Author: kannadanewsnow09

ಬೆಂಗಳೂರು: ರೇಣುಕಾಸ್ವಾಮಿಗೆ ಆರೋಪಿ ಎ.5, ಎ.13ಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ. ಅದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಎಂಬುದಾಗಿ ನಟ ದರ್ಶನ್ ಪರ ವಕೀಲರು ಶಾಕಿಂಗ್ ಮಾಹಿತಿಯನ್ನು ಕೋರ್ಟ್ ನಲ್ಲಿ ಬಿಚ್ಚಿಟ್ಟಿದ್ದಾರೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಸಹಚರರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ಆರಂಭಗೊಂಡ ನಂತ್ರ, ನಟ ದರ್ಶನ್ ಪರ ವಕೀಲ ಅನಿಲ್ ಬಾಬು ಅವರು, ಎ.5, ಎ13 ಆರೋಪಿಗಳು ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ ಎಂಬುದಾಗಿ ನ್ಯಾಯಾಲಯದ ಗಮನಕ್ಕೆ ತಂದರು. ಎ.5 ನಂದೀಶ್, ಎ13 ಆರೋಪಿ ದೀಪಕ್ ಅವರು, ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ ಎಂಬುದಾಗಿ ನ್ಯಾಯಾಲಯದ ಗಮನಕ್ಕೆ ತಂದರು. ಈ ಬಳಿಕ ಪವಿತ್ರಾ ಗೌಡ ಪರ ವಕೀಲರು ವಾದ ಮಂಡಸಿ, ಪವಿತ್ರಾ ಗೌಡರನ್ನು 6 ದಿನಗಳ ಕಾಲ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅನುಮತಿ ಪಡೆಯದೇ ಆರೋಪಿಗಳ ಮೊಬೈಲ್…

Read More

ಮಂಡ್ಯ: ಇಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಬಳಿಕ ಹೆಚ್.ಡಿ ಕುಮಾರಸ್ವಾಮಿ ಮಂಡ್ಯಕ್ಕೆ ಆಗಮಿದರು. ಈ ವೇಳೆಯಲ್ಲಿ ಮೈತ್ರಿ ಕಾರ್ಯಕರ್ತರಿಂದ ಹೆಚ್.ಡಿ ಕುಮಾರಸ್ವಾಮಿಯವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ಮಂಡ್ಯಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗಮಿಸಿದರು. ಕೇಂದ್ರ ಸಚಿವರಾದ ಬಳಿಕ ಮಂಡ್ಯಕ್ಕೆ ಮೊದಲ ಬಾರಿಗೆ ಭೇಟಿ ನೀಡಿದರು. ಮಂಡ್ಯ ಜಿಲ್ಲೆ ಗಡಿ ಮದ್ದೂರಿನ ನಿಡಘಟ್ಟಕ್ಕೆ ಹೆಚ್.ಡಿ ಕುಮಾರಸ್ವಾಮಿ ಆಗಮಿಸಿದರು. ಈ ವೇಳೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಪಟಾಕಿ ಸಿಡಿಸಿ, ತಮಟೆ ವಾದ್ಯಗಳ ಮೂಲಕ ಗ್ರ್ಯಾಂಡ್ ವೆಲ್ ಕಮ್ ಮಾಡಲಾಯಿತು. ಅಲ್ಲದೇ ಹೆಚ್.ಡಿಕೆ ಆಗಮಿಸುತ್ತಿದ್ದಂತೆ ಜೈಕಾರದ ಸುರಿಮಳೆಯನ್ನು, ಕ್ರೇನ್ ಮೂಲಕ ಬೃಹತ್ ಹೂವಿನ ಹಾರ ಸಮರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಹೆಚ್ಡಿಕೆಗೆ ಪುತ್ರ ನಿಖಿಲ್, ಜಿ.ಟಿ.ದೇವೇಗೌಡ, ಜಿಲ್ಲೆಯ ಜೆಡಿಎಸ್, ಬಿಜೆಪಿ ನಾಯಕರ ಸಾಥ್ ನೀಡಿದರು. ನಿಡಘಟ್ಟದಿಂದ ಮಂಡ್ಯದ ವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು. ತೆರೆದ ವಾಹನಗಳ ಮುಂದೆ ಸಾಗಿದ ನೂರಾರು…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿ ನಟ ದರ್ಶನ್ ಅಂಡ್ ಟೀಂನಿಂದ 10 ಮೊಬೈಲ್ ಸೀಜ್ ಮಾಡಲಾಗಿದೆ. ಅಲ್ಲದೇ 30 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ ಅಂತ ರಾಜ್ಯ ಸರ್ಕಾರದ ಪರ ಎಸ್ ಪಿಪಿ ಪ್ರಸನ್ನ ಕುಮಾರ್ ಇಂದು ನ್ಯಾಯಪೀಠದ ಗಮನಕ್ಕೆ ತಂದರು. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ನಟ ದರ್ಶನ್ ಮತ್ತು ಸಹಚರರನ್ನು ಪೊಲೀಸ್ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಕೋರ್ಟ್ ಕಲಾಪ ಆರಂಭಗೊಳ್ಳುತ್ತಿದ್ದಂತೆ ಎಸ್ ಪಿಪಿ ಪಿ.ಪ್ರಸನ್ನ ಕುಮಾರ್ ಬಂಧಿತ ಆರೋಪಿಗಳಿಂದ 10 ಮೊಬೈಲ್, 30 ಲಕ್ಷ ಸೀಜ್ ಮಾಡಲಾಗಿದೆ ಅಂತ ತಿಳಿಸಿದರು. ಇದೇ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಸಿಡಿ ಸಲ್ಲಿಸಿದರು. ಮತ್ತಷ್ಟು ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ದರ್ಶನ್, ಆರೋಗಿಳನ್ನು ವಶಕ್ಕೆ ನೀಡುವಂತೆ ಕೋರ್ಟ್ ಗೆ ಮನವಿ ಮಾಡಿದರು. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ. ಪೊಲೀಸರ ಕಸ್ಟಡಿಗೆ…

