Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕ ಭಾರತ್ ಗೌರವ್ ದಕ್ಷಿಣ ಯಾತ್ರಾ” ಯೋಜನೆಯಡಿ ದಕ್ಷಿಣ ಭಾರತದಲ್ಲಿನ ಪುಣ್ಯ ಕ್ಷೇತ್ರಗಳಾದ ರಾಮೇಶ್ವರ-ಕನ್ಯಾಕುಮಾರಿ-ಮಧುರೆ-ತಿರುವನಂತಪುರಕ್ಕೆ ವಿಶೇಷ ಪ್ರವಾಸ ಆಯೋಜಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ, IRCTC ಮತ್ತು ಭಾರತೀಯ ರೈಲ್ವೇ ಇಲಾಖೆಯ ಸಹಯೋಗದೊಂದಿಗೆ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್ರಾಜ್ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯ್ತಿ ದರದಲ್ಲಿ ಪ್ಯಾಕೇಜ್ ರೂಪಿಸಿ “ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ” ಯೋಜನೆಯನ್ನು ಈಗಾಗಲೇ ಜಾರಿಗೆ ತರಲಾಗಿರುತ್ತದೆ. ಈ ಯೋಜನೆಯಡಿ ವಿಶೇಷ ರೈಲು 10 ಟ್ರಿಪ್ ಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಒಟ್ಟು 5917 ಯಾತ್ರಾರ್ಥಿಗಳು ಪ್ರಯಾಣಿಸಿರುತ್ತಾರೆ. ಕಾಶಿ-ರಾಮೇಶ್ವರ ಕ್ಷೇತ್ರಗಳ ಬಗ್ಗೆ ಹಿಂದೂ ಪುರಾಣಗಳಲ್ಲಿ ಹೇಳುವಂತೆ ಹಾಗೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ (ವಾರಣಾಸಿ ಒಳಗೊಂಡಂತೆ) ಪ್ರಸ್ತುತ ಬಿಸಿಲಿನ ವಾತಾವರಣವಿದ್ದು, ಈ ಯೋಜನೆಯಡಿ ವಯೋವೃದ್ದರು ಅಧಿಕ ಸಂಖ್ಯೆಯಲ್ಲಿ ಯಾತ್ರೆ ಕೈಗೊಳ್ಳುತ್ತಿರುವುದರಿಂದ, ಸದರಿ ಯಾತ್ರಾರ್ಥಿಗಳ ಆರೋಗ್ಯದ ಹಿತದೃಷ್ಠಿಯನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತಾಪಿತ “ಕರ್ನಾಟಕ ಭಾರತ್ ಗೌರವ್” ಯೋಜನೆಯಡಿ ದಕ್ಷಿಣ ಭಾರತದಲ್ಲಿನ ಪುಣ್ಯ ಕ್ಷೇತ್ರಗಳಾದ ರಾಮೇಶ್ವರ-ಕನ್ಯಾಕುಮಾರಿ-ಮಧುರೆ-ತಿರುವನಂತಪುರ…
ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಜೈಲುಪಾಲಾಗಿದ್ದಾರೆ. ಅವರ ಪರವಾಗಿ, ಸಂತ್ರಸ್ತ ವ್ಯಕ್ತಿಯ ವಿರುದ್ಧವೇ ದೂರು ನೀಡಿದ್ದಂತ ಸೂರಜ್ ಆಪ್ತ ಶಿವಕುಮಾರ್ ಈಗ ತಿರುಗಿ ಬಿದ್ದಿದ್ದಾನೆ. ನಾಪತ್ತೆಯ ಬಳಿಕ ದಿಢೀರ್ ಪ್ರತ್ಯಕ್ಷವಾಗಿರುವಂತ ಶಿವಕುಮಾರ್, ಸೂರಜ್ ರೇವಣ್ಣ ವಿರುದ್ಧವೇ ದೂರು ನೀಡಿದ್ದಾರೆ. ಹಾಸನದ ಹೊಳೆನರಸೀಪುರ ನಗರ ಪೊಲೀಸ್ ಠಾಣೆಗೆ ನಾಪತ್ತೆಯಾಗಿದ್ದಂತ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ದಿಢೀರ್ ಪ್ರತ್ಯಕ್ಷವಾಗಿ ಭೇಟಿ ನೀಡಿ, ಸೂರಜ್ ರೇವಣ್ಣ ವಿರುದ್ಧ ದೂರು ನೀಡಿದ್ದಾರೆ. ಅಂದಹಾಗೇ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧವೂ ಸಂತ್ರಸ್ತ ನನಗೆ ಆಗಿರುವ ಅನ್ಯಾಯದ ಬಗ್ಗೆ ಶಿವಕುಮಾರ್ ಬಳಿ ಹೇಳಿದ್ದೆ. ಆ ಬಳಿಕ ಶಿವಕುಮಾರ್ ಹಾಗೂ ಸೂರಜ್ ಸೇರಿ ಇಬ್ಬರೂ ನನ್ನ ಬ್ಲ್ಯಾಕ್ ಮೇಲೆ ಮಾಡಿದ್ದಾರೆ ಎಂಬುದಾಗಿ ದೂರು ನೀಡಿದ್ದರು. https://kannadanewsnow.com/kannada/state-government-issues-guidelines-for-transfer-of-government-employees-for-the-year-2024-25/ https://kannadanewsnow.com/kannada/breaking-delhi-delhi-high-court-stays-bail-order-of-delhi-cm-arvind-kejriwal/
