Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಂಡ್ಯದಲ್ಲಿ ಅರೆ ನಗ್ನಾವಸ್ಥೆಯಲ್ಲಿ ಬಟ್ಟೆ ಬಿಚ್ಚಿ ರಂಪಾಟವನ್ನು ಬಿಎಂಟಿಸಿ ಚಾಲಕ ಮೆರೆದಿದ್ದಾರೆ ಎನ್ನುವಂತ ವೀಡಿಯೋ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಂತ ಈ ವೀಡಿಯೋ ಬಗ್ಗೆ ನಿಗಮವು ಆತ ನಮ್ಮ ಚಾಲಕನಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಟಿಸಿ ಮಾಹಿತಿ ನೀಡಿದ್ದು, ಈ ದಿನ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಸುದ್ದಿ ವಾಹಿನಿಗಳಲ್ಲಿ ವೈರಲ್ ಆಗಿರುವ “ಫುಲ್ ಟೈಟಾಗಿ ಬಸ್ ಸ್ಟ್ಯಾಂಡ್ನಲ್ಲಿ ಬಿಎಂಟಿಸಿ ಚಾಲಕನ ರಂಪಾಟ” ಎಂಬ ಶೀರ್ಷಿಕೆಯ ವೀಡಿಯೋ ತುಣುಕು ಗಮನಿಸಲಾಗಿದೆ. ಸಂಸ್ಥೆಯ ಭದ್ರತಾ ಹಾಗೂ ಜಾಗ್ರತ ವಿಭಾಗವು ತಕ್ಷಣವೇ ವಿಷಯವನ್ನು ಪರಿಶೀಲಿಸಿದ್ದು, ವಿಡಿಯೋದಲ್ಲಿ ಕಾಣಿಸಿಕೊಂಡ ವ್ಯಕ್ತಿಯು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರನಲ್ಲ ಎಂಬುದು ಖಚಿತವಾಗಿದೆ ಎಂದಿದೆ. ಈ ಘಟನೆ ಮಂಡ್ಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಹೀಗಾಗಿ ಬಿಎಂಟಿಸಿಗೆ ಸಂಬಂಧಿಸದ ಘಟನೆಗೆ ಸಂಸ್ಥೆಯ ಹೆಸರನ್ನು ಜೋಡಿಸಿ ಪ್ರಚಾರ ಮಾಡಿರುವುದು ಸತ್ಯಕ್ಕೆ ದೂರವಾದದ್ದಾಗಿದೆ ಎಂಬುದಾಗಿ ತಿಳಿಸಿದೆ. https://kannadanewsnow.com/kannada/bsy-vijayanand-and-others-corruption-allegations-b-report-submitted-to-the-court-by-the-lokayukta/ https://kannadanewsnow.com/kannada/these-are-the-solutions-for-the-last-3-days-of-the-mahalaya-party/
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಇತರರ ವಿರುದ್ಧ ಕೇಳಿ ಬಂದಿದ್ದಂತ ಭ್ರಷ್ಟಾಚಾರ ಆರೋಪದಲ್ಲಿ ಲೋಕಾಯುಕ್ತದಿಂದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಕೆ ಮಾಡಲಾಗಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ಸೇರಿದಂತೆ ಮತ್ತಿತರರ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಲೋಕಾಯುಕ್ತದಿಂದ ತನಿಖೆ ನಡೆಸಲಾಗಿತ್ತು. ಇಂದು ಲೋಕಾಯುಕ್ತ ಪೊಲೀಸರು ತನ್ನ ತನಿಖಾ ವರದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ. ಬಿಡಿಎ ಅಪಾರ್ಟಮೆಂಟ್ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. 8.41 ಕೋಟಿ ಹಣ ನಕಲಿ ಕಂಪನಿಗಳ ಮೂಲಕ ವರ್ಗಾವಣೆ ಆರೋಪ ಮಾಡಲಾಗಿತ್ತು. ಬಿಎಸ್ ಯಡಿಯೂರಪ್ಪ ಮೊಮ್ಮಗ ಶಶಿಧರ್ ಮರಡಿ ಕಂಪನಿಗೆ ವರ್ಗಾವಣೆ ಮಾಡಲಾಗಿದೆ ಎಂಬುದಾಗಿ ಆರೋಪಿಸಲಾಗಿತ್ತು. ಈ ಹಿನ್ನಲೆಯಲ್ಲಿ ಸಾಮಾಜಿಕ ಹೋರಾಟಗಾರ ಟಿ.ಜಿ ಅಬ್ರಾಹಂ ಅವರು ಖಾಸಗಿ ದೂರು ದಾಖಲಿಸಿದ್ದರು. ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಶಶಿಧರ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ, ಎಸ್ ಟಿ ಸೋಮಶೇಖರ್,…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು ಗ್ರಾಮದಲ್ಲಿ ಸ್ಥಳೀಯವಾಗಿ ಸಾಗರ ಡಿಪೋ ವ್ಯಾಪ್ತಿಯಿಂದ ಹೊರಡುವ ಸರ್ಕಾರಿ ಬಸ್ಗಳನ್ನು ನಿಲ್ಲಿಸುವಂತೆ ಕೋರಿ ಸಾಗರದ ಡಿಪೋ ಮ್ಯಾನೇಜರ್ ಗೆ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆಯ ಅಧ್ಯಕ್ಷ ವಸೀಮ್ ಉಳ್ಳೂರು ಅವರು ಮನವಿ ಸಲ್ಲಿಸಿದರು. ಈ ಸಂಬಂಧ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿನ ಕೆ ಎಸ್ ಆರ್ ಟಿ ಸಿ ಡಿಪೋಗೆ ತೆರಳಿದಂತ ಅವರು, ಡಿಪೋ ಮ್ಯಾನೇಜರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು. ಸಾಗರ ಸಮೀಪದ ಉಳ್ಳೂರಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನಿಲುಗಡೆ ನೀಡುವಂತೆ ಮನವಿ ಪತ್ರದಲ್ಲಿ ಕೋರಲಾಗಿದೆ. ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆಯ ಮನವಿ ಏನು? ಸಾಗರ ತಾಲ್ಲೂಕು ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳ್ಳೂರು ಗ್ರಾಮವು ಪಂಚಾಯಿತಿಯ ಕೇಂದ್ರ ಸ್ಥಾನವಾಗಿದ್ದು ಈ ವ್ಯಾಪ್ತಿಯಲ್ಲಿ ಸುಮಾರು 700 ರಿಂದ 800 ಕುಟುಂಬಗಳು ವಾಸಿಸುತ್ತಿದ್ದು, ಸದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸಾರ್ವಜನಿಕರು, ರೈತಾಪಿ ವರ್ಗದವರು, ಮಹಿಳೆಯರು ವೃದ್ಧರು ಆಸ್ಪತ್ರೆ ಹಾಗೂ ಇನ್ನಿತರೆ…
ನವದೆಹಲಿ: ಗಂಭೀರ ಅತ್ಯಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಗುರುವಾರ ಉದ್ಯಮಿ ಲಲಿತ್ ಮೋದಿ ಅವರ ಸಹೋದರ ಸಮೀರ್ ಮೋದಿ ಅವರನ್ನು ಬಂಧಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ವಿದೇಶದಿಂದ ಹಿಂದಿರುಗಿದ ನಂತರ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ವರದಿಯಾಗಿರುವಂತೆ, ಪ್ರಕರಣವು ಹಲವಾರು ವರ್ಷಗಳಷ್ಟು ಹಳೆಯದಾಗಿದ್ದು, ಬಹಳ ಸಮಯದಿಂದ ತನಿಖೆಯಲ್ಲಿದೆ. ದೆಹಲಿಯ ನ್ಯೂ ಫ್ರೆಂಡ್ಸ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಮೋದಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು ಮತ್ತು ನಂತರ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಸುದ್ದಿ ಸಂಸ್ಥೆ IANS ವರದಿ ಮಾಡಿದೆ. ಈಗಿನಂತೆ, ದೆಹಲಿ ಪೊಲೀಸರು ಬಂಧನದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. https://twitter.com/ians_india/status/1968667755126865983 ಸಮೀರ್ ಮೋದಿ ಯಾರು? ಸಮೀರ್ ಮೋದಿ ಡಿಸೆಂಬರ್ 15, 1969 ರಂದು ಜನಿಸಿದರು. ಅವರು ಭಾರತೀಯ ಉದ್ಯಮಿ ಮತ್ತು ಕೆ.ಕೆ. ಮೋದಿ ಮತ್ತು ಬಿನಾ ಮೋದಿ ಅವರ ಕಿರಿಯ ಮಗ. ಅವರು 1933 ರಲ್ಲಿ ತಮ್ಮ…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಪರಿಶಿಷ್ಟ ಜಾತಿ/ಪರಿಶಿಷ್ಠ ವರ್ಗಕ್ಕೆ ಸೇರಿದ ವ್ಯಕ್ತಿಗಳ ಅವಲಂಬಿತರಿಗೆ ಗ್ರೂಪ್ ಸಿ ಮತ್ತು ಗ್ರೂಪ್ ಡಿ ವೃಂದದ ಹುದ್ದೆಗಳಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲು ನಿರ್ಧರಿಸಲಾಗಿದೆ. ಆ ಎಲ್ಲಾ ಪ್ರಮುಖ ಸಚಿವ ಸಂಪುಟ ಸಭೆಯ ಹೈಲೈಟ್ಸ್ ಮುಂದಿದೆ ಓದಿ. · ಸಹಕಾರ ಇಲಾಖೆಯಡಿ ಬೆಂಗಳೂರಿನ ದಾಸನಪುರ,ಕೋಲಾರ, ಮೈಸೂರು ಎಪಿಎಂಸಿಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಮಾದರಿಯಲ್ಲಿ ಬಯೋ ಸಿಎನ್ ಜಿ ಪ್ಲಾಂಟ್ ಗಳನ್ನು 74.88 ಕೋಟಿ ರೂ. ಪ್ರತಿಘಟಕಕ್ಕೆ 24.96 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತು. · ವಿಜಯಪುರ ಜಿಲ್ಲೆಯಲ್ಲಿ ವಿಜಯಪುರ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳ 618.75 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಯಿತು. · ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕಾರ್ಡಿಯಾಕ್ ಯೂನಿಟ್ ನ…
