Author: kannadanewsnow09

ಬೆಂಗಳೂರು : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪೆಟ್ರೋಲ್ ಪ್ರತಿ ಲೀಟರ್ ಗೆ 32.98 ರೂ., ಡೀಸೆಲ್ ಪ್ರತಿ ಲೀಟರ್ ಗೆ 31.83 ರೂ. ಅಬಕಾರಿ ಸುಂಕ ಸಂಗ್ರಹ ಮಾಡುತ್ತಿದೆ. ಇದರ ಬಗ್ಗೆ ಬಿಜೆಪಿ ನಾಯಕರು ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರೆಶ್ನೆ ಮಾಡಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ಅಬಕಾರಿ ಸುಂಕ ಪೆಟ್ರೋಲ್ ಗೆ 9.48 ರೂ., ಡೀಸೆಲ್ ಗೆ 3.56 ರೂ. ವಿಧಿಸಲಾಗಿತ್ತು. ಹಾಗಾಗಿಯೇ ಆಗ ಪೆಟ್ರೋಲ್ 68.31 ರೂ., ಡಿಸೇಲ್ 48.63 ರೂ. ಗೆ ದೊರೆಯುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಪೆಟ್ರೋಲ್ 106 ರೂ ರೂ. ವರೆಗೆ ಹೋಗಿತ್ತು. ಯುಪಿ ಎ ಸರ್ಕಾರದ ಅವಧಿಯಲಿ ಕಚ್ಚಾ…

Read More

ಶಿವಮೊಗ್ಗ: ಮಾಜಿ ಎಂಎಲ್ ಸಿ, ಬಿಜೆಪಿ ಮುಖಂಡ ಭಾನು ಪ್ರಕಾಶ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಶಿವಮೊಗ್ಗದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ ಹೃದಯಾಘಾತ ಉಂಟಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಿಸೋ ಮುನ್ನ ಮಾಜಿ ಎಂಎಲ್ಸಿ ಭಾನುಪ್ರಕಾಶ್ ನಿಧನರಾದರು. ಅವರ ನಿಧನಕ್ಕೆ ಸುದ್ದಿ ಸಹ್ಯಾದ್ರಿ ಸಂಪಾದಕ ರಾಘವೇಂದ್ರ ತಾಳಗುಪ್ಪ ಸಂತಾಪ ಸೂಚಿಸಿದ್ದಾರೆ. ಮತ್ತೊಂದೆ ಈ ಬಗ್ಗೆ ಮಾತನಾಡಿದಂತ ಚಾರ್ವಕ ಸಂಪಾದಕ ರಾಘವೇಂದ್ರ ಅವರು ಇವರು ಶಿವಮೊಗ್ಗ ಜಿಲ್ಲೆಯಲ್ಲಿ ಧರ್ಮ ಧರ್ಮದ ನಡುವೆ ಕೋಮು ದ್ವೇಷವನ್ನು ಬಿತ್ಯಿದವರು. ಹಲವು ಕೋಮು ಗಲಭೆಗೆ ಕಾರಣಾದವರು. ಇದರಿಂದ ಅಮಾಯಕ್ಲರನ್ನು ಜೈಲಿಗೆ ಹೋಗುವಂತೆ ಮಾಡಿದವರು ಅಂತ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಸಮೀಪದ ಮತ್ತೂರು ಗ್ರಾಮದಲ್ಲಿ ಸಂಸದ ಗ್ರಾಮ ಮಾಡಿಕೊಂಡವರು. ಕರ್ನಾಟಕದಲ್ಲಿ ಹುಟ್ಟಿ, ಕನ್ನಡವನ್ನೇ ಒಪ್ದವರು ಆಗಿದ್ದರು. ದುಡಿಯುವ ಜನರಿಗೆ ಅರ್ಥವಾಗದ ಸಂಸ್ಕೃತವನ್ನು ತಮ್ಮ ಗ್ರಾಮಕ್ಕೆ ಇಟ್ಟುಕೊಂಡವರು ಅಂತ ತಿಳಿಸಿದ್ದಾರೆ. ಇವರು ಇಂದು ನಿಧನರಾಗಿದ್ದಾರೆ‌.…

