Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಇಂದು ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಈ ಸೂಚನೆ ನೀಡಿದರು. ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು. ಚುನಾವಣಾ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡುವಂತೆ ಸಿಎಂ ಸೂಚಿಸಿದರು. ಇಲಾಖೆಯಲ್ಲಿ ಕಾನ್ಸ್ಟೇಬಲ್, ಸಬ್ ಇನ್ಸ್ಪೆಕ್ಟರ್ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯತೆ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು, ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ…
ನವದೆಹಲಿ: ನಿನ್ನೆ ಕೇಂದ್ರ ಸಚಿವ ಸಂಪುಟ ಸಭೆಯ ಬಳಿಕ, ತನ್ನ ಸಂಪುಟದ ಸಚಿವರಿಗೆ ಮೋದಿ ಖಾತೆ ಹಂಚಿಕೆ ಮಾಡಿದ್ದರು. ಕರ್ನಾಟಕದ ವಿ.ಸೋಮಣ್ಣ ಅವರಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವಸ್ಥಾನ ನೀಡಲಾಗಿತ್ತು. ಇಂತಹ ಖಾತೆಯ ಅಧಿಕಾರವನ್ನು ಇಂದು ವಹಿಸಿಕೊಂಡರು. ಮೋದಿ 3.0 ಸಚಿವ ಸಂಪುಟ ಸೇರಿದಂತೆ ಕರ್ನಾಟಕದ ಐವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಹೆಚ್.ಡಿ ಕುಮಾರಸ್ವಾಮಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಿದ್ದರೇ, ನಿರ್ಮಲಾ ಸೀತಾರಾಮನ್ ಗೆ ಹಣಕಾಸು ಖಾತೆ, ಶೋಭಾ ಕರಂದ್ಲಾಜೆಗೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಖಾತೆ ಮತ್ತು ಕಾರ್ಮಿಕ ಇಲಾಖೆ ರಾಜ್ಯಖಾತೆ ನೀಡಲಾಗಿತ್ತು. ವಿ.ಸೋಮಣ್ಣ ಅವರಿಗೆ ಜಲಶಕ್ತಿ ರಾಜ್ಯಖಾತೆ ಹಾಗೂ ರೈಲ್ವೆ ಸಚಿವ ರಾಜ್ಯಖಾತೆಯನ್ನು ಹಂಚಿಕೆ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಅವರು ನವದೆಹಲಿಯ ಕಚೇರಿಗೆ ತೆರಳಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ವಿ.ಸೋಮಣ್ಣ ಅಧಿಕಾರ ವಹಿಸಿಕೊಂಡರು. https://kannadanewsnow.com/kannada/breaking-actor-darshan-pavithra-gowda-and-13-others-appeared-before-the-court-soon/ https://kannadanewsnow.com/kannada/police-under-pressure-not-to-arrest-darshan-pressure-from-politicians-sandalwood-seniors/
ಶಿವಮೊಗ್ಗ: ಇಂದು ಶಿವಮೊಗ್ಗ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ನಗರದ ಬುದ್ದನಗರ, ಆರ್.ಎಂ.ಎಲ್ ನಗರ, ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ, ಹರಕೆರೆ, ನ್ಯೂ ಮಂಡ್ಲಿ, ಊರುಗಡೂರು. ಮದಾರಿ ಪಾಳ್ಯ ವಿದ್ಯಾನಗರ, ರಾಜೀವ್ ಗಾಂಧಿ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಶಾಂತಿನಗರ, ರಾಗಿಗುಡ್ಡ, ಶಾಂತಿನಗರ-ನವುಲೆ ಮುಖ್ಯ ರಸ್ತೆ ಚಾನೆಲ್ ಬಳಿ, ಮ್ಯಾಕ್ಸ್ ಆಸ್ಪತ್ರೆ ಪಕ್ಕದಲ್ಲಿರುವ ಕನ್ನರ್ವೆನ್ಸಿ ರಸ್ತೆ ಹಾಗೂ ಇತರೆ ಪ್ರದೇಶಗಳಲ್ಲಿ ಸಂಚರಿಸಿದ್ದು, ನಂತರ ಸಾಗರ ರಸ್ತೆ ಬಿ.