Subscribe to Updates
Get the latest creative news from FooBar about art, design and business.
Author: kannadanewsnow09
ದೋಡಾ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬುಧವಾರ ನಡೆದ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಗಂಡೋಹ್ ಪ್ರದೇಶದ ಬಜಾದ್ ಗ್ರಾಮದಲ್ಲಿ ಬೆಳಿಗ್ಗೆ 9.30ರ ಸುಮಾರಿಗೆ ಗುಂಡಿನ ಚಕಮಕಿ ಪ್ರಾರಂಭವಾಯಿತು. ಯುಎಸ್ ನಿರ್ಮಿತ ಎಂ 4 ರೈಫಲ್ ಸೇರಿದಂತೆ ಭಯೋತ್ಪಾದಕರಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಗಿದ ನಂತರವೇ ಭಯೋತ್ಪಾದಕರ ಗುರುತನ್ನು ಕಂಡುಹಿಡಿಯಲಾಗುವುದು. ಜೂನ್ 11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ ನಂತರ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಯೊಂದಿಗೆ ಪೊಲೀಸರು ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಜೂನ್ 11 ರಂದು ಚಟ್ಟರ್ಗಲ್ಲಾದಲ್ಲಿನ ಜಂಟಿ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದಾಗ ಆರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರೆ, ಮರುದಿನ ಗಂಡೋಹ್ ಪ್ರದೇಶದ ಕೋಟಾ ಟಾಪ್ನಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಗಾಯಗೊಂಡಿದ್ದರು. https://kannadanewsnow.com/kannada/students-note-pg-cet-2024-exam-scheduled-for-july-13-14-postponed/ https://kannadanewsnow.com/kannada/bengalurus-yelahanka-gas-power-plant-to-be-inaugurated-in-2nd-week-of-july-minister-k-j-george/
ದಕ್ಷಿಣಕನ್ನಡ: ಜಿಲ್ಲೆಯಲ್ಲಿ ನಾಳೆ ಭಾರೀ ಮಳೆ ಸುರಿಯಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆಯಿಂದ ಭಾರೀ ಮಳೆಯಾಗುತ್ತಿದೆ. ಜನರು ಮನೆಯಿಂದ ಹೊರ ಬರಲಾಗದಂತೆ ಧೋ ಅಂತ ಮಳೆ ಸುರಿಯುತ್ತಿದೆ. ನಾಳೆ ಕೂಡ ಭಾರೀ ಮಳೆಯಾಗಲಿದ್ದು, ಹವಾಮಾನು ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. https://kannadanewsnow.com/kannada/bengalurus-yelahanka-gas-power-plant-to-be-inaugurated-in-2nd-week-of-july-minister-k-j-george/ https://kannadanewsnow.com/kannada/students-note-pg-cet-2024-exam-scheduled-for-july-13-14-postponed/
ನವದೆಹಲಿ: ಇ-ಕಾಮರ್ಸ್ ದೈತ್ಯ ಫ್ಲಿಪ್ಕಾರ್ಟ್ ತನ್ನ ಫಿನ್ಟೆಕ್ ಮಹತ್ವಾಕಾಂಕ್ಷೆಗಳನ್ನು ಹೆಚ್ಚಿಸಲು ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (Unified Payments Interface – UPI) ಅಪ್ಲಿಕೇಶನ್ ಸೂಪರ್.ಮನಿ ( Super.Money ) ಅನ್ನು ಪ್ರಾರಂಭಿಸಿದೆ. ವಾಲ್ಮಾರ್ಟ್ ಬೆಂಬಲಿತ ಕಂಪನಿಯು ಶಾಪಿಂಗ್ ಅಪ್ಲಿಕೇಶನ್ನಲ್ಲಿ ತನ್ನದೇ ಆದ ಯುಪಿಐ ಹ್ಯಾಂಡಲ್ ಅನ್ನು ಹೊಂದಿದೆ ಮತ್ತು ಪ್ರತ್ಯೇಕ ಅಪ್ಲಿಕೇಶನ್ನ ಪ್ರಾರಂಭವು ಫಿನ್ಟೆಕ್ ಜಾಗದಲ್ಲಿ ಕಂಪನಿಯ ಆಕ್ರಮಣಕಾರಿ ಉದ್ದೇಶವನ್ನು ಸೂಚಿಸುತ್ತದೆ. ಕುತೂಹಲಕಾರಿ ಸಂಗತಿಯೆಂದರೆ, ವಾಲ್ಮಾರ್ಟ್ ಒಡೆತನದ ಅದರ ಹಿಂದಿನ ಗ್ರೂಪ್ ಕಂಪನಿ ಫೋನ್ ಪೇ ಒಂದು ವರ್ಷದ ಹಿಂದೆಯಷ್ಟೇ ಫ್ಲಿಪ್ಕಾರ್ಟ್ನಿಂದ ಬೇರ್ಪಟ್ಟಿತು. ಯುಪಿಐ ಪರಿಸರ ವ್ಯವಸ್ಥೆಯಲ್ಲಿ ಸುಮಾರು 50 ಪ್ರತಿಶತದಷ್ಟು ಮಾರುಕಟ್ಟೆ ಪಾಲನ್ನು ಹೊಂದಿರುವ ಮಾರುಕಟ್ಟೆ ನಾಯಕನಾಗಿದೆ. ಸೂಪರ್.ಮನಿ ಆರಂಭಿಕ ಬಿಡುಗಡೆಯನ್ನು ಒಂದು ಲಕ್ಷ ಬಳಕೆದಾರರಿಗೆ ಸೀಮಿತಗೊಳಿಸಿದೆ. ಇದು ಬೀಟಾ ಪ್ರೋಗ್ರಾಂ ಆಗಿದೆ. ಕಂಪನಿಯ ಲೋಗೋ ಪ್ರಮುಖವಾಗಿ ಕ್ಯೂಆರ್ ಕೋಡ್ ಅನ್ನು ತೋರಿಸುತ್ತದೆ. ಇದು ಯುಪಿಐ ಬಳಸಿ ಪಾವತಿಯ ಜನಪ್ರಿಯ ವಿಧಾನವಾಗಿದೆ. ಆ್ಯಪ್ ಬಳಸಿ ಆಹಾರ, ಪ್ರಯಾಣ ಮತ್ತು ಇತರ…
ಬೆಂಗಳೂರು: ಹಾಲಿನ ಬೆಲೆ ಹೆಚ್ಚಳ ಮತ್ತೊಂದು ಬರೆ ಹಾಕುವ ಕೆಲಸ ಎಂದು ವಿಧಾನಪರಿಷತ್ ಎನ್. ರವಿಕುಮಾರ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳಕ್ಕೆ ಪ್ಯಾಕೆಟ್ಗೆ 50 ಎಂಎಲ್ ಹೆಚ್ಚು ಹಾಲು ಕೊಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಬೂಬು ಕೊಡುತ್ತಿದ್ದಾರೆ. ಅದಕ್ಕಾಗಿ 2 ರೂ. ಹೆಚ್ಚು ಮಾಡಿದ್ದೇವೆ ಎಂದಿದ್ದಾರೆ ಎಂದರು. ಹಾಲು ಹೆಚ್ಚು ನೀಡಲು ಯಾರಾದರೂ ನಿಮಗೆ ಮನವಿಪತ್ರ ಕೊಟ್ಟಿದ್ದರೇ? ಈ ರೀತಿ ಮನೆಮುರುಕ ನಿರ್ಧಾರವನ್ನು ಯಾಕೆ ಈ ಸರಕಾರ ಮಾಡುತ್ತಿದೆ? ಜನಕ್ಕೆ ಬೇಡದ ಜನವಿರೋಧಿ ನಿರ್ಧಾರವಿದು. ರಾಜ್ಯದಲ್ಲಿ 20 ಲಕ್ಷ ಮೇವಿನ ಅವಶ್ಯಕತೆ ಇದೆ. 8 ಲಕ್ಷ ಟನ್ ಮೇವನ್ನು ಮಾತ್ರ ಕೊಡುತ್ತಿದ್ದಾರೆ. ಈ ಸರಕಾರಕ್ಕೆ ಮೇವು ಕೊಡಲಾಗುತ್ತಿಲ್ಲ ಎಂದು ಟೀಕಿಸಿದರು. ಹಾಲು ಹೆಚ್ಚು ಕೊಡುವ ನೆಪದಲ್ಲಿ ಹೆಚ್ಚು ಹಣ ಕೇಳುವುದು ಜನದ್ರೋಹಿ ನಿರ್ಧಾರ ಎಂದು ಆಕ್ಷೇಪಿಸಿದರು. ಈ ನಿರ್ಧಾರವನ್ನು…
