Author: kannadanewsnow09

ಬೆಂಗಳೂರು: ಪ್ರಸಕ್ತ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ 4,007 ಸೀಟು ಹಂಚಿಕೆಗೆ ಲಭ್ಯ ಇದ್ದು, ಅವುಗಳ ವಿವರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ ಕೊಟ್ಟಿರುವ ಪಟ್ಟಿಯಲ್ಲಿ ಕ್ಲಿನಿಕಲ್, ಪ್ರೀ ಕ್ಲಿನಿಕಲ್ ಮತ್ತು ಪ್ಯಾರಾ ಕ್ಲಿನಿಕಲ್ ಗೆ ಸೇರಿದ ಸೀಟುಗಳು ಸೇರಿವೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಯಾವ ಕಾಲೇಜಿನಲ್ಲಿ? ಯಾವ ವಿಭಾಗದ ಸೀಟುಗಳು ಎಷ್ಟು ಸಂಖ್ಯೆಯಲ್ಲಿ ಇವೆ ಎಂಬುದನ್ನು ಅಭ್ಯರ್ಥಿಗಳು ನೋಡಿಕೊಂಡು, ಎಚ್ಚರಿಕೆಯಿಂದ ಆಪ್ಷನ್ ಎಂಟ್ರಿ ಮಾಡಬೇಕಾಗುತ್ತದೆ ಎಂದು ಅವರು ಸಲಹೆ ನೀಡಿದ್ದಾರೆ. ಆಪ್ಷನ್ ಎಂಟ್ರಿ ಆರಂಭ ಮತ್ತು ಸೀಟು ಹಂಚಿಕೆ ಬಗ್ಗೆ ಸದ್ಯದಲ್ಲೇ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. https://kannadanewsnow.com/kannada/important-information-for-state-youth-fund-beneficiaries/ https://kannadanewsnow.com/kannada/money-will-be-deposited-in-the-accounts-of-farmers-who-lost-their-crops-due-to-heavy-rains-cm-siddaramaiah-announces/

Read More

ಬೆಂಗಳೂರು: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಮರಾಠ ಪ್ರವರ್ಗ -3ಬಿ ಅಡಿಯಲ್ಲಿ 2ಎ ಯಿಂದ 2ಎಫ್ ವರೆಗೆ ಬರುವ ಸಮುದಾಯಕ್ಕೆ ಸೇರಿದ 18 ರಿಂದ 55 ವರ್ಷ ವಯೋಮಿತಿ ಹೊಂದಿದವರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ 3ಬಿಯಲ್ಲಿ ಪಡೆದಿರಬೇಕು. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1.20 ಲಕ್ಷ ರೂ.ಗಳನ್ನು ಮೀರಬಾರದು ಅಂಗವಿಕಲ ಮಹಿಳೆಯರಿಗೆ ಶೇ.5% ರಷ್ಟು, ಮಹಿಳೆಯರಿಗೆ ಶೇ.33% ಹಾಗೂ ತೃತೀಯ ಲಿಂಗಿಗಳಿಗೆ ಶೇ.1% ರಷ್ಟು, ಅವಿವಾಹಿತ ಮಹಿಳೆಯರಿಗೆ ಶೇ.2ರಷ್ಟನ್ನು ಮೀಸಲಿರಿಸಿದೆ. ವಿಧವೆಯರಿಗೆ, ಪರಿತ್ಯಕ್ತ ಮಹಿಳೆಯರಿಗೆ, ಹೆಚ್.ಐ.ವಿ. ಪೀಡಿತರಿಗೆ 35 ವರ್ಷ ವಯೋಮಿತಿ ಮೀರಿರಬಾರದು. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್‌ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು. ಒಂದು…

