Author: kannadanewsnow09

ಬೆಂಗಳೂರು: ವಯನಾಡು ಭೂ ಕುಸಿತ ದುರಂತದಲ್ಲಿ ಸಂತ್ರಸ್ತರಾದಂತ ಜನರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರು ಮನ ಮಿಡಿದಿದ್ದಾರೆ. ಬರೋಬ್ಬರಿ 9 ಅಗತ್ಯ ಪರಿಹಾರದ ಸಾಮಗ್ರಿಗಳ ಟ್ರಕ್ ಗಳ ಮೂಲಕ ರವಾನಿಸುತ್ತಿದ್ದಾರೆ. ಈ 9 ಪರಿಹಾರದ ಸಾಮಗ್ರಿಗಳನ್ನು ಹೊತ್ತು ತೆರಳುವಂತ ಟ್ರಕ್ ಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು. ಬಿಟಿಎಂ ಮತ್ತು ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ವಯನಾಡು ಮತ್ತು ಶಿರೂರು ಸಂಭವಿಸಿದ ಭೂಕುಸಿತದ ದುರಂತಕ್ಕೆ ಸ್ಪಂದಿಸಲು ಪರಿಹಾರ ಸಾಮಾಗ್ರಿಗಳ 9 ಟ್ರಕ್ ಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಚಾಲನೆ ನೀಡಿದರು. ಈ ವೇಳೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು. ವಯನಾಡು ಭೂಕುಸಿತ ಸ್ಥಳಕ್ಕೆ ಸ್ವತಃ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಪಯಣ, ಪರಿಹಾರ ಸಾಮಗ್ರಿ ವಿತರಣೆ ಇನ್ನೂ ಟ್ರಕ್ ಗಳೊಂದಿಗೆ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಮತ್ತು ಬಿಬಿಎಂಪಿ ಮಾಜಿ ಮಹಾಪೌರರಾದಂತ ಮಂಜುನಾಥ್ ರೆಡ್ಡಿ ಮತ್ತು ಮಾಜಿ ಕಾರ್ಪೊರೇಟರ್ ನಾಗರಾಜು, ಮಂಜುನಾಥ್‌…

Read More

ಮದ್ದೂರು:  ಕುಮಾರಸ್ವಾಮಿ ಬ್ಲಾಕ್ ಮೇಲ್ ರಾಜಕಾರಣಿ. ಪಾದಯಾತ್ರೆಗೆ ಜೆಡಿಎಸ್ ಬರುವುದಿಲ್ಲ ಎಂದು ಬಿಜೆಪಿಗೆ ಬೆದರಿಸಿದರು. ನಂತರ ಜೊತೆಯಲ್ಲಿ ಹೋದರು. ನನ್ನ ಮೇಲೆ ಆರೋಪ ಮಾಡುತ್ತಿರುವ ಅವರಿಗೆ ಧನ್ಯವಾದಗಳು” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.. ವಾಲ್ಮೀಕಿ ನಿಗಮದ ಹಗರಣವನ್ನು ಹೈಕಮಾಂಡಿಗೆ ಕಳುಹಿಸಲಾಗಿದೆ ಎನ್ನುವ ವಿಜಯೇಂದ್ರ ಅವರ ಆರೋಪದ ಬಗ್ಗೆ ಕೇಳಿದಾಗ “ಅವರ ತಂದೆ ರಾಜಿನಾಮೆಗೆ ಕಾರಣನಾದ ವ್ಯಕ್ತಿ ಆತ. ಮೊದಲ ಬಾರಿಗೆ ಶಾಸಕರಾಗಿ, ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದಾರೆ. ಅದನ್ನು ಖುಷಿಯಾಗಿ ಅನುಭವಿಸಲಿ” ಎಂದರು. ಜನಾಂದೋಲನ ಯಾತ್ರೆಯನ್ನು ಬಿಜೆಪಿ ಪಶ್ಚತ್ತಾಪ ಯಾತ್ರೆ ಎಂದು ಕರೆದಿದ್ದಾರೆ ಎನ್ನುವ ಬಗ್ಗೆ ಕೇಳಿದಾಗ “ಅವರದ್ದು ನಿಜವಾದ ಪಶ್ಚತ್ತಾಪ ಯಾತ್ರೆ. ಕರ್ನಾಟಕದ ಹೆಸರು ಹಾಳು ಮಾಡಿದರು. ಭ್ರಷ್ಟರಾಜ್ಯವೆಂದು ಕೆಟ್ಟ ಹೆಸರು ತಂದರು. ನಾವೀಗ ಅದನ್ನು ಶುದ್ದೀಕರಣ ಮಾಡುತ್ತಿದ್ದೇವೆ” ಎಂದು ಹೇಳಿದರು. ರಾಜ್ಯಪಾಲರ ತೀರ್ಮಾನ ಹಾಗೂ ಅವರ ಮುಂದಿನ ನಡೆ ಬಗ್ಗೆ ಕೇಳಿದಾಗ “ನೆಲದ ಕಾನೂನಿಗೆ ರಾಜ್ಯಪಾಲರು ಗೌರವ ನೀಡುತ್ತಾರೆ ಎಂದು ಭಾವಿಸಿರುವೆ. ಸಿಎಂ ಅವರಿಗೆ ನೋಟಿಸ್ ನೀಡುವ ಕೆಲಸಕ್ಕೆ ಕೈ…

