Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿಗಳೇ ನೇಮಿಸುವ ಐಎಎಸ್ ಅಧಿಕಾರಿಯಾದ ಕಾರ್ಯದರ್ಶಿ ಹಾಗೂ ಪರೀಕ್ಷಾ ನಿಯಂತ್ರಣಾಧಿಕಾರಿ ಕೆಪಿಎಸ್ಸಿ ಪರೀಕ್ಷೆಗಳನ್ನು ನಿಭಾಯಿಸುತ್ತಾರೆ. ಆದ್ದರಿಂದ ಕೆಪಿಎಸ್ಸಿ ಪರೀಕ್ಷಾ ವೈಫಲ್ಯದ ಜವಾಬ್ದಾರಿಯನ್ನು ಸ್ವತಃ ಮುಖ್ಯಮಂತ್ರಿಗಳೇ ಹೊರಬೇಕಾಗುತ್ತದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಎಸ್ಸಿ ವ್ಯವಸ್ಥೆಯನ್ನು ಸರಿ ಮಾಡುವ ದೃಷ್ಟಿಯಿಂದ ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸಬೇಕು. ಪರೀಕ್ಷಾ ಅಕ್ರಮ ದೊಡ್ಡ ಪ್ರಮಾಣದಲ್ಲಿದೆ. ಅದನ್ನು ತಡೆಯಲು ಸಾಕಷ್ಟು ಕಠಿಣ ಕಾನೂನುಗಳನ್ನು ರೂಪಿಸುವ ಕೆಲಸವನ್ನು ಹಿಂದಿನ ಸರಕಾರ ಮಾಡಿದೆ ಎಂದರು. ಕರ್ನಾಟಕದಲ್ಲಿ ಈಗ ತನಿಖೆ ಎಂದರೆ ಪ್ರಹಸನ ಎಂಬಂತಾಗಿದೆ. ಮಾತೆತ್ತಿದರೆ ಎಸ್‍ಐಟಿ, ಸಿಐಡಿ ಎನ್ನುತ್ತಿದ್ದಾರೆ. ಸ್ವತಂತ್ರ ನ್ಯಾಯಾಂಗದ ಸುಪರ್ದಿಯಲ್ಲಿ ತನಿಖೆ ನಡೆಯಬೇಕು ಎಂದು ಪ್ರಶ್ನೆಗೆ ಉತ್ತರ ನೀಡಿದರು. ಕಾನೂನಿನ ಭಯವೇ ಇರದ ವ್ಯಕ್ತಿಗಳು ನಿರ್ಮಾಣವಾಗಿದ್ದಾರೆ. ಕೆಪಿಎಸ್ಸಿಗೆ ಕಾಯಕಲ್ಪ ಕೊಡಲು ಸಮಗ್ರ ತೀರ್ಮಾನ ಕೈಗೊಳ್ಳುವ ಕಾಲ ಈಗ ಬಂದಿದೆ ಎಂದು ಪ್ರಶ್ನೆಗೆ ಉತ್ತರ…

Read More

ಬೆಂಗಳೂರು ನಗರ ಜಿಲ್ಲೆ: ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ಇಲ್ಲಿ ಜನವರಿ 04 ರಂದು “ಅಣಬೆ ಬೇಸಾಯ” (Production Technology of Mushroom) ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ನಗರವಾಸಿಗಳಿಗೆ, ರೈತರಿಗೆ, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವವರು ರೂ. 250/- ಗಳನ್ನು ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ರವರ ಕಚೇರಿಯಲ್ಲಿ ತರಬೇತಿಯ ದಿನದಂದು ಪಾವತಿಸಿ ನೊಂದಣಿಯನ್ನು ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9449833153, 9066764248, 7892618755 ಅಥವಾ ಇ-ಮೇಲ್ sadh.co23@gmail.com, jaivikakendra.hulimavu@gmail.com ಮೂಲಕ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/isro-to-launch-us-satellite-to-enable-voice-calls-via-smartphones-from-space/ https://kannadanewsnow.com/kannada/breaking-big-shock-to-bengaluru-people-water-tariff-hike-almost-fixed-tariff-likely-to-go-up-in-january-2-week/

Read More

ಬೆಂಗಳೂರು: ವಿಷಯಾಧಾರಿತ ಹೋರಾಟ ನಡೆಸದೇ ಮತ್ತೆ ಮತ್ತೆ ಕೋಮು ರಾಜಕೀಯ, ಶವ ರಾಜಕೀಯ ಮಾಡುತ್ತಿದ್ದರೆ ಜನ ನಿಮ್ಮನ್ನು ಮತ್ತೊಮ್ಮೆ ತಿರಸ್ಕರಿಸುವುದು ನಿಶ್ಚಿತ ಎಂಬುದಾಗಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಚಿವ ಸಂಪುಟದ ಸದಸ್ಯರಾದ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಯನ್ನು ಕೇಳುತ್ತಿರುವ ಬಜೆಪಿಗರು ಎಂದಿನಂತೆ ಆಡಳಿತ ಪಕ್ಷದ ಮೇಲೆ ದ್ವೇಷಕ್ಕಾಗಿಯೇ ದ್ವೇಷ ಎಂಬ ತಮ್ಮ ಅನೀತಿಯನ್ನು ಮುಂದುವರೆಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದಿದ್ದಾರೆ. ವಿಷಯಾಧಾರಿತವಾಗಿ ಮಾತನಾಡುವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಹಿಂದಿನಿಂದಲೂ ದೊಡ್ಡ ಮಟ್ಟದ ಅಸಹನೆಯನ್ನು ಹೊಂದಿರುವ ಬಿಜೆಪಿಗರು ಇದೀಗ ಬಿಜೆಪಿ ಪಕ್ಷದವರೊಂದಿಗೆ ನಂಟನ್ನು ಇಟ್ಟುಕೊಂಡಿರುವ ಸಚಿನ್ ಎಂಬ ವ್ಯಕ್ತಿಯ ಸಾವನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಕಿಡಿಕಾರಿದ್ದಾರೆ. ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೂ ಕೂಡಾ ವಿಷತಾಧಾರಿತವಾಗಿ ರಾಜಕೀಯ ಮಾಡಲು ಬಾರದೇ ಕೇವಲ ಶವ ರಾಜಕೀಯದ ಮೂಲಕವೇ ನಮ್ಮ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುವ ಕೆಟ್ಟ ಕೆಲಸ ಮಾಡಿದ್ದ ಬಿಜೆಪಿಗರು ಸಿಬಿಐ ತನಿಖೆಯ…

Read More

ಶಿವಮೊಗ್ಗ: ಬೈಕ್ ಅಪಘಾತದಲ್ಲಿ ಮೃತಪಟ್ಟಂತ ಪತಿಯ ಸಾವಿನ ಸುದ್ದಿ ಕೇಳಿದಂತ ಪತ್ನಿಯೂ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವಂತ ಘಟನೆ ಶಿವಮೊಗ್ಗದ ಕಿಲ್ಲೆ ಕ್ಯಾತರ ಕ್ಯಾಂಪ್ ನಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದಂತ ಇಬ್ಬರು ಸಾವಿನಲ್ಲೂ ಒಂದಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬೆಸಿಗೆ ಗ್ರಾಮ ಪಂಚಾಯ್ತಿಯ ಕಿಲ್ಲೆ ಕ್ಯಾತರ ಕ್ಯಾಂಪ್ ನ ಮಂಜುನಾಥ್(25) ಅವರು ಶಿಕಾರಿಪುರದ ಬಳಿಯಲ್ಲಿ ಬೈಕ್ ಅಪಘಾತದಲ್ಲಿ ಬುಧವಾರ ಗಾಯಗೊಂಡಿದ್ದರು. ಆದರೇ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಪತಿ ಮಂಜುನಾಥ್ ಬೈಕ್ ಅಪಘಾತದಲ್ಲಿ ಮೃತಪಟ್ಟ ಸುದ್ದಿ ಕೇಳಿದಂತ ಪತ್ನಿ ಅಮೃತ(21) ಮನೆಗೆ ಬಂದು ತನ್ನ ವೇಲಿನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರ ಸಾವಿನ ಸುದ್ದಿಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. https://kannadanewsnow.com/kannada/two-cooks-injured-as-cooker-explodes-while-preparing-mid-day-meals-for-children/ https://kannadanewsnow.com/kannada/rajasthan-3-year-old-girl-falls-into-150-feet-deep-borewell-rescued/

