Author: kannadanewsnow09

ಮಂಡ್ಯ: ಜಿಲ್ಲೆಯಲ್ಲಿ ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಸತತ 7 ಗಂಟೆಗಳ ಕಾಲ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಿದರು. ಇಂದಿನ ಜನಸ್ಪಂದನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು ಬರೋಬ್ಬರಿ 3 ಸಾವಿರಕ್ಕೂ ಹೆಚ್ಚು ಅರ್ಜಿಗಳು ಸ್ವೀಕಾರಗೊಂಡಿವೆ. ಇಂದಿನ ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ದರ್ಶನದ ಬಳಿಕ ಮಾತನಾಡಿ, ಜನತಾ ದರ್ಶನದಲ್ಲಿ 3 ಸಾವಿರಕ್ಕೂ ಹೆಚ್ಚು ಅರ್ಜಿ ಬಂದಿವೆ. ನಾನೇ ಖುದ್ದು ನಿರಂತರವಾಗಿ 7 ಗಂಟೆಗಳ ಕಾಲ ಜನರ ಆಹ್ವಾಲು ಸ್ವೀಕಾರ ಮಾಡಿದ್ದೇನೆ. ಹೆಚ್ಚಿನ ರೀತಿಯಲ್ಲಿ ಕಂದಾಯ ಇಲಾಖೆ ಸಂಬಂಧಿಸಿದ ಅರ್ಜಿ ಬಂದಿವೆ. ನಿವೇಶನ, ಮನೆ ಇಲ್ಲ ಅಂತ ಅರ್ಜಿ ಬಂದಿದೆ‌. ಹಲವಾರು ಯುವಕರು, ಹೆಣ್ಣು ಮಕ್ಕಳು ಉದ್ಯೋಗಕ್ಕೆ ಮನವಿ ಮಾಡಿದ್ದಾರೆ. ನಿರುದ್ಯೋಗ, ನಿವೇಶನ, ಮನೆಗಳ ಸಮಸ್ಯೆಗಳು ಇವೆ ಎಂದರು. ಆರೋಗ್ಯ ಸಮಸ್ಯೆಯ ವರ್ಗದ ಜನರು ಇದ್ದಾರೆ. ವಿಕಲಚೇತನರ ಅರ್ಜಿಯನ್ನು ಸಹ ಸ್ವೀಕಾರ ಮಾಡಿದ್ದೇನೆ. ರಸ್ತೆ ಅಭಿವೃದ್ಧಿ, ಹೈವೆ ಸಂಬಂಧ ಸಮಸ್ಯೆ ವಿರುದ್ದ ಅರ್ಜಿ ಕೊಟ್ಟಿದ್ದಾರೆ. ಸಮುದಾಯ ಭವನ…

Read More

ಬೆಂಗಳೂರು: ಕೆ ಎಸ್ ಆರ್ ಟಿಸಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಈಗಾಗಲೇ ಹಲವು ಬಗೆಯ ಬಸ್ಸುಗಳನ್ನು ರೋಡಿಗೆ ಇಳಿಸಲಾಗಿದೆ. ಈಗ ಪ್ರಯಾಣಕರಿಗೆ ಹೈಫೈ ಪ್ರಯಾಣದ ಟಚ್ ನೀಡೋದಕ್ಕೆ ಬಸ್ ಸಿದ್ದವಾಗಿದ್ದಾವೆ. ಆ ಬಸ್ಸುಗಳನ್ನು ಇಂದು ಸಚಿವ ರಾಮಲಿಂಗಾರೆಡ್ಡಿ ವೀಕ್ಷಿಸಿದರು. ಹೌದು.. ಹೊಸ 9600 VOLVO Multiaxle ಸೀಟರ್ ಪ್ರೋಟೋಟೈಪ್ ಬಸ್ಸನ್ನು ಇಂದು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು ಕೆ ಎಸ್ ಆರ್ ಟಿ ಸಿ ಕೇಂದ್ರ‌ ಕಛೇರಿಯಲ್ಲಿ ಪರಿವೀಕ್ಷಣೆ ನಡೆಸಿದರು. ಈ ಬಸ್ಸಿನ ವಿಶೇಷತೆಗಳು: *ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್‌ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ (DRL) ಹೊಸ‌ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿರುವುದರಿಂದ ಕಣ್ ತಣಿಸುವ ಸೌಂದರ್ಯ. *ಏರೋಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ. *ನವೀನ ತಂತ್ರಜ್ಙಾನ/ತಾಂತ್ರಿಕತೆಯಿಂದ ಸುಧಾರಿತ ಇಂಜಿನ್ ಹೊಂದಿದ್ದು ಅತ್ಯುತ್ತಮ ಕಾರ್ಯಕ್ಷಮತೆ ಹಾಗೂ ಸುಧಾರಿತ ಇಂಜಿನ್‌ ಕೆಎಂಪಿಎಲ್ ನೀಡುತ್ತದೆ. *ಒಟ್ಟಾರೆ ಬಸ್ಸಿನ ಉದ್ದದಲ್ಲಿ 3.5% ಹೆಚ್ಚಳ ಇರುವುದರಿಂದ ಸಲೂನ್‌ನಲ್ಲಿ ಪ್ರಯಾಣಿಕರ ಆಸನಗಳ ನಡುವಿನ…

