Author: kannadanewsnow09

ಬೆಂಗಳೂರು: BMTC ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ನಗರದ ಈ ಮಾರ್ಗದಲ್ಲಿ ವಾಯು ವಜ್ರ ಹಾಗೂ ಸಾಮಾನ್ಯ ಸಾರಿಗೆ ಬಸ್ ಸಂಚಾರವನ್ನು ನಿಗಮದಿಂದ ಪರಿಚಯಲಿಸಲಾಗುತ್ತಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸೇವಾ ಸಂಸ್ಥೆಯು, ಬೆಂಗಳೂರು ನಗರ ಹಾಗೂ ಹೊರ ವಲಯದ ಪ್ರಯಾಣಿಕರ ದಟ್ಟಣೆ/ಬೇಡಿಕೆಗನುಗುಣವಾಗಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸುವ ಧ್ಯೇಯದೊಂದಿಗೆ ಪ್ರಯಾಣಿಕರಿಗೆ ದಕ್ಷ, ಉತ್ತಮ, ಸುಲಭ ಸಾರಿಗೆ ಸೇವೆಯನ್ನು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಸಾರ್ವಜನಿಕ ಪ್ರಯಾಣಿಕರ ಹೊಣೆಗಾರಿಕೆಯಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಿಂದ 25.0 ಕಿ.ಮೀ. ವರೆಗೆ ಕಾರ್ಯಾಚರಣೆ ವ್ಯಾಪ್ತಿಯನ್ನು ಹೊಂದಿದ್ದು, ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಸಾರಿಗೆ ಸೌಲಭ್ಯ ಒದಗಿಸುವ ಒದಗಿಸುವ ಏಕೈಕ ಸಾರಿಗೆ ಸಂಸ್ಥೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಪ್ರತಿದಿನ 5,584 ಬಸ್ಸುಗಳಿಂದ 57,820 ಸುತ್ತುವಳಿಗಳನ್ನು 11.40 ಲಕ್ಷ ಕಿ.ಮೀ.ಗಳಲ್ಲಿ ಆಚರಣೆಗೊಳಿಸಲಾಗುತ್ತಿದೆ. ಪ್ರತಿದಿನ ಸರಾಸರಿ 40 ಲಕ್ಷ ಪ್ರಯಾಣಿಕರು ಸಂಸ್ಥೆಯ ಸಾರಿಗೆಗಳ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದಿದೆ. ಬೆಂಗಳೂರು ನಗರದ ಪ್ರಯಾಣಿಕರ…