Read More

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ದರ ಏರಿಕೆಯ ಬಗ್ಗೆಯೇ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಮತ ಚಲಾಯಿಸದೇ ಇದ್ದಕ್ಕೆ ಇಂಧನ ಮೇಲಿನ ತೆರಿಗೆ ಹೆಚ್ಚಳ ಮಾಡಲಾಗಿದೆ ಹಾಗೇ, ಹೀಗೆ ಅಂತ ಚರ್ಚೆಯಾಗುತ್ತಿದೆ. ಹಾಗಾದ್ರೇ ನಿಜಕ್ಕೂ ಪೆಟ್ರೋಲ್, ಡೀಸೆಲ್ ದರ ಕರ್ನಾಟಕದಲ್ಲಿ ಹೆಚ್ಚೋ ಅಥವಾ ಇತರೆ ರಾಜ್ಯಗಳಲ್ಲೋ ಎನ್ನುವ ಡೀಟೆಲ್ಸ್ ಮುಂದೆ ಓದಿ. ಸಿಎಂ ಸಿದ್ಧರಾಮಯ್ಯ ಅವರು, ಈ ವಿಚಾರವನ್ನು ಸಮರ್ಥಿಸಿಕೊಂಡು ಮಾತನಾಡಿ, ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. 11.4.2021ರಂದು ಪೆಟ್ರೋಲ್ ಮೇಲೆ 35% ತೆರಿಗೆ ಹಾಗೂ ಡೀಸೆಲ್ ಮೇಲೆ 24% ತೆರಿಗೆ ಹಾಕುತ್ತಿದ್ದರು. ನಂತರ ಕೇಂದ್ರದಲ್ಲಿ ಇಳಿಕೆ ಮಾಡಿದ್ದರಿಂದ ಇವರೂ 35 ರಿಂದ 25.92 ಕ್ಕೆ ನಂತರ ಇಳಿಸಿದರು. ಡೀಸಲ್ ಮೇಲೆ 14.34ಕ್ಕೆ ಇಳಿಸಿದರು. ಶೇ7 ರೂಪಾಯಿಯಷ್ಟು ಕಡಿಮೆ ಮಾಡಿದರು. ಏಕೆಂದರೆ ಕೇರಳ ಆಗಲಿ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ತಮಿಳುನಾಡು ಕಡಿಮೆ ಮಾಡಲಿಲ್ಲ ಎಂಬುದಾಗಿ ಹೇಳಿದ್ದರು. ಈಗ…

Read More

ಉಡುಪಿ: ರಾಜ್ಯದ ಖ್ಯಾತ ವೈದ್ಯ ಎ.ರಾಜಾ ಅವರು ವಯೋ ಸಹಯ ಖಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಈ ಮೂಲಕ ಖ್ಯಾತ ನರರೋಗ ತಜ್ಞ ವೈದ್ಯ ಡಾ.ಎ ರಾಜಾ ಇನ್ನಿಲ್ಲವಾಗಿದ್ದಾರೆ. ಡಾ.ಎ ರಾಜಾ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಉಡುಪಿಯ ಮಣಿಪಾಲದ ಪ್ರಖ್ಯಾತ ನರರೋಗ ತಜ್ಞರಾಗಿದ್ದ ಡಾಕ್ಟರ್ ಎ ರಾಜಾ (73) ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ. ಸುಮಾರು 30 ವರ್ಷ ಕೆಎಂಸಿ ಆಸ್ಪತ್ರೆ ಮಣಿಪಾಲ ಹಾಗೂ 15 ವರ್ಷ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದ ಅವರು, ಸಾವಿರಾರು ರೋಗಿಗಳಿಗೆ ಉಪಚಾರ ಮಾಡಿದ್ದಾರೆ. ಅಗಲಿದ ಆ ದಿವ್ಯ ಆತ್ಮಕ್ಕೆ ಶಾಂತಿ ಸಿಗಲಿ, ಮೃತರ ಕುಟುಂಬ ವರ್ಗ ಮತ್ತು ಅಭಿಮಾನಿ ಬಳಗಕ್ಕೆ ಅವರ ಸಾವಿನ ನೋವಿನ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/terror-attack-in-jammu-and-kashmir-union-minister-amit-shah-chairs-high-level-meeting/ https://kannadanewsnow.com/kannada/no-need-to-teach-about-riots-demolition-in-schools-says-ncert-chief-after-textbook-revisions/