ನಗೋಯಾ (ಜಪಾನ್): ತುಮಕೂರಿನ ಬಳಿ ಇರುವ ಜಪಾನ್ ಕೈಗಾರಿಕಾ ಟೌನ್ಶಿಪ್ನಲ್ಲಿ ₹ 210 ಕೋಟಿ ವೆಚ್ಚದಲ್ಲಿ ವಾಹನ ಬಿಡಿಭಾಗಗಳನ್ನು ತಯಾರಿಸುವ ಘಟಕವನ್ನು ಸ್ಥಾಪಿಸುವ ಒಪ್ಪಂದಕ್ಕೆ ಕೈಗಾರಿಕಾ ಸಲಕರಣೆಗಳನ್ನು ತಯಾರಿಸುವ ಜಪಾನಿನ ಅವೊಯಮಾ ಸೈಸಕುಷೊ ಕಂಪನಿಯು ಸಹಿ ಹಾಕಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಅವೊಯಮಾ ಸೈಸಕುಷೊ ಕಂಪನಿಯ ಅಧ್ಯಕ್ಷ ಯುಕಿಯೋಷಿ ಅವೊಯಮಾ ಅವರು ಒಪ್ಪಂದಕ್ಕೆ ಸಹಿ ಹಾಕಿದರು. ಟೊಯೊಟಾ ಕಂಪನಿಯ ವಾಹನ ಬಿಡಿಭಾಗಗಳನ್ನು ತಯಾರಿಸುವ ಅವೊಯಮಾ, ತುಮಕೂರಿನ ಜಪಾನ್ ಕೈಗಾರಿಕಾ ಟೌನ್ಶಿಪ್ನಲ್ಲಿ ಈ ಘಟಕ ಸ್ಥಾಪಿಸಲು 20 ಎಕರೆ ಭೂಮಿಯನ್ನು ಗುರುತಿಸಿದೆ. ಟಯೊಟಾಗೆ ಭೇಟಿ ರಾಜ್ಯದ ನಿಯೋಗವು ವಾಹನ ತಯಾರಿಕಾ ಬಹುರಾಷ್ಟ್ರೀಯ ದೈತ್ಯ ಕಂಪನಿ ಟೊಯೊಟೊದ ಮುಖ್ಯಸ್ಥರನ್ನು ಭೇಟಿಯಾಗಿ ಚರ್ಚೆ ನಡೆಸಿತು. ಕಂಪನಿಯ ಪ್ರಾಜೆಕ್ಟ್ ಜನರಲ್ ಮ್ಯಾನೇಜರ್ ಟಕಾವೊ ಐಬಾ, ಟೊಯೊಟಾ ಕಿರ್ಲೋಸ್ಕರ್ ಮೋಟರ್ನ ಹಿರಿಯ ಉಪಾಧ್ಯಕ್ಷ ಸುದೀಪ್ ಎಸ್. ದಳವಿ ಅವರು ಸಮಾಲೋಚನೆಯಲ್ಲಿ…
ಬೆಂಗಳೂರು: ಬಿಬಿಎಂಪಿಯು ಆಸ್ತಿ ತೆರಿಗೆ ಸಂಗ್ರಹ ಹಾಗೂ ಆದಾಯದ ಕ್ರೋಡೀಕರಣದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ. ಪ್ರಾಮಾಣಿಕವಾಗಿ ತೆರಿಗೆ ಕಟ್ಟಿಕೊಂಡು ಬರುತ್ತಿರುವವರ ಮೇಲೆ ತೆರಿಗೆ ಹೆಚ್ಚಿಸುವ ಮೂಲಕ ಹೊರೆ ಹೊರಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ ದಾಸರಿ ಆರೋಪಿಸಿದರು. ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡಿಎ ಲೌಔಟ್ ಗಳ ಅನೇಕ ಭಾಗಗಳು ಬಿಬಿಪಿಎಂಗೆ ಇದುವರೆಗೂ ಹಸ್ತಾಂತರಗೊಂಡಿಲ್ಲ. ಅಲ್ಲಿನ ನಿವಾಸಿಗಳು ತೆರಿಗೆ ಕಟ್ಟಲು ಸಿದ್ಧರಿದ್ದಾರೆ. ಒಂದು ಮನೆ ಅಸೆಸ್ ಮಾಡಿ, ಬಿಬಿಎಂಪಿಗೆ ಹಸ್ತಾಂತರಿಸಲು ಅಧಿಕಾರಿಗಳು ಕನಿಷ್ಟ ಎರಡ್ಮೂರು ಲಕ್ಷ ರೂಪಾಯಿ ಲಂಚ ಕೇಳುತ್ತಿದ್ದಾರೆ. ಇದರಿಂದ ಜನರು ಬಿಬಿಎಂಪಿಗೆ ನೇರವಾಗಿ ತೆರಿಗೆ ಕಟ್ಟಲು ಆಗುತ್ತಿಲ್ಲ. ಮೂಲಸೌಲಭ್ಯಕ್ಕಾಗಿ ಪರಿತಪಿಸುವಂತಾಗಿದೆ. ಇಂತಹ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಬೇಕು ಎಂದು ಹೇಳಿದರು. ಬಿಡಿಎ ನಿರ್ಮಿಸಿರುವ ಬಹುತೇಕ ಸೈಟ್, ಮನೆ, ಅಪಾರ್ಟ್ಮೆಂಟ್, ಕಾಂಪ್ಲೆಕ್ಸ್ ಗಳು ಬಿಬಿಎಂಪಿಗೆ ತೆರಿಗೆ ಕಟ್ಟುತ್ತಿಲ್ಲ. ಬೆಂಗಳೂರಿನ ದಕ್ಷಿಣ ಭಾಗದ ಅಂಜನಾಪುರ ಭಾಗದಲ್ಲಿ 1ರಿಂದ11 ಬ್ಲಾಕ್ ಗಳು, ಜೆ.ಪಿ.ನಗರದ 9ನೇ ಫೇಸ್, ಬನಶಂಕರಿ…
