Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಜನಪರ ಗ್ಯಾರಂಟಿ ಸ್ಕೀಂಗಳನ್ನು ನಿಲ್ಲಿಸಲೂ ಬಾರದು ಎಂಬುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರವಾಸಿ ಮಂದಿರದಲ್ಲಿ ಇಂದು ತಾಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ತಾಲೂಕಿನ ಪಿಡಿಓಗಳ ಸಭೆಯನ್ನು ನಡೆಸಿ, ಮಳೆಗಾಲದಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕು. ಮಳೆಯಿಂದ ಉಂಟಾದ ಹಾನಿಯ ಬಗ್ಗೆ ತುರ್ತು ಕ್ರಮವಹಿಸಿ, ಸರಿಪಡಿಸೋ ಕೆಲಸ ಮಾಡಬೇಕು. ಮನೆ ಹಾನಿಗೆ ಕೂಡಲೇ 10,000 ಪರಿಹಾರವನ್ನು ನೀಡಬೇಕು ಎಂದರು. ಈ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ನಿನ್ನೆ ಅಬಕಾರಿ ಇಲಾಖೆಯ ಸಭೆ ನಡೆಸಿ, ಆದಾಯ ಸಂಗ್ರಹಕ್ಕೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣಕಾಸಿನ ಕೊರತೆ ಎದುರಾಗಿದ್ಯಾ ಅಂತ ಕೇಳಿದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದಂತ ಅವರು, ಗ್ಯಾರಂಟಿ ಯೋಜನೆಗಳಿಗೆ ಹಣಕಾಸಿನ ಕೊರತೆ ಉಂಟಾಗಿಲ್ಲ. ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಟಾರ್ಗೆಟ್ ಫಿಕ್ಸ್ ಮಾಡುವುದು ಮಾಮೂಲಿ. ಅದೇನೂ ಹೊಸದೇನಲ್ಲ ಎಂದರು. https://youtu.be/b4eRLRWwy8E ರಾಜ್ಯದಲ್ಲಿ ಗಾರಂಟಿ…
ಬೆಂಗಳೂರು: ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ಇಂದು ಹೈಕೋರ್ಟ್ ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ ಆಗಿದೆ. ಇಂದು ಬಿಎನ್ ಡಿ ಎನರ್ಜಿ ಲಿಮಿಟೆಡ್ ಮತ್ತಿತರರು ಹೈಕೋರ್ಟ್ ಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು, ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ ಅವರನ್ನೊಳಗೊಂಡಂತ ನ್ಯಾಯಪೀಠವು ವಿಚಾರಣೆ ನಡೆಸಿತು. ಈ ಅರ್ಜಿಯ ವಿಚಾರಣೆಯ ಬಳಿಕ ಹೈಕೋರ್ಟ್ ನ್ಯಾಯಪೀಠವು, ಮೇ 21ರಂದು ಎಚ್ಎಸ್ಆರ್ಪಿ ಅಳವಡಿಸದಿರುವುದಕ್ಕೆ ಅರ್ಜಿದಾರರ ವಿರುದ್ಧ ಯಾವುದೇ ದುರುದ್ದೇಶಿತ ಕ್ರಮಕೈಗೊಳ್ಳಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಈಗ ರಾಜ್ಯ ಸರ್ಕಾರವು ಆಗಸ್ಟ್-ಸೆಪ್ಟೆಂಬರ್ವರೆಗೆ ಎಚ್ಎಸ್ಆರ್ಪಿ ಅಳವಡಿಕೆ ಗಡುವು ವಿಸ್ತರಿಸಲಾಗುವುದು ಎಂದು ತಿಳಿಸಿದೆ. ಹೀಗಾಗಿ, ಮೇ…