Read More

ಚೆನ್ನೈ: ತಮಿಳುನಾಡು ಬಿಎಸ್ಪಿ ಅಧ್ಯಕ್ಷ ಕೆ.ಆರ್ಮ್ ಸ್ಟ್ರಾಂಗ್ ಅವರನ್ನು ಚೆನ್ನೈನ ಸೆಂಬಿಯಂನಲ್ಲಿರುವ ಅವರ ನಿವಾಸದ ಬಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚೆನ್ನೈ ಕಾರ್ಪೊರೇಷನ್ನ ಕೌನ್ಸಿಲರ್ ಆಗಿದ್ದ ಅವರ ಮೇಲೆ ಗುಂಪೊಂದು ಕ್ರೂರವಾಗಿ ಹಲ್ಲೆ ನಡೆಸಿತು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಪೋಲೋ ಆಸ್ಪತ್ರೆಗೆ ಬರುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಪೊಲೀಸರು ಕೊಲೆ ತನಿಖೆಯನ್ನು ಪ್ರಾರಂಭಿಸಿದ್ದಾರೆ ಮತ್ತು ಅಪರಾಧದಲ್ಲಿ ಭಾಗಿಯಾಗಿರುವ ಶಂಕಿತರಿಗಾಗಿ ಸಕ್ರಿಯವಾಗಿ ಶೋಧ ನಡೆಸುತ್ತಿದ್ದಾರೆ. https://kannadanewsnow.com/kannada/muda-scam-exposed-by-those-who-were-eyeing-cms-chair-hdk/ https://kannadanewsnow.com/kannada/good-news-for-our-metro-passengers-15-trains-to-run-on-this-route-from-tomorrow/

Read More

ಉತ್ತರ ಕನ್ನಡ: ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆಯೂ ಮಳೆಯ ಆರ್ಭಟ ಮುಂದುವರೆಯಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ನಾಳೆ ಉತ್ತರ ಕನ್ನಡ ಜಿಲ್ಲೆಯ ನಾಲ್ಕು, ಉಡುಪಿ ಜಿಲ್ಲೆಯ 2 ತಾಲ್ಲೂಕಿನ ಶಾಲಾ-ಕಾಲೇಜಿಗಳು ಮುನ್ನೆಚ್ಚರಿಕೆಯ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಆದೇಶ ಹೊರಡಿಸಿದ್ದು, ನಾಳೆ ಕಾರವಾರ, ಕುಮಟಾ, ಭಟ್ಕಳ ಹಾಗೂ ಹೊನ್ನಾವರ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ಮಳೆಯ ಕಾರಣ ರಜೆ ನೀಡಲಾಗಿದೆ ಅಂತ ತಿಳಿಸಿದ್ದಾರೆ. ಇನ್ನೂ ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯ ಕಾರಣ ನಾಳೆ ಕುಂದಾಪುರ ಹಾಗೂ ಬ್ರಹ್ಮಾವರ ತಾಲ್ಲೂಕಿನ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ. ಆದರೇ ಈ ಎರಡು ತಾಲ್ಲೂಕಿನ 1 ರಿಂದ 10 ಹಾಗೂ ಪಿಯುಸಿವರೆಗೆ ರಜೆ ಮಾತ್ರ ನೀಡಲಾಗಿದ್ದು, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮೊದಲಾದ ಕಾಲೇಜುಗಳಿಗೆ ರಜೆ ನೀಡಿಲ್ಲ ಅಂತ ಕುಂದಾಪುರ ಉಪ ವಿಭಾಗೀಯ ಸಹಾಯಕ…

