Subscribe to Updates
Get the latest creative news from FooBar about art, design and business.
Author: kannadanewsnow09
ಹಾಸನ: ಅಂತಾರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್ ಅವರ ಎದೆಯ ಹಣತೆ ಕಥೆಯನ್ನು ಆಧರಿಸಿದ ನಾಟಕ ಪ್ರದರ್ಶನವನ್ನು ಜುಲೈ 11ರಂದು ಹಾಸನದ ಕಲಾಭವನದಲ್ಲಿ ಹಾಸನದ ರಂಗಸಿರಿ ಕಲಾ ತಂಡ ಆಯೋಜಿಸಿದೆ. ನೀನಾಸಮ್ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲ ಡಾ.ಎಂ.ಗಣೇಶ್ ಹೆಗ್ಗೋಡು ನಿರ್ದೇಶನ ಮಾಡಿರುವ ಈ ನಾಟಕವನ್ನು ಹೆಗ್ಗೋಡಿನ ಸತ್ಯಶೋಧನ ರಂಗಸಮುದಾಯದ ನೇತೃತ್ವದಲ್ಲಿ ಜನಮನದಾಟ ರಂಗ ತಂಡ ಅಭಿನಯಿಸಲಿದೆ. ನೂತನ ಜಿಲ್ಲಾಧಿಕಾರಿ ಲತಾಕುಮಾರಿ ಅವರನ್ನು ಭೇಟಿ ಮಾಡಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮತ್ತು ರಂಗಸಿರಿ ಗೌರವಾಧ್ಯಕ್ಷ ಶಿವಾನಂದ ತಗಡೂರು ಅವರು ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರುಗಳಾದ ಕೆ.ಆರ್.ಮಂಜುನಾಥ್, ಬಿ.ಆರ್.ಉದಯ ಕುಮಾರ್, ರವಿ ನಾಕಲಗೂಡು, ಹಿರಿಯ ಪತ್ರಕರ್ತರಾದ ಜಿ.ಪ್ರಕಾಶ್, ವಿಜಯಕುಮಾರ್, ರಂಗಸಿರಿ ಕಾರ್ಯದರ್ಶಿ ಪಿ.ಶಾಡ್ರಾಕ್, ಸುರೇಶ್ ಇದ್ದರು. https://kannadanewsnow.com/kannada/siddaramaiah-granted-illegal-permission-to-7-mines-hd-kumaraswamy-accuses-the-cm/ https://kannadanewsnow.com/kannada/do-you-want-to-feast-your-eyes-on-the-scenic-splendor-of-the-mountains-dont-miss-out-on-watching-this-video-song/
ನವದೆಹಲಿ: ಅಕ್ರಮ ಗಣಿಗಾರಿಕೆ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಹೆಚ್.