Read More

ತುಮಕೂರು: ಮಧ್ಯಾಹ್ನದ ಬಿಸಿಯೂಟಕ್ಕಾಗಿ ಶಾಲಾ ಮಕ್ಕಳಿಗೆ ಊಟ ತಯಾರಿಸುತ್ತಿದ್ದಂತ ಸಂದರ್ಭದಲ್ಲೇ ಗ್ಯಾಸ್ ಮೇಲೆ ಇರಿಸಿದ್ದಂತ ಕುಕ್ಕರ್ ಸ್ಪೋಟಗೊಂಡು ಓರ್ವ ಅಡುಗೆ ಸಹಾಯಕಿ ಗಂಭೀರವಾಗಿ ಗಾಯಗೊಂಡು, ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಪುರವರದಲ್ಲಿರುವಂತ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂದು ಮಧ್ಯಾಹ್ನ ಬಿಸಿಯೂಟ ತಯಾರಿಸುತ್ತಿದ್ದಂತ ಸಂದರ್ಭದಲ್ಲೇ ಕುಕ್ಕರ್ ಸ್ಪೋಟಗೊಂಡಿದೆ. ಈ ಘಟನೆಯಲ್ಲಿ ಅಡುಗೆ ಸಹಾಯಕಿ ಉಮಾದೇವಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಬ್ಬ ಅಡುಗೆ ಸಹಾಯಕಿ ಜಯ್ಯಮ್ಮ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡಿರುವಂತ ಅಡುಗೆ ಸಹಾಯಕಿ ಉಮಾದೇವಿಯನ್ನು ಮಧುಗಿರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗುಣಮಟ್ಟದ ಕುಕ್ಕರ್ ನೀಡದೇ ಇರುವುದೇ ಘಟನೆ ಕಾರಣ ಎಂಬುದಾಗಿ ಆರೋಪಿಸಲಾಗಿದೆ. https://kannadanewsnow.com/kannada/new-years-eve-mother-two-children-die-after-falling-into-farm-pond/ https://kannadanewsnow.com/kannada/rajasthan-3-year-old-girl-falls-into-150-feet-deep-borewell-rescued/

Read More

ವಿಜಯಪುರ: ಜಿಲ್ಲೆಯಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಧಾರುಣವಾಗಿ ಹೊಸ ವರ್ಷದಂದೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಹರನಾಳ ಬಳಿಯಲ್ಲಿ ಈ ಧಾರುಣ ಘಟನೆ ನಡೆದಿದೆ. ಜಮೀನಿಗೆ ತೆರಳಿದ್ದಂತ ಗೀತಾ ಬಂಡಿ ಹಾಗೂ ಗಂಡು ಮಕ್ಕಳಾದಂತ ಶ್ರವಣ್, ಶರಣ್ ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಗಂಡನ ಜೊತೆಗೆ ಜಗಳವಾಡಿ ಮನೆ ಬಿಟ್ಟು ಗೀತಾ ಬಂದಿದ್ದರು. ಇಂದು ಕೃಷಿ ಹೊಂಡದ ಬಳಿಯಲ್ಲಿ ತೆರಳಿದ್ದಾಗ ಕಾಲು ಜಾರಿ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಈ ದುರಂತ ನಡೆದಿದೆ ಎನ್ನಲಾಗುತ್ತಿದೆ. ಮೃತ ಗೀತಾ ತಂದೆ ರಾಮಪ್ಪ ನಾಯ್ಕಡಿ ಎಂಬುವರಿಗೆ ಸೇರಿದಂತೆ ಕೃಷಿ ಹೊಂಡದಲ್ಲಿ ಈ ಧಾರುಣ ಘಟನೆ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ದೇವರಹಿಬ್ಬರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/percent-sale-of-kannada-books-at-50-discount/ https://kannadanewsnow.com/kannada/rajasthan-3-year-old-girl-falls-into-150-feet-deep-borewell-rescued/