Read More

ಬೆಂಗಳೂರು: ರಾಜ್ಯಾಧ್ಯಂತ ಡೆಂಗ್ಯೂ ಪ್ರಕರಣಗಳು ಆರ್ಭಟಿಸಿವೆ. ಇಂದು ಹೊಸದಾಗಿ 155 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇವರಲ್ಲಿ ಬೆಂಗಳೂರಲ್ಲೇ ಅತೀ ಹೆಚ್ಚು ದಾಖಲಾಗಿದ್ದಾವೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 899 ಮಂದಿಯನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 155 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂದು ವರದಿಯಲ್ಲಿ ತಿಳಿದು ಬಂದಿದೆ. ಹೀಗಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 6,831ಕ್ಕೆ ಏರಿಕೆಯಾಗಿದೆ ಅಂತ ತಿಳಿಸಿದೆ. ಇನ್ನೂ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದು 430 ಮಂದಿಗೆ ಪರೀಕ್ಷೆ ಮಾಡಲಾಗಿದ್ದು ಅವರಲ್ಲಿ 107 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ವರದಿಯಲ್ಲಿ ದೃಢಪಟ್ಟಿದೆ. ಚಿತ್ರದುರ್ಗದಲ್ಲಿ 67 ಪರೀಕ್ಷೆಯಲ್ಲಿ 10 ಮಂದಿಗೆ, ದಾವಣಗೆರೆಯಲ್ಲಿ 9 ಪರೀಕ್ಷೆಯಲ್ಲಿ ನಾಲ್ವರಿಗೆ, ಶಿವಮೊಗ್ಗದಲ್ಲಿ 103 ಪರೀಕ್ಷೆಯಲ್ಲಿ 9 ಜನರಿಗೆ, ಉತ್ತರ ಕನ್ನಡದಲ್ಲಿ ಇಬ್ಬರು, ವಿಜಯಪುರದಲ್ಲಿ 100 ಪರೀಕ್ಷೆಯಲ್ಲಿ ನಾಲ್ವರಿಗೆ ಡೆಂಗ್ಯೂ ಪಾಸಿಟಿವ್ ಎಂದು ದೃಢಪಟ್ಟಿದೆ. ಇನ್ನೂ ಹಾಸನದಲ್ಲಿ 124…

Read More

(೧). ನಾವು ಸಂದ್ಯಾವಂದನೆ ಮಾಡುವುದೇಕೆ? ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸೂರ್ಯ ಉದಯಿಸುವಾಗ ಮತ್ತು ಮುಳುಗುವಾಗ ಪ್ರಪಂಚಕ್ಕೆಲ್ಲ ಬೆಳಕನ್ನು ಕೊಡುವ ಸೂರ್ಯನಿಗೆ ಕೃತಜ್ಞತೆ ಹೇಳುವ ಉದ್ದೇಶದಿಂದ ಮಾಡುವ ಕಾರ್ಯವೇ “ಸಂಧ್ಯಾವಂದನೆ”. ಸಂಧ್ಯಾವಂದನೆ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ,ಶಾಂತಿ ದೊರಕುತ್ತದೆ.ಆರೋಗ್ಯ ದೃಷ್ಠಿಯಿಂದ ಪ್ರಾಣಾಯಾಮ ಮಾಡಿದರೆ ಮನಸ್ಸು ಶುದ್ದವಾಗುತ್ತದೆ,ಬುದ್ಧಿ ಚುರುಕಾಗುತ್ತದೆ,ಆಯಸ್ಸು ಹೆಚ್ಚುತ್ತದೆ. ಋಷಿವರೇಣ್ಯರ ಧೀರ್ಘಾಯುಷ್ಯದ ಗುಟ್ಟು ಈ “ಪ್ರಾಣಾಯಾಮ”.ಹಾಗೆ ಸೂರ್ಯ ನಮಸ್ಕಾರ ಮಾಡುವುದರಿಂದ ದೇಹದ ಎಲ್ಲ ಅಂಗಾಂಗಗಳಿಗೂ ವ್ಯಾಯಾಮ ಆಗುತ್ತದೆ. ಸೂರ್ಯನ ಕಿರಣಗಳಲ್ಲಿನ ವಿಟಮಿನ್ ಗಳು ನಮ್ಮ ದೇಹವನ್ನು ಸೇರುತ್ತವೆ.ಅಷ್ಟೆ ಅಲ್ಲದೆ ನಮ್ಮ ಜೀವನದಲ್ಲಿ ಶಿಸ್ತು ಮೂಡಲು ಪ್ರಥಮ ಮೆಟ್ಟಿಲು ಸಂಧ್ಯಾವಂದನೆ ಆಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ…

