Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸೆ 19 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00ರವರೆಗೆ ಸಾಗರ ತಾಲೂಕು ಕಚೇರಿ ಸಭಾಂಗಣದಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ. ಸಾರ್ವಜನಿಕರು ಈ ಸಭೆಗೆ ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ಸರ್ಕಾರಿ ಹಣ/ಅಧಿಕಾರ ದುರುಪಯೋಗ, ಕಳಪೆ ಕಾಮಾಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿ ಸಂಪಾದನೆ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ಲಿಖಿತವಾಗಿ ಅಹವಾಲು ಸಲ್ಲಿಸಬಹುದೆಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ. https://kannadanewsnow.com/kannada/transport-minister-ramalinga-reddy-takes-significant-measures-for-the-safety-of-bus-passengers-1000-cctv-cameras-installed-within-nwkrtc-jurisdiction/ https://kannadanewsnow.com/kannada/new-organ-in-human-body-that-can-change-cancer-treatment-discovered-after-300-years/
ಬೆಂಗಳೂರು: NWKRTC ವ್ಯಾಪ್ತಿಯ ಘಟಕ/ ವಿಭಾಗಗಳು, ಕಾರ್ಯಾಗಾರ ಮತ್ತು ಬಸ್ ನಿಲ್ದಾಣಗಳಲ್ಲಿ 1000 ಸಿಸಿಟಿವಿ ಅಳವಡಿಕೆ ಮಾಡಿರುವ ರಾಜ್ಯದ ಮೊದಲ ರಸ್ತೆ ಸಾರಿಗೆ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮೂಲಕ ಸಾರಿಗೆ ಬಸ್ ಪ್ರಯಾಣಿಕರ ಸುರಕ್ಷತೆಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಪ್ರಯಾಣಿಕರ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಸುಮಾರು 141 ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದಿದ್ದಾರೆ. ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ ಹಾಗೂ ಉತ್ತರ ಕನ್ನಡ ಸೇರಿದಂತೆ ಆರು ಜಿಲ್ಲೆಗಳು ಮತ್ತು ಒಂಬತ್ತು ವಿಭಾಗೀಯ ಕೇಂದ್ರಗಳನ್ನು ಒಳಗೊಂಡಿದೆ. ಸಾವಿರಾರು ಪ್ರಯಾಣಿಕರು ಪ್ರತಿದಿನ ಸಾರಿಗೆ ಸೇವೆಯನ್ನು ಬಳಸುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಸರ್ಕಾರ ಒದಗಿಸಿದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆ ಸಹಜವಾಗಿ ಹೆಚ್ಚಾಗಿದೆ.ಇದಲ್ಲದೆ, ಕೆಲವು ಬಸ್ ನಿಲ್ದಾಣಗಳಲ್ಲಿ ಕಳ್ಳತನ, ಮೊಬೈಲ್ ಕಳವು, ಸರಕು ನಾಪತ್ತೆ ಕುರಿತು ದೂರುಗಳು ದಾಖಲಾಗಿದ್ದವು.…
ಬೆಳಗಾವಿ: ಇಲ್ಲಿನ ಚಿಕ್ಕೋಡಿಯ ಹಿರೆಕೋಡಿ ಗ್ರಾಮದಲ್ಲಿ ಇರುವಂತ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಬೆಳಗ್ಗೆ ಉಪ್ಪಿಟ್ಟು ಸೇವಿಸಿದಂತ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೆಕೋಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವಂತ ಘಟನೆ ನಡೆದಿದೆ. ಮಕ್ಕಳನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಸತಿ ಶಾಲೆಯಲ್ಲಿ 400ಕ್ಕೂ ಹೆಚ್ಚು ಮಕ್ಕಳಿದ್ದಾರೆ. ಮೊರಾರ್ಜಿ ವಸತಿ ಶಾಲೆಯಲ್ಲಿ 6 ರಿಂದ ಪಿಯುಸಿವರೆಗೂ ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ವಸತಿ ಶಾಲೆಯಲ್ಲಿ ಆಹಾರ ಸೇವಿಸಿ ಅಸ್ವಸ್ಥರಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. https://kannadanewsnow.com/kannada/fire-department-evacuation-notice-for-multi-storey-buildings-important-order-from-the-state-government/ https://kannadanewsnow.com/kannada/new-organ-in-human-body-that-can-change-cancer-treatment-discovered-after-300-years/
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಹುಮಹಡಿ ಕಟ್ಟಡಗಳಿಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನೀಡಲಾಗುವ ನಿರಾಕ್ಷೇಪಣಾ ಪತ್ರದ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತಂತೆ ಒಳಾಡಳಿತ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ದಿನಾಂಕ:27-07-2023ರ ಆದೇಶದಲ್ಲಿ ಕರ್ನಾಟಕ ಅಗ್ನಿಶಾಮಕ ದಳ ಅಧಿನಿಯಮ, 1964ರ ಕಲಂ 13 ಕ್ಕೆ ತಿದ್ದುಪಡಿ ತಂದು “ಎತ್ತರದ ಕಟ್ಟಡವನ್ನು ನಿರ್ಮಾಣ ಮಾಡಲು ಉದ್ದೇಶಿಸುವ ಯಾವುದೇ ವ್ಯಕ್ತಿಯು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನಿರಾಕ್ಷೇಪಣಾ ಪತ್ರವನ್ನು ಪಡೆಯತಕ್ಕದ್ದು” ಮತ್ತು “ಎತ್ತರದ ಕಟ್ಟಡ”[High Rise Building] ಎಂದರೆ “ರಾಷ್ಟ್ರೀಯ ಕಟ್ಟಡ ಸಂಹಿತೆ, 2016 ರಲ್ಲಿ ಪರಿಭಾಷಿಸಿದಂತೆ ಅದರ ಅಧಿಭೋಗದಾರಿಕೆಯನ್ನು ಲೆಕ್ಕಿಸದೆ 21.00 ಮೀಟರುಗಳ ಅಥವಾ ಅದಕ್ಕಿಂತ ಹೆಚ್ಚಿನ ಎತ್ತರದ ಕಟ್ಟಡ” ಎಂದು ವ್ಯಾಖ್ಯಾನಿಸಿ, ಬಹುಮಹಡಿ ಕಟ್ಟಡಗಳ ಎತ್ತರವನ್ನು 15.00 ಮೀಟರ್ನಿಂದ “21.00 ಮೀಟರುಗಳು ಅಥವಾ ಅದಕ್ಕಿಂತ ಹೆಚ್ಚಿನ ಎತ್ತರದ ಕಟ್ಟಡ” ಎಂದು ವಿವರಿಸಿ ಅಧಿಸೂಚಿಸಲಾಗಿದೆ. ಅದರಂತೆ ವಸತಿ / ಶೈಕ್ಷಣಿಕ / ವಾಣಿಜ್ಯ /…
ನೆದರ್ಲ್ಯಾಂಡ್ಸ್ ಕ್ಯಾನ್ಸರ್ ಸಂಸ್ಥೆಯ ಸಂಶೋಧಕರು ಮಾನವ ಗಂಟಲಿನಲ್ಲಿ ಹಿಂದೆ ತಿಳಿದಿಲ್ಲದ ಅಂಗವನ್ನು ಕಂಡುಹಿಡಿದಿದ್ದಾರೆ. 300 ವರ್ಷಗಳ ನಂತರ ಮಾನವ ದೇಹದಲ್ಲಿ ಕ್ಯಾನ್ಸರ್ ಚಿಕಿತ್ಸೆಯನ್ನು ಬದಲಾಯಿಸಬಲ್ಲ ಹೊಸ ಅಂಗ ಪತ್ತೆಯಾಗಿದೆ. ಲೈವ್ ಸೈನ್ಸ್ ಪ್ರಕಟಿಸಿದ ಈ ಆವಿಷ್ಕಾರವು ಕ್ಯಾನ್ಸರ್ ರೋಗಿಗಳಿಗೆ, ವಿಶೇಷವಾಗಿ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ಗಳಿಗೆ ವಿಕಿರಣ ಚಿಕಿತ್ಸೆಗೆ ಒಳಗಾಗುವವರಿಗೆ ಹೇಗೆ ಚಿಕಿತ್ಸೆ ನೀಡಲಾಗುತ್ತದೆ ಎಂಬುದನ್ನು ಮರು ವ್ಯಾಖ್ಯಾನಿಸಬಹುದು. ಗುಂಪು ಹೊಸ ಇಮೇಜಿಂಗ್ ವಿಧಾನವಾದ PSMA PET-CT ಯೊಂದಿಗೆ ಪ್ರಯೋಗ ಮಾಡುತ್ತಿತ್ತು, ಇದು ಪಾಸಿಟ್ರಾನ್ ಎಮಿಷನ್ ಟೊಮೊಗ್ರಫಿ (PET) ಮತ್ತು ಕಂಪ್ಯೂಟೆಡ್ ಟೊಮೊಗ್ರಫಿ (CT) ಸ್ಕ್ಯಾನ್ಗಳನ್ನು ಬಳಸುತ್ತದೆ ಮತ್ತು ಇದನ್ನು ಮುಖ್ಯವಾಗಿ ಪ್ರಾಸ್ಟೇಟ್ ಕ್ಯಾನ್ಸರ್ ಅನ್ನು ಗುರುತಿಸಲು ಬಳಸಲಾಗುತ್ತದೆ. ಸ್ಕ್ಯಾನ್ಗಳ ಉದ್ದಕ್ಕೂ, ವಿಕಿರಣಶೀಲ ಟ್ರೇಸರ್ ಮೂಗಿನ ಹಿಂದೆ ಇರುವ ಪ್ರದೇಶವಾದ ನಾಸೊಫಾರ್ನೆಕ್ಸ್ನಲ್ಲಿ ಎರಡು ಅನಿರೀಕ್ಷಿತ ಪ್ರದೇಶಗಳನ್ನು ಹೈಲೈಟ್ ಮಾಡಿತು. ವಿಕಿರಣ ಆಂಕೊಲಾಜಿಸ್ಟ್ ವೂಟರ್ ವೋಗೆಲ್ ಲೈವ್ ಸೈನ್ಸ್ಗೆ ವಿವರಿಸಿದರು, “ಜನರಿಗೆ ಮೂರು ಸೆಟ್ ದೊಡ್ಡ ಲಾಲಾರಸ ಗ್ರಂಥಿಗಳಿವೆ, ಆದರೆ ಅಲ್ಲಿ ಇಲ್ಲ.”.…
ಮೈಸೂರು: ಅರಣ್ಯ ಇಲಾಖೆಯ ಪರಿಹಾರದ ಆಸೆಗೆ ಪತಿಯನ್ನು ಕೊಲೆಗೈದ ಪತ್ನಿಯೊಬ್ಬರು, ಹುಲಿ ಕೊಂದಿದೆ ಎಂಬುದಾಗಿ ನಾಟಕವಾಡಿದ್ದಾರೆ. ಈ ಕಿಲೇಡಿಯ ನಾಟಕದ ಮಾತು ಕೇಳಿ ಪೊಲೀಸರೇ ಶಾಕ್ ಆಗಿದ್ದರು. ಆದರೇ ತನಿಖೆ ನಡೆಸಿದಾಗ ಪತಿಯನ್ನು ಕೊಲೆಗೈದಿ ವಿಷಯವನ್ನು ಪತ್ನಿ ಬಾಯಿ ಬಿಟ್ಟಿದ್ದಾರೆ. ಮೈಸೂರು ಜಿಲ್ಲೆಯ ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ಪತಿ ವೆಂಕಟಸ್ವಾಮಿ ಎಂಬಾತನನ್ನು ಕೊಲೆಗೈದಂತ ಪತ್ನಿ ಸಲ್ಲಾಪುರಿ, ಹುಲಿ ಕೊಂದಿದೆ ಎಂಬುದಾಗಿ ನಾಟಕವಾಡಿದ್ದಾರೆ. ಕೊಲೆಗಾತಿ ಪತ್ನಿಯ ಈ ಸ್ಟೋರಿ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ. ಪತಿ ನಾಪತ್ತೆಯಾಗಿರುವ ಬಗ್ಗೆ ದೂರು ಪಡೆದಂತ ಪೊಲೀಸರು, ತನಿಖೆ ನಡೆಸಿದಾಗ ಅರಣ್ಯ ಇಲಾಖೆ ಪರಿಹಾರದಾಸೆಗೆ ಕಿಲೇಡಿ ಪತ್ನಿ ಸಲ್ಲಾಪುರಿ ನಾಟಕ ಬಯಲಾಗಿದೆ. ಅಂದಹಾಗೇ ಕೆಲ ದಿನಗಳ ಹಿಂದೆ ಸೋಮವಾರದಂದು ಹೆಜ್ಜೂರು ಗ್ರಾಮದ ಬಳಿಯಲ್ಲಿ ಹುಲಿ ಓಡಾಡಿತ್ತು. ಇದನ್ನೇ ಬಂಡವಾಳ ಮಾಡಿಕೊಂಡು ಹುಲಿ ಕತೆಯನ್ನು ಪತ್ನಿ ಸಲ್ಲಾಪುರಿ ಕಟ್ಟಿದ್ದಾಳೆ. ಹುಲಿ ಹೊತ್ತೊಯ್ದಿದ್ದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಗ್ರಾಮದ ಬಳಿಯಲ್ಲಿ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ…
ಬೆಳಗಾವಿ: ಇಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿಯೇ ನಡೆದಿದೆ. ಪೊಲೀಸರೇ ಎದುರೇ ಎರಡು ಪಕ್ಷದ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಮುಂದೂಡಬೇಕು ಎನ್ನುವ ಉದ್ದೇಶದಿಂದ ಠರಾವು ಪಾಸ್ ಮಾಡಬೇಕಿದ್ದಂತ ಸೆಕ್ರೇಟರಿಯನ್ನೇ ಕಾಂಗ್ರೆಸ್ ಕಾರ್ಯಕರ್ತರು ಅಪಹರಿಸಲು ಯತ್ನಿಸಿದ್ದರು. ಕಾರಿನಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್ ಸೆಕ್ರೇಟರಿ ಭೀಮಪ್ಪ ಅವರನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ತೆರಳುತ್ತಿದ್ದರು. ಈ ವಿಷಯ ತಿಳಿದಂತ ಬಿಜೆಪಿ ಕಾರ್ಯಕರ್ತರು ಕಾರನ್ನು ತಡೆದಿದ್ದಾರೆ. ಅಲ್ಲದೇ ಕಾರಿನ ಗ್ಲಾಸ್ ಒಡೆಯಲು ಯತ್ನಿಸಿದಂತ ವೇಳೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿದೆ. ಬಿಜೆಪಿ ಬೆಂಬಲಿತ ಕಾರ್ಯಕರ್ತರು ಕಾರನ್ನು ಸುತ್ತುವರೆದು ಅದರಲ್ಲಿದ್ದಂತ ಸೆಕ್ರೆಟರಿ ಭೀಮಪ್ಪ ಅವರನ್ನು ಕೆಳಗೆ ಇಳಿಸಿದ್ದಾರೆ. ಗಲಾಟೆ ತಾರಕ್ಕೆ ಏರಿದಂತ ಸಂದರ್ಭದಲ್ಲಿ ಪೊಲೀಸರು ತಿಳಿಗೊಳಿಸೋದಕ್ಕೆ ಯತ್ನಿಸಿದ್ದಾರೆ. ಆದರೇ ಅದು ಸಾಧ್ಯವಾಗದೇ ಪೊಲೀಸರ ಎದುರೇ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡು ಹೊಡೆದಾಡಿಕೊಂಡಿರುವುದಾಗಿ ಹೇಳಲಾಗುತ್ತಿದೆ.
