Author: kannadanewsnow09

ಕಾಮಾಕ್ಷಿ ದೇವಿಯು ಇಹಲೋಕದ ಕಲ್ಯಾಣಕ್ಕಾಗಿ ತಪಸ್ಸಿನಿಂದ ಭೂಮಿಯ ಮೇಲೆ ಅವತರಿಸಿದಳು. ಕಾಮಾಕ್ಷಿ ದೇವಿಯು ನಮ್ಮ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ತಾಯಿ. ಯಾವ ಮನೆಯಲ್ಲಿ ಕಾಮತ್ಶ್ಯಮ್ಮನಿಗೆ ಪ್ರತಿ ದಿನ ದೀಪ ಹಚ್ಚಿ ಪೂಜಿಸುತ್ತಾರೋ ಆ ಮನೆಯಲ್ಲಿ ಕಷ್ಟಕ್ಕೆ ಜಾಗವಿಲ್ಲ. ಇದರ ಆಧಾರದ ಮೇಲೆ ಇಂದು ನಾವು ನಿಮ್ಮ ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು, ಮಾನಸಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು, ಆದಾಯ ಪಡೆಯಲು ಮತ್ತು ಆದಾಯವನ್ನು ಪಡೆಯಲು ಕಾಮಾಕ್ಷಿ ಅಮ್ಮನ ಪೂಜೆಯನ್ನು ತಿಳಿಯಲಿದ್ದೇವೆ. ಈ ಆಧ್ಯಾತ್ಮಿಕ ದಾಖಲೆಯ ಮೂಲಕ ನೀವು ಶಕ್ತಿಯುತವಾದ ಕಾಮತ್ಶ್ಯಮ್ಮನ್ ಮಂತ್ರವನ್ನು ಸಹ ಕಲಿಯಬಹುದು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ…

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಹಾಜರಾಗದ ವಿದ್ಯಾರ್ಥಿಗಳಿಗೆ ಸಚಿವ ಮಧು ಎಸ್ ಬಂಗಾರಪ್ಪ ಗುಡ್ ನ್ಯೂಸ್ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಕುರಿತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ “ವಿಡಿಯೋ ಕಾನ್ಫರೆನ್ಸ್” ಮೂಲಕ ಸಭೆನಡೆಸಿ, ಪರೀಕ್ಷಾ ಸಂಬಂಧ ಕೈಗೊಗೊಳ್ಳಬೇಕಾಗಿರುವ ವಿವಿಧ ವಿಷಯಗಳ ಕುರಿತು ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು. 2025 ದ್ವಿತೀಯ ಪಿಯುಸಿ ಪರೀಕ್ಷೆ – 1 ಕ್ಕೆ ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳು ಪರೀಕ್ಷೆ-2 ಅಥವಾ ಪರೀಕ್ಷೆ-3 ಕ್ಕೆ ಮಂಡಳಿಯ ನಿಯಮಾನುಸಾರ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ. ಮಕ್ಕಳು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು. ಈಗಾಗಲೇ ಎರಡನೇ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇಲಾಖೆಯಿಂದ ವಿದ್ಯಾರ್ಥಿಗಳನ್ನು ಸಿದ್ದಪಡಿಸಲು ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ಅಣುಕು ಪರೀಕ್ಷೆಗಳನ್ನು ನೆಡಸಲಾಗುತ್ತಿದ್ದು ಇದರ ಬಗ್ಗೆ ಜಿಲ್ಲಾಮಟ್ಟದ ಅಧಿಕಾರಿಗಳು ಗಮನಹರಿಸಬೇಕು. ಜೊತೆಗೆ…