ಬೆಂಗಳೂರು: 2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಇಂದು ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. ಅದರಲ್ಲಿ ಆಡಳಿತದಲ್ಲಿನ ನೂತನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವರ್ಗಾವಣಾ ಮಾರ್ಗಸೂಚಿಗಳನ್ನು ವ್ಯಾಪಕವಾಗಿ ಪುನರಾವಲೋಕನ ಮಾಡಿ, ಮೇಲೆ ಓದಲಾದ ದಿನಾಂಕ:07.06.2013ರ ಸರ್ಕಾರದ ಆದೇಶದಲ್ಲಿ ಹೊರಡಿಸಲಾದ ವರ್ಗಾವಣಾ ಮಾರ್ಗಸೂಚಿಗಳನ್ನು ಪರಿಷ್ಕರಿಸಿ, ಹೊಸದಾದ ವರ್ಗಾವಣಾ ಮಾರ್ಗಸೂಚಿಗಳನ್ನು ಹೊರಡಿಸುವುದು ಅವಶ್ಯವೆಂದು ಮನಗಾಣಲಾಗಿರುವುದರಿಂದ ಈ ಕೆಳಕಂಡಂತೆ ಆದೇಶಿಸಿದ್ದಾರೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳಿಗಾಗಿ ಮೇಲೆ ಓದಲಾದ ದಿನಾಂಕ: 07.06.2013ರ ಆದೇಶವನ್ನು ರದ್ದುಪಡಿಸಿ, ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸುವ ಬಗ್ಗೆ ಈ ಆದೇಶದಲ್ಲಿ ಸೂಚಿಸಿರುವಂತೆ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರವು ಇಚ್ಛಿಸುತ್ತದೆ. ಈ ಮಾರ್ಗಸೂಚಿಗಳು 2024-25 ನೇ ಸಾಲಿನಿಂದ ಜಾರಿಗೆ ಬರುತ್ತವೆ. ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ…
ಬೆಂಗಳೂರು: ರಾಜ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡುವ ಸಂಬಂಧ, ಜುಲೈ.4ರಂದು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿ ಪಡಿಸಲಾಗಿದೆ. ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 04-07-2024ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ ಅಂತ ತಿಳಿಸಿದ್ದಾರೆ. ಜುಲೈ.4ರಂದು ಸಿಎಂ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ 2024ನೇ ಸಾಲಿನ 11ನೇ ಸಭೆಯನ್ನು ನಡೆಸಲಾಗುತ್ತಿದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ. https://kannadanewsnow.com/kannada/shivamogga-lokayukta-officials-make-surprise-visit-to-sub-registrars-office/ https://kannadanewsnow.com/kannada/breaking-delhi-delhi-high-court-stays-bail-order-of-delhi-cm-arvind-kejriwal/
