Author: kannadanewsnow09

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಸೋಮವಾರ ಬೆಳಗಾವಿ ಜಿಲ್ಲೆಯ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಜೂನ್‌ನಿಂದ ಇದುವರೆಗೆ 565 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.62ರಷ್ಟು ಹೆಚ್ಚು ಮಳೆಯಾಗಿದೆ. ಅತಿವೃಷ್ಟಿಯಿಂದ 6ಮಂದಿ ಸಾವಿಗೀಡಾಗಿದ್ದು, ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ಒದಗಿಸಲಾಗಿದೆ. 12 ಜಾನುವಾರುಗಳು ಸಾವನ್ನಪ್ಪಿದ್ದು, ಪರಿಹಾರ ಒದಗಿಸಲಾಗಿದೆ. ಸಾವಿಗೀಡಾದ ಒಂದು ಜಾನುವಾರಿಗೆ 37,500 ರೂಪಾಯಿ ಪರಿಹಾರ ನೀಡಲಾಗುತ್ತಿದೆ. ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 48 ಮನೆಗಳು ಪೂರ್ಣ ಹಾನಿಗೀಡಾಗಿದ್ದು, 950 ಮನೆಗಳಿಗೆ ಭಾಗಶಃ ಹಾನಿಯಾಗಿವೆ. ಈ ಹಿಂದೆ ಅತಿವೃಷ್ಟಿ ಸಂದರ್ಭದಲ್ಲಿ ಮನೆ ಹಾನಿಗೆ ನೀಡಲಾದ ಪರಿಹಾರ ದುರುಪಯೋಗವಾದ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಈ ಬಾರಿ ದುರುಪಯೋಗ ತಪ್ಪಿಸಲು ಪೂರ್ಣ ಮನೆ ಹಾನಿಗೀಡಾದವರಿಗೆ ರೂ. 1.20 ಲಕ್ಷ ನಗದು ಪರಿಹಾರ ನೀಡಲಾಗುತ್ತಿದ್ದು, ಇದರೊಂದಿಗೆ ಮನೆಯನ್ನು ಸಹ…

Read More

ನಮ್ಮಲ್ಲಿ ಪ್ರತಿಯೊಬ್ಬರೂ ಕಷ್ಟಪಟ್ಟು ಸಂಪಾದಿಸುವ ಕಾರಣವೇನೆಂದರೆ ನಮ್ಮ ಭವಿಷ್ಯದ ಸಂಘಟಿಗಳು ಯಾವುದೇ ಅಭಾವವಿಲ್ಲದೆ ಉತ್ತಮವಾಗಿ ಬದುಕಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು…

Read More

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಲ್ಲಿ 2ನೇ ಏರ್ಪೋರ್ಟ್ ಶೀಘ್ರದಲ್ಲೇ ನಿರ್ಮಾಣವಾಗಲಿದೆ ಎಂಬುದಾಗಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಈ ಸಂಬಂಧ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬೆಂಗಳೂರಲ್ಲಿ 2ನೇ ಏರ್ಪೋರ್ಟ್ ನಿರ್ಮಾಣ ಸಂಬಂಧ ಇಂದು ಮಹತ್ವದ ಚರ್ಚೆಯನ್ನು ಸಭೆಯಲ್ಲಿ ನಡೆಸಲಾಯಿತು. ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ 7 ಸ್ಥಳಗಳನ್ನು ಗುರುತಿಸಲಾಗಿದೆ ಎಂದರು. ಇಂದಿನ ಸಭೆಯಲ್ಲಿ ಬೆಂಗಳೂರಿನ 7 ಸ್ಥಳಗಳಲ್ಲಿ 2ನೇ ವಿಮಾನ ನಿರ್ಮಾಣದಿಂದ ಆಗುವಂತ ಸಾಧಕ-ಬಾಧಕಗಳ ಕುರಿತಂತೆ ಚರ್ಚೆ ನಡೆಸಲಾಯಿತು. ತಜ್ಞರು ನೀಡಿದಂತ ಸಲಹೆಯನ್ನು ಪಡೆಯಲಾಗಿದೆ ಎಂದು ಹೇಳಿದರು. ಬೆಂಗಳೂರಿನಲ್ಲಿ 2ನೇ ವಿಮಾನವಾಗಿ ಹೊಸ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಸಿಎಂ ಸಿದ್ಧರಾಮಯ್ಯ ಜೊತೆಗೆ ಚರ್ಚಿಸಿ, ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ. ಈಗ ಬೆಂಗಳೂರಿನಲ್ಲಿ ನಿರ್ಮಾಣವಿರುವಂತ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಾಕಾಗುವುದಿಲ್ಲ. ಹೀಗಾಗಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಚರ್ಚಿಸಲಾಗಿದೆ ಎಂದರು. https://kannadanewsnow.com/kannada/do-you-know-which-is-the-most-tracked-aircraft-in-the-world/ https://kannadanewsnow.com/kannada/sheikh-hasina-arrives-in-india-from-bangladesh/

Read More

ನವದೆಹಲಿ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ದೇಶದಿಂದ ಪಲಾಯನ ಮಾಡಲು ಪ್ರಯಾಣಿಸಿದ ವಿಮಾನ ಸೋಮವಾರ ಮಧ್ಯಾಹ್ನ ಭಾರತಕ್ಕೆ ಆಗಮಿಸಿತು. ಇಂತಹ ಅವರ ವಿಮಾನವು ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್ ಮಾಡಿದಂತ ವಿಮಾನ ಎನ್ನುವ ಹೆಗ್ಗಳಿಕೆಗೂ ಪಾತ್ರವಾಗಿದೆ. ನೈಜ ಸಮಯದಲ್ಲಿ ವಾಯು ಸಂಚಾರವನ್ನು ಪ್ರದರ್ಶಿಸುವ ಫ್ಲೈಟ್ರಡಾರ್ 24 ವೆಬ್ಸೈಟ್ ಪ್ರಕಾರ, AJAX1431 ಬಾಂಗ್ಲಾದೇಶ ವಾಯುಪಡೆಯ ವಿಮಾನವನ್ನು 29,000 ಕ್ಕೂ ಹೆಚ್ಚು ಜನರು ಟ್ರ್ಯಾಕ್ ಮಾಡುತ್ತಿದ್ದಾರೆ. ಇದು ಈಗ ವಿಶ್ವದ ಅತಿ ಹೆಚ್ಚು ಟ್ರ್ಯಾಕ್ ಮಾಡಲಾದ ವಿಮಾನವಾಗಿದೆ. ಸಂಜೆ 4.15ರ ಸುಮಾರಿಗೆ ವಾರಣಾಸಿ ಬಳಿ ಇತ್ತು. ವರದಿಗಳ ಪ್ರಕಾರ, ಬಾಂಗ್ಲಾದೇಶದ ಪ್ರಧಾನಿ ರಾಜೀನಾಮೆ ನೀಡಿ ಸೋಮವಾರ ದೇಶವನ್ನು ತೊರೆದಿದ್ದಾರೆ. ಇದನ್ನು ದೃಢಪಡಿಸಿದ ಸೇನಾ ಮುಖ್ಯಸ್ಥ ವಾಕರ್-ಉಜ್-ಜಮಾನ್, ಅಧಿಕಾರವನ್ನು ವಹಿಸಿಕೊಳ್ಳಲು ಮಧ್ಯಂತರ ಸರ್ಕಾರವನ್ನು ರಚಿಸಲಾಗುವುದು ಎಂದು ಹೇಳಿದರು. https://kannadanewsnow.com/kannada/sheikh-hasina-arrives-in-india-from-bangladesh/ https://kannadanewsnow.com/kannada/heavy-rains-lash-parts-of-bengaluru-traffic-disrupted-motorists-stranded/ https://kannadanewsnow.com/kannada/men-beware-learn-about-the-early-symptoms-of-penile-cancer/

