Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸಾಕು ಪ್ರಾಣಿಗಳ ಕಡಿತಕ್ಕೆ ಒಳಗಾಗೋದು, ಪರಚುವಿಕೆಗೆ ಒಳಗಾದಾಗ ನೀವು ನಿರ್ಲಕ್ಷ್ಯಿಸಿದ್ರೇ, ಸಾವು ಗ್ಯಾರಂಟಿಯೇ. ಹೀಗಾಗಿ ನೀವು ಯಾವುದೇ ಪ್ರಾಣಿಯಿಂದ ಕಡಿತಕ್ಕೆ, ಪರಚುವಿಕೆಗೆ ಒಳಗಾಗಿದ್ದರೇ ನಿರ್ಲಕ್ಷ್ಯಿಸ ಬೇಡಿ. ಏನು ಮಾಡಬೇಕು ಅಂತ ಮುಂದೆ ಓದಿ. ನೀವು ಯಾವುದೇ ಪ್ರಾಣಿಯಿಂದ (ಸಾಕು ಪ್ರಾಣಿಗಳೂ ಸಹ) ಕಡಿತಕ್ಕೆ ಅಥವಾ ಪರಚುವಿಕೆಗೆ ಒಳಗಾದರೆ ನಿರ್ಲಕ್ಷಿಸಬೇಡಿ. ಸಾಬೂನನ್ನು ಬಳಸಿ 15 ನಿಮಿಷಗಳ ಕಾಲ ಗಾಯವನ್ನು ನಿರಂತರವಾಗಿ ನೀರಿನಿಂದ ತೊಳೆಯಿರಿ. ಬಳಿಕ ನಿಮ್ಮ ಹತ್ತಿರದ ಆಸ್ಪತ್ರೆಗೆ ತೆರಳಿ ರೇಬಿಸ್ ನಿರೋಧಕ ಚುಚ್ಚುಮದ್ದು ಮತ್ತು ಇಮ್ಯುನೋಗ್ಲೋಬಲಿನ್ ಪಡೆದುಕೊಳ್ಳಿ. ನೆನಪಿಡಿ : ಯಾವುದೇ ರೀತಿಯ ಪ್ರಾಣಿಗಳು ಕಚ್ಚಿದಾಗ ತಕ್ಷಣವೇ ಮಕ್ಕಳು ತಮ್ಮ ಪೋಷಕರಿಗೆ / ಶಿಕ್ಷಕರಿಗೆ ತಿಳಿಸುವಂತೆ ಮಕ್ಕಳಲ್ಲಿ ಅರಿವು ಮೂಡಿಸಿ. https://twitter.com/KarnatakaVarthe/status/1840008312290451903 https://kannadanewsnow.com/kannada/dasara-to-be-celebrated-as-peoples-festival-cm-siddaramaiah/ https://kannadanewsnow.com/kannada/breaking-muslims-say-hum-paanch-hamara-punchis-mla-yatnal/
ಬೆಂಗಳೂರು: ನಾಡಹಬ್ಬ ಮೈಸೂರು ದಸರಾವನ್ನು ಜನರ ಉಸ್ತವವಾಗಿ ಆಚರಿಸುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ ನಾಡಹಬ್ಬಕ್ಕೆ ಮತ್ತಷ್ಟು ಮೆರುಗು ನೀಡಲು ಮುಂದಾಗಿದ್ದಾರೆ. ನಾಡಹಬ್ಬ ದಸರಾ ಉತ್ಸವಕ್ಕೆ ಅಕ್ಟೋಬರ್ 3ರಂದು ಸಾಹಿತಿ ಡಾ. ಹಂಪ ನಾಗರಾಜಯ್ಯ ಅವರು ಚಾಲನೆ ನೀಡಲಿದ್ದಾರೆ. ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಸರ್ವ ಸಿದ್ಧತೆಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1839989544080347462 https://kannadanewsnow.com/kannada/decision-to-set-up-ai-skill-board-in-karnataka-priyank-kharge/ https://kannadanewsnow.com/kannada/that-mother-never-came-out-she-was-innocent-what-ks-eshwarappa-said-about-cms-wife-parvathi/
