Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಅಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಇಂದು ಕಾಂಗ್ರೆಸ್ ನಾಯಕ ಲಕ್ಷ್ಮಣ್ ಅವರು ಗ್ಯಾರಂಟಿ ಯೋಜನೆ ನಿಲ್ಲಿಸಬೇಕು ಎನ್ನುತ್ತಿದ್ದಾರೆ. ಈ ಬಗ್ಗೆ ನೀವು ಏನು ಹೇಳುತ್ತೀರಿ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮೋದಿ ಸರ್ಕಾರ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡೋದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಸಹಾಯ ಆಗಿದೆ ಎಂದರು. ಗ್ಯಾರಂಟಿ ಯೋಜನೆಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ ಎನ್ನುವುದಕ್ಕೂ ಸಂಬಂಧವಿಲ್ಲ. ಗ್ಯಾರಂಟಿಗಳನ್ನು ಮತ ಪಡೆಯಲು ನಾವು ನೀಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಲ್ಲ ಅಂತ ತಿಳಿಸಿದರು. ಸಿಎಂ ಸಿದ್ಧರಾಮಯ್ಯ ಅವರು ಶಕ್ತಿ ಯೋಜನೆಗಾಗಿ ಬಜೆಟ್ ನಲ್ಲಿ 5,500 ಕೋಟಿ ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ…
ಬೆಂಗಳೂರು: ದೇಶದಲ್ಲಿ ಮೋದಿ ಯುಗ ಮುಕ್ತಾಯವಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಮತ್ತೆ ಮರುಜೀವ ಬಂದಿದೆ, ದೇಶವನ್ನು ಉಳಿಸಲು ನಾವು ಮುಂದಿನ ಚುನಾವಣೆಗಳಲ್ಲಿ ಗೆಲ್ಲಬೇಕು ಎಂದು ಆಮ್ ಆದ್ಮಿ ಪಾರ್ಟಿ ಕರ್ನಾಟಕದ ಉಸ್ತುವಾರಿ ದಿಲೀಪ್ ಪಾಂಡೆ ಹೇಳಿದರು. ನಗರದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ದಿಲೀಪ್ ಪಾಂಡೆ, ಕಳೆದ ಚುನಾವಣೆಯಲ್ಲಿ ಆದ ಅನುಭವಗಳಿಂದ ಪಾಠ ಕಲಿತು ಮುಂದಿನ ದಿನಗಳಲ್ಲಿ ಸರಿಯಾದ ಹೆಜ್ಜೆ ಇಡಬೇಕು ಎಂದು ಪಕ್ಷದ ನಾಯಕರು, ಕಾರ್ಯಕರ್ತರಿಗೆ ಕರೆ ನೀಡಿದರು. ಆಮ್ ಆದ್ಮಿ ಪಾರ್ಟಿ ಶಕ್ತಿ ಏನೆಂದು ನಮಗಿಂತ ಅಮಿತ್ ಶಾ ಮತ್ತು ಮೋದಿಗೆ ಚೆನ್ನಾಗಿ ಅರ್ಥವಾಗಿದೆ. ಪ್ರಜ್ವಲ್ ರೇವಣ್ಣ, ನವನೀತ್ ರಾಣಾ, ಸ್ಮೃತಿ ಇರಾನಿ, ಮಾಧವಿ ಲತಾ ಇವರ ಸೋಲು ನೋಡಿದಾಗ ಭಗವಂತ ರಾಮನೇ ಇವರಿಗೆಲ್ಲ ಶಾಸ್ತಿ ಮಾಡಿದಂತಿದೆ ಎಂದು ಹೇಳಿದರು. ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಮಾತನಾಡಿ, ದೇಶದಲ್ಲಿ 18 ಸಾವಿರ ರಾಜಕೀಯ ಪಕ್ಷಗಳು ಇದ್ದರೂ ಅಮಿತ್ ಶಾ ಮತ್ತು ನರೇಂದ್ರ ಮೋದಿ…
ಪ್ರತಿ ಸೋಮವಾರದಂದು ಕೇಂದ್ರಸ್ಥಾನದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಣೆ ಕಡ್ಡಾಯ: ಅಧಿಕಾರಿ, ಸಿಬ್ಬಂದಿಗಳಿಗೆ KSRTC ಆದೇಶ
ಬೆಂಗಳೂರು: ಪ್ರತಿ ಸೋಮವಾರದಂದು ಕೇಂದ್ರಸ್ಥಾನದ ಕಚೇರಿಗಳಲ್ಲಿ ಎಲ್ಲಾ ಅಧಿಕಾರಿ, ನೌಕರರು ಕರ್ತವ್ಯ ನಿರ್ವಹಿಸುವುದು ಕಡ್ಡಾಯಗೊಳಿಸಿ ಕೆ ಎಸ್ ಆರ್ ಟಿಸಿ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಪ್ರತಿ ಸೋಮವಾರಗಳಂದು ಪ್ರತಿಯೊಂದು ಇಲಾಖೆಯ ಅಧಿಕಾರಿ/ನೌಕರರು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕಛೇರಿಗಳಿಗೆ ಭೇಟಿ ನೀಡುವ ಜನರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮೇಲಿನ ಉಲ್ಲೇಖ:1ರ ಸರ್ಕಾರಿ ಪತ್ರದಲ್ಲಿ ನಿರ್ದೇಶನಗಳನ್ನು ನೀಡಲಾಗಿರುತ್ತದೆ ಎಂದಿದ್ದಾರೆ. ಅದರಂತೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯ ಎಲ್ಲಾ ಕಛೇರಿಗಳಲ್ಲಿ ತುರ್ತು ಕಾರ್ಯಗಳನ್ನು ಹೊರತುಪಡಿಸಿ, ಪ್ರತಿ ಸೋಮವಾರಗಳಂದು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕಛೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರಿಗೆ / ನೌಕರರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರೆಲ್ಲರೂ ಮೇಲಿನ ಸೂಚನೆಗಳನ್ನು ಮನದಟ್ಟು ಮಾಡಿಕೊಂಡು, ಅದರಂತೆ…
ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರನ್ನು ನೇಮಕ ಮಾಡಲಾಗಿದೆ. ಇಂದು ನಡೆದಂತ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಇಂದು ನವದೆಹಲಿಯ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೆಸರನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಪ್ರಸ್ತಾಪಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಸ್ತಾಪಕ್ಕೆ ಗೌರವ್ ಗೋಗಯ್, ತಾರಿಕ್ ಅನ್ವರ್ ಹಾಗೂ ಕೆ.ಸುಧಾಕರ್ ಅನುಮೋದನೆ ನೀಡಿದರು. ಇತರೆ ಎಲ್ಲಾ ಸದಸ್ಯರು ಒಕ್ಕೊರಲ ಒಪ್ಪಿಗೆಯನ್ನು ಸೂಚಿಸಿದರು. ಹೀಗಾಗಿ ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. https://kannadanewsnow.com/kannada/prajwal-maharaj-ki-jai-fans-cheer-during-the-venue-maharaj/ https://kannadanewsnow.com/kannada/valmiki-development-corporation-scam-three-ministers-involved/