Read More

ಮೈಸೂರು: ಇಂದು ಭಾನುವಾರದ ರಜೆಯ ಹಿನ್ನಲೆಯಲ್ಲಿ ಗ್ರಾಮದ ಕೆರೆಯೊಂದಕ್ಕೆ ಈಜಲು ತೆರಳಿದ್ದಂತ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ, ಸಾಹುಕಾರಹುಂಡಿ ಗ್ರಾಮದಲ್ಲಿ ನಡೆದಿದೆ. ಮೈಸೂರು ತಾಲೂಕಿನ ಸಾಹುಕಾರಹುಂಡಿ ಗ್ರಾಮದಲ್ಲಿನ ಕೆರೆಗೆ ಈಜಲು ವರುಣ್(16) ಹಾಗೂ ಜಸ್ವಂತ್(14) ತೆರಳಿದ್ದರು. ಇಂದು ಹೀಗೆ ತೆರಳಿದ್ದಂತ ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮೈಸೂರು ತಾಲೂಕಿನ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಮ ದಾಖಲಾಗಿದೆ. https://kannadanewsnow.com/kannada/tumakurus-chinnahalli-contaminated-water-case-one-person-tests-positive-for-cholera/ https://kannadanewsnow.com/kannada/terror-attack-in-jammu-and-kashmir-union-minister-amit-shah-chairs-high-level-meeting/

Read More

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಸಾವನ್ನಪ್ಪಿ, ಹಲವರು ಅಸ್ವಸ್ಥಗೊಂಡ ಘಟನೆ ನಡೆದಿತ್ತು. ಈಗ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಯೊಬ್ಬರಿಗೆ ಕಾಲರಾ ದೃಢಪಟ್ಟಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರಿನ ಸೇವನೆ ಮತ್ತು ಸೇವಿಸಿರುವ ಆಹಾರದಿಂದಾಗಿ ಒಟ್ಟು 98 ಜನರು ಅಸ್ವಸ್ತರಾಗಿದ್ದು, ಅದರಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ 39 ಜನರು ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ. ಸಚಿವ ಪ್ರಿಯಾಂಕ್ ಖರ್ಗೆ ಸೂಚನೆಯ ಮೇರೆಗೆ ಚಿನ್ನೇನಹಳ್ಳಿ ಗ್ರಾಮದ ಶಾಲೆಯಲ್ಲಿಯೇ 6 ಹಾಸಿಗೆಗಳ ತುರ್ತು ಚಿಕಿತ್ಸಾ ಕೇಂದ್ರವನ್ನು ತೆರೆಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯವಾದ ಎಲ್ಲಾ ಚಿಕಿತ್ಸೆಗಳನ್ನು ನೀಡಲು ವೈದ್ಯಕೀಯ ಸಿಬ್ಬಂದಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಚಿನ್ನೇನಹಳ್ಳಿ ಗ್ರಾಮದಲ್ಲಿ ಇರುವ ಕೊಳವೆ ಬಾವಿಗಳು ಮತ್ತು ನೀರಿನ ಜಲಸಂಗ್ರಹಗಳಿಂದ ಸರಬರಾಜು ಮಾಡುತ್ತಿದ್ದ ನೀರನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ 2 ಟ್ಯಾಂಕರ್ಗಳ ಮೂಲಕ ಗ್ರಾಮಕ್ಕೆ ನೀರು ಸರಬರಾಜು ಮಾಡಲಾಗುತ್ತಿದೆ. ಗ್ರಾಮದಲ್ಲಿರುವ ಎಲ್ಲಾ ನೀರಿನ ಮೂಲಗಳ ಮಾದರಿಗಳನ್ನು ಸಂಗ್ರಹಿಸಿ,…

