Subscribe to Updates
Get the latest creative news from FooBar about art, design and business.
Author: kannadanewsnow09
ಸ್ವಂತ ಮನೆ ಹಲವರ ಕನಸಾಗಿರುತ್ತದೆ. ಸ್ವಂತ ಮನೆ ಬೇಡ ಎಂದುಕೊಳ್ಳುವವರನ್ನು ನಾವು ನೋಡಿದ್ದೇವೆಯೇ ಅಥವಾ ನನಗೆ ಸ್ವಂತ ಮನೆ ಬೇಡ ಎಂಬ ಮಾತುಗಳನ್ನು ಕೇಳಿದ್ದೇವೆಯೇ? ಹಾಗಿದ್ದಲ್ಲಿ, ನಾವು ಖಂಡಿತವಾಗಿಯೂ ಅಲ್ಲ ಎಂದು ಹೇಳಬಹುದು. ಯಾಕೆಂದರೆ ಸ್ವಂತ ಮನೆ ಎನ್ನುವುದು ಎಲ್ಲರಿಗೂ ಬೇಕಾಗಿರುವಂಥದ್ದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ…
ಬೆಂಗಳೂರು: ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. ಈ ಮತದಾನದಲ್ಲಿ ಪಾಲ್ಗೊಳ್ಳೋದಕ್ಕೆ ತೆರಳುವಂತ ಮತದಾರರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ KSRTC ಬಸ್ ಸಂಚರಿಸುವಂತ ಮಾರ್ಗಗಳಲ್ಲಿ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯು, ರಾಜ್ಯದಲ್ಲಿ ದಿನಾಂಕ 26-04-2024 ಹಾಗೂ 07-05-2024ರಂದು ಎರಡು ಸುತ್ತಿನಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ ಎಂದಿದೆ. ಮೊದಲ ಸುತ್ತಿನ ಮತದಾನಕ್ಕಾಗಿ ಬೆಂಗಳೂರಿನಿಂದ ಹೊರ ಊರುಗಳಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಅಧಿಕವಾಗಿರುವ ಹಿನ್ನಲೆಯಲ್ಲಿ, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 25-04-2024, 26-04-2024 ಹಾಗೂ 27-04-2024ರಂದು ಕೆ ಎಸ್ ಆರ್ ಟಿಸಿ ಬಸ್ ಕಾರ್ಯಾಚರಣೆಯ ವ್ಯಾಪ್ತಿಯ ಸ್ಥಳಗಳಿಗೆ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಗಳನ್ನು ಸಂಚಾರ ಮಾಡೋದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದಿದೆ. ದಿನಾಂಕ 25-04-2024ರಂದು 575 ಹೆಚ್ಚುವರಿ ಬಿಎಂಟಿಸಿ ಬಸ್, ದಿನಾಂಕ 26-04-2024ರಂದು 465 ಬಸ್, ದಿನಾಂಕ 27-04-2024ರಂದು 120 ಹೆಚ್ಚುವರಿ ಬಿಎಂಟಿಸಿ ಬಸ್…
