Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಮುಧೋಳದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರುಗಳು ಬೆಂಕಿಗೆ ಆಹುತಿಯಾಗಿರುವ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ರಾಜ್ಯ ಸರಕಾರ ತಕ್ಷಣವೇ ಮಧ್ಯಪ್ರವೇಶಿಸಿ ಬಿಕ್ಕಟ್ಟನ್ನು ತಿಳಿಗೊಳಿಸಬೇಕು. ಕಬ್ಬು ಬೆಳೆಗಾರರ ಸಂಕಷ್ಟ ಮತ್ತೆ ಸೃಷ್ಟಿಯಾಗದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕಬ್ಬು ಬೆಳೆಗಾರರ ಸಂಕಷ್ಟ ಬಿಗಡಾಯಿಸಿದೆ. ಮುದೋಳದ ಸಕ್ಕರೆ ಕಾರ್ಖಾನೆಯ ಯಾರ್ಡ್ʼನಲ್ಲಿ ನಿಂತಿದ್ದ ಕಬ್ಬು ತುಂಬಿದ್ದ ಟ್ರಾಕ್ಟರುಗಳು ಬೆಂಕಿಗೆ ಆಹುತಿ ಆಗಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಕಾಂಗ್ರೆಸ್ ಸರಕಾರದ ವೈಫಲ್ಯಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಟೀಕಿಸಿದರು. ಬೆಳಗಾವಿಯಲ್ಲಿ ರೈತರು ಹೋರಾಟಕ್ಕಿಳಿದಾಗ ಆ ಕ್ಷಣಕ್ಕೇನೋ ಅವರ ಮೂಗಿಗೆ ತುಪ್ಪ ಸವರಿದ ಸರಕಾರವು, ಇಡೀ ಕಬ್ಬು ಬೆಳೆಗಾರರ ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ಘೋರ ವೈಫಲ್ಯ ಕಂಡಿತು. ಅದರ ಪರಿಣಾಮವೇ ಮುಧೋಳದಲ್ಲಿ ರೈತರ ತಾಳ್ಮೆಯ ಕಟ್ಟೆಯೊಡೆಯುಂತೆ ಮಾಡಿದೆ ಎಂದು ಸಚಿವರು ದೂರಿದ್ದಾರೆ. ಅಕ್ಕಿ ಮೇಲೆ…
ಬೆಂಗಳೂರು: ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ದ್ರೋಣ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಿ ಎನ್ನುವ ಸೂಚನೆ ನೀಡಿದರು. ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್ ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಬಗ್ಗೆ ಸಮಗ್ರ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿಗಳು, ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಈ ಕೆಳಗಿನ ಎಂಟು ಅಂಶದ ಕಾರ್ಯಕ್ರಮಕ್ಕೆ ಅಸ್ತು…
