Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ನಡೆಸಿದಂತ ಜಾತಿಗಣತಿ ವರದಿಯ ಅಂಕಿ-ಅಂಶಗಳು ಬಹಿರಂಗಗೊಂಡಿದ್ದಾವೆ. ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟ ಜನಸಂಖ್ಯೆ 5,98,14,942 ಆಗಿದ್ದಾರೆ. ಅವರಲ್ಲಿ ಜಾತಿವಾರು ಅಂಕಿ-ಅಂಶಗಳು ಎಷ್ಟು ಎನ್ನುವ ಮಾಹಿತಿ ಮುಂದಿದೆ ಓದಿ. ರಾಜ್ಯ ಸರ್ಕಾರ ನಡೆಸಿದಂತ ಜಾತಿ ಗಣತಿ ಜನಸಂಖ್ಯೆಯ ವರದಿಯಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟವರ ಸಂಖ್ಯೆ 5,98,14,942 ಆಗಿದೆ. ಈ ಒಟ್ಟಾರೆ ಜಾತಿ ಸಮೀಕ್ಷೆಯ ಜನಗಣತಿಯಲ್ಲಿ ರಾಜ್ಯದಲ್ಲಿವಂತ ಎಸ್ಸಿ ಸಮುದಾಯದವರ ಸಂಖ್ಯೆ 1,09,29,347 ಆಗಿದ್ದರೇ, ಎಸ್ಟಿ ಸಮುದಾಯದವರ ಜನಸಂಖ್ಯೆ 42,81,289 ಆಗಿದೆ. ರಾಜ್ಯದಲ್ಲಿ ಪ್ರವರ್ಗ-1ರ ಒಟ್ಟು ಜನಸಂಖ್ಯೆ 34,96,638 ಆಗಿದೆ. ಇವರ ಶೇಕಡಾ ಪ್ರಮಾಣ 8.40 ಆದರೇ ಅನುಪಾತ ಶೇ.4ರಷ್ಟು ಆಗಿದೆ.ಇನ್ನು ಪ್ರವರ್ಗ-1ಬಿಯವರು 73,92,313 ಆಗಿದೆ. ಪ್ರವರ್ಗ-1ಎ ಮತ್ತು 1ಬಿ ಒಟ್ಟು ಜನಸಂಖ್ಯೆ 1,08,88,951 ಆಗಿದೆ. ಇನ್ನೂ 11ಎ ವರ್ಗದವರು 77,78,209 ಆಗಿದ್ದರೇ 2ಬಿ ವರ್ಗದವರು 75,25,880 ಆಗಿದೆ. ಈ ಎರಡು ವರ್ಗದವರ ಒಟ್ಟು ಜನಸಂಖ್ಯೆ 1.53,04,089 ಆಗಿದೆ. ಪ್ರವರ್ಗ 3ಎ ಜನಸಂಖ್ಯೆ 72,99,577 ಆಗಿದ್ದರೇ, 3ಬಿ ವರ್ಗದ ಜನಸಂಖ್ಯೆ 81,37,536 ಆಗಿದೆ.…
ಬೆಂಗಳೂರು: ರಾಜ್ಯ ಸರ್ಕಾರದಿದಂ ಗ್ರಾಮ ಪಂಚಾಯ್ತಿ ಅರಿವು ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಶಾಲೆಗಳಿಗೆ ಬೇಸಿಗೆ ರಜೆ ಪ್ರಾರಂಭವಾದಾಗಿನಿಂದ ರಜೆ ಅಂತ್ಯಗೊಳ್ಳುವವರೆಗೂ ಆಯೋಜಿಸಲು ಆದೇಶಿಸಿದೆ. ಈ ಮೂಲಕ ಗ್ರಾಮೀಣ ಪ್ರದೇಶದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಸಂಬಂಧ ಪಂಚಾಯತ್ ರಾಜ್ ಆಯುಕ್ತಾಲಯದಿಂದ ಸುತ್ತೋಲೆ ಹೊರಡಿಸಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಗ್ರಾಮ ಪಂಚಾಯತಿ ಅರಿವು ಕೇಂದ್ರದಲ್ಲಿ ಹಲವು ಮಕ್ಕಳ ಸ್ನೇಹಿ ಚಟುವಟಿಕೆಗಳನ್ನು ಈಗಾಗಲೇ ಹಮ್ಮಿಕೊಳ್ಳಲಾಗಿದೆ. ಮುಂದುವರೆದ ಭಾಗವಾಗಿ ಗ್ರಾಮ ಪಂಚಾಯತಿ ನೇತೃತ್ವದಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಅರಿವು ಕೇಂದ್ರಗಳ ಮೂಲಕ ಶಾಲೆಗಳ ಬೇಸಿಗೆ ರಜೆಯ ಸಮಯದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದಿದೆ. ಶಿಬಿರದ ನಿರ್ವಹಣೆಯನ್ನು ಅರಿವು ಕೇಂದ್ರದ ಮೇಲ್ವಿಚಾರಕರು, ಗ್ರಾಮ ಪಂಚಾಯತಿ ಪುನರ್ವಸತಿ ಕಾರ್ಯಕರ್ತರು ಮತ್ತು ಗುರುತಿಸಿದ ಸ್ವಯಂ ಸೇವಕರೊಂದಿಗೆ (ಆಸಕ್ತ ಶಾಲಾ ಶಿಕ್ಷಕರು/ನಿವೃತ್ತ ಶಾಲಾ ಶಿಕ್ಷಕರು/ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು/ಕಾಲೇಜು ವಿದ್ಯಾರ್ಥಿಗಳು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು/ಸಂಘ ಸಂಸ್ಥೆಗಳು) ಪರಿಣಾಮಕಾರಿಯಾಗಿ…
