Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಕಲಬುರ್ಗಿ: ಅತ್ತೆ ಸೊಸೆಯರು ತಾಯಿ ಮಗಳಿದ್ದಂತೆ ಇರಬೇಕು. ಹಾಗೆ ಇದ್ದಾಗ ಮಾತ್ರ ಸಂಸಾರ ಚೆಂದವಾಗಿರುತ್ತದೆ ಅಂತ ಹಿರಿಯರು ಬುದ್ಧಿ ಹೇಳುತ್ತಾರೆ. ಆದರೇ ಇಲ್ಲೊಬ್ಬ ಸೊಸೆ ಮಾತ್ರ ನಮ್ಮ ಅತ್ತೆ ಬೇಗ ಸಾಯಬೇಕು ಅಂತ ದೇವಿಗೆ ನೋಟಿನಲ್ಲಿ ಹರಕೆ ಬರೆದು, ತೀರಿಸುವಂತೆ ಕೋರಿರೋದು ವೈರಲ್ ಆಗಿದೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಘತ್ತರಗಿ ಗ್ರಾಮದಲ್ಲಿರುವಂತ ಭಾಗ್ಯವಂತಿ ದೇವಿ ತುಂಬಾನೇ ಪ್ರಸಿದ್ಧ ದೇವಸ್ಥಾನ. ಈ ದೇವಾಲಯಕ್ಕೆ ಹಲವೆಡೆಯಿಂದ ಭಕ್ತರು ಆಗಮಿಸಿ ತಮ್ಮ ಹರಕೆಯನ್ನು ತೀರಿಸುವಂತೆ ಭಾಗ್ಯವಂತಿ ದೇವಿಯನ್ನು ಕೋರೋದು ರೂಢಿ. ಈ ದೇವಸ್ಥಾನಕ್ಕೆ ಬಂದಿರುವಂತ ಸೊಸೆಯೊಬ್ಬರು 20 ರೂಪಾಯಿಯ ನೋಟಿನ ಮೇಲೆ ತಾಯಿ ನಮ್ಮ ಅತ್ತೆ ಬೇಗ ಸಾಯಲಿ ತಾಯಿ ಅಂತ ಹರಕೆ ಬರೆದು ಹಾಕಿರೋದು ದೇವಸ್ಥಾನದ ಹುಂಡಿಯನ್ನು ತೆರೆದು ಕಾಣಿಕೆ ಏಣಿಸುವಂತ ಸಂದರ್ಭದಲ್ಲಿ ಪತ್ತೆಯಾಗಿದೆ. 20 ರೂಪಾಯಿ ನೋಟಿನ ಮೇಲೆ ಅತ್ತೆಯ ಬಗ್ಗೆ ಸೊಸೆ ಬರೆದಿರುವಂತ ಬರಹ ಕಂಡಂತ ದೇವಸ್ಥಾನದವರು ಅಚ್ಚರಿ ಪಟ್ಟಿದ್ದಾರೆ. ಈಗ ಈ ಪೋಟೋ ಎಲ್ಲೆಡೆ ವೈರಲ್ ಆಗಿದೆ. ಹೀಗೆ…