Read More

ಬೆಂಗಳೂರು/ ಮದ್ದೂರು : “ಆಸ್ತಿ ವಿಚಾರವಾಗಿ ಚರ್ಚೆ ನಡೆಸಲು ಕುಮಾರಸ್ವಾಮಿ ಶುಭ ಘಳಿಗೆ ಹುಡುಕಿ ತಡ ಮಾಡದೆ ಶುಭ ಮುಹೂರ್ತ ನಿಗದಿ ಮಾಡಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಮದ್ದೂರಿನಲ್ಲಿ ನಡೆದ ಜನಾಂದೋಲನ ಸಭೆಯ ನಂತರ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಉತ್ತರಿಸಿದ ಅವರು “ಕಳೆದ 20 ವರ್ಷಗಳಿಂದ ನನ್ನ ಮೇಲೆ ಕುತಂತ್ರ ಮಾಡುತ್ತಲೇ ಇದ್ದಾರೆ. ಇಡಿ, ಸಿಬಿಐ ಸೇರಿದಂತೆ ಎಲ್ಲಾ ತನಿಖಾ ಸಂಸ್ಥೆಗಳು ನನ್ನ ಜಾಲಾಡುತ್ತಿವೆ. ಇವರೂ ಅದನ್ನೇ ತೆಗೆದುಕೊಂಡು ಮಾತನಾಡುತ್ತಿದ್ದಾರೆ, ಮಾತನಾಡಲಿ. ನಾನು ತೆರೆದ ಪುಸ್ತಕ” ಎಂದರು. “ಕುಮಾರಸ್ವಾಮಿ ಅವರ ಸವಾಲನ್ನು ಸ್ವೀಕರಿಸಿ ವಿಧಾನಸಭೆ ಅಥವಾ ಚಾಮುಂಡಿ ಬೆಟ್ಟ ಎಲ್ಲಿಗೆ ಬರುವಿರಾ ಎಂದು ಕೇಳಿದಾಗ “ವಿಧಾಸಭೆಗೆ ಬರಲಿ. ಆದರೆ ಅವರು ಅಲ್ಲಿಗೆ ಬರಲು ಆಗುವುದಿಲ್ಲ. ಅವರ ಬದಲು ಅಣ್ಣನನ್ನು ಕಳುಹಿಸಲಿ. ಎಲ್ಲಾ ಮಾಧ್ಯಮಗಳು ಬರಲಿ” ಎಂದು ಮರು ಸವಾಲು ಹಾಕಿದರು. ಮೈಸೂರು ಚಲೋ ಪಾದಯಾತ್ರೆ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಎನ್ನುವಂತೆ ಆಗಿದೆ ಎಂದು ಕೇಳಿದಾಗ “ನನಗೆ ಈ ಪಾದಯಾತ್ರೆಯ…

