Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಸೆಪ್ಟಂಬರ್ 22ರಿಂದ ಆರಂಭಗೊಳ್ಳುತ್ತಿರುವಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ 420 ಕೋಟಿ ನಿಗದಿ ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನಾಡಿನ 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಉದ್ದೇಶದಿಂದ ಮಧುಸೂಧನ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ಸಮೀಕ್ಷೆ ಕಾರ್ಯ ಕೈಗೊಳ್ಳಲಿದೆ ಎಂದರು. ಆದಷ್ಟು ಎಚ್ಚರಿಕೆಯಿಂದ, ಪ್ರತಿಯೊಬ್ಬರನ್ನೂ ಒಳಗೊಂಡಂತೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಡಿಸೆಂಬರ್ ಒಳಗಾಗಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಸಮೀಕ್ಷೆ ಕಾರ್ಯ ನಡೆಯಲಿದೆ. 1.75 ಲಕ್ಷ ಶಿಕ್ಷಕರನ್ನು ಈ ಕಾರ್ಯಕ್ಕೆ ಬಳಸಲಾಗುವುದು. ಅವರಿಗೆ ರೂ.20 ಸಾವಿರವರೆಗೆ ಗೌರವ ಸಂಭಾವನೆ ನೀಡಲಾಗುವುದು. ಶಿಕ್ಷಕರ ಸಂಭಾವನೆಗೆ ರೂ. 325 ಕೋಟಿ ವೆಚ್ಚವಾಗಲಿದೆ. ತಾತ್ಕಾಲಿಕವಾಗಿ ರೂ.420 ಕೋಟಿ ಸಮೀಕ್ಷೆ ಕಾರ್ಯಕ್ಕೆ ನಿಗದಿಪಡಿಸಲಾಗಿದೆ. ಅಗತ್ಯ ಬಿದ್ದರೆ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.…
ಬೆಂಗಳೂರು: ಸೆಪ್ಟೆಂಬರ್.22ರಿಂದ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದೆ. ತಂತ್ರಜ್ಞಾನ ಬಳಕೆ ಮೂಲಕ ನಿಖರ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆಯೋಗ ವೈಜ್ಞಾನಿಕವಾಗಿ, ಯಾವುದೇ ಲೋಪವಾಗದಂತೆ ಸಮೀಕ್ಷೆ ಕಾರ್ಯ ನಡೆಸಬೇಕು. ನಿಗದಿತ ಅವಧಿಯ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕು ಎಂದರು. ನಾಗಮೋಹನ ದಾಸ್ ಅವರು ಒಳಮೀಸಲಾತಿ ಸಮೀಕ್ಷೆಗೆ ವಿಶೇಷ ತಂತ್ರಜ್ಞಾನ ಬಳಸಿಕೊಂಡ ರೀತಿಯಲ್ಲಿ ಈ ಸಮೀಕ್ಷೆಯನ್ನು ಸಹ ಕೈಗೊಳ್ಳಲಾಗುವುದು. ಪ್ರತಿಯೊಂದು ಮನೆಯ ವಿದ್ಯುತ್ ಮೀಟರ್ ಆಧಾರದಲ್ಲಿ ಮನೆಯ ಜಿಯೋ ಟ್ಯಾಗ್ ಮಾಡಿ UHID ವಿಶೇಷ ಸಂಖ್ಯೆಯನ್ನು ನಮೂದಿಸಲಾಗುವುದು. ಈಗಾಗಲೇ 1.55 ಲಕ್ಷ ಮನೆಗಳಿಗೆ ಸಂಖ್ಯೆಯನ್ನು ಅಳವಡಿಸಲಾಗಿದೆ. ವಿದ್ಯುತ್ ಸಂಪರ್ಕ ಇಲ್ಲದ ಮನೆಗಳ ಸಮೀಕ್ಷೆಯನ್ನು ಸಹ ಮಾಡಲಾಗುವುದು ಎಂದರು. ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡುವ ಕಾರ್ಯವನ್ನು ಮಾಡಲಾಗುವುದು…