ಕೆ. ಪಾಟೀಲ್ ಬರೆದಿರುವ ಪತ್ರವನ್ನು ಕಸದ ಬುಟ್ಟಿಗೆ ಹಾಕಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗುಡುಗಿದ್ದಾರೆ. ನವದೆಹಲಿಯ ತಮ್ಮ ಅಧಿಕೃತ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಕಳೆದ ಬಾರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಾವಧಿಯಲ್ಲಿ ಕಾನೂನುಬಾಹಿರವಾಗಿ ಏಳು ಗಣಿ ಕಂಪನಿಗಳಿಗೆ ಅನುಮತಿ ನೀಡಿದ್ದರು. ಅದರ ಬಗ್ಗೆ ಏನು ಹೇಳುತ್ತೀರಿ ಹೆಚ್.ಕೆ. ಪಾಟೀಲರೇ ಎಂದು ಖಾರವಾಗಿ ಪ್ರಶ್ನಿಸಿದರು. ರಾಜಕೀಯ ದುರುದೇಶದಿಂದ ಹಾಗೂ ವಸತಿ ಇಲಾಖೆಯಲ್ಲಿ ಎದ್ದಿರುವ ಕಮೀಷನ್ ಮುಜುಗರದಿಂದ ಪಾರಾಗಲು ಹೆಚ್.ಕೆ. ಪಾಟೀಲ್ ಅವರ ಪತ್ರವನ್ನು ಹೊರಗೆ ಬಿಡಲಾಗಿದೆ ಎಂದು ಅವರು ಕಿಡಿಕಾರಿದರು. ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದ ಬಗ್ಗೆ ಈಗ ಹೆಚ್.ಕೆ. ಪಾಟೀಲ್ ಎಚ್ಚರಗೊಂಡಿದ್ದಾರೆ. 1.5 ಲಕ್ಷ ಕೋಟಿ ಹಗರಣ ಆಗಿದೆ ಎಂದಿದ್ದಾರೆ. ಎರಡು ವರ್ಷದಿಂದ ತಾವು ಕಾನೂನು ಮಂತ್ರಿಯಾಗಿದ್ದರಿ, ಕುಂಭಕರ್ಣನ ನಿದ್ದೆಯಲ್ಲಿ ಇದ್ರಾ? ಎಂದು…
ರಾಯಚೂರು: ಜಿಲ್ಲೆ ಯ 1406 ಗ್ರಾ ಮೀಣ ಜನವಸತಿಗಳಿಗೆ ಹಾಗೂ 7 ನಗರ ಸ್ಥಳೀಯ ಸಂಸ್ಥೆಗಳಿಗೆ ಬಹುಗ್ರಾ ಮ ಕುಡಿಯುವ ನೀರು ಸರಬರಾಜು ಮಾಡುವ 2978 ಕೋಟಿ ರೂ.ಗಳ ಯೋಜನೆಗೆ ರಾಯಚೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಾರಾಯಣಪುರ ಜಲಾಶಯ ಈ ಯೋಜನೆಯ ಜಲಮೂಲವಾಗಿದ್ದು, 810 ಗ್ರಾಮಗಳಿಗೆ ಸೇರಿದ 1406 ಗ್ರಾಮೀಣ ಜನವಸತಿಗಳಿಗೆ ಈ ಯೋಜನೆಯ ಮೂಲಕ ನೀರು ಸರಬರಾಜು ಆಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿ ಪ್ರಕಟಿಸಿದ್ದಾರೆ. ನೀರು ಸರಬರಾಜಾಗುವ 810 ಗ್ರಾಮಗಳ 3,42,534 ಮನೆಗಳು ಶುದ್ದ ಕುಡಿಯುವ ನೀರಿನ ಸೌಲಭ್ಯ ಪಡೆಯಲಿದ್ದು, ಸುಮಾರು 30 ತಿಂಗಳ ಅವಧಿಯಲ್ಲಿ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಭಾಗದ ಪ್ರತಿಯೊಬ್ಬರು ಪ್ರತಿ ನಿತ್ಯ 55 ಲೀಟರ್ (ಎಲ್.ಪಿ.ಸಿ.ಡಿ) ನೀರನ್ನು ಪಡೆಯಲಿದ್ದು ಈ ಯೋಜನೆಯಡಿ ಮಾನ್ವಿ, ಮಸ್ಕಿ, ಕವಿತಾಳ, ತುರ್ವಿಹಾಳ, ಬಾಳಗನೂರು,…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಅವಧಿಯನ್ನು ಜೂನ್.30ರವರೆಗೆ ವಿಸ್ತರಣೆ ಮಾಡಲಾಗಿದೆ. ಅಲ್ಲದೇ ಇದು ಅಂತಿಮ ವಿಸ್ತರಣೆ ಅಂತ ತಿಳಿಸಿದೆ. ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಲು ರಾಜ್ಯಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಲಾಗಿದೆ. ನಾಗರಿಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಮೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ 198 ವಾರ್ಡ್ಗಳಲ್ಲೂ ಪ್ರತ್ಯೇಕ ಶಿಬಿರಗಳನ್ನು ತೆರೆಯಲಾಗಿದೆ. ಅಲ್ಲದೆ, ಆನ್ಲೈನ್ https://schedulecastesurvey.karnataka.gov.in/selfdeclaration/ ಲಿಂಕ್ ಮೂಲಕವೂ ಸ್ವಯಂಘೋಷಣೆ ಮಾಡಿಕೊಳ್ಳಬಹುದು. https://twitter.com/KarnatakaVarthe/status/1937139706619417013 https://kannadanewsnow.com/kannada/does-the-chief-minister-have-the-courage-and-morality-to-accept-the-resignation-of-the-housing-minister-hdks-question/ https://kannadanewsnow.com/kannada/do-you-want-to-feast-your-eyes-on-the-scenic-splendor-of-the-mountains-dont-miss-out-on-watching-this-video-song/
ನವದೆಹಲಿ: ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ; ರಾಜ್ಯ ಕಾಂಗ್ರೆಸ್ ಸರಕಾರದ ದರ್ಬಾರಿನಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯ ತಮ್ಮ ಅಧಿಕೃತ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಶಾಸಕರು ಅನುದಾನಕ್ಕಾಗಿ, ಸರಕಾರದ ಯೋಜನೆಗಳಿಗಾಗಿ ಕಚೇರಿಗಳ ಸುತ್ತ, ಮಂತ್ರಿಮಹೋದಯರ ಸುತ್ತ ತಬರನಂತೆ ಸುತ್ತುತ್ತಿದ್ದಾರೆ. ಆಡಳಿತ ಪಕ್ಷದ ಸದಸ್ಯರಿಗೇ ಇಂಥ ದುರ್ಗತಿ ಬಂದರೆ ಇತರೆ ಪಕ್ಷಗಳ ಶಾಸಕರ ಪರಿಸ್ಥಿತಿ ಏನು? ಎಂದು ಪ್ರಶ್ನಿಸಿದರು. ಹಿಂದೆ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರು ಬರೆದಿದ್ದ ʼತಬರನ ಕಥೆʼ ಎಂಬ ಕಥೆಯನ್ನು ಗಿರೀಶ್ ಕಾಸರವಳ್ಳಿ ಅವರು ಸಿನಿಮಾ ಮಾಡಿದ್ದರು. ವಾಚ್ ಮನ್ ಒಬ್ಬ ತನ್ನ ಪಿಂಚಣಿಗಾಗಿ ಸರಕಾರಿ ಕಚೇರಿಗಳಿಗೆ ಅಲೆ ಅಲೆದು ಬಸವಳಿಯುವ ಕಥೆ ಅದು. ಅಂಥದ್ದೇ ಪರಿಸ್ಥಿತಿ ರಾಜ್ಯದ ಶಾಸಕರಿಗೂ ಬಂದಿರುವುದು ದುರದೃಷ್ಟಕರ. ಶಾಸಕರು ಯೋಜನೆಗಳಾಗಿ ಮಂತ್ರಿಗಳು, ಎಂಜಿಯರ್ ಗಳ ಕಚೇರಿಗಳ ಸುತ್ತ ತಬರನಂತೆ ಸುತ್ತುತ್ತಿದ್ದಾರೆ. ರಾಜ್ಯದಲ್ಲಿ ಇಂಥ ದುಸ್ಥಿತಿ ಹಿಂದೆಂದೂ…
ನವದೆಹಲಿ: ಲೀಡ್ಸ್ನಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಕೆಎಲ್ ರಾಹುಲ್ ಸುನಿಲ್ ಗವಾಸ್ಕರ್ ಮತ್ತು ರಾಹುಲ್ ದ್ರಾವಿಡ್ ಸೇರಿದಂತೆ ಇತರ ದಿಗ್ಗಜ ಆಟಗಾರರ ದಾಖಲೆಗಳನ್ನು ಮುರಿದರು. ಲೀಡ್ಸ್ನಲ್ಲಿ ನಡೆದ 4ನೇ ದಿನದಂದು ಸವಾಲಿನ ಪರಿಸ್ಥಿತಿಯಲ್ಲಿ ಎರಡನೇ ಇನ್ನಿಂಗ್ಸ್ನಲ್ಲಿ ರಾಹುಲ್ ಅದ್ಭುತ ಶತಕ ಬಾರಿಸಿದರು ಮತ್ತು ಪ್ರವಾಸಿ ತಂಡದ ಬ್ಯಾಟಿಂಗ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು. ತಮ್ಮ ಇನಿಂಗ್ಸ್ ಅವಧಿಯಲ್ಲಿ ರಾಹುಲ್ ಒಂದು ದೊಡ್ಡ ಮೈಲಿಗಲ್ಲು ಸಾಧಿಸಿದ್ದಾರೆ. ಇಂಗ್ಲೆಂಡ್ನಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಏಷ್ಯನ್ ಓಪನರ್ ಗಳಿಸಿದ ಅತಿ ಹೆಚ್ಚು ಶತಕಗಳ ದಾಖಲೆಯನ್ನು ಅವರು ಮುರಿದಿದ್ದಾರೆ. ಇದು ಇಂಗ್ಲೆಂಡ್ನಲ್ಲಿ ಆರಂಭಿಕರಾಗಿ ಅವರ ಮೂರನೇ ಟೆಸ್ಟ್ ಶತಕವಾಗಿದ್ದು, ಇದು ಈಗ ದೇಶದಲ್ಲಿ ಆರಂಭಿಕರಾಗಿ ಎರಡು ಶತಕಗಳನ್ನು ಗಳಿಸಿದ ಗವಾಸ್ಕರ್, ದ್ರಾವಿಡ್, ರವಿಶಾಸ್ತ್ರಿ, ತಮೀಮ್ ಇಕ್ಬಾಲ್ ಮತ್ತು ವಿಜಯ್ ಮರ್ಚೆಂಟ್ ಅವರನ್ನು ಹಿಂದಿಕ್ಕಿದ ಅತಿ ಹೆಚ್ಚು ಶತಕವಾಗಿದೆ. ಇಂಗ್ಲೆಂಡ್ನಲ್ಲಿ ಏಷ್ಯನ್ ಓಪನರ್ಗಳಿಂದ ಅತಿ ಹೆಚ್ಚು ಶತಕಗಳು: 1 -…
ಕೆಎನ್ಎನ್ ಸಿನಿಮಾ ಡೆಸ್ಕ್: ಮಲೆನಾಡೆಂದರೇ ಅದೆಷ್ಟೋ ಜನರಿಗೆ ಎಲ್ಲಿಲ್ಲದ ಪ್ರೀತಿ. ಮಳೆಗಾಲದ ನಡುವೆ ಹಸಿರ ದೃಶ್ಯವೈಭವ ಕಣ್ ತುಂಬಿಕೊಳ್ಳೋದಕ್ಕಂತೂ ತುಂಬಾನೇ ಇಷ್ಟ ಪಡೋರೇ ಹೆಚ್ಚು. ಹೆಜ್ಜೆ ಹೆಜ್ಜೆಗೂ ಹಸಿರ ಧರೆಯಲ್ಲಿ ಕಣ್ ಮನವನ್ನು ಸೆಳೆಯುವ ಸೊಬಗಂತೂ ಎಲ್ಲರನ್ನೂ ಹಿಡಿದಿಟ್ಟುಕೊಂಡು ಬಿಡುತ್ತದೆ. ಹಾಗಾದ್ರೇ ನೀವು ಮಲೆನಾಡಿನ ದೃಶ್ಯ ವೈಭವ ಕಣ್ ತುಂಬಿಕೊಳ್ಳಬೇಕು ಅಂತ ಅಂದ್ರೇ, ಈ ಕೆಳಗಿನ ವೀಡಿಯೋ ತಪ್ಪದೇ ಮೊದಲು ನೋಡಿ.. https://www.youtube.com/watch?v=tpJqimIUwgk ನೋಡಿದ್ರಲ್ವ? ಮಲೆನಾಡಿನ ದೃಶ್ಯ ವೈಭವ ನಿಮ್ಮನ್ನು ಸೆಳೆದಿರಬೇಕು ಅಲ್ವ? ಈ ಮಲ್ನಾಡ್ ಯಾನ ( Malnad Yana ) ಎನ್ನುವಂತದ್ದು ಸಂತೋಷ್ ಸದ್ಗುರು ( Santhosh Sadguru ) ಎಂಬುವರ ಮೊದಲ ವೀಡಿಯೋ ಆಲ್ಪಂ ಸಾಂಗ್. ಬರೋಬ್ಬರಿ 2500 ಮಿ.ಮೀ ಮಳೆಯ ನಡುವೆಯೂ ಮಲೆನಾಡಿನ ರಮಣೀಯ ಪ್ರಕೃತಿಯ ಸೊಬಗನ್ನು ನೋಡುಗರಿಗೆ ಕಣ್ ಮನ ತಣಿಯುವಂತೆ ಸೆರೆ ಹಿಡಿದು ಕೊಟ್ಟಿದ್ದಾರೆ. ಮಲ್ನಾಡ್ ಯಾನ ವೀಡಿಯೋ ಆಲ್ಬಂ ಸಾಂಗ್ ( MALNAD YANA Official Video Song ) ಅನ್ನು ಶಿವಮೊಗ್ಗ…
ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದ (ಐಡಬ್ಲ್ಯೂಟಿ) ಅಡಿಯಲ್ಲಿ ಭಾರತ ಇಸ್ಲಾಮಾಬಾದ್ಗೆ ನ್ಯಾಯಯುತವಾದ ನೀರಿನ ಪಾಲನ್ನು ನಿರಾಕರಿಸಿದರೆ ತಮ್ಮ ದೇಶ ಯುದ್ಧಕ್ಕೆ ಇಳಿಯಲಿದೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ-ಜರ್ದಾರಿ ಸೋಮವಾರ ಹೇಳಿದ್ದಾರೆ. ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ಭಾರತ 1960 ರ ಒಪ್ಪಂದವನ್ನು ಸ್ಥಗಿತಗೊಳಿಸಿತು. ಕಳೆದ ವಾರ ಗೃಹ ಸಚಿವ ಅಮಿತ್ ಶಾ ಐತಿಹಾಸಿಕ ಒಪ್ಪಂದವನ್ನು ಎಂದಿಗೂ ಪುನಃಸ್ಥಾಪಿಸುವುದಿಲ್ಲ ಎಂದು ಘೋಷಿಸಿದರು. ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಅಂತರರಾಷ್ಟ್ರೀಯ ಒಪ್ಪಂದಗಳಿಗೆ ಶಾ ಅವರ “ಲಜ್ಜೆಗೆಟ್ಟ ನಿರ್ಲಕ್ಷ್ಯ” ವನ್ನು ಟೀಕಿಸಿದ ಎರಡು ದಿನಗಳ ನಂತರ ಬಿಲಾವಲ್ ಅವರ ಹೇಳಿಕೆಗಳು ಬಂದವು. ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ ಬಿಲಾವಲ್, ಒಪ್ಪಂದವನ್ನು ಅಮಾನತುಗೊಳಿಸುವ ಭಾರತದ ನಿರ್ಧಾರವನ್ನು ತಿರಸ್ಕರಿಸಿದರು ಮತ್ತು ಪಾಕಿಸ್ತಾನದ ನೀರಿನ ಪಾಲನ್ನು ಪಡೆಯುವುದಾಗಿ ಬೆದರಿಕೆ ಹಾಕಿದರು. ಭಾರತಕ್ಕೆ ಎರಡು ಆಯ್ಕೆಗಳಿವೆ. ನೀರನ್ನು ನ್ಯಾಯಯುತವಾಗಿ ಹಂಚಿಕೊಳ್ಳಿ, ಇಲ್ಲದಿದ್ದರೆ ನಾವು ಎಲ್ಲಾ ಆರು ನದಿಗಳಿಂದ ನೀರನ್ನು ನಮಗೆ ತಲುಪಿಸುತ್ತೇವೆ…
