Author: kannadanewsnow09

ನವದೆಹಲಿ: ಬಾಂಗ್ಲಾದೇಶದಲ್ಲಿ ಉಂಟಾಗಿರುವಂತ ಪ್ರಕ್ಷುಬ್ಧತೆಯ ಕಾರಣದಿಂದಾಗಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಂತ ಶೇಖ್ ಹಸೀನಾ ಅವರು, ಢಾಕಾ ತೊರೆದು ಸೇನಾ ವಿಮಾನದ ಮೂಲಕ ಭಾರತದತ್ತ ಆಗಮಿಸಿದ್ದರು. ಈಗ ಅವರು ದೆಹಲಿಗೆ ಬಂದಿಳಿದಿದ್ದು, ಅವರನ್ನು ಐಎಎಫ್ ನ ಹಿರಿಯ ಅಧಿಕಾರಿಗಳು ಸ್ವಾಗತಿಸಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಂತ ಶೇಖ್ ಹಸೀನಾ ಅವರು, ಢಾಕಾವನ್ನು ತೊರೆದು, ಅಲ್ಲಿಂದ ಭಾರತದ ದೆಹಲಿಯತ್ತ ಸೇನಾ ವಿಮಾನದಲ್ಲಿ ಆಗಮಿಸಿದ್ದರು. ಅವರು ಭಾರತದ ದೆಹಲಿಯ ಹಿಂಡನ್ ಏರ್ ಬೇಸ್ ಗೆ ಬಂಧಿಳಿದಾಗ, ಅವರನ್ನು ಐಎಎಫ್ ನ ಹಿರಿಯ ಅಧಿಕಾರಿಗಳು ಸ್ವಾಗತ ಕೋರಿದರು. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಸಿ -130 ಸಾರಿಗೆ ವಿಮಾನದಲ್ಲಿ ಹಿಂಡನ್ ವಾಯುನೆಲೆಗೆ ಬಂದಿಳಿದಿದ್ದಾರೆ. ಈ ವಿಮಾನವನ್ನು ಭಾರತೀಯ ವಾಯುಪಡೆಯ ಸಿ -17 ಮತ್ತು ಸಿ -130 ಜೆ ಸೂಪರ್ ಹರ್ಕ್ಯುಲಸ್ ವಿಮಾನ ಹ್ಯಾಂಗರ್ ಗಳ ಬಳಿ ನಿಲ್ಲಿಸಲಾಗುವುದು. ಭಾರತೀಯ ವಾಯುಪ್ರದೇಶಕ್ಕೆ ಪ್ರವೇಶಿಸಿದಾಗಿನಿಂದ ಗಾಜಿಯಾಬಾದ್ನ ಹಿಂಡನ್ ವಾಯುನೆಲೆಗೆ ವಿಮಾನದ ಚಲನೆಯನ್ನು ಭಾರತೀಯ ವಾಯುಪಡೆ ಮತ್ತು…