ತುಮಕೂರು: ನಗರದಲ್ಲಿನ ಪ್ರಸಿದ್ಧ ಬಿರಿಯಾನಿ ಹೌಸ್ ನಲ್ಲಿ ಗ್ಯಾಸ್ ಪೈಕ್ ಸೋರಿಕೆಯಾಗಿದ್ದರಿಂದ ಹೋಟೆಲ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಮೂಲಕ ಅಪಾರ ಪ್ರಮಾಣದ ಬಿರಿಯಾನಿ ಹೌಸ್ ನಲ್ಲಿದ್ದಂತ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದಾವೆ. ತುಮಕೂರು ನಗರದ ಹೊಸ ಬಡಾವಣೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದ ಪ್ರಸಿದ್ಧ ಬಿರಿಯಾನಿ ಹೌಸ್ ನಲ್ಲಿ ಗ್ಯಾಸ್ ಪೈಪ್ ಸೋರಿಕೆಯಿಂದ ಅಗ್ನಿ ಅವಘಡ ಉಂಟಾಗಿದೆ. ಬೆಂಕಿಯ ಕೆನ್ನಾಲಿಗೆಯಿಂದ ಬಿರಿಯಾನಿ ಹೌಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ನೆಲ ಮಹಡಿ ಹಾಗೂ ಮೇಲಿನ ಮಹಡಿಯಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟು ಭಸ್ಮವಾಗಿದ್ದಾವೆ. ಗ್ಯಾಸ್ ಸೋರಿಕೆ ವೇಳೆ ಬಂದ್ ಮಾಡಲು ವಾಲ್ ಇಲ್ಲದೇ ಇರೋದೇ ಇಷ್ಟೊಂದು ದೊಡ್ಡ ಅಗ್ನಿ ಅವಘಡಕ್ಕೆ ಕಾರಣ ಎನ್ನಲಾಗಿದೆ. ಈ ಸಂಬಂಧ ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/voters-polling-officials-note-mobile-phones-will-not-be-allowed-to-be-used-at-polling-stations-tomorrow/ https://kannadanewsnow.com/kannada/breaking-delhi-cm-arvind-kejriwal-kingpin-of-excise-policy-scam-ed/
ಬೆಂಗಳೂರು: ಫ್ರಿ ಬಸ್ ಕೊಟ್ರು ಅಂತ ಹೆಣ್ ಮಕ್ಕಳು ಎಲ್ಲೆಲೋ ಹೋಗ್ತಾವ್ರೆ ಎನ್ನುವುದರ ಮೂಲಕ ಬಿಜೆಪಿ ನಾಯಕಿ, ಚಿತ್ರನಟಿ ಶೃತಿ ಅವರು ವಿವಾದತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಬಂಧ ರಾಜ್ಯ ಮಹಿಳಾ ಆಯೋಗದಿಂದ ನಟಿ ಶೃತಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ನಟಿ ಶೃತಿಯವರು ಹೇಳಿದಂತ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆ ವಿಡಿಯೋವೊಂದರಲ್ಲಿ ಅವರು ಹಲವು ಕಡೆಗಳಲ್ಲಿ ಗಂಡದರು ಮನೆಯಲ್ಲಿ ಅಳುತ್ತಿದ್ದಾರೆ. ಮನೆಯಲ್ಲಿ ಮಕ್ಕಳು ಹಸಿವಿನಿಂದ ಇದ್ದಾರೆ. ಬಿಟ್ಟಿ ಭಾಗ್ಯಗಳನ್ನು ನೀಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಹೆಣ್ಣುಮಕ್ಕಳು ಜುಟ್ಟುಹಿಡಿದುಕೊಂಡು ಹೊಡೆದುಕೊಳ್ಳುತ್ತಿದ್ದಾರೆ ಅಂತ ಆರೋಪಿಸಿದ್ದರು. ನ್ನೂ ಹಲವು ಮಂದಿ ಶೃತಿ ಅವರ ಹೇಳಿಕೆ ನೋಡಿ ಅವರ ವೈಯುಕ್ತಿಕ ಜೀವನದ ಬಗ್ಗೆ ಕೂಡ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇದು ತಪ್ಪು ಅಂತ ಕೂಡ ಹಲವು ಮಂದಿ ಬುದ್ದಿ ಹೇಳುತ್ತಿದ್ದರು. ಈ ವಿವಾದಾತ್ಮಕ ಹೇಳಿಕೆ ಸಂಬಂಧ ನಟಿ ಶೃತಿಗೆ ರಾಜ್ಯ ಮಹಿಳಾ ಆಯೋಗವು ನೋಟಿಸ್ ನೀಡಲಾಗಿದೆ. ಅದರಲ್ಲಿ ರಾಜ್ಯ ಮಹಿಳಾ ಆಯೋಗದ ಅಧಿನಿಯಮ 1995 ಪರಿಚಯ 10(ಎ)ಮೇರೆಗೆ…
ಬೆಂಗಳೂರು: 2015-16ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ರಾಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ 17 ಆರೋಪಿಗಳನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶಿಸಿದೆ. ಇಡೀ ರಾಜ್ಯದಲ್ಲೇ ಸಖತ್ತು ಸದ್ದು ಮಾಡಿದ್ದಂತ 2015-16ರ ದ್ವಿತೀಯ ಪಿಯುಸಿ ರಾಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಸರ್ಕಾರ ವಹಿಸಿತ್ತು. ತನಿಖೆ ನಡೆಸಿ, ನ್ಯಾಯಾಲಯಕ್ಕೂ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಸೆಷನ್ಸ್ ಕೋರ್ಟ್, ಇಂದು ತನ್ನ ತೀರ್ಪು ಪ್ರಕಟಿಸಿದೆ. 2015-16ರಲ್ಲಿ ನಡೆದಿದ್ದಂತ ದ್ವಿತೀಯ ಪಿಯುಸಿ ರಾಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ 17 ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿದೆ. ಅಂದಹಾಗೇ 2016ರ ಮಾರ್ಚ್ 21ರಂದು ದ್ವಿತೀಯ ಪಿಯುಸಿ ರಾಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಪರೀಕ್ಷೆಗೂ ಮುನ್ನವೇ ಬೆಳಿಗ್ಗೆ 7.30ಕ್ಕೆ ವಾಟ್ಸಾಪ್ ನಲ್ಲಿ ವೈರಲ್ ಆಗಿ, ಸೋರಿಕೆಯಾಗಿತ್ತು. ಈ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೂ ವಹಿಸಿತ್ತು. https://kannadanewsnow.com/kannada/annabhagya-scheme-to-be-implemented-despite-centres-non-cooperation-priyank-kharge/ https://kannadanewsnow.com/kannada/tcs-world-10k-race-to-be-held-in-bengaluru-on-april-28-metro-services-to-begin-at-3-35-am/
