Author: kannadanewsnow09

ಮಂಡ್ಯ : ರಾಜ್ಯದಲ್ಲಿ ಹಿಂದುತ್ವದ ಪರ ಹೋರಾಟ ಮಾಡಿದ್ರೆ ನನ್ನ ಮೇಲೆ ರೌಡಿ ಕೇಸ್ ಹಾಕ್ತಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರದ ವಿರುದ್ಧ ಶುಕ್ರವಾರ ವಾಗ್ಧಾಳಿ ನಡೆಸಿದರು. ಮದ್ದೂರು ತಾಲೂಕಿನ ಗಡಿಭಾಗ ನಿಡಘಟ್ಟದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ದೂರಿನ ಶಾಂತ ವಾತಾವರಣವನ್ನು ಹಾಳು ಮಾಡುತ್ತಿರುವುದು ಕಾಂಗ್ರೆಸ್ ಸರ್ಕಾರ ನಾವು ಯಾವುದೇ ಪ್ರತಿಭಟನೆಗೆ ಹೋಗುತ್ತಿಲ್ಲ. ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದ ಗಲಭೆಯಲ್ಲಿ ಪೋಲೀಸರು 500 ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದ್ದಾರೆ. ಈ ಬಗ್ಗೆ ವಕಾಲತ್ತು ವಹಿಸಲು ವಕೀಲರ ಜತೆ ಹೋಗುತ್ತಿದ್ದೇನೆ. ಆದರೆ, ಸಂವಿಧಾನ ವಿರೋಧಿ ಕಾಂಗ್ರೆಸ್ ಸರ್ಕಾರ ನಮ್ಮನ್ನು ತಡೆಯುವ ನೀಚ ಕೆಲಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಮತ್ತು ಪೋಲೀಸರು ಕಲ್ಲು ಹೊಡೆದವರನ್ನು, ಪಾಕಿಸ್ತಾನ್ ಜಿಂದಾಬಾದ್ ಎನ್ನುವ ಕಿಡಿಗೇಡಿಗಳ ಮೇಲೆ ಶೂಟ್ ಮಾಡಬೇಕು. ಇಲ್ಲಿ ಹುಟ್ಟಿ, ಬೆಳೆದು ನಮ್ಮ ಮೇಲೆ ಕಲ್ಲು ಎಸೆಯುತ್ತಾರೆ ಎಷ್ಟು ಸೊಕ್ಕು?…

Read More

ಶಿವಮೊಗ್ಗ: ನಾಳೆ ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯನ್ನು ಕರೆಯಲಾಗಿದೆ. ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದಿಂದ ಮಾರಿಕಾಂಬಾ ಜಾತ್ರೆ, ಸಂಘದ ಚುನಾವಣೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 20-09-2025ರ ಶನಿವಾರದ ನಾಳೆ ಸಾಗರದ ಆರ್ಯ ಈಡಿಗರ ಕಲ್ಯಾಣ ಮಂದಿರ, ವರದಹಳ್ಳಿ ರಸ್ತೆಯಲ್ಲಿ ಸರ್ವ ಸದಸ್ಯರ ಸಭೆಯನ್ನು ನಿಗದಿ ಪಡಿಸಲಾಗಿದೆ. ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ  ಕೆ.ಎನ್ ನಾಗೇಂದ್ರ ಅಧ್ಯಕ್ಷತೆಯಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಸರ್ವ ಸದಸ್ಯ ಸಾಮಾನ್ಯ ಸಭೆ ನಡೆಯಲಿದೆ ಎಂದು ತಿಳಿಸಿದೆ. ಈ ಸಭೆಯಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಸಾಗರ-ಹೊಸನಗರ ತಾಲ್ಲೂಕು ಶಾಸಕರಾದಂತ ಗೋಪಾಲಕೃಷ್ಣ ಬೇಳೂರು ಇವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ಸದಸ್ಯರೆಲ್ಲರೂ ಹಾಜರಿರುವಂತೆ ಕೋರಲಾಗಿದೆ. ಇನ್ನೂ…