ಬೆಂಗಳೂರು: ವಿಶ್ವದಾಧ್ಯಂತ ಎಐ ತಂತ್ರಜ್ಞಾನ ಮುಂಚೂಣಿಯಲ್ಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಎಐ ಕೌಶಲ ಮಂಡಳಿ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಬೆಂಗಳೂರು ಮತ್ತು ಬೆಂಗಳೂರಿನ ಹೊರವಲಯದಲ್ಲಿ ಮೂರು ಹೊಸ ಟೆಕ್ ಪಾರ್ಕ್ ಸ್ಥಾಪಿಸುವ ಮೂಲಕ ಜಾಗತಿಕ ನಾವೀನ್ಯ ಜಿಲ್ಲೆಗಳ ರಚನೆಗೆ ನಿರ್ಧರಿಸಲಾಗಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗೆ ₹100 ಕೋಟಿ ಆವಿಷ್ಕಾರ ನಿಧಿ ಸ್ಥಾಪಿಸಲಾಗುವುದು. ಕೃತಕ ಬುದ್ಧಿಮತ್ತೆಗೆ ಉತ್ತೇಜನ ನೀಡಲು ಉತ್ಕೃಷ್ಟತಾ ಕೇಂದ್ರ ಮತ್ತು ಎಐ ಕೌಶಲ ಮಂಡಳಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1839972547074383992 ರಾಜ್ಯದ ಯುವಕ ಯುವತಿಯರು ಕಾಲೇಜುಗಳಲ್ಲಿ ತಾಂತ್ರಿಕ ಶಿಕ್ಷಣಾರ್ಹತೆ ಪಡೆದ ನಂತರ, ದಿನದಿಂದ ದಿನಕ್ಕೆ ಬದಲಾಗುತ್ತಿರುವ ಹಾಗೂ ವಿಭಿನ್ನ ಉದ್ಯೋಗ ಸಂಸ್ಥೆಗಳಲ್ಲಿ ವಿಭಿನ್ನವಾದ ನಿಪುಣತೆಯನ್ನು ಹೊಂದಿರುವ ಉದ್ಯೋಗಿಗಳ ಬೇಡಿಕೆಯಿರುವುದರಿಂದ ಕರ್ನಾಟಕ ಸರ್ಕಾರ ‘ನಿಪುಣ ಕರ್ನಾಟಕ’ ಯೋಜನೆಯನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ಮೂಲಕ ನಾವು ರಾಜ್ಯದ ಯುವ ಸಮೂಹಕ್ಕೆ ಸೂಕ್ತ ತರಬೇತಿ ನೀಡಿ ಅವರನ್ನು ಅವಶ್ಯಕತೆಗೆ ಅನುಗುಣವಾದ ಉದ್ಯೋಗಗಳಿಗೆ ತಯಾರು…
ಕನಕಪುರ : “ಕುಮಾರಸ್ವಾಮಿಯವರಿಗೆ ಅವರ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡಬೇಡಿ ಎಂದು ಅವರನ್ನು ಹಿಡಿದುಕೊಂಡವರು ಯಾರು?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. ನನ್ನ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡಿದರೆ ಕಾಂಗ್ರೆಸ್ ಸರ್ಕಾರದ ಏಳು ಜನ ಮಂತ್ರಿಗಳು ರಾಜೀನಾಮೆ ನೀಡಬೇಕಾಗುತ್ತದೆ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ, “ದಾಖಲೆಗಳನ್ನು ಬಿಡುಗಡೆ ಮಾಡಲು ಬೇಡ ಎಂದವರು ಯಾರು?” ಎಂದರು. ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಉತ್ತರಿಸಿದ್ದು ಹೀಗೆ. ಬಿಜೆಪಿ- ದಳ ಎರಡು ಒಂದೇ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿ ಎಂದು ಬಿಜೆಪಿ ಒತ್ತಾಯ ಮಾಡುತ್ತಿದೆ. ಕುಮಾರಸ್ವಾಮಿಯವರು ಮೌನವಾಗಿದ್ದಾರೆ ಎಂದು ಕೇಳಿದಾಗ, “ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ನಮ್ಮ ಪಕ್ಷ ಸಿದ್ದರಾಮಯ್ಯ ಅವರ ಬೆಂಬಲಕ್ಕಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇದರ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನಮಗೆ ಬಿಜೆಪಿ ಮತ್ತು ದಳ ಎರಡೂ ಒಂದೇ” ಎಂದರು. ಕನಕಪುರದ ಮೆಡಿಕಲ್ ಕಾಲೇಜು ವಿಚಾರವಾಗಿ ಸರ್ಕಾರ…
