Author: kannadanewsnow09

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ತಾಲಿಬಾನ್‌ ಸರ್ಕಾರವಾಗಿ ಬದಲಾಗಿದ್ದು, ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಿ ಬುದ್ಧಿ ಕಲಿಸಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಟಿಪ್ಪು ದೆವ್ವ‌ ಹಿಡಿದಿದೆ. ಇದಕ್ಕಾಗಿಯೇ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾದರೂ ಕಾಂಗ್ರೆಸ್‌ ಸರ್ಕಾರ, ಕಾರ್ಯಕರ್ತರ ವಿರುದ್ಧವೇ ಪ್ರಕರಣ ದಾಖಲಿಸಿದೆ. ಪಾಕಿಸ್ತಾನದ ಕುನ್ನಿಗಳು ಎಂದು ಹೇಳಿದ್ದಾಗಿ ಪೊಲೀಸರು ಹೇಳಿದ್ದಾರೆ. ಆದರೆ ಇದಕ್ಕೆ ಯಾವುದೇ ದಾಖಲೆ ಇಲ್ಲ.‌ ಬಿಜೆಪಿ ಕಾರ್ಯಕರ್ತರು ಭಾರತ್‌ ಮಾತಾ ಕೀ ಜೈ ಎಂದಿದ್ದರು. ಆದರೂ ಮುಸ್ಲಿಮರನ್ನು ರಕ್ಷಣೆ ಮಾಡಿ ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಜನರು ಬುದ್ಧಿ ಕಲಿಸಿದ್ದಾರೆ. ಅದೇ ರೀತಿ ಮತ್ತೆ ಬುದ್ಧಿ ಕಲಿಸಲು ಬಿಜೆಪಿಯಿಂದ ದೊಡ್ಡ ಹೋರಾಟ ಮಾಡಲಾಗುವುದು. ಮತಕ್ಕಾಗಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲಾಗುತ್ತಿದೆ ಎಂದು ದೂರಿದರು. ಸಮರ್ಪಕ ತನಿಖೆ ನಡೆಯಲಿ ಚಿತ್ರನಟ ದರ್ಶನ್‌…

Read More

ರಾಯಚೂರು: ಮಳೆಗಾಲದಲ್ಲಿ ಶಿಥಿಲಾವಸ್ಥೆಯಲ್ಲಿರುವಂತ ಶಾಲಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳನ್ನು ಕೂರಿಸಬಾರದು. ಬೇರೆ ಕಡೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು ಅಂತ ಶಿಕ್ಷಣ ಇಲಾಖೆ ಖಡಕ್ ಸೂಚಿಸಿದೆ. ಇದರ ನಡುವೆ ರಾಯಚೂರಲ್ಲಿ ಶಿಥಿಲಾವಸ್ಥೆಯ ಶಾಲಾ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆಯಲ್ಲಿ, ಮೇಲ್ಛಾವಣಿ ಕುಸಿದು ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಪಾತಾಪುರ ಗ್ರಾಮದಲ್ಲಿ, ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿತಗೊಂಡಿದೆ. ಮಳೆಯಿಂದ ನೆನೆದು, ಶಿಥಿಲಗೊಂಡಿದ್ದಂತ ಶಾಲಾ ಮೇಲ್ಛಾವಣಿ ಇಂದು ಕುಸಿತಗೊಂಡಿದೆ. ಈ ಘಟನೆಯಲ್ಲಿ ಶಾಲೆಯಲ್ಲಿ ವ್ಯಾಸಂಗದಲ್ಲಿ ತೊಡಗಿದ್ದಂತ ಹಲವು ವಿದ್ಯಾರ್ಥಿಗಳ ತಲೆ, ಕೈಗಳಿಗೆ ಗಾಯವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆಯ ನಂತ್ರ ಶಾಲೆಗೆ ಬಿಇಓ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನೂ ಶಿಥಿಲಾವಸ್ಥೆಯಲ್ಲಿರುವಂತ ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡದೇ, ತಾತ್ಕಾಲಿಕವಾಗಿ ತರಗತಿಗಳನ್ನು ಗ್ರಾಮದ ಕರಿಲಿಂಗೇಶ್ವರ ದೇವಸ್ಥಾನದಲ್ಲಿ ನಡೆಸುವಂತೆ ಸೂಚಿಸಿದ್ರು. https://kannadanewsnow.com/kannada/happy-to-see-cid-taking-action-against-yediyurappa-actor-chetan/ https://kannadanewsnow.com/kannada/good-news-for-untrained-state-government-primary-school-teachers-state-govt-orders-pay-scale/

Read More

ಬೆಂಗಳೂರು: ನಗರದಲ್ಲಿ 2025ರ ಫೆಬ್ರವರಿ 12ರಿಂದ 14ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ನಡೆಸಲು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇನ್ವೆಸ್ಟ್ ಕರ್ನಾಟಕ-2025ರ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ದಿನಾಂಕ 12-02-2025ರಿಂದ ದಿನಾಂಕ 14-02-2025ರವರೆಗೆ ನಡೆಸಲು ಅನುಮೋದನೆ ನೀಡಲಾಗಿದೆ. ಜಾಗತಿಕ ಬಂಡವಾಳ ಹೂಡಿಕೆರಾದರ ಸಮಾವೇಶ ಏರ್ಪಡಿಸಲು ಕನಿಷ್ಠ 10-12 ತಿಂಗಳು ಕಾಲಾವಕಾಶ ಬೇಕಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕಾಗಿ ಈಗಾಗಲೇ 75 ಕೋಟಿ ಒದಗಿಸಲಾಗಿದ್ದು, ರೂ.15 ಕೋಟಿ ಹೆಚ್ಚುವರಿ ಅನುದಾನ ಒದಗಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ. https://kannadanewsnow.com/kannada/happy-to-see-cid-taking-action-against-yediyurappa-actor-chetan/ https://kannadanewsnow.com/kannada/good-news-for-untrained-state-government-primary-school-teachers-state-govt-orders-pay-scale/

Read More

ಬೆಂಗಳೂರು: ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಮ ದಾಖಲಾಗಿದೆ. ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಐಡಿಯಿಂದ ನೋಟಿಸ್ ಕೂಡ ನೀಡಲಾಗಿದೆ. ಇಂತಹ ಕ್ರಮವನ್ನು ನಟ ಚೇತನ್ ಅಹಿಂದಾ ವ್ಯಂಗ್ಯವಾಡಿದ್ದಾರೆ. ಅದೇ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಐಡಿ ಕ್ರಮ ಕೈಗೊಳ್ಳುವುತ್ತಿರುವುದನ್ನು ನೋಡಿ ಸಂತೋಷವಾಗಿದೆ ಎಂಬುದಾಗಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಕ್ಷಾದಗಳು ಸಿಕ್ಕಿದ್ದರೆ ಬಿಜೆಪಿ ನಾಯಕ ಬಿ. ಎಸ್. ಯಡಿಯೂರಪ್ಪ ಅವರನ್ನು ಪೋಕ್ಸೊ ಆರೋಪದ ಮೇಲೆ ಬಂಧಿಸಬಹುದು ಎಂದಿದ್ದಾರೆ. ಅಂತಹ ಉನ್ನತ ಮಟ್ಟದ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ (ಸಿಐಡಿ) ಕ್ರಮ ಕೈಗೊಳ್ಳುತ್ತಿರುವುದನ್ನು ನೋಡಿ ಸಂತೋಷವಾಗಿದೆ ಎಂಬುದಾಗಿ ವ್ಯಂಗ್ಯವಾಡಿದ್ದಾರೆ. ಇತ್ತೀಚೆಗೆ, ಕರ್ನಾಟಕ ಪೊಲೀಸರು ನಿಜವಾಗಿಯೂ ಗಮನಾರ್ಹವಾದ ಕೆಲಸವನ್ನು ಮಾಡುತ್ತಿದ್ದಾರೆ ಎಂಬುದಾಗಿ ಅಭಿಪ್ರಾಯ ಪಟ್ಟಿದ್ದಾರೆ. https://twitter.com/ChetanAhimsa/status/1801175687828762987 https://kannadanewsnow.com/kannada/supreme-court-stays-release-of-annu-kapoors-hamare-baarah/ https://kannadanewsnow.com/kannada/good-news-for-untrained-state-government-primary-school-teachers-state-govt-orders-pay-scale/

Read More

ನವದೆಹಲಿ: ಮುಂಬರುವ ಚಿತ್ರ ಹಮಾರೆ ಬಾರಾಹ್ ಬಿಡುಗಡೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ. ಈ ಮೂಲಕ ವಿವಾದಾತ್ಮಕ ಅಣ್ಣು ಕಪೂರ್ ನಟನೆಯ ಹಮಾರೆ ಬಾರಾ ಚಿತ್ರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದೆ. ಬಾರ್ ಅಂಡ್ ಬೆಂಚ್ ವರದಿಯ ಪ್ರಕಾರ, ಈ ಚಿತ್ರವು ಇಸ್ಲಾಮಿಕ್ ನಂಬಿಕೆಯನ್ನು ಅವಮಾನಿಸುತ್ತದೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಯ ಬಗ್ಗೆ ತ್ವರಿತ ನಿರ್ಧಾರ ತೆಗೆದುಕೊಳ್ಳುವಂತೆ ನ್ಯಾಯಾಲಯವು ಬಾಂಬೆ ಹೈಕೋರ್ಟ್ಗೆ ಸೂಚಿಸಿದೆ. ಚಿತ್ರ ಬಿಡುಗಡೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ಬಾಂಬೆ ಹೈಕೋರ್ಟ್ ಆದೇಶದ ಪ್ರಕಾರ ಪ್ರಚಾರ ಸಾಮಗ್ರಿಗಳಿಂದ ಎಲ್ಲಾ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಲಾಗಿದೆ ಎಂದು ಚಿತ್ರವನ್ನು ಪ್ರತಿನಿಧಿಸುವ ವಕೀಲರು ಹೇಳಿದಾಗ, ನ್ಯಾಯಾಲಯವು ಈ ಹೇಳಿಕೆಯನ್ನು ತಿರಸ್ಕರಿಸಿತು. “ನಾವು ಇಂದು ಬೆಳಿಗ್ಗೆ ಟೀಸರ್ ನೋಡಿದ್ದೇವೆ ಮತ್ತು ಎಲ್ಲಾ ದೃಶ್ಯಗಳು ಅಲ್ಲಿವೆ” ಎಂದು ಹೇಳಿದೆ. ಬಿಡುಗಡೆಗೆ ತಡೆ ನೀಡಿದರೆ ತಯಾರಕರು ಭಾರಿ ನಷ್ಟವನ್ನು…

Read More

ಹುಬ್ಬಳ್ಳಿ: ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೀಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ. ಅಧಿಕಾರದಲ್ಲಿ ಇರುವವರು ಇರಬಹುದು, ಸೆಲೆಬ್ರಿಟಿ ಆಗಬಹುದು. ಯಾರಿಗೂ ವಿಶೇಷ ಅಧಿಕಾರ ಇಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಸಮಾನರು. ಕಾನೂನನ್ನು ಕೈಗೆ ತೆಗೆದುಕೊಳ್ಳುವುದೇ ಅಪರಾಧ. ಅದು ಮರ್ಡರ್ ಆಗುವ ಮಟ್ಟಕ್ಕೆ ಹೋದರೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದರು. ಕೊಲೆಯಲ್ಲಿ ಹಲವಾರು ರೀತಿ ಇವೆ. ಇದು ಕಾನ್ಫರೆಸಿ ಮಾಡಿ ಮರ್ಡರ್ ಮಾಡಿರುವ ಪ್ರಕರಣ. ಇದೊಂದು ಗಂಭೀರ ಪ್ರಕರಣ, ದರ್ಶನ್ ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೀತಿದೆ. ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು. ಹಾಗಾದಾಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದು ಹೇಳಿದರು. ಶಿಗ್ಗಾಂವಿಗೆ ಉಪಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿಲ್ಲ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಕ್ರಿಯೆ ಪ್ರಾರಂಭವಾಗಿಲ್ಲ. ನಾನಿನ್ನು…

Read More

ನಾಗ್ಪುರ: ನಾಗ್ಪುರ ನಗರದ ಬಳಿಯ ಸ್ಫೋಟಕ ಉತ್ಪಾದನಾ ಕಾರ್ಖಾನೆಯಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಹತ್ತು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದ ನಾಗ್ಬುರ ನಗರದ ಬಳಿಯಲ್ಲಿನ ಸ್ಪೋಟಕ ಉತ್ಪಾದನಾ ಕಾರ್ಖಾನೆಯೊಂದರಲ್ಲಿ ಇಂದು ಭೀಕರ ಸ್ಪೋಟ ಉಂಟಾಗಿದೆ. ಈ ಸ್ಪೋಟದಲ್ಲಿ ಕನಿಷ್ಠ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/ajit-pawars-wife-sunetra-pawar-files-nomination-for-rajya-sabha-polls/ https://kannadanewsnow.com/kannada/good-news-for-untrained-state-government-primary-school-teachers-state-govt-orders-pay-scale/

Read More

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ( Maharashtra Deputy Chief Minister Ajit Pawar ) ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (Nationalist Congress Party – NCP) ಮುಂಬರುವ ರಾಜ್ಯಸಭಾ ಚುನಾವಣೆಗೆ ಅವರ ಪತ್ನಿ ಸುಂಟೆರಾ ಪವಾರ್ ಅವರನ್ನು ನಾಮನಿರ್ದೇಶನ ಮಾಡಿದೆ. ಮುಂಬರುವ ರಾಜ್ಯಸಭಾ ಉಪಚುನಾವಣೆಗೆ ಸುನೇತ್ರಾ ಪವಾರ್ ಗುರುವಾರ ನಾಮಪತ್ರ ಸಲ್ಲಿಸಿದರು. ಸುನೇತ್ರಾ ಪವಾರ್ ಇಂದು ಮುಂಜಾನೆ ಮುಂಬೈನ ವಿಧಾನ ಭವನಕ್ಕೆ ತಲುಪಿದರು. ಅಜಿತ್ ಪವಾರ್ ಮತ್ತು ಮಹಾರಾಷ್ಟ್ರ ಸಚಿವ ಛಗನ್ ಭುಜ್ಬಲ್ ಅವರು ಅವರೊಂದಿಗೆ ಇದ್ದರು. ಇತ್ತೀಚೆಗೆ ಮುಕ್ತಾಯಗೊಂಡ ಸಾರ್ವತ್ರಿಕ ಚುನಾವಣೆಯಲ್ಲಿ ಅದರ ಸದಸ್ಯರು ಲೋಕಸಭೆಗೆ ಆಯ್ಕೆಯಾದ ನಂತರ ರಾಜ್ಯಸಭಾ ಸ್ಥಾನಗಳು ಖಾಲಿಯಾಗಿವೆ. https://kannadanewsnow.com/kannada/you-may-have-to-pay-more-for-atm-cash-withdrawals-report/ https://kannadanewsnow.com/kannada/good-news-for-untrained-state-government-primary-school-teachers-state-govt-orders-pay-scale/