ಬೆಂಗಳೂರು: ನಾನು ಮುಸ್ಲೀಂ ಆಗಿರೋ ಒಂದೇ ಒಂದು ಕಾರಣದಿಂದ ನನಗೆ ಟೆರರಿಸ್ಟ್ ಗಳಿಂದ, ಇಸ್ಲಾಂ ಸಮುದಾಯದಿಂದ ನನ್ನ ಖಾತೆಗೆ ಹಣ ಬಂದಿದೆ ಎಂಬುದಾಗಿ ಆರೋಪಿಸಲಾಗುತ್ತಿದೆ. ಆದರೇ ಇದೆಲ್ಲವೂ ಸುಳ್ಳು. ನನಗೆ ಒಂದೇ ಒಂದು ರೂಪಾಯಿ ಆ ರೀತಿಯ ಹಣ ಬಂದಿಲ್ಲ ಎಂಬುದಾಗಿ ಯೂಟ್ಯೂಬರ್ ಸಮೀರ್.ಎಂ.ಡಿ ಸ್ಪಷ್ಟ ಪಡಿಸಿದ್ದಾರೆ. ಇಂದು ತಮ್ಮ ಇನ್ಸ್ ಸ್ಟಾಗ್ರಾಮ್ ನಲ್ಲಿ ಹೊಸ ವೀಡಿಯೋ ಬಿಡುಗಡೆ ಮಾಡಿರುವಂತ ಅವರು, ನಾನು ಸೌಜನ್ಯ ಪರವಾಗಿ ನಿಂತಾಗಿನಿಂದ ಒಂದಿಲ್ಲೊಂದು ಆರೋಪಗಳನ್ನು ಎದುರಿಸುತ್ತಿದ್ದೇನೆ. ಅವತ್ತು ಹೇಳಿದ್ದೆ, ಇವತ್ತು ಹೇಳ್ತಾ ಇದ್ದೇನೆ. ನನಗೆ ಯಾವುದೇ ರೀತಿಯ ಫಂಡ್ ಬಂದಿಲ್ಲ. ಹಾಗೆ ನಾನು ದುಡ್ಡು ತೆಗೆದುಕೊಂಡು ವೀಡಿಯೋ ಮಾಡಿದ್ದರೇ ಪೊಲೀಸರ ತನಿಖೆಯಲ್ಲಿ ಇಷ್ಟೊತ್ತಿಗೆ ಹೊರಗೆ ಬಂದಿರೋದಲ್ವ? ಇದಕ್ಕೆ ಕಾರಣ ನಾನು ಮುಸ್ಲೀಂ ಆಗಿರೋದು ಎಂದು ಹೇಳಿದ್ದಾರೆ. ಪೊಲೀಸರ ಬಳಿಯಲ್ಲಿ ನನ್ನ ಆಧಾರ್ ಕಾರ್ಡ್ ನಿಂದ ಹಿಡಿದು, ಡ್ರೈವಿಂಗ್ ಲೈಸೆನ್ಸ್, ಫ್ಯಾನ್ ಕಾರ್ಡ್, ನಾನು ಓದಿರುವಂತ ಸ್ಕೂಲ್ ಡೀಟೆಲ್ಸ್, ನನ್ನ ಹತ್ತಿರ ಇರುವಂತ ಕಾರ್ ಆರ್ ಸಿ…
ಬೆಂಗಳೂರು: ನನಗೆ ವಿದೇಶದಿಂದ ಯಾವುದೇ ಫಂಡ್ ಬಂದಿಲ್ಲ ಎಂಬುದಾಗಿ ತನ್ನ ಖಾತೆಯನ್ನು ತೋರಿಸುವ ಮೂಲಕ, ಹೊಸ ವೀಡಿಯೋವನ್ನು ಯೂಟ್ಯೂಬರ್ ಸಮೀರ್.ಎಂ.ಡಿ ಬಿಡುಗಡೆ ಮಾಡಿದ್ದಾರೆ. ಯೂಟ್ಯೂಬರ್ ಸಮೀರ್ ಎಂ.ಡಿ ಇದೀಗ ಇನ್ಸ್ ಟಾಗ್ರಾಮ್ ನಲ್ಲಿ ಹೊಸ ವೀಡೀಯೋ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ನನಗೆ ವಿದೇಶದಿಂದ ಯಾವುದೇ ಫಂಡ್ ಬಂದಿಲ್ಲ. ಬ್ಯಾಂಕ್ ದಾಖಲೆ ತೋರಿಸಿ ವೀಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಎಸ್ಐಟಿ ವಿಚಾರಣೆ ಬಳಿಕ ಸಮೀರ್ ಮೊದಲ ಮಾತು ಇದಾಗಿದೆ. ವೀಡಿಯೋದಲ್ಲಿ ನನಗೆ ಇಸ್ಲಾಂ ದೇಶಗಳಿಂದ, ಟೆರರಿಸ್ಟ್ ನಿಂದ ಕೋಟ್ಯಂತರ ಹಣ ಬಂದಿದೆ ಎಂಬುದಾಗಿ ಆರೋಪಿಸಲಾಗಿದೆ. ಆದರೇ ನಾನು ಮುಸ್ಲೀಂ ಆಗಿರುವ ಕಾರಣ ಈ ರೀತಿಯ ಆರೋಪ ಮಾಡಲಾಗುತ್ತಿದೆ. ಆದರೇ ನನ್ನ ಬ್ಯಾಂಕ್ ಖಾತೆಗೆ ಆ ರೀತಿಯ ಯಾವುದೇ ಹಣ ಬಂದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ನಾನು ಸೌಜನ್ಯ ಪರವಾಗಿ ನಿಂತಾಗಿನಿಂದ ಇಂತಹ ಆರೋಪಗಳನ್ನು ಎದುರಿಸುತ್ತಿದ್ದೇನೆ. ಒಂದು ಸಾವಿಗೆ ನ್ಯಾಯ ಕೊಡಿಸೋದಕ್ಕೆ ನಿಂತ ನಾನು ಇಷ್ಟು ಕೀಳು ಮಟ್ಟಕ್ಕೆ ಇಳಿಯುವುದಿಲ್ಲ. ನನ್ನ ಬ್ಯಾಂಕ್ ಖಾತೆಯ ಎಲ್ಲಾ…