ನವದೆಹಲಿ: ಗ್ರಹಗಳ ಅನ್ವೇಷಣೆಗೆ ಮಹತ್ವದ ಕೊಡುಗೆಯಾಗಿ, ಭಾರತದ ಅಹಮದಾಬಾದ್ನ ಭೌತಿಕ ಸಂಶೋಧನಾ ಪ್ರಯೋಗಾಲಯದ (Physical Research Laboratory – PRL) ವಿಜ್ಞಾನಿಗಳು ಮಂಗಳ ಗ್ರಹದಲ್ಲಿ ಈ ಹಿಂದೆ ತಿಳಿದಿರದ ಮೂರು ಕುಳಿಗಳನ್ನು ಕಂಡುಹಿಡಿದಿದ್ದಾರೆ. ಈ ಕುಳಿಗಳಿಗೆ ಮಾಜಿ ಪಿಆರ್ಎಲ್ ನಿರ್ದೇಶಕ ಮತ್ತು ಎರಡು ಸಣ್ಣ ಭಾರತೀಯ ಪಟ್ಟಣಗಳ ಹೆಸರನ್ನು ಇಡಲು ಅಂತರರಾಷ್ಟ್ರೀಯ ಖಗೋಳ ಒಕ್ಕೂಟ ( International Astronomical Union – IAU) ಅನುಮೋದನೆ ನೀಡಿದೆ. ಮಂಗಳ ಗ್ರಹದ ಥಾರ್ಸಿಸ್ ಜ್ವಾಲಾಮುಖಿ ಪ್ರದೇಶದಲ್ಲಿ ಸುಮಾರು 21.0°S, 209°W ಇರುವ ಮೂರು ಕುಳಿಗಳನ್ನು ಅಧಿಕೃತವಾಗಿ ಲಾಲ್ ಕುಳಿ, ಮುರ್ಸಾನ್ ಕುಳಿ ಮತ್ತು ಹಿಲ್ಸಾ ಕುಳಿ ಎಂದು ಹೆಸರಿಸಲಾಗಿದೆ. ಈ ಕುಳಿಗಳು ಯಾವುವು? ಲಾಲ್ ಕುಳಿ -20.98°, 209.34° ನಲ್ಲಿ ಕೇಂದ್ರೀಕೃತವಾಗಿರುವ 65 ಕಿ.ಮೀ ಅಗಲದ ಕುಳಿಯನ್ನು 1972 ರಿಂದ 1983 ರವರೆಗೆ ಸಂಸ್ಥೆಯನ್ನು ಮುನ್ನಡೆಸಿದ ಪ್ರಸಿದ್ಧ ಭಾರತೀಯ ಭೂಭೌತಶಾಸ್ತ್ರಜ್ಞ ಮತ್ತು ಮಾಜಿ ಪಿಆರ್ಎಲ್ ನಿರ್ದೇಶಕ ಪ್ರೊಫೆಸರ್ ದೇವೇಂದ್ರ ಲಾಲ್ ಅವರ ಗೌರವಾರ್ಥವಾಗಿ “ಲಾಲ್…
ನವದೆಹಲಿ: ಕೇಂದ್ರ ಉಕ್ಕು ಮತ್ತು ಕೈಗಾರಿಕೆ ಸಚಿವರಾಗಿ ಹೆಚ್.ಡಿ ಕುಮಾರಸ್ವಾಮಿ ನಿನ್ನೆ ಅಧಿಕಾರ ವಹಿಸಿಕೊಂಡಿದ್ದರು. ಈ ಬಳಿಕ ಇಂದು ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತ್ರ ಮೊದಲಿಗೆ ಕರ್ನಾಟಕದ ಈ ಕಡತಕ್ಕೆ ಸಹಿ ಹಾಕಿದ್ದಾರೆ. ಅದ್ಯಾವುದು ಅಂತ ಮುಂದೆ ಓದಿ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿರುವಂತ ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ಕೇಂದ್ರದ ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಕಡತಕ್ಕೆ ಸಹಿ ಹಾಕಿದೆ. ಅದು ಕರ್ನಾಟಕಕ್ಕೆ ಸಂಬಂಧಿಸಿದ ಕಡತ ಎನ್ನುವುದು ವಿಶೇಷ ಎಂದು ಹೇಳಿದ್ದಾರೆ. ಆ ನಂತ್ರ ಮುಂದುವರೆದು ತಾನು ಕೇಂದ್ರ ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತ್ರ, ದೇವದಾರಿ ಕಬ್ಬಿಣದ ಅದಿರು ಗಣಿಯ ಕಾರ್ಯಾಚರಣೆಗಾಗಿ ಕೆಐಒಸಿಎಲ್ ಲಿಮಿಟೆಡ್ ನ ಮೊದಲ ಕಡತಕ್ಕೆ ಸಹಿ ಹಾಕಲಾಯಿತು ಎಂದು ತಿಳಿಸಿದ್ದಾರೆ. ಈ ಮೂಲಕ ದೇವದಾರಿ ಕಬ್ಬಿಣದ ಅದಿರು ಗಣಿಯ ಕಾರ್ಯಾಚರಣೆಗೆ ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್ ನೀಡಿದ್ದಾರೆ. https://twitter.com/hd_kumaraswamy/status/1800888223100776782 https://kannadanewsnow.com/kannada/is-bharat-mata-ki-jai-wrong-in-karnataka/…
