Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಕರ್ನಾಟಕವನ್ನು ರಾಜ್ಯ ಸರ್ಕಾರ ಪಾಕಿಸ್ತಾನ ಮಾಡಲು ಹೊರಟಿದೆ. ವಿಜಯಪುರದ ಒಂದು ಜಿಲ್ಲೆಯ 15 ಸಾವಿರ ಎಕರೆ ರೈತರ ಜಮೀನನ್ನು ವಕ್ಫ್ ಬೋರ್ಡ್ ನನ್ನದು ಎಂದು ಹೇಳಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಿದೆ. ಸಚಿವ ಜಮೀರ್ ಅಹ್ಮದ್ ಅವರು ಅಧಿಕಾರಿಗಳ ಮೇಲೆ ಒತ್ತಡ ಹೇರಿ ರೈತರ ಜಮೀನನ್ನು ವಕ್ಫ್ ಬೋರ್ಡ್ ಬರೆಯಿಸಲು ಹೊರಟಿದ್ದಾರೆ ಎಂಬುದಾಗಿ ಸಂಸದ ತೇಜಸ್ವಿ ಸೂರ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ಇಂದು ಬೆಂಗಳೂರಿನ ಜಯನಗರದ ಸಂಸದರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ವಿಜಯಪುರ ಜಿಲ್ಲೆ ತ್ರಿಕೋಟ ತಾಲೂಕಿನ ಹೊನ್ನವಾಡ ಗ್ರಾಮದಲ್ಲಿ 11,500 ಎಕರೆ ಪ್ರದೇಶದ ರೈತರ ಜಮೀನನ್ನು ಸರ್ಕಾರ ರಾತ್ರೋ ರಾತ್ರಿ ವಕ್ಫ್ ಬೋರ್ಡ್ ಗೆ ನೀಡಲು ಹೊರಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಕ್ಪ್ ಬೋರ್ಡ್ ಕಾನೂನಿಗೆ ತಿದ್ದುಪಡಿಯನ್ನು ತರಲು ಹೊರಟಿರುವ ಕಾರಣಕ್ಕೆ ಸಚಿವ ಜಮೀರ್ ಅವರು ಈ ಕಾರ್ಯಕ್ಕೆ ಮುಂದಾಗಿದ್ದಾರೆ ಎಂಬುದಾಗಿ ಗುಡುಗಿದರು. ಮುಸ್ಲಿಂರು ಕಾಂಗ್ರೆಸ್ ಗೆ ಮತ ಹಾಕುತ್ತಾರೆ ಎಂಬ ಕಾರಣದಿಂದ ಹಿಂದೂಗಳ ಜಮೀನನ್ನು ಮುಸ್ಲಿಮರಿಗೆ ಹೊರಟಿದೆ. ವಿಜಯಪುರ…
ನವದೆಹಲಿ: ಭಾರತದಲ್ಲಿ, ವಿವಿಧ ರೀತಿಯ ಪಡಿತರ ಚೀಟಿಗಳಿವೆ. ರಾಜ್ಯ ಸರ್ಕಾರವು ಜನರನ್ನು ವರ್ಗೀಕರಿಸುತ್ತದೆ ಮತ್ತು ವಿವಿಧ ವರ್ಗಗಳ ಪ್ರಕಾರ ವಿಭಿನ್ನ ಪಡಿತರ ಚೀಟಿಗಳನ್ನು ನೀಡುತ್ತದೆ. ಹಾಗಾದ್ರೆ ದೇಶದಲ್ಲಿರುವಂತ BPL, APL ಸೇರಿದಂತೆ ವಿವಿಧ ಮಾದರಿಯ ರೇಷನ್ ಕಾರ್ಡ್ ಗಳು ಯಾವುವು.? ಅವುಗಳ ಪ್ರಯೋಜನಗಳು ಏನೇನು ಎಂಬುದಾಗಿ ಮುಂದೆ ಓದಿ. ಪಡಿತರ ಚೀಟಿ ಎಂದರೇನು? ಪಡಿತರ ಚೀಟಿಯು ಆಯಾ ರಾಜ್ಯ ಸರ್ಕಾರಗಳು ನೀಡುವ ಅಧಿಕೃತ ದಾಖಲೆಯಾಗಿದೆ. ಈ ಕಾರ್ಡ್ ಸಹಾಯದಿಂದ, ಅರ್ಹ ಕುಟುಂಬಗಳು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ), 2013 ರ ಪ್ರಕಾರ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಖರೀದಿಸಬಹುದು. ಈ ಹಿಂದೆ, ರಾಜ್ಯ ಸರ್ಕಾರಗಳ ಗುರುತಿನ ಆಧಾರದ ಮೇಲೆ, ಅರ್ಹ ಕುಟುಂಬಗಳು ಟಾರ್ಗೆಟೆಡ್ ಪಬ್ಲಿಕ್ ಡಿಸ್ಟ್ರಿಬ್ಯೂಷನ್ ಸಿಸ್ಟಮ್ (ಟಿಪಿಡಿಎಸ್) ಮೂಲಕ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಖರೀದಿಸಬಹುದಾಗಿದೆ. 2013 ರಲ್ಲಿ, ರಾಷ್ಟ್ರೀಯ ಆಹಾರ ಮತ್ತು ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅನ್ನು ಜನರಿಗೆ ಕೈಗೆಟುಕುವ ಬೆಲೆಯಲ್ಲಿ ನಿರ್ದಿಷ್ಟ ಪ್ರಮಾಣ ಮತ್ತು ಗುಣಮಟ್ಟದ…