Read More

ಮೈಸೂರು: ಹೊಸ ವರ್ಷಾಚರಣೆಗೆ ಜನರು ಎಲ್ಲಿಲ್ಲದ ತಯಾರಿಯಲ್ಲಿ ತೊಡಗಿದ್ದಾರೆ. ಆದರೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿದೆ. ಇದಷ್ಟೇ ಅಲ್ಲದೇ ಅರಮನೆ ಆಡಳಿತ ಮಂಡಳಿಯ ಉಪ ನಿರ್ದೇಶಕ ಸುಬ್ರಹ್ಮಣ್ಯ ಅವರು ಆದೇಶ ಮಾಡಿದ್ದು, ಇಂದು, ನಾಳೆ ಅರಮನೆ ವಿದ್ಯುತ್ ದೀಪಾಲಂಕಾರವನ್ನು ಸ್ಥಗಿತಗೊಳಿಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಈ ಬಾರಿ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಂತೆ ಆಗಿದೆ. ಜೊತೆಗೆ ಪ್ರವಾಸಿಗರು ರಾತ್ರಿ ಹೊತ್ತಲ್ಲಿ ಮೈಸೂರು ಅರಮನೆಯನ್ನು ವಿದ್ಯುತ್ ದೀಪಾಲಂಕಾರಗಳಿಂದಲೂ ಈ ಬಾರಿ ವೀಕ್ಷಿಸೋದಕ್ಕೆ ಸಾಧ್ಯವಾಗುವುದಿಲ್ಲ. https://kannadanewsnow.com/kannada/breaking-president-draupadi-murmu-pays-last-respects-to-dr-manmohan-singh/ https://kannadanewsnow.com/kannada/former-suzuki-motor-chairman-osamu-suzuki-who-led-company-for-40-years-dies-at-94-death/

Read More

ಬೆಂಗಳೂರು: ಡಿಸೆಂಬರ್.29ರಂದು ಕೆಪಿಎಸ್ಸಿಯಿಂದ 384 ಕೆಎಎಸ್ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆಗೆ ಹಾಜರಾಗುವಂತ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಹೆಚ್ಚುವರಿ ಕೆ ಎಸ್ ಆರ್ ಟಿಸಿ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 29.12.2024 ರಂದು ಕರ್ನಾಟಕ ಲೋಕಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಪೂರ್ವಭಾವಿ ಪರೀಕ್ಷೆ ನಡೆಸಲಿದ್ದು, ಬೆಂಗಳೂರಿನಲ್ಲಿ ವಾಸಿಸುತ್ತಿರುವಂತಹ ಸುಮಾರು ಅಭ್ಯರ್ಥಿಗಳಿಗೆ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲಾಗಳಾದ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ಇನ್ನಿತರ ಜಿಲ್ಲೆಗಳಿಗೆ ಪರೀಕ್ಷೆ ಕೇಂದ್ರಗಳನ್ನು ಗುರುತಿಸಿದ್ದು, ನಿಗದಿತ ಸಮಯದೊಳಗೆ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸುವಂತೆ ಎಕ್ಸ್ ಖಾತೆ ಮೂಲಕ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಸುಮಾರು ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದು ತ್ವರಿತಗತಿಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ…

Read More

ಬೆಂಗಳೂರು: ನಗರದ ಆಸ್ತಿ ಮಾಲೀಕರು ಇ-ಖಾತಾ ಪಡೆಯುವುದು ಕಡ್ಡಾಯ. ಹಲವಾರು ಗೊಂದಲಗಳ ನಡುವೆ ಈಗಾಗಲೇ ಕೆಲವರು ಪಡೆದಿದ್ದರೇ, ಮತ್ತೆ ಕೆಲವರು ಪಡೆಯೋ ಪ್ರಯತ್ನದಲ್ಲಿ ಇದ್ದಾರೆ. ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ಎನ್ನುವಂತೆ ಜಸ್ಟ್ ಐದು ದಾಖಲೆಗಳನ್ನು ಅಪ್ ಲೋಡ್ ಮಾಡಿದ್ರೆ, ಅಂತಿಮ ಇ-ಖಾತಾವನ್ನು ಪಡೆಯಬಹುದಾಗಿದೆ. ಈ ಬಗ್ಗೆ ಬಿಬಿಎಂಪಿ ಮಾಹಿತಿ ಹಂಚಿಕೊಂಡಿದ್ದು, ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ – ಖಾತಾ ಪಡೆಯಲು ಐದು ದಾಖಲೆಗಳನ್ನು ಅಪ್‌ಲೋಡ್‌ ಮಾಡಬೇಕು. ಮಾಲೀಕರ ಆಧಾರ್‌ ಕಾರ್ಡ್‌, ಆಸ್ತಿ ತೆರಿಗೆ ಐಡಿ, ಮಾರಾಟ / ರಿಜಿಸ್ಟರ್‌ ಡೀಡ್‌ ಸಂಖ್ಯೆ, ಬೆಸ್ಕಾಂ ಖಾತೆಯ ಸಂಖ್ಯೆ (ಖಾಲಿ ನಿವೇಶನವಿದ್ದರೆ ಅಗತ್ಯವಿಲ್ಲ), ಆಸ್ತಿ ಫೋಟೋ ಈ ಎಲ್ಲಾ ದಾಖಲೆಗಳು ಬಿಬಿಎಂಪಿಯಲ್ಲಿರುವ ದಾಖಲೆಗಳೊಂದಿಗೆ ಹೊಂದಾಣಿಕೆಯಾದರೆ ಕೂಡಲೇ ಅಂತಿಮ ಇ – ಖಾತಾವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದಿದೆ. ಈ ಕುರಿತಂತೆ ಸಂಶಯವಿದ್ದಲ್ಲಿ ಇ – ಖಾತಾ ಸಹಾಯವಾಣಿ 94806 83695 ಗೆ ಕರೆ ಮಾಡಿ ಸಲಹೆ ಪಡೆಯುವಂತೆ ತಿಳಿಸಿದೆ. https://twitter.com/KarnatakaVarthe/status/1872262419860591082 ಬಿಬಿಎಂಪಿ ಇ-ಖಾತಾ…

Read More

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಇಂದಿನಿಂದ 7 ದಿನ ರಾಜ್ಯಾದ್ಯಂತ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ 7 ದಿನ ರಾಜ್ಯಾದ್ಯಂತ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ. ಇನ್ನೂ ಸರ್ಕಾರಿ ಸಭೆ, ಸಮಾರಂಭಗಳನ್ನು ಶೋಕಾಚರಣೆ ಸಂದರ್ಭದಲ್ಲಿ ನಡೆಸುವಂತಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

Read More

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನಲೆಯಲ್ಲಿ ಇಂದು ರಾಜ್ಯಾದ್ಯಂತ ಸರ್ಕಾರಿ ರಜೆಯನ್ನು ಘೋಷಣೆ ಮಾಡಿ, ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ. ಇಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ. ಅಲ್ಲದೇ ಶಾಲಾ ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ.

Read More

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಅಲ್ಲದೇ ನಾಳೆ ರಾಜ್ಯಾದ್ಯಂತ ದಿನಾಂಕ 27.12.2024ರ ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ನಾಳೆಯಿಂದ 7 ದಿನ ಶೋಕಾಚರಣೆ ಘೋಷಿಸಲಾಗಿದೆ. ನಾಳೆ ಸರ್ಕಾರಿ ರಜೆಯನ್ನು ನೀಡಿರುವುದಾಗಿ ತಿಳಿಸಿದ್ದಾರೆ.

Read More

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಗುರುವಾರ ದೆಹಲಿಯಲ್ಲಿ ನಿಧನರಾದರು. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ, “ಪ್ರಧಾನಿ ಮನಮೋಹನ್ ಸಿಂಗ್ ಜಿ ಅವರ ನಿಧನದ ಸುದ್ದಿ ತಿಳಿದು ನನಗೆ ತೀವ್ರ ದುಃಖವಾಗಿದೆ ಎಂದಿದ್ದಾರೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಆಳವಾದ ಸಂತಾಪಗಳು. ನಮ್ಮ ರಾಷ್ಟ್ರಕ್ಕೆ ನಿಮ್ಮ ಸೇವೆಗಾಗಿ ಧನ್ಯವಾದಗಳು. ನಿಮ್ಮ ಆರ್ಥಿಕ ಕ್ರಾಂತಿ ಮತ್ತು ನೀವು ದೇಶಕ್ಕೆ ತಂದ ಪ್ರಗತಿಪರ ಬದಲಾವಣೆಗಳಿಗಾಗಿ ನಿಮ್ಮನ್ನು ಯಾವಾಗಲೂ ನೆನಪಿಸಿಕೊಳ್ಳಲಾಗುತ್ತದೆ ಎಂದು ವಾದ್ರಾ ಹೇಳಿದರು. ಸಿಂಗ್ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಗುರುವಾರ ಸಂಜೆ ದೆಹಲಿಯ ಏಮ್ಸ್ ಗೆ ದಾಖಲಾದ ನಂತರ ಈ ಬೆಳವಣಿಗೆ ನಡೆದಿದೆ. ಮಾಜಿ ಪ್ರಧಾನಿಯನ್ನು ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ. https://kannadanewsnow.com/kannada/bjp-demands-resignation-of-priyank-kharge-for-contractor-sachins-suicide/ https://kannadanewsnow.com/kannada/bengaluru-power-outages-in-these-areas-from-10-am-to-3-pm-tomorrow/