ದಕ್ಷಿಣ ಕನ್ನಡ: ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ, ಜೈ ಶ್ರೀರಾಮ್ ಎಂದರೆ ತಪ್ಪು. ಕಾಂಗ್ರೆಸ್ ಸರ್ಕಾರ ಗೂಂಡಾಗಳ ಕೈಗೆ ರಾಜ್ಯವನ್ನು ಕೊಟ್ಟಿದ್ದು, ಇಂತಹ ಘೋಷಣೆ ಕೂಗಿದರೆ ಚೂರಿ ಹಾಕುತ್ತಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬೊಳಿಯಾರಿನಲ್ಲಿ ಭಾರತ ಮಾತೆಗೆ ಜೈಕಾರ ಕೂಗಿದ್ದಕ್ಕಾಗಿ ಮತಾಂಧರಿಂದ ಹಲ್ಲೆಗೊಳಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿಯ ಗಾಯಾಳು ಕಾರ್ಯಕರ್ತರನ್ನು ಆರ್.ಅಶೋಕ ಭೇಟಿ ಮಾಡಿ ಧೈರ್ಯ ಹೇಳಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಘಟನೆಗಳು ನಡೆಯದಂತೆ ಬಿಜೆಪಿ ಎಚ್ಚರ ವಹಿಸಲಿದೆ. ಕಾರ್ಯಕರ್ತರ ಜೊತೆಗೆ ನಾವೆಲ್ಲರೂ ಸದಾ ನಿಲ್ಲುತ್ತೇವೆ. ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ಮಾಡಬೇಕು. ಹಾಗೆಯೇ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ಭಾರತ್ ಮಾತಾ ಕೀ ಜೈ ಎಂಬ ಘೋಷಣೆ ಕೂಗಿದ್ದಕ್ಕೆ ಬಿಜೆಪಿ ಕಾರ್ಯಕರ್ತರಾದ ಹರೀಶ್ ಮತ್ತು ನಂದಕುಮಾರ್ ಅವರಿಗೆ ಚೂರಿ ಇರಿಯಲಾಗಿದೆ. ಈ ತಾಲಿಬಾನ್ ಸರ್ಕಾರದಿಂದ ಪಾಕಿಸ್ತಾನಕ್ಕೆ ಜೈಕಾರದ ಘೋಷಣೆ ಕೇಳಿಬರುತ್ತಿದೆ. ಈ…
ನವದೆಹಲಿ: ಮೋದಿ 3.0 ಸಂಪುಟ ಸೇರಿರುವಂತ ಹೆಚ್.ಡಿ ಕುಮಾರಸ್ವಾಮಿಯವರಿಗೆ ಉಕ್ಕು ಮತ್ತು ಕೈಗಾರಿಕೆ ಸಚಿವರಾಗಿ ಖಾತೆ ಹಂಚಿಕೆ ಮಾಡಲಾಗಿತ್ತು. ನಿನ್ನೆ ಅಧಿಕಾರ ಸ್ವೀಕರಿಸಿ, ಇಂದು ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತ್ರ, ಕರ್ನಾಟಕದ ಬಗ್ಗೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕೇಂದ್ರದ ಉಕ್ಕು ಮತ್ತು ಕೈಗಾರಿಕಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಕಡತಕ್ಕೆ ಸಹಿ ಹಾಕಿದೆ. ಅದು ಕರ್ನಾಟಕಕ್ಕೆ ಸಂಬಂಧಿಸಿದ ಕಡತ ಎನ್ನುವುದು ವಿಶೇಷ ಎಂದು ತಿಳಿಸಿದ್ದಾರೆ. ಮುಂದುವರೆದು ದೇವದಾರಿ ಕಬ್ಬಿಣದ ಅದಿರು ಗಣಿಯ ಕಾರ್ಯಾಚರಣೆಗಾಗಿ ಕೆಐಒಸಿಎಲ್ ಲಿಮಿಟೆಡ್ ನ ಮೊದಲ ಕಡತಕ್ಕೆ ಸಹಿ ಹಾಕಲಾಯಿತು ಎಂಬುದಾಗಿ ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರ ನಾಥ್ ಸಿನ್ಹಾ ಉಪಸ್ಥಿತರಿದ್ದರು ಅಂತ ತಿಳಿಸಿದ್ದಾರೆ. https://twitter.com/hd_kumaraswamy/status/1800888223100776782 https://kannadanewsnow.com/kannada/action-will-be-taken-within-legal-framework-in-actor-darshans-case-minister-laxmi-hebbalkar/ https://kannadanewsnow.com/kannada/bjp-leader-mohan-charan-majhi-takes-oath-as-the-chief-minister-of-odisha/