Read More

ಪಾಟ್ನಾ: ಬಿಹಾರ ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಸರಣಿ ಸೇತುವೆ ಕುಸಿತದ ಘಟನೆಗಳಿಗೆ ಸಂಬಂಧಿಸಿದಂತೆ ಬಿಹಾರ ಸರ್ಕಾರ ( Bihar government ) ಶುಕ್ರವಾರ 14 ಎಂಜಿನಿಯರ್ ಗಳನ್ನು ಅಮಾನತುಗೊಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತನಿಖಾ ಸಮಿತಿಯು ತನ್ನ ವರದಿಯನ್ನು ಜಲಸಂಪನ್ಮೂಲ ಇಲಾಖೆಗೆ ( Water Resources Department – WRD) ಸಲ್ಲಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. “ಎಂಜಿನಿಯರ್ ಗಳು ನಿರ್ಲಕ್ಷ್ಯ ವಹಿಸಿದ್ದಾರೆ ಮತ್ತು ಮೇಲ್ವಿಚಾರಣೆ ನಿಷ್ಪ್ರಯೋಜಕವಾಗಿದೆ ಎಂದು ಕಂಡುಬಂದಿದೆ, ಇದು ರಾಜ್ಯದಲ್ಲಿ ಸಣ್ಣ ಸೇತುವೆಗಳು ಮತ್ತು ಸೇತುವೆಗಳು ಕುಸಿಯಲು ಮುಖ್ಯ ಕಾರಣವಾಗಿದೆ” ಎಂದು ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚೈತನ್ಯ ಪ್ರಸಾದ್ ಸುದ್ದಿಗಾರರಿಗೆ ತಿಳಿಸಿದರು. ಅಮಾನತುಗೊಂಡವರಲ್ಲಿ ಮೂವರು ಕಾರ್ಯನಿರ್ವಾಹಕ ಎಂಜಿನಿಯರ್ ಗಳು ಸೇರಿದ್ದಾರೆ. ಕಳೆದ 17 ದಿನಗಳಲ್ಲಿ ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್ಗಂಜ್ ಜಿಲ್ಲೆಗಳಲ್ಲಿ ಒಟ್ಟು 10 ಸೇತುವೆಗಳು ಕುಸಿದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://kannadanewsnow.com/kannada/good-news-for-our-metro-passengers-15-trains-to-run-on-this-route-from-tomorrow/ https://kannadanewsnow.com/kannada/muda-scam-exposed-by-those-who-were-eyeing-cms-chair-hdk/

Read More

ಬೆಂಗಳೂರು: ನಮ್ಮ ಮೆಟ್ರೋ ರೈಲುಗಳ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ, ಮೆಟ್ರೋ ರೈಲುಗಳ ಸಂಚಾರವನ್ನು ಹೆಚ್ಚಿಸಲಾಗುತ್ತಿದೆ. 9 ಇದ್ದಂತ ಈ ಮಾರ್ಗದ ರೈಲುಗಳ ಸಂಖ್ಯೆಯನ್ನು 15ಕ್ಕೆ ಏರಿಕೆ ಮಾಡಲಾಗುತ್ತಿದೆ. ಇಂದು ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 06.07.2024 ರಿಂದ ಜಾರಿಗೆ ಬರುವಂತೆ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು ನಾಡಪ್ರಭು ಕಂಪೇಗೌಡ ನಿಲ್ದಾಣ – ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್‌ನಿಂದ ಪ್ರಸ್ತುತ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುವುದು ಎಂದು ಹೇಳಿದೆ. ಈ ಹದಿನೈದು ರೈಲುಗಳಲ್ಲಿ ಹತ್ತು ರೈಲುಗಳು ಪಟ್ಟಂದೂರು ಅಗ್ರಹಾರದ (ಐಟಿಪಿಎಲ್) ವರೆಗೆ, ನಾಲ್ಕು, ರೈಲು ವೈಟ್‌ಫೀಲ್ಡ್ ಮತ್ತು ಒಂದು ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಚಲಿಸುತ್ತವೆ. ಅದರಂತೆ ಬೆಳಗಿನ ಸಮಯದಲ್ಲಿ ರೈಲುಗಳು ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ 8.48, 8.58, 9.08, 9.18, 9.29, 9.39, 9.50, 10.00, 10.11, 10.21, 10.39,…