Read More

ನವದೆಹಲಿ: ಬಾಂಗ್ಲಾದೇಶದಲ್ಲಿ ಉಂಟಾಗಿರುವಂತ ಪ್ರಕ್ಷುಬ್ಧತೆಯ ಕಾರಣದಿಂದಾಗಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಂತ ಶೇಖ್ ಹಸೀನಾ ಅವರು, ಢಾಕಾ ತೊರೆದು ಸೇನಾ ವಿಮಾನದ ಮೂಲಕ ಭಾರತದತ್ತ ಆಗಮಿಸಿದ್ದರು. ಈಗ ಅವರು ದೆಹಲಿಗೆ ಬಂದಿಳಿದಿದ್ದು, ಅವರನ್ನು ಐಎಎಫ್ ನ ಹಿರಿಯ ಅಧಿಕಾರಿಗಳು ಸ್ವಾಗತಿಸಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಂತ ಶೇಖ್ ಹಸೀನಾ ಅವರು, ಢಾಕಾವನ್ನು ತೊರೆದು, ಅಲ್ಲಿಂದ ಭಾರತದ ದೆಹಲಿಯತ್ತ ಸೇನಾ ವಿಮಾನದಲ್ಲಿ ಆಗಮಿಸಿದ್ದರು. ಅವರು ಭಾರತದ ದೆಹಲಿಯ ಹಿಂಡನ್ ಏರ್ ಬೇಸ್ ಗೆ ಬಂಧಿಳಿದಾಗ, ಅವರನ್ನು ಐಎಎಫ್ ನ ಹಿರಿಯ ಅಧಿಕಾರಿಗಳು ಸ್ವಾಗತ ಕೋರಿದರು. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಸಿ -130 ಸಾರಿಗೆ ವಿಮಾನದಲ್ಲಿ ಹಿಂಡನ್ ವಾಯುನೆಲೆಗೆ ಬಂದಿಳಿದಿದ್ದಾರೆ. ಈ ವಿಮಾನವನ್ನು ಭಾರತೀಯ ವಾಯುಪಡೆಯ ಸಿ -17 ಮತ್ತು ಸಿ -130 ಜೆ ಸೂಪರ್ ಹರ್ಕ್ಯುಲಸ್ ವಿಮಾನ ಹ್ಯಾಂಗರ್ ಗಳ ಬಳಿ ನಿಲ್ಲಿಸಲಾಗುವುದು. ಭಾರತೀಯ ವಾಯುಪ್ರದೇಶಕ್ಕೆ ಪ್ರವೇಶಿಸಿದಾಗಿನಿಂದ ಗಾಜಿಯಾಬಾದ್ನ ಹಿಂಡನ್ ವಾಯುನೆಲೆಗೆ ವಿಮಾನದ ಚಲನೆಯನ್ನು ಭಾರತೀಯ ವಾಯುಪಡೆ ಮತ್ತು…

Read More

ಬೆಂಗಳೂರು: ನಗರದಲ್ಲಿ ವರುಣನ ಆರ್ಭಟ ಜೋರಾಗಿದೆ. ಬೆಂಗಳೂರಿನ ಹಲವೆಡೆ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಸಂಚಾರ ವ್ಯತ್ಯಯ ಉಂಟಾಗಿದೆ. ಟ್ರಾಫಿಕ್ ಜಾಮ್ ಅಲ್ಲಲ್ಲಿ ಉಂಟಾದ ಪರಿಣಾಮ, ವಾಹನ ಸವಾರರು ಪರದಾಡುತ್ತಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಹಲವೆಡೆ ಮಳೆ ಆರಂಭಗೊಂಡಿದೆ. ನಗರದ ಮೆಜೆಸ್ಟಿಕ್, ಹೆಚ್ಎಎಲ್, ದೊಡ್ಡನೆಕ್ಕುಂದಿ, ಮಾರತಹಳ್ಳಿ, ಕುಂದ್ಲಹಳ್ಳಿ, ಮುರುಗೇಶ ಪಾಳ್ಯ, ದೊಮ್ಮಲೂರು, ಸಿವಿ ರಾಮನ್ ನಗರ, ಈಜಿಪುರ, ಶಾಂತಿನಗರ, ವಿಜಯನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಇದಲ್ಲದೇ ಜಯನಗರ, ಕೆ ಆರ್ ಮಾರ್ಕೆಟ್, ಬನಶಂಕರಿ, ಕಾರ್ಪೊರೇಷನ್, ಮೈಸೂರು ಬ್ಯಾಂಕ್ ಸರ್ಕಲ್, ವಿಧಾನಸೌಧ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದೆ. ಮಳೆಯಿಂದಾಗಿ ರಸ್ತೆಗೆ ನೀರು ನುಗ್ಗಿದ ಪರಿಣಾಮ ಸಂಚಾರ ವ್ಯತ್ಯಯ ಉಂಟಾಗಿದೆ. ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯಲ್ಲಿ ನೆನೆದುಕೊಂಡೇ ಬೈಕ್ ಸವಾರರು ತೆರಳುತ್ತಿರುವುದು ಅಲ್ಲಲ್ಲಿ ಕಂಡು ಬಂದಿದೆ. https://kannadanewsnow.com/kannada/international-sportspersons-to-get-government-jobs-from-state-govt/ https://kannadanewsnow.com/kannada/bengaluru-airport-to-be-fixed-deputy-cm-dk-shivakumar-chairs-crucial-meeting/

