Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಶುಕ್ರವಾರ ಹೊಸ ತಲೆಮಾರಿನ ಆಕಾಶ್ (ಆಕಾಶ್-ಎನ್ಜಿ) ಕ್ಷಿಪಣಿಯ ಯಶಸ್ವಿ ಹಾರಾಟ ಪರೀಕ್ಷೆಯೊಂದಿಗೆ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಒಡಿಶಾದ ಚಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ನಿಂದ ಬೆಳಿಗ್ಗೆ 10: 30 ಕ್ಕೆ ನಡೆಸಿದ ಪರೀಕ್ಷೆಯು ಅತ್ಯಂತ ಕಡಿಮೆ ಎತ್ತರದಲ್ಲಿ ಹಾರುವ ಹೈಸ್ಪೀಡ್ ಮಾನವರಹಿತ ವೈಮಾನಿಕ ಗುರಿಯನ್ನು ಗುರಿಯಾಗಿಸಿಕೊಂಡಿದೆ. ಗಮನಾರ್ಹ ನಿಖರತೆಯನ್ನು ಪ್ರದರ್ಶಿಸಿದ ಶಸ್ತ್ರಾಸ್ತ್ರ ವ್ಯವಸ್ಥೆಯು ಹಾರಾಟ ಪರೀಕ್ಷೆಯ ಸಮಯದಲ್ಲಿ ಗುರಿಯನ್ನು ತಡೆದಿತು, ಇದು ಅದರ ಯಶಸ್ವಿ ನಾಶಕ್ಕೆ ಕಾರಣವಾಯಿತು. https://twitter.com/ANI/status/1745715739112460487 ಆಕಾಶ್-ಎನ್ಜಿ ಕ್ಷಿಪಣಿ ಬಗ್ಗೆ ತಿಳಿಯಿರಿ ಆಕಾಶ್-ಎನ್ಜಿ ಕ್ಷಿಪಣಿಯ ಯಶಸ್ವಿ ಪರೀಕ್ಷೆಯು ಭಾರತದ ದೇಶೀಯ ರಕ್ಷಣಾ ಸಾಮರ್ಥ್ಯಗಳನ್ನು ಹೆಚ್ಚಿಸುವಲ್ಲಿ ಡಿಆರ್ಡಿಒ ಮಾಡಿದ ನಿರಂತರ ಪ್ರಯತ್ನಗಳು ಮತ್ತು ಪ್ರಗತಿಯನ್ನು ಎತ್ತಿ ತೋರಿಸುತ್ತದೆ. ದೇಶೀಯವಾಗಿ ಅಭಿವೃದ್ಧಿಪಡಿಸಿದ ರೇಡಿಯೋ ಫ್ರೀಕ್ವೆನ್ಸಿ ಸೀಕರ್, ಲಾಂಚರ್, ಮಲ್ಟಿ-ಫಂಕ್ಷನ್ ರಾಡಾರ್ ಮತ್ತು ಕಮಾಂಡ್, ಕಂಟ್ರೋಲ್ ಮತ್ತು ಸಂವಹನ ವ್ಯವಸ್ಥೆಯೊಂದಿಗೆ ಕ್ಷಿಪಣಿಯನ್ನು ಒಳಗೊಂಡಿರುವ ಸಂಪೂರ್ಣ ಶಸ್ತ್ರಾಸ್ತ್ರ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಇದು ಮೌಲ್ಯೀಕರಿಸಿದೆ. ಈ ಸಾಧನೆಯು…
ಕೊಲ್ಲಾಪುರ: ಶಿವಸೇನೆ ಪುಂಡರ ಪುಂಡಾಟ ಮತ್ತೆ ಕರ್ನಾಟಕದ ಗಡಿ ಭಾಗವಾದಂತ ಬೆಳಗಾವಿಯಲ್ಲಿ ಮುಂದುವರೆದಿದೆ. ಕನ್ನಡ ಬೋರ್ಡ್ ಗಳನ್ನು ಕಿತ್ತು ಹಾಕಿ, ಬೆಂಕಿ ಹಚ್ಚಿ ಶಿವಸೇನೆ ಪುಂಡರು ಪುಂಡಾಟ ಮೆರೆದಿದ್ದಾರೆ. ಇದೇ ಸಂದರ್ಭದಲ್ಲಿ ಮುಂದಿನ ದಿನಗಳಲ್ಲಿ ಬೆಳಗಾವಿ ಮಹಾರಾಷ್ಟ್ರ ಸೇರಲಿದೆ. ಆಗ ಕನ್ನಡ ಬೋರ್ಡ್ ತೆಗೆದು ಹಾಕಿ ಮರಾಠಿ ಬೋರ್ಡ್ ಹಾಕೋದಾಗಿ ಶಿವಸೇನೆ ಮುಖಂಡ ಸಂಜಯ್ ಪರಾವ್ ಉದ್ಧಟತನದ ಹೇಳಿಕೆ ನೀಡಿದ್ದಾರೆ. ರಾಜ್ಯಾಧ್ಯಂತ ಕನ್ನಡ ನಾಮಫಲಕ ಕಡ್ಡಾಯಗೊಳಿಸಿದ ಕಾರಣ, ಬೆಳಗಾವಿಯಲ್ಲಿ ಮರಾಠಿ ಬೋರ್ಡ್ ತೆಗೆದು ಕನ್ನಡ ಬೋರ್ಡ್ ಗಳನ್ನು ಹಾಕುವಂತೆ ರಾಜ್ಯ ಸರ್ಕಾರ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಶೇ.60ರಷ್ಟು