Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ನೈರುತ್ಯ ರೈಲ್ವೆಯಿಂದ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದರೇ, ಮತ್ತೆ ಕೆಲ ರೈಲುಗಳ ಸಂಚಾರವನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಾಣೇಶ್ ಕೆ.ಎನ್ ಅವರು ಮಾಹಿತಿ ನೀಡಿದ್ದಾರೆ. ಈ ರೈಲುಗಳ ಮಾರ್ಗ ಬದಲಾವಣೆ /ಭಾಗಶಃ ರದ್ದು ಗುಂಟೂರು-ನಂದ್ಯಾಲ ವಿಭಾಗದಲ್ಲಿ ಗಿದ್ದಲೂರು-ದಿಗುವಮೆಟ್ಟ ಜೋಡಿಮಾರ್ಗ ಕಾಮಗಾರಿ ನಡೆಯುವ ಕಾರಣ ದಕ್ಷಿಣ ಮಧ್ಯ ರೈಲ್ವೆಯು ಈ ಕೆಳಗಿನ ರೈಲುಗಳ ಮಾರ್ಗ ಬದಲಾವಣೆ /ಭಾಗಶಃ ರದ್ದತಿಗೆ ಸೂಚನೆ ನೀಡಿದೆ: ದಿನಾಂಕ 18.09.2024 ರಂದು ಹೊರಡುವ ರೈಲು ಸಂಖ್ಯೆ 22831 ಹೌರಾ – ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ರೈಲು ಸೇವೆಯನ್ನು ಧರ್ಮಾವರಂ ಮತ್ತು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು, ಈ ರೈಲು ಕೃಷ್ಣ ಕೆನಾಲ್, ಗೂಡೂರ್, ರೇಣಿಗುಂಟ, ತಿರುಪತಿ, ಪಾಕಾಲ ಮತ್ತು ಧರ್ಮಾವರಂ ಮಾರ್ಗದ ಮೂಲಕ ಸಂಚರಿಸಲಿರುವುದರಿಂದ ಗುಂಟೂರು,…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧಿಕಾರಾವಧಿ ಮುಕ್ತಾಯಗೊಂಡರೂ, ಚುನಾವಣೆ ನಡೆದಿಲ್ಲ. ಚುನಾವಣೆಗೆ ಆಡಳಿತ ಅಧಿಕಾರಿಗಯನ್ನು ನೇಮಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸಲು ಕ್ರಮ ವಹಿಸುವಂತೆ ಸೂಚಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಪತ್ರ ಬರೆದು ಮನವಿ ಮಾಡಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿಯ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024 ರಿಂದ 2029ನೇ ಸಾಲಿನವರೆಗೆ ಆಡಳಿತ ಮಂಡಳಿಯ ಚುನಾವಣೆಯು ಬಾಕಿ ಇರುತ್ತದೆ. ಪ್ರಸ್ತುತ ಇರುವ ಸಂಘದ ಆಡಳಿತ ಮಂಡಳಿಯ ಅವಧಿಯು ಮುಕ್ತಾಯಗೊಂಡಿದ್ದು, ಸಂಘ ಸಂಸ್ಥೆಗಳ ಕಾಯಿದೆ ಮತ್ತು ನಿಯಮಾವಳಿಗಳ ಅನ್ವಯ ರಾಜ್ಯ ಸರ್ಕಾರಿ ನೌಕರರ ಸಂಘದ ಆಡಳಿತ ಮಂಡಳಿಯ ಚುನಾವಣೆಯು ನಿಗದಿತ ಸಮಯದಲ್ಲಿ ನಡೆದಿರುವುದಿಲ್ಲ ಎಂದಿದ್ದಾರೆ. ಸಂಘದ ಬೈಲಾ ಅನ್ವಯ ಈಗಿನ ಆಡಳಿತ ಮಂಡಳಿಯು ನಿಗದಿತ ಸಮಯದ ಒಳಗೆ…