ಬೆಂಗಳೂರು: ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ಷಾ ಪರೇಡ್ ಮೈದಾನದಿಂದ ದಿನಾಂಕ 28.04.2024 (ಭಾನುವಾರ) ಬೆಂಗಳೂರಿನಲ್ಲಿ ನಡೆಯಲಿರುವ TCS ವರ್ಲ್ಡ್ 10K ರನ್ ಪ್ರಯುಕ್ತ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ ನಮ್ಮ ಮೆಟ್ರೋ ರೈಲು ಸೇವೆಯನ್ನು 07:00 ಗಂಟೆಗೆ ಬದಲಾಗಿ ಮುಂಜಾನೆ 03:35 ಗಂಟೆಗೆ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳಿಂದ ಪ್ರಾರಂಭವಾಗುತ್ತದೆ. ರೈಲುಗಳು ಮುಂಜಾನೆ 03.35 ರಿಂದ 04.25 ಗಂಟೆಯ ಸಮಯದಲ್ಲಿ 10 ನಿಮಿಷಗಳ ಆವರ್ತನದಲ್ಲಿ ಚಲಿಸುತ್ತವೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ನಿಂದ ಎಂ.ಜಿ ರಸ್ತೆ ಕಡೆಗೆ ಮೊದಲ ರೈಲು ಸೇವೆಯು ಬೆಳಿಗ್ಗೆ 04.10 ಗಂಟೆಗೆ ಪ್ರಾರಂಭವಾಗಿ ತದನಂತರ 10 ನಿಮಿಷಗಳ ಆವರ್ತನದಲ್ಲಿ ಬೆಳಿಗ್ಗೆ 5.00 ಗಂಟೆಯವರೆಗೆ ಚಲಿಸುತ್ತವೆ. ತರುವಾಯ ರೈಲುಗಳು ಜನರ ದಟ್ಟಣೆಯ ಅನುಗುಣವಾಗಿ ಚಲಿಸುತ್ತವೆ. ವರ್ಲ್ಡ್ಸ್ ಪ್ರೀಮಿಯರ್ 10K ಓಟದಲ್ಲಿ ಭಾಗವಹಿಸಲು ಮೇಲಿನ ಸೌಲಭ್ಯವನ್ನು ಬಳಸಿಕೊಳ್ಳುವಂತೆ ವಿನಂತಿಸಲಾಗಿದೆ. ಸಾರ್ವಜನಿಕರು ನಗದು ರಹಿತ QR ಟಿಕೆಟ್ಗಳನ್ನು ಖರೀದಿಸಿ ಪ್ರಯಾಣಿಸುವಂತೆ ಬಿ.ಎಂ.ಆರ್.ಸಿ.ಎಲ್ ಕೋರುತ್ತದೆ. https://kannadanewsnow.com/kannada/voters-polling-officials-note-mobile-phones-will-not-be-allowed-to-be-used-at-polling-stations-tomorrow/…
ಕಲಬುರಗಿ: ಕೇಂದ್ರ ಸರಕಾರದ ಅಸಹಕಾರ ನಡುವೆಯೂ ಅನ್ನಭಾಗ್ಯ ಯೋಜನೆಯಡಿಯಲ್ಲಿ ಬಡವರಿಗೆ ಅಕ್ಕಿ ಕೊಡುವ ಬದಲು ಅಕ್ಕಿ ಖರೀದಿಸಲು ಹಣ ನೇರವಾಗಿ ಅವರ ಖಾತೆಗ ವರ್ಗಾಯಿಸಲಾತ್ತಿದೆ. ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಮುಗುಳುನಾಗಾವಿ ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ರಾಧಾಕೃಷ್ಣ ಅವರ ಪರ ಮತಯಾಚಿಸಿ ಅವರು ಮಾತನಾಡುತ್ತಿದ್ದರು. ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ಕೆಲಸ ಕಾಂಗ್ರೆಸ್ ಮಾಡಿದೆ. ಇದನ್ನು ನೀವು ಮರೆಯಬಾರದು. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಲು ಪ್ರಯತ್ನಿಸಬೇಕು. ಆ ಮೂಲಕ ಜನಪರ ಆಡಳಿತ ನಡೆಸುವ ಅವಕಾಶ ನೀಡಿ ಎಂದು ಖರ್ಗೆ ಮನವಿ ಮಾಡಿದರು. ಭಾವನಾತ್ಮಕವಾಗಿ ಯೋಚಿಸದೆ ಅಭಿವೃದ್ದಿಯ ಆಧಾರದ ಮೇಲೆ ಮತ ನೀಡಿ ಎಂದು ಮನವಿ ಮಾಡಿ ಖರ್ಗೆ ಸಾಹೇಬರ ಕೈಗೊಂಡ ಅಭಿವೃದ್ದಿ ಕೆಲಸಗಳನ್ನು ನೋಡಿ ನಮಗೆ ಮತ ನೀಡಿ ರಾಧಾಕೃಷ್ಣ ಅವರಿಗೆ ಮತ ನೀಡಿ ಎಂದರು. ಗುಲಾಮಗಿರಿ ಎಂದರೆ ಅದು ಮೋದಿ ಗ್ಯಾರಂಟಿ -ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ…
ಬೆಂಗಳೂರು: ಕುಮಾರಸ್ವಾಮಿಯವರೇ, ನೀವು ತೋರಿಸಿ, ತೋರಿಸಿ ಜೇಬೋಳಗೆ ಇಳಿಸಿಕೊಳ್ಳುತ್ತಿದ್ದ ಪೆನ್ ಡ್ರೈವ್ನಲ್ಲಿನ ರಹಸ್ಯ ಈಗ ಹೊರಬಂದಿದೆಯೇ? ಹಾಸನದ ಬೀದಿ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ ಡ್ರೈವ್ ನಿಮ್ಮದೇನಾ? ಕುಮಾರಸ್ವಾಮಿಯವರೇ, ರಾಜ್ಯದ ಮಹಿಳೆಯರ ಬಗ್ಗೆ ನಾಲಿಗೆ ಹರಿಬಿಟ್ಟು ದಾರಿ ತಪ್ಪಿದ್ದಾರೆ ಎಂದಿದ್ದ ನೀವು ಯಾಕೆ ಈಗ ಗಾಢ ಮೌನ ವಹಿಸಿದ್ದೀರಿ? ದಾರಿ ತಪ್ಪಿ ನಡೆದವರು ಯಾರು ಎನ್ನುವ ಸಂಗತಿ ಬಟಾಬಯಲಾಗಿರುವಾಗ ರಾಜ್ಯದ ಜನರಿಗೆ ಮುಖ ತೋರಿಸಲಾಗುತ್ತಿಲ್ಲವೇ?? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ. https://twitter.com/INCKarnataka/status/1783453799824400809 ಇಂದು ಎಕ್ಸ್ ಮಾಡಿರುವಂತ ಕಾಂಗ್ರೆಸ್, ಗೌರವದಿಂದ ಮಂಗಳಸೂತ್ರ ತೊಟ್ಟಿರುವ ಹೆಣ್ಣು ಮಕ್ಕಳ ಮಾನ ಮರ್ಯಾದೆ ಹರಾಜು ಮಾಡಿದ್ದು ಯಾರು ಎಂದು ಕಣ್ಬಿಟ್ಟು ನೋಡಿ ಮೋದಿಯವರೇ… ಹಾಸನ ಮೂಲದ ಬಿಜೆಪಿ ಬೆಂಬಲಿತ ಸಂಸದನಲ್ಲವೇ..? ಇದು ಮಹಿಳೆಯರ ಮಂಗಳ ಸೂತ್ರದ ಪಾವಿತ್ರ್ಯತೆಗೆ ಕುತ್ತು ತಂದಿದ್ದು ಎಂದು ನಿಮಗೆ ಅನಿಸುವುದಿಲ್ಲವೇ? ನಿಮಗೆ ಮಹಿಳೆಯರ ಘನತೆ, ಮಂಗಳಸೂತ್ರದ ಪಾವಿತ್ರ್ಯತೆಯ ಬಗ್ಗೆ ನೈಜ ಕಾಳಜಿ ಇದ್ದಿದ್ದೇ ಆದರೆ ನಿಮ್ಮ ಮೈತ್ರಿಕೂಟದ ಕರ್ಮಕಾಂಡದ ಬಗ್ಗೆ ಕ್ಷಮೆ ಕೇಳಿ ಎಂದು…
ಹಾವೇರಿ: ದೇಶಕ್ಕೆ ಸಾಮಾಜಿಕ ನ್ಯಾಯ ಕೊಟ್ಟವರು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು, ಅವರ ಯೋಜನೆಯನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭೆ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಹಿರೆಕೆರೂರು ವಿಧಾನಸಭಾ ಕ್ಷೇತ್ರದ ಮಕರಿ, ನಾಗವಂದ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು. ಕಾಂಗ್ರೆಸ್ ನವರು ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿ ಅವರು ಸಂಸತ್ತಿಗೆ ಬರದಂತೆ ನೋಡಿಕೊಂಡಿದ್ದರು. ಅವರು ನಿಧನರಾದಾಗ ದೆಹಲಿಯಲ್ಲಿ ಅವರ ಅಂತ್ಯ ಸಂಸ್ಕಾರಕ್ಕೆ ಆರು ಅಡಿ ಜಾಗವನ್ನೂ ಕಾಂಗ್ರೆಸ್ ಕೊಡಲಿಲ್ಲ. ಈಗ ಅಂಬೇಡ್ಕರ ಬಗ್ಗೆ ಮಾತನಾಡುತ್ತಾರೆ. ಅವರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ನವರಿಗೆ ಇಲ್ಲ ಎಂದು ಹೇಳಿದರು. ಎಸ್ಸಿ ಎಸ್ಟಿ ಸುಮದಾಯಕ್ಕೆ ಕಾಂಗ್ರೆಸ್ ಯಾವುದೇ ಸಾಮಾಜಿಕ ನ್ಯಾಯ ನೀಡಿಲ್ಲ. ರಾಜ್ಯದಲ್ಲಿ ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಮೂವತ್ತು ವರ್ಷದಿಂದ ಬೇಡಿಕೆ ಇದ್ದರೂ ಯಾರೂ ಮಾಡಿರಲಿಲ್ಲ. ನನಗೂ ಜೇನುಗೂಡಿಗೆ ಕೈ…
ಬೆಂಗಳೂರು: ಅಪಾರ್ಮೆಂಟ್ ನಿವಾಸಿಗಳಾಗಿ, ಮತದಾರರಾಗಿರುವಂತವರಿಗೆ ಆಮಿಷ ವೊಡ್ಡಿದಂತ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಹೌದು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಆಮಿಷ ಪ್ರಕರಣದಲ್ಲಿ ಡಿಕೆ ಶಿಗೆ ರಿಲೀಫ್ ನೀಡಲಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿದೆ. ಚುನಾವಣೆ ಭಾಷಣವನ್ನು ಆಮಿಷವೆಂದು ಆರೋಪಿಸಲಾಗಿದೆ ಎಂಬುದಾಗಿ ಡಿಕೆ ಶಿವಕುಮಾರ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದಿಸಿದ್ದರು. ಡಿಕೆಶಿ ಪರ ವಾದಕ್ಕೆ ಚುನಾವಣಾ ಆಯೋಗದ ವಕೀಲರ ಆಕ್ಷೇಪ ವ್ಯಕ್ತಪಡಿಸಲಾಗಿತ್ತು. ಮತದಾರರಿಗೆ ಡಿ. ಕೆ ಶಿವಕುಮಾರ್ ಆಮಿಷ ಒಡ್ಡಿದ್ದಾರೆ. ನಾನು ಇಲ್ಲಿ ಬಿಸಿನೆಸ್ ಡೀಲ್ ಗೆ ಬಂದಿದ್ದೇನೆ. ‘ನಿಮಗೆ ಹೆಚ್ಚು ಕಾವೇರಿ ನೀರು ಬೇಕೆಂದು ಕೇಳಿದ್ದೀರಿ. ನಿಮಗೆ ಅಪಾರ್ಟ್ ಮೆಂಟ್ ಪಕ್ಕದ ಸಿಎ ಸೈಟ್ ಬೇಕೆಂದು ಕೇಳಿದ್ದೀರಿ. ‘ನೀವು ನಮಗೆ ಮತ ಹಾಕಿದ 2-3 ತಿಂಗಳಲ್ಲಿ ನಿಮಗೆ ಹಸ್ತಾಂತರಿಸುತ್ತೇನೆ. ಡಿಕೆ ಶಿ ಹೇಳಿಕೆ ಉಲ್ಲೇಖಿಸಿ ವಕೀಲ ಶರತ್ ದೊಡ್ಡವಾಡ್ ವಾದಿಸಿದರು. ಈ ವೇಳೆ ಚುನಾವಣೆ ಪ್ರಚಾರದ ಗುಣಮಟ್ಟ ಕುಸಿತಕ್ಕೆ ಹೈಕೋರ್ಟ್ ಕಳವಳ ವ್ಯಕ್ತ ಪಡಿಸಿತು. ಭಾಷಣದ ವೇಳೆ ಇದು ಪುನರಾವರ್ತನೆಯಾಗದಂತೆ…