ಉಡುಪಿ: ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು. ನೀರೆ ಗ್ರಾಮ ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರವನ್ನ ಹಿಂದು ವಿರೋಧಿ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಸರ್ಕಾರದ ವಿರುದ್ಧ ಆರೋಪ ಮಾಡಲು ವಿಪಕ್ಷಗಳಿಗೆ ಬೇರೆ ವಿಚಾರ ಇಲ್ಲ. ರಾಜ್ಯ ಸರ್ಕಾರ ಬೀಳುತ್ತದೆ, ಗ್ಯಾರಂಟಿ ಯೋಜನೆಗಳು ಜಾರಿ ಆಗಲ್ಲ, ಒಂದು ವೇಳೆ ಜಾರಿಯಾದರೂ ನಾಲ್ಕು ತಿಂಗಳಿಗೆ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ಅಪಪ್ರಚಾರ ಮಾಡಲಾಯಿತು. ರಾಜ್ಯದ ಜನತೆಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲ ಮಾಡಿಕೊಟ್ಟಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು. ಬಿಜೆಪಿ ಶಾಸಕ ಸಿ.ಟಿ.ರವಿ ವಿರುದ್ಧ ಎಫ್ ಐಆರ್ ದಾಖಲಿಸಿರುವುದಕ್ಕೆ ವಿಪಕ್ಷಗಳು ಖಂಡಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅವರು…
ಕೋಲಾರ: ಶಾಲೆಗೆ ಬಾರದ ವಿದ್ಯಾರ್ಥಿಯನ್ನ ಪ್ರಶ್ನಿಸಿದ್ದಕ್ಕೆ ಕೋಪಗೊಂಡು ಆತನ ತಂದೆ ಶಿಕ್ಷಕಿಯ ಮೇಲೆ ಹಲ್ಲೆ ಮಾಡಿರುವಂತ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕ್ಷೇತ್ರನಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಮಂಜುಳಾ ಮೇಲೆ ಹಲ್ಲೆ ಮಾಡಲಾಗಿದೆ. ಶಾಲೆಗೆ ಬಾರದ ವಿದ್ಯಾರ್ಥಿಯನ್ನು ಪ್ರಶ್ನಿಸಿದದಕ್ಕೆ ವಿದ್ಯಾರ್ಥಿ ತಂದೆ ಚೌಡಪ್ಪ ಎಂಬುವರು ಶಿಕ್ಷಕಿ ಮೇಲೆ ಹಲ್ಲೆ ಮಾಡಿದಂತ ಆರೋಪ ಕೇಳಿ ಬಂದಿದೆ. ಕಳೆದ ಎರಡು ದಿನದಿಂದ ಶಾಲೆಗೆ ಚೌಡಪ್ಪ ಪುತ್ರ ಚರಣ್ ಗೈರಾಗಿದ್ದರು. ಇದನ್ನು ವಿಚಾರಿಸಿದ್ದರ ವೇಳೆಯಲ್ಲಿ ಗಲಾಟೆಯಾಗಿ ಶಿಕ್ಷಕಿ ಮಂಜುಳಾ ಮೇಲೆ ಚೌಡಪ್ಪ ಹಲ್ಲೆ ಮಾಡಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ. ವಿದ್ಯಾರ್ಥಿ ಚರಣ್ ತಂದೆ ಚೌಡಪ್ಪ ಹಲ್ಲೆ ಮಾಡಿದ್ದರಿಂದ ಸರ್ಕಾರಿ ಶಾಲೆಯ ಶಿಕ್ಷಕಿ ಮಂಜುಳಾ ತಲೆಗೆ ಬಾಗಿಲು ಬಡಿದು ಗಾಯವಾಗಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿ್ದದಾರೆ. https://kannadanewsnow.com/kannada/whoever-makes-hate-speech-will-face-action-under-the-law-minister-lakshmi-hebbalkar/ https://kannadanewsnow.com/kannada/americas-president-trump-assassination-case-reward-announced-for-those-who-provided-clues-to-the-assassin/
ಅಮೇರಿಕಾ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತರನನ್ನು ನಿನ್ನೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ರೀತಿಯಾಗಿ ಗುಂಡಿಟ್ಟು ಹತ್ಯೆ ಮಾಡಿದಂತ ಆರೋಪಿಯ ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಎಫ್ ಬಿ ಐ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್ ಕಾರ್ಯಕ್ರಮವೊಂದರಲ್ಲಿ ಗುಂಡಿಕ್ಕಿ ಹತ್ಯೆಗೈಯಲಾಗಿದೆ. ಸೆಪ್ಡೆಂಬರ್.10ರಂದು ವಾಷಿಂಗ್ಟನ್ ನ ಉತಾಹ್ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು ಎಂದಿದೆ. ಚಾರ್ಲಿ ಕಿರ್ಕ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಆರೋಪಿಯ ಸುಳಿವು ನೀಡಿದವರಿಗೆ 1 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ ಎಫ್ ಬಿ ಐ ಘೋಷಿಸಿದೆ. ಈ ಮೂಲಕ ತನ್ನ ಆಪ್ತ ಚಾರ್ಲಿ ಕಿರ್ಕ್ ಹತ್ಯೆ ಆರೋಪಿಯ ಪತ್ತೆಗೆ ಅಮೇರಿಕಾ ಅಧ್ಯಕ್ಷ ಟ್ರಂಪ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. https://kannadanewsnow.com/kannada/whoever-makes-hate-speech-will-face-action-under-the-law-minister-lakshmi-hebbalkar/ https://kannadanewsnow.com/kannada/shivamogga-due-to-power-outage-in-this-area-of-the-district-on-september-16/
ಉಡುಪಿ: ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು. ನೀರೆ ಗ್ರಾಮ ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರವನ್ನ ಹಿಂದು ವಿರೋಧಿ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಸರ್ಕಾರದ ವಿರುದ್ಧ ಆರೋಪ ಮಾಡಲು ವಿಪಕ್ಷಗಳಿಗೆ ಬೇರೆ ವಿಚಾರ ಇಲ್ಲ. ರಾಜ್ಯ ಸರ್ಕಾರ ಬೀಳುತ್ತದೆ, ಗ್ಯಾರಂಟಿ ಯೋಜನೆಗಳು ಜಾರಿ ಆಗಲ್ಲ, ಒಂದು ವೇಳೆ ಜಾರಿಯಾದರೂ ನಾಲ್ಕು ತಿಂಗಳಿಗೆ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ಅಪಪ್ರಚಾರ ಮಾಡಲಾಯಿತು. ರಾಜ್ಯದ ಜನತೆಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲ ಮಾಡಿಕೊಟ್ಟಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಬಿಜೆಪಿ ಶಾಸಕ ಸಿ.