ಕನ್ನಡವಿರುವಂತ ಬೋರ್ಡ್ ಗಳನ್ನು ಬೆಳಗಾವಿಯಲ್ಲಿ ವಾಣಿಜ್ಯ ಮಳಿಗೆಗಳ ಮಾಲೀಕರು ಅಳವಡಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರ ಇಂತಹ ಕ್ರಮದ ವಿರುದ್ಧ ಸಿಡಿದೆದ್ದಿರುವಂತ ಶಿವಸೇನೆಯ ಉದ್ಧವ್ ಠಾಕ್ರೆ ಬಣವು, ಬೆಳಗಾವಿ ಗಡಿಯಾದಂತ ಕೊಲ್ಲಾಪುರದಲ್ಲಿ ಕನ್ನಡ ಬೋರ್ಡ್, ನಾಮಫಲಕವನ್ನು ಕಿತ್ತು ಹಾಕಿ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಿರೋದಾಗಿ ತಿಳಿದು ಬಂದಿದೆ. ಕನ್ನಡ ಬೋರ್ಡ್, ಫಲಕಗಳನ್ನು ಧ್ವಂಸಗೊಳಿಸಿರುವಂತ ಶಿವಸೇನೆಯ…
ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಸದಸ್ಯರಾದ ಸಂಜಯ್ ಸಿಂಗ್, ಸ್ವಾತಿ ಮಲಿವಾಲ್ ಮತ್ತು ಎನ್ಡಿ ಗುಪ್ತಾ ಎಲ್ಲಾ ರಾಜ್ಯಸಭಾ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಎಪಿ ಸಂಸದರಾದ ಸಿಂಗ್, ಎನ್ ಡಿ ಗುಪ್ತಾ ಮತ್ತು ಸುಶೀಲ್ ಕುಮಾರ್ ಗುಪ್ತಾ ಅವರ ಆರು ವರ್ಷಗಳ ಅವಧಿ ಜನವರಿ 27 ರಂದು ಕೊನೆಗೊಳ್ಳಲಿದೆ. ಎಎಪಿ ಸಿಂಗ್ ಮತ್ತು ಎನ್ ಡಿ ಗುಪ್ತಾ ಅವರನ್ನು ಎರಡನೇ ಅವಧಿಗೆ ಮರುನಾಮಕರಣ ಮಾಡಿದರೆ, ಸುಶೀಲ್ ಗುಪ್ತಾ ಅವರ ಸ್ಥಾನಕ್ಕೆ ದೆಹಲಿ ಮಹಿಳಾ ಆಯೋಗದ ಮಾಜಿ ಮುಖ್ಯಸ್ಥೆ ಮಲಿವಾಲ್ ಅವರನ್ನು ನಾಮನಿರ್ದೇಶನ ಮಾಡಿದೆ. ಬೇರೆ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸದ ಕಾರಣ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಫಲಿತಾಂಶಗಳನ್ನು ಔಪಚಾರಿಕವಾಗಿ ನಂತರ ಪ್ರಕಟಿಸಲಾಗುವುದು” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸಲು ಜನವರಿ 9 ಕೊನೆಯ ದಿನವಾಗಿದ್ದು, ಜನವರಿ 10 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜನವರಿ 12 ಕೊನೆಯ ದಿನವಾಗಿದೆ. https://kannadanewsnow.com/kannada/pm-modi-releases-11-day-special-message-on-ram-temple-consecration/ https://kannadanewsnow.com/kannada/ksrtc-bus-bike-collision-in-kalaburagi-two-riders-killed-on-the-spot/