Read More

ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯ ಫಲಾನುಭವಿಗಳು ಮಾಹೆಯಾನ ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳು 01 ರಿಂದ 25ನೇ ತಾರೀಖಿನೊಳಗೆ ಸ್ವಯಂ–ಘೋಷಣೆಯನ್ನು ಪಲಾನುಭವಿಗಳು ವೆಬ್ ಸೈಟ್ www.sevasindhugs.karnataka.gov.in ನ ಮೂಲಕ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ ಮತ್ತು ನಿಗಧಿತ ಅವಧಿಯೊಳಗೆ ಸಲ್ಲಿಸಬೇಕೆಂದು ಬೆಂಗಳೂರು, ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/science-in-kannada-a-special-campaign-from-param-science-experience-center/ https://kannadanewsnow.com/kannada/extension-of-the-deadline-for-online-registration-in-the-caste-census-survey-in-the-state/

Read More

ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿರುವ ಪರಮ್ ಸೈನ್ಸ್ ಎಕ್ಸ್‌ಪೀರಿಯನ್ಸ್‌ ಸೆಂಟರ್‌ನಲ್ಲಿ (ParSEC) ಈ ತಿಂಗಳು ಪೂರ್ತಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡುವ ವಿನೂತನ ಯೋಜನೆಯನ್ನು ಹಮ್ಮಿಕೊಂಡಿದೆ. ಕೇಂದ್ರಕ್ಕೆ ಭೇಟಿ ನೀಡುವ ಎಲ್ಲ ಸಂದರ್ಶಕರಿಗೆ ಗ್ಯಾಲರಿಯಲ್ಲಿನ ವಿಜ್ಞಾನದ ಕೌತುಕಗಳನ್ನು ಕನ್ನಡ ಭಾಷೆಯಲ್ಲಿಯೇ ಮನಮುಟ್ಟುವಂತೆ ವಿವರಿಸಲಾಗುತ್ತದೆ. ವಿಜ್ಞಾನದ ವಿಷಯಗಳನ್ನು ಹೆಚ್ಚು ಆಕರ್ಷಕವಾಗಿಸಲು ಸಿಬ್ಬಂದಿ ವರ್ಗವು ಸಂದರ್ಶಕರೊಂದಿಗೆ ಸಂವಾದ ನಡೆಸಲಿದೆ. ಉದಾಹರಣೆಗೆ, ‘ನೀವೇನಾದರೂ ಕನ್ನಡದಲ್ಲಿ ಒಂದು ನುಡಿಗಟ್ಟು ಹೇಳಿದರೆ, ಅದರ ಹಿಂದಿನ ವಿಜ್ಞಾನದ ಹಿನ್ನೆಲೆ (Science behind it) ನಿಮಗೆ ಗೊತ್ತೇ?’ ಅಥವಾ ‘ಕರ್ನಾಟಕದಲ್ಲಿ ಬಳಕೆಯಲ್ಲಿರುವ ಯಾವುದಾದರೂ ತಂತ್ರಜ್ಞಾನದ ಹಿಂದಿನ ವಿಜ್ಞಾನವೇನು?’ ಎಂದು ಪ್ರಶ್ನಿಸುವ ಮೂಲಕ ಅವರನ್ನು ವಿಷಯದಲ್ಲಿ ತೊಡಗಿಸಿಕೊಳ್ಳಲಾಗುತ್ತದೆ. ಈ ರೀತಿಯಾಗಿ ವಿಜ್ಞಾನವನ್ನು ಕನ್ನಡದೊಂದಿಗೆ ಬೆಸೆಯುವ ಪ್ರಯತ್ನ ನಡೆಯಲಿದೆ. ವಾರಾಂತ್ಯದಲ್ಲಿ ವಿಜ್ಞಾನದ ವಿಶೇಷ ಕಾರ್ಯಾಗಾರಗಳು! ಕೇವಲ ಗ್ಯಾಲರಿ ವಿವರಣೆಗೆ ಸೀಮಿತವಾಗದೇ, ಮಕ್ಕಳು ಹಾಗೂ ಸಂದರ್ಶಕರಲ್ಲಿ ವಿಜ್ಞಾನದ ಬಗೆಗೆ ಆಸಕ್ತಿ ಹೆಚ್ಚಿಸಲು ಪ್ರತಿ ಶನಿವಾರ ಮತ್ತು ಭಾನುವಾರ ಎರಡು ಮುಖ್ಯ ಕಾರ್ಯಾಗಾರಗಳನ್ನು ಆಯೋಜಿಸಲಾಗಿದೆ. ಇದಕ್ಕೆ ಹಾಜರಾಗಲು…