Read More

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಜೂನ್ 1, 2025 ರ ವೇಳೆಗೆ 5 ವರ್ಷ 5 ತಿಂಗಳು ವಯಸ್ಸಿನ ಮತ್ತು ಪ್ರಿ ಪ್ರೈಮರಿ ಉತ್ತೀರ್ಣರಾದ ಮಕ್ಕಳು 1 ನೇ ತರಗತಿ ಪ್ರವೇಶಕ್ಕೆ ಅರ್ಹರಾಗಿರುತ್ತಾರೆ.  ಆದರೆ 2025-26 ರ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯಿಸುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಯಸ್ಸಿನ ಮಾನದಂಡಗಳಲ್ಲಿ ಇದು ಒಂದು ಬಾರಿಯ ಸಡಿಲಿಕೆಯಾಗಿದ್ದು, 2025-26 ರ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯಿಸುತ್ತದೆ ಎಂದು ಹೇಳಿದರು ಎಂದು ಸಚಿವರು ಹೇಳಿದರು. ಪ್ರಮಾಣಿತ ಕನಿಷ್ಠ ವಯಸ್ಸಿನ ಅವಶ್ಯಕತೆ ಆರು ವರ್ಷಗಳು 2026-27 ರಿಂದ ಜಾರಿಯಲ್ಲಿರುತ್ತದೆ. ಈ ಸಡಿಲಿಕೆ ರಾಜ್ಯ ಮಂಡಳಿಯ ಅಡಿಯಲ್ಲಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷಗಳು ಮತ್ತು ಯುಕೆಜಿ ಪ್ರವೇಶಕ್ಕೆ 5 ವರ್ಷಗಳು ವಯಸ್ಸಿನ ಮಿತಿಯನ್ನು ಪಾಲಿಸುವಂತೆ ಸಚಿವರು ಪೋಷಕರಲ್ಲಿ ವಿನಂತಿಸಿದರು.

Read More

ಕಲ್ಬುರ್ಗಿ : ಪ್ರಣಾಳಿಕೆಯಲ್ಲಿ, ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳೆಲ್ಲಾ ಜಾರಿ ಆಗುತ್ತಿರುವುದು ಜನರ ಕಣ್ಣಿಗೆ ಕಾಣುತ್ತಿದೆ, ಬಿಜೆಪಿ ಕಣ್ಣಿಗೆ ಮಾತ್ರ ಕಾಣುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಕಲ್ಬುರ್ಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ 216.53 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ 6.20 ಕೋಟಿ ವೆಚ್ಚದ ಬ್ರಾಕಿಥೆರಪಿ ವಿಕೀರಣ ಚಿಕಿತ್ಸೆ ಘಟಕವನ್ನು ಉದ್ಘಾಟಿಸಿ ಹಾಗೂ 12 ಬೃಹತ್ ಮೊತ್ತದ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಹಾಕಿ ಮಾತನಾಡಿದರು. ಪ್ರತೀ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು, ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಇರಲೇಬೇಕು ಎನ್ನುವುದು ನಮ್ಮ ಸರ್ಕಾರದ ಗುರಿ. ಬಡವರಿಗೂ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಸಿಗಬೇಕು ಎನ್ನುವ ಉದ್ದೇಶದಿಂದ ಈ ಘೋಷಣೆ ಮಾಡಿದ್ದು ಒಂದೊಂದೇ ಜಿಲ್ಲೆಯಲ್ಲಿ ಇವೆಲ್ಲವೂ ನೆರವೇರುತ್ತಿವೆ ಎಂದರು. ಅಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಏನ್ನುವ ಬಿಜೆಪಿಯವರು ಕಲ್ಬುರ್ಗಿಗೆ ಬಂದು ಕಣ್ಣು ತೆರೆದು ನೋಡಿದರೆ ಅಭಿವೃದ್ಧಿಯ ಮಹಾಪೂರ ಕಾಣಿಸುತ್ತದೆ.…

