Author: kannadanewsnow09

ಬೆಂಗಳೂರು: ಬೆಂಗಳೂರು ಎಲಿವೇಟೆಡ್ ಟೋಲ್‌ವೇಯನ್ನು ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಎಲೆಕ್ಟ್ರಾನಿಕ್ಸ್ ಸಿಟಿಗೆ ಮತ್ತು ಕರ್ನಾಟಕ-ತಮಿಳುನಾಡು ಗಡಿಯ ಬಳಿಯ ಅತ್ತಿಬೆಲೆಯವರೆಗೆ ಬಳಸುವ ಪ್ರಯಾಣಿಕರು ಜುಲೈ 1, 2025 ರಿಂದ ಹೆಚ್ಚಿನ ಶುಲ್ಕ ತೆರಬೇಕಾಗುತ್ತದೆ. ಜುಲೈ.1ರ ಇಂದಿನಿಂದ ಟೋಲ್ ದರ ಏರಿಕೆಯಾಗುತ್ತಿದೆ. ಈ ಮೂಲಕ ವಾಹನ ಸವಾರರಿಗೆ ಬಿಗ್ ಶಾಕ್ ನೀಡಲಾಗುತ್ತಿದೆ. ಜೂನ್ 30, 2026 ರವರೆಗೆ ಅನ್ವಯವಾಗುವ ಈ ಹೆಚ್ಚಳವು ಮಾರ್ಚ್ 31, 2025 ರ ಸಗಟು ಬೆಲೆ ಸೂಚ್ಯಂಕ (WPI) ಅನ್ನು ಆಧರಿಸಿದೆ ಎಂದು ಬೆಂಗಳೂರು ಎಲಿವೇಟೆಡ್ ಟೋಲ್‌ವೇ ಪ್ರೈವೇಟ್ ಲಿಮಿಟೆಡ್ (BETPL) ತಿಳಿಸಿದೆ. ಇದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಸ್ಥಾಪಿಸಿದ ವಿಶೇಷ ಉದ್ದೇಶದ ವಾಹನವಾಗಿದೆ. ಇದು ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಮತ್ತು ಅತ್ತಿಬೆಲೆ ನಡುವಿನ ರಾಷ್ಟ್ರೀಯ ಹೆದ್ದಾರಿ 44 ರ ಈ ಭಾಗದ ಅಭಿವೃದ್ಧಿ ಮತ್ತು ನಿರ್ವಹಣೆಗೆ ಕಾರಣವಾಗಿದೆ. 8.765 ಕಿ.ಮೀ ನಿಂದ 18.750 ಕಿ.ಮೀ (ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಎಲೆಕ್ಟ್ರಾನಿಕ್ಸ್ ಸಿಟಿ) ವರೆಗಿನ…

Read More

ಬೆಂಗಳೂರು: ಚಾಮರಾಜ ನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಜೀವಿ ಪ್ರದೇಶದಲ್ಲಿ ಐದು ಹುಲಿಗಳು ಸಾವನ್ನಪ್ಪಿದ್ದವು. ಈ ಪ್ರಕರಣ ಸಂಬಂಧ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೇ ತನಿಖೆಯ ವರದಿ ಬಂದ ನಂತ್ರ ಶಿಸ್ತು ಕ್ರಮ ಜರುಗಿಸುವುದಾಗಿ ತಿಳಿಸಿದೆ. ಈ ಸಂಬಂಧ ಅರಣ್ಯ ಪಡೆ ಮುಖ್ಯಸ್ಥರು ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದು, ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು, ಕರ್ನಾಟಕ ಸರ್ಕಾರ ರವರ ಉಲ್ಲೇಖಿತ ಟಿಪ್ಪಣಿಯಲ್ಲಿ ಮಲೈಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅಸಹಜ ಸಾವಿಗಾಡಿರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ಈ ಐದು ಹುಲಿಗಳು ರಸ್ತೆಯಿಂದ ಕೇವಲ 100 ಮೀಟರ್ ದೂರದಲ್ಲಿ ಸತ್ತುಬಿದ್ದಿದ್ದರೂ ಎರಡು ದಿನಗಳವರೆಗೆ ಇಲಾಖೆಯ ಸಿಬ್ಬಂದಿಯ ಗಮನಕ್ಕೆ ಬಾರದಿರುವುದು ಅರಣ್ಯ, ವನ್ಯಜೀವಿ ಸಂರಕ್ಷಣೆಯಲ್ಲಿ ಲೋಪವಾಗಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ ಹಾಗೂ ಸಾವಿಗೀಡಾದ ಸ್ಥಳದಿಂದ ಕೇವಲ 800 ಮೀಟರ್ ದೂರದಲ್ಲಿ…