Read More

ಬೆಂಗಳೂರು: ಕೆಪಿಎಸ್ಸಿಯಿಂದ ಆಗಸ್ಟ್.25ರಂದು ಕೆಎಎಸ್ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನು ನಡೆಸುವುದಾಗಿ ನಿಗದಿ ಪಡಿಸಲಾಗಿತ್ತು. ಈ ಪರೀಕ್ಷಾ ದಿನಾಂಕವನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲ್ಲ ಅಂತನೂ ಕೆಪಿಎಸ್ಸಿ ಕಾರ್ಯದರ್ಶಿ ಸ್ಪಷ್ಟ ಪಡಿಸಿದ್ದರು. ಇದರ ನಡುವೆಯೂ ಆಗಸ್ಟ್.25ರಂದು ನಡೆಯಬೇಕಿದ್ದಂತ KAS ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತಂತೆ KPSCಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ದಿನಾಂಕ 25-08-2024ರಂದು  2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ನಿಗದಿ ಪಡಿಸಲಾಗಿತ್ತು. ಆದರೇ ಅಂದೇ ಬೇರೆ ಪರೀಕ್ಷೆಗಳು ನಿಗದಿಯಾಗಿದ್ದರಿಂದ ಪರೀಕ್ಷೆ ಮುಂದೂಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು ಎಂದಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಆಗಸ್ಟ್.25, 2024ರಂದು ನಡೆಸಲು ನಿಗದಿ ಪಡಿಸಿದ್ದಂತ ಕೆಎಎಸ್ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಆಗಸ್ಟ್.25ರ ಬದಲಾಗಿ ಆಗಸ್ಟ್.27ರ ಮಂಗಳವಾರದಂದು ನಡೆಸಲು ಮರು ನಿಗದಿ ಪಡಿಸಲಾಗಿದೆ ಎಂಬುದಾಗಿ ಸ್ಪಷ್ಟ ಪಡಿಸಿದೆ. https://kannadanewsnow.com/kannada/69-acres-of-forest-encroachments-cleared-in-western-ghats-following-ministers-order/ https://kannadanewsnow.com/kannada/belagavi-two-electrocuted-while-cleaning-temple/

Read More

ಬೆಳಗಾವಿ: ಜಿಲ್ಲೆಯಲ್ಲಿ ದೇವಸ್ಥಾನವೊಂದನ್ನು ಸ್ವಚ್ಛಗೊಳಿಸುತ್ತಿದ್ದಂತ ಸಂದರ್ಭದಲ್ಲಿ, ವಿದ್ಯುತ್ ಸ್ಪರ್ಶಿಸಿ ಇಬ್ಬರು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಬೆಳಗಾವಿ ತಾಲ್ಲೂಕಿನ ಸುಳೇಬಾವಿ ಗ್ರಾಮದಲ್ಲಿರುವಂತ ವಾಲ್ಮೀಕಿ ದೇವಸ್ಥಾನವನ್ನು ಸ್ವಚ್ಛಗೊಳಿಸುತ್ತಿದ್ದಂತ ವೇಳೆಯಲ್ಲಿ ವಿದ್ಯುತ್ ಸ್ಪರ್ಶಿಸಿದೆ. ಈ ದುರ್ಘಟನೆಯಲ್ಲಿ ಕಲಾವತಿ ಬೀರವಾಡಿ(37) ಹಾಗೂ ಸವಿತಾ ಒಂಟಿ(36) ಎಂಬುವರು ಧಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನೂ ಮೃತ ಕಲಾವತಿ ಬೀರವಾಡಿ ಅವರ ಪತಿ ಮಾರುತಿ ಬೀರವಾಡಿ ಅವರು ಗಂಭೀರವಾಗಿ ವಿದ್ಯುತ್ ಸ್ಪರ್ಶದಿಂದ ಗಾಯಗೊಂಡಿದ್ದಾರೆ. ಅವರನ್ನು ಬೆಳಗಾವಿಯ ವೈದ್ಯಕೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅಂದಹಾಗೇ ವಾಲ್ಮೀಕಿ ದೇವಸ್ಥಾನ ಸ್ವಚ್ಛಗೊಳಿಸಿ, ಶೆಟರ್ ಎಳೆಯುವಾಗ ವಿದ್ಯುತ್ ಸ್ಪರ್ಶಿಸಿ ಈ ದುರಂತ ಸಂಭವಿಸಿದೆ. ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/1-year-since-griha-jyoti-yojana-was-launched-today-1-65-crore-families-exempted-from-electricity-bills/ https://kannadanewsnow.com/kannada/69-acres-of-forest-encroachments-cleared-in-western-ghats-following-ministers-order/