Read More

ಬೆಂಗಳೂರು: ಕೇರಳ ರಾಜ್ಯದ ವಯನಾಡ್‍ನಲ್ಲಿ ಇತ್ತೀಚೆಗೆ ಆನೆ ತುಳಿತಕ್ಕೆ ಒಳಗಾಗಿ ಮೃತಪಟ್ಟ ವ್ಯಕ್ತಿಗೆ ಕರ್ನಾಟಕ ಸರಕಾರವು ರೂ. 15 ಲಕ್ಷ ಪರಿಹಾರವನ್ನು ಘೋಷಿಸಿದೆ. ಕಾಂಗ್ರೆಸ್ ಮುಖಂಡ, ಕೇರಳ ರಾಜ್ಯದ ಸಂಸದ ರಾಹುಲ್ ಗಾಂಧಿಯವರ ಆದೇಶದ ಮೇರೆಗೆ ಇಲ್ಲಿನ ರಾಜ್ಯ ಸರಕಾರ 15 ಲಕ್ಷ ಕೊಟ್ಟಿರುವುದನ್ನು ಬಿಜೆಪಿ ಖಂಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಒಂದು ಕಡೆ ರಾಜ್ಯದಲ್ಲಿ ಬರಗಾಲವಿದ್ದು, ರೈತರಿಗೆ ಹೆಕ್ಟೇರಿಗೆ 2 ಸಾವಿರವನ್ನು ಭಿಕ್ಷೆಯಂತೆ ಕೊಡಲಾಗುತ್ತಿದೆ. ಇನ್ನೊಂದೆಡೆ ರಾಹುಲ್ ಗಾಂಧಿ, ಕಾಂಗ್ರೆಸ್ ಹೈಕಮಾಂಡನ್ನು ತೃಪ್ತಿಪಡಿಸಲು, ರಾಹುಲ್ ಗಾಂಧಿ ಹೇಳಿದ್ದಾರೆಂದು ನಮ್ಮ ರಾಜ್ಯದ ತೆರಿಗೆಯನ್ನು ದುರುಪಯೋಗಪಡಿಸಿಕೊಂಡದ್ದು ಖಂಡನೀಯ ಎಂದು ತಿಳಿಸಿದರು. ರಾಜ್ಯ ಸರಕಾರ ಯಾರನ್ನು ಕೇಳಿ ಇಂಥ ನಿರ್ಧಾರ ಮಾಡಿದೆ ಎಂದು ಪ್ರಶ್ನಿಸಿದ ಅವರು, ನಿಮ್ಮ ನಾಯಕರನ್ನು ಖುಷಿ ಪಡಿಸಲು ಏನು ಬೇಕಾದರೂ ನಿರ್ಧಾರ ಮಾಡಿದ್ದೀರಿÉ. ಹೇಳುವವರು ಕೇಳುವವರು ಯಾರೂ ಇದ್ದಂತಿಲ್ಲ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು…

Read More

ಸಂಸಾರದಲ್ಲಿನ ಕಷ್ಟಗಳೆಲ್ಲ ನಿವಾರಣೆಯಾಗಲು ಮಾಡಬೇಕಾದ ಪೂಜೆಯೇ ಈ ಅಷ್ಟಲಕ್ಷ್ಮಿ ಪೂಜೆ. ಅಷ್ಟಲಕ್ಷ್ಮಿಯ ಆಶೀರ್ವಾದ ಸಿಕ್ಕರೆ ಸಾಕು. ನೀವು ಜೀವನದಲ್ಲಿ ಎಲ್ಲಾ ಕಷ್ಟಗಳನ್ನು ಕೊನೆಗೊಳಿಸಬಹುದು. ಆದರೆ ಈ ಅಷ್ಟಲಕ್ಷ್ಮಿಯರ ಆಶೀರ್ವಾದ ಪಡೆಯುವುದು ಸುಲಭದ ಮಾತಲ್ಲ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ…