ಶಿವಮೊಗ್ಗ: ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಮಂಜುನಾಥ ಚೌದರಿ ಎಂ ಹೆಚ್ ಅವರು ತಮ್ಮ ತಂಡದೊಂದಿಗೆ ಶಿವಮೊಗ್ಗ ತಾಲ್ಲೂಕಿನ ಹಿರಿಯ ಉಪ ನೋಂದಣಾಧಿಕಾರಿಗಳ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಡಿಎಸ್ಪಿ ಉಮೇಶ್ ಈಶ್ವರನಾಯ್ಕ, ಪೊಲೀಸ್ ನಿರೀಕ್ಷಕ ಪ್ರಕಾಶ್ ಮತ್ತು ಸಿಬ್ಬಂದಿಗಳೊಂದಿಗೆ ಜೂ.25 ರಂದು ಹಿರಿಯ ಉಪನೋಂದಣಾಧಿಕಾರಿಗಳ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದ ಅವರು, ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳು ಮತ್ತು ಹೊರ ಗುತ್ತಿಗೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಂಪ್ಯೂಟರ್ ಆಪರೇಟರ್ಗಳ ಮಾಹಿತಿ ಪಡೆದರು. ಹಾಜರಾತಿ ಪುಸ್ತಕ, ಕ್ಯಾಷ್ ಡಿಕ್ಲರೇಷನ್, ಚಲನವಲನ ವಹಿ, ದಸ್ತಾವೇಜುಗಳ ರಿಜಿಸ್ಟರ್ಗಳನ್ನು ಪರಿಶೀಲನೆ ಮಾಡಿದರು. ಮತ್ತು ನೋಂದಣಿ ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರೊಂದಿಗೆ ಚರ್ಚಿಸಿ ಮಾಹಿತಿಯನ್ನು ಪಡೆದರು. ಪರಿಶೀಲನಾ ಸಮಯದಲ್ಲಿ ಕಂಡು ಬಂದ ನ್ಯೂನ್ಯತೆಗಳ ಕುರಿತು ಹಿರಿಯ ಉಪನೋಂದಣಾಧಿಕಾರಿ ಧನರಾಜ್ ಮತ್ತು ದಿನೇಶ್ ರವರಿಗೆ ತಿಳಿಸಿ, ಸ್ಥಳದಲ್ಲಿಯೇ ಸೂಚನೆಗಳನ್ನು ನೀಡಿದರು. https://kannadanewsnow.com/kannada/cm-siddaramaiah-clarifies-on-nandini-milk-price-hike/ https://kannadanewsnow.com/kannada/breaking-delhi-delhi-high-court-stays-bail-order-of-delhi-cm-arvind-kejriwal/
ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಂಗಳವಾರ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದಾಗ್ಯೂ, ಅವರು ಪ್ಯಾಲೆಸ್ಟೈನ್ ಪರ ಘೋಷಣೆಗಳನ್ನು ಕೂಗಿದಾಗ ವಿವಾದವನ್ನು ಉಲ್ಲೇಖಿಸಿದರು. ಆದರೆ, ಬಿಜೆಪಿಯ ಶೋಭಾ ಕರಂದ್ಲಾಜೆ ಅವರ ಆಕ್ಷೇಪದ ನಂತರ, ಅಧ್ಯಕ್ಷ ರಾಧಾಮೋಹನ್ ಸಿಂಗ್ ಅದನ್ನು ದಾಖಲೆಯಿಂದ ತೆಗೆದುಹಾಕುವಂತೆ ಸೂಚನೆ ನೀಡಿದರು. ಮಂಗಳವಾರ ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ಓವೈಸಿ, ಪ್ಯಾಲೆಸ್ಟೈನ್ ಬೆಂಬಲಿಸಿ ಜೈ ಪ್ಯಾಲೆಸ್ಟೈನ್ ಘೋಷಣೆ ಕೂಗಿದರು. ಹೈದರಾಬಾದ್ ಸಂಸದ ಓವೈಸಿ ಜೈ ಪ್ಯಾಲೆಸ್ಟೈನ್ ಘೋಷಣೆ ಕೂಗಿದ ನಂತರ ಸಂಸತ್ತಿನಲ್ಲಿ ಮತ್ತು ಹೊರಗೆ ಕೋಲಾಹಲ ಉಂಟಾಗಿದೆ. ಇಲ್ಲಿಯವರೆಗೆ ದೊರೆತ ಮಾಹಿತಿಯ ಪ್ರಕಾರ, ಅಸಾದುದ್ದೀನ್ ಒವೈಸಿ ತಮ್ಮ ಪ್ರಮಾಣವಚನದಲ್ಲಿ ಜೈ ಪ್ಯಾಲೆಸ್ಟೈನ್ ಎಂದು ಹೇಳಿದಾಗ, ಕೇಂದ್ರ ಸಚಿವೆ ಮತ್ತು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಕ್ಷೇಪಿಸಿದರು. ಇದರ ನಂತರ, ಲೋಕಸಭೆಯ ಅಧ್ಯಕ್ಷ ಅಧಿಕಾರಿ ರಾಧಾ ಮೋಹನ್ ಸಿಂಗ್ ಅವರು ಅಸಾದುದ್ದೀನ್ ಒವೈಸಿ ಅವರ ಈ ಹೇಳಿಕೆಯನ್ನು ದಾಖಲೆಯಿಂದ ತೆಗೆದುಹಾಕುವಂತೆ ಕೇಳಿಕೊಂಡರು. ಆದಾಗ್ಯೂ, ಓವೈಸಿ ಅವರ ಈ ಹೇಳಿಕೆಯ…