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ, ಈಗ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲೂ ಸಂಕಷ್ಟ ಎದುರಾಗಿದೆ. ಅವರು ಕೆ.ಆರ್ ನಗರ ಸಂತ್ರಸ್ತೆ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಎರಡು ಪ್ರಕರಣಗಳಲ್ಲಿ ಎಸ್ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈಗ ಮೂರನೇ ಪ್ರಕರಣದಲ್ಲೂ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಈ ಪ್ರಕರಣದಲ್ಲೂ ಎಸ್ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸೋ ಸಾಧ್ಯತೆ ಇದೆ. ಮತ್ತೊಂದೆಡೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ 42ನೇ ಎಸಿಎಂಎಂ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಇಂದು ಸೈಬರ್ ಅಪರಾಧ ಠಾಣೆ FIR ಸಂಖ್ಯೆ.2/2024 ರಲ್ಲಿ ವಶಕ್ಕೆ ಪಡೆದಿದ್ದ ಎಸ್ಐಟಿ ಕೋರ್ಟ್ ಮುಂದೆ ಹಾಜರುಪಡಿಸಿತ್ತು. ಈ ವೇಳೆ ಜನಪ್ರತಿನಿಧಿಗಳ ವಿಶೇಷ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಎರಡು ಅಕಾಡೆಮಿಗಳಿಗೆ, ಒಂದು ಪ್ರಾಧಿಕಾರಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಇದೇ ಸಂದರ್ಭದಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರ ಸ್ಥಾನಕ್ಕೆ ಡಾ.ಕೃಪಾ ಫಡಕೆ, ಮೈಸೂರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯ ಸ್ಥಾನಕ್ಕೆ ವಿಜಯಲಕ್ಷ್ಮಿ ಕೌಟಗಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಮಾಲೂರು ವಿಜಿ ನಾಮನಿರ್ದೇಶನವನ್ನು ರದ್ದುಗೊಳಿಸಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ ಅಧಿಸೂಚನೆ ಹೊರಡಿಸಿದ್ದಾರೆ. 2024ರಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರ ಸ್ಥಾನಕ್ಕೆ ಡಾ.ಕೃಪಾ ಫಡಕೆ, ಮೈಸೂರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯ ಸ್ಥಾನಕ್ಕೆ ವಿಜಯಲಕ್ಷ್ಮಿ ಕೌಟಗಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಮಾಲೂರು ವಿಜಿ ಇವರ ನಾಮ ನಿರ್ದೇಶನಗೊಳಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಿದ್ದಾರೆ. ಇನ್ನೂ ಈ ತಕ್ಷಣದಿಂದ ಜಾರಿಗೆ ಬರುವಂತೆ…
