Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಪರಿವರ್ತಿತ ಹಾಗೂ ಅಭಿವೃದ್ಧಿಗೊಳ್ಳದ ಭೂಮಿಯನ್ನು ಆರ್ಟಿಸಿ ಆಧಾರದಲ್ಲಿ ನೋಂದಣಿ ಮಾಡುವ ಹಾಗೂ ಸಂಬಂಧಿತ ಯೋಜನಾ ಪ್ರಾಧಿಕಾರದಿಂದ ಅನುಮೋದಿತ ಬಡಾವಣೆಗಳಲ್ಲಿನ ರಸ್ತೆ, ಉದ್ಯಾನವನ ಹಾಗೂ ಆಟದ ಮೈದಾನಗಳಿಗೂ ಇ-ಖಾತಾ ಮಾಡಿಕೊಳ್ಳುವ ಸಂಬಂಧ ಇದ್ದ ಕೆಲ ಗೊಂದಲಗಳಿಗೆ ಪರಿಹಾರ ನೀಡಲಾಗಿದೆ. ಕಂದಾಯ ಇಲಾಖೆ, ಗ್ರಾಮೀಣ ಅಭಿವೃದ್ಧಿ- ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ-ಪೌರಾಡಳಿತ ಇಲಾಖೆ ಒಟ್ಟಾಗಿ ಕೆಲವು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳುವ ಮೂಲಕ ನಗರ ಅಭಿವೃದ್ಧಿಗೆ ಸಂಬಂಧಿಸಿ ಇ-ಖಾತಾ ಹಾಗೂ ನೋಂದಣಿಗೆ ಸಂಬಂಧಿಸಿದ ಕೆಲ ಪ್ರಮುಖ ಗೊಂದಲಗಳಿಗೂ ತೆರೆ ಎಳೆದಿದೆ. 1) ಪರಿವರ್ತಿತ ಹಾಗೂ ಅಭಿವೃದ್ಧಿಗೊಳ್ಳದ ಭೂಮಿಯನ್ನು ಆರ್ಟಿಸಿ ಆಧಾರದಲ್ಲಿ ನೋಂದಣಿ: ಭೂಪರಿವರ್ತನೆಯ ನಂತರದಲ್ಲಿ ಭೂಪರಿವರ್ತಿತ ಜಮೀನುಗಳ ಪಹಣಿಗಳಿಗೆ ಭೂಕಂದಾಯ ಕಡಿತಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ/ ನಗರ ಸ್ಥಳೀಯ ಸಂಸ್ಥೆಗಳು/ನಗರಾಭಿವೃದ್ಧಿ ಪ್ರಾಧಿಕಾರಗಳು ಆಸ್ತಿ ಗುರುತಿನ ಸಂಖ್ಯೆಯನ್ನು (ಇ-ಖಾತಾ) ನೀಡಬೇಕಾಗಿರುತ್ತದೆ. ಆದರೆ ಭೂಪರಿವರ್ತನೆ ನಂತರ ಆಸ್ತಿ ಗುರುತಿನ ಸಂಖ್ಯೆ (ಇ-ಖಾತಾ) ನೀಡಲು ಕಾಲಾವಕಾಶ ಬೇಕಾಗಿರುತ್ತದೆ ಹಾಗೂ ಕೆಲವೊಮ್ಮೆ ಸಾರ್ವಜನಿಕರು ಇ-ಖಾತಾ ಮಾಡಲು ಕೋರಿ…
BREAKING: ಮಂಡ್ಯದಲ್ಲಿ ಶಬರಿಮಲೆಗೆ ತೆರಳುತ್ತಿದ್ದ ಮಿನಿ ಬಸ್ ಅಪಘಾತ: ಅಯ್ಯಪ್ಪ ಭಕ್ತರಿಗೆ ಗಾಯ, ಪ್ರಾಣಾಪಾಯದಿಂದ ಪಾರು
ಮಂಡ್ಯ : ಮಂಡ್ಯ ನಗರದ ಸಾಂಜೋ ಆಸ್ಪತ್ರೆ ಬಳಿ ಅಯ್ಯಪ್ಪನ ಭಕ್ತರು ಸಂಚರಿಸುತ್ತಿದ್ದ ಮಿನಿ ಬಸ್ ವೊಂದು ಅಪಘಾತಕ್ಕೀಡಾಗಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಅಯ್ಯಪ್ಪನ ಭಕ್ತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಕೆಂಗೇರಿಯಿಂದ ಗುರುವಾರ ಸಂಜೆ 24 ಮಂದಿ ಅಯ್ಯಪ್ಪ ಭಕ್ತರು ಶಬರಿಮಲೆಗೆ ತೆರಳುತ್ತಿದ್ದ ವೇಳೆ ಮಂಡ್ಯ ನಗರದ ಸಾಂಜೋ ಆಸ್ಪತ್ರೆ ಬಳಿ ಆಗಮಿಸುತ್ತಿದ್ದಂತೆ ವಾಹನದ ಆಕ್ಸಲ್ ಕಟ್ಟಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ರಾಷ್ಟ್ರೀಯ ಹೆದ್ದಾರಿ ಬದಿಯ ತಂತಿ ಬೇಲಿಗೆ ಹೊರಳಿ ನಿಂತುಕೊಂಡಿದೆ. ಈ ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣವೇ ಗಾಯಾಳುವನ್ನು ಸ್ಥಳೀಯರು ಹಾಗೂ ವಾಹನ ಸವಾರರು ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನು ಮಂಡ್ಯ ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/more-than-rs-73000-crore-to-be-invested-in-karnataka-siddaramaiah/ https://kannadanewsnow.com/kannada/note-if-you-have-a-ration-card-you-can-get-the-benefits-of-these-government-schemes/
ಬೆಂಗಳೂರು: ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ. ಈಗ ಆಗಿರುವ 54,427 ಕೋಟಿ ರೂ. ಹೂಡಿಕೆಯ ಜತೆಗೆ ಮುಂದಿನ ಆರೇಳು ತಿಂಗಳಲ್ಲಿ ಇನ್ನೂ 19,059 ಸಾವಿರ ಕೋಟಿ ರೂ. ಬಂಡವಾಳ ಹರಿದು ಬರುವುದು ಖಾತ್ರಿಯಾಗಿದೆ. ಈ ಮೂಲಕ ರಾಜ್ಯವು 73 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆಯನ್ನು ಕಾಣಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ. ಅವರು ಜಿಕೆವಿಕೆ ಆವರಣದಲ್ಲಿ ಆಯೋಜನೆಗೊಂಡಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಟಲ್ಸ್ ಸಂಸ್ಥೆಯ 78ನೇ ವಾರ್ಷಿಕ ತಾಂತ್ರಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯವು ಈ ವರ್ಷ ಈಗಾಗಲೇ 21 ವಿವಿಧ ಉದ್ಯಮಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರಿಂದ 46,375 ಕೋಟಿ ರೂ. ಬಂಡವಾಳ ಹರಿದು ಬರಲಿದ್ದು, 27 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಗಳ ಮೂಲಕ 90 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆ ಆಗಲಿರುವಂತಹ ಒಟ್ಟು 669 ಕೈಗಾರಿಕಾ…
ಬೆಂಗಳೂರು: ರಾಜ್ಯದಲ್ಲಿನ ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಏಕಕಾಲಕ್ಕೆ 2,200 ಲೈನ್ ಮ್ಯಾನ್ ಗಳ ನೇಮಕ ಮಾಡಿಕೊಳ್ಳುವುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ರಾಜ್ಯದಾದ್ಯಂತ ಏಕಕಾಲದಲ್ಲಿ 2,200 ಲೈನ್ಮ್ಯಾನ್ಗಳ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ನಿರ್ಧರಿಸಿದ್ದು, ಸ್ಥಳೀಯರಿಗೆ ಹೆಚ್ಚು ಉದ್ಯೋಗ ದೊರೆಯಲಿದೆ ಎಂದಿದ್ದಾರೆ. ಹಿಂದೆ ಲೈನ್ಮ್ಯಾನ್ಗಳ ನೇಮಕಾತಿ ಏಕಕಾಲದಲ್ಲಿ ನಡೆಯದೆ, ಒಂದು ಕಡೆ ಅರ್ಜಿ ಸಲ್ಲಿಸಿದವರು ಮತ್ತೊಂದು ಜಿಲ್ಲೆಗೂ ಅರ್ಜಿ ಹಾಕುತ್ತಿದ್ದರು. ಉದ್ಯೋಗ ಪಡೆದವರು ಕರ್ತವ್ಯಕ್ಕೆ ಗೈರಾಗುತ್ತಿದ್ದರು. ಮುಂದೆ, ಇಂತಹ ಸಮಸ್ಯೆಗಳು ತಲೆದೋರುವುದಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. https://twitter.com/KarnatakaVarthe/status/1859471845600481786 