Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ : ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಗುರುವಾರ ತನ್ನ ಸದಸ್ಯರ ಪೋರ್ಟಲ್ನಲ್ಲಿ ‘ಪಾಸ್ಬುಕ್ ಲೈಟ್’ ಎಂಬ ಹೊಸ ಸೌಲಭ್ಯವನ್ನು ಪರಿಚಯಿಸಿದೆ. ಇದು ಸದಸ್ಯರು ತಮ್ಮ ಪಾಸ್ಬುಕ್ ಮತ್ತು ಕೊಡುಗೆಗಳು, ಹಿಂಪಡೆಯುವಿಕೆಗಳು ಮತ್ತು ಬ್ಯಾಲೆನ್ಸ್’ನ ಸಂಬಂಧಿತ ಸಾರಾಂಶದ ನೋಟವನ್ನು ಸದಸ್ಯರ ಪೋರ್ಟಲ್ ಮೂಲಕ ಸರಳ ಮತ್ತು ಅನುಕೂಲಕರ ಸ್ವರೂಪದಲ್ಲಿ ಸುಲಭವಾಗಿ ಪರಿಶೀಲಿಸಲು ಅನುವು ಮಾಡಿಕೊಡುತ್ತದೆ, ಪಾಸ್ಬುಕ್ ಪೋರ್ಟಲ್’ಗೆ ಹೋಗದೆ. ವರದಿಗಾರರೊಂದಿಗೆ ಮಾತನಾಡಿದ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಗುರುವಾರ ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಸದಸ್ಯರಿಗೆ ದಕ್ಷ, ಪಾರದರ್ಶಕ ಮತ್ತು ಬಳಕೆದಾರ ಸ್ನೇಹಿ ಸೇವೆಗಳನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ಕೈಗೊಂಡ ಪ್ರಮುಖ ಸುಧಾರಣೆಗಳನ್ನು ಎತ್ತಿ ತೋರಿಸಿದರು. ಪ್ರಸ್ತುತ, ಸದಸ್ಯರು ತಮ್ಮ ಭವಿಷ್ಯ ನಿಧಿ ಕೊಡುಗೆಗಳು ಮತ್ತು ಮುಂಗಡಗಳು ಅಥವಾ ಹಿಂಪಡೆಯುವಿಕೆಗಳನ್ನು ಒಳಗೊಂಡ ವಹಿವಾಟುಗಳನ್ನು ಪರಿಶೀಲಿಸಲು EPFO ನ ಪಾಸ್ಬುಕ್ ಪೋರ್ಟಲ್ಗೆ ಲಾಗಿನ್ ಆಗಬೇಕಾಗುತ್ತದೆ. EPFO ಪಾಸ್ಬುಕ್ ಲೈಟ್.! * EPFO ತನ್ನ ಸದಸ್ಯ ಪೋರ್ಟಲ್ನಲ್ಲಿ (https://unifiedportal-mem.epfindia.gov.in/memberinterface/) ‘ಪಾಸ್ಬುಕ್…
ಬೆಂಗಳೂರು: ರಾಜ್ಯದಲ್ಲಿ ಪ್ರವಾಸಿ ಮಿತ್ರ ಯೋಜನೆ ಜಾರಿಗೊಳಿಸಲಾಗಿದೆ. ಆತಿಥ್ಯ ವಲಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. 2026ರ ವೇಳೆಗೆ ಆತಿಥ್ಯ ವಲಯದಲ್ಲಿ 50 ಸಾವಿರ ಯುವಕರನ್ನು ಕೌಶಲಪೂರ್ಣಗೊಳಿಸಿ, ಉದ್ಯೋಗ ನೀಡುವ ಗುರಿ ಹೊಂದಿದ್ದೇವೆ. ನಮ್ಮ ಪ್ರವಾಸಿ ಮಿತ್ರ ಕಾರ್ಯಕ್ರಮದ ಮೂಲಕ 1 ಸಾವಿರ ಪ್ರವಾಸಿ ಸುಗಮಕಾರರಿಗೆ ತರಬೇತಿ ನೀಡುತ್ತಿದ್ದೇವೆ ಎಂದಿದ್ದಾರೆ. 54 ಹೊಸ ಹೋಟೆಲ್ಗಳು ಮತ್ತು ರೆಸಾರ್ಟ್ಗಳಿಗೆ ಸಬ್ಸಿಡಿಗಳನ್ನು ಅನುಮೋದಿಸಿದ್ದೇವೆ. ರಸ್ತೆಬದಿಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ಕ್ರೂಸ್ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಅನ್ವೇಷಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1969347255770452330 https://kannadanewsnow.com/kannada/shivamogga-a-blood-donation-camp-organized-successfully-on-the-occasion-of-eid-milad-in-ulavi/ https://kannadanewsnow.com/kannada/central-government-rushes-to-the-aid-of-karnataka-farmers-orders-to-purchase-these-grains-at-support-prices/