ಬೆಂಗಳೂರು: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ಇಲಾಖೆಯ ಮಾನ್ಯತಾ ಕಾರ್ಡು (Accriditation Card) , ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ…
ಬೆಂಗಳೂರು: 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್ ನೀಡಲಾಗಿದೆ. ಅದೇ 6 ರಿಂದ 8ನೇ ತರಗತಿ ಶಾಲೆಗಳ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿರುವವರಿಗೆ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಮತ್ತು ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೆ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ವಿಭಾಗದ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ 2022-23 ನೇ ಸಾಲಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಪದವೀಧರ ಪ್ರಾಥಮಿಕ ಶಿಕ್ಷಕರು ( 6 ರಿಂದ 8 ನೇ ತರಗತಿ) ಹುದ್ದೆಗೆ ಕೌನ್ಸಿಲಿಂಗ್ ಮೂಲಕ ಸ್ಥಳ ಹಂಚಿಕೆ ಪಕ್ರಿಯೆ ಕೈಗೊಳ್ಳಲಾಗಿತ್ತು ಎಂದಿದ್ದಾರೆ. ಮಾನ್ಯ ಭಾರತ ಸರ್ವೋಚ್ಚ ನ್ಯಾಯಾಲಯದ RECORD OF PROCEEDINGS ದಿ: 04.10.2024ರ ಆದೇಶಾನುಸಾರ ನೇಮಕಾತಿ ಆದೇಶ ನೀಡಲು ಬಾಕಿ ಉಳಿದಿರುವ ಅಭ್ಯರ್ಥಿಗಳಿಗೆ ನೇಮಕಾತಿ ನೀಡಲು ಅನುಮತಿಸಿದ. ಪ್ರಯುಕ್ತ…
BREAKING: ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಖಾದ್ರಿ
ಹಾವೇರಿ: ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಲಾಗಿದೆ. ಟಿಕೆಟ್ ನಿರೀಕ್ಷೆಯಲ್ಲಿದ್ದಂತ ಅಜ್ಜಂಪೀರ್ ಖಾದ್ರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿರಲಿಲ್ಲ. ಹೀಗಾಗಿ ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದಂತ ವೇಳೆಯಲ್ಲಿ ಖಾದ್ರಿ ಅವರು ಓಡೋಡಿ ಬಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಶಿಗ್ಗಾವಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂಡಾಯದ ಬಿಸಿ ತಟ್ಟಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಜ್ಜಂಪೀರ್ ಖಾದ್ರಿ ಅವರ ಮನವೊಲಿಕೆಗೆ ಮಾಡಿದ ಪ್ರಯತ್ನ ಸಫಲವಾಗಿಲ್ಲ. ಇಂದು ನಾಮಪತ್ರ ಸಲ್ಲಿಸಲು ಕೊನೆಯ 13 ನಿಮಿಷದ ವೇಳೆಯಲ್ಲಿ ಓಡೋಡಿ ಬಂದು ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. https://kannadanewsnow.com/kannada/good-news-for-police-aspirants-state-govt-gives-green-signal-for-4115-recruitment/ https://kannadanewsnow.com/kannada/bengaluru-power-outages-in-these-areas-from-october-27-to-30/
ಬೆಂಗಳೂರು: ದಿನಾಂಕ 27.10.2024 (ರವಿವಾರ) ದಿಂದ 30.10.2024 (ಬುಧವಾರ) ರ ವರೆಗೆ “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಓಬಳೇಶ್ ಕಾಲೋನಿ, ರ್ಸಸ್ ಗರ್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಾಮನಾ ಗರ್ಡನ್, ರ್ಫತ್ ನಗರ, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಪರ್ಕ್ ನಾವು ಬಿನ್ನಿ ಪೇಟೆ, ಅಂಜನಪ್ಪ ಗರ್ಡನ್, ದೊರೆಸ್ವಾಮಿ ನಗರ ಕರೆಂಟ್ ಇರೋದಿಲ್ಲ. ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್, ಎಸ್ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್, ಮನರ್ತಿ ಪೆಟ್, ಸುಲ್ತಾನ್ ಪೆಟ್, ನಲ್ಬಂಡ್ವಾಡಿ ಎದುರು ಚಿಕ್ಕಪೇಟೆ ಮೆಟ್ರೋ ಸ್ಟೇಷನ್, ಪೊಲೀಸ್ ರಸ್ತೆ, ಗೋಪಾಲನ್ ಅಪರ್ಟ್ಮೆಂಟ್, ಮರಿಯಪ್ಪ ಎ. ಕೆಪಿಎಸ್ ಮಠ, ಗಂಗಪ್ಪ ಗರ್ಡನ್,…
ಬೆಂಗಳೂರು: ಕೆಪಿಟಿಸಿಎಲ್ 66/11ಕೆ.ವಿ ‘ಸಿ’ ಸ್ಟೇಷನ್ ಹಾಗೂ ವಿಕ್ಟೋರಿಯಾ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ದಿನಾಂಕ 27-10-2024ರ ಭಾನುವಾರದಂದು, ಬೆಂಗಳೂರಿನ ಈ ಕೆಳಕಂಡ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಾಗಿದೆ. ಅ.27ರ ಭಾನುವಾರದಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಸಿ ಸ್ಟೇಷನ್ : “ಬ್ರಾಡ್ ವೇ ರಸ್ತೆ, ಕಾಕರ್ನ್ ರಸ್ತೆ, ಸ್ಟೇಷನ್ ರಸ್ತೆ, ಕ್ವೀನ್ಸ್ ರಸ್ತೆ, ಟೌನ್, ತಿಮ್ಮಯ್ಯ ರಸ್ತೆ, ಮಿಲ್ರ್ಸ್ ರಸ್ತೆ, ಸ್ಲಾಟರ್ ಹೌಸ್ ಮತ್ತು ಸುತ್ತಲಿನ ಪ್ರದೇಶ. ಕನ್ನಿಂಗ್ಹಾö್ಯಮ್ ರಸ್ತೆ, ಆಲಿ ಆಸ್ಕರ್ ರಸ್ತೆ, ಆಲಿ ಆಸ್ಕರ್ ರಸ್ತೆ ಕ್ರಾಸ್, ಚಿಕ್ಕ ಬಜಾರ್ ರಸ್ತೆ, ವೆಂಕಟಪ್ಪ ರಸ್ತೆ, ಮುನಿಸ್ವಾಮಿ ರಸ್ತೆ, ಪಾಯಪ್ಪ ಗಾರ್ಡನ್, ಸಿಮೆಂಟ್ರಿ ರಸ್ತೆ, ಪಾರ್ಕ್ ರಸ್ತೆ, ನಳ ರಸ್ತೆ, ನೋಹ ಸ್ಟ್ರೀಟ್, ಚಾಂದನಿ ಚೌಕ್, ಮಿಲ್ಲರ್ ಟ್ಯಾಂಕ್ಬಂಡ್ ರಸ್ತೆ, ಜಸ್ಮಾಭವನ ರಸ್ತೆ, ಸುಲ್ತಾನ್ಜಿಗುಂಟ ರಸ್ತೆ, ಹೇನ್ಸ್ ರಸ್ತೆ, ಬಂಬೂಬಜಾರ್, ಧನಕೋಟಿ ಲೇನ್ ಮತ್ತು ಸುತ್ತಲಿನ ಪ್ರದೇಶ. ನೆಹರುಪುರಂ,…
ಬೆಂಗಳೂರು: ಈ ನಾಡಿನ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರ ಏನಿದೆಯೋ ಇದಕ್ಕೆ ತಕ್ಕ ಪಾಠ ಕಲಿಸಲು 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತೀರ್ಮಾನ ಹಾಗೂ ಸಂಕಲ್ಪ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ಸಂಡೂರಿನಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಡೂರಿನಲ್ಲಿ ಬಿಜೆಪಿ ಯುವ ಮುಖಂಡ ಬಂಗಾರು ಹನುಮಂತು ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು, ಇವತ್ತು ನಾಮಪತ್ರ ಸಲ್ಲಿಸುತ್ತಿದ್ದಾರೆ. ಸಂಡೂರಿನಲ್ಲಿ ನಮ್ಮೆಲ್ಲ ಪಕ್ಷದ ಹಿರಿಯರು ಸೇರಿದ್ದಾರೆ. ಬಿಜೆಪಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿದೆ. ಜೆಡಿಎಸ್ ಪಕ್ಷವೂ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದರು. ಸಂಡೂರಿನಲ್ಲಿ ಹಿಂದೆಂದೂ ಬಿಜೆಪಿ ಕಮಲ ಅರಳಿಲ್ಲ. ಜನಾರ್ದನ ರೆಡ್ಡಿ, ಶ್ರೀರಾಮುಲು, ಸೋಮಶೇಖರ ರೆಡ್ಡಿ, ಎಲ್ಲ ಶಾಸಕರು, ಮಾಜಿ ಶಾಸಕರ, ವಿಧಾನಪರಿಷತ್ ಸದಸ್ಯರ, ಪಕ್ಷದ ಹಿರಿಯರ ಶ್ರಮದಿಂದ ಮೊದಲ ಬಾರಿಗೆ ಇಲ್ಲಿ ನಿಶ್ಚಿತವಾಗಿ ಬಿಜೆಪಿಯ ಕಮಲದ ಹೂ ಅರಳಲಿದೆ. ನಮ್ಮೆಲ್ಲರ ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ. ಬಿಜೆಪಿ- ಜೆಡಿಎಸ್ ಶ್ರಮದಿಂದ ಗೆಲುವು ಸಾಧ್ಯವಾಗಲಿದೆ…
ಕೋಲಾರ: ನಗರದಲ್ಲಿ ಹುಚ್ಚುನಾಯಿಯೊಂದು ಅಟ್ಟಹಾಸ ಮೆರೆದಿದೆ. ಸಾರ್ವಜನಿಕರ ಮೇಲೆ ಭೀಕರ ದಾಳಿ ಮಾಡಿದ್ದು, ಬರೋಬ್ಬರಿ 10ಕ್ಕೂ ಹೆಚ್ಚು ಜನರು ಹುಚ್ಚುನಾಯಿಯ ದಾಳಿಯಿಂದ ಗಾಯಗೊಂಡಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರೋಣೂರು ಸುತ್ತಮುತ್ತಲಿನ ಗ್ರಾಮದಲ್ಲಿ ಹುಚ್ಚುನಾಯಿ ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸಿದೆ. ಹುಚ್ಚುನಾಯಿಯೊಂದು ಗ್ರಾಮದಲ್ಲಿನ ಮಕ್ಕಳು, ಮಹಿಳೆಯರು ಸೇರಿದಂತೆ ವೃದ್ಧರ ಮೇಲೆ ಭೀಕರವಾಗಿ ದಾಳಿ ಮಾಡಿ, ಕಚ್ಚಿದ್ದರಿಂದ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರೋಣೂರಿನಲ್ಲಿ ಮಾತ್ರವಲ್ಲದೇ ಈ ಹುಚ್ಚುನಾಯಿಯು ಚಿಕ್ಕತಿಮ್ಮನಹಳ್ಳಿ, ಕೋಟಪಲ್ಲಿ, ರೆಡ್ಡಂಪಲ್ಲಿ ಸೇರಿದಂತೆ ವಿವಿಧ ಹಳ್ಳಿಗಳಲ್ಲೂ ಹಲವರ ಮೇಲೆ ದಾಳಿ ನಡೆಸಿರುವುದಾಗಿ ಹೇಳಲಾಗುತ್ತಿದೆ. ಹುಚ್ಚುನಾಯಿಯ ದಾಳಿಯಿಂದಾಗಿ ದಮ್ಮರೆಡ್ಡಿ, ತಿಪ್ಪಮ್ಮ, ಗೀತಮ್ಮ, ಮುನಿಯಪ್ಪ ಎಂಬುವರು ಗಾಯಗೊಂಡಿದ್ದಾರೆ. ಕೆಲವರನ್ನು ಕೋಲಾರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದರೇ, ಮತ್ತೆ ಕೆಲವರು ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. https://kannadanewsnow.com/kannada/door-to-door-health-check-up-in-the-state-everything-is-free/ https://kannadanewsnow.com/kannada/good-news-for-police-aspirants-state-govt-gives-green-signal-for-4115-recruitment/ https://kannadanewsnow.com/kannada/breaking-two-killed-one-injured-in-lorry-bike-collision-in-shivamogga/
ಬೆಂಗಳೂರು: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಯೋಜನೆ ಜಾರಿಗೊಳಿಸಿದೆ. ಅದೇ ಗೃಹ ಆರೋಗ್ಯ ಯೋಜನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆಯಂತ ಸೌಲಭ್ಯಗಳು ದೊರೆಯಲಿವೆ. ಅದರಲ್ಲೂ ಆ ಎಲ್ಲಾ ತಪಾಸಣೆಗಳು ಉಚಿತವಾಗಿರುತ್ತವೆ. ಮನೆ ಬಾಗಿಲಿಗೆ ಬರಲಿದೆ ‘ಗೃಹ ಆರೋಗ್ಯ’. ಈ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯಲಿವೆ. ಕೋಲಾರ ಜಿಲ್ಲೆಯಿಂದ ಯೋಜನೆಯನ್ನ ಪ್ರಾರಂಭಿಸಲಾಗುತ್ತಿದ್ದು, ಎರಡು ತಿಂಗಳ ಬಳಿಕ ರಾಜ್ಯಾದ್ಯಂತ ಯೋಜನೆ ಚಾಲ್ತಿಗೆ ಬರಲಿದೆ. ಯೋಜನೆಯನ್ನ ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಆರೋಗ್ಯ ಇಲಾಖೆ ಸಿಬ್ಬಂದಿಗಳು ಪಣ ತೊಟ್ಟಿದ್ದಾರೆ. ವಿಶೇಷವಾಗಿ ನಮ್ಮ ಗ್ರಾಮೀಣ ಪ್ರದೇಶದ ಜನರು ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ನಿರ್ಲಕ್ಷ್ಯೆ ವಹಿಸುತ್ತಿದ್ದಾರೆ. ಇದೀಗ ಆರೋಗ್ಯ ಇಲಾಖೆಯನ್ನೇ ಜನರ ಬಳಿಗೆ ಕಳಿಸುತ್ತಿದ್ದು, ನಮ್ಮ ಜನರು ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ದಿನೇಶ್ ಗುಂಡೂರಾವ್…