Read More

ಬೆಂಗಳೂರು: ಪಾಲಿಕೆಗಳ ಅಧಿಕಾರಿಗಳನ್ನು ಭೇಟಿ ಮಾಡದೆ, ʼಫೇಸ್‌ಲೆಸ್‌, ಸಂಪರ್ಕರಹಿತ, ಆನ್‌ಲೈನ್‌ ಇ-ಖಾತಾʼ ಪಡೆಯುವ ವ್ಯವಸ್ಥೆಯನ್ನು ಜಿಬಿಎ ವ್ಯಾಪ್ತಿಯಲ್ಲಿ ಜಾರಿಗೊಳಿಸಲಾಗಿದೆ. ಇದರಿಂದ ನಾಗರಿಕರಿಗೆ ಆಗುತ್ತಿದ್ದ ಕಿರುಕುಳ ತಪ್ಪುತ್ತದೆ, ಭ್ರಷ್ಟಾಚಾರ ಇಲ್ಲದಂತಾಗುತ್ತದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್‌ ಮೌದ್ಗಿಲ್‌ ತಿಳಿಸಿದ್ದಾರೆ. ಬಿಬಿಎಂಪಿಯಲ್ಲಿ ಹಳೆಯ ಭೌತಿಕ ಖಾತಾ ವ್ಯವಸ್ಥೆಯಲ್ಲಿ ಸಮಸ್ಯೆ ಏನು ? * ಪ್ರತಿಯೊಬ್ಬ ನಾಗರಿಕರು ತಮ್ಮ ಖಾತಾಗಳನ್ನು ಪಡೆಯಲು ಮತ್ತು ರೂಪಾಂತರಗಳಿಗಾಗಿ ARO ಕಚೇರಿಗಳಿಗೆ ಭೇಟಿ ನೀಡಬೇಕಾಗಿತ್ತು * ದಾಖಲೆಗಳನ್ನು ಭೌತಿಕವಾಗಿ ಸ್ಥಳೀಯವಾಗಿ ಪರಿಶೀಲಿಸಲಾಗಿದ್ದರಿಂದ ಹಿರಿಯ ಅಧಿಕಾರಿಗಳ ಅಥವಾ ವ್ಯವಸ್ಥೆಯ ಮೇಲ್ವಿಚಾರಣೆ ಸಾಧ್ಯವಾಗಲಿಲ್ಲ. * ಮಧ್ಯವರ್ತಿಗಳು ನಾಗರಿಕರಿಂದ ಹಣವನ್ನು ಸಂಗ್ರಹಿಸಿ ಅಧಿಕಾರಿಗಳನ್ನು ಪ್ರಭಾವಿಸಿದರು ಮತ್ತು ಭ್ರಷ್ಟಾಚಾರವು ತುಂಬಾ ಹೆಚ್ಚಾಗಿತ್ತು * ನಾಗರಿಕರು ಸಂಪೂರ್ಣವಾಗಿ ಮಧ್ಯವರ್ತಿ ಮತ್ತು ಅಧಿಕಾರಿಗಳ ಮೇಲೆ ಅವಲಂಬಿತರಾಗಿದ್ದರು. ಫೇನ್‌ಲೆಸ್, ಸಂಪರ್ಕರಹಿತ ಮತ್ತು ಆನ್‌ಲೈನ್ ಇಖಾತಾ ವ್ಯವಸ್ಥೆ – ಒಂದು ಕ್ರಾಂತಿ: * ಎಲ್ಲಾ ಬೆಂಗಳೂರು ನಗರ ಖಾತಾಗಳನ್ನು (25 ಲಕ್ಷಕ್ಕೂ ಹೆಚ್ಚು) https://BBMPeAasthi.karnataka.gov.in ನಾಗರಿಕರು ಯಾವುದೇ ಸಮಯದಲ್ಲಿ…