Read More

ಬೆಂಗಳೂರು: ರಾಜ್ಯದ ಬಗ್ಗೆ ಈ ಹಿಂದೆ ಅನೇಕ ರೀತಿಯ ಭವಿಷ್ಯವನ್ನು ಕೋಡಿಮಠದ ಶ್ರೀಗಳು ಹೇಳಿದ್ದರು. ಇದೀಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ್ದಾರೆ. ಅದೇ ಯುಗಾದಿ ನಂತ್ರ ಒಳ್ಳೆಯ ಮಳೆಯಾಗಿ ಬೆಳೆ ಬಂದ್ರೇ, ಧಾರ್ಮಿಕ ಮುಖಂಡನ ಸಾವು ಕೂಡ ಆಗಲಿದೆ ಎಂಬುದಾಗಿದೆ. ಈ ಕುರಿತಂತೆ ಕೋಲಾರದ ಮಾಲೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ಸ್ವಾಮೀಜಿಯವರು, ರಾಜ್ಯದಲ್ಲಿ ಯುಗಾದಿ ಕಳೆದ ನಂತ್ರ, ಒಳ್ಳೆ ಬೆಳೆ, ಮಳೆಯಾಗುವ ಲಕ್ಷಣಗಳಿವೆ ಎಂದಿದ್ದಾರೆ. ಇನ್ನೂ ಮತಾದಂತೆ ಹೆಚ್ಚಾಗಲಿದೆ. ಬಾಂಬ್ ಸ್ಟೋಟಗೊಳ್ಳಲಿದೆ. ಭೂಕಂಪ ಆಗುತ್ತದೆ. ಧಾರ್ಮಿಕ ಮುಖಂಡನ ಸಾವು ಕೂಡ ಸಂಭವಿಸಲಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆಯಲ್ಲಿ ಗ್ಯಾರೆಂಟ್ ಗಳಿಂದ‌ ಸರ್ಕಾರ ನಡೆಯುತ್ತಿದ್ದೀಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ನನ್ನಗಿಂತ ನಿಮಗೆ ಚೆನ್ನಾಗಿ ಗೊತ್ತು. ರಾಷ್ಟ್ರ ರಾಜಕಾರಣ ಸಹ ಯುಗಾದಿ ಮೇಲೆ ಗೊತ್ತಾಗುತ್ತದೆ. ಯುಗಾದಿ ನಂತರ‌ ಭವಿಷ್ಯ ಬರುವುದು. ಒಂದು ತಿಂಗಳು ಕಳೆದ ಮೇಲೆ ಮಳೆ, ಬೇಳೆ, ರಾಜಕೀಯ, ದುಡಿಮೆ, ವ್ಯಾಪಾರ ಎಲ್ಲಾ ಗೊತ್ತಾಗಲಿದೆ ಎಂದು ಹೇಳಿದ್ದಾರೆ. https://kannadanewsnow.com/kannada/good-news-for-bmtc-employees-families-state-govt-launches-rs-1-crore-accident-insurance-cover/

Read More

ಬೆಂಗಳೂರು: ಕಂದಾಯ ಇಲಾಖೆಯ ( Revenue Department ) ಕೆಲಸವನ್ನು ಮತ್ತಷ್ಟು ಚುರುಕುಗೊಳಿಸಲು ಹಾಗೂ ಜನರಿಗೆ ಸರಳ ಆಡಳಿತ ನೀಡುವ ಉದ್ದೇಶದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ( Village Accountants Recruitment – VA ) ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು. “ತಾಲೂಕುಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಹಂತದ ನೌಕರರನ್ನು ಬೇರೆಡೆ ನಿಯೋಜನೆಗೊಳಿಸಲಾಗುತ್ತಿದೆ. ಉದ್ಯೋಗಿಗಳ ಕೊರತೆಯಿಂದಾಗಿ ಕಂದಾಯ ಇಲಾಖೆಯಲ್ಲಿ ಜನರಿಗೆ ಸರಿಯಾದ ಸಮಯಕ್ಕೆ ಕೆಲಸವಾಗುತ್ತಿಲ್ಲ” ಎಂದು ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೂಡ್ಲಿ ಅವರು ಪ್ರಶ್ನಿಸಿದ್ದರು. ಶಾಸಕರಾದ ಕಿರಣ್ ಕುಮಾರ್ ಕೂಡ್ಲಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ನಿಮ್ಮ ಪರ ನಾವಿದ್ದೇವೆ. ಇದರಲ್ಲಿ ಯಾವುದೂ ರಾಜಕೀಯ ಇಲ್ಲ. ಕುಂದಾಪುರ ತಾಲೂಕಿನಲ್ಲಿ ಕಂದಾಯ ಇಲಾಖೆಯ 110 ಹುದ್ದೆಗಳ ಪೈಕಿ 70 ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗಿದೆ. ಅಂದರೆ, ಶೇ.65ರಷ್ಟು ಸ್ಥಾನಗಳನ್ನು ಭರ್ತಿ…

