Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವಂತ 402 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯದಾದ್ಯಂತ ಮನೆಮನೆಗೆ ಪೊಲೀಸ್ ನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಸಾರ್ವಜನಿಕರಿಗೆ ತೊಂದರೆ ಇದ್ದರೆ, ಪೊಲೀಸರ ಸಹಾಯ ಬೇಕಿದ್ದರೆ ಆಲಿಸಲಿದ್ದಾರೆ ಪೊಲೀಸರು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಬೇಕು. ಪಾಲಕರ ಸಭೆಗಳಲ್ಲಿ ಪೊಲೀಸರು ಭಾಗವಹಿಸಬೇಕು. ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮ, ಟ್ರಾಫಿಕ್ ನಿಯಮಗಳು ಸೇರಿದಂತೆ ಕಾನೂನಿನ ಅರಿವು ಮೂಡಿಸುವ ಕೆಲಸವಾಗಬೇಕು. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಯಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಸುಮಾರು 15 ಸಾವಿರ ಹುದ್ದೆಗಳು ಖಾಲಿ ಇವೆ. ಅದನ್ನು ಭರ್ತಿ ಮಾಡಲಾಗುವುದು. ಈಗಾಗಲೇ 545 ಪಿಎಸ್ಐಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್ಐ ಫಲಿತಾಂಶ ಬಾಕಿ ಇದೆ. ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು. ಇದರಲ್ಲಿ 219 ಪಿಎಸ್ಐಗಳನ್ನು ಬೆಂಗಳೂರು ನಗರಕ್ಕೆ ನೀಡಲಾಗುವುದು ಎಂದು ತಿಳಿಸಿದರು. https://twitter.com/KarnatakaVarthe/status/1927750736135279076
ಬೆಂಗಳೂರು: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವಂತ ನಟ ಕಮಲ್ ಹಾಸನ್ ಬಹಿರಂಗವಾಗಿ ಕ್ಷಮೆ ಕೇಳಬೇಕು. ಇಲ್ಲದೇ ಹೋದರೇ ಕರ್ನಾಟಕದಲ್ಲಿ ಅವರ ಅಭಿನಯದ ಥಗ್ ಲೈಫ್ ಸಿನಿಮಾವನ್ನು ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಅಂತ ನಿರ್ಮಾಪಕ ಸಾರಾ ಗೋವಿಂದ್ ಎಚ್ಚರಿಕೆ ನೀಡಿದ್ದಾರೆ. ಇಂದು ಫಿಲ್ಮಂ ಚೇಂಬರ್ ನಲ್ಲಿ ನಡೆದಂತ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ನಮಗೆ ಯಾರಿಗೂ ಕಮಲ್ ಹಾಸನ್ ಬಗ್ಗೆ ಕನಿಕರವಿಲ್ಲ. ಇಂದು ಅಥವಾ ನಾಳೆಯೊಳಗೆ ನಟ ಕಮನಲ್ ಹಾಸನ್ ಕನ್ನಡಿಗರನ್ನು ಕ್ಷಮೆ ಕೇಳಬೇಕು. ಒಂದು ವೇಳೆ ಬಹಿರಂಗವಾಗಿ ಕ್ಷಮೆ ಕೇಳದೇ ಇದ್ದರೇ ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಅವರ ಥಗ್ ಲೈಫ್ ಸಿನಿಮಾ ರಿಲೀಸ್ ಗೆ ಅವಕಾಶ ನೀಡುವುದಿಲ್ಲ ಎಂದರು. ಫಿಲ್ಮಂ ಚೇಂಬರ್ ಅಧ್ಯಕ್ಷ ನರಸಿಂಹಲು ಮಾತನಾಡಿ, ನಟ ಕಮಲ್ ಹಾಸನ್ ಹೇಳಿಕೆಯನ್ನು ಕರವೇ, ಹಲವಾರು ಕನ್ನಡಪರ ಸಂಘಟನೆಗಳು ಖಂಡಿಸಿದ್ದಾವೆ. ಅಲ್ಲದೇ ಅವರ ಅಭಿನಯದ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ನಿಷೇಧಿಸುವಂತೆ ಒತ್ತಾಯಿಸಿದ್ದಾರೆ. ಕಮಲ್ ಹಾಸನ್ ಮಾಡಿರುವ ತಪ್ಪು ಮನವರಿಕೆ ಮಾಡಿಸಿ…