Read More

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿಯಲ್ಲಿ ಕಾರು ಸ್ಪೋಟ ಪ್ರಕರಣದಲ್ಲಿ ಮೃತರಾದವರ ಕುಟುಂಬಕ್ಕೆ ದೆಹಲಿ ಸರ್ಕಾರ ಪರಿಹಾರ ಘೋಷಿಸಿದೆ. ಈ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ರೇಖಾ ಗುಪ್ತ ಘೋಷಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ದೆಹಲಿಯಲ್ಲಿ ನಡೆದ ಈ ದುರಂತ ಘಟನೆ ಇಡೀ ನಗರವನ್ನೇ ಆಘಾತಕ್ಕೆ ದೂಡಿದೆ. ಈ ಸಂಕಷ್ಟದ ಸಮಯದಲ್ಲಿ, ದೆಹಲಿ ಸರ್ಕಾರವು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಮತ್ತು ಈ ಘಟನೆಯಲ್ಲಿ ಗಾಯಗೊಂಡವರಿಗೆ ತನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ದೆಹಲಿ ಸರ್ಕಾರವು ಪ್ರತಿ ಪೀಡಿತ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆ ಮತ್ತು ತಕ್ಷಣದ ಪರಿಹಾರಕ್ಕಾಗಿ ನಾವು ಸಹಾನುಭೂತಿಯ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದಿದ್ದಾರೆ. ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ₹10 ಲಕ್ಷ ನೀಡಲಾಗುವುದು, ಶಾಶ್ವತವಾಗಿ ಅಂಗವಿಕಲರಾದ ವ್ಯಕ್ತಿಗಳಿಗೆ ₹5 ಲಕ್ಷ ನೀಡಲಾಗುವುದು ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ₹2 ಲಕ್ಷ ನೀಡಲಾಗುವುದು. ಗಾಯಾಳುಗಳ ಸರಿಯಾದ ಮತ್ತು ಗುಣಮಟ್ಟದ…

Read More

ಬೆಂಗಳೂರು: ರಾಜ್ಯದಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಇಲಾಖೆ ಮಾಡಲು ಮಹತ್ವದ ಕ್ರಮವನ್ನು ಸರ್ಕಾರ ಕೈಗೊಂಡಿದೆ. ಅದೇ ಕೌನ್ಸಿಲಿಂಗ್ ಮೂಲಕ ತ್ರಿವಳಿ ತಜ್ಞರನ್ನು ತಾಲ್ಲೂಕು ಮಟ್ಟದ ಆಸ್ಪತ್ರೆಗಳಿಗೆ ನಿಯೋಜನೆ ಮಾಡಲಾಗುತ್ತಿದೆ. ತಾಯಿ, ನವಜಾತ ಶಿಶುಗಳ ಸಾವಿನ ಪ್ರಮಾಣ ತಗ್ಗಿಸಲು ತಾಲೂಕು ಮಟ್ಟದ 147 ಆಸ್ಪತ್ರೆಗಳು ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಪ್ರಸೂತಿ, ಅರಿವಳಿಕೆ ಮತ್ತು ಮಕ್ಕಳ ತಜ್ಞರನ್ನು ತರ್ಕಬದ್ಧಗೊಳಿಸಿ, ಮರು ನಿಯೋಜಿಸಲು ಕೌನ್ಸಿಲಿಂಗ್‌ ನಡೆಸಲಾಗುವುದು. ಈ ಕ್ರಮದಿಂದಾಗಿ, ತಾಲೂಕು ಮಟ್ಟದ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದಿನದ 24 ಗಂಟೆಯೂ ತಜ್ಞರ ಸೇವೆ ಸಿಗಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. https://twitter.com/KarnatakaVarthe/status/1988222909106843714