ಬೆಂಗಳೂರು: ನಗರದ ಶಾಂತಿನಗರ ಕ್ರೀಡಾ ಸಂಕೀರ್ಣದಲ್ಲಿ ಶಟಲ್ ಬ್ಯಾಡ್ಮಿಂಟನ್, ಕೇರಂ, ಚೆಸ್ ಮತ್ತು ಟೇಬಲ್ ಟೆನ್ನಿಸ್ ಆಡುವ ಮೂಲಕ ನೌಕರರಿಗೆ ಪ್ರೋತ್ಸಾಹಿಸಿ ಕ್ರೀಡಾ ಸ್ಪರ್ಧೆಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ಕೆಎಸ್ ಆರ್ ಟಿ ಸಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ನೌಕರರುಗಳಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ಹಾಗೂ ಸ್ಪರ್ಧೆಗಳಲ್ಲಿ ವಿಜೇತರಾದ ಅಧಿಕಾರಿ/ ಸಿಬ್ಬಂದಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಗಮದಲ್ಲಿ ಅಧಿಕಾರಿ/ಸಿಬ್ಬಂದಿಗಳ ಉತ್ತಮ ಆರೋಗ್ಯ, ಒತ್ತಡ ನಿವಾರಣೆ ಹಾಗೂ ಕ್ರೀಡಾ ಮನೋರಂಜನೆಗಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಪ್ರತಿ ವರ್ಷವು ಘಟಕ, ವಿಭಾಗ, ಪ್ರಾದೇಶಿಕ ಕಾರ್ಯಗಾರ ಮತ್ತು ಕೇಂದ್ರ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ನೌಕರರು ಹಾಗೂ ಅವರ ಮಕ್ಕಳಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ. ಈ ಸಂಬಂಧ ಕ್ರೀಡಾ ಮತ್ತು ಸಾಂಸ್ಕೃತಿಕ ನಿಧಿಯಿಂದ ವಿಭಾಗ/ಕಾರ್ಯಾಗಾರಗಳಿಗೆ ತಲಾ ರೂ. 40,000/- ರಂತೆ 17 ವಿಭಾಗಗಳಿಗೆ ಎರಡು…
ನವದೆಹಲಿ: ಯೂಗೋವ್ ಸಹಯೋಗದೊಂದಿಗೆ ಆಶ್ಲೇ ಮ್ಯಾಡಿಸನ್ ನಡೆಸಿದ ಹೊಸ ಅಂತರರಾಷ್ಟ್ರೀಯ ಅಧ್ಯಯನವು, ಹತ್ತು ಭಾರತೀಯರಲ್ಲಿ ನಾಲ್ವರು ಸಹೋದ್ಯೋಗಿಗಳೊಂದಿಗೆ ಡೇಟಿಂಗ್ ಮಾಡಿದ್ದಾರೆ ಅಥವಾ ಪ್ರಸ್ತುತ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಬಹಿರಂಗಪಡಿಸುತ್ತದೆ. ಯುಎಸ್, ಯುಕೆ, ಕೆನಡಾ, ಮೆಕ್ಸಿಕೊ ಮತ್ತು ಜರ್ಮನಿ ಸೇರಿದಂತೆ 11 ದೇಶಗಳಲ್ಲಿ ನಡೆಸಲಾದ ಈ ಸಮೀಕ್ಷೆಯು 13,581 ವಯಸ್ಕರನ್ನು ಒಳಗೊಂಡಿತ್ತು. ಕೆಲಸದ ಸ್ಥಳದಲ್ಲಿ ಪ್ರೇಮ ಸಂಬಂಧಗಳನ್ನು ಒಪ್ಪಿಕೊಳ್ಳುವ ಜನರ ವಿಷಯದಲ್ಲಿ ಭಾರತ ಜಾಗತಿಕವಾಗಿ ಎರಡನೇ ಸ್ಥಾನದಲ್ಲಿದೆ ಎಂದು ಕಂಡುಹಿಡಿದಿದೆ. ಜಾಗತಿಕ ಶ್ರೇಯಾಂಕಗಳು ಮತ್ತು ಭಾರತದ ಸ್ಥಾನ ಮೆಕ್ಸಿಕೊ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ, ಪ್ರತಿಕ್ರಿಯಿಸಿದವರಲ್ಲಿ 43% ಜನರು ಸಹೋದ್ಯೋಗಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದೇವೆ ಎಂದು ಹೇಳಿದ್ದಾರೆ, ಆದರೆ ಭಾರತವು 40% ರೊಂದಿಗೆ ನಿಕಟವಾಗಿ ಅನುಸರಿಸುತ್ತದೆ. ಹೋಲಿಸಿದರೆ, ಯುಎಸ್, ಯುಕೆ ಮತ್ತು ಕೆನಡಾದಂತಹ ದೇಶಗಳು ಸುಮಾರು 30% ರಷ್ಟು ಕಡಿಮೆ ಅಂಕಿಅಂಶಗಳನ್ನು ವರದಿ ಮಾಡಿವೆ. ವೃತ್ತಿಪರ ಗಡಿಗಳ ಬಗ್ಗೆ ಹೆಚ್ಚುತ್ತಿರುವ ಅರಿವು ಇದ್ದರೂ, ಕೆಲಸದ ಸ್ಥಳದ ಸಂಬಂಧಗಳು ಭಾರತದಲ್ಲಿ ಆಧುನಿಕ ಕಚೇರಿ ಸಂಸ್ಕೃತಿಯ ಗಮನಾರ್ಹ ಭಾಗವಾಗಿ ಉಳಿದಿವೆ…
ಬೆಂಗಳೂರು: ಯುನೆಸ್ಕೋ ಮಾಹಿತಿಯ ಪ್ರಕಾರ, ಕಳೆದ ಎರಡು ದಶಕಗಳಲ್ಲಿ ಜಾಗತಿಕವಾಗಿ 1,600 ಕ್ಕೂ ಹೆಚ್ಚು ಪತ್ರಕರ್ತರು ಹತ್ಯೆಯಾಗಿರುವುದು ನೋವಿನ ಸಂಗತಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು. ಬೆಂಗಳೂರಿನಲ್ಲಿ ಯುನೆಸ್ಕೊ, ಪತ್ರಕರ್ತರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ‘ಸುರಕ್ಷತೆ, ಕಾನೂನು ಸಬಲೀಕರಣ ಮತ್ತು ಭಾರತದಲ್ಲಿ ಪತ್ರಕರ್ತರ ಲಿಂಗ-ಪ್ರತಿಕ್ರಿಯಾತ್ಮಕ ರಕ್ಷಣೆ ಕುರಿತ ಮೂರು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಇನ್ನೂ ನೋವಿನ ಸಂಗತಿ ಅಂದರೆ, ಸುಮಾರು ಶೇ.80 ಪ್ರಕರಣಗಳಲ್ಲಿ, ಅಪರಾಧಿಗಳನ್ನು ಎಂದಿಗೂ ನ್ಯಾಯದ ಮುಂದೆ ತರಲಾಗಿಲ್ಲ ಎಂದು ಅವರು ವಿಷಾದಿಸಿದರು. ಸತ್ಯದ ನೆಲೆಯಲ್ಲಿ ಹೋರಾಟ ಮಾಡುತ್ತಿರುವ ಪ್ರಪಂಚದಾದ್ಯಂತ ಪತ್ರಕರ್ತರು ಇಂದಿಗೂ ಬೆದರಿಕೆಗಳು, ಕಿರುಕುಳ ಮತ್ತು ಜೀವಹಾನಿಯನ್ನು ಎದುರಿಸುತ್ತಲೇ ಇದ್ದಾರೆ ಎಂದರು. ಭಾರತದಲ್ಲಿಯೂ ಸಹ, ಭ್ರಷ್ಟಾಚಾರ, ಪರಿಸರ ಸಮಸ್ಯೆಗಳು ಅಥವಾ ಮಾನವ ಹಕ್ಕುಗಳ ಉಲ್ಲಂಘನೆಯನ್ನು ವರದಿ ಮಾಡುವ ವರದಿಗಾರರು ಬೆದರಿಕೆ ಅಥವಾ ಹಿಂಸೆಯನ್ನು ಎದುರಿಸಿದ ಪ್ರಕರಣಗಳನ್ನು ನಾವು ನೋಡಿದ್ದೇವೆ. ವಾಕ್ ಸ್ವಾತಂತ್ರ್ಯದ ರಕ್ಷಣೆಯಲ್ಲಿ ಧೃಢವಾಗಿ ನಿಂತ ಗೌರಿ ಲಂಕೇಶ್ರಂತಹ…