ಬೆಂಗಳೂರು: ಚಿತ್ತಾಪುರದಲ್ಲಿ ನನ್ನ ದಿಗ್ಬಂಧನ, ಅಹಿತಕರ ಘಟನೆಗಳ ಕುರಿತು ಡಿ.ಜಿ, ಗೃಹ ಸಚಿವ, ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿಗೆ ದೂರು ಕೊಟ್ಟಿದ್ದೇವೆ. ಇದುವರೆಗೂ ಏನೂ ಕ್ರಮ ಜರುಗಿಸಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿತ್ತಾಪುರದಲ್ಲಿ 5 ಗಂಟೆ ನನ್ನನ್ನು ಕೂಡಿ ಹಾಕಿದ್ದರು. ನಮ್ಮ ಜನರು ಬರದಂತೆ ತಡೆದರು. ನನ್ನ ಕಾರಿನ ಮೇಲೆ ಮಸಿ ಸುರಿದರು. ಕಲ್ಲುಗಳನ್ನು ಜಮಾಯಿಸಿ ಇಟ್ಟಿದ್ದರು. ಮೊಟ್ಟೆ ತೂರಲು, ಕಲ್ಲು ತೂರಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದರು ಎಂದು ಗಮನಕ್ಕೆ ತಂದರು. ನಾನು ಅಲ್ಲಿಂದಲೇ ಗೃಹ ಸಚಿವರು, ಎಡಿಜಿಪಿಗೆ ಕರೆ ಮಾಡಿ ಮಾತನಾಡಿದೆ. ಸುಮಾರು 10 ಸಾರಿ ಎಸ್ಪಿಗೆ ಮಾತನಾಡಿದ್ದೆ ಎಂದು ವಿವರಿಸಿದರು. ಅಡಿಷನಲ್ ಎಸ್ಪಿ ಬಂದವರು 5 ತಾಸು ನಮ್ಮ ಜೊತೆಗಿದ್ದರು. ಆದರೆ, ನನ್ನನ್ನು ನಿಂದಿಸುವವರ ವಿರುದ್ಧ ಕ್ರಮ ಕೈಗೊಂಡಿಲ್ಲ; ಕೇಳಿದರೆ ‘ಸಾರ್ ಅರ್ಥ ಮಾಡ್ಕೊಳ್ಳಿ; ನಮಗೆ ಒತ್ತಡ ಇದೆ’…
ಬೆಂಗಳೂರು: ಹುಬ್ಬಳ್ಳಿ ಪೊಲಿಸ್ ಠಾಣೆ ಮೇಲೆ ದಾಳಿ ಮಾಡಿರುವ ಪ್ರಕರಣವನ್ನು ವಾಪಸ್ ಪಡೆದಿರುವ ರಾಜ್ಯ ಸರ್ಕಾರದ ಕ್ರಮ ಸರಿಯಿಲ್ಲ ಎಂದು ಹೈಕೋರ್ಟ್ ಛೀಮಾರಿ ಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇಂದು ಹೈಕೋರ್ಟ್ ಪೀಠ ಹುಬ್ಬಳ್ಳಿ ಗಲಭೆ ಪ್ರಕರಣದ ಕುರಿತು ತೀರ್ಪು ನೀಡಿದೆ. ರಾಜ್ಯ ಸರ್ಕಾರ ಕ್ರಿಮಿನಲ್ ಕೇಸ್ ಹಿಂಪಡೆದಿತ್ತು. ಆ ಕ್ರಮ ಸರಿಯಲ್ಲ ಎಂದು ಆದೇಶ ಮಾಡಿದೆ. ನಾನು ಹಿಂದೆ ಹೇಳಿದ್ದೆ ಪೊಲೀಸ್ ಠಾಣೆ ಮೇಲೆ ದಾಳಿ ಮಾಡುವ ಪ್ರಕರಣ ವಾಪಸ್ ಪಡೆಯುವುದು ಸರಿಯಲ್ಲ. ಆದರೂ ರಾಜಕೀಯ ಒತ್ತಡಕ್ಕೆ, ಓಲೈಕೆ ರಾಜಕಾರಣಕ್ಕೆ ಕೇಸ್ ವಾಪಸ್ ಪಡೆದಿದ್ದರು. ನ್ಯಾಯಾಲಯ ಸರಿಯಾದ ಛೀಮಾರಿ ಹಾಕಿದೆ. ರಾಜ್ಯದ ಸಚಿವ ಸಂಪುಟ, ರಾಜ್ಯದ ಹಿತದೃಷ್ಟಿಯಿಂದ ಕೆಲಸ ಮಾಡಬೇಕೇ ಹೊರತು. ಒಲೈಕೆ ರಾಜಕಾರಣ ಮಾಡಬಾರಬಾರದು. ಇನ್ನಾದರೂ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಮಾಡಿದವರ ಮೇಲೆ ಕ್ರಮ ಆಗಬೇಕು ಎಂದು ಆಗ್ರಹಿಸಿದರು. ಕಾನೂನು ಸುವ್ಯವಸ್ಥೆ…
ಬೆಂಗಳೂರು: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗುತ್ತೇವೆ ಎಂದರು. ಡಾ.ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ. ಅಂಬೇಡ್ಕರ್ ಅವರು ಕೊಟ್ಟಂತಹ ಸಂವಿಧಾನವನ್ನೂ ಎಲ್ಲರೂ ಪಾಲಿಸಬೇಕು ಎಂದರು. ಜಾತಿ, ವರ್ಗ ಮುಕ್ತ ಸಮ ಸಮಾಜ ನಿರ್ಮಾಣ ಆಗಬೇಕು ಎನ್ನುವುದು ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದರು. 1992-93 ರಲ್ಲಿ…
ಬೆಂಗಳೂರು : ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರನ್ನು ಪಾಕಿಸ್ತಾನಿ ಎಂದು ನಿಂದಿಸಿರುವ ಎನ್ ರವಿಕುಮಾರ್ ಹಾಗೂ ಗ್ರಾಮೀಣಾಭಿವೃದ್ದಿ ಸಚಿವರಾದ ಪ್ರಿಯಾಂಕ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ದ ಕಾನೂನಾತ್ಮಕ ಹಾಗೂ ಸಂವಿಧಾನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ವಿಧಾನ ಪರಿಷತ್ತಿನ ಸದಸ್ಯರ ನಿಯೋಗ ಇಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದೆ. ವಿಧಾನಪರಿಷತ್ನ ಆಡಳಿತ ಪಕ್ಷದ ನಾಯಕರಾದ ಎನ್ ಎಸ್ ಭೋಸರಾಜು, ಹಾಗೂ ವಿಧಾನಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಅವರ ನೇತೃತ್ವದ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿಯಾಗಿ ದೂರು ಸಲ್ಲಿಸಿತು. ವಿಧಾನಪರಿಷತ್ ಆಡಳಿತ ಪಕ್ಷದ ನಾಯಕರಾದ ಎನ್ ಎಸ್ ಭೋಸರಾಜು ಅವರು ಮಾತನಾಡಿ, ವಿಧಾನಪರಿಷತ್ ಸದಸ್ಯರುಗಳಾದ ಎನ್ ರವಿಕುಮಾರ್ ಹಾಗೂ ಛಲವಾದಿ ನಾರಾಯಣ ಸ್ವಾಮಿ ಬೀದಿಯಲ್ಲಿ ಸಂವಿಧಾನ ವಿರೋಧಿಯಾಗಿ ಮಾತನಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಹೇಳಿಕೆ ನೀಡುವುದು ಸಮಂಜಸವಲ್ಲ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವ ಬಿಜೆಪಿ ಸದಸ್ಯರು ಸಮಾಜವನ್ನ ಹೊಡೆಯುವ ಕೆಲಸ ಮಾಡ್ತಿದ್ದಾರೆ.…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಮಳೆಗಾಲದಲ್ಲಿ ವಿದ್ಯುತ್, ಕುಡಿಯುವ ನೀರು ಪೂರೈಕೆ ಸೇರಿದಂತೆ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಮಳೆಗಾಲ ಆರಂಭಗೊಳ್ಳುತ್ತಿದೆ. ಡೆಂಗ್ಯೂ ಹೆಚ್ಚಳವಾಗುವ ಮುನ್ನವೇ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಾಗರ ನಗರ, ತಾಲ್ಲೂಕಿನಲ್ಲಿ ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಕ್ರಮವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಇನ್ನೂ ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದಾವೆ. ಶಿವಮೊಗ್ಗದಲ್ಲೂ ಒಂದು ಕೇಸ್ ಪತ್ತೆಯಾಗಿದೆ. ಸಾಗರ ತಾಲ್ಲೂಕಿನಲ್ಲಿ ಕೋರೋನಾ ಬಗ್ಗೆ ಮುಂಜಾಗ್ರತೆ ವಹಿಸುವಂತೆ ತಿಳಿಸಿದರು. ಈ ವೇಳೆ ಪ್ರತಿಕ್ರಿಯಿಸಿದಂತ ಶಾಸಕರ ಆಪ್ತ ಕಾರ್ಯದರ್ಶಿ ಟಿ.ಪಿ ರಮೇಶ್ ಅವರು ಕೊರೋನಾ ಪತ್ತೆಗಾಗಿ 600 ಕಿಟ್ ತರಿಸಲಾಗಿದೆ. ಸಕಲ ಸಿದ್ಧತೆಯನ್ನು ತಾಲ್ಲೂಕು ಆಡಳಿತ ಮಾಡಿಕೊಂಡಿದೆ ಎಂದರು. ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಸಾಗರ ನಗರದಲ್ಲಿ ಡೆಂಗ್ಯೂ…
ಬೆಂಗಳೂರು: ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿರುವಂತ ನಟ ಕಮಲ್ ಹಾಸನ್ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇಂತಹ ನಟ ಕಮಲ್ ಹಾಸನ್ ನಾಳೆಯೊಳಗೆ ಕನ್ನಡಿಗರ ಕ್ಷಮೆಯಾಚನೆಗೆ ಫಿಲ್ಮಂ ಚೇಂಬರ್ ಅಧ್ಯಕ್ಷ ಗಡುವು ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಅವರು, ನಾಳೆಯೊಳಗೆ ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೇ ಕಮಲ್ ಹಾಸನ್ ನಟಿಸಿದ ಚಿತ್ರಗಳನ್ನು ಕರ್ನಾಟಕದಲ್ಲಿ ಬಹಿಷ್ಕರಿಸಲಾಗುತ್ತದೆ ಎಂಬುದಾಗಿ ಎಚ್ಚರಿಸಿದರು. ಒಂದು ವೇಳೆ ನಾಳೆಯೊಳಗೆ ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳದೇ ಹೋದರೇ, ಕರ್ನಾಟಕದಲ್ಲಿ ಥಗ್ ಲೈಫ್ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂಬುದಾಗಿ ಫಿಲ್ಮಂ ಚೇಂಬರ್ ಅಧ್ಯಕ್ಷ ನರಸಿಂಹಲು ಎಚ್ಚರಿಸಿದ್ದಾರೆ. https://kannadanewsnow.com/kannada/immediately-implement-communal-violence-control-task-force-in-the-state-home-minister-dr-g-parameshwara/
ಬೆಂಗಳೂರು : ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸಿ, ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಸಾರಿ ಈರೀತಿ ಆಗುತ್ತಿದ್ದರೆ ಸುಮ್ಮನೆ ಕೂರಲು ಆಗುವುದಿಲ್ಲ. ಕಾನೂನನ್ನು ಮತ್ತಷ್ಟು ಬಿಗಿ ಮಾಡುತ್ತೇವೆ ಎಂದರು. ಕಳೆದ ಬಾರಿ ಘಟನೆ ನಡೆದಾಗ ಪರಿಸ್ಥಿತಿ ಅರ್ಥೈಸಿಕೊಂಡು, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಪರಿಶೀಲನೆ ಮಾಡಿ, ತಕ್ಷಣ ಜಾರಿಗೆ ಬರುವ ನಿಟ್ಟಿನಲ್ಲಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕ್ರಮ ತೆಗೆದುಕೊಳ್ಳುತ್ತಾರೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸುತ್ತೇವೆ. ಕೋಮು ಹಿಂಸೆಯನ್ನು ಹತ್ತಿಕ್ಕಲು, ಸರ್ಕಾರ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು. ನಕ್ಸಲ್ ನಿಗ್ರಹ ಕಾರ್ಯಪಡೆಯಲ್ಲಿನ ಅರ್ಧ ಸಿಬ್ಬಂದಿಗಳನ್ನು ಕೋಮು ಹಿಂಸೆ ನಿಗ್ರಹ ಪಡೆಗೆ…
ಬೆಂಗಳೂರು : ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ, ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ತ್ವರಿತವಾಗಿ ಸ್ಪಂದಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಳೆಹಾನಿ ಬಗ್ಗೆ ಚರ್ಚಿಸಲು ಉಡುಪಿ ಜಿಲ್ಲೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಚಿವರು, ಈ ಬಾರಿ ಅವಧಿಗೂ ಮುನ್ನವೇ ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಮಳೆ ನಿರೀಕ್ಷೆಗಿಂತ ಹೆಚ್ಚಾಗಿ ಬಿದ್ದಿದೆ. ಜನವರಿಯಿಂದ ಈವರೆಗೆ ವಾಡಿಕೆಯಂತೆ 177.4 ಮಿ.ಮೀ ಮಳೆಯಾಗಬೇಕಿತ್ತು. ಈ ಬಾರಿ 801.7 ಮಿ.ಮೀ ಅಂದರೆ ಮೂರು ಪಟ್ಟು ಹೆಚ್ಚು ಮಳೆಯಾಗಿದೆ. ಮುಂದಿನ ಮೂರು ತಿಂಗಳ ಮಳೆಗಾಲದಲ್ಲಿ ಉಂಟಾಗುವ ಪ್ರವಾಹ, ಅತಿವೃಷ್ಠಿ ಸಮಸ್ಯೆಗಳನ್ನು ಎದುರಿಸಲು ಅಗತ್ಯವಾಗಿರುವ ಎಲ್ಲಾ ರೀತಿಯ ಪರಿಕರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಂಡು ಸಮರ್ಪಕವಾಗಿ ಎದುರಿಸಲು ಸನ್ನದ್ಧರಾಗಿರಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ಹಾಗೂ ತಾಲೂಕು ಮಟ್ಟಗಳಲ್ಲಿ ಕಂಟ್ರೋಲ್…