ಬೆಳಗಾವಿ : ಮುಖ್ಯಮಂತ್ರಿ ಸ್ಥಾನದ ವಿಚಾರ ಗಲ್ಲಿ, ಬೀದಿಗಳಲ್ಲಿ ಮಾತನಾಡುವಂತದ್ದಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಗಟ್ಟಿಯಾಗಿದ್ದಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಎನ್ನುವುದು ಇದೆ. ಶಿಸ್ತು ಎನ್ನುವುದೂ ಇದೆ. ನಾನು ಕೂಡ ಪಕ್ಷದ ಶಿಸ್ತಿನ ಸಿಪಾಯಿ, ಇಂಥ ವಿಚಾರಗಳನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ನಮ್ಮ ಪಕ್ಷದ 135 ಶಾಸಕರು ತೀರ್ಮಾನಿಸುತ್ತಾರೆ ಎಂದು ಸಚಿವರು ಹೇಳಿದರು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವವರೆಗೆ, ಆಯ್ಕೆಯಾದ ಶಾಸಕರು ತೀರ್ಮಾನ ತೆಗೆದುಕೊಳ್ಳುವವರೆಗೆ ಸಿಎಂ ಸ್ಥಾನದ ಬದಲಾವಣೆಯ ಪ್ರಶ್ನೆ ಬರುವುದಿಲ್ಲ. ಇಂಥ ವಿಚಾರಗಳನ್ನ ಬೀದಿಯಲ್ಲಿ, ಗಲ್ಲಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದರು. ಮುಂದಿನ ಸಿಎಂ ಲಕ್ಷ್ಮೀ ಹೆಬ್ಬಾಳಕರ್ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಪ್ರಶ್ನಿಸಿದಾಗ, ಅದಕ್ಕೆಲ್ಲಾ ಯಾವುದೇ ಬೆಲೆಯಿಲ್ಲ ಎಂದು ಪ್ರತಿಕ್ರಿಯಿಸಿದರು. https://kannadanewsnow.com/kannada/congress-will-focus-on-development-of-minorities-only-when-it-is-in-power-minister-zameer-ahmed-khan/ https://kannadanewsnow.com/kannada/actor-darshan-withdraws-his-application-for-home-cooked-meals/ https://kannadanewsnow.com/kannada/loan-facility-up-to-rs-5-lakh-from-central-government-if-you-have-these-documents-apply-immediately/
ಬೆಂಗಳೂರು: ನನಗೆ ಜೈಲೂಟ ಬೇಡ. ಮನೆ ಊಟ ಬೇಕು ಎಂಬುದಾಗಿ ಜೈಲು ಅಧಿಕಾರಿಗಳಿಗೆ ಸಲ್ಲಿಸಿದ್ದಂತ ಅರ್ಜಿಯನ್ನು ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ವಾಪಾಸ್ ಪಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿನಲ್ಲಿ ರಾಜಾತಿಥ್ಯದ ಪೋಟೋ ವೈರಲ್ ಆಗುತ್ತಿದ್ದಂತೆ, ಕೆಲ ಜೈಲು ಅಧಿಕಾರಿಗಳ ತಲೆದಂಡವಾಗಿತ್ತು. ಅಲ್ಲದೇ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರನ್ನು ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ ಕಾರಣ, ನಟ ದರ್ಶನ್ ಪರ ವಕೀಲರು ಮನೆ ಊಟಕ್ಕಾಗಿ ಜೈಲು ಅಧಿಕಾರಿಗಳಿಗೆ ಸಲ್ಲಿಸಿದ್ದಂತ ಅರ್ಜಿಯನ್ನು ವಾಪಾಸ್ ಪಡೆದಿದ್ದಾರೆ. ಕಾರಣ ಅವರು ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವುದರಿಂದ ಆಗಿದೆ. ಅಂದಹಾಗೇ ಜೈಲು ಊಟ ಬೇಡ, ಮನೆ ಊಟ ಬೇಕು ಎಂಬುದಾಗಿ ಕೊಲೆ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಅವರು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ…