ತುಮಕೂರು: ಜಿಲ್ಲೆಯ ಗುಬ್ಬಿ ಠಾಣೆಯ ಪೊಲೀಸರಿಂದ ಮಕ್ಕಳ ಮಾರಾಟ ಜಾಲ ಪ್ರಕರಣವನ್ನು ಬೇಧಿಸಲಾಗಿತ್ತು. ಈ ಜಾಲದ ಬಗ್ಗೆ ಗಂಭೀರವಾಗಿ ಪರಿಣಿಸಲಾಗಿದ್ದು, ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವೆಂಕಟ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಜಿಲ್ಲೆಯಲ್ಲಿ ಪತ್ತೆಯಾದಂತ ಮಕ್ಕಳ ಮಾರಾಟ ಜಾಲವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಬಂಧಿತ ಆರೋಪಿಗಳು ಖಾಸಗಿ ನರ್ಸಿಗ್ ಹೋಂ, ಆಸ್ಪತ್ರೆ, ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿದ್ದರು ಎಂಬುದಾಗಿ ಮಾಹಿತಿ ಹಂಚಿಕೊಂಡರು. ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆಯೂ ಕಣ್ಣಿಡಲಾಗಿದೆ. ಆರೋಪಿಗಳ ಜೊತೆಗೆ ನಂಟಿದ್ದಂತ ಸ್ಕ್ಯಾನಿಂಗ್ ಸೆಂಟರ್ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂಬುದಾಗಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವೆಂಕಟ್ ಸ್ಪಷ್ಟ ಪಡಿಸಿದರು. https://kannadanewsnow.com/kannada/bengalurus-yelahanka-gas-power-plant-to-be-inaugurated-in-2nd-week-of-july-minister-k-j-george/ https://kannadanewsnow.com/kannada/students-note-pg-cet-2024-exam-scheduled-for-july-13-14-postponed/
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು, ಆಗುಂಬೆ ಹೋಬಳಿ ಕೇಸಲೂರು ಗ್ರಾಮದ ಒಂದು ಸಣ್ಣ ಹಳ್ಳಿಯಾದ ಕಡ್ತೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ.ಆರತಿ ಕೃಷ್ಣ ರವರು ಸಾರಿಗೆ ಮತ್ತು ಮುಜರಾಯಿ ಸಚಿವರಿಗೆ ಅನುದಾನ ನೀಡಲು ಕೋರಿದ್ದು, ಮುಜರಾಯಿ ಇಲಾಖೆಯಿಂದ ರೂ.5 ಲಕ್ಷ ಸಹಾಯಧನ ಮಂಜೂರಾಗಿರುತ್ತದೆ. ಉಪಾಧ್ಯಕ್ಷೆ ಡಾ.ಆರತಿ ಕೃಷ್ಣರವರು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ವೀರಭದ್ರೇಶ್ವರ ದೇವಸ್ಥಾನ ಜೀರ್ಣೋದ್ದಾರಕ್ಕಾಗಿ ಸರ್ಕಾರದ ವತಿಯಿಂದ ಅನುದಾನ ಕೋರಿರುತ್ತಾರೆ. ಮಂಜೂರಾಗದ ಕಾರಣ ಗ್ರಾಮಸ್ಥರು ದೇಣಿಗೆ ಸಂಗ್ರಹಿಸಿ ಜೀರ್ಣೋದ್ದಾರ ಕಾರ್ಯ ಮಾಡಿರುತ್ತಾರೆ. ಮುಂದುವರೆದು ದೇವಸ್ಥಾನದ ಆವರಣಕ್ಕೆ ಇಂಟರ್ಲಾಕ್, ಟೈಲ್ಗಳ ಅವಶ್ಯಕತೆ ಇದ್ದು ಅಂದಾಜು ರೂ.5 ಲಕ್ಷ ಸಹಾಯ ಧನವನ್ನು ಸರ್ಕಾರದ ವತಿಯಿಂದ ನೀಡಲು ಉಪಾಧ್ಯಕ್ಷರನ್ನು ಕೋರಿರುತ್ತಾರೆ. ಕೋರಿಕೆಗೆ ಸ್ಪಂದಿಸಿದ ಡಾ.ಆರತಿ ಕೃಷ್ಣರವರು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಇವರಿಗೆ ಸದರಿ ಅನುದಾನ ನೀಡಲು ಕೋರಿದ್ದು ಮುಜರಾಯಿ ಇಲಾಖೆ ವತಿಯಿಂದ ರೂ. 5 ಲಕ್ಷಗಳನ್ನು ಮಂಜೂರು ಮಾಡಿರುತ್ತಾರೆ, ಮತ್ತು ಸದ್ಯದಲ್ಲೇ…