Read More

ಬೆಂಗಳೂರು : ಸಾಗುವಳಿ ಭೂ ಮಂಜೂರಾತಿಗಾಗಿ ಬಗರ್ ಹುಕುಂ (ಅಕ್ರಮ ಸಕ್ರಮ) ಯೋಜನೆಯ ಅಡಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನದಲ್ಲಿ ಭರವಸೆ ನೀಡಿದರು. ಸೋಮವಾರ ಪ್ರಶ್ನೋತ್ತರ ಅವಧಿಯ ವೇಳೆ ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಬಗರ್ ಹುಕುಂ ಯೋಜನೆ ಅಡಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಅನರ್ಹಗೊಂಡ ಅರ್ಜಿಗಳ ಸಂಖ್ಯೆ ಎಷ್ಟು? ಮತ್ತು ಅನರ್ಹಗೊಳಿಸಲು ಕಾರಣವೇನು? ಎಂದು ಪ್ರಶ್ನಿಸಿದ್ದರು. ಈ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಬಗರ್ ಹುಕುಂ ಕಾನೂನನ್ನು ಜಾರಿಗೆ ತಂದಿರುವುದೇ ಬಡವರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ. ಅರ್ಹ ಫಲಾನುಭವಿಗಳಿಗೆ ಭೂ ಮಂಜೂರು ಮಾಡುವುದು ಸರ್ಕಾರದ ಕರ್ತವ್ಯವೂ ಹೌದು. ಹೀಗಾಗಿ ತಿರಸ್ಕೃತ ಅಥವಾ ಅನರ್ಹಗೊಂಡ ಬಗರ್ ಹುಕುಂ ಅರ್ಜಿಗಳಲ್ಲಿ ತಪ್ಪಾಗಿದ್ದರೆ, ನಿಯಮ ಮೀರಿ ಅನರ್ಹಗೊಂಡಿದ್ದರೆ ಮತ್ತೊಮ್ಮೆ ಪುನರ್ ಪರಿಶೀಲನೆಗೆ ಸೂಚಿಸಲಾಗುವುದು” ಎಂದು ಭರವಸೆ ನೀಡಿದರು. ಬಗರ್ ಹುಕುಂ ಅರ್ಜಿಗಳನ್ನು ಅನರ್ಹಗೊಳಿಸಲು ಕಾರಣವೇನು? ಎಂಬ ಬಗ್ಗೆಯೂ ಮಾಹಿತಿ ನೀಡಿದ ಸಚಿವರು,”ಗೋಮಾಳ ಜಮೀನಿನ…

Read More

ಪಶ್ಚಿಮ ಬಂಗಾಳ: ರಿಪಬ್ಲಿಕ್ ಟಿವಿ ಪತ್ರಕರ್ತ ಸಂತು ಪಾನ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸರು ಸೋಮವಾರ ಸಂದೇಶ್ಖಾಲಿಯಲ್ಲಿ ಬಂಧಿಸಿದ್ದಾರೆ. ಈ ವಿಷಯವನ್ನು ಎಕ್ಸ್ (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ಬಂಗಾಳ ಬಿಜೆಪಿ ರಾಜ್ಯ ಅಧ್ಯಕ್ಷ ಡಾ.ಸುಕಾಂತ ಮಜುಂದಾರ್, “ಸ್ಥಳೀಯರು ಎದುರಿಸುತ್ತಿರುವ ದೌರ್ಜನ್ಯಗಳ ಬಗ್ಗೆ ವರದಿ ಮಾಡಿದ್ದಕ್ಕಾಗಿ ಪಶ್ಚಿಮ ಬಂಗಾಳ ಪೊಲೀಸರು ಸಂದೇಶ್ಖಾಲಿಯಿಂದ ವರದಿಗಾರ ಸಂತು ಪಾನ್ ಅವರನ್ನು ಇಂದು ಬಂಧಿಸಿದ್ದಾರೆ. ಇದು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭದ ಮೇಲಿನ ಬೃಹತ್, ಅಮಾನವೀಯ ಮತ್ತು ನೇರ ದಾಳಿಯಾಗಿದೆ. https://twitter.com/DrSukantaBJP/status/1759583400342822973 ಪಾನ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ, “ನನ್ನ ವರದಿಗಾರನಿಗೆ ಸಾರ್ವಜನಿಕ ಸಾರಿಗೆಯಲ್ಲಿ ಹೋಗಲು ಅವಕಾಶ ನೀಡಲಿಲ್ಲ, ಒಂದೇ ಸ್ಥಳದಲ್ಲಿ ಮೂರರಿಂದ ನಾಲ್ಕು ಗಂಟೆಗಳ ಕಾಲ ನಿಲ್ಲುವಂತೆ ಮಾಡಲಾಯಿತು. ನಂತರ ಯಾವುದೇ ನೋಟಿಸ್ ನೀಡದೆ ಅವರನ್ನು ದೈಹಿಕವಾಗಿ ಎಳೆದೊಯ್ದರು. ಕೊಲೆಗಾರನಿಗೂ ತನ್ನ ನಿರಪರಾಧಿತ್ವವನ್ನು ಸಾಬೀತುಪಡಿಸಲು ಅವಕಾಶ ನೀಡಲಾಗುತ್ತದೆ ಎಂದಿದ್ದಾರೆ. ಸಂದೇಶ್ಖಾಲಿ ಪ್ರಕರಣದಲ್ಲಿ ಸತ್ಯವನ್ನು ಬಹಿರಂಗಪಡಿಸಿದ್ದಕ್ಕಾಗಿ ರಿಪಬ್ಲಿಕ್ ಬಾಂಗ್ಲಾ ವರದಿಗಾರನನ್ನು…