ಬೆಂಗಳೂರು: ವಿಶ್ವಕರ್ಮ ಸಮಾಜ ನಿಜವಾದ ಮೊದಲ ಇಂಜಿನಿಯರ್ ಗಳು. ಅವರಲ್ಲಿರುವ ಕುಶಲತೆ ಅಪಾರ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ವಿಶ್ವಕರ್ಮ ನಾಡೋಜ ಡಾ. ಬಿ.ಎಂ. ಉಮೇಶ್ ಕುಮಾರ್ ನೇತೃತ್ವದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ವಿರಾಟ್ ವಿಶ್ವಕರ್ಮ ಮಹೋತ್ಸವವನ್ನು ಉದ್ಘಾಟಿಸಿ ಸಾಧಕರಿಗೆ ವಿಶ್ವಕರ್ಮ ಶ್ರೀ, ವಿಶ್ವಕರ್ಮ ಸೇವಾ ರತ್ನ ಸೇರಿ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದ ಅವರು, ವಿಶ್ವಕರ್ಮ ಸಮುದಾಯ ಭವ್ಯವಾದ ಶ್ರಮ ಸಂಸ್ಕೃತಿಯನ್ನು ಬೆಳೆಸಿಕೊಂಡು, ಉಳಿಸಿಕೊಂಡು ಬಂದಿದೆ. ನಿಮ್ಮಲ್ಲಿ ಅಗಾಧ ಪ್ರತಿಭೆ ಇದ್ದು, ಮುಂದಿನ ಪೀಳಿಗೆಗೆಯನ್ನು ಇನ್ನಷ್ಟು ಸಶಕ್ತಗೊಳಿಸಬೇಕಾಗಿದೆ. ಸಮುದಾಯದ ಸೃಜನ ಶೀಲತೆಯನ್ನು ಪ್ರೋತ್ಸಾಹಿಸಿ ಮಾರ್ಗದರ್ಶನ ನೀಡುವ ಅಗತ್ಯವಿದೆ ಎಂದರು. ಯಾವುದೇ ಸಮುದಾಯಕ್ಕೆ ಶಿಕ್ಷಣ, ಆರೋಗ್ಯ ಮತ್ತು ಮಾಹಿತಿ ಅತ್ಯಂತ ಅಗತ್ಯವಾಗಿದೆ. ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಅವಕಾಶವಿದೆ. ಪ್ರತಿಯೊಬ್ಬರೂ ಬೆಳೆಯಲು ಅವಕಾಶವಿದೆ. ಎಲ್ಲರೂ ಸಶಕ್ತರಾದರೆ ದೇಶ ಸೂಪರ್ ಪವರ್ ಆಗಲಿದೆ.…
ಕೆಎನ್ಎನ್ ಸಿನಿಮಾ ಡೆಸ್ಕ್: ಬಿಗ್ ಬಾಸ್ ಕನ್ನಡ 11ಗೆ ವೇದಿಕೆ ಸಿದ್ಧವಾಗಿದೆ. ಈ ಸ್ಪರ್ಧೆಗಾಗಿ ದೊಡ್ಮನೆ ಕೂಡ ಸಿದ್ದಗೊಂಡಿದೆ. ಈ ಬಾರಿಯ ಸ್ವರ್ಗ ಮತ್ತು ನರಕ ಅನ್ನೋ ಎರಡು ಥೀಮ್ ಗಳೊಂದಿಗೆ ಬಿಗ್ ಬಾಸ್ ಆಟ ಶುರುವಾಗಲಿದೆ. ಹಾಗಾದ್ರೇ ಬಿಗ್ ಬಾಸ್ ಮನೆ ಹೇಗಿಗೆ ಎನ್ನುವ ಬಗ್ಗೆ ಮೇಕಿಂಗ್ ವೀಡಿಯೋ ಔಟ್ ಆಗಿದ್ದು, ಆ ಬಗ್ಗೆ ಮುಂದೆ ಓದಿ. ಬಿಗ್ ಬಾಸ್ ಕನ್ನಡ 11ನೇ ಸೀಸನ್ ಮನೆಯ ತೆರೆಯ ಹಿಂದೆ ಹೇಗಿರಲಿದೆ ಎನ್ನುವ ಝಲಕ್ ರಿವೀಲ್ ಆಗಿದೆ. ಈ ಬಾರಿ ಸ್ವರ್ಗ ಮತ್ತು ನರಕ ಎನ್ನುವ ಥೀಮ್ ನೊಂದಿಗೆ ದೊಡ್ಮನೆಯ ಆಟ ಶುರುವಾಗಲಿದೆ. ಬಿಗ್ ಬಾಸ್ ಮನೆಗೆ ಯಾರೆಲ್ಲ ಸೇರಲಿದ್ದಾರೆ ಎನ್ನುವ ಬಗ್ಗೆ ಇನ್ನೂ ರಿವೀಲ್ ಆಗಿಲ್ಲ. ಆ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ. ಇದೆಲ್ಲದರ ನಡುವೆ ಬಿಗ್ ಬಾಸ್ ತಂಡ ದೊಡ್ಡ ಮಟ್ಟದಲ್ಲಿ ಮನೆಯ ತಯಾರಿ ನಡೆದಿದ್ದು, ವಾಹಿನಿಯು ಹೇಗೆ ಬಿಗ್ ಬಾಸ್ ಮನೆ ರಚನೆಯಾಗುತ್ತಿದೆ ಎನ್ನುವಂತ ವೀಡಿಯೋವನ್ನು ರಿಲೀಸ್…