Read More

ಬೆಂಗಳೂರು/ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ತಮ್ಮ ಕಸ್ಟಡಿಗೆ 13 ಆರೋಪಿಗಳನ್ನು ಪಡೆದಿರುವಂತ ಪೊಲೀಸರು, ಇಂದು ಅವರನ್ನು ಕರೆದೊಯ್ದು ಸ್ಥಳ ಮಹಜರ್ ನಡೆಸಿದರು. ಈ ವೇಳೆಯಲ್ಲಿ ಮಹತ್ವದ ಸಾಕ್ಷ್ಯಗಳು ಪೊಲೀಸರಿಗೆ ಲಭ್ಯವಾಗಿದ್ದಾವೆ ಎನ್ನಲಾಗುತ್ತಿದೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎ1 ಆರೋಪಿ ಪವಿತ್ರಾ ಗೌಡ ಅವರ ರಾಜರಾಜೇಶ್ವರಿ ನಗರದಲ್ಲಿರುವಂತ ಮನೆಗೆ ಕರೆದೊಯ್ದ ಪೊಲೀಸರು, ಸ್ಥಳ ಮಹಜರು ನಡೆಸಿದರು. ಸ್ಥಳ ಮಹಜರು ವೇಳೆಯಲ್ಲಿ ಪವಿತ್ರಾ ಗೌಡಗೆ ಸಂಬಂಧಿಸಿದಂತ ಅನೇಕ ವಸ್ತುಗಳನ್ನು ಕೊಲೆ ಪ್ರಕರಣದಲ್ಲಿ ಸೀಜ್ ಮಾಡಿರೋದಾಗಿ ತಿಳಿದು ಬಂದಿದೆ. ಇನ್ನೂ ಚಿತ್ರದುರ್ಗದ ಸಿಹಿನೀರು ಹೊಂಡದ ಬಳಿಯಲ್ಲಿನ ಅನು ಆಲಿಯಾಸ್ ಅನುಕುಮಾರ್ ಮನೆಗೂ ಆರೋಪಿಯನ್ನು ಕರೆದೊಯ್ದ ಪೊಲೀಸರು ಸ್ಥಳ ಮಹಜರು ನಡೆಸಿದರು. ಆತನ ಮನೆಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂದ ಕೆಲ ಸಾಕ್ಷ್ಯಗಳನ್ನು ಜಪ್ತಿ ಮಾಡಿದ್ದು, ಅವುಗಳನ್ನು ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಿಕೊಟ್ಟಿರೋದಾಗಿ ಹೇಳಲಾಗುತ್ತಿದೆ. ಇದೇ ವೇಳೆಯಲ್ಲಿ ಪೊಲೀಸರು ರೇಣುಕಾಸ್ವಾಮಿ ಹತ್ಯೆ ಸಂಬಂಧ ಆರೋಪಿಗಳಿಗೆ ಹಣ ಸಂದಾಯದ ಬಗ್ಗೆಯೂ ಮಾಹಿತಿ ಕಲೆಹಾಕುತ್ತಿದ್ದಾರೆ. https://kannadanewsnow.com/kannada/9-students-admitted-to-hospital-after-consuming-food-at-nss-camp-in-shivamogga/ https://kannadanewsnow.com/kannada/terror-attack-in-jammu-and-kashmir-union-minister-amit-shah-chairs-high-level-meeting/