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಈ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಸಂಪುಟದ ಮೊದಲ ವಿಕೆಟ್ ಪತನವಾಗಿತ್ತು. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಮೂವರು ಸಚಿವರು ಶಾಮೀಲಾಗಿದ್ದಾರೆ ಎನ್ನಲಾಗುತ್ತಿದೆ. ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಣ ಅವ್ಯವಹಾರ ಪ್ರಕರಣದಲ್ಲಿ ರಾಜ್ಯ ಸಚಿವ ಸಂಪುಟದ ಹಲವರ ತಲೆದಂಡದ ಮುನ್ಸೂಚನೆ ದೊರೆತಿದೆ. ಈ ಹಗರಣವು ಸರ್ಕಾರದ ಬುಡವನ್ನೇ ಅಲುಗಾಡಿಸುವಷ್ಟು ಬ್ರಹ್ಮಂಡವಾಗಿ ಬೆಳೆಯುತ್ತಿದೆ ಎಂದು ಹೇಳಲಾಗುತ್ತಿದೆ. ಬರೋಬ್ಬರಿ 187 ಕೋಟಿ ರೂ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಈಗಾಗಲೇ ನಿಗಮದ ಎಂಡಿ ಸೇರಿದಂತೆ ಹಲವರನ್ನು ಎಸ್ಐಟಿ ಬಂಧಿಸಿದೆ. ಇದೇ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಕೂಡ ನೀಡಿದ್ದಾರೆ. ಇದರ ನಡುವೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದಲ್ಲಿ ಇನ್ನೂ ಕೆಲವು ಸಚಿವರು ಮತ್ತು ಶಾಸಕರು ಭಾಗಿಯಾಗಿರುವ ಸಂಶಯ ವ್ಯಕ್ತವಾಗಿದೆ. ಈ ಹಗರಣವನ್ನು ರಾಜ್ಯ ಸರ್ಕಾರ…
ನವದೆಹಲಿ: ಪ್ರಧಾನಿ ಮೋದಿ ತಮ್ಮ ಮೊದಲ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಲು ಸಜ್ಜಾಗಿರುವುದರಿಂದ ‘ಕ್ಯಾಬಿನೆಟ್ ಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ರೈಲ್ವೆ ಖಾತೆಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ ಎನ್ನಲಾಗುತ್ತಿದೆ. ಎನ್ಡಿಎ ಸರ್ಕಾರದ ಪ್ರಮಾಣವಚನ ಸಮಾರಂಭ ಭಾನುವಾರ ನಿಗದಿಯಾಗಿದೆ. ದೊಡ್ಡ ಪ್ರಶ್ನೆಗಳು ಉನ್ನತ ಖಾತೆಗಳ ಸುತ್ತ ಕೇಂದ್ರೀಕೃತವಾಗಿವೆ, ಇವೆಲ್ಲವನ್ನೂ ಬಿಜೆಪಿ ಉಳಿಸಿಕೊಳ್ಳುವ ನಿರೀಕ್ಷೆಯಿದೆ. ಇವುಗಳಲ್ಲಿ ಗೃಹ, ಹಣಕಾಸು, ರಕ್ಷಣೆ, ವಿದೇಶಾಂಗ ವ್ಯವಹಾರಗಳು, ರಸ್ತೆ ಸಾರಿಗೆ, ರೈಲ್ವೆ, ಐಟಿ ಮತ್ತು ಶಿಕ್ಷಣ ಸೇರಿವೆ. ಇದಕ್ಕೆ ವಿರುದ್ಧವಾದ ಊಹಾಪೋಹಗಳ ಹೊರತಾಗಿಯೂ ಉನ್ನತ ಮೈತ್ರಿ ಪಾಲುದಾರರು ತಮ್ಮ ಕೆಲವು ದೊಡ್ಡ ಬೇಡಿಕೆಗಳನ್ನು ಪೂರೈಸದಿರಬಹುದು. ಜೆಡಿಯು ರೈಲ್ವೆಗಾಗಿ ಕೇಳಿದೆ ಮತ್ತು ಅದರ ಮೇಲೆ ನಿರಂತರವಾಗಿ ಒತ್ತಡ ಹೇರುತ್ತಿದೆ. ಟಿಡಿಪಿ ಮಾಹಿತಿ ತಂತ್ರಜ್ಞಾನವನ್ನು ಕೇಳಿದೆ, ಅದು ಸಿಗದಿರುವ ಸಾಧ್ಯತೆಯಿದೆ. ಆದಾಗ್ಯೂ, ಜೆಡಿಯು ಮತ್ತು ಟಿಡಿಪಿ ಒಂದೇ ಸಂಖ್ಯೆಯ ಸಚಿವ ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಜೆಡಿಯು 12 ಸ್ಥಾನಗಳಿಗಿಂತ ಟಿಡಿಪಿ (16) ಹೆಚ್ಚು ಲೋಕಸಭಾ…