ಬೆಂಗಳೂರು: ರಾಷ್ಟ್ರದಲ್ಲೇ ಪ್ರಪ್ರಥಮ ಬಾರಿಗೆ ಸಿಸಿಬಿ ಅಧಿಕಾರಿಗಳಿಂದ ಎನ್.ಡಿ.ಪಿ.ಎಸ್ ಕಾಯ್ದೆಯ ಅಧ್ಯಾಯ 5(ಎ) ಕಲಂ. 68(ಇ) & (ಎಫ್) ರಲ್ಲಿನ ಅಧಿಕಾರವನ್ನು ಚಲಾಯಿಸಿ ವಿದೇಶಿ ಡ್ರಗ್ ಪೆಡ್ಲರ್ನು ಅಕ್ರಮವಾಗಿ ಗಳಿಸಿದ್ದ ಕೆ 12 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸರಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2023ನೇ ಸಾಲಿನ ನವೆಂಬರ್ ತಿಂಗಳಲ್ಲಿ ಬೆಂಗಳೂರು ನಗರ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದರು. ಈತನು ರೂಢಿಗತ ವಿದೇಶಿ ಡಗ್ ಪೆಡ್ಲರ್ ಆಗಿರುತ್ತಾನೆ. ಈತನ ಬಳಿ ನಗದು ಹಣ ಮತ್ತು ವಿವಿಧ ಬ್ಯಾಂಕ್ಗಳ ಪಾಸ್ುಕ್, ಡೆಬಿಟ್ ಕಾರ್ಡ್ಗಳು ಇರುವ ಬಗ್ಗೆ ಮಾಹಿತಿಯನ್ನು ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಸಂಗ್ರಹಿಸಿದ್ದರು. ಈ ಕುರಿತು ಪ್ರಕರಣದ ತನಿಖೆಯನ್ನು ಮುಂದುವರಿಸಿರುತ್ತಾರೆ ಎಂದಿದ್ದಾರೆ. ತನಿಖಾ ಕಾಲದಲ್ಲಿ ಈ ವಿದೇಶಿ ಡಗ್ ಪೆಡ್ಲರ್ನ ಪತ್ನಿಯ ಎರಡು ಬ್ಯಾಂಕ್ ಖಾತೆಯಿಂದ ಕ 2,55,050/- ಎರಡು ಲಕ್ಷದ ಐವತ್ತೈದು ಸಾವಿರದ ಐವತ್ತು ರೂಪಾಯಿಗಳು) ಹಾಗೂ ಇತರೆ ಹೆಸರಿನಲ್ಲಿದ್ದ 05 ಬ್ಯಾಂಕ್…
ಬೆಂಗಳೂರು: ದಿನೇ ದಿನೇ ವಾಟ್ಸಾಪ್ ಬಳಕೆ ಹೆಚ್ಚುತ್ತಿದ್ದಂತೆ, ಅದರೊಟ್ಟಿಗೆ ಕ್ರೈಂಗಳು ಕೂಡ ಹೆಚ್ಚಾಗುತ್ತಿವೆ. ನೀವು ವಾಟ್ಸಾಪ್ ಬಳಕೆ ಮಾಡ್ತಿದ್ದರೇ, ಏನಾದ್ರೂ ಲೈಂಗಿಕ ವಂಚನೆ ಕೃತ್ಯ ಎಸಗಿದ್ರೇ ನಿಮ್ಮನ್ನು ಬಂಧಿಸೋದು ಗ್ಯಾರಂಟಿ. ಸೋ ಎಚ್ಚರಿಕೆ ವಹಿಸೋದು ಮರೆಯಬೇಡಿ. ಅದ್ಯಾಕೆ.? ಹೇಗೆ ಅಂತ ಮುಂದೆ ಸುದ್ದಿ ಓದಿ. ಬೆಂಗಳೂರು ನಗರ ಉತ್ತರ ವಿಭಾಗ, ಸಿ.ಇ.ಎನ್. ಕ್ರೈಂ ಪೊಲೀಸ್ ಠಾಣೆಗೆ ಪಿರಾದುದಾರರು ದಿನಾಂಕ: 01-11-2023 ರಂದು ಹಾಜರಾಗಿ ದೂರನ್ನು ನೀಡಿರುತ್ತಾರೆ. ದೂರಿನಲ್ಲಿ ಪಿರಾದುದಾರರು ಕೆನರಾ ಬ್ಯಾಂಕ್ ಖಾತೆಯನ್ನು ಹೊಂದಿದ್ದು, ಯಾರೋ ಅಪರಿಚಿತರು ಅನಿತಾ ಎಂಬ ಹುಡುಗಿ ಹೆಸರಿನಲ್ಲಿ ಒಂದು ಮೊಬೈಲ್ ನಂಬರಿನ ಮೂಲಕ ದೂರುದಾರರನ್ನು ಸಂಪರ್ಕಿಸಿರುತ್ತಾರೆ. ಈ ರೀತಿ ಒಂದು ತಿಂಗಳಿನಿಂದ ದೂರುದಾರರಿಗೆ ಕರೆ ಮಾಡಿ ಅನೈತಿಕ ಸಂಬಂಧದ ಸಂದೇಶವನ್ನು ಕಳುಹಿಸಿರುತ್ತಾರೆ. ನಂತರ ಅನೈತಿಕ ಸಂಬಂಧದಲ್ಲಿರುವ ಸಂದೇಶಗಳನ್ನು ವೈರಲ್ ಮಾಡುವುದಾಗಿ ದೂರುದಾರರಿಗೆ ಬೆದರಿಸಿ, ಹಂತ ಹಂತವಾಗಿ ಒಟ್ಟು 1,10,000/- ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾರೆಂದು ನೀಡಿದ ದೂರನ್ನು ಪಡೆದು ಐ.ಟಿ ಆಕ್ಟ್ ರೀತ್ಯ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದ…