Read More

ಬೆಂಗಳೂರು: 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಇಂದು ಪ್ರಕಟಗೊಳ್ಳಲಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಬಾಗಿಲು ತೆರೆದಿದೆ. ವಿಶೇಷವಾಗಿ, ಮೂರನೇ ಪರೀಕ್ಷೆಯ ಅವಕಾಶವು ಅನೇಕ ವಿದ್ಯಾರ್ಥಿಗಳಿಗೆ ವರದಾನವಾಗಿದ್ದು, ಸಿಇಟಿ (KCET) ಮೂಲಕ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಆಕಾಂಕ್ಷೆಗಳಿಗೆ ಹೊಸ ಭರವಸೆ ಮೂಡಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರಲ್ಲಿ ಉತ್ತೀರ್ಣರಾಗದ 82,683 ವಿದ್ಯಾರ್ಥಿಗಳು ಪರೀಕ್ಷೆ-3ಕ್ಕೆ ಹಾಜರಾಗಿದ್ದರು. ಈ ಬಾರಿ, ಪರೀಕ್ಷೆಗೆ ಹೆಚ್ಚಿನ ವಿದ್ಯಾರ್ಥಿಗಳು ಹಾಜರಾಗುವಂತೆ ಮಾಡಲು ಪ್ರಾದೇಶಿಕ ಉಪನಿರ್ದೇಶಕರು, ಪ್ರಾಂಶುಪಾಲರು ಮತ್ತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಕ್ರಿಯವಾಗಿ ಪ್ರಯತ್ನಿಸಲಾಗಿತ್ತು. ಪತ್ರಿಕಾ ಪ್ರಕಟಣೆಗಳು ಮತ್ತು ಗೋಷ್ಠಿಗಳನ್ನು ನಡೆಸಿ, ವಿದ್ಯಾರ್ಥಿಗಳಲ್ಲಿ ಉತ್ತೇಜನ ನೀಡಲಾಯಿತು. ಅಲ್ಲದೆ, ಕಾಲೇಜು ಹಂತದಲ್ಲಿ ಫಲಿತಾಂಶ ಸುಧಾರಣೆಗೆ ಪರಿಹಾರ ಬೋಧನಾ ತರಗತಿಗಳನ್ನು (Remedial Classes) ನಡೆಸಿದ್ದು, ಇದು ವಿದ್ಯಾರ್ಥಿಗಳ ಕಾರ್ಯಕ್ಷಮತೆಗೆ ಸಹಕಾರಿಯಾಗಿದೆ. ಜೂನ್ 9 ರಿಂದ ಜೂನ್ 20, 2025ರವರೆಗೆ ಒಟ್ಟು 262 ಪರೀಕ್ಷಾ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ಅಳವಡಿಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲಾಯಿತು. ದ್ವಿತೀಯ ಪಿಯುಸಿ ಪರೀಕ್ಷೆ-2 ರಲ್ಲಿ…

