Subscribe to Updates
Get the latest creative news from FooBar about art, design and business.
Author: kannadanewsnow09
ಗದಗ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದ ಜಾತಿಯವರೇ ಆಗಿದ್ದಾರೆ. ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು? ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಇಂದು ಗದಗದ ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅಸಮಾನತೆ, ಜಾತಿ ಶೋಷಣೆಯಿಂದ ಲಾಭ ಮಾಡಿಕೊಳ್ಳುತ್ತಿರುವವರು ಸಮಾಜದ ಬದಲಾವಣೆಗೆ ವಿರೋಧವಿದ್ದಾರೆ. ಇವರು ಹಿಂದುಳಿದವರ ಮನೆಯ ಮಕ್ಕಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರುವುದನ್ನು ಸಹಿಸುವುದಿಲ್ಲ. ಹೀಗಾಗಿ ದೇವರು, ಧರ್ಮದ ಹೆಸರಿನಲ್ಲಿ ಹಿಂದುಳಿದ ಜಾತಿಗಳ ಮನೆಯ ಮಕ್ಕಳನ್ನೇ ಬಲಿ ಆಗುವಂತೆ ಮಾಡುತ್ತಿದ್ದಾರೆ. ಆದ್ದರಿಂದ ಹಿಂದುಳಿದವರ ಮಕ್ಕಳನ್ನು ಬಲಿ ಕೊಡುವವರ ಮಾತು ಕೇಳಿಕೊಂಡು ನಾವು ತಲೆ ಆಡಿಸುತ್ತಾ ಕೂರಬಾರದು ಎಂದು ಹೇಳಿದ್ದಾರೆ. ಶಿಕ್ಷಣ-ಸಂಘಟನೆ-ಹೋರಾಟ ಎನ್ನುವುದು ಅಂಬೇಡ್ಕರ್ ಅವರು ಶೋಷಿತ, ಹಿಂದುಳಿದ ಜಾತಿ ಸಮುದಾಯಗಳಿಗೆ ಕೊಟ್ಟ ಮಂತ್ರವಾಗಿದೆ. ಈ ಮೂರೂ ಮಂತ್ರಗಳ ಮೂಲಕ…
ಮಂಡ್ಯ : ದಲಿತ ಮಹಿಳೆ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ನೀಡಿ ನಿಂದಿಸಿರುವ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಶಾಸಕ ಸ್ಥಾನವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು. ಮದ್ದೂರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾಯಿಸಿದ ಪದಾಧಿಕಾರಿಗಳು ಯತ್ನಾಳ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಶಾಸಕ ಯತ್ನಾಳ್ ಪ್ರತಿಕೃತಿಯನ್ನು ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದಹಿಸಲು ಮುಂದಾದ ವೇಳೆ ಇನ್ಸ್ಪೆಕ್ಟರ್ ವೆಂಕಟೇಗೌಡ ಅವರು ಮಧ್ಯ ಪ್ರವೇಶಿಸಿ ಪ್ರತಿಭಟನಾಕಾರರ ಮನವೊಲಿಸಿ ವಿಫಲಗೊಳಿಸಿದರು. ಬಳಿಕ ತಾಲೂಕು ಕಛೇರಿಗೆ ಆಗಮಿಸಿ ಘೋಷಣೆ ಕೂಗಿ ಕಿಡಿಕಾರಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮೈಸೂರು ವಿಭಾಗೀಯ ಸಂಚಾಲಕ ಮರಳಿಗ ಶಿವರಾಜ್ ಮಾತನಾಡಿ, ದಸರಾ ಕಾರ್ಯಕ್ರಮ ಉದ್ಘಾಟನೆ ವಿಷಯವಾಗಿ ಮಾಧ್ಯಮದ ಮುಂದೆ ಯತ್ನಾಳ್ ಮಾತನಾಡುವಾಗ ಅವಮಾನಕರ ಹೇಳಿಕೆ ನೀಡಿದ್ದಾರೆ. ಚಾಮುಂಡೇಶ್ವರಿ ದೇವಿಗೆ ಸನಾತನ ಧರ್ಮದ ಮಹಿಳೆಯರು ಮಾತ್ರ ಪೂಜೆ ಸಲ್ಲಿಸಬೇಕೆ ಹೊರತು ಸಾಮಾನ್ಯ ದಲಿತ ಮಹಿಳೆಗೂ…
ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಆತುರಾತುರವಾಗಿ ಜಾತಿ ಗಣತಿ ಮಾಡುತ್ತಿದ್ದು, ಭವಿಷ್ಯದಲ್ಲಿ ಇದು ದೊಡ್ಡ ಸಮಸ್ಯೆಗೆ ಕಾರಣವಾಗಲಿದೆ. ಇದರ ಪ್ರತಿಫಲವನ್ನು ಕಾಂಗ್ರೆಸ್ ಪಕ್ಷ ಅನುಭವಿಸಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಸಮೀಕ್ಷೆ ಕುರಿತ ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ಸಭೆಯಲ್ಲಿ ಎಲ್ಲಾ ಸಾಧಕ -ಬಾಧಕಗಳ ಬಗ್ಗೆ ಚರ್ಚೆ ಮಾಡೆಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಎಲ್ಲಾ ಸಮಸ್ಯೆ ಬಗೆಹರಿಸುವ ಬಗ್ಗೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರು ಹೇಳಿದರು. ಈಗಾಗಲೇ ಕಾಂತರಾಜ್ ಆಯೋಗ, ಜಯಪ್ರಕಾಶ್ ಹೆಗಡೆ ಆಯೋಗ ಆಯಿತು. ಈಗ ಮೂರನೇ ಆಯೋಗ ರಚನೆ ಆಗಿದೆ. ಈ ರೀತಿಯ ಆಯೋಗ ರಚನೆ ಮಾಡಬೇಕಾದರೆ ಏನೆಲ್ಲಾ ಮಾನದಂಡಗಳನ್ನು ಅನುಸರಿಸಿದ್ದಾರೆ ಎನ್ನುವುದನ್ನು ಎಂಬುದನ್ನು ನೋಡಬೇಕು. ಸುಮ್ಮ ಸುಮ್ಮನೆ ಆಯೋಗ ರಚನೆ ಮಾಡಲು ಸಾಧ್ಯವಿಲ್ಲ. ಸಮೀಕ್ಷೆಗೆ 15 ದಿನಗಳ…
ಬೆಂಗಳೂರು: ಕ್ರಿಶ್ಚಿಯನ್ ಹೊಸ ಜಾತಿಗಳ ಸೇರ್ಪಡೆಯಿಂದ ಸಾಮಾಜಿಕ ಧಕ್ಕೆ ಉಂಟಾಗಲಿದೆ. ಜೊತೆ ಜೊತೆಗೆ ದೀರ್ಘಕಾಲಿಕ ಸಮಸ್ಯೆಗಳು ಇದರಿಂದ ಉಂಟಾಗಲಿವೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪತ್ರ ಬರೆದು ತಿಳಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ಧರಾಮಯ್ಯಗೆ ರಾಜ್ಯಪಾಲ ಗೆಹ್ಲೋಟ್ ಪತ್ರ ಬರೆದಿದ್ದು, ಕ್ರಿಶ್ಚಿಯನ್ ಹೊಸ ಜಾತಿಗಳ ಸೇರ್ಪಡೆಯಿಂದ ಸಾಮಾಜಿಕ ಧಕ್ಕೆ ಮತ್ತು ದೀರ್ಘಾವಧಿಯ ಸಮಸ್ಯೆ ಉಂಟಾಗುವ ಸಾಧ್ಯತೆ ಇರುತ್ತದೆ. ಸಾಮಾಜಿಕ ವ್ಯವಸ್ಥೆಗೆ ಸಮಸ್ಯೆಯಾಗದಂತೆ ಮರು ಪರಿಶೀಲಿಸುವಂತೆ ತಿಳಿಸಲಾಗಿದೆ. ಜಾತಿ ಪಟ್ಟಿಯಲ್ಲಿ ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಸೇರಿ ಹೊಸ ಜಾತಿ ಪಟ್ಟಿಗಳ ಸೇರ್ಪಡೆ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪತ್ರದಲ್ಲಿ ಮನವರಿಕೆ ಮಾಡಿಕೊಟ್ಟಿದ್ದಾರೆ. ಅಲ್ಲದೇ ಕ್ರಿಶ್ಚಿಯನ್ ಹೊಸ ಜಾತಿಗಳ ಸೇರ್ಪಡೆಯ ಬಗ್ಗೆ ಮರುಪರಿಶೀಲಿಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ. https://kannadanewsnow.com/kannada/a-significant-order-from-the-government-regarding-the-issuance-of-clearance-certificates-for-multi-storey-buildings-across-the-state/ https://kannadanewsnow.com/kannada/breaking-cyber-attack-flight-service-disruptions-in-london-brussels-other-european-countries/
ಮದುವೆಗೆ ಅತ್ಯುತ್ತಮ ಸಲಹೆ… 1. ನೀವು ಒಬ್ಬರನ್ನೊಬ್ಬರು ಇಷ್ಟಪಡಲು ಕಷ್ಟಪಡುವ ಕ್ಷಣಗಳಲ್ಲಿಯೂ ಸಹ, ಪರಸ್ಪರ ಪ್ರೀತಿಸಲು ಆಯ್ಕೆಮಾಡಿ. ಪ್ರೀತಿ ಒಂದು ಬದ್ಧತೆ, ಭಾವನೆಯಲ್ಲ. 2. ನಿಮ್ಮ ಗಂಡ/ಹೆಂಡತಿ ಕರೆ ಮಾಡುವಾಗ ಯಾವಾಗಲೂ ಫೋನ್ಗೆ ಉತ್ತರಿಸಿ. ಸಾಧ್ಯವಾದಾಗಲೆಲ್ಲಾ, ನೀವು ನಿಮ್ಮ ಸಂಗಾತಿಯೊಂದಿಗೆ ಒಟ್ಟಿಗೆ ಇರುವಾಗ ನಿಮ್ಮ ಫೋನ್ ಅನ್ನು ಆಫ್ ಮಾಡಲು ಪ್ರಯತ್ನಿಸಿ. 3. ಒಟ್ಟಿಗೆ ಸಮಯವನ್ನು ಆದ್ಯತೆಯನ್ನಾಗಿ ಮಾಡಿ. ಸ್ಥಿರವಾದ ಡೇಟ್ ನೈಟ್ಗಾಗಿ ಬಜೆಟ್. ಸಮಯವು “ಸಂಬಂಧಗಳ ಕರೆನ್ಸಿ”, ಆದ್ದರಿಂದ ನಿಮ್ಮ ಮದುವೆಯಲ್ಲಿ ನಿರಂತರವಾಗಿ ಸಮಯವನ್ನು ಹೂಡಿಕೆ ಮಾಡಿ. 4. ನಿಮ್ಮ ಮದುವೆಯನ್ನು ಬಲಪಡಿಸುವ ಸ್ನೇಹಿತರೊಂದಿಗೆ ನಿಮ್ಮನ್ನು ಸುತ್ತುವರೆದಿರಿ. ನಿಮ್ಮ ಪಾತ್ರವನ್ನು ರಾಜಿ ಮಾಡಿಕೊಳ್ಳಲು ನಿಮ್ಮನ್ನು ಪ್ರಚೋದಿಸುವ ಜನರಿಂದ ನಿಮ್ಮನ್ನು ದೂರವಿರಿಸಿ. 5. ನಗುವನ್ನು ನಿಮ್ಮ ಮದುವೆಯ ಧ್ವನಿಪಥವನ್ನಾಗಿ ಮಾಡಿ. ಸಂತೋಷದ ಕ್ಷಣಗಳನ್ನು ಹಂಚಿಕೊಳ್ಳಿ. ಮತ್ತು ಕಷ್ಟದ ಸಮಯಗಳಲ್ಲಿಯೂ ಸಹ, ನಗಲು ಕಾರಣಗಳನ್ನು ಹುಡುಕಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ…