Read More

ನವದೆಹಲಿ: ರಾಜಸ್ಥಾನದ ಕೋಟ್ಪುಟ್ಲಿಯಲ್ಲಿ 10 ದಿನಗಳ ಹಿಂದೆ 150 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕಿಯನ್ನು ಕೊನೆಗೂ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಚೇತನಾ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ನಂತರ ಅಧಿಕಾರಿಗಳು ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದರು. ಡಿಸೆಂಬರ್ 23 ರಂದು ರಾಜಸ್ಥಾನದ ಕೋಟ್ಪುಟ್ಲಿ-ಬೆಹ್ರೋರ್ ಜಿಲ್ಲೆಯ ಸರುಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಿಯಾಲಿ ಧಾನಿಯಲ್ಲಿರುವ ತನ್ನ ತಂದೆಯ ಕೃಷಿ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಚೇತನಾ ಕೊಳವೆಬಾವಿಗೆ ಬಿದ್ದಿದ್ದಳು. ಅವಳನ್ನು ಹೊರತೆಗೆಯಲು ಉಂಗುರವನ್ನು ಬಳಸಿದ ಆರಂಭಿಕ ರಕ್ಷಣಾ ಪ್ರಯತ್ನಗಳು ವಿಫಲವಾದವು. ಎರಡು ದಿನಗಳ ವಿಫಲ ಪ್ರಯತ್ನಗಳ ನಂತರ, ಬುಧವಾರ ಬೆಳಿಗ್ಗೆ ಪೈಲಿಂಗ್ ಯಂತ್ರವನ್ನು ತರಲಾಯಿತು ಮತ್ತು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ಸಮಾನಾಂತರ ಗುಂಡಿಯನ್ನು ಅಗೆಯಲಾಯಿತು. ರಕ್ಷಣಾ ಕಾರ್ಯಾಚರಣೆ ನಡೆದಿದ್ದೇಗೆ.? ರಾಜ್ಯದ ಸುದೀರ್ಘ ರಕ್ಷಣಾ ಕಾರ್ಯಾಚರಣೆಗಳಲ್ಲಿ ಒಂದಾದ ಈ ಕಾರ್ಯಾಚರಣೆಯಲ್ಲಿ, ಅಧಿಕಾರಿಗಳು 160 ಗಂಟೆಗಳಿಗೂ ಹೆಚ್ಚು ಕಾಲ ಹಗಲು ರಾತ್ರಿ ಕೆಲಸ…

Read More

ಧಾರವಾಡ : ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2025 ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50 ರಷ್ಟು ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ದೂರವಾಣಿ ಸಂಖ್ಯೆ: 080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್ https://kpp.karnataka.gov.in (ಆನ್‍ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ. 50 ರಷ್ಟು ರಿಯಾಯಿತಿ ಲಭ್ಯವಿರುತ್ತದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಇಲ್ಲಿಯವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ,…