Read More

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ಇಂದು ಮಧ್ಯಾಹ್ನ 1 ಗಂಟೆಗೆ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ತಿಳಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು ಮಾಹಿತಿ ನೀಡಿದ್ದು, 2025ರ ದ್ವಿತೀಯ ಪಿಯುಸಿ ಪರೀಕ್ಷೆ-3 ನ್ನು ದಿನಾಂಕ:09/06/2025 ರಿಂದ 20/06/2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-3 ಹಾಗೂ ಕ್ರೋಢೀಕೃತ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:01/07/2025ರ ಇಂದು  ಮಧ್ಯಾಹ್ನ 1:00 ಗಂಟೆಗೆ ಪ್ರಕಟವಾಗಲಿದೆ. ಜಾಲತಾಣಕ್ಕೆ ಭೇಟಿ ನೀಡಿ ದ್ವಿತೀಯ ಪಿಯುಸಿ ಪರೀಕ್ಷೆ-3ಗೆ ಹಾಜರಾದಂತ ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ..,

Read More

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 1ರ ಇಂದು ಚಾಲನೆ ನೀಡಲಿದ್ದಾರೆ ಎಂದು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ತಿಳಿಸಿದ್ದಾರೆ. https://twitter.com/KarnatakaVarthe/status/1939658980105887853 ಗ್ರಾಮೀಣ ಬಸ್ ಪಾಸ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸತತ ಸಭೆಗಳು ಆಗಿದ್ದು, ತಾಲೂಕು ಮಟ್ಟದಲ್ಲಿರುವ ಪತ್ರಕರ್ತರಿಗೂ ಈ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಇಲಾಖೆ ಕ್ರಮ ಕೈಗೊಂಡಿದೆ. ಹಾಗಾಗಿ ಶೀಘ್ರದಲ್ಲಿ ಮುಖ್ಯಮಂತ್ರಿಗಳಿಂದ ಯೋಜನೆಗೆ ಚಾಲನೆ ಕೊಡಿಸಲಾಗುವುದು ಎಂದಿದ್ದರು. ಈ ಬೆನ್ನಲ್ಲೇ ಮಾನ್ಯತೆ ಪಡೆಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಬಾಸ್ ವಿತರಣೆಗೆ ಸರ್ಕಾರ ಸಿದ್ಧವಾಗಿದೆ. ಅದಕ್ಕೂ ಮುನ್ನಾ ಗ್ರಾಮೀಣ ಪತ್ರಕರ್ತರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿತರಣೆ ಮಾಡುವಂತ ಪಾಸ್ ಮಾದರಿಯನ್ನು ರಿವೀಲ್ ಮಾಡಲಾಗಿದೆ. ಆಯಾ ಜಿಲ್ಲೆಯಾಧ್ಯಂತ ಪತ್ರಕರ್ತರು ಎಲ್ಲಾ ಬಾದರಿಯ ಕೆ ಎಸ್ ಆರ್ ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಸ್…

Read More

ನವದೆಹಲಿ: ಜುಲೈ 1ರ ಇಂದಿನಿಂದ ಹಲವು ಹಣಕಾಸು ಸೇವೆಗಳಲ್ಲಿ ಹೊಸ ನಿಯಮಗಳು ಜಾರಿಗೆ ಬರಲಿವೆ. ಹೊಸ ಪಾನ್ ಕಾರ್ಡ್ ಪಡೆಯಲು ಆಧಾರ್ ದೃಢೀಕರಣದಿಂದ ಹಿಡಿದು ಕ್ರೆಡಿಟ್ ಕಾರ್ಡ್ ಸೇವಾ ಶುಲ್ಕದವರೆಗೆ ಹಲವು ಬದಲಾವಣೆಗಳು ಆಗಲಿವೆ. ಹೀಗಾಗಿ ಜುಲೈ.1ರ ಇಂದಿನ ಎಲ್ಲೆಲ್ಲೂ ಆಧಾರ್ ಕಾರ್ಡ್ ಅತ್ಯಗತ್ಯ ದಾಖಲೆಯಾಗಿ ಬಳಕೆಯಾಗಲಿದೆ. ಅಲ್ಲದೇ ಹಲವು ನಿಯಮಗಳಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಆ ಬಗ್ಗೆ ಮುಂದೆ ಓದಿ. ಪಾನ್‌ಗೆ ಆಧಾರ್ ಕಡ್ಡಾಯ ಹೊಸ ಪಾನ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಲು ಆಧಾರ್‌ ಕಡ್ಡಾಯ. ಈವರೆಗೆ ಜನ್ಮದಿನಾಂಕ ದೃಢೀಕರಣಕ್ಕೆ ಜನನ ಪ್ರಮಾಣಪತ್ರ ಅಥವಾ ಜನ್ಮದಿನಾಂಕ ನಮೂದಾಗಿರುವ ಯಾವುದೇ ಗುರುತಿನ ಚೀಟಿ ನೀಡಿದ್ದರೆ ಸಾಕಿತ್ತು . ಈಗಾಗಲೇ ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಜೋಡಣೆ ಪ್ರಕ್ರಿಯೆ ಮುಗಿಸದಿದ್ದರೆ, ಆಧಾರ್-ಪಾನ್ ಜೋಡಣೆಗೆ ಡಿ.31ರ ಗಡುವು ನಿಗದಿಯಾಗಿದೆ. ಆಧಾರ್ ನಂಬರ್ ಕೊಟ್ರೆ ಮಾತ್ರ ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಸಾಧ್ಯ ಜುಲೈ 1ರಿಂದ ತತ್ಕಾಲ್ ಟಿಕೆಟ್ ಬುಕಿಂಗ್‌ಗೆ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲಾಗಿದೆ. ಐಆರ್‌ಸಿಟಿಸಿ ವೆಬ್ ಸೈಟ್…

Read More

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವವರ ಸಂಖ್ಯೆ 22ಕ್ಕೆ ಇಂದು ಏರಿಕೆಯಾಗಿದೆ. ಈ ಘಟನೆಗಳ ಸಂಬಂಧ 10 ದಿನಗಳಲ್ಲಿ ಪರಿಶೀಲಿಸಿ ವರದಿ ನೀಡುವಂತೆ ತಜ್ಞರ ಸಮಿತಿಗರ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸುಮಾರು 18 ಜನರು ಹೃದಯಘಾತಕ್ಕೆ ಒಳಗಾಗಿ ಸಾವನಪ್ಪಿದ್ದರರೆ ಎಂಬುದಾಗಿ ಸಮೂಹ ಮಾಧ್ಯಮಗಳಲ್ಲಿ ಮತ್ತು ದಿನಪತ್ರಿಕೆಯಲ್ಲಿ ಪ್ರಕಟಣೆಗೊಂಡಿರುತ್ತದೆ ಎಂದಿದ್ದಾರೆ. ಸದರಿ ವಿಷಯದ ಬಗ್ಗೆ ಈಗಾಗಲೇ ಸರ್ಕಾರದಿಂದ ಸುತ್ತೋಲೆ ಸಂಖ್ಯೆ: ಆಕುಕ 66 ಸಿಜಿಎಂ 2025, ದಿ:05.05.2025ರ ಅನ್ವಯ, ನಿರ್ದೇಶಕರು, ಶ್ರೀ ಜಯದೇವ ಹೃದ್ರೋಗ ಸಂಸ್ಥೆ ಬೆಂಗಳೂರು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯು ಸದರಿ ವಿಷಯವನ್ನು ಸಹ Hassan Institute of Medical Science ಇವರ ಸಹಯೋಗದೊಂದಿಗೆ ಪರಿಶೀಲಿಸಿ, 10 ದಿನಗಳೊಳಗಾಗಿ ವರದಿಯನ್ನು ನೀಡಲು ಸೂಚಿಸಿದ್ದಾರೆ.

