Subscribe to Updates
Get the latest creative news from FooBar about art, design and business.
Author: kannadanewsnow09
ರಾಹು ಕೇತು ಎಂದ ತಕ್ಷಣ ನಮ್ಮ ಮನಸ್ಸಿನಲ್ಲಿ ಭಯ ಹುಟ್ಟುತ್ತದೆ. ಅವರು ನಮಗೆ ಯಾವುದೇ ಸಮಸ್ಯೆಗಳನ್ನು ಉಂಟುಮಾಡುತ್ತಾರೆಯೇ ಎಂದು ನಾನು ಆಶ್ಚರ್ಯ ಪಡುತ್ತೇನೆ. ಈ ರಾಹು ಕೇತು ದೋಷದಿಂದ ಅನೇಕ ಜನರು ಬಾಧಿತರಾಗಿದ್ದಾರೆ. ಹಾಗಾಗಿ ರಾಹು ಕೇತುವಿಗೆ ಭಯಪಡುವುದರಲ್ಲಿ ಖಂಡಿತಾ ಅರ್ಥವಿದೆ. ಶಾಸ್ತ್ರದ ಪ್ರಕಾರ ರಾಹುದೋಷವಿದ್ದರೆ, ಕೇತುದೋಷವಿದ್ದರೆ ಆರ್ಥಿಕ ಸಮಸ್ಯೆ. ಮದುವೆ ಆಗುವುದಿಲ್ಲ. ವಿವಾಹಿತರು ಉತ್ತಮ ಕುಟುಂಬ ಜೀವನವನ್ನು ಹೊಂದಿರುವುದಿಲ್ಲ. ರಾಹು ಮತ್ತು ಕೇತುಗಳು ಸಾಲದ ಹೊರೆ ಮತ್ತು ಇನ್ನೂ ಅನೇಕ ಸಮಸ್ಯೆಗಳಿಂದ ಬಳಲುತ್ತಿರುವ ಗ್ರಹಗಳು. ಈ ಎರಡು ಗ್ರಹಗಳು ನಮಗೆ ತರಬಹುದಾದ ತೊಂದರೆಗಳನ್ನು ನಾವು ಹೇಗೆ ತಪ್ಪಿಸಬಹುದು? ಈ ಗ್ರಹಗಳು ದೊಡ್ಡ ಸಮಸ್ಯೆಗಳನ್ನು ಉಂಟುಮಾಡಬಹುದಾದರೂ, ಅವುಗಳನ್ನು ಸಣ್ಣ ಪ್ರಮಾಣದಲ್ಲಿ ತಡೆಯಲು ಜ್ಯೋತಿಷ್ಯವು ಅನೇಕ ಪರಿಹಾರಗಳನ್ನು ಹೊಂದಿದೆ. ನಿಮಗಾಗಿ ಇಲ್ಲಿದೆ ಸರಳ ಪರಿಹಾರ. ತಲೆಗೆ ಬಂದದ್ದು ಪೇಟದಿಂದ ಹೋಯಿತು ಎಂಬ ತೃಪ್ತಿಗೆ ಉತ್ತಮ ಫಲಿತಾಂಶ ನೀಡಬಲ್ಲ ವಿಶೇಷ ಆಧ್ಯಾತ್ಮಿಕ ಪರಿಹಾರದ ಬಗ್ಗೆ ಇಂದು ತಿಳಿಯಲಿದ್ದೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ…
ಬೆಂಗಳೂರು: ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಸಚಿವರು, ಹಲವಾರು ಮಾಹಿತಿ ನೀಡಿದರು. ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ನಲ್ಲಿ ನವೆಂಬರ್ 4 ರಿಂದ 6 ರವರೆಗೆ ಈ ಶೃಂಗಸಭೆ ನಡೆಯಲಿದೆ. ಇದೇ ಮೊದಲ ಬಾರಿಗೆ ಇಂಥ ಮಹತ್ವಾಕಾಂಕ್ಷೆಯ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಈ ಶೃಂಗಸಭೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. “ಬೆಂಗಳೂರು ಕೌಶಲ್ಯ ಶೃಂಗಸಭೆಯ ಮೂಲಕ ಯುವ ಸಮುದಾಯಕ್ಕೆ ಮುಖ್ಯವಾಗಿ ಮಹಿಳೆಯರು, ಗ್ರಾಮೀಣ ಸಮುದಾಯಗಳು ಮತ್ತು ಅಂಗವಿಕಲರಿಗೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗುವುದು. ಕೌಶಲ್ಯದ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ನಮ್ಮ ಸರ್ಕಾರ ಅವಕಾಶಗಳ ಬೃಹತ್ ವೇದಿಕೆ ಒದಗಿಸುತ್ತಿದೆ ಎಂದು…