Read More

ಬೆಂಗಳೂರು: ನಗರದಲ್ಲಿ ವರುಣನ ಆರ್ಭಟ ಜೋರಾಗಿದೆ. ಬೆಂಗಳೂರಿನ ಹಲವೆಡೆ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಸಂಚಾರ ವ್ಯತ್ಯಯ ಉಂಟಾಗಿದೆ. ಟ್ರಾಫಿಕ್ ಜಾಮ್ ಅಲ್ಲಲ್ಲಿ ಉಂಟಾದ ಪರಿಣಾಮ, ವಾಹನ ಸವಾರರು ಪರದಾಡುತ್ತಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಹಲವೆಡೆ ಮಳೆ ಆರಂಭಗೊಂಡಿದೆ. ನಗರದ ಮೆಜೆಸ್ಟಿಕ್, ಹೆಚ್ಎಎಲ್, ದೊಡ್ಡನೆಕ್ಕುಂದಿ, ಮಾರತಹಳ್ಳಿ, ಕುಂದ್ಲಹಳ್ಳಿ, ಮುರುಗೇಶ ಪಾಳ್ಯ, ದೊಮ್ಮಲೂರು, ಸಿವಿ ರಾಮನ್ ನಗರ, ಈಜಿಪುರ, ಶಾಂತಿನಗರ, ವಿಜಯನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಇದಲ್ಲದೇ ಜಯನಗರ, ಕೆ ಆರ್ ಮಾರ್ಕೆಟ್, ಬನಶಂಕರಿ, ಕಾರ್ಪೊರೇಷನ್, ಮೈಸೂರು ಬ್ಯಾಂಕ್ ಸರ್ಕಲ್, ವಿಧಾನಸೌಧ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದೆ. ಮಳೆಯಿಂದಾಗಿ ರಸ್ತೆಗೆ ನೀರು ನುಗ್ಗಿದ ಪರಿಣಾಮ ಸಂಚಾರ ವ್ಯತ್ಯಯ ಉಂಟಾಗಿದೆ. ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯಲ್ಲಿ ನೆನೆದುಕೊಂಡೇ ಬೈಕ್ ಸವಾರರು ತೆರಳುತ್ತಿರುವುದು ಅಲ್ಲಲ್ಲಿ ಕಂಡು ಬಂದಿದೆ. https://kannadanewsnow.com/kannada/international-sportspersons-to-get-government-jobs-from-state-govt/ https://kannadanewsnow.com/kannada/bengaluru-airport-to-be-fixed-deputy-cm-dk-shivakumar-chairs-crucial-meeting/

Read More

ಬೆಂಗಳೂರು : ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲು ಬದ್ಧವಾಗಿದೆ. ಅಂತರರಾಷ್ಟ್ರೀಯ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯವನ್ನು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಭಾನುವಾರ ಕೃಷ್ಣಾದಲ್ಲಿ ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ ಒಲoಪಿಕ್ಸ್, ಪ್ಯಾರಾಲಿoಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ ಗಳಲ್ಲಿ ಪದಕ ವಿಜೇತ 12ಮಂದಿ ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿ ಮಾತನಾಡಿದರು. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 2016-17ರ ಅವಧಿಯಲ್ಲಿ ಹುಬ್ಬಳ್ಳಿಯಲ್ಲಿ ಒಲಂಪಿಕ್ಸ್‌ ಅಸೋಸಿಯೇಶನ್‌ ವತಿಯಿಂದ ಆಯೋಜಿಸಲಾಗಿದ್ದ ಕ್ರೀಡಾಕೂಟದ ಸಂದರ್ಭದಲ್ಲಿ, ಒಲಂಪಿಕ್ಸ್‌, ಏಶ್ಯಾಡ್‌ ಮತ್ತು ಕಾಮನ್‌ವೆಲ್ತ್‌ನಂತಹ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡುವ ಕ್ರೀಡಾಳುಗಳಿಗೆ ಸರ್ಕಾರಿ ನೌಕರಿ ಒದಗಿಸುವುದಾಗಿ ಘೋಷಣೆ ಮಾಡಿದ್ದೆ. ಸರ್ಕಾರ ಬದಲಾದ ಬಳಿಕ ಇದು ನೆನೆಗುದಿಗೆ ಬಿದ್ದಿತ್ತು. ಇದೀಗ ಈ…