ರಾಜನಿಗೆ ಕಿರೀಟ ಹೇಗೆ ಮುಖ್ಯವೋ ಹಾಗೆಯೇ, ನಮ್ಮ ತಲೆಯ ಮೇಲಿನ ಕೂದಲು ನಮ್ಮಲ್ಲಿ ಪ್ರತಿಯೊಬ್ಬರಿಗೂ ಬಹಳ ಮುಖ್ಯ. ಕೂದಲು ಉದುರುವ ಬಗ್ಗೆ ಚಿಂತಿತರಾಗಿರುವ ಅನೇಕ ಜನರಿದ್ದಾರೆ. ಈ ಬ್ಯೂಟಿ ಟಿಪ್ಸ್ ವಿಭಾಗದಲ್ಲಿ, ಕೂದಲು ಉದುರುವಿಕೆಯಿಂದ ವಿವಿಧ ಮುಜುಗರಗಳನ್ನು ಎದುರಿಸುವ ಜನರು ಆ ಮುಜುಗರದಿಂದ ಹೊರಬರಲು ಮತ್ತು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು ಸಹಾಯ ಮಾಡುವ ಪೌಡರ್ ಅನ್ನು ನಾವು ನೋಡಲಿದ್ದೇವೆ. ಕೂದಲು ವೇಗವಾಗಿ ಬೆಳೆಯುತ್ತದೆ ಕೂದಲು ಉದುರುವುದು ತುಂಬಾ ಸಾಮಾನ್ಯ ಪ್ರಕ್ರಿಯೆ. ಒಂದು ದಿನದಲ್ಲಿ ನಿರ್ದಿಷ್ಟ ಪ್ರಮಾಣದ ಕೂದಲು ಉದುರುವುದು ಅನಿವಾರ್ಯ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ…
ಬೆಂಗಳೂರು: ರಾಜ್ಯದಲ್ಲಿ ವ್ಯಾಪಾರಕ್ಕೆ ಕುಳಿತ ಕಾಂಗ್ರೆಸ್ ಸರಕಾರದ ಸಂತೆ ನಡೆಯುತ್ತಿದೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ; ಇದು ವ್ಯಾಪಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಎಂದು ಟೀಕಿಸಿದರು. ಚುನಾವಣೆ ವೇಳೆ ಪೇ ಸಿ.ಎಂ., ಶೇ 40 ಪರ್ಸೆಂಟ್ ಸರಕಾರ ಎಂದು ನಮ್ಮ ಮೇಲೆ ಆರೋಪ ಮಾಡಿದ್ದರು ಎಂದು ವಿವರಿಸಿದರು. ಈಗ ನಿಮ್ಮ ಮೇಲೆ ಜನರು ಛೀ ಥೂ ಎಂಬಂತೆ ಆರೋಪ ಮಾಡುತ್ತಿದ್ದಾರೆ. ಸಚಿವರ ಬದಲಾಗಿ ಈ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಕೊಟ್ಟು ತೊಲಗಿದರೆ ಬಹುಶಃ ಸ್ವಲ್ಪ ಮಟ್ಟಿನ ಬದಲಾವಣೆಗಳನ್ನು ಕಾಣಬಹುದು ಎಂದು ನುಡಿದರು. ಬಿಹಾರ ಚುನಾವಣೆ ಬೇರೆ ಬರುತ್ತಿದೆ; ಇವರು ಲೂಟಿಗೆ ನಿಂತಿದ್ದಾರೆ ಎಂದು ವಿಶ್ಲೇಷಿಸಿದರು. ಇದೊಂದು ಭ್ರಷ್ಟ ವ್ಯವಸ್ಥೆ ಎಂದು ಟೀಕಿಸಿದರು. ಪ್ರತಿಯೊಬ್ಬರೂ ಭ್ರಷ್ಟಾಚಾರದಲ್ಲೇ ಮುಳುಗಿದ್ದಾರೆ ಎಂದು ದೂರಿದರು. ಸಿದ್ದರಾಮಯ್ಯನವರೇ, ನೀವು…