ಬೆಂಗಳೂರು: ನೆರೆಹಾನಿಯಿಂದ ಸಂತ್ರಸ್ತರಾಗಿದ್ದರ ನಡುವೆ ಬಂದಂತ ಅಲ್ಪ ಸ್ವಲ್ಪ ಬೆಳೆಗೂ ಬೆಲೆ ಇರದಂತ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಹೆಸರುಕಾಳು, ಉದ್ದಿನ ಕಾಳು ಸೇರಿದಂತೆ ಐದು ಧಾನ್ಯಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಹೌದು ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. 2025-26ನೇ ಸಾಲಿನ ಮುಂಗಾರು ಬೆಳೆಗಳಾದಂತ ಹೆಸರುಕಾಳು, ಉದ್ದಿನ ಬೇಳೆ, ಶೇಂಗಾ, ಸೋಯಾಬಿನ್ ಮತ್ತು ಸೂರ್ಯಕಾಂತಿ ಸೇರಿದಂತೆ ಐದು ಧಾನ್ಯಗಳನ್ನು ಕೇಂದ್ರ ಸರ್ಕಾರ ಬೆಂಬಲ ಬೆಲೆಯಡಿ ಖರೀದಿಸುವುದಾಗಿ ಘೋಷಿಸಿದೆ. ಅದರಂತೆ ರಾಜ್ಯ ಸರ್ಕಾರಕ್ಕೆ ಈ ಧಾನ್ಯಗಳನ್ನು ಬೆಂಬಲ ಬೆಲೆ ಯೋಜನೆಯ ಅಡಿಯಲ್ಲಿ ಖರೀದಿಸುವಂತೆ ನಿರ್ದೇಶಿಸಿದೆ. ಈ ಸಂಬಂಧ ಕೇಂದ್ರ ಕೃಷಿ ಸಚಿವರು ಆಹಾರ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಖುದ್ದು ಪತ್ರ ಬರೆದು ತಿಳಿಸಿದ್ದಾರೆ. ಕಾರಣ ಅವರು ಪ್ರಧಾನಿ ಮೋದಿ, ಕೃಷಿ ಸಚಿವರಿಗೆ ಕರ್ನಾಟಕದಲ್ಲಿ ಅತಿವೃಷ್ಠಿಯಿಂದ ಬೆಳೆಹಾನಿಯಾಗಿ ಅಲ್ಪಸ್ವಲ್ಪ ಬಂದಿದೆ. ಅದಕ್ಕೆ ಸೂಕ್ತ ಬೆಲೆಯಿಲ್ಲದಂತೆ ಆಗಿದೆ. ಹೀಗಾಗಿ ಬೆಂಬಲ ಬೆಲೆಯಡಿ ಧಾನ್ಯ ಖರೀದಿ ಮಾಡುವಂತೆ…
ಬೆಂಗಳೂರು: ಪಿಡಿಒ ಜೇಷ್ಠಾತಾ ಪಟ್ಟಿಯನ್ನು ಪ್ರಕಟಿಸುವ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಅದೇನು ಅಂತ ಮುಂದೆ ಓದಿ. ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯಲ್ಲಿ ಕಳೆದ 12 ವರ್ಷಗಳಿಂದ ಎದುರಾಗಿರುವ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನೈಸರ್ಗಿಕ ನ್ಯಾಯತತ್ವದಡಿ ಪಾರದರ್ಶಕವಾದ ಜೇಷ್ಠತಾಪಟ್ಟಿ ತಯಾರಿಸುವ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಡ್ವೊಕೇಟ್ ಜನರಲ್ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ರಣ್ದೀಪ್ ಅವರೊಂದಿಗೆ ಚರ್ಚಿಸಿದರು. ಇದೇ ಸಂದರ್ಭದಲ್ಲಿ ಗ್ರಾಮೀಣ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛವಾಹಿನಿ ಚಾಲಕಿಯರಿಗೆ ವೇತನ ಪಾವತಿ ಮಾಡುವ ಸಂಬಂಧ ಇಲಾಖೆ ತೆಗೆದುಕೊಂಡಿರುವ ಕ್ರಮಗಳನ್ನು ಸಚಿವರು ಪರಿಶೀಲಿಸಿದರು. ಇ-ಸ್ವತ್ತು ನಿಯಮಾವಳಿಗಳನ್ನು ಆದಷ್ಟು ಶೀಘ್ರದಲ್ಲಿ ಅಂತಿಮಗೊಳಿಸಲೂ ಸಚಿವರು ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದರು. https://kannadanewsnow.com/kannada/on-the-occasion-of-mysore-dasara-ksrtc-has-arranged-special-bus-services-exceeding-2300/ https://kannadanewsnow.com/kannada/case-filed-against-a-19-year-old-woman-who-married-a-19-year-old-man/
ಶಿವಮೊಗ್ಗ: ಇಂದು ಸೊರಬ ತಾಲ್ಲೂಕಿನ ಉಳವಿಯಲ್ಲಿ ಈದ್ ಮಿಲಾದ್ ಪ್ರಯುಕ್ತ ಆಯೋಜಿಸಿದ್ದಂತ ಬೃಹತ್ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಈ ರಕ್ತದಾದನಲ್ಲಿ ಎಲ್ಲಾ ಸಮುದಾಯದವರು ಪಾಲ್ಗೊಂಡು ರಕ್ತದಾನ ಮಾಡಿ ಗಮನ ಸೆಳೆದರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಭಾಗದಲ್ಲಿರುವಂತ ಹಳ್ಳಿ ಸಂತೆಯಲ್ಲಿ ಉಳವಿಯ ಫಲಾಹುಲ್ ಮುಸ್ಲಿಂ ಕಮಿಟಿ ಆಶ್ರಯದಲ್ಲಿ ದೂಗೂರು, ಉಳವಿ ಗ್ರಾಮಪಂಚಾಯ್ತಿ ಹಾಗೂ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಪ್ರವಾದಿ ಮೊಹಮ್ಮದ್ ಅವರ 1500 ವರ್ಷದ ಜನ್ಮ ದಿನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಬೃಹತ್ ರಕ್ತದಾನ ಶಿಬಿರವನ್ನು ಸೊರಬ ತಹಶೀಲ್ದಾರ್ ಮಂಜುಳಾ ಬಿ ಹೆಗಡಾಳ ಅವರು ಉದ್ಘಾಟಿಸಿದರು. ಈ ಬಳಿಕ ಮಾತನಾಡಿದಂತ ಅವರು, ರಕ್ತದಾನ ಮಹಾದಾನವಾಗಿದೆ. ಒಮ್ಮೆಯಾದರೂ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು. ಹೀಗೆ ರಕ್ತದಾನ ಮಾಡುವುದರಿಂದ 4 ಜನರ ಪ್ರಾಣ ಉಳಿಸಿದಂತೆ ಆಗಲಿದೆ. ಆ ನಿಟ್ಟಿನಲ್ಲಿ ಇಂದು ಉಳವಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಿ, ಯಶಸ್ವಿಯಾಗಿ ನಡೆಸುತ್ತಿರುವುದು ನಿಜಕ್ಕೂ ಉತ್ತಮ…
ಬೆಂಗಳೂರು: ಕುರುಬರಿಗೆ ಎಸ್ ಟಿ ಮೀಸಲಾತಿ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಂಬಂಧ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ವಿರುದ್ಧ ದಾಖಲಾಗಿದ್ದಂತ ಪ್ರಕರಣದಲ್ಲಿ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಕುರಿತಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಶ್ರೀವತ್ಸ ಸೇರಿದಂತೆ ಇತರರು ಜಾಮೀನು ಕೋರಿ ಕುರುಬರಿಗೆ ಎಸ್ ಟಿ ಮೀಸಲಾತಿ ಸಂಬಂಧ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇನ್ನೂ ಪಿಪಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಿ, ವಿಚಾರಣೆಯನ್ನು ಸೆಪ್ಟೆಂಬರ್.23ಕ್ಕೆ ಮುಂದೂಡಿದೆ. https://kannadanewsnow.com/kannada/case-filed-against-a-19-year-old-woman-who-married-a-19-year-old-man/ https://kannadanewsnow.com/kannada/even-if-your-phone-is-on-silent-or-lost-it-will-be-found-within-a-minute-how-do-you-know/
ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ವೀಕ್ಷಣೆಗೆ ಹೊರಟಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿ ಸಿಯಿಂದ 2,300ಕ್ಕೂ ಹೆಚ್ಚು ವಿಶೇಷ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ದಸರಾ-2025ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ(ವೇಗದೂತ), ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ಈ ಕೆಳಕಂಡಂತೆ ಹೆಚ್ಚುವರಿ ಬಸ್ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದೆ. ದಸರಾ ರಜೆಗಳ ಪ್ರಯುಕ್ತ ಕರಾರಸಾ…
ಗದಗ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದ ಜಾತಿಯವರೇ ಆಗಿದ್ದಾರೆ. ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು? ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಇಂದು ಗದಗದ ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅಸಮಾನತೆ, ಜಾತಿ ಶೋಷಣೆಯಿಂದ ಲಾಭ ಮಾಡಿಕೊಳ್ಳುತ್ತಿರುವವರು ಸಮಾಜದ ಬದಲಾವಣೆಗೆ ವಿರೋಧವಿದ್ದಾರೆ. ಇವರು ಹಿಂದುಳಿದವರ ಮನೆಯ ಮಕ್ಕಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರುವುದನ್ನು ಸಹಿಸುವುದಿಲ್ಲ. ಹೀಗಾಗಿ ದೇವರು, ಧರ್ಮದ ಹೆಸರಿನಲ್ಲಿ ಹಿಂದುಳಿದ ಜಾತಿಗಳ ಮನೆಯ ಮಕ್ಕಳನ್ನೇ ಬಲಿ ಆಗುವಂತೆ ಮಾಡುತ್ತಿದ್ದಾರೆ. ಆದ್ದರಿಂದ ಹಿಂದುಳಿದವರ ಮಕ್ಕಳನ್ನು ಬಲಿ ಕೊಡುವವರ ಮಾತು ಕೇಳಿಕೊಂಡು ನಾವು ತಲೆ ಆಡಿಸುತ್ತಾ ಕೂರಬಾರದು ಎಂದು ಹೇಳಿದ್ದಾರೆ. ಶಿಕ್ಷಣ-ಸಂಘಟನೆ-ಹೋರಾಟ ಎನ್ನುವುದು ಅಂಬೇಡ್ಕರ್ ಅವರು ಶೋಷಿತ, ಹಿಂದುಳಿದ ಜಾತಿ ಸಮುದಾಯಗಳಿಗೆ ಕೊಟ್ಟ ಮಂತ್ರವಾಗಿದೆ. ಈ ಮೂರೂ ಮಂತ್ರಗಳ ಮೂಲಕ…