Read More

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ  ನಿಲ್ದಾಣ ಹೊರತುಪಡಿಸಿ, ಬೆಂಗಳೂರಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣ ಬಹುತೇಕ ಖಚಿತವಾಗಿದೆ. ಈ ಸಂಬಂಧ ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಅವರು, ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಅವರು ವಿಧಾನಸೌಧದಲ್ಲಿ ಸೋಮವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಇಂದಿನ ಸಭೆಯಲ್ಲಿ ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣವನ್ನು ಎಲ್ಲಿ ನಿರ್ಮಿಸಬೇಕು ಎನ್ನುವುದು ಸೇರಿದಂತೆ ಮಹತ್ವದ ವಿಚಾರಗಳನ್ನು ಚರ್ಚೆ ನಡೆಸಲಾಯಿತು. ಇಂದಿನ ಸಭೆಯಲ್ಲೇ ರಾಜ್ಯದ ರಾಜಧಾನಿ ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಫೈನಲ್ ಮಾಡುವ ಸಾಧ್ಯತೆ ಇದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಸಭೆಯ ಬಳಿಕ ತಿಳಿಯಲಿದೆ. https://kannadanewsnow.com/kannada/beware-of-vacant-land-owners-in-bengaluru-bbmp-imposes-notice-penalty-for-not-maintaining-cleanliness/ https://kannadanewsnow.com/kannada/former-bangladesh-pm-sheikh-hasina-arrives-in-delhi-receives-senior-iaf-officials/

Read More

ನವದೆಹಲಿ: ಬಾಂಗ್ಲಾದೇಶದಲ್ಲಿ ಉಂಟಾಗಿರುವಂತ ಪ್ರಕ್ಷುಬ್ಧತೆಯ ಕಾರಣದಿಂದಾಗಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಂತ ಶೇಖ್ ಹಸೀನಾ ಅವರು, ಢಾಕಾ ತೊರೆದು ಸೇನಾ ವಿಮಾನದ ಮೂಲಕ ಭಾರತದತ್ತ ಆಗಮಿಸಿದ್ದರು. ಈಗ ಅವರು ದೆಹಲಿಗೆ ಬಂದಿಳಿದಿದ್ದು, ಅವರನ್ನು ಐಎಎಫ್ ನ ಹಿರಿಯ ಅಧಿಕಾರಿಗಳು ಸ್ವಾಗತಿಸಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಂತ ಶೇಖ್ ಹಸೀನಾ ಅವರು, ಢಾಕಾವನ್ನು ತೊರೆದು, ಅಲ್ಲಿಂದ ಭಾರತದ ದೆಹಲಿಯತ್ತ ಸೇನಾ ವಿಮಾನದಲ್ಲಿ ಆಗಮಿಸಿದ್ದರು. ಅವರು ಭಾರತದ ದೆಹಲಿಯ ಹಿಂಡನ್ ಏರ್ ಬೇಸ್ ಗೆ ಬಂಧಿಳಿದಾಗ, ಅವರನ್ನು ಐಎಎಫ್ ನ ಹಿರಿಯ ಅಧಿಕಾರಿಗಳು ಸ್ವಾಗತ ಕೋರಿದರು. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಸಿ -130 ಸಾರಿಗೆ ವಿಮಾನದಲ್ಲಿ ಹಿಂಡನ್ ವಾಯುನೆಲೆಗೆ ಬಂದಿಳಿದಿದ್ದಾರೆ. ಈ ವಿಮಾನವನ್ನು ಭಾರತೀಯ ವಾಯುಪಡೆಯ ಸಿ -17 ಮತ್ತು ಸಿ -130 ಜೆ ಸೂಪರ್ ಹರ್ಕ್ಯುಲಸ್ ವಿಮಾನ ಹ್ಯಾಂಗರ್ ಗಳ ಬಳಿ ನಿಲ್ಲಿಸಲಾಗುವುದು. ಭಾರತೀಯ ವಾಯುಪ್ರದೇಶಕ್ಕೆ ಪ್ರವೇಶಿಸಿದಾಗಿನಿಂದ ಗಾಜಿಯಾಬಾದ್ನ ಹಿಂಡನ್ ವಾಯುನೆಲೆಗೆ ವಿಮಾನದ ಚಲನೆಯನ್ನು ಭಾರತೀಯ ವಾಯುಪಡೆ ಮತ್ತು…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಆಗಸ್ಟ್.7ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-03 ಮತ್ತು 12 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಕೊಂಡಿರುವುದರಿಂದ ಆ .07 ರಂದು ಬಳಗ್ಗೆ 09.00 ರಿಂದ ಸಂಜೆ 5.30ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಅಂತ ತಿಳಿಸಿದೆ. ಆ.7ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಎಸ್.ವಿ.ಬಡಾವಣೆ ಎ. ಬಿ. ಮತ್ತು ಎಫ್ ಬ್ಲಾಕ್, ಗುಡ್‌ಲಕ್ ಸರ್ಕಲ್, ಅಮ್ಮ ನಿಲಯ, ಸ್ನೇಹ ಅಪಾರ್ಟ್ಮೆಂಟ್‌ನ ಸುತ್ತಮುತ್ತಲಿನ ಪ್ರದೇಶ, ಎಂ.ಎಂ.ಎಸ್. ಲೇಔಟ್, ಬೋವಿ ಕಾಲೋನಿ, ವಿಜಯಲಕ್ಷ್ಮೀ ಲೇಔಟ್, ಸೋಮನಾಥ್ ಲೇಔಟ್, ಪುಷ್ಪಗಿರಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. https://kannadanewsnow.com/kannada/the-british-could-not-shake-the-congress-party-could-you-dk-thunders/ https://kannadanewsnow.com/kannada/beware-of-vacant-land-owners-in-bengaluru-bbmp-imposes-notice-penalty-for-not-maintaining-cleanliness/

