Author: kannadanewsnow09

ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಾಪಾಸಾದ ನಂತ್ರ ಅಭಿಮಾನಿಗಳು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು, ನಮ್ಮ ಪಕ್ಷದಿಂದ ಬೆಳೆದವರೇ ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿದ್ದಾರೆ ಎಂಬುದಾಗಿ ಗಳಗಳ ಅಂತ ಕಣ್ಣೀರಿಟ್ಟು ಭಾವುಕರಾಗಿ ನುಡಿದ ಘಟನೆ ನಡೆದಿದೆ. ಬೆಂಗಳೂರಿನ ಜೆಪಿ ನಗರದಲ್ಲಿರುವಂತ ಅವರ ನಿವಾಸಕ್ಕೆ ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಭೇಟಿ ನೀಡಿ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯವನ್ನು ವಿಚಾರಿಸಿದರು. ಈ ವೇಳೆ ಮಾತನಾಡಿದಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ನಾನೂ ಆ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದರು. ನನಗೆ ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ಇದೀಗ 25 ಲಕ್ಷ ರೂ ಮೌಲ್ಯದ ಸ್ಟಂಚ್ ಅಳವಡಿಸಿದ್ದಾರೆ. ನಮ್ಮ ಪಕ್ಷದಿಂದ ಬೆಳೆದವರೇ ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿದ್ದಾರೆ ಎಂದು ಹೇಳುವ ಮೂಲಕ ಗಳಗಳ ಅಂತ ಕಣ್ಣೀರಿಟ್ಟು ಭಾವುಕರಾಗಿ ನುಡಿದರು. https://kannadanewsnow.com/kannada/navodaya-vidyalaya-recruitment-2019-navodaya-vidyalaya-invites-applications-for-1377-non-teaching-posts/ https://kannadanewsnow.com/kannada/sonu-gowda-illegally-adopted-child-police-conduct-spot-mahazar/

Read More

ಬೆಂಗಳೂರು: ಬಿಜೆಪಿ ಪಕ್ಷದಿಂದ ದೂರವಾಗಿ, ಸ್ವಂತ ಪಕ್ಷ ಕಟ್ಟಿ ಆ ಪಕ್ಷದಿಂದಲೇ ಗೆಲುವು ಸಾಧಿಸಿದ್ದಂತ ಮಾಜಿ ಸಚಿವ ಜನಾರ್ಧನರೆಡ್ಡಿ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಜನಾರ್ಧನ ರೆಡ್ಡಿ ಶೀಘ್ರವೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಕೆ ಆರ್ ಪಿಪಿ ಪಕ್ಷವನ್ನು ಸ್ಥಾಪಿಸಿ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದು, ಜನಾರ್ಧನ ರೆಡ್ಡಿ ಕಣಕ್ಕೆ ಇಳಿಸಿದ್ದರು. ಗೆಲುವು ಕೂಡ ಸಾಧಿಸಿದ್ದರು. ಇಂತಹ ಅವರು ಲೋಕಸಭಾ ಚುನಾವಣೆಯ ಹೊತ್ತಲ್ಲೇ ಬಿಜೆಪಿ ಸೇರ್ಪಡೆಗೆ ತಯಾರಿ ನಡೆಸಲಾಗಿತ್ತು. ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿದ್ದಂತ ಜನಾರ್ಧನ ರೆಡ್ಡಿ ಅವರು, ಅಂತಿಮ ಸುತ್ತಿನ ಮಾತುಕತೆಯನ್ನು ನಡೆಸಿದ್ದರು. ಈ ಬಳಿಕ ಜನಾರ್ಧನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಹಸಿರು ನಿಶಾನೆಯನ್ನು ತೋರಿರೋದಾಗಿ ತಿಳಿದು ಬಂದಿದೆ. ಇನ್ನೂ ಮಾರ್ಚ್.25ರ ನಾಳೆ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಶಾಸಕ ಜನಾರ್ಧನ ರೆಡ್ಡಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ. https://kannadanewsnow.com/kannada/chandrayaan-3-landing-site-name-shiva-shakti-gets-iau-nod/…

Read More

ಬೆಂಗಳೂರು: ಚಂದ್ರಯಾನ -3 ಇಳಿಯುವ ಸ್ಥಳವನ್ನು ‘ಶಿವ ಶಕ್ತಿ’ ಎಂದು ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಸುಮಾರು ಏಳು ತಿಂಗಳ ನಂತರ, ಅಂತರರಾಷ್ಟ್ರೀಯ ಖಗೋಳ ಒಕ್ಕೂಟ (ಐಎಯು) ಮಾರ್ಚ್ 19 ರಂದು ಹೆಸರನ್ನು ಅನುಮೋದಿಸಿದೆ. ಐಎಯು ಅನುಮೋದಿಸಿದ ಗ್ರಹಗಳ ಹೆಸರುಗಳ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸುವ ಗೆಜೆಟಿಯರ್ ಆಫ್ ಪ್ಲಾನೆಟರಿ ನಾಮಕರಣದ ಪ್ರಕಾರ: “ಚಂದ್ರಯಾನ -3 ರ ವಿಕ್ರಮ್ ಲ್ಯಾಂಡರ್ನ ಲ್ಯಾಂಡಿಂಗ್ ಸೈಟ್ಗೆ ಪ್ಲಾನೆಟರಿ ಸಿಸ್ಟಮ್ ನಾಮಕರಣಕ್ಕಾಗಿ ಐಎಯು ಕಾರ್ಯ ಗುಂಪು ಸ್ಟ್ಯಾಟಿಯೊ ಶಿವ ಶಕ್ತಿ ಹೆಸರನ್ನು ಅನುಮೋದಿಸಿದೆ.” ಆಗಸ್ಟ್ 23, 2023 ರಂದು ವಿಕ್ರಮ್ ಐತಿಹಾಸಿಕ ಚಂದ್ರನ ಮೇಲೆ ಇಳಿದ ಮೂರು ದಿನಗಳ ನಂತರ ಬೆಂಗಳೂರಿನ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ (ಇಸ್ಟ್ರಾಕ್) ನಲ್ಲಿ ಮೋದಿ ಈ ಘೋಷಣೆ ಮಾಡಿದ್ದರು. “… ಶಿವನಲ್ಲಿ, ಮಾನವೀಯತೆಯ ಕಲ್ಯಾಣಕ್ಕಾಗಿ ಸಂಕಲ್ಪವಿದೆ ಮತ್ತು ಆ ಸಂಕಲ್ಪಗಳನ್ನು ಪೂರೈಸಲು ಶಕ್ತಿ ನಮಗೆ ಶಕ್ತಿಯನ್ನು ನೀಡುತ್ತದೆ. ಚಂದ್ರನ ಈ ಶಿವಶಕ್ತಿ ಬಿಂದುವು…

Read More

ನವದೆಹಲಿ: ಪ್ರತಿಪಕ್ಷ ‘ಇಂಡಿಯಾ’ ಬಣವು ಮಾರ್ಚ್ 31 ರಂದು ಮೆಗಾ ರ್ಯಾಲಿಯನ್ನು ನಡೆಸಲಿದೆ ಎಂದು ದೆಹಲಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಗೋಪಾಲ್ ರಾಯ್ ಭಾನುವಾರ ಪ್ರಕಟಿಸಿದ್ದಾರೆ. ವಿರೋಧ ಪಕ್ಷಗಳು ಮುಖ್ಯಮಂತ್ರಿಯ ಬಂಧನದ ವಿರುದ್ಧ ಮಾತ್ರವಲ್ಲ, ಕೇಂದ್ರದ ಸರ್ವಾಧಿಕಾರಿ ಆಡಳಿತದ ವಿರುದ್ಧವೂ ಇವೆ” ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ಅರವಿಂದರ್ ಸಿಂಗ್ ಲವ್ಲಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಸಚಿವರು, ಸಿಎಂ ಕೇಜ್ರಿವಾಲ್ ಬಂಧನವನ್ನು ವಿರೋಧಿಸಿ ಮಾರ್ಚ್ 31 ರಂದು ರಮೀಲಾ ಮೈದಾನದಲ್ಲಿ ಮೆಗಾ ರ್ಯಾಲಿ ನಡೆಸಲು ಯೋಜಿಸಿದ್ದಾರೆ ಎಂದು ಮಾಹಿತಿ ನೀಡಿದರು. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್ 10 ದಿನಗಳ ಕಾಲ ಅವರನ್ನು ಇಡಿ ವಶಕ್ಕೆ ನೀಡಿ ಆದೇಶಿಸಿತ್ತು. ಇದೀಗ ಇಡಿ ಬಂಧನ ಖಂಡಿಸಿ ವಿಪಕ್ಷಗಳ ನಾಯಕರ ಒಕ್ಕೂಟ ಇಂಡಿಯಾ ಬಣದಿಂದ ಮಾರ್ಚ್.31ರಂದು ಪ್ರತಿಭಟನೆ ಕರೆ ನೀಡಲಾಗಿದೆ.…

Read More

ಮೈಸೂರು: ಮೋದಿ ಹೇಳಿದ್ದೆಲ್ಲ ಸುಳ್ಳು. ಉದ್ಯೋಗ ಸೃಷ್ಠಿ ಮಾಡ್ತೀವಿ, 15 ಲಕ್ಷ ಹಣ ಕೊಡ್ತೀವಿ ಅಂತೆಲ್ಲ ಹೇಳಿದ್ರು. ಆದ್ರೇ ಒಂದೇ ಒಂದು ನೀಡಿದ ಭರವಸೆ ಈಡೇರಿಸಲಿಲ್ಲ ಎಂಬುದಾಗಿ ಸರಣಿ ಪ್ರಶ್ನೆಗಳ ಮೂಲಕ ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿಯವರು ಚುನಾವಣೆ ಸಂದರ್ಭದಲ್ಲಿ  600 ಭರವಸೆ ನೀಡಿದ್ದರು. 600 ಭರವಸೆಗಳಲ್ಲಿ ಶೇ.10ರಷ್ಟು ಭರವಸೆಗಳನ್ನು ನೀಡಿಲ್ಲ ಎಂದರು. ಮೋದಿ 15 ಲಕ್ಷ ಹಾಕುತ್ತೇವೆ ಅಂತ ಭರವಸೆ ನೀಡಿದ್ರು ಕೊಟ್ರಾ.? 2 ಕೋಟಿ ಉದ್ಯೋಗದ ಭರವಸೆ ನೀಡಿದ್ರು ಕೊಟ್ರಾ? ರೈತರ ಆದಾಯ ಡಬ್ಬಲ್ ಮಾಡ್ತೀವಿ ಅಂದಿದ್ದರು ಮಾಡಿದ್ರಾ.? ಎಂಬುದಾಗಿ ಸರಣಿ ಪ್ರಶ್ನೆಗಳನ್ನು ಕೇಳುವ ಮೂಲಕ ಮೋದಿ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದರು. https://kannadanewsnow.com/kannada/navodaya-vidyalaya-recruitment-2019-navodaya-vidyalaya-invites-applications-for-1377-non-teaching-posts/ https://kannadanewsnow.com/kannada/sonu-gowda-illegally-adopted-child-police-conduct-spot-mahazar/

Read More

ಶಿವಮೊಗ್ಗ: ನಗರದ ಬಸ್ ನಿಲ್ದಾಣದಲ್ಲೇ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೆ ಎಸ್ ಆರ್ ಟಿಸಿ ಕಂಡಕ್ಟರ್ ಕಂ ಡ್ರೈವರ್ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಶಿವಮೊಗ್ಗ ಸಾರಿಗೆ ಬಸ್ ನಿಲ್ದಾಣದಲ್ಲೇ ಹೊನ್ನಾಳಿ ಡಿಪೋದಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದಂತ ಬಸವರಾಜ್(38) ಎಂಬುವರು ವಿಷ ಸೇವಿಸಿ ಬಸ್ಸಲ್ಲೇ ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ. ಬಸ್ಸಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಬಸವರಾಜ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿರೋಗಾಗಿ ತಿಳಿದು ಬಂದಿದೆ. ಅಂದಹಾಗೇ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತೆ ಆತ್ಮಹತ್ಯೆಗೆ ಯತ್ನಿಸಿದಂತ ಬಸವರಾಜ್ 10 ವರ್ಷಗಳಿಂದ ಕೆಎಸ್ಆರ್ ಟಿಸಿಯಲ್ಲಿ ಕಂಡಕ್ಟರ್ ಕಂ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರ ವಿರುದ್ಧ ದಾಖಲಾಗಿದ್ದಂತ ಕೇಸ್ ಸಂಬಂಧ ವಿಚಾರಣೆಗೆ ಕರೆಸಿಕೊಂಡಿದ್ದಂತ ಹೊನ್ನಾಳಿ ಡಿಪೋದ ಅಧಿಕಾರಿಗಳು ಕಿರುಕುಳ ನೀಡಿದ್ದರು ಎನ್ನಲಾಗಿದೆ. ಈ ಹಿನ್ನಲೆಯಲ್ಲೇ ಬೇಸತ್ತು ಅವರು ಆತ್ಮಹತ್ಯೆಗೆ ಯತ್ನಿಸಿರೋದಾಗಿ ಹೇಳಲಾಗುತ್ತಿದೆ. https://kannadanewsnow.com/kannada/navodaya-vidyalaya-recruitment-2019-navodaya-vidyalaya-invites-applications-for-1377-non-teaching-posts/ https://kannadanewsnow.com/kannada/sonu-gowda-illegally-adopted-child-police-conduct-spot-mahazar/