Read More

ಧಾರವಾಡ : 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಸಂಸ್ಥೆ, ಟ್ರಸ್ಟ್, ಕಂಪನಿ, ಸರ್ಕಾರೇತರ ಸಂಸ್ಥೆಗಳು ಸೇರಿದಂತೆ ಇತರ ಆಸ್ತಕರು ನಿಗಧಿತ ಅರ್ಜಿ ನಮೂನೆಗಳಲ್ಲಿ ಏಪ್ರೀಲ್ 30, 2025 ರೊಳಗಾಗಿ https://pue.karnataka.gov.in/ ವೆಬ್ ಸೈಟ್ ಮೂಲಕ ನೋಂದಾಯಿಸಿಕೊಳ್ಳಬೇಕು. ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ಇದ್ದಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಮಂಜೂರಾತಿಯನ್ನು ನೀಡಲಾಗುವುದು. ಮೇ 1, 2025 ರ ನಂತರ ಸಲ್ಲಿಸಿದ ಪ್ರಸ್ತಾವನೆಗಳನ್ನು 2025-26 ನೇ ಶೈಕ್ಷಣಿಕ ಸಾಲಿಗೆ ಮಂಜೂರಾತಿಯನ್ನು ನೀಡಲಾಗುವುದಿಲ್ಲಾ. ಇಂತಹ ಪ್ರಸ್ತಾವನೆಗಳನ್ನು ಪರಿಶೀಲಿಸಿ ನಿಯಾಮಾನುಸಾರ ಇದ್ದಲ್ಲಿ 2026-27 ನೇ ಶೈಕ್ಷಣಿಕ ಸಾಲಿಗೆ ಪರಿಗಣಿಸಲಾಗುವುದು. https://dpue-pragathi.karnataka.gov.in/newcollege2025 ಲಿಂಕ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಆನ್ ಲೈನ್ ಅರ್ಜಿ ಸಲ್ಲಿಸಿದ ನಂತರ ಒಂದು ಪ್ರತಿಯನ್ನು ಆರ್. ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣ ಎದುರು, ಕಾಲೇಜು ರಸ್ತೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕೆಂದು…

Read More

ನವದೆಹಲಿ: ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್ ಶಾ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಇಂದು ನವದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿಯಾಗಿ ಶುಭಾಶಯ ಕೋರಿ, ಆಶೀರ್ವಾದ ಪಡೆದರು. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕರ್ನಾಟಕದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಳೆದ ವರ್ಷದಿಂದೀಚೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಕಾಂಗ್ರೆಸ್ ಆಡಳಿತದ ಪರಿಣಾಮವಾಗಿ ಪ್ರಸ್ತುತ ರಾಜ್ಯದಲ್ಲಿ ಉದ್ಭವಿಸಿರುವ ಅನೇಕ ಸಮಸ್ಯೆಗಳು, ಕಾಂಗ್ರೆಸ್ ಸರ್ಕಾರದ ಸಚಿವರುಗಳ ವಿರುದ್ಧದ ಆರೋಪಗಳ ಕುರಿತು ಹಾಗೂ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲ ವೃದ್ಧಿಗೊಳಿಸಲು ಯೋಜಿಸಿರುವ ಕಾರ್ಯಕ್ರಮಗಳ ಕುರಿತು ವಿವರಿಸಿ ಸೂಕ್ತ ಮಾರ್ಗದರ್ಶನವನ್ನು ಕೋರಲಾಯಿತು ಎಂದಿದ್ದಾರೆ. ದೇಶ ಸುಭದ್ರತೆಗಾಗಿ ಪ್ರಧಾನಿಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಐತಿಹಾಸಿಕ ಹೆಜ್ಜೆಗಳನ್ನಿಡುತ್ತಿರುವ ಮಾನ್ಯ ಅಮಿತ್ ಶಾ ಜೀ ಯವರು ಪಕ್ಷ ಸಂಘಟನೆಗಾಗಿಯೂ ಅಷ್ಟೇ ಬದ್ಧತೆ ಹಾಗೂ ಕಾಳಜಿ ವಹಿಸುವುದು ಪ್ರತಿಯೊಬ್ಬ…

Read More