Read More

ರಾಮನಗರ : “ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. “ನಾನು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವುದಕ್ಕೆ ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ದೇನೆ ಎಂದು ಕೆಲವರು ಟೀಕೆ ಮಾಡುತ್ತಿದ್ದಾರೆ. ನಾನು ಜಾತಿ ಮೇಲೆ ನಂಬಿಕೆಯಿಟ್ಟಿರುವವನಲ್ಲ. ನೀತಿ ಮೇಲೆ ನಂಬಿಕೆಯಿಟ್ಟಿರುವವನು. ಬಡವರ ಬಗ್ಗೆ ಕಾಳಜಿಯನ್ನಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಎಲ್ಲಾ ವರ್ಗದ ಜನರ ಏಳಿಗೆಗೆ ಶ್ರಮಿಸುತ್ತಿದ್ದೇನೆ” ಎಂದರು. “ರಾಮನಗರ ಕ್ಷೇತ್ರದ ಜನತೆಗೆ 100 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಬೇಕು ಎಂದು ಜಿಲ್ಲೆಯ ಪ್ರತಿಧಿಗಳ ಸಭೆ ಕರೆದು ಈಗಾಗಲೇ ತೀರ್ಮಾನ ಮಾಡಲಾಗಿದೆ. “ಬಗರ್ ಹುಕುಂ ಸೇರಿದಂತೆ, ಭೂ…

Read More

ರಾಮನಗರ: “ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. “ನಾನು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವುದಕ್ಕೆ ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ದೇನೆ ಎಂದು ಕೆಲವರು ಟೀಕೆ ಮಾಡುತ್ತಿದ್ದಾರೆ. ನಾನು ಜಾತಿ ಮೇಲೆ ನಂಬಿಕೆಯಿಟ್ಟಿರುವವನಲ್ಲ. ನೀತಿ ಮೇಲೆ ನಂಬಿಕೆಯಿಟ್ಟಿರುವವನು. ಬಡವರ ಬಗ್ಗೆ ಕಾಳಜಿಯನ್ನಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಎಲ್ಲಾ ವರ್ಗದ ಜನರ ಏಳಿಗೆಗೆ ಶ್ರಮಿಸುತ್ತಿದ್ದೇನೆ” ಎಂದರು. 100 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಿಕೆ “ರಾಮನಗರ ಕ್ಷೇತ್ರದ ಜನತೆಗೆ 100 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಬೇಕು ಎಂದು ಜಿಲ್ಲೆಯ ಪ್ರತಿಧಿಗಳ ಸಭೆ ಕರೆದು ಈಗಾಗಲೇ ತೀರ್ಮಾನ ಮಾಡಲಾಗಿದೆ.…

Read More

ಬೆಂಗಳೂರು: “ಎಲ್ಲಾ ಗೊಂದಲ ಸರಿಪಡಿಸಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ. ಕಾನೂನು ಚೌಕಟ್ಟಿನಲ್ಲಿ ಸಾಮಾಜಿಕ ನ್ಯಾಯ ಒದಗಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಸಿಎಂ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಜಾತಿಗಣತಿ ವಿಚಾರವಾಗಿ ಸರ್ಕಾರದ ವಿರುದ್ಧ ಟೀಕೆ ವ್ಯಕ್ತವಾಗುತ್ತಿವೆ ಎಂದು ಕೇಳಿದಾಗ, “ಬಿಜೆಪಿ ಹಾಗೂ ಬೇರೆ ಪಕ್ಷದವರು ಷಡ್ಯಂತ್ರ ರೂಪಿಸಿ, ಅಪಪ್ರಚಾರ ಮಾಡುತ್ತಿದ್ದಾರೆ. ನಾವು ಎಲ್ಲರಿಗೂ ನ್ಯಾಯ ಒದಗಿಸುತ್ತೇವೆ. ಜಾತಿಗಳ ಪಟ್ಟಿಯಲ್ಲಿ ಅಕ್ಷರಗಳ ಆಧಾರದ ಮೇಲೆ ಸಮುದಾಯಗಳನ್ನು ಪಟ್ಟಿ ಮಾಡಲಾಗಿದೆ. ಪ್ರತಿ ಮನೆ ಮನೆಗೆ ಹೋಗಿ, ಎಲ್ಲರ ಮಾಹಿತಿ ಸಂಗ್ರಹಿಸುತ್ತೇವೆ.” ಎಂದು ತಿಳಿಸಿದರು. ಮೇಲ್ಮನೆ ಮಾಜಿ ಸಭಾಪತಿ ಸುದರ್ಶನ್ ಅವರು ತಮ್ಮ ಭಾಷಣದಲ್ಲಿ ನಿಮಗೆ ಕೆಲವು ಸಲಹೆ ನೀಡಿದ್ದಾರಲ್ಲ ಎಂದು ಕೇಳಿದಾಗ, “ಅವರು ಸಲಹೆ ನೀಡಿದ್ದು, ಹಿಂದುಳಿದ ವರ್ಗಗಳ ಆಯೋಗಕ್ಕೆ ನಿಮ್ಮ ಸಲಹೆಯನ್ನು ತಿಳಿಸಿ ಎಂದು ಅವರಿಗೆ ಹೇಳಿದ್ದೇವೆ.…