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಜನಸಂಪರ್ಕ ಸಭೆಯನ್ನು ನಡೆಸಲಿದ್ದಾರೆ. ಈ ಸಭೆಯಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಹಾಜರಿರಲಿದ್ದು, ಜನರ ಸಮಸ್ಯೆಯನ್ನು ಸ್ಥಳದಲ್ಲೇ ಪರಿಹರಿಸುವಂತ ಕೆಲಸವನ್ನು ಮಾಡಲಾಗುತ್ತಿದೆ. ಹೀಗಾಗಿ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡು, ತಮ್ಮ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಲು ಮನವಿ ಮಾಡಿದ್ದಾರೆ. ನಾಳೆ ಕಲ್ಮನೆಯಲ್ಲಿ ಶಾಸಕರಿಂದ ಜನಸಂಪರ್ಕ ಸಭೆ ಇಂದು ಸಾಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯದ ಬಗ್ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಮಾಹಿತಿ ನೀಡಿದರು. ಈ ಹಿಂದೆ ಹೋಬಳಿ ಮಟ್ಟದಲ್ಲಿ ಶಾಸಕನಾಗಿ ಜನಸಂಪರ್ಕ ಸಭೆಯನ್ನು ನಡೆಸಿದ್ದೆ. ಇದೀಗ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಇದೇ ಮೊದಲ ಬಾರಿಗೆ ಕಲ್ಮನೆಯಲ್ಲಿ ಜನಸಂಪರ್ಕ ಸಭೆ ನಡೆಸಲಾಗುತ್ತಿದೆ. ಜನರ ಬಳಿಗೆ ಸರ್ಕಾರವನ್ನು ಕೊಂಡೊಯ್ಯುವಂತ ಕೆಲಸವನ್ನು ಮಾಡಿ, ಸಮಸ್ಯೆ ಇತ್ಯರ್ಥ ಪಡಿಸುವಂತ ಕೆಲಸ ಮಾಡಲಾಗುತ್ತಿದೆ ಎಂಬುದಾಗಿ ಹೇಳಿದರು. ನಾಳೆಯ ಜನಸಂಪರ್ಕ ಸಭೆಯಲ್ಲಿ ರೈತರ…

Read More

ಅಜೆರ್ಬೈಜಾನ್‌ನಿಂದ ಟರ್ಕಿಗೆ ತೆರಳುತ್ತಿದ್ದ ಟರ್ಕಿಶ್ ಸಿ-130 ಮಿಲಿಟರಿ ಸರಕು ವಿಮಾನವು ಮಂಗಳವಾರ ಜಾರ್ಜಿಯಾ-ಅಜೆರ್ಬೈಜಾನ್ ಗಡಿಯಲ್ಲಿ ಅಪಘಾತಕ್ಕೀಡಾಗಿದೆ ಎಂದು ಟರ್ಕಿಶ್ ರಕ್ಷಣಾ ಸಚಿವಾಲಯ ತಿಳಿಸಿದೆ, ಜಂಟಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಗಿದೆ. ರಕ್ಷಣಾ ಸಚಿವಾಲಯದ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಹೇಳಿಕೆಯ ಪ್ರಕಾರ, “ನಮ್ಮ ದೇಶಕ್ಕೆ ಬರಲು ಅಜೆರ್ಬೈಜಾನ್‌ನಿಂದ ಹೊರಟ ನಮ್ಮ ಸಿ-130 ಮಿಲಿಟರಿ ಸರಕು ವಿಮಾನಗಳಲ್ಲಿ ಒಂದು ಜಾರ್ಜಿಯಾ-ಅಜೆರ್ಬೈಜಾನ್ ಗಡಿಯಲ್ಲಿ ಅಪಘಾತಕ್ಕೀಡಾಗಿದೆ. ಅಜೆರ್ಬೈಜಾನ್ ಮತ್ತು ಜಾರ್ಜಿಯನ್ ಅಧಿಕಾರಿಗಳ ಸಮನ್ವಯದೊಂದಿಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಪ್ರಾರಂಭವಾಗಿವೆ ಎಂದಿದೆ. ಬಲಿಪಶುಗಳ ಕುಟುಂಬಗಳಿಗೆ ಸಂತಾಪ ಸೂಚಿಸಿದ ಅಜೆರ್ಬೈಜಾನ್ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಹೇಳಿಕೆಯಲ್ಲಿ ಹೀಗೆ ಹೇಳಿದರು: “ಟರ್ಕಿಶ್ ವಾಯುಪಡೆಗೆ ಸೇರಿದ ಮಿಲಿಟರಿ ಸರಕು ವಿಮಾನವು ಗಾಂಜಾದಿಂದ ಹೊರಟು ಜಾರ್ಜಿಯನ್ ಭೂಪ್ರದೇಶಕ್ಕೆ ಪತನಗೊಂಡು ಸೈನಿಕರ ಸಾವಿಗೆ ಕಾರಣವಾದ ಅಪಘಾತದ ಸುದ್ದಿ ನಮ್ಮನ್ನು ತೀವ್ರವಾಗಿ ಬೆಚ್ಚಿಬೀಳಿಸಿದೆ. “ಜೀವ ಕಳೆದುಕೊಂಡವರ ಕುಟುಂಬಗಳು ಮತ್ತು ಪ್ರೀತಿಪಾತ್ರರಿಗೆ ನಾನು ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ಕಷ್ಟದ ಕ್ಷಣದಲ್ಲಿ, ಈ ದುರಂತ…