Read More

ಬೆಂಗಳೂರು: ಇ-ಖಾತಾ ಪಡೆಯೋದು ಇನ್ನಷ್ಟು ಸರಳೀಕರಣಗೊಳಿಸಲಾಗಿದೆ. ಜಸ್ಟ್ ಕುಳಿತಲ್ಲಿಯೇ ಆಸ್ತಿ ಮಾಲೀಕರು ಆನ್ ಲೈನ್ ಮೂಲಕ ಇ-ಖಾತಾಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆ ಬಳಿಕ ನಿಮ್ಮ ಅಂತಿಮ ಇ-ಖಾತಾ ಮನೆಯ ಬಾಗಿಲಿಗೆ ಬರುವಂತ ವ್ಯವಸ್ಥೆಯನ್ನು ಮಾಡಲಾಗಿದೆ. ಸಾರ್ವಜನಿಕರ ಆಸ್ತಿಗಳಿಗೆ ರಕ್ಷಣೆ ಹಾಗೂ ದಾಖಲೆಗಳ ಸುರಕ್ಷತೆಯ ಗ್ಯಾರಂಟಿಗಾಗಿ ʼಮನೆ ಬಾಗಿಲಿಗೆ ಇ – ಖಾತಾʼ ವಿತರಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 25 ಲಕ್ಷ ಆಸ್ತಿದಾರರಿಗೆ ಈ ಸೌಲಭ್ಯ ಸಿಗಲಿದ್ದು, ಈಗಾಗಲೇ 5.51 ಲಕ್ಷ ಆಸ್ತಿದಾರರಿಗೆ ಅಂತಿಮ ಇ-ಖಾತಾ ವಿತರಿಸಲಾಗಿದೆ. ಉಳಿದವರಿಗೂ ಅವರ ಮನೆಗಳಿಗೆ ಕರಡು ಇ – ಖಾತಾವನ್ನು 100 ದಿನಗಳಲ್ಲಿ ತಲುಪಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. https://twitter.com/KarnatakaVarthe/status/1939642391667040432 ಬೆಂಗಳೂರಿನ ಆಸ್ತಿ ಮಾಲೀಕರು ಈಗ ಪುರಸಭೆಯ ಕಚೇರಿಗೆ ಕಾಲಿಡದೆ ತಮ್ಮ ಅಂತಿಮ ಇ-ಖಾತಾವನ್ನು ಪಡೆಯಬಹುದು. ಈ ಸುವ್ಯವಸ್ಥಿತ ಆನ್‌ಲೈನ್ ಪ್ರಕ್ರಿಯೆಯು ನಿಮ್ಮ ಮನೆಯಿಂದಲೇ ನಿಮ್ಮ ಅಂತಿಮ ಇ-ಖಾತಾ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಲು ಮತ್ತು ಡೌನ್‌ಲೋಡ್ ಮಾಡಲು ಸುಲಭಗೊಳಿಸುತ್ತದೆ.…

Read More

ಬೆಂಗಳೂರು: ರಾಜ್ಯದ ಪತ್ರಕರ್ತರಿಗೂ 5 ಲಕ್ಷದವರೆಗೆ ಉಚಿತ ಆರೋಗ್ಯ ಸೇವೆಯನ್ನು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದರು. ಇಂತಹ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಚಾಲನೆ ನೀಡಲಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಅವರು ಮಾಹಿತಿ ಹಂಚಿಕೊಂಡಿದ್ದು, ಪತ್ರಕರ್ತರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಉಚಿತ ಆರೋಗ್ಯ ಸೇವೆಯ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಹಾಗೂ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 1 ರಂದು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1939658980105887853 ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿತ್ತಿರುವಂತ ಮಾಧ್ಯಮ ಸಂಜೀವಿನಿ ಯೋಜನೆಯಿಂದಾಗಿ ಪತ್ರಕರ್ತರಿಗೆ 5 ಲಕ್ಷದವರೆಗೆ ಉಚಿತವಾಗಿ ಆರೋಗ್ಯ ಸೇವೆಯು ದೊರೆಯುವಂತೆ ಆಗಲಿದೆ. ಇದಲ್ಲದೇ ಗ್ರಾಮೀಣ ಪತ್ರಕರ್ತರಿಗೂ ಜಿಲ್ಲೆಯಾಧ್ಯಂತ ಸಂಚರಿಸೋದಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಪಾಸ್ ವಿತರಣೆಗೂ ಚಾಲನೆ ನೀಡಲಿದ್ದಾರೆ. https://kannadanewsnow.com/kannada/attention-sslc-students-you-are-allowed-to-travel-free-of-charge-on-the-bmtc-bus-for-exam-3/

Read More

ಪುನರಾವರ್ತಿತ ಭುಜದ ನೋವು ವ್ಯಕ್ತಿಯ ಜೀವನದ ಗುಣಮಟ್ಟದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವ ಗಂಭೀರ ಸ್ಥಿತಿಯಾಗಿದೆ. ಚಿಕಿತ್ಸೆ ನೀಡದಿದ್ದರೆ ಅಥವಾ ನಿರ್ಲಕ್ಷಿಸಿದರೆ, ಇದು ದೀರ್ಘಕಾಲದ ನೋವು, ಸೀಮಿತ ಚಲನಶೀಲತೆ ಮತ್ತು ಸುತ್ತಮುತ್ತಲಿನ ಅಂಗಾಂಶಗಳು ಮತ್ತು ಮೂಳೆಗಳಿಗೆ ಶಾಶ್ವತ ಹಾನಿ ಸೇರಿದಂತೆ ತೀವ್ರ ಪರಿಣಾಮಗಳಿಗೆ ಕಾರಣವಾಗಬಹುದು. ಈ ತೊಡಕುಗಳನ್ನು ತಡೆಗಟ್ಟಲು ಮತ್ತು ಸರಿಯಾದ ಗುಣಪಡಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯುವುದು ಅತ್ಯಗತ್ಯ. ಪುನರಾವರ್ತಿತ ಭುಜದ ನೋವನ್ನು ಅರ್ಥಮಾಡಿಕೊಳ್ಳುವುದು ಭುಜದ ಕೀಲು ಪದೇ ಪದೇ ಸ್ಥಳಾಂತರಗೊಂಡಾಗ ಪುನರಾವರ್ತಿತ ಭುಜದ ನೋವು ಸಂಭವಿಸುತ್ತದೆ, ಇದರಿಂದಾಗಿ ಹ್ಯೂಮರಸ್ (ಮೇಲಿನ ತೋಳಿನ ಮೂಳೆ) ಗ್ಲೆನಾಯ್ಡ್ (ಭುಜದ ಸಾಕೆಟ್) ನಿಂದ ಹೊರಬರುತ್ತದೆ. ಇದು ಆಘಾತಕಾರಿ ಗಾಯಗಳು, ಕ್ರೀಡೆಗಳಿಗೆ ಸಂಬಂಧಿಸಿದ ಅಪಘಾತಗಳು ಅಥವಾ ಅಸ್ಥಿರಜ್ಜು ಸಡಿಲತೆ ಅಥವಾ ಮೂಳೆ ವಿರೂಪಗಳಂತಹ ಆಧಾರವಾಗಿರುವ ಪರಿಸ್ಥಿತಿಗಳು ಸೇರಿದಂತೆ ವಿವಿಧ ಅಂಶಗಳಿಂದಾಗಿರಬಹುದು. ಚಿಕಿತ್ಸೆ ನೀಡದಿದ್ದರೆ, ಪುನರಾವರ್ತಿತ ಸ್ಥಳಾಂತರಗಳು ಸುತ್ತಮುತ್ತಲಿನ ಅಂಗಾಂಶಗಳನ್ನು ಹಿಗ್ಗಿಸಲು ಅಥವಾ ಹರಿದು ಹಾಕಲು ಕಾರಣವಾಗಬಹುದು, ಇದು ದೀರ್ಘಕಾಲದ ಅಸ್ಥಿರತೆಗೆ ಮತ್ತು ಮತ್ತಷ್ಟು…

Read More