ಶಿವಮೊಗ್ಗ: ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯನ್ನು ದಿನಾಂಕ 20-09-2025ರಂದು ಕರೆಯಲಾಗಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 20-09-2025ರ ಶನಿವಾರದಂದು ಸಾಗರದ ಆರ್ಯ ಈಡಿಗರ ಕಲ್ಯಾಣ ಮಂದಿರ, ವರದಹಳ್ಳಿ ರಸ್ತೆಯಲ್ಲಿ ಸರ್ವ ಸದಸ್ಯರ ಸಭೆಯನ್ನು ನಿಗದಿ ಪಡಿಸಲಾಗಿದೆ. ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್ ನಾಗೇಂದ್ರ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯ ಸಾಮಾನ್ಯ ಸಭೆಯನ್ನು ಬೆಳಗ್ಗೆ 10 ಗಂಟೆಗೆ ಕರೆಯಲಾಗಿದೆ ಎಂದಿದ್ದಾರೆ. ಈ ಸಭೆಯಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಸಾಗರ-ಹೊಸನಗರ ತಾಲ್ಲೂಕು ಶಾಸಕರಾದಂತ ಗೋಪಾಲಕೃಷ್ಣ ಬೇಳೂರು ಇವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ಸದಸ್ಯರೆಲ್ಲರೂ ಹಾಜರಿರುವಂತೆ ತಿಳಿಸಲಾಗಿದೆ. ಇನ್ನೂ ಶ್ರೀ ಮಾರಿಕಾಂಬಾ ನ್ಯಾಸ ಪ್ರತಿಷ್ಠಾನದ ಸದಸ್ಯರುಗಳಿಗೆ ಈಗಾಗಲೇ ಸಭೆಯ ನೋಟಿಸ್ ಅನ್ನು ಅವರವರ ವಿಳಾಸಕ್ಕೆ ಕಳುಹಿಸಲಾಗಿದೆ ಎಂದು ಹೇಳಿದೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು…
ಬೆಂಗಳೂರು : ಯಾರೇ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದರಡ, ಅಂಥವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಅಲ್ಲಿಗೆ ಪ್ರಚೋದನಾಕಾರಿಯಾಗಿ ಭಾಷಣ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಮಾತಾನಾಡಿದ ಅವರು, ಮದ್ದೂರು ಘಟನೆಯ ವಿಚಾರದಲ್ಲಿ ನಾವು ಮೊದಲಿಂದ ಹೇಳುತ್ತಿದ್ದೇವೆ. ಇದರಲ್ಲಿ ರಾಜಕೀಯ ಮಾಡಬೇಡಿ. ಪೊಲೀಸರಿಗೆ ಬಿಡಿ, ಕಲ್ಲು ಹೊಡೆದವರನ್ನು ಹಿಡಿದು, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಮುಸಲ್ಮಾನ ಅಗಿರಲಿ, ಹಿಂದು ಆಗಿರಲಿ, ಮತ್ತೊಬ್ಬ ಆಗಿರಲಿ, ಯಾರೇ ಕಾನೂನು ವಿರುದ್ಧವಾಗಿ ನಡೆದುಕೊಂಡಿದ್ದರೆ ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರವನ್ನು ಪೊಲೀಸರಿಗೆ ಬಿಟ್ಟುಬಿಡಬೇಕು. ಅದೆಲ್ಲ ಬಿಟ್ಟು, ಇವರು ಹೋಗಿ ಪ್ರಚೋದನಾಕಾರಿಯಾಗಿ ಭಾಷಣ ಮಾಡಿ, ಮತ್ತೇ ಜನರನ್ನೆಲ್ಲ ಎಬ್ಬಿಸುವುದು ಸರಿಯಲ್ಲ ಎಂದರು. ವೀರಾವೇಷದಲ್ಲಿ ಮಾತಾಡಿ, ಬಳಸಬಾರದ ಪದಗಳನ್ನು ಬಳಸುವುದರಿಂದ ಏನು ಸಾಧನೆ ಮಾಡುತ್ತಾರೋ? ಒಂದಂತು ನಿಜ ರಾಜಕೀಯ ಕಾರಣಕ್ಕಾಗಿ ಇದೆಲ್ಲ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಎಎಸ್ಪಿ ವರ್ಗಾವಣೆ ಮಾಡಿರುವ ಕುರಿತು ಮಾತನಾಡಿ, ಆಂತರಿಕವಾಗಿ ಎಲ್ಲಿ ಲೋಪ ಕಂಡಿದೆ, ಅದಕ್ಕೆ ಕ್ರಮ…
ಬೆಂಗಳೂರು: ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ರ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅವರ ಅವರ ಪತ್ರಿಕಾಗೋಷ್ಢಿಯ ಹೈಲೈಟ್ಸ್ ಮುಂದಿದೆ ಓದಿ. ಮಧುಸೂದನ್ ಅವರ ಸಮಿತಿ ಮತ್ತು ಹಿಂದುಳಿದ ವರ್ಗಗಳ ಆಯೋಗ ವೈಜ್ಞಾನಿಕ ಮಾನದಂಡದಲ್ಲಿ ಸಮೀಕ್ಷೆ ನಡೆಸಿ ಡಿಸೆಂಬರ್ ಒಳಗೆ ವರದಿ ನೀಡಲಿದ್ದಾರೆ. ಎಲ್ಲಾ ಜಾತಿ-ಧರ್ಮದವರ ದತ್ತಾಂಶ ಅಂಗೈಯಲ್ಲಿದ್ದರೆ ಮಾತ್ರ ಸಾಮಾಜಿಕ ನ್ಯಾಯದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ. ಅಮೆರಿಕದಲ್ಲೂ ಕರಿಯರಿಗೆ affirmative action ಅಂತ ಇದೆ, ನಮ್ಮಲ್ಲಿ ಮೀಸಲಾತಿ ಇದೆ. ನಾವು ಬಡತನ, ನಿರುದ್ಯೋಗ, ಅನಕ್ಷರತೆ ಹೋಗಲಾಡಿದಲು ಸಂವಿಧಾನದ ಕಲಂ 15(), 16(5) ಅಡಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ. ಹೊಸದಾಗಿ 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಸ್ಥಿತಿ ಗತಿ ಅರಿಯಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಆದಷ್ಟೂ ಜಾಗ್ರತೆಯಿಂದ ಸಮೀಕ್ಷೆ ನಡೆಸಿ ವರದಿ ಕೊಡಲು ಸೂಚನೆ ನೀಡಿದ್ದೇವೆ ಎಂದರು. ಹಿಂದುಳಿದ ಆಯೋಗದವರು ಡಿಸೆಂಬರ್ ಒಳಗೆ ವರದಿ ಕೊಡುವ ನಿರೀಕ್ಷೆಯಲ್ಲಿದ್ದಾರೆ. 22 ಸೆಪ್ಟೆಂಬರ್ 2025 ಅಕ್ಟೋಬರ್ 7 ರವರೊಳಗೆ ಸಮೀಕ್ಷೆ ಮುಗಿಸಲು…