ಬೆಂಗಳೂರು: ನಗರದಲ್ಲಿ ಗೃಹ ಬಳಕೆ ಸಿಲಿಂಡರ್ ಗಳನ್ನು ಅನಧಿಕೃತವಾಗಿ ದಾಸ್ತಾನು ಮಾಡಿಕೊಂಡು, ರೀ ಫಿಲ್ಲಿಂಗ್ ಮಾಡಿ ಮಾರಾಟ ಮಾಡುತ್ತಿದ್ದ ಅಂಗಡಿ, ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲದೇ ಬರೋಬ್ಬರಿ 33 ಲಕ್ಷ ಮೌಲ್ಯದ 290 ಸಿಲಿಂಡರ್ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಬೆಂಗಳೂರು ಸಿಟಿ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ನಗರದ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆ ಸರಹದ್ದಿನಲ್ಲಿರುವ ನಂ. 20. ಶ್ರೀ. ಮಂಜುನಾಥ ಎಂಟರ್ಪ್ರೈಸೆಸ್ ಅಂಗಡಿಯ ಮಾಲಿಕ, ಮತ್ತು ಬೆಳ್ಳಂದೂರು ಪೊಲೀಸ್ ಠಾಣಾ ಸರಹದ್ದಿನ ಅಣ್ಣಯ್ಯರೆಡ್ಡಿ ಲೇಔಟ್ನ ಮತ್ತೋರ್ವನ ಮನೆಯ ಹಿಂಭಾಗದಲ್ಲಿ ಗೃಹಬಳಕೆ ಸಿಲಿಂಡರ್ಗಳನ್ನು ಅನಧಿಕೃತವಾಗಿ ದಾಸ್ತಾನು ಮಾಡಿಕೊಂಡಿರುವ ಬಗ್ಗೆ ಸಿಸಿಬಿಯ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ಮಾಹಿತಿಯನ್ನು ಸಂಗ್ರಹಿಸಿ, ದಾಳಿ ನಡೆಸಿರುತ್ತಾರೆ ಎಂದು ತಿಳಿಸಿದೆ. ದಾಳಿಯ ಸಮಯದಲ್ಲಿ ಪರವಾನಗಿ ಇಲ್ಲದೆ ಜನವಾಸದ ಸ್ಥಳದಲ್ಲಿ ಯಾವುದೇ ಸುರಕ್ಷತಾ ನಿಯಮಗಳನ್ನು ಅನುಸರಿಸದೇ ರೀಫಿಲ್ಲಿಂಗ್ ಮಾಡುತ್ತಿರುತ್ತಾರೆ. ಈ ರೀತಿ ರೀಫಿಲ್ಲಿಂಗ್ ಮಾಡುವುದರಿಂದ, ಅಗ್ನಿ…
ಬೆಂಗಳೂರು: ನಗರದ ಟಿ-20 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ವೀಕ್ಷಣೆಯಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೆಚ್ಚಿನ ಸಾರಿಗೆ ಸೌಲಭ್ಯಗಳನ್ನು BMTC ಕಲ್ಪಿಸಿದೆ. ಈ ಮೂಲಕ ಬೆಂಗಳೂರಿನ ಟಿ20 ಪ್ರಿಯರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಬಗ್ಗೆ ಬಿಎಂಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ದಿನಾಂಕ 17.01.2024 ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟಿ-20 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಯ ವೀಕ್ಷಣೆಗೆ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಮೇಲ್ಕಂಡ ದಿನಾಂಕದಂದು ಬೆಂ.