Author: kannadanewsnow09

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿದ ಭ್ರಷ್ಟಾಚಾರ ಆರೋಪದ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ಸಿಬಿಐ ತನಿಖೆಗೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಸರ್ಕಾರದ ಮೇಲೆ 40% ಕಮಿಶನ್‌ನ ಗುರುತರ ಆರೋಪ ಮಾಡಿದ್ದಾರೆ. ಕಮಿಶನ್‌ ಕೊಡುವವರಿಗೆ ಬಿಲ್‌ ಪಾವತಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಸರ್ಕಾರ ಬಂದ ಆರಂಭದಿಂದಲೇ ಕಮಿಶನ್‌ ದಂಧೆ ಹಾಗೂ ಲೂಟಿ ನಡೆಯುತ್ತಿದೆ ಎಂದು ನಾವು ಕೂಡ ತಿಳಿಸಿದ್ದೆವು. ಲಂಚ ಕೊಡುತ್ತಿರುವವರ ಸಂಘದವರೇ ಹೇಳಿರುವುದರಿಂದ ಇದು ಲೂಟಿಕೋರ ಸರ್ಕಾರ, 75 ಪರ್ಸೆಂಟ್‌ ಸರ್ಕಾರ ಎಂಬುದು ಕಂಡುಬಂದಿದೆ. ತೆರಿಗೆ ಅಧಿಕಾರಿಗಳು ದಾಳಿ ಮಾಡಿದಾಗಲೂ ಕಾಂಗ್ರೆಸ್ ಬೆಂಬಲಿಗರ ಮನೆಗಳಲ್ಲಿ ಎರಡು ಕಡೆ ಐವತ್ತು- ಐವತ್ತು ಕೋಟಿ ಹಣ ಸಿಕ್ಕಿದೆ. ಇದು ಲೂಟಿ ಹೊಡೆದ ಹಣ ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷ್ಯ ಬೇಕು ಎಂದು ಪ್ರಶ್ನಿಸಿದರು. ಈ ಹಿಂದೆ ಐದು ರಾಜ್ಯಗಳ ಚುನಾವಣೆಗಾಗಿ ಲೂಟಿ…

Read More

ಮೈಸೂರು: ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ವೇಳೆ ಪ್ರತಿಷ್ಠಾಪನೆಯಾಗುತ್ತಿರೋ ಶ್ರೀರಾಮನ ಮೂರ್ತಿ ಯಾರು ಕೆತ್ತಿರೋದು ಎಂಬುದಾಗಿ ತೀವ್ರ ಕುತೂಹಲ ಪ್ರತಿಷ್ಠಾಪನೆಗೆ ಮುಂಚೆ ಇತ್ತು. ಅಂತಿಮವಾಗಿ ಕರ್ನಾಟಕದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರ ರಾಮಲಲ್ಲಾ ಮೂರ್ತಿ ಆಯ್ಕೆಯಾಗಿ ಪ್ರತಿಷ್ಠಾಪನೆ ಕೂಡ ಆಗಿದೆ. ಈಗ ಆ ಮೂರ್ತಿಯ ಕಣ್ಣುಗಳು ಹೊಳೆಯುತ್ತಿರೋ ಹಿಂದಿನ ಕಾರಣ ಕೂಡ ರಿವೀಲ್ ಆಗಿದೆ. ಅದೇನು ಅಂತ ಮುಂದೆ ಓದಿ. ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರಲ್ಲಿ ಸ್ಥಾಪನೆಯಾಗಿರೋ ರಾಮಲಲ್ಲಾ ಮೂರ್ತಿಯ ಬಗ್ಗೆಯೇ ಎಲ್ಲರ ಮಾತು. ಥೇಟ್ ಶ್ರೀರಾಮ ಚಂದ್ರನೇ ಇದ್ದಂತೆ ಇದೆ ಮೂರ್ತಿ. ಅದರಲ್ಲೂ ರಾಮಲಲ್ಲಾ ಮೂರ್ತಿಯ ಕಣ್ಣುಗಳಂತೂ ಹೊಳೆಯುತ್ತಿವೆ. ಅವುಗಳಲ್ಲಿ ಜೀವ ಕಳೆಯೇ ತುಂಬಿದೆ ಎಂಬುದಾಗಿ ವೀಕ್ಷಿಸಿದಂತ ಪ್ರತಿಯೊಬ್ಬರು ಹೇಳುತ್ತಿದ್ದಾರೆ. ಹಾಗಾದ್ರೇ ರಾಮಲಲ್ಲಾ ಮೂರ್ತಿಯ ಕಣ್ಣುಗಳು ಹೊಳೆಯುತ್ತಿರೋದು ಏಕೆ.? ಈ ಬಗ್ಗೆ ಶಿಲ್ಪಿ ಅರುಣ್ ಯೋಗಿರಾಜ್ ಸೀಕ್ರೇಟ್ ರಿವೀಲ್ ಮಾಡಿದ್ದಾರೆ. ಅಯೋಧ್ಯೆಯ ರಾಮಲಲ್ಲಾ ಮೂರ್ತಿಯ ಕಣ್ಣುಗಳನ್ನು ಚಿನ್ನ, ಬೆಳ್ಳಿಯ ಉಳಿಯಿಂದ ಕೆತ್ತನೆ ಮಾಡಿರೋದಾಗಿ ತಿಳಿಸಿದ್ದಾರೆ. ಚಿನ್ನದ ಉಳಿ, ಬೆಳ್ಳಿಯ ಸುತ್ತಿಗೆಯಿಂದ…

Read More

ಶಿವಮೊಗ್ಗ: ಮಕ್ಕಳ ಭವಿಷ್ಯದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಶೈಕ್ಷಣಿಕ ಸಾಲಿನಿಂದಲೇ ಅನ್ವಯಗೊಳ್ಳುವಂತೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ.ಮತ್ತು ಉನ್ನತ ಶಿಕ್ಷಣ ಹಾಗೂ ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿಶೇಷ ಕಲಿಕಾ ತರಗತಿಗಳನ್ನು ಸರ್ಕಾರದ ವತಿಯಿಂದಲೇ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು. ಅವರು ಇಂದು ತೀರ್ಥಹಳ್ಳಿಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ತೀರ್ಥಹಳ್ಳಿ, ಪಟ್ಟಣ ಪಂಚಾಯಿತಿ ತೀರ್ಥಹಳ್ಳಿ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಈ (ಕ್ರಾಶ್ ಕೋರ್ಸ್) ವಿಶೇಷ ತರಬೇತಿ ತರಗತಿಗಳಿಂದಾಗಿ ಜನಸಾಮಾನ್ಯ ಕುಟುಂಬದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅನುಕೂ¯ವಾಗಲಿದೆ ಅಲ್ಲದೆ ಅವರ ಕುಟುಂಬದ ಮುಖ್ಯಸ್ಥರಿಗೆ ಆರ್ಥಿಕವಾಗಿ ಸಹಕಾರಿಯಾಗಲಿದೆ ಎಂದರು. ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದವರ ಫಲಾನುಭವಿಗಳ ಸಮಾವೇಶ ಮಾತ್ರವಲ್ಲ, ಇದು ಸೌಲಭ್ಯ ವಂಚಿತರಿಗೆ ಸೌಲಭ್ಯ ಒದಗಿಸುವಲ್ಲಿಯೂ ಈ ವೇದಿಕೆ ನಿರ್ಮಾಣಗೊಂಡಿದ್ದು,…

Read More

ಬೆಂಗಳೂರು: ಕೇಂದ್ರದ ಬಿಜೆಪಿ ಸರಕಾರವು ತಮ್ಮ ಸಾಧನೆಯನ್ನು ಅಂಕಿಅಂಶಗಳ ಶ್ವೇತಪತ್ರದ ಮೂಲಕ ತಿಳಿಸಿದೆ. ಯುಪಿಎ ಅವಧಿಯ ‘ಆಡಳಿತ ರೋಡ್ ಟು ನೋವೇರ್’ ಆಗಿತ್ತು. ರಾಜಕೀಯ ಪ್ರೇರಿತ ಆಡಳಿತ ಅದಾಗಿತ್ತು. ಯುಪಿಎ ಬಿಟ್ಟು ಹೋದ ಆರ್ಥಿಕ ಗೊಂದಲ, ದಿಕ್ಕು ದೆಸೆ ಇಲ್ಲದ ಆಡಳಿತ, ಅವ್ಯವಸ್ಥೆಯನ್ನು ಸರಿಪಡಿಸಿ ಕಷ್ಟದ ಕಾಲದಿಂದ ಒಳ್ಳೆಯ ಕಾಲಕ್ಕೆ ದೇಶವನ್ನು ಒಯ್ದವರು ನರೇಂದ್ರ ಮೋದಿಜೀ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ವಿಶ್ಲೇಷಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇಂದ್ರದ ಎನ್‍ಡಿಎ ಸರಕಾರದ ಸಾಧನೆ ಮತ್ತು ಯುಪಿಎ ಸರಕಾರದ ವೈಫಲ್ಯಗಳ ಕುರಿತು ವಿವರಿಸಿದರು. ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ಸಿಗರು ಮಾತನಾಡುತ್ತಾರೆ. ವಾಜಪೇಯಿ ಅವರ ಆಡಳಿತ ಇದ್ದಾಗ ಹಣದುಬ್ಬರ- ಬೆಲೆ ಏರಿಕೆ ಶೇ 3.9ರಷ್ಟಿತ್ತು. ಕಾಂಗ್ರೆಸ್‍ನ 10 ವರ್ಷಗಳ ಅವಧಿಯಲ್ಲಿ ಅದು ಸರಾಸರಿ ಶೇ 8.2 ಆಗಿತ್ತು. ಕೋವಿಡ್ ಇದ್ದರೂ, ಜಾಗತಿಕ ಹಣಕಾಸಿನ ಬಿಕ್ಕಟ್ಟು, ಯುದ್ಧಗಳಿದ್ದರೂ ಮೋದಿಜೀ…

Read More

ಮೈಸೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಿರುವಂತ ಮೂರ್ತಿ, ಕರ್ನಾಟಕದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆಯ ಶ್ರೀರಾಮ ಚಂದ್ರನ ಮೂರ್ತಿಯಾಗಿದೆ. ಈ ರಾಮನ ಮೂರ್ತಿಯ ಕಣ್ಣುಗಳು ಮಾತ್ರ ಹೊಳೆಯುತ್ತಿವೆ. ಜೀವಕಳೆಯೇ ತುಂಬಿದೆ. ಅದರ ಹಿಂದಿನ ಕಾರಣವನ್ನು ಶಿಲ್ಪಿ ಅರುಣ್ ಯೋಗಿರಾಜ್ ರಿವೀಲ್ ಮಾಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಶಿಲ್ಪಿ ಅರುಣ್ ಯೋಗಿರಾಜ್ ಅವರು, ಅಯೋಧ್ಯೆಯ ರಾಮಮಂದಿರಲ್ಲಿ ಬಾಲರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಿರೋದಾಗಿ ತಿಳಿಸಿದ್ದಾರೆ. ಬಾಲ ರಾಮನ ಮೂರ್ತಿಯ ಕಣ್ಣುಗಳು ಹೊಳೆಯುತ್ತಿರೋದಕ್ಕೆ ಕಾರಣ, ಅವುಗಳನ್ನು ಚಿನ್ನ ಹಾಗೂ ಬೆಳ್ಳಿಯ ಉಳಿಯಿಂದ ಕೆತ್ತನೆ ಮಾಡಿದ್ದೇನೆ. ಹೀಗಾಗಿ ಜೀವ ಕಳೆ ಬಾಲ ರಾಮನ ಮೂರ್ತಿಯ ಕಣ್ಣುಗಳಲ್ಲಿ ಇದೆ ಎಂಬುದಾಗಿ ಚಿನ್ನ, ಬೆಳ್ಳಿಯ ಉಳಿಯ ಪೋಟೋಗಳೊಂದಿಗೆ ಪೋಸ್ಟ್ ಮಾಡಿ ತಿಳಿಸಿದ್ದಾರೆ. https://twitter.com/yogiraj_arun/status/1756235296646279616 https://kannadanewsnow.com/kannada/basavaraj-bommai-is-still-the-cm-of-karnataka-the-state-governments-website/ https://kannadanewsnow.com/kannada/basavaraj-bommai-is-still-the-cm-of-karnataka-the-state-governments-website/

Read More

ಬೆಂಗಳೂರು: ಪಕ್ಷ ಸಂಘಟನೆ ಮತ್ತು ಲೋಕಸಭಾ ಚುನಾವಣೆಯ ದೃಷ್ಟಿಯಿಂದ ರಾಷ್ಟ್ರದಾದ್ಯಂತ ರೈತ ಮೋರ್ಚಾ ವತಿಯಿಂದ ‘ಗ್ರಾಮ ಪರಿಕ್ರಮ ಯಾತ್ರೆ’ಯನ್ನು ಫೆಬ್ರವರಿ 12ರಿಂದ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ನಡಹಳ್ಳಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇದೇ ಫೆ. 12ರಂದು ಮಧ್ಯಾಹ್ನ 12.30ಕ್ಕೆ ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಜೀ ಅವರು ಈ ಯಾತ್ರೆಯನ್ನು ಉದ್ಘಾಟಿಸುವರು. ದೇಶದ ಎಲ್ಲ ಬಿಜೆಪಿ ಸಂಘಟನಾತ್ಮಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಉದ್ಘಾಟನೆ ನೆರವೇರಲಿದೆ. ದೇಶದ ಎಲ್ಲ ಸಂಘಟನಾತ್ಮಕ ಜಿಲ್ಲೆಗಳಲ್ಲಿ ಎಲ್‍ಇಡಿ ಮುಖಾಂತರ ರಾಷ್ಟ್ರೀಯ ಅಧ್ಯಕ್ಷರ ಉದ್ಘಾಟನೆ ಕಾರ್ಯಕ್ರಮದ ಪ್ರಸಾರ ಇರಲಿದೆ. ಅದರ ವೀಕ್ಷಣೆ ನಡೆಯಲಿದೆ ಎಂದರು. ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ ರಾಜ್‍ಕುಮಾರ್ ಚಾಹರ್ ಅವರು ಗ್ರಾಮ ಪರಿಕ್ರಮ ಯಾತ್ರೆ ಹಮ್ಮಿಕೊಳ್ಳಲು ತಿಳಿಸಿದ್ದು, ರಾಜ್ಯದ ನಾಲ್ಕೈದು ನಗರ ಪ್ರದೇಶ ಹೊರತುಪಡಿಸಿ ರಾಜ್ಯದ 32 ಸಂಘಟನಾತ್ಮಕ ಜಿಲ್ಲೆಗಳಲ್ಲಿ…

Read More

ಬೆಂಗಳೂರು: ಹತ್ತು ವರ್ಷ ಅನ್ಯಾಯ ಕಾಲ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತವನ್ನು ನರೇಂದ್ರ ಮೋದಿಯವರು ಮತ್ತು ಬಿಜೆಪಿಯ ನಾಯಕರು ‘’ಅಮೃತ ಕಾಲ’’ ಎಂದು ಬಣ್ಣಿಸುತ್ತಿದ್ದಾರೆ. ವಾಸ್ತವದಲ್ಲಿ ಇದು ಭಾರತದ ವಿನಾಶ ಕಾಲ. ಈ ಅವಧಿಯಲ್ಲಿ ದೇಶದ ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ಶೋಷಿತರು ಮತ್ತು ಜನಸಾಮಾನ್ಯರು ಎದುರಿಸುತ್ತಿರುವ ಕಷ್ಟ ಕಾರ್ಪಣ್ಯಗಳು ಐದರಿಂದ ಹತ್ತು ಪಟ್ಟು ಹೆಚ್ಚಾಗಿದೆ ಎಂದಿದ್ದಾರೆ. ಹತ್ತು ವರ್ಷಗಳ ಹಿಂದೆ ನರೇಂದ್ರ ಮೋದಿ ಅವರು ಈ ದೇಶದ ಮತದಾರರಿಗೆ ನೀಡಿದ್ದ ಒಂದೇ ಒಂದು ಭರವಸೆಯನ್ನು ಕೂಡ ಪೂರ್ಣ ಪ್ರಮಾಣದಲ್ಲಿ ಈಡೇರಿಸಿಲ್ಲ. ರೈತರ ಆದಾಯದ ದುಪ್ಪಟ್ಟು, ಯುವಜನರಿಗೆ ವಾರ್ಷಿಕ 2 ಕೋಟಿ ಉದ್ಯೋಗ, ಮಹಿಳೆಯರಿಗೆ ರಕ್ಷಣೆ, ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಶೋಷಿತ ಸಮುದಾಯಗಳಿಗೆ ರಕ್ಷಣೆ, ಅಗ್ಗದ ದರದಲ್ಲಿ ಅಗತ್ಯವಸ್ತುಗಳ ಪೂರೈಕೆ ಮೊದಲಾದ ಬಣ್ಣಬಣ್ಣದ ಭರವಸೆಗಳನ್ನು ನೀಡಿ…

Read More

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶಾಲಾ ಕ್ರೀಡಾಕೂಟದಲ್ಲಿ ಉಂಟಾದಂತ ಭೀಕರ ವಿದ್ಯುತ್ ಅವಘಡದಿಂದಾಗಿ ಓರ್ವ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿರೋ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ಶಾರದಾ ಶಾಲೆಯಲ್ಲಿ ಶಾಲಾ ಕ್ರೀಢಾಕೂಟವನ್ನು ಆಯೋಜಿಸಲಾಗಿತ್ತು. ಈ ವೇಳೆಯಲ್ಲಿ ವಿದ್ಯುತ್ ಅವಘಡ ಉಂಟಾಗಿ, ಓರ್ವ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಶಾಲಾ ಕ್ರೀಡಾಕೂಟದಲ್ಲಿ ಮೃತಪಟ್ಟಂತ ವ್ಯಕ್ತಿಯನ್ನು ನಾಗೇನಹಳ್ಳಿಯ ನಿವಾಸಿ ರಾಘವೇಂದ್ರ ಎಂಬುದಾಗಿ ಗುರುತಿಸಲಾಗಿದೆ. ಗಾಯಗೊಂಡಿರುವಂತ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/%e0%b2%b8%e0%b2%b0%e0%b3%8d%e0%b2%95%e0%b2%be%e0%b2%b0%e0%b2%a6-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a7-%e0%b2%95%e0%b2%ae%e0%b2%bf%e0%b2%b7%e0%b2%a8%e0%b3%8d-%e0%b2%86/ https://kannadanewsnow.com/kannada/basavaraj-bommai-is-still-the-cm-of-karnataka-the-state-governments-website/

Read More

ಬೆಂಗಳೂರು: ಎಚ್‌ಸಿಜಿ ಕ್ಯಾನ್ಸರ್‌ ಆಸ್ಪತ್ರೆಯು ವಿಶ್ವ ಕ್ಯಾನ್ಸರ್‌ ದಿನದ ಅಂಗವಾಗಿ ಕ್ಯಾನ್ಸರ್‌ ಆರಂಭಿಕ ತಪಾಸಣೆಯ ಪ್ರಾಮುಖ್ಯತೆಯನ್ನು ಸಾರಲು ರಂಗೋಲಿ ಮೆಟ್ರೋ ಆರ್ಟ್‌ ಸೆಂಟರ್‌ನಲ್ಲಿ ವಿಶ್‌-ವಾಲ್‌ನಲ್ಲಿ ಸಂದೇಶ ಬರೆಯುವುದು, ಇನ್ಫೋಗ್ರಾಫಿಕ್ಸ್ ಮತ್ತು ಪೋಸ್ಟರ್‌ಗಳ ಮೂಲಕ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹೆಲ್ತ್‌ಕೇರ್ ಗ್ಲೋಬಲ್ ಎಂಟರ್ಪ್ರೈಸಸ್ ಲಿಮಿಟೆಡ್‌ನ ಕರ್ನಾಟಕ ಪ್ರಾದೇಶಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಷಾ ಕುಮಾರ್, ಕ್ಯಾನ್ಸರ್‌ನನ್ನು ಪ್ರಾರಂಭದಲ್ಲಿಯೇ ಪತ್ತೆ ಹಚ್ಚುವುದು ಅನಿವಾರ್ಯ. ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಎಚ್‌ಸಿಜಿ ಆಸ್ಪತ್ರೆಯ ಸಿಬ್ಬಂದಿಯು ಮೆಟ್ರೋ ಆರ್ಟ್‌ ಸೆಂಟರ್‌ನಲ್ಲಿ ಮಾನವ ಸರಪಳಿ ರಚಿಸಿ, ಇನ್ಫೋಗ್ರಾಫಿಕ್ಸ್ ಮತ್ತು ಪೋಸ್ಟರ್‌ಗಳನ್ನು ಪ್ರದರ್ಶಿಸಿದರು. ಜೊತೆಗೆ, ಕ್ಯಾನ್ಸರ್‌ ರೋಗಿಗಳಿಗೆ ಶುಭಾರೈಸಲು “ವಿಶ್‌-ವಾಲ್‌”ನನ್ನು ಸಹ ಇಡಲಾಗಿತ್ತು. ಸಾಕಷ್ಟು ಜನರು ಆಗಮಿಸಿ, ಕ್ಯಾನ್ಸರ್‌ ರೋಗಿಗಳಿಗೆ ಧೈರ್ಯ ತುಂಬುವ ಸಂದೇಶಗಳನ್ನು ವಿಶ್‌-ವಾಲ್‌ನಲ್ಲಿ ಬರೆದರು. ಈ ಮೂಲಕ ಕ್ಯಾನ್ಸರ್‌ ರೋಗಿಗಳಿಗೂ ಆತ್ಮಸ್ಥೈರ್ಯ ತುಂಬಿದಂತಾಯಿತು ಎಂದರು. ಕ್ಯಾನ್ಸರ್‌ ರೋಗವನ್ನು ಪ್ರಾರಂಭದಲ್ಲಿಯೇ ಪತ್ತೆ ಹಚ್ಚಿದರೆ ಅದನ್ನು ಯಶಸ್ವಿಯಾಗಿ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಬಹುದು, ಹೀಗಾಗಿ ಪ್ರಾರಂಭಿಕ ಪತ್ತೆಯ…

Read More

ಮಂಗಳೂರು: ಜಿಲ್ಲೆಯ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಅಯೋಧ್ಯೆ, ರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು, ಹಿಂದೂಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವಂತ ಪ್ರಭಾ ಎಂಬುವರು, ಶ್ರೀರಾಮನ ಬಗ್ಗೆ, ಅಯೋಧ್ಯೆಯ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಷಯವನ್ನು ಶಾಲಾ ಮಕ್ಕಳು ಪೋಷಕರಿಗೆ ತಿಳಿಸಿದಾಗ, ಶಾಲೆಯ ಬಳಿ ಆಗಮಿಸಿದಂತ ಪೋಷಕರು, ಹಿಂದೂ ಪರ ಕಾರ್ಯಕರ್ತರು ಶಿಕ್ಷಕಿಯ ವಿರುದ್ಧ ಆಕ್ರೋಶವನ್ನು ಹೊರ ಹಾಕಿದ್ದಾರೆ. ಇನ್ನೂ ಜೆರೋಸಾ ಶಾಲೆಯ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ಹೊರ ಹಾಕಿರುವಂತ ಹಿಂದೂ ಕಾರ್ಯಕರ್ತರು, ಶಿಕ್ಷಕಿ ಪ್ರಭಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಇದೀಗ ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು ಪರಿಸ್ಥಿತಿ ನಿಯಂತ್ರಿಸೋದಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. https://kannadanewsnow.com/kannada/blood-d-k-afraid-of-the-threat-of-bullets-suresh-is-not-flowing-in-his-body-deputy-cm-dk-shivakumar-shivakumar/ https://kannadanewsnow.com/kannada/%e0%b2%b8%e0%b2%b0%e0%b3%8d%e0%b2%95%e0%b2%be%e0%b2%b0%e0%b2%a6-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a7-%e0%b2%95%e0%b2%ae%e0%b2%bf%e0%b2%b7%e0%b2%a8%e0%b3%8d-%e0%b2%86/

Read More