Read More

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಮುಸ್ಲಿಮರ ಓಲೈಕೆಗಾಗಿ ಕರ್ನಾಟಕವನ್ನು ಮಿನಿ ಪಾಕಿಸ್ತಾನವಾಗಿಸಲು ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಸಭೆಯಲ್ಲಿ ಮಾತನಾಡಿದ ಅವರು, ಇದು ಬಿಜೆಪಿಯ ಆಕ್ರೋಶದ ಯಾತ್ರೆಯಲ್ಲ, ಜನರ ಆಕ್ರೋಶದ ಯಾತ್ರೆ. ಬೆಲೆ ಏರಿಕೆಯಿಂದಾಗಿ ಜನರಿಗೆ ತೊಂದರೆಯಾಗಿರುವುದರಿಂದ ಅವರಿಗಾಗಿ ಬಿಜೆಪಿ ಹೋರಾಟ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಪಾಕಿಸ್ತಾನ ಮಾಡಲು ಮುಂದಾಗಿದ್ದಾರೆ. ಮುಸಲ್ಮಾನರು ನಂ.1 ಎಂದು ಆಗಲು ವಿದೇಶ ಕೈವಾಡ ಇದೆಯೇ ಎಂಬ ಅನುಮಾನ ಬಂದಿದೆ. ಮುಸ್ಲಿಮರ ಓಲೈಕೆಗಾಗಿ ಎಲ್ಲ ಜಾತಿಗಳನ್ನು ಒಡೆದುಹಾಕಿದ್ದಾರೆ. ಈ ಮೂಲಕ ಮಿನಿ ಪಾಕಿಸ್ತಾನ ಸೃಷ್ಟಿಸುತ್ತಿದ್ದಾರೆ. ಭಾರತವನ್ನು ಪಾಕಿಸ್ತಾನ ಮಾಡುತ್ತೇವೆಂದು ಕೆಲವು ಭಯೋತ್ಪಾದಕರು ಪತ್ರದಲ್ಲಿ ಬರೆದು ಹಂಚಿದ್ದಾರೆ ಎಂದರು. ಸಿಎಂ ಸಿದ್ದರಾಮಯ್ಯನವರ ಕುರ್ಚಿಗೆ ನವೆಂಬರ್‌ನಲ್ಲಿ ಬಾಂಬ್‌ ಫಿಕ್ಸ್‌ ಆಗಿದೆ. ಅವರು ನಿರ್ಗಮಿಸುವುದರಿಂದಲೇ ಈ ರೀತಿ ಮಾಡುತ್ತಿದ್ದಾರೆ. ರಾಜ್ಯದ ಬಡವರ ಮೇಲೆ ತೆರಿಗೆಯ ದಾಳಿ ಮಾಡುತ್ತಿದ್ದಾರೆ. ಕರ್ನಾಟಕ ಹಾಗೂ ತೆಲಂಗಾಣ ಕೇಂದ್ರ ಕಾಂಗ್ರೆಸ್‌ನ ಎಟಿಎಂ ಆಗಿದೆ. ಇದು ಕುರ್ಚಿ ಕಿತ್ತುಕೊಳ್ಳಲು…

Read More

ಕಲಬುರ್ಗಿ:”ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ಇಡಿ ಸಲ್ಲಿಸಿರುವ ಆರೋಪಪಟ್ಟಿಯ ಯಾವುದೇ ವಿಚಾರಗಳಿಗೆ ಸರಿಯಾದ ಆಧಾರವಿಲ್ಲ. ಇದು ಅನ್ಯಾಯ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕಲಬುರ್ಗಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಇಡಿ ಆರೋಪಪಟ್ಟಿ ಸಲ್ಲಿಸಿರುವ ಬಗ್ಗೆ ಕೇಳಿದಾಗ, “ಈ ಪ್ರಕರಣದಲ್ಲಿ ಯಾವುದೇ ರೀತಿಯಲ್ಲಿಯೂ ಗಾಂಧಿ ಕುಟುಂಬಕ್ಕೆ ಲಾಭವಾಗಿಲ್ಲ. ಇದು ಕಾಂಗ್ರೆಸ್ ಪಕ್ಷದ ಆಸ್ತಿ ಮತ್ತು ಅವರು ಪಕ್ಷದ ಮುಖ್ಯಸ್ಥರು, ಆದ್ದರಿಂದ ಅವರ ಹೆಸರು ಉಲ್ಲೇಖವಾಗಿದೆ. ಇದರಲ್ಲಿ ತಪ್ಪೇನಿದೆ? ಇದನ್ನು ಕೇವಲ ರಾಜಕೀಯ ದ್ವೇಷಕ್ಕಾಗಿ ಮಾಡಲಾಗುತ್ತಿದೆ” ಎಂದರು.