Read More

ಬೆಂಗಳೂರು: ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆ ಜಾರಿಯಾಗಿ ಇಂದಿಗೆ ಒಂದು ವರ್ಷಕ್ಕೆ ಕಾಲಿಟ್ಟಿದೆ. ಈ ಯೋಜನೆಯ ಅಡಿಯಲ್ಲಿ ರಾಜ್ಯಾಧ್ಯಂತ 1.65 ಕೋಟಿ ಕುಟುಂಬಗಳು ವಿದ್ಯುತ್ ಬಿಲ್ ಹೊರೆಯಿಂದ ಮುಕ್ತಿಯಾಗಿದ್ದಾವೆ. ರಾಜ್ಯ ಸರ್ಕಾರದಿಂದ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಗೃಹಜ್ಯೋತಿʼಯು ವರ್ಷ ಪೂರೈಸಿದೆ ಅಂತ ಹೇಳಿದೆ. ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡುವ ಈ ಯೋಜನೆಯು ಬಡವರ ಮನೆಗೆ ನೆಮ್ಮದಿಯ ಬೆಳಕಾಗಿದೆ. 1.65 ಕೋಟಿ ಕುಟುಂಬಗಳು ವಿದ್ಯುತ್‌ ಬಿಲ್‌ ಹೊರೆಯಿಂದ ಮುಕ್ತರಾಗಿದ್ದಾರೆ ಅಂತ ತಿಳಿಸಿದೆ. https://twitter.com/KarnatakaVarthe/status/1820458034281267449 https://kannadanewsnow.com/kannada/69-acres-of-forest-encroachments-cleared-in-western-ghats-following-ministers-order/ https://kannadanewsnow.com/kannada/7-locations-identified-for-construction-of-second-airport-in-bengaluru-dk-shivakumar/

Read More

ಬೆಂಗಳೂರು : ರಾಜ್ಯದ 10 ಜಿಲ್ಲೆಗಳ ವ್ಯಾಪ್ತಿಯ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಒತ್ತುವರಿಯನ್ನು ತತ್ ಕ್ಷಣದಿಂದಲೇ ತೆರವು ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ 24 ಗಂಟೆಯಲ್ಲಿ ನೂತನ ಕಾರ್ಯಪಡೆ 31 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಹೋಬಳಿಯ ಮಾಗುಂಡಿ ಸರ್ವೆ ನಂ. 29ರಲ್ಲಿ 17 ಎಕರೆ 17 ಗುಂಟೆ, ಹಲಸೂರು ಸರ್ವೆ ನಂ. 55ರಲ್ಲಿ 13 ಎಕರೆ 38 ಗುಂಟೆ ಹಾಗೂ ತನುಡಿ ಸರ್ವೆ ನಂ. 9, 21, 22,23, 72ಮತ್ತು 97ರಲ್ಲಿ ಒಟ್ಟು 36 ಎಕರೆ ಸೇರಿ ಒಟ್ಟು 69 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಿಸಲಾಗುತ್ತಿದೆ. ಪಶ್ಚಿಮಘಟ್ಟ ಮತ್ತು ಅರಣ್ಯ ಒತ್ತುವರಿ ತೆರವು ಕಾರ್ಯಪಡೆಯ ಅಧ್ಯಕ್ಷರಾಗಿರುವ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ದೀಕ್ಷಿತ್ ಅವರ ಆದೇಶದಂತೆ ಈ ಕ್ರಮ ಜರುಗಿಸಲಾಗಿದೆ. https://kannadanewsnow.com/kannada/renewable-energy-sector-neglected-in-some-states-including-karnataka-hdd/ https://kannadanewsnow.com/kannada/7-locations-identified-for-construction-of-second-airport-in-bengaluru-dk-shivakumar/ https://kannadanewsnow.com/kannada/are-you-asking-for-an-account-of-my-assets-i-will-give-everything-give-your-brothers-account-first-dk-shivakumar-to-hdk/