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೂ ದೂರು ನೀಡಲಾಗಿದೆ. ಇಂದು ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ದೂರುದಾರ ಸ್ನೇಹಮಹಿ ಕೃಷ್ಣ ಅವರು ಇಡಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ಹೀಗಾಗಿ ಸಿಎಂ ಸಿದ್ಧರಾಮಯ್ಯಗೆ ಇಡಿ ಸಂಕಷ್ಟ ಕೂಡ ಎದುರಾದಂತೆ ಆಗಿದೆ. ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಇದರನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ, ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿಯಲಾಗಿತ್ತು. ಈ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ಎಫ್ಐಆರ್ ದಾಖಲಿಸಿ, ತನಿಖೆಗೆ ಆದೇಶಿಸಿತ್ತು. ಅದರಂತೆ ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಅವರ ಪತ್ನಿ ಹಾಗೂ ಭಾಮೈದ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/mangaluru-bmw-car-catches-fire-in-mangaluru/ https://kannadanewsnow.com/kannada/breaking-muslims-say-hum-paanch-hamara-punchis-mla-yatnal/
ಪೂರ್ವ ಜನ್ಮದ ಕರ್ಮ ಫಲ ಈ ಜನ್ಮದಲ್ಲಿ ಪಡೆದಿರುವ ಪ್ರತಿಫಲ. ನಮಗೆ ನಮ್ಮ ಪೂರ್ವ ಜನ್ಮದ ಕರ್ಮಗಳಿಂದಲೇ… ಈ ಜನ್ಮದಲ್ಲಿ… ತಂದೆ, ತಾಯಿ, ಅಣ್ಣ, ಅಕ್ಕ, ಹೆಂಡತಿ, ಗಂಡ, ಪ್ರೇಯಸಿ, ಪ್ರಿಯಕರ, ಮಿತ್ರರು, ಶತ್ರುಗಳು ಎನ್ನುವ ಅನೇಕ ಸಂಬಂಧಗಳು ನಮಗೆ ಈ ಪ್ರಪಂಚದಲ್ಲಿ ಲಭಿಸುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ…
ಮಂಗಳೂರು: ನಗರದಲ್ಲಿ ನಡು ರಸ್ತೆಯಲ್ಲೇ ಐಷಾರಾಮಿ ಕಾರಾಗಿರುವಂತ ಬಿಎಂಡಬ್ಲ್ಯೂ ಕಾರೊಂದು ಧಗಧಗಿಸಿ ಹೊತ್ತಿ ಉರಿದಿರುವಂತ ಘಟನೆ ನಡೆದಿದೆ. ಮಂಗಳೂರಿನ ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಸಮೀಪದಲ್ಲಿ ಗುರುದೀಪ್ ಎಂಬುವರಿಗೆ ಸೇರಿದಂತ ಬಿಎಂಡಬ್ಲ್ಯೂಕಾರೊಂದು ದಿಢೀರ್ ಬೆಂಕಿಯಿಂದ ಹೊತ್ತಿ ಉರಿದಿದೆ. ದೆಹಲಿಯ ನೋಂದಣಿ ಹೊಂದಿದ್ದಂತ ಕಾರು ಇದಾಗಿದ್ದು, ಸರ್ವೀಸ್ ಮಾಡಿಸಲು ಗ್ಯಾರೇಜಿಗೆ ತರುತ್ತಿದ್ದಂತ ವೇಳೆಯಲ್ಲಿ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ನಡು ರಸ್ತೆಯಲ್ಲೇ ನಿಲ್ಲಿಸಿ, ಗುರುದೀಪ್ ಹೊರ ಓಡಿ ಬಂದ ಕಾರಣ, ಕ್ಷಣಾರ್ಧದಲ್ಲಿ ಕಾರು ಧಗಧಗಿಸಿ ಹೊತ್ತಿ ಉರಿದಿದೆ. ಕೂಡಲೇ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸುವ ವೇಳೆಗಾಗಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿತ್ತು ಎನ್ನಲಾಗಿದೆ. ಸ್ಥಳದಲ್ಲಿದ್ದಂತ ಜನರು ನಡು ರಸ್ತೆಯಲ್ಲೇ ಕಾರು ಧಗಧಗಿಸಿ ಹೊತ್ತಿ ಉರಿದಿದ್ದರಿಂದ ಬೆಚ್ಚಿ ಬಿದ್ದಿದ್ದಾರೆ ಎನ್ನಲಾಗಿದೆ. ಕಾರು ಹೊತ್ತಿ ಉರಿಯಲು ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಆದರೇ ಈ ಬಗ್ಗೆ ಹೆಚ್ಚಿನ ತನಿಖೆಯ ನಂತ್ರ ನಿಖರ ಮಾಹಿತಿ ತಿಳಿಯಬೇಕಿದೆ. https://kannadanewsnow.com/kannada/reliances-fresh-pick-store-opens-at-1mg-mall-in-bengaluru/ https://kannadanewsnow.com/kannada/breaking-muslims-say-hum-paanch-hamara-punchis-mla-yatnal/
ಬೆಂಗಳೂರು : ರಿಲಯನ್ಸ್ ರೀಟೇಲ್ನ ಪ್ರಮುಖ ದಿನಸಿ ಮಳಿಗೆಯ ಬ್ರ್ಯಾಂಡ್ ಫ್ರೆಶ್ಪಿಕ್, ಬೆಂಗಳೂರಿನಲ್ಲಿ ತನ್ನ ಮೊದಲ ಮಳಿಗೆ ಪ್ರಾರಂಭಿಸುತ್ತಿದೆ. ಟ್ರಿನಿಟಿ ವೃತ್ತದ 1ಎಂಜಿ ಮಾಲ್ನ 4ನೇ ಮಹಡಿಯಲ್ಲಿ ಹೊಸ ಮಳಿಗೆ ಸಜ್ಜಾಗಿದೆ. ಫ್ರೆಶ್ಪಿಕ್ ಬ್ರ್ಯಾಂಡ್ ಭಾರತದಲ್ಲಿ ತೆರೆಯುತ್ತಿರುವ ಎರಡನೇ ಮಳಿಗೆ ಇದಾಗಿದೆ. ಮುಂಬೈನಲ್ಲಿ ಮೊದಲ ಮಳಿಗೆಯು ಅಭೂತಪೂರ್ವ ಯಶಸ್ಸು ಕಂಡ ಬಳಿಕ ಬೆಂಗಳೂರಿನಲ್ಲಿ ಎರಡನೇ ಮಳಿಗೆ ತೆರೆಯಲಾಗುತ್ತಿದೆ. 1ಎಂಜಿ ಮಾಲ್ನಲ್ಲಿ ಇರುವ ಹೊಸ ಮಳಿಗೆಯು 14,000 ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ. ಸಾಟಿಯಿಲ್ಲದ ಉತ್ತಮ ಶಾಪಿಂಗ್ ಅನುಭವವನ್ನು ಈ ಮಳಿಗೆ ನೀಡುತ್ತದೆ. ಆಹಾರ ಪ್ರಿಯರು ಮತ್ತು ಆರೋಗ್ಯ ಪ್ರಜ್ಞೆಯುಳ್ಳ ಗ್ರಾಹಕರ ಪರಿಷ್ಕೃತ ರುಚಿಯನ್ನು ಪೂರೈಸುವ ನಿಟ್ಟಿನಲ್ಲಿ ಇದನ್ನು ವಿನ್ಯಾಸಗೊಳಿಸಲಾಗಿದೆ. ಈ ಹೊಸ ಫ್ರೆಶ್ಪಿಕ್ ಸ್ಟೋರ್ ಪ್ರಮುಖ ದಿನಸಿ ತಾಣವಾಗಲು ಸಜ್ಜಾಗಿದೆ. ಗ್ರಾಹಕರು ಅದ್ಭುತವಾದ “ಶಾಪಿಂಗ್ ಥಿಯೇಟರ್” ಅನುಭವಗಳನ್ನು ಕಾಣಬಹುದು – ಇದು ವ್ಯಾಪಕ ಶ್ರೇಣಿಯ ಲೈವ್ ಫುಡ್ ಸ್ಟೇಷನ್ ಗಳನ್ನು ನೀಡುವ ನವೀನ ಪರಿಕಲ್ಪನೆಯಾಗಿದೆ. ಕ್ಯುರೇಟೆಡ್ ಪಾಕಶಾಲೆಯ ಅನುಭವಗಳ ಅನನ್ಯ ಸಮ್ಮಿಳನವನ್ನು…