Read More

ಬೆಂಗಳೂರು : ಹಾಸನ ಜಿಲ್ಲೆ ಯಸಳೂರು ಅರಣ್ಯ ವಲಯದ ಡಬ್ಬಲಿ ಕಟ್ಟೆ ನೆಡುತೋಪಿನಲ್ಲಿರುವ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ ಜು.6ರ ನಾಳೆ ಮಧ್ಯಾಹ್ನ 12.30ಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಕಳೆದ ಡಿಸೆಂಬರ್ 4ರಂದು ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ, ಮದವೇರಿ ದಾಳಿ ಮಾಡಿದ ಆನೆಯೊಂದಿಗೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ ದಸರಾ ಆನೆ ಅರ್ಜುನನಿಗೆ ಸ್ಮಾರಕ ನಿರ್ಮಿಸುವುದಾಗಿ ಸರ್ಕಾರ ಘೋಷಿಸಿತ್ತು, ಅದರಂತೆ ನಾಡಿದ್ದು ಶನಿವಾರ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಾಧಿ ಸ್ಥಳ ಯಸಳೂರಿನಲ್ಲಿ ಮೊದಲಿಗೆ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು, ಈ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ಸ್ಥಳೀಯ ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಶೀಘ್ರವೇ ಅರ್ಜುನ ಆನೆಯಿದ್ದ ನಾಗರಹೊಳೆ ಅರಣ್ಯ ವ್ಯಾಪ್ತಿಯ ಬಳ್ಳೆಯಲ್ಲಿ ಕೂಡ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಎರಡೂ ಸ್ಮಾರಕಗಳಲ್ಲಿ…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವಂತ ಗ್ಯಾರಂಟಿ ಯೋಜನೆಗೆ ಹಣ ಹೊಂದಾಣಿಕೆಗೆ ಮತ್ತೊಂದು ದಾರಿಯನ್ನು ಹಿಡಿದಿದೆ. ಅದೇ ಪರಿಶಿಷ್ಟ ಜಾತಿ ಉಪ ಯೋಜನೆ ( SCSP) ಹಾಗೂ ಪರಿಶಿಷ್ಟ ಪಂಗಡಗಳ ಉಪ ಯೋಜನೆ(TSP) ಯೋಜನೆಗಳಿಗೆ ಮೀಸಲಿಟ್ಟಿದ್ದಂತ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡೋದಕ್ಕೆ ಮುಂದಾಗಿದೆ ಎಂಬುದಾಗಿ ಹೇಳಲಾಗುತ್ತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿ ಎಸ್ ಪಿ ಮತ್ತು ಟಿ ಎಸ್ ಪಿ ಗೆ ಬಜೆಟ್ ನಲ್ಲಿ ಮೀಸಲಿಟ್ಟಿದ್ದಂತ ಒಟ್ಟು ಹಣದಲ್ಲಿ 14,282 ಕೋಟಿ ಹಣವನ್ನು ಬಳಸಿಕೊಳ್ಳೋದಕ್ಕೆ ಅನುಮತಿ ನೀಡಿದೆ ಎಂಬುದಾಗಿ ತಿಳಿದು ಬಂದಿದೆ. 2024-25ನೇ ಆರ್ಥಿಕ ವರ್ಷದಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿಯಲ್ಲಿ ಮೀಸಲಿಟ್ಟ 39,121.46 ಕೋಟಿ ರೂ. ಹಣವನ್ನು ಖರ್ಚು ಮಾಡುವ ಪ್ರಸ್ತಾವವುಳ್ಳ ಕ್ರಿಯಾ ಯೋಜನೆಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ರಾಜ್ಯ ಅಭಿವೃದ್ಧಿ ಪರಿಷತ್ ಶುಕ್ರವಾರ ಅನುಮೋದನೆ ನೀಡಿದೆ. ಅಂದಹಾಗೇ ಎಸ್ ಸಿ ಎಸ್ ಪಿ ಹಾಗೂ ಟಿ ಎಸ್ ಪಿ ಯೋಜನೆಯ…

Read More