Read More

ಬೆಂಗಳೂರು : ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲು ಬದ್ಧವಾಗಿದೆ. ಅಂತರರಾಷ್ಟ್ರೀಯ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯವನ್ನು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಭಾನುವಾರ ಕೃಷ್ಣಾದಲ್ಲಿ ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ ಒಲoಪಿಕ್ಸ್, ಪ್ಯಾರಾಲಿoಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ ಗಳಲ್ಲಿ ಪದಕ ವಿಜೇತ 12ಮಂದಿ ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿ ಮಾತನಾಡಿದರು. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 2016-17ರ ಅವಧಿಯಲ್ಲಿ ಹುಬ್ಬಳ್ಳಿಯಲ್ಲಿ ಒಲಂಪಿಕ್ಸ್‌ ಅಸೋಸಿಯೇಶನ್‌ ವತಿಯಿಂದ ಆಯೋಜಿಸಲಾಗಿದ್ದ ಕ್ರೀಡಾಕೂಟದ ಸಂದರ್ಭದಲ್ಲಿ, ಒಲಂಪಿಕ್ಸ್‌, ಏಶ್ಯಾಡ್‌ ಮತ್ತು ಕಾಮನ್‌ವೆಲ್ತ್‌ನಂತಹ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡುವ ಕ್ರೀಡಾಳುಗಳಿಗೆ ಸರ್ಕಾರಿ ನೌಕರಿ ಒದಗಿಸುವುದಾಗಿ ಘೋಷಣೆ ಮಾಡಿದ್ದೆ. ಸರ್ಕಾರ ಬದಲಾದ ಬಳಿಕ ಇದು ನೆನೆಗುದಿಗೆ ಬಿದ್ದಿತ್ತು. ಇದೀಗ ಈ…

Read More

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ  ನಿಲ್ದಾಣ ಹೊರತುಪಡಿಸಿ, ಬೆಂಗಳೂರಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣ ಬಹುತೇಕ ಖಚಿತವಾಗಿದೆ. ಈ ಸಂಬಂಧ ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಅವರು, ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಅವರು ವಿಧಾನಸೌಧದಲ್ಲಿ ಸೋಮವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಇಂದಿನ ಸಭೆಯಲ್ಲಿ ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣವನ್ನು ಎಲ್ಲಿ ನಿರ್ಮಿಸಬೇಕು ಎನ್ನುವುದು ಸೇರಿದಂತೆ ಮಹತ್ವದ ವಿಚಾರಗಳನ್ನು ಚರ್ಚೆ ನಡೆಸಲಾಯಿತು. ಇಂದಿನ ಸಭೆಯಲ್ಲೇ ರಾಜ್ಯದ ರಾಜಧಾನಿ ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಫೈನಲ್ ಮಾಡುವ ಸಾಧ್ಯತೆ ಇದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಸಭೆಯ ಬಳಿಕ ತಿಳಿಯಲಿದೆ. https://kannadanewsnow.com/kannada/beware-of-vacant-land-owners-in-bengaluru-bbmp-imposes-notice-penalty-for-not-maintaining-cleanliness/ https://kannadanewsnow.com/kannada/former-bangladesh-pm-sheikh-hasina-arrives-in-delhi-receives-senior-iaf-officials/

Read More

ನವದೆಹಲಿ: ಬಾಂಗ್ಲಾದೇಶದಲ್ಲಿ ಉಂಟಾಗಿರುವಂತ ಪ್ರಕ್ಷುಬ್ಧತೆಯ ಕಾರಣದಿಂದಾಗಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಂತ ಶೇಖ್ ಹಸೀನಾ ಅವರು, ಢಾಕಾ ತೊರೆದು ಸೇನಾ ವಿಮಾನದ ಮೂಲಕ ಭಾರತದತ್ತ ಆಗಮಿಸಿದ್ದರು. ಈಗ ಅವರು ದೆಹಲಿಗೆ ಬಂದಿಳಿದಿದ್ದು, ಅವರನ್ನು ಐಎಎಫ್ ನ ಹಿರಿಯ ಅಧಿಕಾರಿಗಳು ಸ್ವಾಗತಿಸಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಂತ ಶೇಖ್ ಹಸೀನಾ ಅವರು, ಢಾಕಾವನ್ನು ತೊರೆದು, ಅಲ್ಲಿಂದ ಭಾರತದ ದೆಹಲಿಯತ್ತ ಸೇನಾ ವಿಮಾನದಲ್ಲಿ ಆಗಮಿಸಿದ್ದರು. ಅವರು ಭಾರತದ ದೆಹಲಿಯ ಹಿಂಡನ್ ಏರ್ ಬೇಸ್ ಗೆ ಬಂಧಿಳಿದಾಗ, ಅವರನ್ನು ಐಎಎಫ್ ನ ಹಿರಿಯ ಅಧಿಕಾರಿಗಳು ಸ್ವಾಗತ ಕೋರಿದರು. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಸಿ -130 ಸಾರಿಗೆ ವಿಮಾನದಲ್ಲಿ ಹಿಂಡನ್ ವಾಯುನೆಲೆಗೆ ಬಂದಿಳಿದಿದ್ದಾರೆ. ಈ ವಿಮಾನವನ್ನು ಭಾರತೀಯ ವಾಯುಪಡೆಯ ಸಿ -17 ಮತ್ತು ಸಿ -130 ಜೆ ಸೂಪರ್ ಹರ್ಕ್ಯುಲಸ್ ವಿಮಾನ ಹ್ಯಾಂಗರ್ ಗಳ ಬಳಿ ನಿಲ್ಲಿಸಲಾಗುವುದು. ಭಾರತೀಯ ವಾಯುಪ್ರದೇಶಕ್ಕೆ ಪ್ರವೇಶಿಸಿದಾಗಿನಿಂದ ಗಾಜಿಯಾಬಾದ್ನ ಹಿಂಡನ್ ವಾಯುನೆಲೆಗೆ ವಿಮಾನದ ಚಲನೆಯನ್ನು ಭಾರತೀಯ ವಾಯುಪಡೆ ಮತ್ತು…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಆಗಸ್ಟ್.7ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-03 ಮತ್ತು 12 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಕೊಂಡಿರುವುದರಿಂದ ಆ .07 ರಂದು ಬಳಗ್ಗೆ 09.00 ರಿಂದ ಸಂಜೆ 5.30ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಅಂತ ತಿಳಿಸಿದೆ. ಆ.7ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಎಸ್.ವಿ.ಬಡಾವಣೆ ಎ. ಬಿ. ಮತ್ತು ಎಫ್ ಬ್ಲಾಕ್, ಗುಡ್‌ಲಕ್ ಸರ್ಕಲ್, ಅಮ್ಮ ನಿಲಯ, ಸ್ನೇಹ ಅಪಾರ್ಟ್ಮೆಂಟ್‌ನ ಸುತ್ತಮುತ್ತಲಿನ ಪ್ರದೇಶ, ಎಂ.ಎಂ.ಎಸ್. ಲೇಔಟ್, ಬೋವಿ ಕಾಲೋನಿ, ವಿಜಯಲಕ್ಷ್ಮೀ ಲೇಔಟ್, ಸೋಮನಾಥ್ ಲೇಔಟ್, ಪುಷ್ಪಗಿರಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. https://kannadanewsnow.com/kannada/the-british-could-not-shake-the-congress-party-could-you-dk-thunders/ https://kannadanewsnow.com/kannada/beware-of-vacant-land-owners-in-bengaluru-bbmp-imposes-notice-penalty-for-not-maintaining-cleanliness/

Read More