Read More

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶನಿವಾರ ಬೆಳಿಗ್ಗೆ ಪಾಟ್ನಾದ ಮೇದಾಂತ ಆಸ್ಪತ್ರೆಗೆ ಭೇಟಿ ನೀಡಿದರು. ಆದಾಗ್ಯೂ, ಅವರು ಆಸ್ಪತ್ರೆಯಲ್ಲಿ ತಪಾಸಣೆಯ ನಂತರ ಮರಳಿದರು. ಸುದ್ದಿ ಸಂಸ್ಥೆಯ ಪ್ರಕಾರ, ಅವರು ಮೂಳೆ ವಿಭಾಗದಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಬೆಳಿಗ್ಗೆ 8: 33 ಕ್ಕೆ ಪಾಟ್ನಾದ ಮೇದಾಂತ ಆಸ್ಪತ್ರೆಗೆ ತಲುಪಿದರು. ಮಾಹಿತಿಯ ಪ್ರಕಾರ, ಅವರ ಕೈಯಲ್ಲಿ ನೋವು ಇತ್ತು, ಇದನ್ನು ಆಸ್ಪತ್ರೆಯ ಮೂಳೆ ವಿಭಾಗದಲ್ಲಿ ಚಿಕಿತ್ಸೆ ನೀಡಲಾಯಿತು. ತಪಾಸಣೆಯ ನಂತರ, ಅವರು ಬೆಳಿಗ್ಗೆ 10: 30 ರ ಸುಮಾರಿಗೆ ಮರಳಿದರು. ಸಭೆ ಕರೆದ ನಿತೀಶ್ ಕುಮಾರ್ ಲೋಕಸಭಾ ಚುನಾವಣೆ ಮುಗಿದ ನಂತರ ನಿತೀಶ್ ಕುಮಾರ್ ಶುಕ್ರವಾರ ಕ್ಯಾಬಿನೆಟ್ ಸಭೆ ಕರೆದಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 25 ಕಾರ್ಯಸೂಚಿಗಳಿಗೆ ಅನುಮೋದನೆ ನೀಡಲಾಯಿತು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಸೇರಿದಂತೆ ಇತರ ಸಚಿವರು ಉಪಸ್ಥಿತರಿದ್ದರು. ಬಾಕಿ ಇರುವ ಅನೇಕ ಕಾರ್ಯಸೂಚಿಗಳನ್ನು ಅನುಮೋದಿಸಲಾಗಿದೆ,…

Read More

ಬೆಂಗಳೂರು: ವಾಲ್ಮೀಕಿ ನಿಗಮದ 187 ಕೋಟಿಯಷ್ಟು ಮೊತ್ತದ ದೊಡ್ಡ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೆಂದು ರಾಜ್ಯದ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರ ನೇತೃತ್ವದ ಸಭೆಯು ತೀರ್ಮಾನ ಕೈಗೊಂಡಿದೆ ಎಂದು ಪ್ರಕಟಿಸಿದರು. 28ರಂದು ಎಲ್ಲ ಜಿಲ್ಲೆಗಳು, ತಾಲ್ಲೂಕು ಮಟ್ಟದಲ್ಲಿ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ವಿವರ ನೀಡಿದರು. ಹಣಕಾಸಿನ ಸಚಿವರೂ ಆಗಿರುವ, 14ಕ್ಕೂ ಹೆಚ್ಚು ಬಾರಿ ಹಣಕಾಸು ಸಚಿವರಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ಬಾರದೆ ಇಷ್ಟು ದೊಡ್ಡ ಮೊತ್ತ ಬೇರೆಡೆ ವರ್ಗಾವಣೆ ಆದುದು ಹೇಗೆ? ಆದ್ದರಿಂದ, ಈ ಹಗರಣದಲ್ಲಿ ಸಿದ್ದರಾಮಯ್ಯನವರ ಮೇಲೆ ಅನುಮಾನ ಬರುತ್ತಿದೆ ಎಂದು ನುಡಿದರು. ಸಿದ್ದರಾಮಯ್ಯನವರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಚಂದ್ರಶೇಖರ್ ಎಂಬ ಅಮಾಯಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿವರ ಮೌಖಿಕ ಆದೇಶದನ್ವಯ…

