಪಪ್ರಚಾರದಲ್ಲಿ ನೀವು ನಿರತರಾಗಿದ್ದೀರಿ. ಸೋಲಿನ…

Read More

ವರದಿ: ವಸಂತ ಬಿ ಈಶ್ವರಗೆರೆ ರಾಯಚೂರು: ಆ ವಸತಿ ಯೋಜನೆ, ಈ ವಸತಿ ಯೋಜನೆ ಅಂತ ರಾಜ್ಯ, ಕೇಂದ್ರ ಸರ್ಕಾರದಿಂದ ವರ್ಷ ವರ್ಷವೂ ಮನೆ ಮಂಜೂರು ಆಗ್ತಿದ್ದಾವೆ. ತಲುಪ ಬೇಕಾದವರಿಗೆ ತಲುಪುತ್ತಿಲ್ಲ ಅನ್ನುವುದಕ್ಕೆ ರಾಜ್ಯದ ಈ ಕರುಣಾಜನಕ ಕಥೆಯೇ ಸಾಕ್ಷಿ. ರಾಯಚೂರಿನ ಒಂದಿಡೀ ಕುಟುಂಬ ತಗಡಿನ ಶೆಡ್ ನಲ್ಲಿಯೇ ಕಳೆದ 10 ವರ್ಷಗಳಿಂದ ಜೀವನ ನಡೆಸುತ್ತಿದೆ ಎಂದ್ರೇ ನೀವೇ ಊಹಿಸಿಕೊಳ್ಳಿ. ಆ ಮರುಕ ಪಡುವ ಕತೆ ಮುಂದೆ ಓದಿ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೊಳಬಾಳ ಗ್ರಾಮದಲ್ಲಿ ಕಳೆದ 10 ವರ್ಷಗಳಿಂದ ತಗಡಿನ ಶೆಡ್ ನಿರ್ಮಿಸಿಕೊಂಡು ವಾಸಿಸುತ್ತಿರೋ ಕುಟುಂಬಲೇ ಯಂಕಪ್ಪ ಉಪ್ಪಾ ಹಾಗೂ ಸುಜಾತ ಎಂಬುವರಾಗಿದ್ದಾರೆ. ಇಬ್ಬರು ಹೆಣ್ಣುಮಕ್ಕಳು, ಇಬ್ಬರು ಗಂಡು ಮಕ್ಕಳೊಂದಿಗೆ ಬದುಕು ನಡೆಸುತ್ತಿರುವಂತ ಈ ಕುಟುಂಬಕ್ಕೆ ಕೂಲಿಯೇ ಆಸಲೆ. ಕೂಲಿಯಿಂದ ಬಂದಂತ ಹಣದಿಂದಲೇ ಜೀವನ ನಿರ್ವಹಣೆ ಮಾಡುತ್ತಿದೆ. ಕೊಳಬಾಳು ಗ್ರಾಮದಲ್ಲೇ ಗ್ರಾಮ ಪಂಚಾಯ್ತಿ ಇದೆ. ನಮಗೆ ಮನೆ ಕೊಡಿ, ತಗಡಿನಲ್ಲೇ ಎಷ್ಟು ದಿನ ಅಂತ ವಾಸ ಮಾಡೋದು. ಮಕ್ಕಳು…

Read More

ಬೆಂಗಳೂರು: ಆನೆ ನಡೆದದ್ದೇ ದಾರಿ. ಮಾಧ್ಯಮದವರು ಏನು ಬರೆದುಕೊಂಡು ಅದು ನಡೆದು ಹೋಗುತ್ತೆ. ನಾಯಿ ಬೊಗಳುತ್ತೆ ಎಂಬುದಾಗಿ ಮಾದ್ಯಮದವರನ್ನು ನಾಯಿಗೆ ಹೋಲಿಕೆ ಮಾಡಿದಂತ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಬಿಜೆಪಿ ಹೈಕಮಾಂಡ್ ಗೆ ದೂರು ನೀಡಿದೆ. ಈ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರದ ಮೂಲಕ ಟ್ವಿಟ್ ಮಾಡಿ ದೂರು ನೀಡಿರುವಂತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು, ಅದರಲ್ಲಿ ಉತ್ತರ ಕನ್ನಡದ ಸಂಸದ ಅನಂತ ಕುಮಾರ ಹೆಗಡೆ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಹಿಲ್ಲೂರು ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನ್ನಾಡುತ್ತಾ ಆನೆ ಹೋಗಿದ್ದೇ ದಾರಿ ಎಂಬಂತೆ ನಾವು ಇರಬೇಕು. ಮಾಧ್ಯಮಗಳು ಏನು ಬೇಕಾದರೂ ಬರೆದುಕೊಳ್ಳಲಿ. ಆನೆಗಳು ಹೋಗುವಾಗ ನಾಯಿಗಳು ಬೊಗಳುವುದು ಸಹಜ ಎಂದು ಮಾಧ್ಯಮದವರನ್ನು ಹೀಯಾಳಿಸಿರುವುದು ಖಂಡನೀಯ. ಕೂಡಲೇ ಅವರು ಬೇಷರತ್ತಾಗಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಕೆಯುಡಬ್ಲ್ಯು ಜೆ ಆಗ್ರಹಿಸಿದೆ.…