Read More

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ರಾತ್ರಿ ಲಘು ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 5.5 ರಷ್ಟಿತ್ತು ಎಂದು ಕಾಶ್ಮೀರ ಹವಾಮಾನ ಇಲಾಖೆ ತಿಳಿಸಿದೆ. ಭೂಕಂಪದ ಆಳ 10 ಕಿ.ಮೀ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ 9ಎನ್ಸಿಎಸ್ ಪ್ರಕಾರ, ಭೂಕಂಪದ ಕೇಂದ್ರಬಿಂದು ಲಡಾಖ್ನ ಕಾರ್ಗಿಲ್ನ ವಾಯುವ್ಯಕ್ಕೆ 148 ಕಿ.ಮೀ ದೂರದಲ್ಲಿದೆ. ಶ್ರೀನಗರದಲ್ಲೂ ಭೂಕಂಪದ ಅನುಭವವಾಗಿದೆ. ಭೂಕಂಪನದ ನಂತರ ಈ ಪ್ರದೇಶವನ್ನು ಭೀತಿ ಆವರಿಸಿದೆ. ಭೂಕಂಪದಿಂದಾಗಿ ಯಾವುದೇ ಗಾಯಗಳು ಅಥವಾ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://twitter.com/ANI/status/1759614105881555355

Read More

ನವದೆಹಲಿ: ಬೆಳೆಗಳಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಪ್ರತಿಭಟನಾ ನಿರತ ರೈತರು ಕೇಂದ್ರ ಸರ್ಕಾರ ಮುಂದಿನ ಐದು ವರ್ಷಗಳಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ ಐದು ಬೆಳೆಗಳನ್ನು ಖರೀದಿಸುವುದಾಗಿ ರೈತರ ಮುಂದಿಟ್ಟ ಪ್ರಸ್ತಾವನೆಯನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದಾರೆ. ಈ ಕುರಿತಂತೆ ಶಂಭು ಗಡಿಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್, “… ಎರಡೂ ವೇದಿಕೆಗಳ ಚರ್ಚೆಯ ನಂತರ, ನೀವು ವಿಶ್ಲೇಷಿಸಿದರೆ, ಸರ್ಕಾರದ ಪ್ರಸ್ತಾಪದಲ್ಲಿ ಏನೂ ಇಲ್ಲ ಎಂದು ನಿರ್ಧರಿಸಲಾಗಿದೆ… ಇದು ರೈತರ ಪರವಾಗಿಲ್ಲ. ನಾವು ಅದನ್ನು ತಿರಸ್ಕರಿಸುತ್ತೇವೆ ಎಂದಿದ್ದಾರೆ. https://twitter.com/ANI/status/1759610633937408178 ಮುಂದಿನ ಐದು ವರ್ಷಗಳಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್ಪಿ) ಐದು ಬೆಳೆಗಳನ್ನು ಖರೀದಿಸುವ ಕೇಂದ್ರದ ಪ್ರಸ್ತಾಪವನ್ನು ರೈತ ಮುಖಂಡರು ಸೋಮವಾರ ಸಂಜೆ ತಿರಸ್ಕರಿಸಿದರು ಮತ್ತು ಫೆಬ್ರವರಿ 21 ರಂದು ಪಂಜಾಬ್-ಹರಿಯಾಣ ಶಂಭು ಗಡಿಯಿಂದ ರಾಷ್ಟ್ರ ರಾಜಧಾನಿಗೆ ತಮ್ಮ ‘ದೆಹಲಿ ಚಲೋ’ ಮೆರವಣಿಗೆಯನ್ನು ಪುನರಾರಂಭಿಸುವುದಾಗಿ ಘೋಷಿಸಿದರು.