Read More

ಬೆಂಗಳೂರು: ರಾಜ್ಯದಲ್ಲಿ 1ನೇ ತರಗತಿಗೆ ಮಕ್ಕಳ ದಾಖಲಾತಿಗೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಇನ್ಮುಂದೆ 5 ವರ್ಷ 5 ತಿಂಗಳು ತುಂಬಿದ್ದರೇ 1ನೇ ತರಗತಿಗೆ ದಾಖಲಾತಿ ಮಾಡಬಹುದು ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, 1ನೇ ತರಗತಿಗೆ ಮಕ್ಕಳನ್ನು ಸೇರಿಸುವ ವಯೋಮಿತಿಯನ್ನು ಸಡಿಲಿಕೆ ಮಾಡಲಾಗಿದೆ. ಈ ಮೂಲಕ ಪೋಷಕರು ವಯೋಮಿತಿ ಬಗ್ಗೆ ಹೊಂದಿದ್ದಂತ ಗೊಂದಲಕ್ಕೆ ತೆರೆ ಎಳೆಯಲಾಗಿದೆ ಎಂದರು. ದೇಶಾಧ್ಯಂತ 1ನೇ ತರಗತಿಗೆ ಮಕ್ಕಳ ದಾಖಲಾಗಿತೆ 6 ವರ್ಷ ಕಡ್ಡಾಯವಿದೆ. ಆದರೇ ಈ ವರ್ಷ ಮಾತ್ರ ಕರ್ನಾಟಕದಲ್ಲಿ ವಯಸ್ಸಿನ ಮಿತಿಯನ್ನು ಸಡಿಲಿಕೆ ಮಾಡಲಾಗುತ್ತಿದೆ. ಈ ವರ್ಷ ಮಾತ್ರ 5 ವರ್ಷ 5 ತಿಂಗಳು ತುಂಬಿದ್ದಂತ ಮಕ್ಕಳನ್ನು 1ನೇ ತರಗತಿಗೆ ದಾಖಲಾತಿ ಮಾಡಬಹುದು ಎಂಬುದಾಗಿ ತಿಳಿಸಿದರು. ಮುಂದಿನ ವರ್ಷದಿಂದ 1ನೇ ತರಗತಿಗೆ ದಾಖಲಾತಿಯಲ್ಲಿ ಯಾವುದೇ ಬದಲಾವಣೆಯಿಲ್ಲ. ದೇಶದಲ್ಲಿ ಇರುವಂತೆಯೇ 1ನೇ ತರಗತಿಗೆ ಶಾಲಾ ಮಕ್ಕಳ ದಾಖಲಾತಿಗೆ 6 ವರ್ಷ ಕಡ್ಡಾಯವೆಂಬ ನಿಯಮ ಜಾರಿಯಲ್ಲಿ ಇರಲಿದೆ ಎಂದರು.…

Read More

ಬೆಂಗಳೂರು: ಬೆಂಗಳೂರು ಹವಾಮಾನ ಕ್ರಿಯಾ ಕೋಶ ಫೆಲೋಶಿಪ್ ನ ಎರಡು (02) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹವಾಮಾನ ಕ್ರಿಯಾ ಕೋಶದ ಅಧ್ಯಕ್ಷರಾದ ಪ್ರೀತಿ ಗೆಹ್ಲೋಟ್ ರವರು ತಿಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರ ಪರವಾಗಿ ಹವಾಮಾನ ಕ್ರಿಯಾ ಕೋಶ (ಸಿಎಸಿ) ದಲ್ಲಿ ಹವಾಮಾನ ಬದಲಾವಣೆ ಮತ್ತು ನಗರ ಆಡಳಿತದ ಬಗ್ಗೆ ಆಸಕ್ತಿ ಹೊಂದಿರುವ ಉಜ್ವಲ ಮನಸ್ಸಿನ ವೃತ್ತಿಪರರಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಬೆಂಗಳೂರು ಎದುರಿಸುತ್ತಿರುವ ನಿಜ ಜೀವನದ ಸವಾಲುಗಳನ್ನು ಪರಿಹರಿಸಲು ಹೊಸ ದೃಷ್ಟಿಕೋನಗಳು, ಕೌಶಲ್ಯಗಳು ಮತ್ತು ನಾವೀನ್ಯತೆಯನ್ನು ತರಬಲ್ಲ ವ್ಯಕ್ತಿಗಳನ್ನು ತೊಡಗಿಸಿಕೊಳ್ಳಲು ಹವಾಮಾನ ಕ್ರಿಯಾ ಕೋಶವು ಪ್ರಯತ್ನಿಸುತ್ತದೆ. ಈ ಹಿನ್ನೆಲೆಯಲ್ಲಿ, ಈ ಕೆಳಗಿನ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ: * ಫೆಲೋ- ಎಂ.ಇ.ಆರ್, ಹವಾಮಾನ ಆಯವ್ಯಯ (1 ಹುದ್ದೆ) * ಸಲಹೆಗಾರ – ಸಂವಹನ ಮತ್ತು ಪ್ರಚಾರ (1 ಹುದ್ದೆ) 12 ತಿಂಗಳ ಅವಧಿಯ ಈ ಹುದ್ದೆಗಳಿಗೆ ಆಹ್ವಾನಿಸಲಾಗುತ್ತಿದ್ದು, ತಿಂಗಳಿಗೆ 50,000 ರೂ. ವೇತನವನ್ನು ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಹವಾಮಾನ…