ಶಿವಮೊಗ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆನ್ನಲ್ಲೇ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅಲರ್ಟ್ ಆಗಿದ್ದಾರೆ. ಸಾಗರ ತಾಲೂಕು ಆಡಳಿತದ ಸರಣಿ ಸಭೆ ನಡೆಸಿ, PDO, ಮೆಸ್ಕಾಂ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದರು. ಇಂದು ಸಾಗರ ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಸಾಗರ ತಾಲೂಕಿನ ಪಿಡಿಓ, ಮೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಳೆಗಾಲದಲ್ಲಿ ಸೂಕ್ತ ಕ್ರಮ ವಹಿಸುವಂತೆ ಖಡಕ್ ಸೂಚನೆ ನೀಡಿದರು. ಮಳೆಯಿಂದ ಮನೆ ಹಾಳಾದ್ರೇ 10,000 ತಕ್ಷಣ ಕೊಡಬೇಕು ಮುಂಗಾರು ಮಳೆ ತಾಲೂಕಿನಲ್ಲಿ ಚುರುಕು ಪಡೆದಿದೆ. ಮಳೆಯಿಂದ ಹಲವೆಡೆ ಹಾನಿಗಳು ಘಟಿಸುತ್ತಿದ್ದಾವೆ. ಮಳೆಯಿಂದ ಮನೆ ಬಿದ್ದು ಹೋದರೇ ಕೂಡಲೇ ಅಂತಹ ಕುಟುಂಬಕ್ಕೆ ನೆರವಾಗೋದಕ್ಕಾಗಿ 10,000 ರೂ.ಗಳನ್ನು ಕೊಡಬೇಕು ಎಂಬುದಾಗಿ ಗ್ರಾಮ ಪಂಚಾಯ್ತಿ ಪಿಡಿಓಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚಿಸಿದರು. ಅಲ್ಲದೇ ಕೊಟ್ಟಿಗೆ ಮನೆ ಬಿದ್ದಾಗ ಎನ್ ಆರ್ ಜಿ ಅನುದಾನದ ಅಡಿಯಲ್ಲಿ ಹಣ ನೀಡುವಂತೆ ಸೂಚಿಸಿದರು. ಮಳೆಯಿಂದ ಮನೆ ಹಾಳಾದ ಬಗ್ಗೆ ಪಿಡಿಓ, ವಿಎ ಕೂಡಲೇ ಸ್ಥಳಕ್ಕೆ ತೆರಳಿ…
ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದವರ ವಿರುದ್ಧ ಬಿಬಿಎಂಪಿ ಸಮರವನ್ನೇ ಸಾರಿದೆ. ಇದೀಗ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದಕ್ಕೆ 12 ಎಫ್ಐಆರ್ ದಾಖಲಿಸಿದೆ. ನಗರದಾದ್ಯಂತ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಈ ಸಂಬಂಧ ಉಪ ಮುಖ್ಯಮಂತ್ರಿಗಳು ಹಾಗೂ ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಕೂಡಾ ನಗರದಲ್ಲಿ ಯಾವುದೇ ಅನಧಿಕೃತ ಜಾಹೀರಾತುಗಳು ಅಳವಡಿಸಿದಂತೆ ಸೂಕ್ತ ಕ್ರಮ ವಹಿಸಲು ಸೂಚನೆ ನೀಡಿರುತ್ತಾರೆ. ಅದರಂತೆ, ದಿನಾಂಕ: 01-06-2024 ರಿಂದ ಇದುವರೆಗೆ 1259 ಫ್ಲೆಕ್ಸ್, ಬ್ಯಾನರ್, ಎಲ್.ಇ.ಡಿ ಹಾಗೂ ಹೋರ್ಡಿಂಗ್ಸ್ ಗಳನ್ನು ತೆರವುಗೊಳಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ 27 ದೂರುಗಳನ್ನು ದಾಖಲಿಸಿದ್ದು, ಅದರಲ್ಲಿ 12 ಎಫ್.ಐ.ಆರ್ ಗಳನ್ನು ದಾಖಲಿಸಲಾಗಿದೆ. ಅನಧಿಕೃತ ಜಾಹೀರಾತುಗಳ ಮಾಹಿತಿ ನೀಡಿ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು-2018″ ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು…