ಬೆಂಗಳೂರು: ರಾಜ್ಯಾಧ್ಯಂತ ಬಹುಮಹಡಿ ಕಟ್ಟಡಗಳಿಗೆ ಕ್ಲಿಯರೆನ್ಸ್ ಪತ್ರ ನೀಡಲು ಉಪ-ನಿರ್ದೇಶಕರು ಅವರುಗಳನ್ನು ಪರಿವೀಕ್ಷಣೆಗೆ ನಿಯೋಜಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ಸಮಾದೇಷ್ಟರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಬಹುಮಹಡಿ ಕಟ್ಟಡಗಳಿಗೆ ಕ್ಲಿಯರೆನ್ಸ್ ಪತ್ರ ನೀಡುವ ಸಲುವಾಗಿ ಪರಿವೀಕ್ಷಣೆ ಮಾಡಲು Round-robin ಪದ್ಧತಿಯಲ್ಲಿ ಮುಖ್ಯ ಅಗ್ನಿಶಾಮಕ ಅಧಿಕಾರಿಯವರುಗಳನ್ನು ಹೊರತುಪಡಿಸಿ ಉಪ ನಿರ್ದೇಶಕರು ರವರುಗಳನ್ನು ಮಾತ್ರ ನಿಯೋಜಿಸಲು ಸೂಚಿಸಲಾಗಿತ್ತು. ಸದರಿ ಉಲ್ಲೇಖಿತ ಸುತ್ತೋಲೆಯನ್ವಯ ಉಪ ನಿರ್ದೇಶಕರುಗಳು, ಬಹುಮಹಡಿ ಕಟ್ಟಡಗಳನ್ನು ಪರಿವೀಕ್ಷಿಸುವ ಸಲುವಾಗಿ ಕೇಂದ್ರಸ್ಥಾನವನ್ನು ಬಿಟ್ಟು ತೆರಳುತ್ತಿರುವುದರಿಂದ, ಕೇಂದ್ರ ಕಛೇರಿಯ ದೈನಂದಿನ ಕೆಲಸಗಳಿಗೆ ಅಡಚಣೆಯಾಗುತ್ತಿರುವುದನ್ನು ಗಮನಿಸಲಾಗಿದೆ ಎಂದಿದ್ದಾರೆ. ಆದುದರಿಂದ, ಆಡಳಿತಾತ್ಮಕ ದೃಷ್ಟಿಯಿಂದ ಈ ಮುಂಚೆ ಚಾಲ್ತಿಯಲ್ಲಿದ್ದಂತೆ ಮಂಗಳೂರು, ಮೈಸೂರು, ಹುಬ್ಬಳ್ಳಿ ಹಾಗೂ ಕಲಬುರಗಿ ಪ್ರಾಂತ್ಯದಲ್ಲಿ ಬಹುಮಹಡಿ ಕಟ್ಟಡಗಳಿಗೆ ಕ್ಲಿಯರೆನ್ಸ್ ಪತ್ರವನ್ನು ನೀಡುವ ಸಲುವಾಗಿ ಪರಿವೀಕ್ಷಣೆಗೆ ಆಯಾ ಮುಖ್ಯ ಅಗ್ನಿಶಾಮಕ ಅಧಿಕಾರಿಗಳನ್ನು ನಿಯೋಜಿಸುವುದು ಮತ್ತು ಬೆಂಗಳೂರು ನಗರದ ಬಹುಮಹಡಿ ಕಟ್ಟಡಗಳನ್ನು ಮಾತ್ರ Round-robin…
ಬೆಂಗಳೂರು: ರಾಜ್ಯದಲ್ಲೊಂದು ಅಪರೂಪದ ಮದುವೆ ಎನ್ನುವಂತೆ 19 ವರ್ಷದ ಯುವಕನನ್ನು ಯುವತಿಯೊಬ್ಬಳು ಮದುವೆಯಾಗಿದ್ದಳು. ಮನೆಯವರ ವಿರೋಧದ ನಡುವೆಯೂ ಈ ವಿವಾಹ ನಡೆದಿತ್ತು. ಆದರೇ ಇದೀಗ 19 ವರ್ಷದ ಯುವಕನನ್ನು ಬಾಲ್ಯ ವಿವಾಹವಾದಂತ ಯುವತಿಯ ವಿರುದ್ಧ ಕೇಸ್ ದಾಖಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಕುದೂರಲ್ಲಿ ಪರಸ್ಪರ ಪ್ರೀತಿಸುತ್ತಿದ್ದ 19 ವರ್ಷದ ಸೌಮ್ಯ ಹಾಗೂ 19 ವರ್ಷದ ವಸಂತ್ ವಿವಾಹವಾಗಿದ್ದಾರೆ. ಇಬ್ಬರ ಮದುವೆಗೆ ಯುವತಿ ಸೌಮ್ಯ ಮನೆಯವರಿಂದ ತೀರ್ವ ವಿರೋಧ ವ್ಯಕ್ತವಾಗಿದ್ದನ್ನು ತೆಕ್ಕಿಸದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಜುಲೈ.11ರಂದು