Read More

ರಾಯಚೂರು: ಕಾನು ಬಾಹಿರವಾಗಿ ಮಗುವನ್ನು ದತ್ತು ಪಡೆದಂತ ಪ್ರಕರಣದಲ್ಲಿ ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನು ಶ್ರೀನಿವಾಸಗೌಡ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಬಳಿಕ ವಶಕ್ಕೆ ಪಡೆದಿರುವಂತ ಅವರು, ಸ್ಥಳ ಮಹಜರ್ ನಡೆಸುತ್ತಿದ್ದಾರೆ. ಇಂದು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ರೀಲ್ಸ್ ಖ್ಯಾತಿಯ ಸೋನುಗೌಡ ಅವರು ಕರೆದೊಯ್ದಿದ್ದಾರೆ. ಅಲ್ಲಿ ಬಾಲಕಿ ಚಿಕ್ಕಪ್ಪ ಮನೆಗೆ ಬೇಟಿ ನೀಡಿದ್ದು, ಮಗು ದತ್ತು ಪಡೆದ ಬಗ್ಗೆ ಸ್ಥಳ ಮಹಜರು ನಡೆಸಿ, ಮಾಹಿತಿ ಪಡೆದಿದ್ದಾರೆ. ಸ್ಥಳ ಮಹಜರು ವೇಳೆಯಲ್ಲಿ ಕಾಚಾಪುರ ಗ್ರಾಮಸ್ಥರು ಕಾನೂನು ಬಾಹಿರವಾಗಿ ಮಗುವನ್ನು ದತ್ತುಪಡೆದಂತ ಸೋನು ಗೌಡ ವಿರುದ್ಧ ಆಕ್ರೋಶ ಹೊರಹಾಕಿದರು. ಅಲ್ಲದೇ ಅವರು ಆಗಮಿಸಿದ್ದಂತ ಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ, ಗಲಾಟೆ ಕೂಡ ನಡೆಸಿದ್ದಾರೆ ಎನ್ನಲಾಗಿದೆ. https://kannadanewsnow.com/kannada/navodaya-vidyalaya-recruitment-2019-navodaya-vidyalaya-invites-applications-for-1377-non-teaching-posts/ https://kannadanewsnow.com/kannada/%e0%b2%a6%e0%b3%87%e0%b2%b6%e0%b2%a6-%e0%b2%87%e0%b2%a4%e0%b2%bf%e0%b2%b9%e0%b2%be%e0%b2%b8%e0%b2%a6%e0%b2%b2%e0%b3%8d%e0%b2%b2%e0%b3%87-%e0%b2%87%e0%b2%a6%e0%b3%87-%e0%b2%ae%e0%b3%8a%e0%b2%a6/

Read More

ಬೆಂಗಳೂರು: ಇಂದು ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ಕಾಯ್ದಿರಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯ ತೀರ್ಪು ಪ್ರಕಟಿಸಲಾಗಿತ್ತು. ಈ ತೀರ್ಪಿನಲ್ಲಿ ಬಾಕಿ ಪರೀಕ್ಷೆ ನಡೆಸೋದಕ್ಕೆ ಶಿಕ್ಷಣ ಇಲಾಖೆಗೆ ಅನುಮತಿ ನೀಡಿತ್ತು. ಹೀಗಾಗಿ ಮಾರ್ಚ್.25ರಿಂದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಪುನರಾರಂಭಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿತ್ತು. ಈ ಬೆನ್ನಲ್ಲೇ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಮಾಹಿತಿ ನೀಡಿದ್ದು, ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಎಸ್.ಎಲ್.ಪಿ ಸಂಖ್ಯೆ: 6256/2024, ಎಸ್.ಎಲ್.ಪಿ ಸಂಖ್ಯೆ: 6257/2024 ಮತ್ತು ಡೈರಿ ಸಂಖ್ಯೆ: 11192/2024 ದಾವಗಳನ್ನು ಹೂಡಿದ್ದು, ಸದರಿ ದಾವೆಗಳನ್ನು ವಿಚಾರಣೆ…