Read More

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಯನ್ನು ವಿವಿಧ ಸಮೀಕ್ಷಾ ಸಂಸ್ಥೆಗಳಿಂದ ಪ್ರಕಟಿಸಲಾಗಿದೆ. ಈ ಸಮೀಕ್ಷೆಯಲ್ಲಿ ಎನ್ ಡಿ ಎ ಸ್ಪಷ್ಟ ಬಹುಮತ ಪಡೆಯಲಿದೆ ಎಂಬುದಾಗಿ ಹೇಳಲಾಗಿದೆ. ಮಾಟ್ರಿಜ್ ಮತದಾನೋತ್ತರ ಸಮೀಕ್ಷೆಯ ಪ್ರಕಾರ ಎನ್ ಡಿಎ 147ರಿಂದ 167 ಸೀಟನ್ನು ಗೆಲ್ಲಲಿದೆ. ಕಾಂಗ್ರೆಸ್ ಪಕ್ಷದ ಎಂಜಿಪಿ 70 ರಿಂದ 90 ಸೀಟ್, ಜೆಎಸ್ ಪಿ 0, ಇತರೆ 2ರಿಂದ 6 ಸೀಟು ಗೆಲ್ಲುವ ಸಾಧ್ಯತೆಯನ್ನು ತಿಳಿಸಿದೆ. ಪೀಪಲ್ ಇನ್ ಸೈಟ್ ಸಮೀಕ್ಷೆಯ ಪ್ರಕಾರ ಎನ್ ಡಿಎಗೆ ಸ್ಪಷ್ಟ ಬಹುಮತ ಬರಲಿದೆ ಎಂಬುದಾಗಿ ಹೇಳಲಾಗಿದೆ. ಎನ್ ಡಿಎ 133-143, ಮಹಾಘಟಬಂಧನ್ 93-102, ಇತರೆ 2-9 ಸ್ಥಾನವನ್ನು ಗೆಲ್ಲಲಿವೆ ಎಂಬುದಾಗಿ ಹೇಳಲಾಗಿದೆ. https://twitter.com/ANI/status/1988236009977606355 ಡಿವಿ ರಿಸರ್ಚ್ ನಂತೆ ಎನ್ ಡಿಎಗೆ ಸರಳ ಬಹುಮತ ಬರಲಿದೆ. ಎನ್ ಡಿಎ 132 ರಿಂದ 152, ಮಹಾಘಟಬಂಧನ್ ಗೆ 83-98 ಸೀಟ್, ಜೆಎಸ್ ಪಿ 2ರಿಂದ 4, ಇತರೆ 1 ರಿಂದ 8 ಸೀಟ್ ಪಡೆಯುವ ಸಾಧ್ಯತೆ ಇದೆ…

Read More