ಮ.ಸಾ.ಸಂಸ್ಥೆಯು ಹೆಚ್ಚುವರಿ ಸಾರಿಗೆ ಸೇವೆಗಳನ್ನು ಕಾರ್ಯಾಚರಿಸಲಿದ್ದು, ವಿವರ ಕೆಳಕಂಡಂತಿದೆ ಎಂದು ಹೇಳಿದೆ. ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ SBS-1K ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಕಾಡುಗೋಡಿ ಬಸ್ ನಿಲ್ದಾಣ ಹೆಚ್.ಎ.ಎಲ್ ರಸ್ತೆ SBS-13K ಕಾಡುಗೋಡಿ ಬಸ್ ನಿಲ್ದಾಣ ಹೂಡಿ ರಸ್ತೆ G-2 ಸರ್ಜಾಪುರ ಅಗರ, ದೊಮ್ಮಸಂದ್ರ…
ಬೆಂಗಳೂರು: ಸಹಕಾರ ಸಚಿವ ಕೆಎನ್ ರಾಜಣ್ಣ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರು ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ನಿನ್ನೆಯಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿಸಿಎಂ ವಿಚಾರವಾಗಿ ಯಾವುದೇ ಸಚಿವರು ಬಹಿರಂಗವಾಗಿ ಹೇಳಿಕೆ ನೀಡದಂತೆ ಖಡಕ್ ಸೂಚನೆ ನೀಡಿದ್ದರು. ಹೀಗಿದ್ದರೂ ಸಹಕಾರ ಸಚಿವ ಕೆಎನ್ ರಾಜಣ್ಣ ಮಾತ್ರ ಅಧ್ಯಕ್ಷರ ಸೂಚನೆಯ ನಂತ್ರವೂ ಡಿಸಿಎಂ ವಿಚಾರವಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ 10 ಕಾರ್ಯಕರ್ತರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರಿಗೆ ದೂರು ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ನೀಡಿರುವಂತ ದೂರಿನಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಎಐಸಿಸಿ ಅಧ್ಯಕ್ಷ ಹೇಳಿಕೆ ಬಳಿಕವೂ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ನೀಡುತ್ತಿದ್ದಾರೆ. ಪದೇ ಪದೇ ಸಚಿವ ರಾಜಣ್ಣ ಅಧ್ಯಕ್ಷರ ಆದೇಶದ ವಿರುದ್ಧವೇ ಮಾತನಾಡುತ್ತಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ.…
ಬೆಂಗಳೂರು: ರಾಷ್ಟ್ರೀಯ ಯುವದಿನದ ಸಂದರ್ಭದಲ್ಲಿಯೇ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ ಯುವನಿಧಿ ಯೋಜನೆಗೆ ಸಿಎಂ ಸಿದ್ಧರಾಮಯ್ಯ ಚಾಲನೆ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿಯೇ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಫೆಬ್ರವರಿಯಲ್ಲಿ ರಾಜ್ಯ ಸರ್ಕಾರದಿಂದಲೇ ಬೃಹತ್ ಉದ್ಯೋಗ ಮೇಳೆವನ್ನು ಆಯೋಜಿಸಲಿದೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು, ನಾವು