ಶಿವಮೊಗ್ಗ : 2024 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು(KAR TET-24) ಜೂನ್ 30 ರಂದು ನಗರದ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು ಪರೀಕ್ಷೆಯು ಶಾಂತಿಯುತವಾಗಿ ನಡೆಯಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜೂ.26 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಕುರಿತು ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜೂ.30 ರ ಬೆಳಿಗ್ಗೆ 9.30 ರಿಂದ 12 ಗಂಟೆವರೆಗೆ ಪತ್ರಿಕೆ-1, ಅಪರಾಹ್ನ 2 ರಿಂದ 4.30 ರವರೆಗೆ ಪತ್ರಿಕೆ 2 ಪರೀಕ್ಷೆಗಳು ನಡೆಯಲಿದೆ. 11 ಪರೀಕ್ಷಾ ಕೇಂದ್ರಗಳಲ್ಲಿ ಪತ್ರಿಕೆ-1 ಹಾಗೂ 17 ಪರೀಕ್ಷಾ ಕೇಂದ್ರಗಳಲ್ಲಿ ಪತ್ರಿಕೆ-2 ರ ಪರೀಕ್ಷೆ ನಡೆಯಲಿದೆ. ಮೊದಲನೇ ಅಧಿವೇಶನದಲ್ಲಿ 2874 ಮತ್ತು ಎರಡನೇ ಅಧಿವೇಶನದಲ್ಲಿ 4676 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈಗಾಗಲೇ ಕೇಂದ್ರ ಸ್ಥಾನಿಕ ಜಾಗೃತದಳ, ಮಾರ್ಗಾಧಿಕಾರಿಗಳು, ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಮತ್ತು ಇತರೆ ಸಿಬ್ಬಂದಿಗಳನ್ನು ಪರೀಕ್ಷಾ…
ಶಿವಮೊಗ್ಗ: ಜನರ ವಿವಿಧ ರೀತಿಯ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಜೂ.28 ರ ಬೆಳಿಗ್ಗೆ 9.30 ರಿಂದ ನಗರದ ಕುವೆಂಪು ರಂಗಮಂದಿರದಲ್ಲಿ ‘ಜನ ಸ್ಪಂದನ’ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿರುವುದರಿಂದ ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿರುತ್ತದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದು. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶ ನೀಡಲಾಗುವುದು ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್ಗಳನ್ನು ಪಡೆಯಬೇಕು. ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿದವರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. https://kannadanewsnow.com/kannada/job-fair-to-be-held-in-shivamogga-on-june-29/ https://kannadanewsnow.com/kannada/students-note-pg-cet-2024-exam-scheduled-for-july-13-14-postponed/