Read More

ಬೆಂಗಳೂರು : ಟೆರೆಸ್ ಮೇಲೆ ಬಟ್ಟೆ ತರಲು ಹೋದಾಗ ಪಕ್ಕದಲ್ಲಿದ್ದ ಮಾವಿನ ಕಾಯಿ ಕೀಳಲು ಹೋದ ಬಾಲಕ ವಿದ್ಯುತ್ ತಂತಿ ಸ್ಪರ್ಶಿಸಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಈ ಒಂದು ದುರ್ಘಟನೆ ಸಂಭವಿಸಿತ್ತು. ಮೃತ ಬಾಲಕನನ್ನು 9ನೇ ತರಗತಿಯ ಸಾಯಿ ಭುವನ್ ಎಂಬುದಾಗಿ ತಿಳಿದು ಬಂದಿತ್ತು. ಈ ಪ್ರಕರಣ ಸಂಬಂಧ ಶಾಲೆಯ ಪ್ರಾಂಶುಪಾಲರು ಸೇರಿದಂತೆ 8 ಮಂದಿಯನ್ನು ಅಮಾನತುಗೊಳಿಸಲಾಗಿದೆ. ಜೂನ್.9ರಂದು ಹೊಸಕೋಟೆ ನಗರದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿದ್ದು ಓದುತ್ತಿದ್ದ ಅಣ್ಣ-ತಮ್ಮ ಟೆರೆಸ್ ಮೇಲೆ ಹಾಕಿದ್ದ ಬಟ್ಟೆ ತರಲು ಹೋಗಿದ್ದರು. ಈ ವೇಳೆ ಅಲ್ಲೇ ಇದ್ದ ಮರದಲ್ಲಿ ಬಿಟ್ಟಿದ ಮಾವಿನ ಹಣ್ಣನ್ನು ಕೀಳಲು ಹೋಗಿದ್ದು ಓರ್ವ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿ ಬಾಲಕ ಮಹಡಿ ಮೇಲಿದ್ದ ಕೆಳಕ್ಕೆ ಬಿದ್ದಿದ್ದಾನೆ. ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದನು. ಅಣ್ಣ ತಮ್ಮ ಇಬ್ಬರೂ ಕಳೆದ ಎರಡು ವರ್ಷಗಳಿಂದ ವಸತಿ…

Read More

ಬೆಳಗಾವಿ: ಕೇವಲ ಒಂದೇ ಒಂದು ಎಕರೆ ಜಮೀನಿಗಾಗಿ ಉಂಟಾದ ಕಲಹದಿಂದ, ತಮ್ಮನನ್ನೇ ಸುಪಾರಿ ಕೊಟ್ಟು ಅಣ್ಣನೊಬ್ಬ ಕೊಲೆಗೈಯ್ಯಿಸಿದ್ದಾನೆ. ಈ ಸಂಬಂಧ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಸುಲ್ತಾನಪುರ ಗ್ರಾಮದಲ್ಲಿ ಈರಪ್ಪ ಚೌಗಲಾ ಹಾಗೂ ಶ್ರೀಶೈಲ್ ಚೌಗಲಾ ನಡುವೆ ಒಂದು ಎಕರೆ ಜಮೀನಿಗಾಗಿ ಕಲಹ ಉಂಟಾಗಿತ್ತು. ಇದು ವಿಕೋಪಕ್ಕೆ ತಿರುಗಿ, ತಮ್ಮನನ್ನು ಹತ್ಯೆ ಮಾಡಿಸೋ ಸಂಚನ್ನು ಶ್ರೀಶೈಲ್ ರೂಪಿಸಿದ್ದಾನೆ. ಜೂನ್.4ರಂದು ಸಂಜೆ 9 ಗಂಟೆಯ ವೇಳೆಗೆ ತೋಟದ ಮನೆಗೆ ಹೋಗುತ್ತಿದ್ದಂತ ಈರಪ್ಪ ಚೌಗಲಾ(24) ಮೇಲೆ ಕಾರಿನಲ್ಲಿ ಬಂದಂತ ಸುಪಾರಿ ಪಡೆದಿದ್ದವರು ಅಪಹರಿಸಿದ್ದಾರೆ. ಆ ಬಳಿಕ ಬಾಗಲಕೋಟೆಯ ಕೋಲಾರ್ ಜಾಕ್ವೆಟ್ ಬಳಿಯಲ್ಲಿ ಹತ್ಯೆಗೈದು ಮೃತದೇಹ ಬಿಸಾಕಿ ಹೋಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಂತ ಹಾರೊಗೇರಿ ಠಾಣೆಯ ಪೊಲೀಸರು ಈರಪ್ಪನನ್ನು ಅಪಹರಿಸಿ, ಹತ್ಯೆಗೈದಿದ್ದಂತ ಸಹೋದರ ಶ್ರೀಶೈಲ್ ಚೌಗಲಾ ಸೇರಿದಂತೆ 8 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಗಳನ್ನು ವಿಚಾರಣೆ ನಡೆಸಿದಾಗ ಆಸ್ತಿ ವಿಚಾರದ ದ್ವೇಷಕ್ಕಾಗಿ ಸುಪಾರಿ ಕೊಟ್ಟು ತಮ್ಮನನ್ನು ಕೊಲೆಗೈಸಿರೋದಾಗಿ ಒಪ್ಪಿಕೊಂಡಿರೋದಾಗಿ ತಿಳಿದು ಬಂದಿದೆ.…