ಮಂಡ್ಯ : ದಲಿತ ಮಹಿಳೆ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ನೀಡಿ ನಿಂದಿಸಿರುವ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಶಾಸಕ ಸ್ಥಾನವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು. ಮದ್ದೂರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾಯಿಸಿದ ಪದಾಧಿಕಾರಿಗಳು ಯತ್ನಾಳ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಶಾಸಕ ಯತ್ನಾಳ್ ಪ್ರತಿಕೃತಿಯನ್ನು ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದಹಿಸಲು ಮುಂದಾದ ವೇಳೆ ಇನ್ಸ್ಪೆಕ್ಟರ್ ವೆಂಕಟೇಗೌಡ ಅವರು ಮಧ್ಯ ಪ್ರವೇಶಿಸಿ ಪ್ರತಿಭಟನಾಕಾರರ ಮನವೊಲಿಸಿ ವಿಫಲಗೊಳಿಸಿದರು. ಬಳಿಕ ತಾಲೂಕು ಕಛೇರಿಗೆ ಆಗಮಿಸಿ ಘೋಷಣೆ ಕೂಗಿ ಕಿಡಿಕಾರಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮೈಸೂರು ವಿಭಾಗೀಯ ಸಂಚಾಲಕ ಮರಳಿಗ ಶಿವರಾಜ್ ಮಾತನಾಡಿ, ದಸರಾ ಕಾರ್ಯಕ್ರಮ ಉದ್ಘಾಟನೆ ವಿಷಯವಾಗಿ ಮಾಧ್ಯಮದ ಮುಂದೆ ಯತ್ನಾಳ್ ಮಾತನಾಡುವಾಗ ಅವಮಾನಕರ ಹೇಳಿಕೆ ನೀಡಿದ್ದಾರೆ. ಚಾಮುಂಡೇಶ್ವರಿ ದೇವಿಗೆ ಸನಾತನ ಧರ್ಮದ ಮಹಿಳೆಯರು ಮಾತ್ರ ಪೂಜೆ ಸಲ್ಲಿಸಬೇಕೆ ಹೊರತು ಸಾಮಾನ್ಯ ದಲಿತ ಮಹಿಳೆಗೂ…
ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಆತುರಾತುರವಾಗಿ ಜಾತಿ ಗಣತಿ ಮಾಡುತ್ತಿದ್ದು, ಭವಿಷ್ಯದಲ್ಲಿ ಇದು ದೊಡ್ಡ ಸಮಸ್ಯೆಗೆ ಕಾರಣವಾಗಲಿದೆ. ಇದರ ಪ್ರತಿಫಲವನ್ನು ಕಾಂಗ್ರೆಸ್ ಪಕ್ಷ ಅನುಭವಿಸಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಸಮೀಕ್ಷೆ ಕುರಿತ ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ಸಭೆಯಲ್ಲಿ ಎಲ್ಲಾ ಸಾಧಕ -ಬಾಧಕಗಳ ಬಗ್ಗೆ ಚರ್ಚೆ ಮಾಡೆಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಎಲ್ಲಾ ಸಮಸ್ಯೆ ಬಗೆಹರಿಸುವ ಬಗ್ಗೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರು ಹೇಳಿದರು. ಈಗಾಗಲೇ ಕಾಂತರಾಜ್ ಆಯೋಗ, ಜಯಪ್ರಕಾಶ್ ಹೆಗಡೆ ಆಯೋಗ ಆಯಿತು. ಈಗ ಮೂರನೇ ಆಯೋಗ ರಚನೆ ಆಗಿದೆ. ಈ ರೀತಿಯ ಆಯೋಗ ರಚನೆ ಮಾಡಬೇಕಾದರೆ ಏನೆಲ್ಲಾ ಮಾನದಂಡಗಳನ್ನು ಅನುಸರಿಸಿದ್ದಾರೆ ಎನ್ನುವುದನ್ನು ಎಂಬುದನ್ನು ನೋಡಬೇಕು. ಸುಮ್ಮ ಸುಮ್ಮನೆ ಆಯೋಗ ರಚನೆ ಮಾಡಲು ಸಾಧ್ಯವಿಲ್ಲ. ಸಮೀಕ್ಷೆಗೆ 15 ದಿನಗಳ…