Read More

ಮದ್ದೂರು: ಬ್ರಿಟಿಷರ ಕೈಯಲ್ಲೇ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಆಗಲಿಲ್ಲ. ಸರ್ಕಾರ ಒಡೆದುಹಾಕಲು ಇದು ಮಡಕೆಯೇ? ಕಾಂಗ್ರೆಸ್ ಹೋರಾಟಕ್ಕೆ ನಿನ್ನ ಕ್ಷೇತ್ರದ ಹೆಬ್ಬಾಗಿನಲ್ಲೇ ಇರುವ ಶಿವಪುರ ಸತ್ಯಾಗ್ರಹ ಸೌಧವೇ ಸಾಕ್ಷಿ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಗುಡುಗಿದ್ದಾರೆ. ಮದ್ದೂರಿನಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, “10 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರವನ್ನು ತೆಗೆಯುತ್ತೇವೆ ಎಂದು ಮಿಸ್ಟರ್ ಕುಮಾರಸ್ವಾಮಿ ಹೇಳುತ್ತಿದ್ದಾರೆ. ಬ್ರಿಟಿಷರ ಕೈಯಲ್ಲೇ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಆಗಲಿಲ್ಲ. ಸರ್ಕಾರ ಒಡೆದುಹಾಕಲು ಇದು ಮಡಕೆಯೇ? ಕಾಂಗ್ರೆಸ್ ಹೋರಾಟಕ್ಕೆ ನಿನ್ನ ಕ್ಷೇತ್ರದ ಹೆಬ್ಬಾಗಿನಲ್ಲೇ ಇರುವ ಶಿವಪುರ ಸತ್ಯಾಗ್ರಹ ಸೌಧವೇ ಸಾಕ್ಷಿ. ಜನರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ನೀಡಿ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಇವುಗಳನ್ನು ನಿಲ್ಲಿಸಬೇಕು ಎನ್ನುವ ಹುನ್ನಾರ ಮಾಡಿಕೊಂಡು ಬಿಜೆಪಿ, ಜೆಡಿಎಸ್ ಪಾದಯಾತ್ರೆ ನಡೆಸುತ್ತಿವೆ. ಕುಮಾರಸ್ವಾಮಿ, ವಿಜಯೇಂದ್ರ ಯಡಿಯೂರಪ್ಪ, ಆರ್.ಅಶೋಕ್, ಎಲ್ಲಾ ಸೇರಿ ಗ್ಯಾರಂಟಿ ವಿರುದ್ದ ಕತ್ತಿ ಮಸೆಯುತ್ತಿದ್ದಾರೆ” ಎಂದರು. ಕಾಂಗ್ರೆಸ್ ಸರ್ಕಾರವಿರುವ ತನಕ ಗೃಹಲಕ್ಷ್ಮಿ ಹಣ “2023 ರಲ್ಲಿ…