ಬೆಂಗಳೂರು: ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 53,11,000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೂ ಹೆಚ್ಚಾಗಿದೆ. ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಅಲ್ವಾ? ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಇಡೀ ದೇಶದಲ್ಲಿ ಬೆಲೆ ಏರಿಕೆಯಾಗಿದೆ. ಬಿಜೆಪಿ ನಾಯಕರಿಗೆ ಜನಾಕ್ರೋಶ ಯಾತ್ರೆ ಮಾಡುವ ಯಾವ ನೈತಿಕತೆಯು ಇಲ್ಲ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ. https://twitter.com/siddaramaiah/status/1911092429396009150 ರಾಜ್ಯ ಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಚ್ಚಾ ತೈಲದ ಬೆಲೆಯ ಮೇಲೆ ನಿಗದಿಯಾಗುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಒಂದು ಬ್ಯಾರಲ್ ಕಚ್ಚಾತೈಲಕ್ಕೆ 120 ಡಾಲರ್ ಇತ್ತು, ಈಗ…
ನವದೆಹಲಿ: ಉಕ್ರೇನ್ನ ಕುಸುಮ್ನಲ್ಲಿರುವ ಭಾರತೀಯ ಔಷಧ ಕಂಪನಿಯ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ ಮಾಡಿದೆ ಎಂದು ಕೈವ್ ಇಂದು X ನಲ್ಲಿ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ಭಾರತದಲ್ಲಿನ ಉಕ್ರೇನ್ನ ರಾಯಭಾರ ಕಚೇರಿಯು ರಷ್ಯಾ ಉಕ್ರೇನ್ನಲ್ಲಿರುವ ಭಾರತೀಯ ವ್ಯವಹಾರಗಳನ್ನು “ಉದ್ದೇಶಪೂರ್ವಕವಾಗಿ” ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದೆ. “ಇಂದು, ಉಕ್ರೇನ್ನಲ್ಲಿರುವ ಭಾರತೀಯ ಔಷಧ ಕಂಪನಿ ಕುಸುಮ್ನ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ ಮಾಡಿದೆ. ಭಾರತದೊಂದಿಗೆ ‘ವಿಶೇಷ ಸ್ನೇಹ’ ಎಂದು ಹೇಳಿಕೊಳ್ಳುತ್ತಾ, ಮಾಸ್ಕೋ ಉದ್ದೇಶಪೂರ್ವಕವಾಗಿ ಭಾರತೀಯ ವ್ಯವಹಾರಗಳನ್ನು ಗುರಿಯಾಗಿಸಿಕೊಂಡಿದೆ.- ಮಕ್ಕಳು ಮತ್ತು ವೃದ್ಧರಿಗೆ ಮೀಸಲಾದ ಔಷಧಿಗಳನ್ನು ನಾಶಪಡಿಸುತ್ತದೆ” ಎಂದು ಉಕ್ರೇನ್ನ ರಾಯಭಾರ ಕಚೇರಿ ಹೇಳಿದೆ. ಭಾರತೀಯ ಉದ್ಯಮಿ ರಾಜೀವ್ ಗುಪ್ತಾ ಒಡೆತನದ ಕುಸುಮ್, ಉಕ್ರೇನ್ನ ಅತಿದೊಡ್ಡ ಔಷಧ ಸಂಸ್ಥೆಗಳಲ್ಲಿ ಒಂದಾಗಿದೆ. ಮೂಲ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದರಿಂದ ಕಂಪನಿಯ ಉತ್ಪನ್ನಗಳು ಉಕ್ರೇನ್ನಾದ್ಯಂತ ನಿರ್ಣಾಯಕವಾಗಿವೆ ಎಂದು ಮೂಲಗಳು ತಿಳಿಸಿವೆ. ಕೈವ್ ಪೋಸ್ಟ್ ಮಾಡುವ ಮೊದಲು, ಉಕ್ರೇನ್ನ ಬ್ರಿಟನ್ ರಾಯಭಾರಿ ಮಾರ್ಟಿನ್ ಹ್ಯಾರಿಸ್ ರಷ್ಯಾದ ದಾಳಿಗಳು ಕೈವ್ನಲ್ಲಿರುವ ಪ್ರಮುಖ ಔಷಧದ…
ಬೆಂಗಳೂರು: ಒಳಮೀಸಲಾತಿ ಜಾರಿಗೆ ತರಲು ಜಸ್ಟೀಸ್ ನಾಗಮೋಹನ್ ದಾಸ್ ಅವರ ಆಯೋಗ ರಚಿಸಿ, ಎರಡು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿ ಗಳು ಸೇರಿದಂತೆ 102 ಜಾತಿಗಳಿವೆ. ಇವರಲ್ಲಿ ಯಾರು ಯಾವ ಜಾತಿಗೆ ಸೇರಿದ್ದಾರೆಂಬ ಬಗ್ಗೆ ಸ್ಪಷ್ಟತೆ ಸಿಗಬೇಕೆಂಬ ಕಾರಣಕ್ಕೆ ಸಮೀಕ್ಷೆ ನಡೆಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿಯೂ ಅಸಮರ್ಥರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದಾಗ ಬಿಜೆಪಿಯವರ ವಿರುದ್ಧವೇ ಹಲವು ಹೇಳಿಕೆಗಳನ್ನು ನೀಡಿದ್ದರು. ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್ ನ ಭರವಸೆಯಾಗಿದೆ. ಒಂದು ಕುಟುಂಬದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಸರ್ಕಾರವಾಗಿ ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆದಿಲ್ಲ, ಹಲವು ಸಂದರ್ಭಗಳಲ್ಲಿ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದ್ದರಿಂದ ಜಾತಿಗಣತಿ ಮಾಡಬೇಕಾದ ಅನಿವಾರ್ಯತೆಯಿತ್ತು ಎಂದಿದ್ದಾರೆ.…