ಹಾಸನ: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಇಂದು ಎಸ್ಐಟಿ ಕಸ್ಟಡಿಯಲ್ಲಿರುವಂತ ಪ್ರಜ್ವಲ್ ರೇವಣ್ಣ ಅವರನ್ನು ಸ್ಥಳ ಮಹಜರಿಗೆ ಹಾಸನಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆಯಲ್ಲಿ ಪ್ರಜ್ವಲ್ ಮಹರಾಜ್ ಕೀ ಜೈ ಎಂಬುದಾಗಿ ಘೋಷಣೆ ಕೂಗಿದಂತ ಪ್ರಸಂಗ ನಡೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗಾಗಲೇ ಎಸ್ಐಟಿ ಕೋಶದಲ್ಲಿದ್ದು ಹಿಂದೂ ಅಧಿಕಾರಿಗಳು ಅವರನ್ನು ಸ್ಥಳ ಮಹಾಜರಿಗಾಗಿ ಹಾಸನ ಜಿಲ್ಲೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಹಾಸನದ ಸಂಸದರ ನಿವಾಸದಲ್ಲಿ ಸತತ ನಾಲ್ಕು ಗಂಟೆಗಳ ಕಾಲ SIT ಅಧಿಕಾರಿಗಳು ಸ್ಥಳ ಮಹಜರು ನಡೆಸಿದರು. ಹೌದು ಪ್ರಜ್ವಲ ರೇವಣ್ಣ ಅವರನ್ನು SIT ಅಧಿಕಾರಿಗಳು ಹಾಸನ, ಹೊಳೆನರಸೀಪುರಕ್ಕೆ ಇಂಡಬಕರೆದು ತಂದು ಸತತ ನಾಲ್ಕು ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿದರು. ಸ್ಥಳ ಮಹಜರು ಪ್ರಕ್ರಿಯೆ ಮುಗಿಸಿ 4 ವಾಹನಗಳಲ್ಲಿ ತೆರಳಿದ ಎಸ್ಐಟಿ. ಈ ವೇಳೆ ಪ್ರಜ್ವಲ್ ರೇವಣ್ಣನನ್ನು ಕರೆದೊಯ್ಯುವಾಗ ಬೆಂಬಲಿಗರು ಘೋಷಣೆ ಕೂಗಿದ ಘಟನೆ ಜರುಗಿತು. ಪ್ರಜ್ವಲ್ ಮತ್ತು ಎಚ್ ಡಿ ರೇವಣ್ಣಗೆ…
ಬೆಂಗಳೂರು: ಬಿಬಿಎಂಪಿ ಶಾಲೆ ಮತ್ತು ಕಾಲೇಜುಗಳಿಗೆ ಎಸ್ ಡಿ ಎಂ ಸಿಯಿಂದ ಅತಿಥಿ ಶಿಕ್ಷಕರ ನೇಮಕವನ್ನು ಜೂನ್.16ರೊಳೆಗೆ ನಿಯೋಜನಿಸಿಕೊಳ್ಳುವಂತೆ ಬಿಬಿಎಂಪಿ ಆಯುಕ್ತರು ಸುತ್ತೋಲೆ ಹೊರಡಿಸಿ, ಸೂಚಿಸಿದ್ದಾರೆ. ಬಿಬಿಎಂಪಿ ಶಾಲೆ ಮತ್ತು ಕಾಲೇಜುಗಳಿಗೆ ಎಸ್ಡಿಎಂಸಿ ಮತ್ತು ಸಿಡಿಸಿ ಮೂಲಕ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಜೂನ್ 16ರೊಳಗೆ ನಿಯೋಜಿಸಿಕೊಳ್ಳಲು ಸೂಚಿಸಲಾಗಿದೆ. ಶಿಕ್ಷಣ ಇಲಾಖೆಯಿಂದ ಬೋಧಕ ಹುದ್ದೆಗಳಿಗೆ ಖಾಯಂ ಶಿಕ್ಷಕ, ಉಪನ್ಯಾಸಕರನ್ನು ನೇಮಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ನೇಮಕವಾಗುವವರೆಗೆ ಅಥವಾ 2024-25ನೇ ಶೈಕ್ಷಣಿಕ ಸಾಲಿಗೆ ಬಿಬಿಎಂಪಿ ಶಾಲೆ ಮತ್ತು ಕಾಲೇಜುಗಳಲ್ಲಿರುವ ಎಸ್ಡಿಎಂಸಿ ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿಯಿಂದ ಅತಿಥಿ ಶಿಕ್ಷಕರು, ಉಪನ್ಯಾಸಕರನ್ನು ನಿಯೋಜಿಸಿಕೊಳ್ಳಬೇಕು ಎಂದು ಬಿಬಿಎಂಪಿ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. https://kannadanewsnow.com/kannada/the-secret-to-jioairfibers-lightning-speed-is-its-independent-5g-technology-open-signal/ https://kannadanewsnow.com/kannada/kea-has-released-the-revised-mark-sheet-of-the-written-examination-held-for-the-recruitment-of-vacancies-in-various-corporations/