Read More

ಬೆಂಗಳೂರು: ಇಂದು ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಪ್ರತಿಲೀಟರ್ ಗೆ ಹೆಚ್ಚಾಗಲಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆಯಲ್ಲಿ ಆದೇಶ ಹೊರಡಿಸಿದ್ದು, ಅದರಲ್ಲಿ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆ ಮಾಡಲಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ‌ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಲಿದೆ ಎಂಬುದಾಗಿ ತಿಳಿಸಿದೆ. ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕರ್ನಾಟಕದಲ್ಲಿ ಹೆಚ್ಚಳ ಮಾಡಿದ ಪರಿಣಾಮವಾಗಿ ಪೆಟ್ರೋಲ್ ದರ ರೂ.3 ಹಾಗೂ ಡಿಸೇಲ್ ದರ ರೂ.3.50 ಪೈಸೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಮೂಲಕ ವಾಹನ ಸವಾರರಿಗೆ ಬಿಗ್ ಶಾಕ್ ಅನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ನೀಡಿದೆ. https://kannadanewsnow.com/kannada/state-govt-issues-guidelines-for-transfer-of-health-department-employees/ https://kannadanewsnow.com/kannada/man-attempts-suicide-by-jumping-on-namma-metro-rail-tracks-in-bengaluru/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ದರಗಳನ್ನು ರೀಟೆಲ್ ದರಗಳನ್ನು ಹೆಚ್ಚಳ ಮಾಡಲಾಗಿದೆ. ಹೀಗಾಗಿ ವಾಹನ ಸವಾರರಿಗೆ ಶಾಕ್ ಎನ್ನುವಂತೆ ಪೆಟ್ರೋಲ್, ಡೀಸೆಲ್ ದರ ಕೂಡ ಹೆಚ್ಚಳ ಆಗುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆಗೆ ಮುನ್ನಾ ಕೇಂದ್ರ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಲಾಗಿತ್ತು. ಈಗ ರಾಜ್ಯ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ಮಾಡಿದೆ. ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆಯಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ‌ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡಿಸೇಲ್ ದರ 3.50 ರೂಪಾಯಿ ಹೆಚ್ಚವಾಗುವ ಸಾಧ್ಯತೆ ಇದೆ.…

Read More

ಡೆಹ್ರಾಡೂನ್ : ಸುಮಾರು 23 ಪ್ರಯಾಣಿಕರನ್ನು ಹೊತ್ತ ಟೆಂಪೋ ಟ್ರಾವೆಲರ್ ಕಮರಿಗೆ ಬಿದ್ದ ಘಟನೆ ರುದ್ರಪ್ರಯಾಗದ ಹೃಷಿಕೇಶ್-ಬದರೀನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ. ಈ ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್) ತಂಡಗಳು ಸ್ಥಳದಲ್ಲೇ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಕಮರಿಗೆ ಬಿದ್ದ ವಾಹನವು ನೋಯ್ಡಾದಿಂದ ಬರುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. https://twitter.com/republic/status/1801909679213183366 12 ಮಂದಿ ಸಾವು, 7 ಮಂದಿಯನ್ನು ಏರ್ ಲಿಫ್ಟ್ ಮಾಡಿ ಏಮ್ಸ್ ರಿಷಿಕೇಶ್ ಆಸ್ಪತ್ರೆಗೆ ದಾಖಲು ಕಮರಿಗೆ ಬಿದ್ದ ವಾಹನದಲ್ಲಿ ಪ್ರಯಾಣಿಸುತ್ತಿದ್ದ 12 ಜನರು ಸಾವನ್ನಪ್ಪಿದ್ದಾರೆ ಮತ್ತು 7 ಗಂಭೀರ ರೋಗಿಗಳನ್ನು ಏಮ್ಸ್ ರಿಷಿಕೇಶಕ್ಕೆ ಸಾಗಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಗಾಯಗೊಂಡ 7 ಪ್ರಯಾಣಿಕರನ್ನು ರುದ್ರಪ್ರಯಾಗದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜ್ಯ ನೋಡಲ್ (ಆರೋಗ್ಯ) ವಿಪತ್ತುಗಳ ಸಹಾಯಕ ನಿರ್ದೇಶಕ ಡಾ.ಬಿಮ್ಲೇಶ್ ಜೋಶಿ ತಿಳಿಸಿದ್ದಾರೆ. https://twitter.com/ANI/status/1801907338913190305 https://kannadanewsnow.com/kannada/valmiki-development-corporation-scam-bjp-to-hold-state-wide-protest-on-june-28/ https://kannadanewsnow.com/kannada/ban-on-consumption-of-these-foods-in-india-heres-the-list-of-banned-foods-of-fssai-banned-foods/

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ, ಅಕ್ರಮ ಸಂಬಂಧ ಈಗಾಗಲೇ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರು. ಈ ಪ್ರಕರಣದ ಆಳ, ಅಗಲ, ವಿಸ್ತಾರ ಇನ್ನೂ ಜಾಸ್ತಿ ಇದೆ. ಸಿಬಿಐ ತನಿಖೆಗೆ ನೀಡಬೇಕು ಎಂಬುದಾಗಿ ಆಗ್ರಹಿಸಿ, ಕರ್ನಾಟಕ ಬಿಜೆಪಿ ಜೂನ್.28ರಂದು ರಾಜ್ಯಾಧ್ಯಂತ ಪ್ರತಿಭಟನೆ ನಿರ್ಧರಿಸಿದೆ. ಇಂದು ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಎಸ್‍ಟಿ ಮೋರ್ಚಾ ಪ್ರಮುಖರ ಸಭೆ ನಡೆಯಿತು. ಇಂದಿನ ಬಿಜೆಪಿ ಎಸ್ ಟಿ ಮೋರ್ಚಾ ಸಭೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ, ಅವ್ಯವಹಾರ ಸಂಬಂಧ ಬಿಸಿ ಬಿಸಿ ಚರ್ಚೆಯಾಯಿತು ಎಂಬುದಾಗಿ ತಿಳಿದು ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿನ ಸಭೆಯಲ್ಲಿ, ಜೂನ್.28ರಂದು ರಾಜ್ಯಾಧ್ಯಂತ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಸಂಬಂಧ ಪ್ರತಿಭಟನೆ ನಡೆಸೋದಕ್ಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಮಾಜಿ ಸಚಿವರಾದ ಬಿ.ಶ್ರೀರಾಮುಲು, ಜನಾರ್ದನ ರೆಡ್ಡಿ, ಎಸ್‍ಟಿ…

Read More

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA) ಯುಜಿಸಿ ನೆಟ್ 2024 ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ನೋಂದಾಯಿತ ಅಭ್ಯರ್ಥಿಗಳು ಯುಜಿಸಿ ನೆಟ್ 2024 ಪರೀಕ್ಷೆಯ ಪ್ರವೇಶ ಪತ್ರವನ್ನು ( UGC NET 2024 exam admit card ) ಅಧಿಕೃತ ವೆಬ್ಸೈಟ್ – ugcnet.nta.ac.in ರಿಂದ ಡೌನ್ಲೋಡ್ ಮಾಡಲು ಸಾಧ್ಯವಾಗುತ್ತದೆ. ಯುಜಿಸಿ ನೆಟ್ ಜೂನ್ 2024 ಹಾಲ್ ಟಿಕೆಟ್ ಡೌನ್ಲೋಡ್ ಮಾಡಲು ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆಗಳು ಮತ್ತು ಹುಟ್ಟಿದ ದಿನಾಂಕದ ಮೂಲಕ ವೆಬ್ಸೈಟ್ಗೆ ಲಾಗ್ ಇನ್ ಆಗಬೇಕು. ಯುಜಿಸಿ ನೆಟ್ 2024ರ ಪರೀಕ್ಷೆಯನ್ನು ಜೂನ್ 18 ರಂದು ಎರಡು ಪಾಳಿಗಳಲ್ಲಿ ನಡೆಸಲಾಗುವುದು. 42 ವಿಷಯಗಳಿಗೆ ಯುಜಿಸಿ ನೆಟ್ ಪರೀಕ್ಷೆಯನ್ನು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12:30 ರವರೆಗೆ ಮತ್ತು 41 ವಿಷಯಗಳಿಗೆ ಎರಡನೇ ಪಾಳಿಯಲ್ಲಿ ಮಧ್ಯಾಹ್ನ 3:30 ರಿಂದ ಸಂಜೆ 6:30 ರವರೆಗೆ ಪರೀಕ್ಷೆ ನಡೆಯಲಿದೆ. ಎರಡೂ ಪತ್ರಿಕೆಗಳ ಒಟ್ಟು ಅವಧಿ ಮೂರು ಗಂಟೆಗಳು.…

Read More