ಬೆಂಗಳೂರು: ರಾಜ್ಯದ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವಂತ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕ ಪರಿಷಿಷ್ಟ ಪಂಗಡಗಳ ವಸತಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘದವತಿಯಿಂದ ಕಾರ್ಯನಿರ್ವಹಿಸುತ್ತಿರುವ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಛೆ / ಆಯ್ಕೆಗಳ ಆಧಾರದ ಮೇಲೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ದಿನಾಂಕ 11.04.2025ರಂದು ಪ್ರಾಧಿಕಾರದ ವೆಬ್ಸೈಟಿನಲ್ಲಿ ಪ್ರಕಟಿಸಲಾಗಿದೆ ಎಂದಿದೆ. ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ದಿನಾಂಕ 16.04.2025ರ ಸಂಜೆ 5.30ರವರೆಗೆ ಸಂಬಂಧಿಸಿದಂತ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ ಎಂಬುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. https://twitter.com/KEA_karnataka/status/1911066689535377610 https://kannadanewsnow.com/kannada/bjp-leaders-should-change-board-saying-their-fight-is-against-central-government-dks/ https://kannadanewsnow.com/kannada/c-shivu-yadav-congratulates-cm-siddaramaiah-on-behalf-of-kadugollas/
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಡುಗೊಲ್ಲರ ಸಮುದಾಯದ ಪರವಾಗಿ ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿಯ ಸಂಘದ ರಾಜ್ಯಾಧ್ಯಕ್ಷ ಅಭಿನಂದನೆಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಗೆ ಬಿಡುಗಡೆ ಮಾಡಿರುವಂತ ಅವರು, ಸಿಎಂ ಸಿದ್ದರಾಮಯ್ಯನವರ ಸಚಿವ ಸಂಪುಟದಲ್ಲಿ ಜಯಪ್ರಕಾಶ್ ಹೆಗ್ಡೆ ಯವರು ನೀಡಿರು ಹಿಂದುಳಿದ ವರ್ಗಗಳ ಸಮಾಜಿಕ ಆರ್ಥಿಕ ಶೈಕ್ಷಣಿಕ ವರದಿಯು ಮಂಡನೆಯಾಗಿರುವುದನ್ನು ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘವು ಸ್ವಾಗತಿಸುತ್ತದೆ. ಬಹುದಿನಗಳ, ಬಹು ಜನಗಳ, ಬಹು ಸಮಾಜಗಳ ಬೇಡಿಕೆಯಾಗಿತ್ತು. ರಾಜ್ಯದ ಹಿಂದುಳಿದ ವರ್ಗಗಳ ಬೇಡಿಕೆ ಕೈಗೂಡುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಕೆಲವು ಜಾತಿಯ ಪಟ್ಟಬಧ್ರ ಶಕ್ತಿಗಳು ವರದಿಯಲ್ಲಿ ಏನು ಇದೆ ಎಂಬುದು ತಿಳಿಯದಿದ್ದರೂ ವರದಿಯ ಬಗ್ಗೆ ತಳಬುಡ ಗೊತ್ತಿಲ್ಲದಿದ್ದರೂ ಕಿಡಿಗೇಡಿಗಳಂತೆ ವರದಿಯನ್ನು ವಿರೋದಿಸುತ್ತಿದ್ದಾರೆ. ಜೊತೆಗೆ ಇದು ಜಾತಿ ಜನಗಣತಿಯ ವರದಿ ಎಂದು ಬಿಂಬಿಸುತ್ತಿದ್ದಾರೆ. ಜನಗಣತಿಯನ್ನು ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ ಎಂಬ ಸಾಮಾನ್ಯ ಜ್ಞಾನವು ಈ ಮುಖಂಡರಿಗೆ ಇಲ್ಲದಂತಾಗಿದೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ. ದೇಶದಲ್ಲಿ ಆರ್ಥಿಕ ಸಾಮಾಜಿಕ ಮತ್ತು ಸ್ಥಾನಮಾನವನ್ನು ನಿರ್ದರಿಸಲು…