Read More

ಬೆಂಗಳೂರು: ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದಂತ 5, 8 ಮತ್ತು 9ನೇ ತರಗತಿ ಪರೀಕ್ಷೆ ಸ್ಥಗಿತಗೊಂಡಿತ್ತು. ಈ ಪರೀಕ್ಷೆ ಸಂಬಂಧ ಹೈಕೋರ್ಟ್ ಕಾಯ್ದಿರಿಸಿದ್ದಂತ ತೀರ್ಪನ್ನು ಇಂದು ಪ್ರಕಟಿಸಿ, ಮುಂದುವರೆಸೋದಕ್ಕೆ ಅನುಮತಿ ನೀಡಿತ್ತು. ಈ ಹಿನ್ನಲೆಯಲ್ಲಿ ಸೋಮವಾರದಿಂದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಪ್ರಾರಂಭವಾಗಲಿದೆ. ಇದಕ್ಕಾಗಿ ಶೀಘ್ರವೇ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವಂತ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನಲ್ಲಿ ಸಂಕಲನಾತ್ಮಕ ಮೌಲ್ಯಾಮಾಪನ-2 ಅಂದರೇ ಎಸ್ಎ-2 ನಡೆಸೋದಕ್ಕೆ ನಿರ್ಧರಿಸಲಾಗಿತ್ತು ಎಂದಿದ್ದಾರೆ. ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಪರೀಕ್ಷೆಯನ್ನು ರದ್ದುಪಡಿಸಿ ಆದೇಶಿ, ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮಧ್ಯಂತರ ಅರ್ಜಿಗಳ ವಿಚಾರಣೆ ಸೂಚಿಸಿತ್ತು. ಆ…

Read More

ನಾವು ನಮ್ಮ ಮಕ್ಕಳನ್ನು ಒಳ್ಳೆಯ ಶಾಲೆಗಳಲ್ಲಿ ಓದುವಂತೆ ಮಾಡುತ್ತೇವೆ, ಇದರಿಂದ ನಾವು ಕಷ್ಟಪಟ್ಟರೂ ಅವರು ಓದಬಹುದು ಮತ್ತು ಉತ್ತಮ ಅಂಕಗಳನ್ನು ಪಡೆಯುತ್ತಾರೆ. ಪ್ರಸ್ತುತ ಸನ್ನಿವೇಶದಲ್ಲಿ ಎಲ್ಲಾ ಮಕ್ಕಳು ಒಳ್ಳೆಯ ಮತ್ತು ಬುದ್ಧಿವಂತ ಮಕ್ಕಳು ಮತ್ತು ಓದುವ ಮಕ್ಕಳು. ಆದರೆ ಕೆಲವು ಮಕ್ಕಳು ಪರೀಕ್ಷೆಯ ಸಮಯದಲ್ಲಿ ಓದುವುದೆಲ್ಲವನ್ನೂ ಮರೆತುಬಿಡುತ್ತಾರೆ. ಕೆಲವು ಮಕ್ಕಳು ಯಾವಾಗಲೂ ಸ್ವಲ್ಪ ಜಡವಾಗಿರುತ್ತಾರೆ. ಇದು ಬದಲಾಗಬೇಕಾದರೆ ಸರಸ್ವತಿ ದೇವಿಯ ಕೃಪೆಗೆ ಪಾತ್ರರಾಗಬೇಕು. ಆ ಕೃಪೆಯನ್ನು ಪರಿಪೂರ್ಣವಾಗಿ ಪಡೆಯಲು ಈ ಒಂದು ಸಾಲಿನ ಮಂತ್ರ ಸಾಕು ಎನ್ನುತ್ತದೆ ಆಧ್ಯಾತ್ಮಿಕತೆ . ಈ ಪೋಸ್ಟ್‌ನಲ್ಲಿ, ಮಂತ್ರ ಯಾವುದು ಮತ್ತು ಅದನ್ನು ಹೇಗೆ ಹೇಳಬೇಕೆಂದು ನೀವು ವಿವರವಾಗಿ ನೋಡಬಹುದು. ತಮ್ಮ ಮಕ್ಕಳು ಚೆನ್ನಾಗಿ ಓದಿ ಉತ್ತಮ ಸ್ಥಾನದಲ್ಲಿರಬೇಕು ಎಂಬುದು ಪೋಷಕರ ದೊಡ್ಡ ಕನಸು. ಇಂದು ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಹೊಂದಲು ಬೆಳಿಗ್ಗೆಯಿಂದ ಸಂಜೆಯವರೆಗೆ ದಣಿವರಿಯಿಲ್ಲದೆ ಶ್ರಮಿಸುತ್ತಾರೆ. ಅದಕ್ಕೆ ಆಧಾರವೆಂದರೆ ಅವರು ಉತ್ತಮ ಶಿಕ್ಷಣ ಪಡೆಯಬೇಕು. ಈ ಶಿಕ್ಷಣ ಪಡೆಯಲು ನಮ್ಮ ದೊಡ್ಡ ಶಾಲೆಗಳಿಗೆ ಸೇರಿಸಿದರೆ ಸಾಕಾಗುವುದಿಲ್ಲ.…

Read More