ಉತ್ತರ ಕನ್ನಡ: ಜಿಲ್ಲೆಯಲ್ಲಿ ಲಾರಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಕಂಚಿನ ಬಾಗಿಲು ಬಳಿಯಲ್ಲಿ ಲಾರಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಂಕೋಲಾದಿಂದ ಯಲ್ಲಾಪುರ ಕಡೆಗೆ ಲಾರಿ ತೆರಳುತ್ತಿತ್ತು. ಈ ಅಪಘಾತದಲ್ಲಿ ಲಾರಿ ಚಾಲಕ, ಬಸ್ ನಲ್ಲಿದ್ದ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಅಂಕೋಲಾ ತಾಲ್ಲೂಕಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/extension-of-time-for-reordering-options-for-medical-dental-and-ayush-course-seats/ https://kannadanewsnow.com/kannada/good-news-good-news-for-pensioners-nps-rules-changed-from-1st-january-many-benefits/
ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-25 (ಕೆಸೆಟ್)ಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.24ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಪ್ರಸನ್ನ ತಿಳಿಸಿದ್ದಾರೆ. ಸೆ.25ರೊಳಗೆ ಶುಲ್ಕ ಪಾವತಿಸಬೇಕು. ಇದು ಕೊನೆ ವಿಸ್ತರಣೆಯಾಗಿದ್ದು ಪುನಃ ಅರ್ಜಿ ಸಲ್ಲಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್ ಸೀಟಿಗೆ ಆಪ್ಷನ್ಸ್ ಮರುಕ್ರಮಕ್ಕೆ ಸಮಯ ವಿಸ್ತರಣೆ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ಮರುಕ್ರಮಗೊಳಿಸಲು ಸೆ.19ರಂದು ಬೆಳಿಗ್ಗೆ 7 ಗಂಟೆವರೆಗೆ ಸಮಯ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ. https://kannadanewsnow.com/kannada/in-the-hindenburg-fraud-allegations-the-adani-group-has-received-a-clean-chit-from-sebi/ https://kannadanewsnow.com/kannada/good-news-good-news-for-pensioners-nps-rules-changed-from-1st-january-many-benefits/
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ಮರುಕ್ರಮಗೊಳಿಸಲು ಸೆ.19ರಂದು ಬೆಳಿಗ್ಗೆ 7 ಗಂಟೆವರೆಗೆ ಸಮಯ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಕೆಸೆಟ್: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-25 (ಕೆಸೆಟ್)ಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.24ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಪ್ರಸನ್ನ ತಿಳಿಸಿದ್ದಾರೆ. ಸೆ.25ರೊಳಗೆ ಶುಲ್ಕ ಪಾವತಿಸಬೇಕು. ಇದು ಕೊನೆ ವಿಸ್ತರಣೆಯಾಗಿದ್ದು ಪುನಃ ಅರ್ಜಿ ಸಲ್ಲಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/in-the-hindenburg-fraud-allegations-the-adani-group-has-received-a-clean-chit-from-sebi/ https://kannadanewsnow.com/kannada/people-of-sagar-district-take-to-the-streets-for-the-struggle-the-awakened-sagar-district-proclaims-our-rights/