Read More

ಬೆಂಗಳೂರು : ಹುಬ್ಬಳ್ಳಿ ಎನ್‌ಕೌಂಟರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ತನಿಖೆಯಲ್ಲಿ ಏನು ಬರುತ್ತದೆ ನೋಡೋಣ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿರುವ ಸಚಿವರ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಒಕ್ಕಲಿಗ ಸಮುದಾಯದ ಸಭೆ ನಡೆದಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಯಿಸಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯ ಸಭೆ ನಡೆದಿರುವುದಷ್ಟೆ ಗೊತ್ತು. ಒಳಗಡೆ ಏನೆಲ್ಲ ಚರ್ಚೆಯಾಗಿದೆ ಎಂಬುದು ನಮಗೆ ಮಾಹಿತಿ ಇಲ್ಲ. ಒಕ್ಕಲಿಗ ಸಮುದಾಯವು ತಮಗೆ ಅನ್ಯಾಯ ಆಗಬಾರದು ಎಂಬುದನ್ನು ಪ್ರಸ್ತಾಪ ಮಾಡಿದ್ದಾರೆ‌. ಇದನ್ನು ಹೊರತುಪಡಿಸಿ ಬೇರೆ ಏನು ಗೊತ್ತಿಲ್ಲ ಎಂದರು. ದಾವಣಗೆರೆಯಲ್ಲಿ ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ಪ್ರಕರಣವನ್ನು ಸ್ಥಳೀಯ ಪೊಲೀಸರು ಗಮನಿಸುತ್ತಾರೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಇಂತಹ ಘಟನೆಗಳಾದಾಗ ಯಾವುದೇ ರೀತಿಯ ಮುಲಾಜಿಲ್ಲದೆ ಕಾನೂನಿನ ಚೌಕಟ್ಟಿನಲ್ಲಿ ಕಠಿಣವಾದ ಕ್ರಮ ತೆಗೆದುಕೊಳ್ಳುವಂತೆ ಈಗಾಗಲೇ ಸೂಚಿಸಿದ್ದೇನೆ.‌ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಅತ್ಯಾಚಾರ, ಮಹಿಳೆಯರ ಮೇಲೆ ಹಲ್ಲೆ…

Read More

ಕಲ್ಬುರ್ಗಿ : ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದ ಮೋದಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಕೊಡದೆ ಪರಮ ಸುಳ್ಳು ಹೇಳಿ ಯುವ ಜನರನ್ನು ವಂಚಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧನ ವ್ಯಕ್ತಪಡಿಸಿದರು. ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಯುವಕ ಯುವತಿಯರಿಗೆ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಯುವ ಪದವೀಧರರಿಗೆ ನೇಮಕಾತಿ ಪತ್ರವನ್ನು ವಿತರಿಸಿ ಮಾತನಾಡಿದರು. ಆದರೆ, ನಾವು ನುಡಿದಂತೆ ನಡೆಯುತ್ತಾ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಲ್ಲಿ ಯುವ ನಿಧಿ ಕಾರ್ಯಕ್ರಮ ಕೂಡ ಸೇರಿದೆ. ಭತ್ಯೆ ಜೊತೆಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವನ್ನೂ ಒದಗಿಸುತ್ತಿದ್ದೇವೆ ಎಂದರು. ಆದರೆ, ನಾವು ನುಡಿದಂತೆ ನಡೆಯುತ್ತಾ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಲ್ಲಿ ಯುವ ನಿಧಿ ಕಾರ್ಯಕ್ರಮ ಕೂಡ ಸೇರಿದೆ. ಭತ್ಯೆ ಜೊತೆಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವನ್ನೂ ಒದಗಿಸುತ್ತಿದ್ದೇವೆ ಎಂದರು. ಮಾರುಕಟ್ಟೆ ಆಧಾರಿತ ಕೌಶಲ್ಯ ನೀಡಿ ಉದ್ಯೋಗ ಸೃಜಿಸಲು ಸಚಿವ ಶರಣ ಪ್ರಕಾಶ್…

Read More