Read More

ಅರ್ಜೆಂಟೀನಾದ ವಿಶ್ವಕಪ್ ವಿಜೇತ ಮತ್ತು ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಅವರು ಇಂಟರ್ ಮಿಯಾಮಿಯಲ್ಲಿ ನಿವೃತ್ತರಾಗುವುದನ್ನು ಖಚಿತಪಡಿಸಿದ್ದಾರೆ, ಫುಟ್ಬಾಲ್ ನಂತರದ ಜೀವನದ ಬಗ್ಗೆ ತಮ್ಮ ಭಯ ಮತ್ತು ಆಲೋಚನೆಗಳ ಬಗ್ಗೆ ತೆರೆದಿಟ್ಟಿದ್ದಾರೆ. ಇಂಟರ್ ಮಿಯಾಮಿಯೊಂದಿಗಿನ ಮೆಸ್ಸಿಯ ಒಪ್ಪಂದವು 2025 ರ ಅಂತ್ಯದವರೆಗೆ ಇರುತ್ತದೆ, ಇದು ಅವರ ವೃತ್ತಿಜೀವನದ ಉಜ್ವಲ ಅಂತ್ಯವನ್ನು ಸೂಚಿಸುತ್ತದೆ, ಇದು ಕ್ರೀಡೆಯಲ್ಲಿ ಪ್ರತಿಯೊಂದು ಪ್ರಮುಖ ಪ್ರಶಂಸೆಯನ್ನು ಸಾಧಿಸಿದೆ. ವಿಶ್ವದ ಅಗ್ರ ಆಟಗಾರರಲ್ಲಿ ಒಬ್ಬರಾಗಿದ್ದರೂ, ಮೆಸ್ಸಿ ತಮ್ಮ ವೃತ್ತಿಜೀವನದ ಅಂತ್ಯವು ಸಮೀಪಿಸುತ್ತಿದೆ ಎಂದು ಒಪ್ಪಿಕೊಂಡರು. ಈ ತಿಂಗಳ ಕೊನೆಯಲ್ಲಿ 37 ನೇ ವರ್ಷಕ್ಕೆ ಕಾಲಿಡಲಿರುವ ಮಾಜಿ ಬಾರ್ಸಿಲೋನಾ ಮತ್ತು ಪ್ಯಾರಿಸ್ ಸೇಂಟ್-ಜರ್ಮೈನ್ ತಾರೆ, ಇಎಸ್ಪಿಎನ್ ಅರ್ಜೆಂಟೀನಾಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಮ್ಮ ಭಾವನೆಗಳು ಮತ್ತು ಯೋಜನೆಗಳನ್ನು ಹಂಚಿಕೊಂಡಿದ್ದಾರೆ. “ನಾನು ಫುಟ್ಬಾಲ್ ತೊರೆಯಲು ಸಿದ್ಧನಿಲ್ಲ” ಎಂದು ಮೆಸ್ಸಿ ಇಎಸ್ಪಿಎನ್ ಅರ್ಜೆಂಟೀನಾಗೆ ತಿಳಿಸಿದರು. “ನಾನು ಇದನ್ನು ನನ್ನ ಜೀವನದುದ್ದಕ್ಕೂ ಮಾಡಿದ್ದೇನೆ, ನಾನು ತರಬೇತಿ, ಆಟಗಳನ್ನು ಆನಂದಿಸುತ್ತೇನೆ. ಎಲ್ಲವೂ ಮುಗಿಯುತ್ತದೆ ಎಂಬ ಭಯ, ಅದು…

Read More

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಜನಪರ ಗ್ಯಾರಂಟಿ ಸ್ಕೀಂಗಳನ್ನು ನಿಲ್ಲಿಸಲೂ ಬಾರದು ಎಂಬುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರವಾಸಿ ಮಂದಿರದಲ್ಲಿ ಇಂದು ತಾಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ತಾಲೂಕಿನ ಪಿಡಿಓಗಳ ಸಭೆಯನ್ನು ನಡೆಸಿ, ಮಳೆಗಾಲದಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕು. ಮಳೆಯಿಂದ ಉಂಟಾದ ಹಾನಿಯ ಬಗ್ಗೆ ತುರ್ತು ಕ್ರಮವಹಿಸಿ, ಸರಿಪಡಿಸೋ ಕೆಲಸ ಮಾಡಬೇಕು. ಮನೆ ಹಾನಿಗೆ ಕೂಡಲೇ 10,000 ಪರಿಹಾರವನ್ನು ನೀಡಬೇಕು ಎಂದರು. ಈ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ನಿನ್ನೆ ಅಬಕಾರಿ ಇಲಾಖೆಯ ಸಭೆ ನಡೆಸಿ, ಆದಾಯ ಸಂಗ್ರಹಕ್ಕೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣಕಾಸಿನ ಕೊರತೆ ಎದುರಾಗಿದ್ಯಾ ಅಂತ ಕೇಳಿದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದಂತ ಅವರು, ಗ್ಯಾರಂಟಿ ಯೋಜನೆಗಳಿಗೆ ಹಣಕಾಸಿನ ಕೊರತೆ ಉಂಟಾಗಿಲ್ಲ. ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಟಾರ್ಗೆಟ್ ಫಿಕ್ಸ್ ಮಾಡುವುದು ಮಾಮೂಲಿ. ಅದೇನೂ ಹೊಸದೇನಲ್ಲ ಎಂದರು. https://youtu.be/b4eRLRWwy8E ರಾಜ್ಯದಲ್ಲಿ ಗಾರಂಟಿ…

Read More