ಮಾಗಡಿಯ ದೇಗುಲದಲ್ಲಿ ಇಬ್ಬರಿಗೂ ವಿವಾಹವಾಗಿತ್ತು. ಯುವತಿಗೆ 18 ವರ್ಷ, ಯುವಕನಿಗೆ 21 ವರ್ಷ ತುಂಬಿರಬೇಕು. ಹೀಗಿದ್ದರೂ 19 ವರ್ಷದ ಯುವತಿ ಮೇಜರ್ ಆಗಿದ್ದರೂ, ಯುವಕನಿಗೆ 21 ವರ್ಷ ಮದುವೆಯಾಗಲೂ ಕಡ್ಡಾಯವಾಗಿದೆ. ಈ ನಿಯಮ ಮೀರಿ ವಿವಾಹವಾದಂತ ಯುವತಿಯ ವಿರುದ್ಧ ಇದೀಗ ಕುದೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/pandit-m-venkatesh-kumar-receives-the-state-music-vidwan-award/ https://kannadanewsnow.com/kannada/breaking-cyber-attack-flight-service-disruptions-in-london-brussels-other-european-countries/
ಬೆಂಗಳೂರು: ಪ್ರತಿ ವರ್ಷ ನಾಡ ಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ. ಎಂ ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ದೇಶ ವಿದೇಶಗಳಲ್ಲಿ ತಮ್ಮ ಅದ್ಭುತ ಗಾಯನದ ಮೂಲಕ ಖ್ಯಾತರಾಗಿರುವ ಹಿಂದುಸ್ತಾನಿ ಸಂಗೀತ ದಿಗ್ಗಜರಲ್ಲಿ ಒಬ್ಬರೆನಿಸಿದ ಪಂ. ವೆಂಕಟೇಶ್ ಕುಮಾರ್ ಅವರ ಆಯ್ಕೆ ಅತ್ಯಂತ ಸಂತೋಷ ತಂದಿದೆ. ಸೆಪ್ಟೆಂಬರ್ 22ರಂದು ಮೈಸೂರಿನ ಅರಮನೆಯ ಮುಂಭಾಗದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಈ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಡಾ. ವೈ ಕೆ ಮುದ್ದುಕೃಷ್ಣ ಅವರ ಆಯ್ಕೆ ಸಲಹಾ ಸಮಿತಿ ಪಂ. ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ ಎಂದು ಅವರು ತಿಳಿಸಿದರು. ಈ ಪ್ರಶಸ್ತಿಯು ಐದು ಲಕ್ಷ ರೂಪಾಯಿ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ…
ದಾವಣಗೆರೆ: ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ಕೋರ್ಟ್ ಆವರಣದಲ್ಲೇ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ನಗರದ ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಇಂತಹ ಘಟನೆ ನಡೆದಿದೆ. ಪತ್ನಿಗೆ ಚಾಕುವಿನಿಂದ ಇರಿದ ಬಳಿಕ ತಾನೂ ಕೈಗೆ ಇರಿದುಕೊಂಡು ಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪತ್ನಿ ಪವಿತ್ರಾ ಮೇಲೆ ಪತಿ ಪ್ರವೀಣ್ ಚಾಕುವಿನಿಂದ ಇರಿದು ಹಲ್ಲೆಗೈದಿದ್ದಾನೆ. ಈ ಘಟನೆಯಲ್ಲಿ ಗಾಯಗೊಂಡ ಪತಿ ಪ್ರವೀಣ್, ಪತ್ನಿ ಪವಿತ್ರಾರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದಾವಣಗೆರೆಯ ಜಾಲಿನಗರದ ನಿವಾಸಿ ಪ್ರವೀಣ್ ಆಗಿದ್ದಾರೆ. ಬೆಂಗಳೂರು ಮೂಲದ ಪವಿತ್ರಾ ಜೊತೆ ಮದುವೆಯಾಗಿದ್ದರು. ಪರಸ್ಪರ ಪ್ರೀತಿಸಿ ಅಂತರ್ಜಾತಿ ವಿವಾಹವನ್ನು ಪ್ರವೀಣ್ ಹಾಗೂ ಪವಿತ್ರಾ ಆಗಿದ್ದರು. ಆದರೇ ಪತ್ನಿಯ ಶೀಲ ಶಂಕಿಸಿದ್ದ ಕಾರಣ ಕೆಲ ದಿನಗಳ ಹಿಂದೆ ಪತಿ ಪ್ರವೀಣ್ ತೊರೆದು ಪತ್ನಿ ಪವಿತ್ರಾ ಹೋಗಿದ್ದರು. ಇಂದು ನ್ಯಾಯಾಲಯದಲ್ಲಿ ವಿಚಾರಣೆ ಇರುವ ಕಾರಣ ಕೋರ್ಟ್ ಗೆ ಆಗಮಿಸಿದ್ದರು. https://kannadanewsnow.com/kannada/social-educational-survey-within-a-specified-time-limit-minister-shivraj-tangadagi/
ಬೆಂಗಳೂರು: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ನಿಗದಿತ ಕಾಲಮಿತಿಯಲ್ಲಿ ಸಮೀಕ್ಷೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ತಮ್ಮ ಗೃಹ ಕಚೇರಿ ಬಳಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ನಮ್ಮಲಿ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಇಲ್ಲ. ಒಂದು ತಿಂಗಳ ಮುಂಚಿತವಾಗಿಯೇ ಸಮೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಿದ್ದೇವೆ. ಈಗಾಗಲೇ ಇದಕ್ಕೆ ಬೇಕಾದ ಸಿದ್ಧತೆಗಳು ನಡೆದಿವೆ. ಅಕ್ಟೋಬರ್ ನಲ್ಲಿ ಸಮೀಕ್ಷೆ ಪೂರ್ಣಗೊಂಡು ಡಿಸೆಂಬರ್ ನಲ್ಲಿ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ವರದಿಯನ್ನ ಸರ್ಕಾರ ಜಾರಿ ಮಾಡುವ ಕೆಲಸವನ್ನು ಮಾಡಿಯೇ ಮಾಡುತ್ತದೆ ಎಂದು ಹೇಳಿದರು. ದೊಡ್ಡ ಕಾರ್ಯಕ್ಕೆ ಸರ್ಕಾರ ಕೈ ಹಾಕಿದ್ದು, ಇದು ನಮಗೆ ಸವಾಲಿನ ಕೆಲಸ ಕೂಡ. ಇದರಲ್ಲಿ ಯಶಸ್ವಿಯೂ ಕೂಡ ಆಗುತ್ತೇವೆ. ಯಾವುದೇ ಸವಾಲಿನ ಕೆಲಸಕ್ಕೆ ಕೈ ಹಾಕಿದರೆ ಸಣ್ಣ- ಪುಟ್ಟ ಲೋಪಗಳು ಸಹಜ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಆಯೋಗಕ್ಕೆ…