Read More

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅನಾರೋಗ್ಯದ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆಸ್ಪತ್ರೆಯ ಉನ್ನತ ಮೂಲಗಳ ಮಾಹಿತಿಯಂತೆ ಅವರ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕಾರಣದಿಂದ ಬೆಳಗಾವಿಯಿಂದ ವಿಶೇಷ ವಿಮಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಇತರೆ ಗಣ್ಯರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಇನ್ನೂ ದೆಹಲಿಯ ಏಮ್ಸ್ ಆಸ್ಪತ್ರೆಯ ಉನ್ನತ ಮೂಲಗಳ ಮಾಹಿತಿಯಂತೆ ಮಾಜಿ ಪ್ರಧಾನಿ  ಮನಮೋಹನ್ ಸಿಂಗ್ ಅವರ ಸ್ಥಿತಿ ಗಂಭೀರವಾಗಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಏಮ್ಸ್ ಆಸ್ಪತ್ರೆಯಿಂದ ಕೆಲವೇ ಕ್ಷಣಗಳಲ್ಲಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವ ಸಾಧ್ಯತೆ ಇದೆ. https://kannadanewsnow.com/kannada/bjp-demands-resignation-of-priyank-kharge-for-contractor-sachins-suicide/ https://kannadanewsnow.com/kannada/bengaluru-power-outages-in-these-areas-from-10-am-to-3-pm-tomorrow/

Read More

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೆ ನೀವೇ ನೇರ ಹೊಣೆ. ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂಬುದಾಗಿ ಕರ್ನಾಟಕ ಬಿಜೆಪಿಯು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಆಗ್ರಹಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಸನ್ಮಾನ್ಯ TrollMinister ಪ್ರಿಯಾಂಕ್ ಖರ್ಗೆ ಅವರೆ, ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್‌, ಟೆಂಡರ್‌ ಕೆಲಸಕ್ಕಾಗಿ ಬೆಂಗಳೂರಿನಲ್ಲಿ ನಿಮ್ಮ ಆಪ್ತ ರಾಜು ಕಪನೂರ್‌ ಜೊತೆ ನಿಮ್ಮನ್ನು ಭೇಟಿಯಾಗಿದ್ದೇನೆ ಎಂದು ಡೆತ್‌ ನೋಟ್‌ ನಲ್ಲಿ ಬರೆದಿದ್ದಾರೆ ಎಂದಿದೆ. ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೆ ನೀವೇ ನೇರ ಹೊಣೆ. ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂಬುದಾಗಿ ಆಗ್ರಹಿಸಿದೆ. https://twitter.com/BJP4Karnataka/status/1872310367306867103 https://kannadanewsnow.com/kannada/good-news-for-property-owners-in-bengaluru-upload-these-five-documents-get-e-khata/ https://kannadanewsnow.com/kannada/bengaluru-power-outages-in-these-areas-from-10-am-to-3-pm-tomorrow/ https://kannadanewsnow.com/kannada/breaking-big-relief-for-employees-aadhaar-linking-deadline-with-uan-extended-uan-aadhaar-linking/

Read More