ಬೆಳಗಾವಿ : ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ. ರಾಜ್ಯಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ನ ಕಚ್ಚಾ ತೈಲದ ಬೆಲೆಯ ಮೇಲೆ ದರ ನಿಗದಿಯಾಗುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಒಂದು ಬ್ಯಾರೆಲ್ ಕಚ್ಚಾ ತೈಲಕ್ಕೆ 120 ಡಾಲರ್ ಇದ್ದು, ಈಗ 65 ಡಾಲರ್ ಗೆ ಇಳಿದಿದೆ. ಅಂದು ಗ್ಯಾಸ್ ಸಿಲಿಂಡರ್ ಬೆಲೆ 400 ರೂ. ಇದ್ದು, 800 ರೂ. ಕ್ಕೂ ಮೀರಿದೆ.ಆದರೂ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಕೇಂದ್ರ…
ಉತ್ತರ ಕನ್ನಡ: ಜಿಲ್ಲೆಯ ಬನವಾಸಿಯಲ್ಲಿ ನಡೆದ ಕದಂಬೊತ್ಸವವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ 2024-25 ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಯನ್ನು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಬಿ. ಎ. ವಿವೇಕ ರೈ ಅವರಿಗೆ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಮಾಜಿ ಸಚಿವ ಆರ್ ವಿ ದೇಶಪಾಂಡೆ, ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿ ಅಧ್ಯಕ್ಷ ಸತೀಶ್ ಕೃಷ್ಣ ಸೈಲ್, ಹಾಗೂ ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್ , ಉತ್ತರ ಕನ್ನಡ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ, ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ ಕೆ., ಕಾರ್ಯದರ್ಶಿ ಡಾ. ವೆಂಕಟೇಶ್ ಎಂ ,ವಿ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ…
ಬೆಂಗಳೂರು: “ಏಪ್ರಿಲ್ 17ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರ ಪರವಾಗಿ ಹೋರಾಟ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ತಮ್ಮ ಜನಾಕ್ರೋಶ ಯಾತ್ರೆಯ ಬೋರ್ಡ್ ನಲ್ಲಿ ‘ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ’ ಎಂದು ಬದಲಾವಣೆ ಮಾಡಿಕೊಳ್ಳಲಿ ಎಂದು ಆ ಪಕ್ಷದ ನಾಯಕರಿಗೆ ಮನವಿ ಮಾಡುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು. ಏ.17ರಂದು ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ನಡೆಸಲಿರುವ ಹೋರಾಟದ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಪೂರ್ವಸಿದ್ಧತಾ ಸಭೆ ನಡೆಸಿ, ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಎಲ್ಲಾ ವಸ್ತುಗಳ ಬೆಲೆ ಏನಿತ್ತು, ಈಗ ಏನಾಗಿದೆ ಎಂದು ನೋಡಬೇಕು. ಈ ಬೆಲೆ ಏರಿಕೆ ಬಿಸಿ ತಡೆಯಲು ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ರಾಜ್ಯ ಮಟ್ಟದಲ್ಲಿ ಹೋರಾಟ ಮಾಡಲು ಅನೇಕ ನಾಯಕರು ಇಂದು ಚರ್ಚೆ…