Read More

ಶಿವಮೊಗ್ಗ: ಹಿಂದುಳಿದ ಆಯೋಗದ ಮೂಲಕ ಜಾತಿ ಗಣತಿಗೆ ಸರ್ಕಾರ ಮುಂದಾಗಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಸಮಾಜದ ನೇತೃತ್ವದಲ್ಲಿ ‌ನಿರ್ಣಯ ಮಾಡಲಾಗಿದ್ದು, ಧರ್ಮದ ಕಲಂ 1ಲ್ಲಿ ಹಿಂದೂ ಎಂದೂ ಕಲಂ 2ರಲ್ಲಿ ಬ್ರಾಹ್ಮಣ ಎಂದೇ ನಮೂದಿಸಬೇಕು ಎಂದು ಬ್ರಾಹ್ಮಣ ಸಮಾಜದ ಸೊರಬ ತಾಲ್ಲೂಕು ಅಧ್ಯಕ್ಷ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಸಮಾಜದ ಸಂಘಟನಾ ಕಾರ್ಯದರ್ಶಿ ಪ್ರಕಾಶ್ ತಲಕಾಲಕೊಪ್ಪ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಾಸ್ತವವಾಗಿ ಸುಮಾರು 45 ಲಕ್ಷ ಜನಸಂಖ್ಯೆ ಬ್ರಾಹ್ಮಣರಿದ್ದಾರೆ. ಈ ಹಿಂದಿನ ಸಮೀಕ್ಷೆಯಲ್ಲಿ ಕೇವಲ 12 ಲಕ್ಷ ಜನಸಂಖ್ಯೆ ತೋರಿಸಲಾಗಿತ್ತು. ಉಪ ಪಂಗಡಗಳ ಜಾತಿ ಹೆಸರನ್ನು ನಮೂಸಿದ್ದರಿಂದ ಈ ರೀತಿ ಸಂಖ್ಯೆಯಲ್ಲಿ ವ್ಯತ್ಯಾಸ ಆಗಿತ್ತು. ಆದ್ದರಿಂದ ಈ ಬಾರಿ ಜಾತಿ ಸಮೀಕ್ಷೆಯಲ್ಲಿ ಬ್ರಾಹ್ಮಣ ಎಂದೇ ನಮೂದಿಸಿ ಎಂದು ಮನವಿ ಮಾಡಿದರು. ಅಸಮಾನತೆಯ ಕಾರಣಕ್ಕಾಗಿ ಕ್ರಿಸ್ಟಿಯನ್ ಧರ್ಮಕ್ಕಾಗಿ ಮತಾಂತರಗೊಂಡ ಹಲವರಿಗೆ ಕ್ರಿಶ್ಚಿಯನ್ ಮತ್ತು ಜಾತಿ ನಮೂದಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮತಾಂತರಗೊಂಡಾಗ ಮತ್ತೆ ಅವರಿಗೆ…

Read More

ಸೊರಬ: ಶ್ರೀ ರೇಣುಕಾಂಬಾದೇವಿ ದಸರಾ ಉತ್ಸವ ಆಚರಣಾ ಸಮಿತಿ ವತಿಯಿಂದ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ನಡೆಯುವ ದಸರಾ ದಶಮಾನೋತ್ಸವ ಆಚರಣೆ ವರ್ಷದ ಪ್ರಯುಕ್ತ ಜಂಬೂ ಸವಾರಿ ಹಾಗೂ ಜಂಗಿ ಕುಸ್ತಿಯನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್.28ರಂದು ಜಂಗಿ ಕುಸ್ತಿ, ಅಕ್ಟೋಬರ್.2ರಂದು ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ ಎಂದು ರೇಣುಕಾಂಬಾ ದಸರಾ ಉತ್ಸವ ಸಮಿತಿ ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ ತಿಳಿಸಿದ್ದಾರೆ. ಇಂದು ಚಂದ್ರಗುತ್ತಿ ದಸರಾ ಮಹೋತ್ಸವದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಸೆಪ್ಟೆಂಬರ್ 22ರಂದು ಸೋಮವಾರ ಸಂಜೆ 7-30 ಗಂಟೆಗೆ ಚಂದ್ರಗುತ್ತಿ ಶ್ರೀ ರೇಣುಕಾಂಬಾ ಕಲ್ಯಾಣ ಮಂಟಪ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಾಗರ ಉಪ ವಿಭಾಗಾಧಿಕಾರಿ ವೀರೇಶ್, ಚಂದ್ರಗುತ್ತಿ ಗ್ರಾಮ ಸರಿತಾ ಅಧ್ಯಕ್ಷೆ ಕೃಷ್ಣಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್. ಗಣಪತಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರೇಣುಕಾಪ್ರಸಾದ್ ಎಂ.ಬಿ., ಸದಸ್ಯ ರತ್ನಾಕರ ಎಂ.ಪಿ.,ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎನ್.ಜಿ. ನಾಗರಾಜ, ಶ್ರೀ…