ನವದೆಹಲಿ : ಜಗತ್ತಿನ ಖ್ಯಾತ ಮೊಬೈಲ್ ನೆಟ್ವರ್ಕ್ ಅನಲಿಟಿಕ್ಸ್ ಕಂಪನಿ ‘ಓಪನ್ಸಿಗ್ನಲ್’ ವರದಿಯೊಂದನ್ನು ನೀಡಿದ್ದು, ಜಿಯೋದ ಸ್ವತಂತ್ರ 5ಜಿ ನೆಟ್ವರ್ಕ್ನಿಂದಾಗಿ ಜಿಯೋ ಏರ್ ಫೈಬರ್ ತನ್ನ ಗ್ರಾಹಕರಿಗೆ ಅತ್ಯುತ್ತಮ ವೇಗದಲ್ಲಿ ಡೇಟಾವನ್ನು ಒದಗಿಸಲು ಸಾಧ್ಯವಾಗುತ್ತದೆ ಎಂದು ಹೇಳಿದೆ. ಜಿಯೋದ ಸ್ಥಿರ ವೈರ್ಲೆಸ್ ಸೇವೆಯ ಗ್ರಾಹಕರು, ಅಂದರೆ ಜಿಯೋ ಏರ್ ಫೈಬರ್ ಗ್ರಾಹಕರು ತಿಂಗಳಿಗೆ ಸರಾಸರಿ 400 ಜಿಬಿ ಡೇಟಾವನ್ನು ಬಳಸುತ್ತಾರೆ ಎಂದು ಓಪನ್ ಸಿಗ್ನಲ್ ಅಭಿಪ್ರಾಯ ಪಟ್ಟಿದೆ. ಅಂದ ಹಾಗೆ ಈ ಬಳಕೆ ಪ್ರಮಾಣ ಮೊಬೈಲ್ ಗ್ರಾಹಕರಿಗಿಂತ ಹೆಚ್ಚು. ಇದರ ಹೊರತಾಗಿಯೂ ಜಿಯೋ ಏರ್ ಫೈಬರ್ನ ವೇಗ ಮತ್ತು ಗುಣಮಟ್ಟದ ಸ್ಕೋರ್ 5ಜಿ ಮೊಬೈಲ್ ನೆಟ್ವರ್ಕ್ನಂತೆಯೇ ಉಳಿದಿದೆ. ಜಿಯೋದ 5ಜಿ ನೆಟ್ವರ್ಕ್ನ ವೇಗವು ದೇಶದಲ್ಲಿಯೇ ಅತ್ಯಧಿಕವಾಗಿದೆ ಎಂದು ತಿಳಿಸಲಾಗಿದೆ. ಭಾರತದ ‘ಸ್ಥಿರ ವೈರ್ಲೆಸ್ ಸೇವೆಗಳಲ್ಲಿ’ ರಿಲಯನ್ಸ್ ಜಿಯೋ ಮಾತ್ರ ಸದ್ಯಕ್ಕೆ ಸ್ವತಂತ್ರ 5ಜಿ ನೆಟ್ವರ್ಕ್ ಅನ್ನು ಬಳಸುತ್ತಿದೆ. ಓಪನ್ ಸಿಗ್ನಲ್ ಪ್ರಕಾರ, ಸ್ವತಂತ್ರ 5ಜಿ ಜೊತೆಗೆ ನೆಟ್ವರ್ಕ್ ಸ್ಲೈಸಿಂಗ್ ತಂತ್ರಜ್ಞಾನವು ಜಿಯೋ…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಿಯೋನಿಕ್ಸ್ ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆದಂತ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೊನಿಕ್ಸ್) ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ವೆಬ್ ಸೈಟ್ https://kea.kar.nic.in ನಲ್ಲಿ ಪ್ರಕಟಿಸಿದೆ. ಆರು ನಿಗಮ ಮಂಡಳಿಗಳ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ಅಂಕಗಳನ್ನು ಪಟ್ಟಿ ಒಳಗೊಂಡಿದೆ. ಪರಿಷ್ಕೃತ ಅಂಕಪಟ್ಟಿಗೆ ಆಕ್ಷೇಪಣೆಗಳನ್ನು ಜೂನ್ 14ರ ಒಳಗೆ ಇ-ಮೇಲ್ kea2023exam@gmail.com ಸಲ್ಲಿಸಬಹುದಾಗಿದೆ. https://kannadanewsnow.com/kannada/valmiki-development-corporation-irregularities-kannadigas-write-to-telangana-cm-revanth-reddy/ https://kannadanewsnow.com/kannada/after-ndas-victory-bhupa-cut-off-his-finger-and-offered-it-to-god/