Read More

ಬೆಂಗಳೂರು: ಅನಾರೋಗ್ಯದಿಂದ ಅಕಾಲಿಕ ಮರಣಕ್ಕೆ ತುತ್ತಾದ ಈ ಬಡತಾಯಿಯ ಮಗನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ‘ಗೃಹಲಕ್ಷ್ಮಿ ಯೋಜನೆ ದುಡ್ಡು ನಿನಗೆ ಬರುತ್ತೆ, ನಾನಿಲ್ಲ ಎಂದು ಚಿಂತಿಸಬೇಡ’ ಎಂದು ಮಗನ ಮಾತನ್ನು ನೆನಪು ಮಾಡಿಕೊಂಡು ಆತನ ಶವದೆದುರು ತಾಯಿ ರೋದಿಸುತ್ತಿರುವುದನ್ನು ನೋಡಿ ಎದೆ ಭಾರವಾಯಿತು. ಯಾವ ತಾಯಿಗೂ ಎದೆಯೆತ್ತರಕ್ಕೆ ಬೆಳೆದ ಮಗನ ಚಿತೆಗೆ ಅಗ್ನಿಸ್ಪರ್ಶ ಮಾಡುವ ಸ್ಥಿತಿ ಬಾರದಿರಲಿ ಎಂದು ಕಂಬನಿ ಮಿಡಿದ್ದಾರೆ. ನಾವು ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿದ ದಿನದಿಂದ ಇಂದಿನ ವರೆಗೆ ಕೆಲವರಿಂದ ಅಪಪ್ರಚಾರ, ಟೀಕೆ, ವ್ಯಂಗ್ಯಗಳು ವ್ಯಕ್ತವಾಗುತ್ತಲೇ ಇದೆ, ಇದಾವುದಕ್ಕೂ ನಾನು ತಲೆಕೆಡಿಕೊಂಡಿಲ್ಲ. ಕಾರಣ ಇಂತಹ ಲಕ್ಷಾಂತರ ಬಡತಾಯಂದಿರಿಗೆ ನಮ್ಮ ಯೋಜನೆ ಮೂರು ಹೊತ್ತು ನೆಮ್ಮದಿಯ ಅನ್ನ ನೀಡಿ ಬದುಕಿಗೆ ಆಧಾರವಾಗಿದೆ. ಬಡತನ, ಹಸಿವು, ಅನಾಥಭಾವ ಅನುಭವಿಸಿದವರಿಗಷ್ಟೇ ಅದರ ನೋವು, ಹತಾಶೆ ಅರಿವಾಗಲು ಸಾಧ್ಯ ಎಂದಿದ್ದಾರೆ. ಈ ತಾಯಿಯ ಜೊತೆ ನಮ್ಮ ಸರ್ಕಾರ ಇದೆ, ಮಗನ…

Read More