Read More

ಬೆಂಗಳೂರು: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಆ ಜಿಲ್ಲೆಯ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ʻಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ, ಒಪ್ಪಿಗೆ ನೀಡಲಾಗಿದೆ. ಇದರಿಂದಾಗಿ ವಿಜಯಪುರ ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿನ ಒಟ್ಟು ವೆಚ್ಚವು 618.75 ಕೋಟಿ ರೂ.ಗಳಾಗಲಿದೆ. ಎಟಿಆರ್‌ ಮಾದರಿಯ ನಾಗರಿಕ ವಿಮಾನ ಕಾರ್ಯಾಚರಣೆಗೆ ಸೀಮಿತವಾಗಿದ್ದ ವಿಮಾನ ನಿಲ್ದಾಣದ ಮೂಲ ವಿನ್ಯಾಸವನ್ನು ಏರ್‌ಬಸ್‌-320 ಮಾದರಿಯ ವಿಮಾನಗಳ ಕಾರ್ಯಾಚರಣೆಗೂ ಅನುಕೂಲವಾಗುವಂತೆ ಬದಲಿಸಿದ್ದರಿಂದ ವೆಚ್ಚ ಹೆಚ್ಚಾಗುತ್ತಿದೆʼ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಮೂಲವಿನ್ಯಾಸವನ್ನು ಚಿಕ್ಕ ವಿಮಾನಗಳನ್ನು ಗಮನದಲ್ಲಿ ಇಟ್ಟಿಕೊಂಡು ಮಾತ್ರ ಮಾಡಲಾಗಿತ್ತು. ಅದರಲ್ಲಿ ಏರ್‌ಬಸ್‌ ಮಾದರಿಯ…

Read More

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ, ಸರ್ಕಾರವು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು 186 ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ದಿನಾಂಕ:09.03.2023 ರ ಆದೇಶದಲ್ಲಿ ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ವಿವಿಧ ಯೋಜನೆಯಡಿಯಲ್ಲಿ ಹಾಗೂ ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ರಡಿ ನೊಂದಾಯಿತಗೊಂಡಿರುವ ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ (KASS), “ಭಾವಿತ ನೊಂದಾವಣೆಗೆ (Deemed Empanelment) ಒಳಪಡಿಸಲು ಆದೇಶಿಸಲಾಗಿದೆ. ಅದರಂತೆ, ಆಸ್ಪತ್ರೆಗಳು ಹೊಂದಿರಬೇಕಾದ ಮೂಲ ಸೌಕರ್ಯಗಳು ಹಾಗೂ ಇತರೆ ಮಾನದಂಡಗಳನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಪರಿಶೀಲಿಸಿಕೊಂಡು, ಆಸ್ಪತ್ರೆಗಳೊಂದಿಗೆ ಸೂಕ್ತ ಒಪ್ಪಂದ (MoU) ಮಾಡಿಕೊಳ್ಳುವ ಷರತ್ತಿಗೊಳಪಟ್ಟು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಇಚ್ಛೆ ವ್ಯಕ್ತಪಡಿಸಿರುವ ಅನುಬಂಧದಲ್ಲಿನ 186 ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಖಾಸಗಿ ನೊಂದಾವಣೆಗೊಳಿಸಲಾಗಿದೆ. ಸದರಿ ಅಧಿಸೂಚನೆಯನ್ನು ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 16 ಎಸ್‌ಎಂಆ‌ 2020,…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಬಳಿಕ ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿತ್ತು. ಇಂದು ಈ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಸುಪ್ರೀಂ ಕೋರ್ಟ್ ತೀರ್ಪನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ವಾಗತಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ. ಮೈಸೂರು ದಸರಾವನ್ನು ಧಾರ್ಮಿಕ ನೆಲೆಗಟ್ಟಿಗೆ ಸೀಮಿತವಾಗಿಸಲು ಸಾಧ್ಯವಿಲ್ಲ. ಜಾತಿ, ಧರ್ಮಗಳನ್ನು ಮೀರಿ ನಾಡಿನ ಸಮಸ್ತ ಜನರು ಕೂಡಿ ಸಂಭ್ರಮಿಸುವ ಹಬ್ಬವೆಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೆವು, ಆದರೂ ಇದರ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ, ಸಮಾಜವನ್ನು ಒಡೆಯುವ ಪ್ರಯತ್ನ ಮಾಡಲಾಯಿತು. ಈಗ ಸುಪ್ರೀಂ ತೀರ್ಪಿನಿಂದ ನಮ್ಮ…

Read More