ಟಿ.ರವಿ ವಿರುದ್ಧ ಎಫ್ ಐಆರ್ ದಾಖಲಿಸಿರುವುದಕ್ಕೆ ವಿಪಕ್ಷಗಳು ಖಂಡಿಸಿರುವ…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11ಕೆವಿ ಹೆಚ್.ಎ.ಎಲ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 13.09.2025 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಸ್ರೋ (ಮಾರತ್ತಹಳ್ಳಿ ಮತ್ತು ಎನ್ಎಎಲ್), ಬಾಗ್ಮನೆ ಟೆಕ್ ಪಾರ್ಕ್, ಜಿಟಿರೆ, ಡಬ್ಲ್ಯುಟಿಸಿ, 220 ಕೆವಿ ಹಾಲ್ ಎಹೆಚ್ಟಿ, ಇಂದಿರಾನಗರ ಡಿಫೆನ್ಸ್ ಕಾಲೋನಿ, 100 ಅಡಿ ರಸ್ತೆ, ಇಂದಿರಾನಗರ 1 ನೇ ಮತ್ತು 2 ನೇ ಹಂತ, 80 ಅಡಿ ರಸ್ತೆ, ಸಿಎಮ್ಹೆಚ್ ರಸ್ತೆ, ಕೃಷ್ಣ ದೇವಸ್ಥಾನ ರಸ್ತೆ ಎಚ್ ಕಾಲೋನಿ, ಜೀವನ್ ಭೀಮಾ, ಮಠನಗರ 1 ಜೀವನ್ ಭೀಮನಗರ, ಬಿಡಿ ಲೇಔಟ್, ಎಲ್ಐಸಿ ಕಾಲೋನಿ, ತಿಪ್ಪನಸಂದ್ರ, ರಮೇಶ್ ನಗರ, ಡಿಫೆನ್ಸ್ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ಟಾಟಾ ಹೌಸಿಂಗ್, ರಾಜವಂಶ, ಬಿಇಎಂಎಲ್, ಎಡಿಎ, ಮಲ್ಲೇಶಪಾಳ್ಯ, ಮಾರುತಿ ನಾರ್, ಕಲ್ಲಪ್ಪ ಲೇಔಟ್, ರಾಜಣ್ಣ ಮತ್ತು ಎಲ್ ಎನ್ ರೆಡ್ಡಿ ಕಾಲೋನಿ, ಬಸವನಗರ, ಅಣ್ಣಾಸಂದ್ರ ಪಾಳ್ಯ, ಜೌಟ್, ಜೌಟ್ ರಸ್ತೆ,…
ಶಿವಮೊಗ್ಗ : ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.16 ರಂದು ಬೆಳಗ್ಗೆ 09.00 ಗಂಟೆಯಿಂದ ಸಂಜೆ 6.00 ರವರೆಗೆ ಈ ವ್ಯಾಪ್ತಿಗೆ ಸೇರಿರುವ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪಿಯರ್ಲೈಟ್, ಪೇಪರ್ ಪ್ಯಾಕೇಜ್,ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಗಾಂಧಿಬಜಾರ್, ಬುದ್ಧನಗರ, ಆರ್.ಎಂ.ಎಲ್.ನಗರ, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ನ್ಯೂಮಂಡ್ಲಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ಹತ್ತಿರ, ಎನ್.ಟಿ.ರಸ್ತೆ, ಹರಕೆರೆ, ಹಳೇಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಸವಾಯಿಪಾಳಯ, ಕುರುಬರ ಪಾಳ್ಯ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್ನಗರ 1 ರಿಂದ 14ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ…