Subscribe to Updates
Get the latest creative news from FooBar about art, design and business.
Author: kannadanewsnow09
ಬೆಳಗಾವಿ : ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ( gruhalakshmi scheme ) ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ ಹಾಕುವುದು ವಿಳಂಬವಾಗಿತ್ತು ಎಂದರು. ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ ಮಗಳು ತುಂಬಾ ಕಿಲಾಡಿ, ಹಠ ಮಾಡಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ…
ಬೆಂಗಳೂರು: ದಲಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿನಾಕಾರಣ ತೇಜೋವದೆ ಮಾಡಿ ದುರ್ಬಲಗೊಳಿಸಲು ನಡೆಯುತ್ತಿರುವ ಷಡ್ಯಂತರಗಳನ್ನು ನಾಡಿನ ವಕೀಲ ಸಮುದಾಯ ಖಂಡಿಸಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದಂತ ವಕೀಲರ ರಾಜ್ಯ ಮಟ್ಟದ ಸಮಾವೇಶದಲ್ಲಿ ಈ ಸಂಬಂಧ ಮಹತ್ವದ ನಿರ್ಣಯವನ್ನು ವಕೀಲರು ಕೈಗೊಂಡಿದ್ದಾರೆ. ನಿರ್ಣಯಗಳು: 1. ದಲಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿನಾಕಾರಣ ತೇಜೋವದೆ ಮಾಡಿ ದುರ್ಬಲಗೊಳಿಸಲು ನಡೆಯುತ್ತಿರುವ ಷಡ್ಯಂತರಗಳನ್ನು ನಾಡಿನ ವಕೀಲ ಸಮುದಾಯ ಖಂಡಿಸುತ್ತದೆ. ಕರ್ನಾಟಕ ರಾಜ್ಯ ಸರ್ಕಾರವನ್ನು ಅಸ್ತಿರಗೊಳಿಸಲು ನಡೆಯುತ್ತಿರುವ ಪಿತೂರಿಗಳಿಗೆ ಪೂರಕವಾಗಿ ಮಾನ್ಯ ರಾಜ್ಯಪಾಲ ಥಾವರ್ ಚೆಂದ್ ಗೆಹಲೋಟ್ ಅವರು ಕೂಡ ವರ್ತಿಸುತ್ತಿದ್ದಾರೆ. ಜನತಂತ್ರದ ಮೂಲಕ ಸಂಪೂರ್ಣ ಬಹುಮತದಿಂದ ಚುನಾಯಿತ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಯುತ್ತಿರುವ ಎಲ್ಲಾ ರೀತಿಯ ಪಿತೂರಿಗಳನ್ನು ಸಮಾವೇಶ ಖಂಡಿಸುತ್ತದೆ. ಭಾರತದ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ರಾಜ್ಯಪಾಲರನ್ನು ತಕ್ಷಣ ವಾಪಸು ಕರೆಸಿಕೊಳ್ಳಬೇಕೆಂದು ಮಾನ್ಯ ರಾಷ್ಟ್ರಪತಿಗಳನ್ನು ಒತ್ತಾಯಿಸುತ್ತೇವೆ. 2. ಮುಡಾ ಪ್ರಕರಣದಲ್ಲಿ ಅರ್ಜಿದಾರರು…
ಶಿವಮೊಗ್ಗ: ಇಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ಮಹತ್ವದ ಜನಸ್ಪಂದನ ಸಭೆ ನಡೆಸಿದರು. ಇಂದಿನ ಜನಸ್ಪಂದನ ಸಭೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು, 15ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಎಲ್ಲವುಗಳನ್ನು ಕಾಲಮಿತಿಯಲ್ಲಿ ಸಮಸ್ಯೆ ಪರಿಹರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ “ರಂಗನಾಥ ಕಲ್ಯಾಣ ಮಂಟಪ”ದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ “ಜನಸ್ಪಂದನ ಸಭೆ” ಯಲ್ಲಿ ಪಾಲ್ಗೊಂಡು, ಜನರಿಂದ ನೇರವಾಗಿ ಅಹವಾಲು ಸ್ವೀಕರಿಸಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಯಿತು. ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹಲವಾರು ದೂರುಗಳನ್ನು ಪರಿಶೀಲಿಸಿ, ಸ್ಥಳದಲ್ಲೇ ಅನೇಕರಿಗೆ ಪರಿಹಾರ ಒದಗಿಸಲಾಯಿತು. ಬಳಿಕ 94.C ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ಹಾಗೂ ಸಾಮಾಜಿಕ ಭದ್ರತಾ ಯೋಜನೆಯಡಿ ಹಲವು ಅರ್ಜಿದಾರರಿಗೆ ಸಂದ್ಯಾಸುರಕ್ಷಾ ಪಿಂಚಣಿ ಪತ್ರ, ಅಂಗವಿಕಲ ಪೋಷಣಾ ವೇತನ ಪತ್ರವನ್ನು ವಿತರಿಸಲಾಯಿತು. ಸುಮಾರು 150 ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಕಾಲ…
ನವದೆಹಲಿ: ಐದು ಭಾರತೀಯ ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ಗುರುವಾರ ಅನುಮೋದನೆ ನೀಡಿದೆ. ‘ಅವುಗಳ ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಲು’ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದೆ. ಇಂದು ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಳಿ ಎಂಬ 5 ಭಾಷೆಗಳನ್ನು ಶಾಸ್ತ್ರೀಯ ಭಾಷೆಗಳಾಗಿ ಅನುಮೋದಿಸಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. “ಇದು ಐತಿಹಾಸಿಕ ನಿರ್ಧಾರವಾಗಿದೆ ಮತ್ತು ಈ ನಿರ್ಧಾರವು ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್ಡಿಎ ಸರ್ಕಾರದ ನಮ್ಮ ಸಂಸ್ಕೃತಿಯಲ್ಲಿ ಸವಾರಿ ಮಾಡುವ, ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಪಡುವ ಮತ್ತು ಎಲ್ಲಾ ಭಾರತೀಯ ಭಾಷೆಗಳು ಮತ್ತು ನಮ್ಮಲ್ಲಿರುವ ಶ್ರೀಮಂತ ಪರಂಪರೆಯ ಬಗ್ಗೆ ಹೆಮ್ಮೆ ಪಡುತ್ತದೆ” ಎಂದು ಅವರು ಹೇಳಿದರು. “ಈ ಹೊತ್ತಿಗೆ, ನಾವು ತಮಿಳು, ಸಂಸ್ಕೃತ, ತೆಲುಗು, ಕನ್ನಡ, ಮಲಯಾಳಂ ಮತ್ತು ಒಡಿಯಾವನ್ನು ಅಧಿಸೂಚಿತ ಶಾಸ್ತ್ರೀಯ ಭಾಷೆಗಳಾಗಿ ಹೊಂದಿದ್ದೇವೆ… ಶಾಸ್ತ್ರೀಯ ಭಾಷೆಗಳನ್ನು ಸಂರಕ್ಷಿಸಲು ಮತ್ತು ಉತ್ತೇಜಿಸಲು ಮತ್ತು ಈ ಭಾಷೆಗಳ ಶ್ರೀಮಂತ ಪರಂಪರೆಯನ್ನು…
ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2024-25 ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ. ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ. ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ [ಬಿ.ಎ, ಬಿ.ಕಾಂ, ಬಿ.ಲಿಬ್ ಐಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲ್ಯೂ] ಹಾಗು ಸ್ನಾತಕೋತ್ತರ ಪಿ.ಜಿ. ಕೋಸ್ರ್ಗಳಾದ [ಎಂ.ಎ, ಎಂ.ಎ-ಪತ್ರಿಕೋದ್ಯಮ, ಎಂ.ಕಾಂ, ಎಂ.ಬಿ.ಎ, ಎಂ.ಲಿಬ್ಐ.ಎಸ್ಸಿ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್.ಡಬ್ಲೂ] [ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್] ಕೋಸ್ರ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಪ್ರವೇಶಾತಿಗೆ ಅಗತ್ಯ ದಾಖಲೆಗಳು ಕಡ್ಡಾಯವಾಗಿದೆ. ಎಸ್ಎಸ್ಲ್ಸಿ ಅಂಕಪಟ್ಟಿ ಜೆರಾಕ್ಸ್ ಪಿಯುಸಿ ಅಥವಾ ತತ್ಸಮಾನ ಅಂಕಪಟ್ಟಿ…
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ದಿನ ಮೂರು ವರ್ಷ ನಾನೇ ಸಿಎಂ ಅಂತ ಹೇಳುತ್ತಿರುವುದು ನೋಡಿದರೆ ಅವರಿಗೆ ಎಷ್ಟು ಅಭದ್ರತೆ ಕಾಡುತ್ತಿದೆ ಎನ್ನುವುದು ಗೊತ್ತಾಗುತ್ತದೆ. ಸಿಎಂ ಜೊತೆಗೆ ಸರ್ಕಾರವೂ ಅಭದ್ರವಾಗಿದ್ದು, ಯಾವುದೇ ಅಭಿವೃದ್ದಿ ಕೆಲಸ ಆಗುತ್ತಿಲ್ಲ, ಜನರ ಪರ ಕೆಲಸ ಮಾಡಿ, ಇಲ್ಲದಿದ್ದರೆ ಜಾಗ ಖಾಲಿ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಅವರು ನವದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಸರ್ಕಾರವೂ ಅಭದ್ರವಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಎಲ್ಲವೂ ನಿಂತು ಹೋಗಿದೆ. ನನಗಿರುವ ಮಾಹಿತಿಯ ಪ್ರಕಾರ ಮಹತ್ವದ ಯಾವುದೇ ಕಡತಗಳಿಗೆ ಸಹಿ ಹಾಕುತ್ತಿಲ್ಲ. ಜನರ ಪರ ಕೆಲಸ ಮಾಡಿ, ಇಲ್ಲದಿದ್ದರೆ ಜಾಗ ಖಾಲಿ ಮಾಡಿ ಎಂದು ಆಗ್ರಹಿಸಿದರು. ಸಿದ್ದರಾಮಯ್ಯ ರಾಜಿನಾಮೆ ಕೊಡಬೇಕೆಂದರೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರೂ ರಾಜೀನಾಮೆ ನೀಡಬೇಕಾಗುತ್ತದೆ ಎಂದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಿ.ಟಿ. ದೇವೇಗೌಡರು…
ಬೆಂಗಳೂರು: ಕಳೆದು ಒಂದು ವಾರಗಳಿಂದ ತಮ್ಮ ವಿವಿಧ ಭೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಧ್ಯಂತ ಗ್ರಾಮ ಆಡಳಿತಾಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದರು. ಇಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಜೊತೆಗಿನ ಮಾತುಕತೆ ಸಕ್ಸಸ್ ಆಗಿರುವ ಕಾರಣ, ಮುಷ್ಕರವನ್ನು ವಾಪಾಸ್ ಪಡೆದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು, ಕಳೆದ ಒಂದು ವಾರದಿಂದ ಪ್ರತಿಭಟನೆ ನಿರತರಾಗಿದ್ದ ಗ್ರಾಮ ಆಡಳಿತ ಅಧಿಕಾರಿಗಳು ಇಂದು ನನ್ನನ್ನು ಭೇಟಿಯಾಗಿ ಚರ್ಚಿಸಿದರು. ಎಲ್ಲರೂ ಒಟ್ಟಾಗಿ ಜನಪರ ಕೆಲಸಕ್ಕೆ ಮುಂದಾಗೋಣ ಎಂಬ ಮಾತನ್ನು ಗೌರವಿಸಿ ತಮ್ಮ ಹೋರಾಟವನ್ನು ಹಿಂಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ಈ ವೇಳೆ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳನ್ನು ಒಳಗೊಂಡ ತಂಡ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಹೂಗುಚ್ಚ ನೀಡಿ ಸಂತಸ ವ್ಯಕ್ತಪಡಿಸಿದರು ಎಂದಿದ್ದಾರೆ. https://kannadanewsnow.com/kannada/bmtc-recruitment-2024-bmtc-announces-probable-selection-list-for-manager-posts/ https://kannadanewsnow.com/kannada/eating-french-fries-is-equal-to-smoking-25-cigarettes-a-day-cardiologist/
ಹಣ ಗಳಿಸುವುದು ಸುಲಭದ ಮಾತಲ್ಲ. ಕೆಲವರು ಎಷ್ಟೇ ಸಂಪಾದಿಸಿದರೂ ಹಣವನ್ನು ಉಳಿಸಲು ಅಥವಾ ಉಳಿಸಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಹಣ ಸಂಪಾದಿಸಲು, ಅದನ್ನು ನಮ್ಮತ್ತ ಆಕರ್ಷಿಸಲು ಮತ್ತು ಅದನ್ನು ನಮ್ಮೊಂದಿಗೆ ಇಟ್ಟುಕೊಳ್ಳಲು ಮತ್ತು ಖ್ಯಾತಿಯ ಪ್ರಭಾವದಿಂದ ಬದುಕಲು ನಾವು ಕೆಲವು ಕೆಲಸಗಳನ್ನು ಮಾಡಬೇಕಾಗುತ್ತದೆ. ಅದರ ಮೂಲಕ ಹಣ ಸಂಪಾದಿಸಿ ಉಳಿಸಿ ಕೀರ್ತಿಯಿಂದ ಬದುಕಬಹುದು. ಪ್ರತಿಯೊಬ್ಬರೂ ಖ್ಯಾತಿ, ಸಂಪತ್ತು ಮತ್ತು ಪ್ರಭಾವದಿಂದ ತುಂಬಿದ ಜೀವನವನ್ನು ಬಯಸುತ್ತಾರೆ. ಕೆಲವರಿಗೆ ಕೇವಲ ಹಣವಿರುತ್ತದೆ ಮತ್ತು ಯಾವುದೇ ಖ್ಯಾತಿ ಅಥವಾ ಪ್ರಭಾವವಿಲ್ಲ. ಆದ್ದರಿಂದ ಅವರು ಖ್ಯಾತಿಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಾರೆ. ಕ್ಷೀಣಿಸದ ಸಂಪತ್ತು ಮತ್ತು ಕುಗ್ಗದ ಪ್ರಭಾವವನ್ನು ಪಡೆಯಲು ಮತ್ತು ಖ್ಯಾತಿಯನ್ನು ಪಡೆಯಲು, ಕೆಲವು ಪರಿಹಾರಗಳನ್ನು ಮಾಡಬೇಕು. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ಅದಕ್ಕೆ ಪರಿಹಾರವೇನು ಎಂದು ನೋಡೋಣ. ಲವಂಗ ಇರುವಲ್ಲೆಲ್ಲಾ ಹಣದ ಹೊಳೆ ಹರಿಯುತ್ತದೆ ಎಂಬ ಸೂಕ್ಷ್ಮ ಸುಳಿವು ಸಿಕ್ಕಿದೆ. ಲವಂಗವು ಗಿಡಮೂಲಿಕೆಯ ಪೋಷಕಾಂಶ ಮಾತ್ರವಲ್ಲದೆ ಅದ್ಭುತವಾದ ಹಣವನ್ನು ಆಕರ್ಷಿಸುತ್ತದೆ! ಹಣದ ಜತೆಗೆ ಹಣ ಹಾಕಿದರೆ ವ್ಯರ್ಥವಾಗುವುದಿಲ್ಲ…
ಕೆಎನ್ಎನ್ ಡಿಜಿಟಲ್ ಡೆಸ್ಕ್: ಫ್ರೆಂಚ್ ಫ್ರೈಸ್ ತಿನ್ನುವುದು ದಿನಕ್ಕೆ 25 ಸಿಗರೇಟ್ ಸೇದುವುದಕ್ಕೆ ಸಮ ಎಂಬುದಾಗಿ ಶಾಂಕಿಂಗ್ ಮಾಹಿತಿಯನ್ನು ಹೃದ್ರೋಗ ತಜ್ಞರು ಹಂಚಿಕೊಂಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಫ್ರೆಂಚ್ ಫ್ರೈಸ್ ವಿಶ್ವದಾದ್ಯಂತ ಅತ್ಯಂತ ಜನಪ್ರಿಯ ಮತ್ತು ಪ್ರೀತಿಯ ತಿಂಡಿಗಳಲ್ಲಿ ಒಂದಾಗಿದೆ. ಬರ್ಗರ್ ಗಳಿಗೆ ಸೈಡ್ ಡಿಶ್ ಆಗಿ ಅಥವಾ ತಮ್ಮದೇ ಆದ ರೀತಿಯಲ್ಲಿ ಆನಂದಿಸಲಿ, ಅವು ಅನೇಕರಿಗೆ ಆರಾಮದಾಯಕ ಆಹಾರವಾಗಿ ಮಾರ್ಪಟ್ಟಿವೆ. ಅವುಗಳ ಗರಿಗರಿಯಾದ ವಿನ್ಯಾಸ ಮತ್ತು ಉಪ್ಪಿನ ರುಚಿ ಅವುಗಳನ್ನು ತಡೆಯಲಾಗದಂತೆ ಮಾಡುತ್ತದೆ. ಆದರೆ ಈ ರುಚಿಕರವಾದ ಔತಣದ ಹಿಂದೆ ಗಂಭೀರ ಆರೋಗ್ಯ ಕಾಳಜಿ ಇದೆ. ಇತ್ತೀಚಿನ ಅಧ್ಯಯನಗಳು ಮತ್ತು ತಜ್ಞರ ಅಭಿಪ್ರಾಯಗಳು ಫ್ರೆಂಚ್ ಫ್ರೈಗಳನ್ನು ಆಗಾಗ್ಗೆ ಸೇವಿಸುವುದರಿಂದ ತೂಕ ಹೆಚ್ಚಾಗುವುದು ಮಾತ್ರವಲ್ಲದೆ ಹೃದಯದ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮಗಳನ್ನು ಬೀರುತ್ತದೆ ಮತ್ತು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಬಹಿರಂಗಪಡಿಸಿದೆ. ಫ್ರೆಂಚ್ ಫ್ರೈಗಳೊಂದಿಗಿನ ಪ್ರಮುಖ ಕಾಳಜಿಯೆಂದರೆ ಅವುಗಳನ್ನು ತಯಾರಿಸುವ ವಿಧಾನ. ಸಾಮಾನ್ಯವಾಗಿ, ಅವುಗಳನ್ನು ಹೆಚ್ಚಿನ ತಾಪಮಾನದಲ್ಲಿ ಎಣ್ಣೆಯಲ್ಲಿ ಡೀಪ್…
ಬೆಂಗಳೂರು: ಬೆಂಗಳೂರಿನ ನಾಗಸಂದ್ರದಿಂದ ಮಾಧವರ ಮೆಟ್ರೋ ನಿಲ್ದಾಣಗಳ ನಡುವೆ ಹೊಸ ಮಾರ್ಗದಲ್ಲಿನ ಸುರಕ್ಷತಾ ಪರಿಶೀಲನೆ ಯಶಸ್ವಿಯಾಗಿದೆ. ಹೀಗಾಗಿ ಶೀಘ್ರವೇ ಈ ಮಾರ್ಗದಲ್ಲೂ ನಮ್ಮ ಮೆಟ್ರೋ ಸಂಚಾರ ಆರಂಭಗೊಳ್ಳಲಿದೆ. ಇಂದು ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದು 03.10.2024 ರಂದು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು (ದಕ್ಷಿಣ ವೃತ್ತ) ಹಾಗೂ ಅವರ ತಂಡ ಇಂದು ನಡೆಸಿದ ನಾಗಸಂದ್ರದಿಂದ ಮಾಧವರ ಮೆಟ್ರೋ ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ ಮಾರ್ಗದ ಶಾಸನಬದ್ಧ ಸುರಕ್ಷತಾ ಪರಿಶೀಲನೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದಿದೆ. https://kannadanewsnow.com/kannada/imd-predicts-widespread-rainfall-in-the-state-till-october-9/ https://kannadanewsnow.com/kannada/breaking-jailed-actor-darshan-has-swelling-in-the-back-of-his-back-doctors-instruct-him-to-undergo-a-scan/