ಬೆಂಗಳೂರು: ಧರ್ಮ ಒಡೆಯುವ ಕೆಲಸಕ್ಕೆ ರಾಜ್ಯ ಸರಕಾರ ಕೈ ಹಾಕಿದೆ. ಇದೊಂದು ದುರಂತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಯಾವುದೇ ಜಾತಿ, ಸಮಾಜದವರು ಗಣತಿ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಬೇಕು ಎಂದು ಬಿಜೆಪಿಯ ರಾಜಕೀಯ ಚಿಂತನಾ ಶಿಬಿರದಲ್ಲಿ ನಿರ್ಣಯಿಸಿದ್ದೇವೆ ಎಂದು ತಿಳಿಸಿದರು. ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್ನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ರಾಜಕೀಯ ಚಿಂತನಾ ಶಿಬಿರ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದು ವಿವರಿಸಿದರು. ಜಾತಿ, ಉಪ ಜಾತಿಯನ್ನು ಆಯಾ ಸಮುದಾಯಕ್ಕೆ ಬಿಟ್ಟ ವಿಚಾರ; ಅದನ್ನು ಅವರು ತೀರ್ಮಾನಿಸಬೇಕು ಎಂದರು. ದೇಶ, ರಾಜ್ಯದ ಹಿತದೃಷ್ಟಿಯಿಂದ ಧರ್ಮದ ಕಾಲಂನಡಿ ಹಿಂದೂ ಎಂದು ಬರೆಸಲು ವಿನಂತಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜಾತಿ ಜನಗಣತಿ ಮಾಡಲು ಮುಂದಾಗಿದೆ. ರಾಜ್ಯಗಳಿಗೆ ಜಾತಿ ಜನಗಣತಿ ಅಧಿಕಾರ ಇಲ್ಲದೇ ಇದ್ದರೂ 47 ಹೊಸ ಜಾತಿಗಳನ್ನು ಸೃಷ್ಟಿಸಿದೆ. ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಒಕ್ಕಲಿಗ, ಕ್ರಿಶ್ಚಿಯನ್ ನೇಕಾರ, ಕ್ರಿಶ್ಚಿಯನ್ ಪರಿಶಿಷ್ಟ ಜಾತಿ,…
ಮಡಿಕೇರಿ: ರಾಜ್ಯದಲ್ಲಿ ವೈದ್ಯರು ಅಪರೂಪದ ಆಪರೇಷನ್ ಮಾಡಿದ್ದಾರೆ. ವ್ಯಕ್ತಿಯೊಬ್ಬರ ಕಣ್ಣಿನಲ್ಲಿದ್ದಂತ 10 ಸೆಂಟಿ ಮೀಟರ್ ಜೀವಂತ ಹುಳುವನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ಮಡಿಕೇರಿಯಲ್ಲಿ ವೈದ್ಯರಿಂದ ಅಪರೂಪದ ಆಪರೇಷನ್ ಮಾಡಲಾಗಿದೆ. ಶಸ್ತ್ರ ಚಿಕಿತ್ಸೆ ಮೂಲಕ ಕಣ್ಣಿನಲ್ಲಿದ್ದ ಹುಳುವನ್ನು ವೈದ್ಯರು ಹೊರ ತೆಗೆದಿದ್ದಾರೆ. ಸುಮಾರು 10 ಸೆಂಟಿ ಮೀಟರ್ ಗೂ ಉದ್ದ ಜೀವಂತ ಹುಳು ಇತ್ತು ಎಂಬುದಾಗಿ ತಿಳಿದು ಬಂದಿದೆ. ಕಣ್ಣಿನಲ್ಲಿ ತುರಿಕೆ ಎಂದು ವ್ಯಕ್ತಿ ಚಿಕಿತ್ಸೆಗೆ ಆಗಮಿಸಿದ್ದರು. ಪರೀಕ್ಷೆ ವೇಳೆ ಕಣ್ಣಿನ ಬಿಳಿ ಭಾಗದ ಪೊರೆಯಲ್ಲಿ ಹುಳು ಪತ್ತೆಯಾಗಿದೆ. ಡಾ.ಚಿಣ್ಣಪ್ಪ, ಡಾ.ಗುರುಪ್ರಸಾದ್ ರಿಂದ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಶಸ್ತ್ರ ಚಿಕಿತ್ಸೆ ಮೂಲಕ ಹುಳು ಹೊರತೆಗೆದಿದ್ದಾರೆ. ಮಾನವನ ಕಣ್ಣು, ಮಿದುಳಿನಲ್ಲಿ ಈ ಹುಳ ಆಶ್ರಯ ಪಡೆಯುತ್ತೆ. ಪತ್ತೆ ಹಚ್ಚುವುದು ತಡವಾದ್ರೆ ಶಾಶ್ವತ ದೃಷ್ಟಿ ದೋಷ ಸಾಧ್ಯತೆ ಇದೆಯಂತೆ. ಬಿಳಿದಾರದ ರೀತಿಯ ಹುಳು ಲೋವಾ ಎಂದು ಗುರುತಿಸಲಾಗಿದೆ. ಆಫ್ರಿಕಾ ಭಾಗದಲ್ಲಿ ಹೆಚ್ಚಾಗಿ ಈ ಲೋವಾ ಹುಳು ಕಂಡು ಬರುತ್ತದೆ. ಇದು ಡೀರ್ ಫ್ಲೈ…
ಮಂಡ್ಯ : ರಾಜ್ಯದಲ್ಲಿ ಹಿಂದುತ್ವದ ಪರ ಹೋರಾಟ ಮಾಡಿದ್ರೆ ನನ್ನ ಮೇಲೆ ರೌಡಿ ಕೇಸ್ ಹಾಕ್ತಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರದ ವಿರುದ್ಧ ಶುಕ್ರವಾರ ವಾಗ್ಧಾಳಿ ನಡೆಸಿದರು. ಮದ್ದೂರು ತಾಲೂಕಿನ ಗಡಿಭಾಗ ನಿಡಘಟ್ಟದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ದೂರಿನ ಶಾಂತ ವಾತಾವರಣವನ್ನು ಹಾಳು ಮಾಡುತ್ತಿರುವುದು ಕಾಂಗ್ರೆಸ್ ಸರ್ಕಾರ ನಾವು ಯಾವುದೇ ಪ್ರತಿಭಟನೆಗೆ ಹೋಗುತ್ತಿಲ್ಲ. ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದ ಗಲಭೆಯಲ್ಲಿ ಪೋಲೀಸರು 500 ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದ್ದಾರೆ. ಈ ಬಗ್ಗೆ ವಕಾಲತ್ತು ವಹಿಸಲು ವಕೀಲರ ಜತೆ ಹೋಗುತ್ತಿದ್ದೇನೆ. ಆದರೆ, ಸಂವಿಧಾನ ವಿರೋಧಿ ಕಾಂಗ್ರೆಸ್ ಸರ್ಕಾರ ನಮ್ಮನ್ನು ತಡೆಯುವ ನೀಚ ಕೆಲಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಮತ್ತು ಪೋಲೀಸರು ಕಲ್ಲು ಹೊಡೆದವರನ್ನು, ಪಾಕಿಸ್ತಾನ್ ಜಿಂದಾಬಾದ್ ಎನ್ನುವ ಕಿಡಿಗೇಡಿಗಳ ಮೇಲೆ ಶೂಟ್ ಮಾಡಬೇಕು. ಇಲ್ಲಿ ಹುಟ್ಟಿ, ಬೆಳೆದು ನಮ್ಮ ಮೇಲೆ ಕಲ್ಲು ಎಸೆಯುತ್ತಾರೆ ಎಷ್ಟು ಸೊಕ್ಕು?…
ಶಿವಮೊಗ್ಗ: ನಾಳೆ ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯನ್ನು ಕರೆಯಲಾಗಿದೆ. ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದಿಂದ ಮಾರಿಕಾಂಬಾ ಜಾತ್ರೆ, ಸಂಘದ ಚುನಾವಣೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 20-09-2025ರ ಶನಿವಾರದ ನಾಳೆ ಸಾಗರದ ಆರ್ಯ ಈಡಿಗರ ಕಲ್ಯಾಣ ಮಂದಿರ, ವರದಹಳ್ಳಿ ರಸ್ತೆಯಲ್ಲಿ ಸರ್ವ ಸದಸ್ಯರ ಸಭೆಯನ್ನು ನಿಗದಿ ಪಡಿಸಲಾಗಿದೆ. ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್ ನಾಗೇಂದ್ರ ಅಧ್ಯಕ್ಷತೆಯಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಸರ್ವ ಸದಸ್ಯ ಸಾಮಾನ್ಯ ಸಭೆ ನಡೆಯಲಿದೆ ಎಂದು ತಿಳಿಸಿದೆ. ಈ ಸಭೆಯಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಸಾಗರ-ಹೊಸನಗರ ತಾಲ್ಲೂಕು ಶಾಸಕರಾದಂತ ಗೋಪಾಲಕೃಷ್ಣ ಬೇಳೂರು ಇವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ಸದಸ್ಯರೆಲ್ಲರೂ ಹಾಜರಿರುವಂತೆ ಕೋರಲಾಗಿದೆ. ಇನ್ನೂ…
ರಾಮನಗರ : “ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. “ನಾನು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವುದಕ್ಕೆ ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ದೇನೆ ಎಂದು ಕೆಲವರು ಟೀಕೆ ಮಾಡುತ್ತಿದ್ದಾರೆ. ನಾನು ಜಾತಿ ಮೇಲೆ ನಂಬಿಕೆಯಿಟ್ಟಿರುವವನಲ್ಲ. ನೀತಿ ಮೇಲೆ ನಂಬಿಕೆಯಿಟ್ಟಿರುವವನು. ಬಡವರ ಬಗ್ಗೆ ಕಾಳಜಿಯನ್ನಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಎಲ್ಲಾ ವರ್ಗದ ಜನರ ಏಳಿಗೆಗೆ ಶ್ರಮಿಸುತ್ತಿದ್ದೇನೆ” ಎಂದರು. “ರಾಮನಗರ ಕ್ಷೇತ್ರದ ಜನತೆಗೆ 100 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಬೇಕು ಎಂದು ಜಿಲ್ಲೆಯ ಪ್ರತಿಧಿಗಳ ಸಭೆ ಕರೆದು ಈಗಾಗಲೇ ತೀರ್ಮಾನ ಮಾಡಲಾಗಿದೆ. “ಬಗರ್ ಹುಕುಂ ಸೇರಿದಂತೆ, ಭೂ…
ರಾಮನಗರ: “ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. “ನಾನು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವುದಕ್ಕೆ ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ದೇನೆ ಎಂದು ಕೆಲವರು ಟೀಕೆ ಮಾಡುತ್ತಿದ್ದಾರೆ. ನಾನು ಜಾತಿ ಮೇಲೆ ನಂಬಿಕೆಯಿಟ್ಟಿರುವವನಲ್ಲ. ನೀತಿ ಮೇಲೆ ನಂಬಿಕೆಯಿಟ್ಟಿರುವವನು. ಬಡವರ ಬಗ್ಗೆ ಕಾಳಜಿಯನ್ನಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಎಲ್ಲಾ ವರ್ಗದ ಜನರ ಏಳಿಗೆಗೆ ಶ್ರಮಿಸುತ್ತಿದ್ದೇನೆ” ಎಂದರು. 100 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಿಕೆ “ರಾಮನಗರ ಕ್ಷೇತ್ರದ ಜನತೆಗೆ 100 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಬೇಕು ಎಂದು ಜಿಲ್ಲೆಯ ಪ್ರತಿಧಿಗಳ ಸಭೆ ಕರೆದು ಈಗಾಗಲೇ ತೀರ್ಮಾನ ಮಾಡಲಾಗಿದೆ.…