ಕಲಬುರಗಿ : ಮೀಸಲಾತಿ ರದ್ದುಪಡಿಸುವುದಾಗಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಅಮೆರಿಕದಲ್ಲಿ ತಮ್ಮ ಮನದಾಳದ ಮಾತನ್ನು ಹೇಳಿದ್ದಾರೆ. ಇದನ್ನು ಖಂಡಿಸಿ ಇವತ್ತಿನಿಂದ ಎರಡು ದಿನಗಳ ಕಾಲ ರಾಹುಲ್ ಗಾಂಧಿಯವರ ಪ್ರತಿಕೃತಿ ದಹನ ಮಾಡಲಿದ್ದೇವೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಎಸ್ಸಿ, ಎಸ್ಟಿಗಳಿಗೆ ಗೌರವ ಕೊಡಬೇಕು; ಅವರಿಗೆ ರಕ್ಷಣೆ ಕೊಡಬೇಕೆಂಬ ದೃಷ್ಟಿಯಿಂದ ನಾವು ರಾಜ್ಯಾದ್ಯಂತ ನಾಳೆ, ನಾಡಿದ್ದು ರಾಹುಲ್ ಗಾಂಧಿಯವರ ಪ್ರತಿಕೃತಿ ದಹನ ಮಾಡುತ್ತೇವೆ ರಾಹುಲ್ ಗಾಂಧಿಯವರು ಮೀಸಲಾತಿ ನಿಲ್ಲಿಸುವುದಾಗಿ ಹೇಳಿದ್ದಾರೆ. ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಎರಡು ಸಾರಿ ಚುನಾವಣೆಯಲ್ಲಿ ಸೋಲಿಸಿದ ಪಕ್ಷ ಕಾಂಗ್ರೆಸ್. ಸಂವಿಧಾನವನ್ನು ಬರೆದ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಅವತ್ತು ಅಪಮಾನ ಮಾಡಲಾಗಿತ್ತು. ಈಗ ಮೀಸಲಾತಿ ರದ್ದುಪಡಿಸುವುದಾಗಿ ಹೇಳಿ ಅವರ ವಿಚಾರಕ್ಕೇ ತಿಲಾಂಜಲಿ ನೀಡಲು ಹೊರಟಿದ್ದಾರೆ ಎಂದು ಟೀಕಿಸಿದರು. ದಲಿತರ ಬದುಕಿಗೆ, ಎಸ್ಸಿ, ಎಸ್ಟಿಗಳ ಮೀಸಲಾತಿಗೆ ಕೊಡಲಿಪೆಟ್ಟು ಹಾಕುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಇದೇನಾ ನೀವು…
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿ ಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಹಜ್ ಭವನದಲ್ಲಿ ಆಯೋಜಿಸಲಾಗಿದ್ದ ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ನೀಡುತ್ತಿದ್ದ ಅನುದಾನ ಕಡಿತ ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ನಂತರ 3200 ಕೋಟಿ ರೂ. ಒದಗಿಸಲಾಯಿತು. ಈ ಪೈಕಿ 1480 ಕೋಟಿ ರೂ. ಶಿಕ್ಷಣ ಕ್ಕೆ ವೆಚ್ಚ ಮಾಡಲಾಗುತ್ತಿದೆ. ಇದರಿಂದ ಸಮುದಾಯದ ಲಕ್ಷಾಂತರ ಮಕ್ಕಳು ವೈದ್ಯಕೀಯ, ಎಂಜಿನಿಯರರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಪಡೆಯಲು ಸಹಕಾರಿ ಆಗಿದೆ. ವಿದೇಶದಲ್ಲಿ ವ್ಯಾಸಂಗಕ್ಕೆ ಹೋಗುವಂತಾಗಿದೆ. ಐ ಎಸ್ -ಐಪಿಎಸ್ ತರಬೇತಿ ಪಡೆಯುವಂತಾಗಿದೆ. ಕಾಂಗ್ರೆಸ್ ಅಧಿಕಾರ ದಲ್ಲಿದ್ದಾಗ ಮಾತ್ರ ಇದು ಸಾಧ್ಯವಾಗಿದೆ . ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಬೇಕು…
ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಅಮೆರಿಕದಲ್ಲಿದ್ದು ಮೀಸಲಾತಿ ರದ್ದು ಮಾಡುವ ಹೇಳಿಕೆ ಕೊಟ್ಟಿದ್ದಾರೆ. ಅವರ ಹೇಳಿಕೆಯಿಂದ ದೇಶಾದ್ಯಂತ ವಿರೋಧ ಪಕ್ಷಗಳು, ದಲಿತ ಸಮುದಾಯಗಳು ಕುಪಿತಗೊಂಡಿವೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ವಿಧಾನಸೌಧದ 1ನೇ ಮಹಡಿ, ಕೊಠಡಿ ಸಂಖ್ಯೆ 155ರಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರು ಈಗ ರಾಹುಲ್ ಅವರ ಹೇಳಿಕೆಗೆ ಉತ್ತರ ಕೊಡಲಾಗದೆ ತೇಪೆ ಹಾಕುವ ಕೆಲಸ ಮಾಡುತ್ತಿದ್ದಾರೆ. ದೇಶದ ಪ್ರಥಮ ಪ್ರಧಾನಿ ನೆಹರೂ ಅವರು ಆ ಕಾಲದಲ್ಲೇ ಇದನ್ನು ಹೇಳಿದ್ದರು. ಮೀಸಲಾತಿ ಸರಿಯಾದ ಕ್ರಮ ಅಲ್ಲ; ಇದೊಂದು ಅನಿಷ್ಟ. ಇದರಿಂದ ದೇಶ ಉದ್ಧಾರವಾಗದು. ಇದರ ಬಗ್ಗೆ ನನಗೆ ಒಲವಿಲ್ಲ ಎಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು ಎಂದು ವಿವರಿಸಿದರು. ಈ ಪತ್ರದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಕೂಡ ಸದನದಲ್ಲಿ ಪ್ರಸ್ತಾಪ ಮಾಡಿ ಪತ್ರ ಪ್ರದರ್ಶನ ಮಾಡಿದ್ದರು ಎಂದರು. ಮೀಸಲಾತಿ ವಿಚಾರದಲ್ಲಿ ನೆಹರೂ ಅವರ ಮನೋಭಾವವನ್ನೇ…
ಬೆಂಗಳೂರು: ಪ್ರೀತಿಸಿದಂತ ಯುವತಿ ಕೈ ಕೊಟ್ಟ ಬಳಿಕ, ಆಕೆಯ ಖಾಸಗಿ ಪೋಟೋಗಳನ್ನು ಇಟ್ಟುಕೊಂಡು ಕೆಲ ತಿಂಗಳಿಂದ ಬ್ಲಾಕ್ ಮೇಲ್ ಮಾಡುತ್ತಿದ್ದಂತ ಕಿರುತೆರೆ ನಟ ವರುಣ್ ಆರಾಧ್ಯ ಎಂಬುವರ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ಪಶ್ಚಿಮ ವಿಭಾಗದ ಸೆನ್ ಠಾಣೆಗೆ ತೆರಳಿರುವಂತ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಂತ ಯುವತಿಯೊಬ್ಬಳು ತನಗೆ ಕಿರುತೆರೆ ನಟ ವರುಣ್ ಆರಾಧ್ಯ ಇನ್ಸ್ ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದನು. ಪರಿಚಯ ಸ್ನೇಹಕ್ಕೆ ತಿರುಗಿ, ಆ ಬಳಿಕ ತಾವಿಬ್ಬರೂ ಪ್ರೀತಿಸುತ್ತಿದ್ದವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೆಲ ತಿಂಗಳ ಹಿಂದಿನಿಂದ ತಾನು, ಅರುಣ್ ಆರಾಧ್ಯ ದೂರವಾಗಿದ್ದೆವು. ಈ ಬಳಿಕ ವರುಣ್ ಆರಾಧ್ಯ ತನ್ನ ಖಾಸಗಿ ಕ್ಷಣದ ಪೋಟೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾನೆ. ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ದೂರಿನಲ್ಲಿ ಮನವಿ ಮಾಡಿದ್ದಾರೆ. ಯುವತಿಯ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ಪಶ್ಟಿಮ ವಿಭಾಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/women-in-the-state-applications-invited-for-incentives-subsidies/ https://kannadanewsnow.com/kannada/loan-facility-up-to-rs-5-lakh-from-central-government-if-you-have-these-documents-apply-immediately/
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆಯಡಿ ಪ್ರೋತ್ಸಾಹಧನ ಹಾಗೂ ಉದ್ಯೋಗಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಸೆಪ್ಟೆಂಬರ್ 21 ರ ಸಂಜೆ 5.30ರ ಒಳಗೆ ಗ್ರಾಮ ಒನ್, ಶಿವಮೊಗ್ಗ, ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ವ್ಯಾಪ್ತಿಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/for-the-first-time-five-gst-officers-were-arrested-in-bengaluru/ https://kannadanewsnow.com/kannada/bjp-calls-for-state-wide-protest-tomorrow-over-rahul-gandhis-remarks-on-scrapping-reservation/
ಬೆಂಗಳೂರು: ಬೆಂಗಳೂರಲ್ಲಿ ಮೊಟ್ಟಲ ಮೊದಲ ಬಾರಿ ಎನ್ನುವಂತೆ ಉದ್ಯಮಿಯೊಬ್ಬರಿಂದ ಹಣ ಪಡೆದು ಪರಾರಿಯಾಗಿದ್ದಂತ ನಾಲ್ವರು ಕೇಂದ್ರದ ಜಿಎಸ್ಟಿ ಅಧಿಕಾರಿಗಳನ್ನು ಪೊಲೀಸರು ಭರ್ಜರಿ ಬೇಟೆಯಾಡುವ ಮೂಲಕ ಬಂಧಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸರಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು, ದಿನಾಂಕ:09-09-2024 ರಂದು ಸಂಜೆ 16-35 ಗಂಟೆಗೆ ಪಿರಾದುದಾರರಾದ ಕೇಶವ್ ಟಾಕ್ ರವರು ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಗೆ ಹಾಜರಾಗಿ ನೀಡಿದ ಲಿಖಿತ ದೂರಿನ ಸಾರಾಂಶವೇನೆಂದರೆ, Mexo Solutions Private Limited having its address at L4, 2nd Floor, 11th Sector, Jeevan Bhimanagar Main Road, Bengaluru-560075 0 ಮಾಡಿಕೊಂಡಿರುತ್ತೇನೆ. ದಿನಾಂಕ:30-08-2024 ರಂದು 8-30 ರಿಂದ 9-00 ಗಂಟೆ ನಡುವೆ ಅಪರಿಚಿತ ವ್ಯಕ್ತಿಗಳು ತಾವು ಜಿಎಸ್ಟಿ ಮತ್ತು ಇಡಿ ಅಧಿಕಾರಿಗಳು ಎಂದು ಹೇಳಿಕೊಂಡು, ನಮ್ಮ ಮನೆಗೆ ಅತಿಕ್ರಮ ಪ್ರವೇಶ ಮಾಡಿ ನಮ್ಮ ಮೊಬೈಲ್ ಫೋನ್ ಮತ್ತು ಇತರೆ ವಸ್ತುಗಳನ್ನು ತೆಗೆದುಕೊಂಡು ನನ್ನನ್ನು ಪವನ್ ತಕ್, ಮುಖೇಶ್ ಜೈನ್, ರಾಕೇಶ್ ಮಾಣಕ್…