Read More

ಬೆಂಗಳೂರು: ನಗರದಲ್ಲಿ ಡೆಂಗ್ಯೂ ಕೇಸ್ ಹೆಚ್ಚಾದ ಬೆನ್ನಲ್ಲೇ, ಬಿಬಿಎಂಪಿಯಿಂದ ಸ್ವಚ್ಛತೆಗೆ ಆದ್ಯತೆಯನ್ನು ನೀಡಲಾಗುತ್ತಿದೆ. ಈ ಕಾರಣಕ್ಕೇ ಬೆಂಗಳೂರಿನ ಖಾಲಿ ನಿವೇಶನ ಮಾಲೀಕರೇ ಎಚ್ಚರ ಎನ್ನುವಂತೆ ಖಾಲಿ ನಿವೇಶನಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಬಿಬಿಎಂಪಿ ಸೂಚಿಸಿದೆ. ಒಂದು ವೇಳೆ ನಿಯಮ ಮೀರಿದ್ರೇ ನೋಟಿಸ್ ನೀಡಿ, ದಂಡವನ್ನು ವಿಧಿಸುವಂತ ಎಚ್ಚರಿಕೆ ನೀಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳನ್ನು ಗುರುತಿಸಿ ಮಾಲೀಕರಿಗೆ ನೋಟೀಸ್ ನೀಡಿ ದಂಡ ವಿಧಿಸಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ ಆಯಾ ವಲಯ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳನ್ನು ಪಟ್ಟಿ ಮಾಡಬೇಕು. ನಂತರ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳ ಮಾಲೀಕರಿಗೆ ನೋಟೀಸ್ ಜಾರಿಗೊಳಿಸಿ ಸ್ವಚ್ಛತೆ ಮಾಡಿ ದಂಡ ವಿಧಿಸುವುದರ ಜೊತೆಗೆ ಮತ್ತೆ ಈ ರೀತಿ ಮರುಕಳಿಸದಂತೆ ಎಚ್ಚರಿಕೆ ನೀಡಬೇಕೆಂದು ಸೂಚಿಸಿದರು. ಖಾಲಿ…

Read More

ರಾಮನಗರ/ಚನ್ನಪಟ್ಟಣ: ಮೈಸೂರು ಚಲೋ ಪಾದಯಾತ್ರೆಯ ಮೂರನೇ ದಿನ ಚನ್ನಪಟ್ಟಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಕಂಡ ಕಂಡವರ ಆಸ್ತಿಗಳನ್ನು ಸರಣಿಯಾಗಿ ಕಬ್ಜಾ ಮಾಡುತ್ತಿರುವ ವ್ಯಕ್ತಿಯೊಬ್ಬ ನನ್ನ ಆಸ್ತಿ, ನನ್ನ ತಂದೆಯವರ ಆಸ್ತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಅವರು ಮಾಡುತ್ತಿರುವ ಅನಾಚಾರ, ಅಕ್ರಮಗಳ ಬಗ್ಗೆ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಮತ್ತೆ ಸವಾಲು ಹಾಕಿದರು. ಸದಾಶಿವನಗರದಲ್ಲಿ ಐವರು ವಿಧವಾ ತಾಯಂದಿರ ಬಳಿ ನಿವೇಶನಗಳ ಸೇಲ್ ಅಗ್ರಿಮೆಂಟ್ ಮಾಡಿಕೊಳ್ಳುತ್ತಾರೆ. ಆ ನಿವೇಶನಕ್ಕೆ ಸಂಪೂರ್ಣವಾಗಿ ಹಣ ಕೊಟ್ಟಿಲ್ಲ. ಕಾಂಗ್ರೆಸ್ ನಾಯಕ ಅಲ್ಲಂ ವೀರಭದ್ರಪ್ಪ ಅವರು ಒಂದು ನಿವೇಶನ ಖರೀದಿ ಮಾಡುವುದಾಗಿ ಅಡ್ವಾನ್ಸ್ ಕೊಡುತ್ತಾರೆ. ಆದರೆ, ಅವರು ಪೂರ್ಣ ಮೊತ್ತ ಕೊಡುವುದಿಲ್ಲ. ಆಮೇಲೆ ಈ ವ್ಯಕ್ತಿ ಮಧ್ಯಪ್ರವೇಶ ಮಾಡುತ್ತಾರೆ. ಈ ವ್ಯಕ್ತಿ ಮಂತ್ರಿಯಾದ ಮೇಲೆ ರಾತ್ರೋರಾತ್ರಿ ಅವರನ್ನು ಕರೆಸಿ ಹೆದರಿಸಿ, ಬೆದರಿಸಿ ಸೇಲ್ ಅಗ್ರಿಮೆಂಟಿಗೆ ರುಜು ಹಾಕಿಸಿಕೊಂಡಿದ್ದಾರೆ. ಇಂಥ ವ್ಯಕ್ತಿ…