Read More

ನವದೆಹಲಿ: ಬ್ಲೂಮ್ಬರ್ಗ್ ವರದಿಯ ಪ್ರಕಾರ, ಆಹಾರ ವಿತರಣಾ ದೈತ್ಯ ಜೊಮಾಟೊ ಪೇಟಿಎಂನ ಚಲನಚಿತ್ರ ಟಿಕೆಟಿಂಗ್ ಮತ್ತು ಈವೆಂಟ್ ವ್ಯವಹಾರವನ್ನು ಸ್ವಾಧೀನಪಡಿಸಿಕೊಳ್ಳಲು ಸುಧಾರಿತ ಚರ್ಚೆಗಳನ್ನು ನಡೆಸುತ್ತಿದೆ. ಪೇಟಿಎಂನ ಮಾತೃಸಂಸ್ಥೆಯಾದ ಒನ್ 97 ಕಮ್ಯುನಿಕೇಷನ್ಸ್ ಲಿಮಿಟೆಡ್ ಮತ್ತು ಆನ್ಲೈನ್ ಆಹಾರ ವಿತರಣಾ ದೈತ್ಯ ಜೊಮಾಟೊ ನಡುವಿನ ಮಾತುಕತೆಗಳು ಮುಂದುವರಿದ ಹಂತದಲ್ಲಿವೆ ಎಂದು ವರದಿಯಾಗಿದೆ. ಈ ಕಾರ್ಯತಂತ್ರದ ಕ್ರಮವು ಜೊಮಾಟೊ ತನ್ನ ‘ಹೊರಹೋಗುವ’ ಕೊಡುಗೆಗಳನ್ನು ವಿಸ್ತರಿಸುವ ಯೋಜನೆಯೊಂದಿಗೆ ಹೊಂದಿಕೆಯಾಗುತ್ತದೆ. ಎಕನಾಮಿಕ್ ಟೈಮ್ಸ್ ವರದಿಯ ಪ್ರಕಾರ, ಸಂಭಾವ್ಯ ಒಪ್ಪಂದವು ಪೇಟಿಎಂನ ವರ್ಟಿಕಲ್ ಮೌಲ್ಯವನ್ನು ಸುಮಾರು 1,500 ಕೋಟಿ ರೂ.ಗೆ ಹೆಚ್ಚಿಸಬಹುದು. ಈ ಸ್ವಾಧೀನವು ಅಂತಿಮಗೊಂಡರೆ, 2021 ರಲ್ಲಿ ತ್ವರಿತ ವಾಣಿಜ್ಯ ಪ್ಲಾಟ್ಫಾರ್ಮ್ ಬ್ಲಿಂಕಿಟ್ (ಹಿಂದೆ ಗ್ರೋಫರ್ಸ್) ಅನ್ನು ಸ್ವಾಧೀನಪಡಿಸಿಕೊಂಡ ನಂತರ ಜೊಮಾಟೊದ ಎರಡನೇ ಅತಿದೊಡ್ಡ ಖರೀದಿಯಾಗಿದೆ, ಇದು 4,447 ಕೋಟಿ ರೂ.ಗಳ ಮೌಲ್ಯದ ಆಲ್-ಸ್ಟಾಕ್ ಒಪ್ಪಂದವಾಗಿದೆ ಎಂದು ವರದಿ ತಿಳಿಸಿದೆ. ಆಹಾರ, ದಿನಸಿ ಮತ್ತು ಮನರಂಜನೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಗ್ರಾಹಕರ ಬೇಡಿಕೆಯನ್ನು ಸೆರೆಹಿಡಿಯುವ ವಿಶಾಲ ಉದ್ದೇಶಕ್ಕೆ ಪೂರಕವಾಗಿ,…

Read More