ಬೆಂಗಳೂರು: ಬೆಳಗಾವಿಯ ಸೈದಾಪುರದಲ್ಲಿ ಸಕ್ಕರೆ ಕಾರ್ಖಾನೆ ಮುಂದೆ ನಿಲ್ಲಿಸಿದ್ದಂತ ಕಬ್ಬು ತುಂಬಿದ್ದಂತ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಘಟನೆಯ ಬಗ್ಗೆ ತೀವ್ರ ಖೇದ ವ್ಯಕ್ತ ಪಡಿಸಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಈ ಕುರಿತಂತೆ ಬೆಳಗಾವಿಯ ಜಿಲ್ಲಾ ಉಸ್ತುವಾರಿ ಸಚಿವ ತಿಮ್ಮಾಪುರ ಅವರಿಗೆ ದೂರವಾಣಿ ಕರೆ ಮಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಘಟನೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಜೊತೆಗೆ ಅಧಿಕಾರಿಗಳೊಂದಿಗೂ ಮಾತನಾಡಿದಂತ ಅವರು, ಅವರಿಂದಲೂ ಮಾಹಿತಿಯನ್ನು ಪಡೆದರು. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು, ರೈತರು ತಮ್ಮ ಟ್ರ್ಯಾಕ್ಟರ್ ಗಳನ್ನೇ ಸುಡ್ತಾರಾ? ಸರ್ಕಾರ ಏನ್ಮಾಡಬೇಕು ಎಲ್ಲ ಮಾಡಿದೆ. ಯಾರದ್ದೋ ಮನಸ್ಸಿನಲ್ಲಿ ಅಸೂಯೆ ಇರಬೇಕು ಎಂದರು. ರೈತರಾದವರು ಯಾರೂ ಕೂಡ ಈ ರೀತಿ ಮಾಡುವುದಿಲ್ಲ. ಇತಿಹಾಸದಲ್ಲೇ ಯಾವ ಸರ್ಕಾರ ಕೊಡದ ದರ ನಾವು ಕೊಟ್ಟಿದ್ದೇವೆ. ರಾಜ್ಯದಲ್ಲಿ ಇಡೀ ರೈತ ಸಂಕುಲ ತುಂಬಾ ಸಂತೋಷದಿಂದ ಇದೆ ಎಂದರು. ಜ್ವಲಿಸಿದ ಕಬ್ಬು ಬೆಳೆಗಾರರ ಕಿಚ್ಚು: ಬೆಳಗಾವಿಯಲ್ಲಿ 100ಕ್ಕೂ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರ ವ್ಯಾಪ್ತಿಯ ರೈತರಿಗೆ ಮಹತ್ವದ ಸೂಚನೆಯನ್ನು ಪೊಲೀಸರು ನೀಡಿದ್ದಾರೆ. ಪೊಲೀಸರ ಸೂಚನೆಯನ್ನು ಅನುಸರಿಸಿ ರೈತರು ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಲಾಗಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಆನಂದಪುರ ಠಾಣೆಯ PSI ಪ್ರವೀಣ್ ಎಸ್.ಪಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಮ್ಮ ಬೆಳೆಯನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಈ ಕೆಳಕಂಡಂತೆ ಕ್ರಮವಹಿಸಲು ಸೂಚಿಸಿದ್ದಾರೆ. * ಅಡಿಕೆ/ಶುಂಠಿ ಕೊಯ್ದು ಒಣಗಿಸುವ ರೈತಾಪಿ ಕೆಲಸ ಠಾಣಾ ವ್ಯಾಪ್ತಿಯಲ್ಲಿ ಚಾಲನೆಯಲ್ಲಿರುವುದರಿಂದ ಹೆಚ್ಚಾಗಿ ಅಡಿಕೆ/ಶುಂಠಿ ಒಣಗಿಸುವ ಕಣಗಳ ಬಳಿ CCTV ಕಣ್ಗಾವಲು ಅಳವಡಿಸಲು ಕೋರಿದ್ದಾರೆ. * ಅಡಿಕೆ/ಶುಂಠಿ ಒಣಗಿಸುವ ಸ್ಥಳದಲ್ಲಿ ಉತ್ತಮ ಬೆಳಕಿನ ವ್ಯವಸ್ಥೆ ಮಾಡಿಕೊಳ್ಳಲು ತಿಳಿಸಿದ್ದಾರೆ. * ಅಡಿಕೆ/ಶುಂಠಿಯ ವ್ಯಾಪಾರ/ಖೇಣಿ ಪದ್ಧತಿಯು ಹೆಚ್ಚಾಗಿ ನಂಬಿಕೆ ಆಧಾರದ ಮೇಲೆ ನಡೆಯುತ್ತಿದ್ದು ಹಲವಾರು ರೈತರು ಮೋಸ ಹೋದಂತ ಘಟನೆಗಳು ನಡೆಯುತಿದ್ದು, ಸಮರ್ಪಕ ದಾಖಲಾತಿಗಳೊಂದಿಗೆ ವ್ಯವಹಾರ ನಡೆಸಲು ಕೋರಿದ್ದಾರೆ. * ಸಂಪೂರ್ಣ ಪರಿಚಯವಿಲ್ಲದ ಹೊರ ಸ್ಥಳದ ವ್ಯಕ್ತಿಗಳೊಂದಿಗೆ ವ್ಯವಹಾರ ಮಾಡುವಾಗ ಜಾಗರೂಕತೆಯಿಂದ ವ್ಯವಹರಿಸಿ, ಸಮರ್ಪಕ…
ಬೆಳಗಾವಿ: ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಆಕ್ರೋಶದ ಕಿಚ್ಚು ಜ್ವಲಿಸಿದೆ. ರೂ.3,500 ಪ್ರತಿ ಟನ್ ಕಬ್ಬಿಗೆ ಬೆಲೆ ನಿಗದಿ ಪಡಿಸುವಂತೆ ಆಗ್ರಹಿಸಿ ನಡೆಸುತ್ತಿದ್ದಂತ ಹೋರಾಟ ತೀವ್ರ ಸ್ವರೂಪಕ್ಕೆ ತಿರುಗಿದೆ. ಸಕ್ಕರೆ ಕಾರ್ಖಾನೆಯ ಮುಂದೆ ನಿಲ್ಲಿಸಿದ್ದಂತ ಬೈಕ್, ಟ್ರ್ಯಾಕ್ಟರ್, ಟ್ರ್ಯಾಕ್ಟರ್ ಟ್ರಾಲಿ ಸೇರಿದಂತೆ 100ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಮುಧೋಳದ ಸೈದಾಪುರದಲ್ಲಿ ಕಬ್ಬು ಬೆಳೆಗಾರರ ಆಕ್ರೋಶವು ಕಟ್ಟೆ ಹೊಡೆದಿದೆ. ಸೈದಾಪುರದ ಸಕ್ಕರೆ ಕಾರ್ಖಾನೆಯ ಬಳಿಯಲ್ಲಿ ನಿಲ್ಲಿಸಿದ್ದಂತ ವಾಹನಗಳಿಗೆ ಪ್ರತಿಭಟನಾ ನಿರತ ರೈತರು ಬೆಂಕಿ ಹಚ್ಚಿದ್ದಾರೆ. ಬೈಕ್, ಟ್ರ್ಯಾಕ್ಟರ್ ಗೆ ಇಟ್ಟಂತ ಬೆಂಕಿಯು ಕ್ಷಣಾರ್ಥದಲ್ಲಿ ಸಕ್ಕರೆ ಕಾರ್ಖಾನೆ ಮುಂದೆ ನಿಲ್ಲಿಸಿದ್ದಂತ ಟ್ರ್ಯಾಕ್ಟರ್ ಟ್ರಾಲಿಗಳಿಗೆ ತಗುಲಿದ ಪರಿಣಾಮ ಧಗಧಗಿಸಿ ಹೊತ್ತಿ ಉರಿಯುತ್ತಿವೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ತಾಗುವಂತೆ ಉರಿಯುತ್ತಿದ್ದು, 100ಕ್ಕೂ ಹೆಚ್ಚು ಟ್ರಾಲಿಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. https://kannadanewsnow.com/kannada/good-news-for-those-who-applied-for-bed-studies-another-opportunity-for-document-verification/ https://kannadanewsnow.com/kannada/good-news-good-news-for-employees-epfos-important-decision-now-automatic-transfer-of-pf-money-to-new-account/
ನಿಮ್ಮ ಮನೆಯ ಪೂಜಾ ಕೋಣೆಯಲ್ಲಿ ಪ್ರತಿದಿನ ಈ ಒಂದು ಮಂತ್ರವನ್ನು ಸರಳವಾಗಿ ಪಠಿಸಿ. ನಿಮ್ಮ ಮನೆಯನ್ನು ಕಾಡುವ ಎಲ್ಲಾ ಸಮಸ್ಯೆಗಳು ಹಾರಿಹೋಗುತ್ತವೆ. ನಾವು ನಮ್ಮ ಮನೆಯಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತೇವೆ. ನಾವು ವಾಸಿಸುವ ಮನೆಯಲ್ಲಿ ಅಹಿತಕರ ವಾತಾವರಣವಿದ್ದರೆ, ನಾವು ಏನನ್ನೂ ಸರಿಯಾಗಿ ಮಾಡಲು ಸಾಧ್ಯವಿಲ್ಲ. ಮನೆಗಳಲ್ಲಿ ಇಂತಹ ಅಹಿತಕರ ವಾತಾವರಣದಿಂದ ಕುಟುಂಬದಲ್ಲಿ ಅನಾವಶ್ಯಕ ಕಲಹಗಳು ಉಂಟಾಗುವುದು, ಆ ಮನೆಗಳ ನಿವಾಸಿಗಳಿಗೆ ಮಾನಸಿಕ ಚಡಪಡಿಕೆ, ಆರ್ಥಿಕ ಸಂಕಷ್ಟ ಇತ್ಯಾದಿಗಳು ಉಂಟಾಗಬಹುದು. ಈ ಗಾಯತ್ರಿ ಮಂತ್ರಕ್ಕೆ ಮೇಲಿನ ತೊಂದರೆಗಳು ಬರದಂತೆ ತಡೆಯುವ ಶಕ್ತಿ ಇದೆ. ಆ ಮ್ಯಾಜಿಕ್ ಏನು ? ಆ ಮಂತ್ರವನ್ನು ಸರಿಯಾಗಿ ಉಚ್ಚರಿಸುವುದು ಹೇಗೆ? ಇಲ್ಲಿ ನಾವು ಅದರ ಬಗ್ಗೆ ತಿಳಿಯಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ…
ಬೆಂಗಳೂರು: ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿ ನೋಂದಾಯಿತ ಉದ್ದಿಮೆಗಳಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ಋತುಚಕ್ರ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ನೀಡುವ ಕಲ್ಪಿಸುವ ಸಂಬಂಧ ಸರ್ಕಾರ ಅಧಿಕೃತ ಆದೇಶ ಪ್ರಕಟಸಿದೆ. ಋತುಚಕ್ರ ರಜೆ ನೀತಿ – 2025ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಅಂಕಿತ ದೊರೆತಿತ್ತು. ಮಹಿಳೆಯೆರಿಗೆ ಅನುಕೂಲವಾಗುವ ಹಾಗೂ ಅವರ ಸಬಲೀಕರಣಕ್ಕೆ ಬೆಂಬಲ ನೀಡುವ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಿದೆ. ಇದೀಗ ಇವುಗಳ ಜೊತೆ ಋತುಚಕ್ರ ರಜೆ ಮತ್ತೊಂದು ಸೇರ್ಪಡೆಯಾಗಲಿದೆ. ಹಿನ್ನೆಲೆ: ಈ ಹಿಂದೆ ಕಾರ್ಮಿಕ ಇಲಾಖೆಯು ಮಾಸಿಕ ಋತುಸ್ರಾವದ ರಜೆ ನೀತಿಗಾಗಿ ಆಡಳಿತಾತ್ಮಕ ಅನುಮೋದನೆ ಕೋರಿತ್ತು. ಆದರೆ ಈ ನೀತಿಯನ್ನು ಸಮಗ್ರವಾಗಿ ಜಾರಿಗೆ ತರಬೇಕು ಎಂದು ಬಯಸಿದ್ದ ಸಚಿವರು, ನಿರಂತರ ಸಭೆ, ಚರ್ಚೆ ಮತ್ತು ಸಂವಾದಗಳಿಗೆ ವೇದಿಕೆ ಒದಗಿಸಿದ್ದರು. ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರದ ರಜೆ ಸಂಬಂಧ. ಸರ್ಕಾರ ಕ್ರೈಸ್ಟ್ ವಿಶ್ವವಿದ್ಯಾಲಯದ ಕಾನೂನು ವಿಭಾಗದ…