ಬೆಂಗಳೂರು: “ಎಲ್ಲಾ ಗೊಂದಲ ಸರಿಪಡಿಸಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ. ಕಾನೂನು ಚೌಕಟ್ಟಿನಲ್ಲಿ ಸಾಮಾಜಿಕ ನ್ಯಾಯ ಒದಗಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಸಿಎಂ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಜಾತಿಗಣತಿ ವಿಚಾರವಾಗಿ ಸರ್ಕಾರದ ವಿರುದ್ಧ ಟೀಕೆ ವ್ಯಕ್ತವಾಗುತ್ತಿವೆ ಎಂದು ಕೇಳಿದಾಗ, “ಬಿಜೆಪಿ ಹಾಗೂ ಬೇರೆ ಪಕ್ಷದವರು ಷಡ್ಯಂತ್ರ ರೂಪಿಸಿ, ಅಪಪ್ರಚಾರ ಮಾಡುತ್ತಿದ್ದಾರೆ. ನಾವು ಎಲ್ಲರಿಗೂ ನ್ಯಾಯ ಒದಗಿಸುತ್ತೇವೆ. ಜಾತಿಗಳ ಪಟ್ಟಿಯಲ್ಲಿ ಅಕ್ಷರಗಳ ಆಧಾರದ ಮೇಲೆ ಸಮುದಾಯಗಳನ್ನು ಪಟ್ಟಿ ಮಾಡಲಾಗಿದೆ. ಪ್ರತಿ ಮನೆ ಮನೆಗೆ ಹೋಗಿ, ಎಲ್ಲರ ಮಾಹಿತಿ ಸಂಗ್ರಹಿಸುತ್ತೇವೆ.” ಎಂದು ತಿಳಿಸಿದರು. ಮೇಲ್ಮನೆ ಮಾಜಿ ಸಭಾಪತಿ ಸುದರ್ಶನ್ ಅವರು ತಮ್ಮ ಭಾಷಣದಲ್ಲಿ ನಿಮಗೆ ಕೆಲವು ಸಲಹೆ ನೀಡಿದ್ದಾರಲ್ಲ ಎಂದು ಕೇಳಿದಾಗ, “ಅವರು ಸಲಹೆ ನೀಡಿದ್ದು, ಹಿಂದುಳಿದ ವರ್ಗಗಳ ಆಯೋಗಕ್ಕೆ ನಿಮ್ಮ ಸಲಹೆಯನ್ನು ತಿಳಿಸಿ ಎಂದು ಅವರಿಗೆ ಹೇಳಿದ್ದೇವೆ.…
ಶಿವಮೊಗ್ಗ: ಹಿಂದುಳಿದ ಆಯೋಗದ ಮೂಲಕ ಜಾತಿ ಗಣತಿಗೆ ಸರ್ಕಾರ ಮುಂದಾಗಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಸಮಾಜದ ನೇತೃತ್ವದಲ್ಲಿ ನಿರ್ಣಯ ಮಾಡಲಾಗಿದ್ದು, ಧರ್ಮದ ಕಲಂ 1ಲ್ಲಿ ಹಿಂದೂ ಎಂದೂ ಕಲಂ 2ರಲ್ಲಿ ಬ್ರಾಹ್ಮಣ ಎಂದೇ ನಮೂದಿಸಬೇಕು ಎಂದು ಬ್ರಾಹ್ಮಣ ಸಮಾಜದ ಸೊರಬ ತಾಲ್ಲೂಕು ಅಧ್ಯಕ್ಷ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಸಮಾಜದ ಸಂಘಟನಾ ಕಾರ್ಯದರ್ಶಿ ಪ್ರಕಾಶ್ ತಲಕಾಲಕೊಪ್ಪ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಾಸ್ತವವಾಗಿ ಸುಮಾರು 45 ಲಕ್ಷ ಜನಸಂಖ್ಯೆ ಬ್ರಾಹ್ಮಣರಿದ್ದಾರೆ. ಈ ಹಿಂದಿನ ಸಮೀಕ್ಷೆಯಲ್ಲಿ ಕೇವಲ 12 ಲಕ್ಷ ಜನಸಂಖ್ಯೆ ತೋರಿಸಲಾಗಿತ್ತು. ಉಪ ಪಂಗಡಗಳ ಜಾತಿ ಹೆಸರನ್ನು ನಮೂಸಿದ್ದರಿಂದ ಈ ರೀತಿ ಸಂಖ್ಯೆಯಲ್ಲಿ ವ್ಯತ್ಯಾಸ ಆಗಿತ್ತು. ಆದ್ದರಿಂದ ಈ ಬಾರಿ ಜಾತಿ ಸಮೀಕ್ಷೆಯಲ್ಲಿ ಬ್ರಾಹ್ಮಣ ಎಂದೇ ನಮೂದಿಸಿ ಎಂದು ಮನವಿ ಮಾಡಿದರು. ಅಸಮಾನತೆಯ ಕಾರಣಕ್ಕಾಗಿ ಕ್ರಿಸ್ಟಿಯನ್ ಧರ್ಮಕ್ಕಾಗಿ ಮತಾಂತರಗೊಂಡ ಹಲವರಿಗೆ ಕ್ರಿಶ್ಚಿಯನ್ ಮತ್ತು ಜಾತಿ ನಮೂದಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮತಾಂತರಗೊಂಡಾಗ ಮತ್ತೆ ಅವರಿಗೆ…