Read More

ನವದೆಹಲಿ: ನವೀಕರಿಸಬಹುದಾದ ಇಂಧನ ಶಕ್ತಿಗಳ ಬಗ್ಗೆ ರಾಜ್ಯಸಭೆಯಲ್ಲಿ ಇಂದು ಮಹತ್ವದ ಭಾಷಣ ಮಾಡಿದ ಮಾಜಿ ಪ್ರಧಾನಿಗಳಾದ ಹೆಚ್‌.ಡಿ.ದೇವೇಗೌಡರು, ಈ ಕ್ಷೇತ್ರವನ್ನು ಕರ್ನಾಟಕವೂ ಸೇರಿ ಹಲವಾರು ರಾಜ್ಯಗಳು ಕಡೆಗಣಿಸುತ್ತಿದೆ ಎಂದು ಅತ್ಯಂತ ಬೇಸರದಿಂದ ಹೇಳಿದರು. ರಾಜ್ಯಸಭೆಯಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲಿನ ಚರ್ಚೆಯಲ್ಲಿ ಸೋಮವಾರ ಪಾಲ್ಗೊಂಡು ಮಾತನಾಡಿದರು ಅವರು. ಹಿಂದೆ ಕರ್ನಾಟಕ ರಾಜ್ಯವು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಇಡೀ ದೇಶಕ್ಕೆ ನಾಯಕತ್ವ ನೀಡಿತ್ತು. ಈ ಕ್ಷೇತ್ರದಲ್ಲಿ ಗಣನೀಯ ದಾಪುಗಾಲು ಇರಿಸಿತ್ತು. ಆದರೆ ಕೆಲ ವರ್ಷಗಳಿಂದ ಈಚೆಗೆ ಕರ್ನಾಟಕದಲ್ಲಿ ಈ ಕ್ಷೇತ್ರ ಗಣನೀಯವಾಗಿ ಹಿನ್ನೆಡೆ ಅನುಭವಿಸಿದೆ ಎಂದು ಅವರು ಹೇಳಿದರು. ನಮ್ಮ ದೇಶದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದ ಬೆಳವಣಿಗೆ ಪ್ರಮಾಣ ಶೇಕಡಾ 14ರಷ್ಟು ಇದ್ದು, ಕರ್ನಾಟಕ ರಾಜ್ಯದಲ್ಲಿ ಆ ಪ್ರಮಾಣ ಶೇಕಡಾ 2.58ರಷ್ಟು ಇದೆ. ಈ ಸಂದರ್ಭದಲ್ಲಿ ಈ ಕ್ಷೇತ್ರದ ಬೆಳವಣಿಗೆಯ ದರ ಕುಂಠಿತವಾಗಿರುವ ಬಗ್ಗೆ ಎಲ್ಲಾರೂ ಗಂಭೀರ ಚಿಂತನೆ ನಡೆಸಬೇಕು ಎಂದು ಮಾಜಿ ಪ್ರಧಾನಿಗಳು ಸಲಹೆ ಮಾಡಿದರು. ಈ ಕ್ಷೇತ್ರದಲ್ಲಿ…