https://kannadanewsnow.com/kannada/home-minister-g-parameshwara-moves-sc-against-grant-of-bail-to-actor-darshan/ https://kannadanewsnow.com/kannada/note-if-you-have-a-ration-card-you-can-get-the-benefits-of-these-government-schemes/ https://kannadanewsnow.com/kannada/good-news-for-the-homeless-from-the-central-government-here-is-the-information-about-the-application-for-pm-awas-scheme/
ಮೈಸೂರು: ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿರುವಂತ ನಟ ದರ್ಶನ್ ಜೈಲಿಗೆ ಹೋಗಬೇಕು. ಅವರಿಗೆ ಜಾಮೀನು ನೀಡದಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದೇವೆ ಅಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಟ ದರ್ಶನ್ ಗೆ ನ್ಯಾಯಾಲಯದಿಂದ ಮೂರು ತಿಂಗಳು ಜಾಮೀನು ನೀಡಲಾಗಿದೆ. ಅವರಿಗೆ ಜಾಮೀನು ಅವಧಿ ವಿಸ್ತರಿಸುವಂತ ವಿಷಯ ನನಗೆ ಗೊತ್ತಿಲ್ಲ ಎಂದರು. ರಾಜ್ಯ ಸರ್ಕಾರದಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಮುಂದುವರೆಸಲಾಗುತ್ತದೆ. ಸಾಕ್ಷ್ಯ ಸಂಗ್ರಹದ ನಂತ್ರ ದೋಷಾರೋಪಪಟ್ಟಿಯನ್ನು ಸಲ್ಲಿಸಲಾಗುವುದು ಎಂದರು. ಎಕ್ಸಿಟ್ ಪೋಲ್ಗಳು ಒಂದೇ ತರನಾಗಿ ಹೇಳಿಲ್ಲ. ಕೆಲವು ಸರ್ವೇಗಳು ಮಹಾ ವಿಕಾಸ್ ಅಘಾಡಿಗೆ 162 ಸೀಟುಗಳನ್ನು ಕೊಟ್ಟಿದ್ದು, ಬಿಜೆಪಿಯವರಿಗೆ 128 ಕೊಟ್ಟಿವೆ. ಇನ್ನು ಕೆಲ ಸರ್ವೇಗಳು ಬಿಜೆಪಿಯವರಿಗೆ 140 ನೀಡಿವೆ. ಯಾವುದನ್ನು ನಿಖರವಾಗಿ ಹೇಳಲು ಬರುವುದಿಲ್ಲ ಎಂದು ಹೇಳಿದರು. ವಾಸ್ತವವಾಗಿ ಮಹಾರಾಷ್ಟ್ರ ಜನ, ಭ್ರಷ್ಟಚಾರ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ. ಬಹಳಷ್ಟು ಕಾರಣಗಳಿವೆ. ಆಂಬುಲೆನ್ಸ್ ಖರೀದಿಯಲ್ಲಿ 8000 ಕೋಟಿ ಅಕ್ರಮ ನಡೆದಿದೆ. ಡಾ.…
ಬೆಂಗಳೂರು: ರಾಜ್ಯದಲ್ಲಿ ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್ ನೀಡೋದಕ್ಕೂ ಅವಕಾಶವಿದೆ. ಎಸ್ಸಿ, ಎಸ್ಟಿ ಹಾಗೂ ಇತರೆ ವರ್ಗದವರಿಗೆ ಸರ್ಕಾರಿ ದರದಲ್ಲಿ ನಿವೇಶನ ನೀಡಲು ಕಾನೂನಿನಡಿ ಅವಕಾಶವಿದೆ. ಆ ಬಗ್ಗೆ ಮಾಹಿತಿ ಮುಂದೆ ಓದಿ. ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದಂತ ನಿವೇಶನ ರಹಿತರು ಸ್ಥಳೀಯ ಆಡಳಿತಕ್ಕೆ ಅರ್ಜಿಯನ್ನು ಸಲ್ಲಿಸುವ ಮೂಲಕ ನಿವೇಶನ ಪಡೆಯಲು ಅವಕಾಶವಿದೆ. ಆದರೇ ಅದಕ್ಕೆ ಇಂತಿಷ್ಟೇ ಎನ್ನುವಂತ ಮಿತಿಯನ್ನು ಕೂಡ ವಿಧಿಸಲಾಗಿದೆ. ಸರ್ಕಾರಿ ಭೂಮಿಯನ್ನು ಅತಿಕ್ರಮಿಸಿ ವಾಸದ ಮನೆಯನ್ನು ದಿನಾಂಕ 14-04-1998 ರೊಳಗೆ ನಿರ್ಮಿಸಿದ್ದರೆ ಮಾತ್ರ ಕಟ್ಟಡ ನಿರ್ಮಿಸಿದ ವಿಸ್ತೀರ್ಣದ ಭೂಮಿಯನ್ನು ಸಕ್ರಮೀಕರಣಕ್ಕಾಗಿ ಕಾಲಂ 94 ಸಿ ಅಡಿಯಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಇದೆ. ತಹಶೀಲ್ದಾರ್ ಕೈಪಿಡಿಯಲ್ಲಿನ ಮಾಹಿತಿ ಪ್ರಕಾರ, ನಗರ ಪ್ರದೇಶದಲ್ಲಿ 20×30 ಅಡಿ ವಿಸ್ತೀರ್ಣದ ನಿವೇಶನ ಜಮೀನಿಗೆ ಮಾತ್ರ ಹಕ್ಕು ಪತ್ರ ನೀಡಲು ತಹಶೀಲ್ದಾರರಿಗೆ ಅಧಿಕಾರ ಇರುತ್ತದೆ. ಇನ್ನೂ ಗ್ರಾಮೀಣ ಪ್ರದೇಶದಲ್ಲಿ 30×40ರ ಅಳತೆಯ ನಿವೇಶನವನ್ನು ಮಂಜೂರು ಮಾಡಬಹುದಾಗಿದೆ. ತಹಶೀಲ್ದಾರರ ಕೈಪಿಡಿಯಲ್ಲಿ ಏನಿದೆ.? ಮಂಜೂರಾದ ನಿವೇಶನದ ಮೌಲ್ಯ ಷೆಡ್ಯೂಲ್ನಲ್ಲಿ ವಿಧಿಸಿರುವ ದರದಂತೆ…
ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿವೆ ಎನ್ನಲಾಗುತ್ತಿದೆ. ಇದೇ ಈಗ ತೀವ್ರ ವಿವಾದಕ್ಕೂ ಕಾರಣವಾಗಿದೆ. ಒಂದು ವೇಳೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿದ್ದರೇ ತಹಶೀಲ್ದಾರರ ಗಮನಕ್ಕೆ ತಂದರೇ ಒಂದು ವಾರದಲ್ಲೇ ಸಮಸ್ಯೆ ಬಗೆಹರಿಸಿ, ವಾಪಾಸ್ ಸಿಗಲಿದೆ. ಒಂದು ವೇಳೆ ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು. ಅರ್ಹರಿಗೆ ಬಿಪಿಎಲ್ ತಪ್ಪಿ ಹೋಗಬಾರದು. ಆಕಸ್ಮಾತ್ ತಪ್ಪಿ ಹೋಗಿದ್ದರೆ ವಾಪಸ್ ಕೊಡಲಾಗುವುದು. ಹಾಗೆಯೇ ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1859567579209269522 ಇನ್ನೂ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣವೇ ವಾಪಸ್ ನೀಡಬೇಕು. ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿಗಳಾದ…
ಬೆಂಗಳೂರು: ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವಂತ ಅರ್ಹರ ಬಿಪಿಎಲ್ ಕಾರ್ಡ್ ಗಳು ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರ್ಕಾರ ಕೆಲವು ಮಾನದಂಡಗಳನ್ನು ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ ಅರ್ಜಿ ಪಡೆದು ಬಿಪಿಎಲ್ ಕಾರ್ಡ್ ನೀಡಲಾಗುವುದು. ಅರ್ಹರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1859535995127070898 https://kannadanewsnow.com/kannada/good-news-for-job-seekers-application-deadline-extended-for-kptcl-posts/ https://kannadanewsnow.com/kannada/good-news-for-the-homeless-from-the-central-government-here-is-the-information-about-the-application-for-pm-awas-scheme/ https://kannadanewsnow.com/kannada/note-if-you-have-a-ration-card-you-can-get-the-benefits-of-these-government-schemes/
ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿಗೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇ-ಸಹಿ ಮಾಡಿ ಅಂಚೆ ಚಲನ್ ಪಡೆಯುವ ದಿನಾಂಕವನ್ನು ಹಾಗೂ ಅರ್ಜಿ ಶುಲ್ಕ ಪಾವತಿ ಮಾಡುವ ದಿನಾಂಕವನ್ನು ಕ್ರಮವಾಗಿ ಡಿ.5 ಹಾಗೂ ಡಿ. 10 ರವರೆಗೆ ವಿಸ್ತರಿಸಲಾಗಿದೆ. ಕೆಪಿಟಿಸಿಎಲ್ ಹಾಗೂ ಎಸ್ಕಾಂಗಳಲ್ಲಿ ಸದರಿ ಹುದ್ದೆಗಳ ಭರ್ತಿಗಾಗಿ 2024ರ ಅಕ್ಟೋಬರ್ 14ರಂದು ಉದ್ಯೋಗ ಪ್ರಕಟಣೆ ಹೊರಡಿಸಲಾಗಿತ್ತು. ಅದರಂತೆ, ನೇಮಕಾತಿಗೆ ಅರ್ಜಿ ಸಲ್ಲಿಸಲು 2024ರ ನವೆಂಬರ್ 20 ಹಾಗೂ ಅರ್ಜಿ ಶುಲ್ಕ ಪಾವತಿಸಲು ನವೆಂಬರ್ 25ಕ್ಕೆ ಕೊನೆಯ ದಿನಾಂಕವೆಂದು ನಿಗದಿ ಪಡಿಸಲಾಗಿತ್ತು. ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಅಭ್ಯರ್ಥಿಗಳು ಹಂತ ಹಂತವಾಗಿ ಮಾಡಬೇಕಿದ್ದು, ಅರ್ಜಿ ನಮೂನೆಯಲ್ಲಿ ಮಾಹಿತಿ ಸಲ್ಲಿಸುವುದು, ಅರ್ಜಿ ಶುಲ್ಕ ಪಾವತಿಗೆ ಅಂಚೆ ಇಲಾಖೆಯ ಚಲನ್ ಡೌನ್ಲೋಡ್ ಮಾಡಿಕೊಂಡು ಅರ್ಜಿ ಶುಲ್ಕ ಪಾವತಿಸಬೇಕಿದೆ. ಅದಕ್ಕೂ ಮುನ್ನ ಅಭ್ಯರ್ಥಿಗಳು ಇ-ಸಹಿ ಪ್ರಕ್ರಿಯ ಪೂರ್ಣಗೊಳಿಸಬೇಕಿರುತ್ತದೆ. ಆದರೆ,…
ತುಮಕೂರು: 2019ರಲ್ಲಿ ಇಡೀ ರಾಜ್ಯದ ಗಮನ ಸೆಳೆದಿದ್ದ ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆ 21 ಆರೋಪಿಗಳಿಗೆ ಇಂದು ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಿದೆ. ದಲಿತ ಮಹಿಳೆ ಹತ್ಯೆಗೈದ 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಕೋರ್ಟ್ ಆದೇಶಿಸಿದೆ. ತುಮಕೂರಿನ 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಲಿದೆ. ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಆರೋಪಿಗಳು ಎಂದು ಕೋರ್ಟ್ ಆದೇಶಿಸಿತ್ತು. ಐಪಿಸಿ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2019ರಲ್ಲಿ ಹೊನ್ನಮ್ಮ ಎಂಬ ದಲಿತ ಮಹಿಳೆಯ ಕೊಲೆ ನಡೆದಿತ್ತು. ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿ ಇಟ್ಟಿದ್ದರು. ಈ ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು.…