Read More

ಬೆಂಗಳೂರು: ಕಂದಾಯ ಇಲಾಖೆಯ ಸೇವೆಯಾಗಿರುವಂತ ಪಹಣಿಯಲ್ಲಿ ರಾಜ್ಯದ ರೈತರ ಬ್ಯಾಂಕ್ ಸಾಲ, ತೀರುವಳಿ ಸೇರಿದಂತೆ ವಿವಿಧ ಮಾಹಿತಿಗಳು ದಾಖಲಾಗೋದಕ್ಕೆ ಗ್ರಾಮಾಧಿಕಾರಿಗಳು ದೃಢೀಕರಣದ ನಂತ್ರ ದಾಖಲಾಗುತ್ತಿದ್ದವು. ಆದ್ರೇ ಇದಕ್ಕೆ ತಿಲಾಂಜನಿ ನೀಡಲಾಗಿದೆ. ಇನ್ಮುಂದೆ ಪಹಣಿಯಲ್ಲಿ ಈ ಎಲ್ಲಾ ವಿವರಗಳು ಸ್ವಯಂಚಾಲಿತವಾಗಿ ದಾಖಲಾಗಲಿದ್ದಾವೆ. ಈ ಕುರಿತಂತೆ ಮಾಹಿತಿ ನೀಡಿದಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಬ್ಯಾಂಕ್‌ಗಳಲ್ಲಿ ಸಾಲ ಪಡೆದರೆ, ಸಾಲ ತೀರುವಳಿಯಾದರೆ, ವಿಭಾಗ ಮಾಡಕೊಂಡರೆ, ಆಸ್ತಿಯನ್ನು ಅಡಮಾನ ಇಟ್ಟರೆ, ಎಸಿ ನ್ಯಾಯಾಲಯದ ಆದೇಶಗಳಾಗಿದ್ದರೆ ಹೀಗೆ ಸಣ್ಣಪುಟ್ಟ ಬದಲಾವಣೆಗಳು ಆದಾಗ ಅದರ ವಿವರವನ್ನು ಪಹಣಿಯಲ್ಲಿ ದಾಖಲಿಸುವುದನ್ನು ಸ್ವಯಂಚಾಲಿತ ಮಾಡಲಾಗಿದೆ. ಇದಕ್ಕಾಗಿ ಗ್ರಾಮಾಧಿಕಾರಿಗಳು ಧೃಢೀಕರಣ (ಥಂಬ್ ಕೊಡುವುದು) ಮಾಡುವುದು ಅಗತ್ಯವಿಲ್ಲ ಎಂದು ಹೇಳಿದರು. ಆಯಾ ಪಹಣಿ ಮೇಲೆ ಬ್ಯಾಂಕ್‌ಗಳು, ನ್ಯಾಯಾಲಯಗಳು ಹೀಗೆ ವಿವಿಧ ಮೂಲಗಳಿಂದ ನೀಡುವ ಮಾಹಿತಿಯನ್ನು ನೇರವಾಗಿ ಪಡೆದು ಅದನ್ನು ಪಹಣಿಯಲ್ಲಿ ದಾಖಲಿಸಲಾಗುತ್ತದೆ. ಇದಕ್ಕಾಗಿ ರೈತರು ಸರ್ಕಾರಿ ಕಚೇರಿಗಳಿಗೆ ಹತ್ತಾರು ಬಾರಿ ಅಲೆದಾಡುವ ಅಗತ್ಯವನ್ನು ತಪ್ಪಿಸಲಾಗುತ್ತಿದೆ. ಇದರಿಂದ ರೈತರ ಸಮಯ, ಅಧಿಕಾರಿಗಳ ಸಮಯ ಪೋಲಾಗುವುದು ಮತ್ತು…