Read More

ಮದ್ದೂರು : “ನನ್ನ ಅಜ್ಜಯ್ಯನ ಸುದ್ದಿಗೆ ಬರಬೇಡ. ಅಜ್ಜಯ್ಯನ ಶಕ್ತಿ ಏನು ಎಂಬುದು ನಿನಗೇನು ಗೊತ್ತು? ಅವರ ಶಕ್ತಿ ನನಗೆ ಮಾತ್ರ ಗೊತ್ತು. ಏತಕ್ಕೆ ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿದೆ? ನೀವು ಧರ್ಮಸ್ಥಳಕ್ಕೆ ಹೋಗಿ ಆಣೆ ಮಾಡಿದ ನಂತರ ಏನಾಯಿತು ಎಂಬುದನ್ನು ನೀವೇ ಚರ್ಚೆ ಮಾಡಿಕೊಳ್ಳಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸವಾಲು ಹಾಕಿದರು. ಮದ್ದೂರಿನಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, “ಶಿವಕುಮಾರ್ ಅಪ್ಪ ಅಮ್ಮನಿಗೆ ಹುಟ್ಟಿಲ್ಲ ಎಂದು ಹೇಳಿದ್ದ ಕುಮಾರಸ್ವಾಮಿ ಸಾತನೂರಿಗೆ ಬಂದು ಕ್ಷಮೆ ಕೇಳಿದ್ದ. ಅಂದೇ ಯಾರಿಗೂ ಹೆದರದ ದೊಡ್ಡ ಆಲಹಳ್ಳಿ ಕೆಂಪೇಗೌಡರ ಮಗನಾದ ನಾನು ಇಂದು ಹೆದರುತ್ತೇನೆಯೆ? ನಿಮ್ಮ ಪಾದಯಾತ್ರೆಗಳಿಗೆಲ್ಲ ಹೆದರುವ ಮಗ ನಾನಲ್ಲ” ಎಂದು ತಿರುಗೇಟು ನೀಡಿದರು. ಸಿದ್ದರಾಮಯ್ಯ ಅವರನ್ನು ಮುಟ್ಟುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ ವಿಜಯೇಂದ್ರ, ಅಶೋಕ್ ಅವರೇ.., ಸುಮ್ಮನೆ ಪಾದಯಾತ್ರೆ ಮಾಡುವುದಲ್ಲ. ನಮ್ಮ ಪ್ರಶ್ನೆಗಳಿಗೆ ಉತ್ತರಕೊಟ್ಟು ಹೆಜ್ಜೆ ಹಾಕಿ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರನ್ನು ಮುಟ್ಟುವುದು ನಿಮ್ಮ ಹಣೆಯಲ್ಲೇ ಬರೆದಿಲ್ಲ. ಹಿಂದುಳಿದ ವರ್ಗದ…

Read More