Read More

ಬೆಂಗಳೂರು : ಸ್ಥಳ, ನೀರು, ಸಂಪರ್ಕ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಅನುಕೂಲಗಳನ್ನು ನೋಡಿಕೊಂಡು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕಿದೆ. ಈ ಕಾರಣಕ್ಕೆ ಎಂಟು ಸ್ಥಳಗಳನ್ನು ಗುರುತಿಸಲಾಗಿದೆ” ಎಂದು ತಿಳಿಸಿದರು. ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ವಿಧಾನಸೌಧದಲ್ಲಿ ಸೋಮವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಅವರು “ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮೂರನೇ ಅತಿದೊಡ್ಡ ನಿಲ್ದಾಣವಾಗಿದೆ. ಮುಂಬೈ, ದೆಹಲಿ ಬಿಟ್ಟರೇ ದಕ್ಷಿಣ ಭಾರತದಲ್ಲೇ ದೊಡ್ಡ ನಿಲ್ದಾಣವಾಗಿದ್ದು 70 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ 110 ಮಿಲಿಯನ್ ಗೆ ತಲುಪುತ್ತದೆ ಎಂದು ಅಂದಾಜಿಸಲಾಗಿದೆ” ಎಂದರು. ಕೆಂಪೇಗೌಡ ಅಂತರರಾಷ್ಟ್ರೀಯ ನಿಲ್ದಾಣವನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಾಣ ಮಾಡಲಾಗಿತ್ತು. ಹೊಸ ನಿಲ್ದಾಣವನ್ನು ಇದೇ ರೀತಿ ನಿರ್ಮಾಣ ಮಾಡಲಾಗುವುದು. ಇದರಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳ ಪಾಲೂ ಇರುತ್ತದೆ. ಮೂಲಸೌಕರ್ಯ ವ್ಯವಸ್ಥೆ ನೋಡಿ ಜಾಗಕ್ಕೆ ಹಸಿರು ನಿಶಾನೆ ನೀಡಲಾಗುತ್ತದೆ. ಸಚಿವರಾದ ಎಂ.ಬಿ.ಪಾಟೀಲರು ಅತ್ಯಂತ ಅಚ್ಚುಕಟ್ಟಾಗಿ ಯೋಜನೆ ಸಿದ್ದಪಡಿಸಿಕೊಂಡಿದ್ದಾರೆ.…

Read More

ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಸದುದ್ದೇಶದಿಂದ ಶಿವಾಜಿ ನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಾ ಬೌರಿಂಗ್ ಆಸ್ಪತ್ರೆ ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ. ಈ ಹಿಂದೆ ಇದ್ದ ಬೌರಿಂಗ್ ಆಸ್ಪತ್ರೆಯನ್ನು ನೆಲಸಮಗೊಳಿಸಿದ ನಂತರ ನೂತನ ಹತ್ತು ಅಂತಸ್ತಿನ 500 ಹಾಸಿಗೆಗಳ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸೋಮವಾರ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಭೇಟಿ ನೀಡಿದ ವೇಳೆ ವರಿದಿಗಾರರಿಗೆ ಹೇಳಿದರು. ಇದೆ ವೇಳೆ ಅಲ್ಲಿನ ಡೆಂಘೀ ವಾರ್ಡ್ ಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಅಸ್ಪತ್ರೆಯಲ್ಲಿ ವೈದ್ಯರು ಸೂಕ್ತವಾದ ಚಿಕಿತ್ಸೆ ನೀಡುತ್ತಿದ್ದಾರೆಯೇ? ಬೆಳಗಿನ ಉಪಹಾರ, ಮಧ್ಯಾಹ್ನಾದ ಬೋಜನ ಸಮಯಕ್ಕೆ ಸರಿಯಾಗಿ ನೀಡುತ್ತಿದ್ದಾರೆಯೇ ಎಂದು ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ಇನ್ನೊಂದು ತಿಂಗಳಲ್ಲಿ ಚರಕ ಆಸ್ಪತ್ರೆ ಲೋಕಾರ್ಪಣೆಗೊಳ್ಳಲಿದೆ ಅಟಲ್…

Read More