Read More

ಬೆಂಗಳೂರು: ರಾಜ್ಯದ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಇನ್ಮುಂದೆ ಭಾನುವಾರವೂ ಉಪ ನೋಂದಣಾಧಿಕಾರಿಗಳ ಕಚೇರಿ ತೆರೆದಿರಲಿದೆ. ಈ ಮೂಲಕ ಆಸ್ತಿ ನೋಂದಣಿ ಸೇರಿದಂತೆ ವಿವಿಧ ಸಬ್ ರಿಜಿಸ್ಟರ್ ಕಚೇರಿ ಸೇವೆಗಳು ದೊರೆಯಲಿದ್ದಾವೆ. ಈ ಕುರಿತು ಮಾಹಿತಿ ಹಂಚಿಕೊಂಡಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಬೆಂಗಳೂರು ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಯ ನೋಂದಣಿ ಕಚೇರಿಗಳನ್ನು ಭಾನುವಾರವೂ ಸಹಿತ ಕಾರ್ಯನಿರ್ವಹಿಸುವಂತೆ ಆದೇಶ ಮಾಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಅನೇಕ ಜನರು ನೋಂದಣಿಗಾಗಿ ತಮ್ಮ ಕೆಲಸ ಕಾರ್ಯಗಳಿಗೆ ರಜಾ ಹಾಕಿ ಬರಬೇಕಾಗುತ್ತದೆ. ನಗರ ಪ್ರದೇಶಗಳಲ್ಲಿ ಇದರಿಂದ ಕೆಲವರಿಗೆ ಅನಾನುಕೂಲವೂ ಆಗುತ್ತಿದೆ. ಆದ್ದರಿಂದ ಒಂದು ಕಂದಾಯ ಜಿಲ್ಲೆಯಲ್ಲಿ ಕನಿಷ್ಠ 6-7 ನೋಂದಣಾ ಕಚೇರಿಗಳು ಇರುತ್ತವೆ. ರೋಸ್ಟರ್ ಆಧಾರದ ಮೇಲೆ ಒಂದೊಂದು ವಾರ ಒಂದೊಂದು ನೋಂದಣಾಧಿಕಾರಿ ಕಚೇರಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು. https://kannadanewsnow.com/kannada/shocking-incident-in-namma-metro-unidentified-person-stops-movement-for-some-time/ https://kannadanewsnow.com/kannada/breaking-iafs-tejas-aircraft-crashes-in-rajasthan-pilot-safe/

Read More

ಬೆಂಗಳೂರು : ನೋಂದಣಿ ಸಮಯದಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ನೇರವಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಕಾಸಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಆಸ್ತಿ’ ಯೋಜನೆಯಡಿ ‘ನನ್ನ ಆಸ್ತಿ ನನ್ನ ಗುರುತು’ ಎಂಬ ಉದ್ದೇಶದಿಂದ ಈ ಮಹತ್ವದ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಕೆಲವೆಡೆ ಪೈಲಟ್ ಆಗಿ ಮಾಡಲಾಗಿದೆ. ಇದನ್ನು ಇಂದಿನಿಂದ ರಾಜ್ಯಾದ್ಯಂತ ವಿಸ್ತರಿಸಲಾಗಿದೆ ಎಂದು ಹೇಳಿದರು. ಕಂದಾಯ ಇಲಾಖೆಯನ್ನು ಆಧುನೀಕರಣ ಮಾಡಬೇಕು, ಬೆರಳ ತುದಿಯಲ್ಲಿ ಎಲ್ಲ ಸೌಲಭ್ಯಗಳು ಸಿಗಬೇಕು ಎಂಬ ಉದ್ದೇಶದಿಂದ ಈಗಾಗಲೇ ಅನೇಕ ಸುಧಾರಣಾ ಕ್ರಮಗಳನ್ನು ಮಾಡಲಾಗುತ್ತಿದೆ. ಅದರ ಒಂದು ಭಾಗವಾಗಿ ಸಹ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು. ಈ ಸಂಬಂಧ ನಮ್ಮ ಗ್ರಾಮಾಧಿಕಾರಿಗಳು 19 ಲಕ್ಷ ರೈತರನ್ನು ಸಂಪರ್ಕಿಸಿದ್ದಾರೆ. ಅದರಲ್ಲಿ 6 ಲಕ್ಷ ಪಹಣಿಗಳಿಗೆ ಸಂಬಂಧಿಸಿದಂತೆ ಅದರ ಖಾತೆದಾರರು ಮೃತಪಟ್ಟಿದ್ದಾರೆ. ಹೀಗೆ ಮೃತಪಟ್ಟವರ ಹೆಸರಿನಲ್ಲಿ…

Read More

ಬೆಂಗಳೂರು: ಇಂದು ಕರಾರಸಾ ನಿಗಮದ ಕೇಂದ್ರ ಕಚೇರಿಯಲ್ಲಿ ರಾಮಲಿಂಗಾರೆಡ್ಡಿ, ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ, ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ ಪ್ರಾಶಸ್ತ್ಯ ನೀಡಲಾಗುತ್ತಿದೆ. ಮಹಿಳಾ ಸಮಾನತೆ , ಸಬಲೀಕರಣ ಎಂಬುದನ್ನು ನಮ್ಮಲ್ಲಿ ಅಕ್ಷರಶಃ ಕಾಣಬಹುದಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸಚಿವರು ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಗೌರಿ ನಾಯಕ್ ರವರ ಸಮಾಜಮುಖಿ ಸೇವೆಯನ್ನು ಪ್ರಶಂಸಿಸಿ, ಇದೇ ರೀತಿಯಲ್ಲಿ ಅವರು ಕಾರ್ಯವನ್ನು ಮುಂದುವರೆಸಲು ದೇವರು ಶಕ್ತಿ ಮತ್ತು ಆಯಸ್ಸನ್ನು ನೀಡುವಂತೆ ಹಾರೈಸಿದರು.  ಅಂಗನವಾಡಿ ಆವರಣದಲ್ಲಿ ಅವರು ತೆರೆದಿರುವ ಬಾವಿಗೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸುತ್ತಲು ಕಟ್ಟೆಯನ್ನು…

Read More