ಬೆಂಗಳೂರು: ನಾಳೆಯಿಂದ ಜಾರಿಗೆ ಬರುವಂತೆ ರಾಜ್ಯಾಧ್ಯಂತ ನಂದಿನಿ ಹಾಲಿನ ದರವನ್ನು ರೂ.2 ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರು ಏನು ಸ್ಪಷ್ಟನೆ ಕೊಟ್ಟಿದ್ದಾರೆ ಅಂತ ಮುಂದೆ ಓದಿ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ನಂದಿನಿ ಹಾಲಿನ ಪ್ಯಾಕೇಟ್ ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ. ಅರ್ಧಲೀಟರ್ ಹಾಲಿನ ಪ್ಯಾಕೇಟ್ ನಲ್ಲಿ ಮುಂದೆ 550 ಎಂಎಲ್ ಹಾಲು ಹಾಗೂ ಲೀಟರ್ ಪ್ಯಾಕೇಟ್ ನಲ್ಲಿ 1,050 ಎಂಎಲ್ ಹಾಲು ಸಿಗಲಿದೆ ಅಂತ ತಿಳಿಸಿದ್ದಾರೆ. ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್ ಸಂಸ್ಥೆ ಪ್ಯಾಕೇಟ್ ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ ಎಂದು ಹೇಳಿದ್ದಾರೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ…
ಶಿವಮೊಗ್ಗ: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂ ಗೊಳಿಸೋ ಸಂಬಂಧ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸಿದ ಬಳಿಕ ಮಾತನಾಡಿದಂತ ಅವರು, ನಮ್ಮ ಸರ್ಕಾರಕ್ಕೆ ನಿಮ್ಮ ಬಗ್ಗೆ ಗೌರವವಿದೆ. ನಮ್ಮ ಸಂಪೂರ್ಣ ಬೆಂಬಲ ಕೂಡ ಇದೆ. ನಿಮ್ಮನ್ನು ಖಾಯಂ ಗೊಳಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯೂ ಆಗಿದೆ ಎಂಬುದಾಗಿ ಘೋಷಿಸಿದರು. ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮೀ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರನ್ನು ತರಲಾಗಿದೆ. ಇಲ್ಲಿನ ಅನೇಕ ಅಂಗನವಾಡಿ ಕಾರ್ಯಕರ್ತೆಯರು ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು 2000 ರೂ ಪಡೆಯುತ್ತಿದ್ದೀರಿ ಎಂದರು. ಡೆಂಗ್ಯೂ ನಿಯಂತ್ರಣ ಕ್ರಮ ವಹಿಸಬೇಕು. ನಿಮ್ಮೆಲ್ಲರ ಸಹಕಾರದಿಂದ ಸಾಗರ ತಾಲೂಕಿನಲ್ಲಿ ಡೆಂಗ್ಯೂ ನಿಯಂತ್ರಣವಾಗಬೇಕು. ಆ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಿ ಕೆಲಸ ಮಾಡುವಂತೆ…