ಶಿವಮೊಗ್ಗ: ಸಾಗರ ಜಿಲ್ಲೆ ಹೋರಾಟಕ್ಕೆ ತಾಲ್ಲೂಕಿನ ಜನರು ಬೀದಿಗೆ ಇಳಿದಿದ್ದಾರೆ. ಸಾಗರ ನಗರಸಭೆಯಿಂದ ಸಾಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದಂತ ಸಾಗರ ಜಿಲ್ಲೆ ಹೋರಾಟವು, ಸಾಗರ ಜಿಲ್ಲೆ ನಮ್ಮ ಹಕ್ಕು ಘೋಷಣೆಯ ಮೂಲಕ ಮಾರ್ಧನಿಸುವಂತೆ ಮಾಡಿತು. ಈ ಮೂಲಕ ಸಾಗರ ಜಿಲ್ಲೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಯಿತು. ಇಂದು ಸಾಗರ ಜಿಲ್ಲೆ ಹೋರಾಟದ ರಣಕಹಳೆ ಮೊಳಗಿತು. ಕೇಂದ್ರ ಸರ್ಕಾರದ ಜನಗಣತಿಯು 2026 ಎಪ್ರಿಲ್ 01ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಅದಕ್ಕಿಂತ 3ತಿಂಗಳು ಮುಂಚಿತವಾಗಿ ಹೊಸ ಜಿಲ್ಲೆ, ತಾಲೂಕು ರಚನೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪಿತ ಬದಲಾವಣೆಗಳಿದ್ದರೆ, 2025ರ ಡಿಸೆಂಬರ್ 31ರ ಒಳಗಾಗಿ ಮುಗಿಸಿಕೊಳ್ಳುವ ರಾಜ್ಯಗಳಿಗೆ ಕೇಂದ್ರಸರ್ಕಾರ ನಿರ್ದೇಶಿಸಿದೆ. ಈ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸಬೇಕು ಎಂಬ ಹೋರಾಟಕ್ಕೆ ಮತ್ತೆ ಜೀವಕಳೆ ಬಂದಿದೆ. ಇಂದು ಸಾಗರದಲ್ಲಿ ನಾಗರೀಕರು, ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಬೀದಿಗಿಳಿದು ಮೆರವಣಿಗೆ ನಡೆಸಿದರು. ಆ ಬಳಿಕ ಸಾಗರ ನಗರಸಭೆಯ ರಂಗಮಂದಿರದಲ್ಲಿ ಸಭೆ ನಡೆಸಿ ಒತ್ತಾಯಿಸಿದರು. ಈ ವೇಳೆ ಮಾತನಾಡಿದಂತ ಸಾಗರ…
ಬೆಂಗಳೂರು : “ಆಳಂದ ಕ್ಷೇತ್ರದ ಮತ ಅಕ್ರಮದ ಬಗ್ಗೆ ಸಿಐಡಿ ತನಿಖೆಗೆ ಚುನಾವಣಾ ಆಯೋಗ ಸಹಕಾರ ನೀಡದಿರುವುದನ್ನು ನೋಡಿದರೆ, ಅವರೂ ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆಂಬ ಅನುಮಾನ ಸಹಜವಾಗಿ ಮೂಡುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಶಿವಕುಮಾರ್ ಅವರು ಗುರುವಾರ ಮಾತನಾಡಿದರು. ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿರುವ ಬಗ್ಗೆ ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರು ಮಾಧ್ಯಮಗೋಷ್ಠಿ ನಡೆಸಿರುವ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಅವರು ಈ ಬಗ್ಗೆ ನಮ್ಮ ಬಳಿ ಸಂಪೂರ್ಣ ಮಾಹಿತಿ ಪಡೆದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಕೇವಲ ಆಳಂದ ವಿಧಾನಸಭಾ ಕ್ಷೇತ್ರ ಮಾತ್ರವಲ್ಲ, ಬೇರೆ ಕ್ಷೇತ್ರಗಳಲ್ಲೂ ಈ ರೀತಿ ಅಕ್ರಮಗಳು ನಡೆದಿವೆ” ಎಂದು ಆರೋಪಿಸಿದರು. “ಸುಮಾರು 6 ಸಾವಿರ ಮತಗಳನ್ನು ತೆಗೆದು ಹಾಕಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹಾಗೂ ಆಳಂದ ಶಾಸಕರು ದೂರು ನೀಡಿದ್ದರು. ಈ ಕುರಿತು ಪ್ರಕರಣವೂ ದಾಖಲಾಯಿತು. ಈ ಮಧ್ಯೆ ಚಿಲುಮೆ ಸಂಸ್ಥೆ ಅಕ್ರಮದ ವಿಚಾರವಾಗಿ ನಾವು ಹೋರಾಟ ಮಾಡಿ ಕೇಂದ್ರ ಚುನಾವಣಾ ಆಯೋಗವನ್ನು…