ನುಡಿದಂತೆ ನಡೆಯುತ್ತಿದ್ದೇವೆ. ಬಿಜೆಪಿಯವರಿಗೆ ಇದಕ್ಕೆ ಹೊಟ್ಟೆ ಕಿಚ್ಚು ಬಂದಿದೆ. ಯುವನಿಧಿ ಯೋಜನೆ 100ಕ್ಕೆ 100ರಷ್ಟು ಅನುಷ್ಠಾನಗೊಳಿಸೋದಾಗಿ ತಿಳಿಸಿದರು. ಬಿಜೆಪಿ ಅಧಿಕಾರದಲ್ಲಿದ್ದಾಗ ಬರೀ ಅಕ್ರಮ, ಭ್ರಷ್ಟಾಚಾರದಲ್ಲಿ ಮುಳಿಗಿತ್ತು. ನಿರುದ್ಯೋಗ ದೇಶದ ಬಹುದೊಡ್ಡ ಸಮಸ್ಯೆಯಾಗಿದೆ. ಇಂತಹ ನಿರುದ್ಯೋಗ ನಿವಾರಿಸೋದಕ್ಕೆ ಮೋದಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ರೇ ನಿರುದ್ಯೋಗ ನಿವಾರಣೆಗೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ ಎಂದರು. ಈಗ ಯುವನಿಧಿ ಯೋಜನೆ ಜಾರಿಗೊಳಿಸುತ್ತಿದ್ದೇವೆ. ಆ ನಂತ್ರ ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸಿಕೊಡೋ ನಿಟ್ಟಿನಲ್ಲಿ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದಿಂದಲೇ ಬೃಹತ್ ಉದ್ಯೋಗ ಮೇಳ ನಡೆಸೋದಾಗಿ ತಿಳಿಸಿದರು. https://kannadanewsnow.com/kannada/pm-modi-releases-11-day-special-message-on-ram-temple-consecration/…
ಬೆಂಗಳೂರು: ಕೆಳ ದಿನಗಳ ಹಿಂದಷ್ಟೇ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿತ್ತು. ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದಾಗಿ ತಿಳಿದು ಬಂದಿತ್ತು. ಇಂತಹ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿ ತನಿಖೆಗೆ ವಹಿಸಿ ಆದೇಶಿಸಿದೆ. ಜನವರಿ.6ರಂದು ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂದೇಶ ಕಳುಹಿಸಿದ ಕಿಡಿಗೇಡಿಗಳ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಇಮೇಲ್ ಬೆದರಿಕೆ ಸಂದೇಶ ಕಳಿಸಿದ್ದ ಕಿಡಿಗೇಡಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದರು. ಈ ಪ್ರಕಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದರು. ಇಂತಹ ಹುಸಿ ಬಾಂಬ್ ಬೆದರಿಕೆ ಪ್ರಕರಣವನ್ನು ಈಗ ರಾಜ್ಯ ಸರ್ಕಾರ ಸಿಸಿಬಿ ತನಿಖೆಗೆ ವಹಿಸಿ ಆದೇಶಿಸಿದೆ. ಏನಿದಿ ಪ್ರಕರಣ ಜನವರಿ.6ರಂದು ಬೆಂಗಳೂರು ನಗರದಲ್ಲಿರುವಂತ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಈ ಮೂಲಕ ಮತ್ತೊಮ್ಮೆ ರಾಜ್ಯ ರಾಜಧಾನಿ…