ಮುಂಬೈ: ಪುಣೆ ಪೋರ್ಷೆ ವಿಮಾನ ದುರಂತ ಪ್ರಕರಣದ ಹದಿಹರೆಯದ ಆರೋಪಿಯನ್ನು ವೀಕ್ಷಣಾ ಗೃಹದಲ್ಲಿ ಮುಂದುವರಿಸುವುದು ಕಾನೂನುಬಾಹಿರ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ಹೇಳಿದೆ.ಹದಿಹರೆಯದವರ ಕಸ್ಟಡಿಯನ್ನು ಅವನ ತಂದೆಯ ಚಿಕ್ಕಮ್ಮನಿಗೆ ಹಸ್ತಾಂತರಿಸುವಂತೆ ಎಂದು ಹೈಕೋರ್ಟ್ ನಿರ್ದೇಶಿಸಿದೆ. ನಾವು ಕಾನೂನು, ಬಾಲನ್ಯಾಯ ಕಾಯ್ದೆಯ ಉದ್ದೇಶಗಳು ಮತ್ತು ಉದ್ದೇಶಗಳಿಗೆ ಬದ್ಧರಾಗಿದ್ದೇವೆ ಮತ್ತು ಅಪರಾಧದ ಗಂಭೀರತೆಯ ಹೊರತಾಗಿಯೂ ಕಾನೂನಿನೊಂದಿಗೆ ಸಂಘರ್ಷದಲ್ಲಿರುವ ಯಾವುದೇ ಮಗುವಿನಂತೆ ಅವನನ್ನು ಪರಿಗಣಿಸಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಮೇ 19 ರಂದು ಪುಣೆಯಲ್ಲಿ ಐಷಾರಾಮಿ ಕಾರಿನೊಂದಿಗೆ ಕುಡಿದ ಅಮಲಿನಲ್ಲಿ ವೇಗವಾಗಿ ಚಲಿಸುತ್ತಿದ್ದ ಹದಿಹರೆಯದವರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್ವೇರ್ ಎಂಜಿನಿಯರ್ಗಳಾದ ಅನೀಶ್ ಅವಧಿ ಮತ್ತು ಅಶ್ವಿನಿ ಕೊಶ್ತಾ ಸಾವನ್ನಪ್ಪಿದ್ದರು. https://kannadanewsnow.com/kannada/breaking-delhi-delhi-high-court-stays-bail-order-of-delhi-cm-arvind-kejriwal/ https://kannadanewsnow.com/kannada/david-warners-international-retirement-confirmed-after-australia-exit/
ಪುಣೆ: ಪುಣೆ ಕಾರು ಅಪಘಾತ ಪ್ರಕರಣದ ಬಾಲಾಪರಾಧಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಈ ಮೂಲಕ ಐಶಾರಾಮಿ ಕಾರು ಅಪಘಾತದ ಬಾಲಾಪರಾಧಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. https://twitter.com/ANI/status/1805534372134896106 ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದ ಬಾಲಾಪರಾಧಿಯನ್ನು ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದೆ ಮತ್ತು ಆತನನ್ನು ವೀಕ್ಷಣಾ ಗೃಹಕ್ಕೆ ಕಳುಹಿಸುವ ರಿಮಾಂಡ್ ಆದೇಶಗಳನ್ನು ರದ್ದುಗೊಳಿಸುವಂತೆ ಕೋರಿ ಆತನ ಚಿಕ್ಕಮ್ಮ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಗೆ ಅನುಮತಿ ನೀಡಿದೆ. “ಕಾನೂನುಬಾಹಿರ ಮತ್ತು ನಿರಂಕುಶ” ರೀತಿಯಲ್ಲಿ ಅವನನ್ನು ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಚಿಕ್ಕಮ್ಮ ಹೇಳಿಕೊಂಡಿದ್ದರು. ಮೇ 19 ರ ಮುಂಜಾನೆ, ಅಪ್ರಾಪ್ತ ವಯಸ್ಕನು ಕುಡಿದ ಅಮಲಿನಲ್ಲಿ ಪೋರ್ಷೆ ಕಾರನ್ನು ಅತಿ ವೇಗದಲ್ಲಿ ಓಡಿಸುತ್ತಿದ್ದಾಗ ವಾಹನವು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾಫ್ಟ್ವೇರ್ ಎಂಜಿನಿಯರ್ಗಳಾದ ಅನೀಶ್ ಅವಧಿ ಮತ್ತು ಅಶ್ವಿನಿ ಕೊಶ್ತಾ ಸಾವನ್ನಪ್ಪಿದ ಘಟನೆ ಪುಣೆಯ ಕಲ್ಯಾಣಿ ನಗರದಲ್ಲಿ ನಡೆದಿದೆ. ಕಸ್ಟಡಿ ಆದೇಶವು ಕಾನೂನುಬಾಹಿರ ಮತ್ತು ನ್ಯಾಯವ್ಯಾಪ್ತಿ ಇಲ್ಲದೆ ಅಂಗೀಕರಿಸಲ್ಪಟ್ಟಿದೆ ಎಂದು ನ್ಯಾಯಾಲಯವು…