ಎಸ್.ಎನ್.ಎಲ್ ಕಛೇರಿ ಬಳಿ ಇರುವ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಕಸ ವಿಲೇವಾರಿ ಮತ್ತು ನಗರ ಸ್ವಚ್ಚತೆ ಬಗ್ಗೆ ಪರಿಶೀಲನೆಯನ್ನು ನಡೆಸಿದರು. ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಮಂಜುನಾಥ್ ಚೌದರಿ ಎಂ.ಹೆಚ್. ರವರು ಲೋಕಾಯುಕ್ತ ಠಾಣೆಯ ಅಧಿಕಾರಿಗಳಾದ ಉಮೇಶ್ ಈಶ್ವರ ನಾಯ್ಕ, ಡಿ.ಎಸ್.ಪಿ ಮತ್ತು ಪೋಲೀಸ್ ನಿರೀಕ್ಷಕರುಗಳಾದ ಸುರೇಶ್ ಹೆಚ್.ಎಸ್, ಪ್ರಕಾಶ್, ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳೊಂದಿಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾದ ಮಾಯಣ್ಣಗೌಡ ಮತ್ತು ಅವರ ಅಧಿಕಾರಿ ಸಿಬ್ಬಂದಿಗಳು, ಇಂಜಿನಿಯರ್ಗಳು ಮತ್ತು ಸದರಿ…
ನವದೆಹಲಿ: ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ನಾಯ್ಡು ಅವರು ಜೂನ್ 12 ರ ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ನಿರೀಕ್ಷೆಯಿದೆ. “ಬಿಜೆಪಿ, ಜನಸೇನಾ ಮತ್ತು ಟಿಡಿಪಿಯ ಎಲ್ಲಾ ಶಾಸಕರು ಆಂಧ್ರಪ್ರದೇಶದ ಮುಂಬರುವ ಎನ್ಡಿಎ ಸರ್ಕಾರದ ಮುಖ್ಯಮಂತ್ರಿಯಾಗಲು ಒಪ್ಪಿಗೆ ನೀಡಿದ್ದಾರೆ” ಎಂದು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಹೇಳಿದರು. https://twitter.com/ANI/status/1800418415988908148 ಮಂಗಳಗಿರಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಿತ್ರಪಕ್ಷ ಜನಸೇನಾ ಶಾಸಕಾಂಗ ಪಕ್ಷದ ನಾಯಕರಾಗಿ ಪವನ್ ಕಲ್ಯಾಣ್ ಅವರನ್ನು ಆಯ್ಕೆ ಮಾಡಲಾಗಿದೆ. ಎನ್ಡಿಎ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಚಂದ್ರಬಾಬು ನಾಯ್ಡು ಅವರ ಉಮೇದುವಾರಿಕೆಯನ್ನು ಪವನ್ ಕಲ್ಯಾಣ್ ಪ್ರಸ್ತಾಪಿಸಿದರು ಮತ್ತು ಬೆಂಬಲಿಸಿದರು. ಸಭೆಯಲ್ಲಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್, ರಾಜ್ಯ ಬಿಜೆಪಿ ಮುಖ್ಯಸ್ಥ ದಗ್ಗುಬಾಟಿ ಪುರಂದೇಶ್ವರಿ ಮತ್ತು ಇತರ ಶಾಸಕರು ಭಾಗವಹಿಸಿದ್ದರು.…
ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಒಂದು ದಿನ ಮೊದಲು, ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮಂಗಳವಾರ ಅಮರಾವತಿ ರಾಜ್ಯದ ರಾಜಧಾನಿಯಾಗಲಿದೆ ಎಂದು ಘೋಷಿಸಿದ್ದಾರೆ. ವಿಜಯವಾಡದಲ್ಲಿ ನಡೆದ ಎನ್ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಈ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಅವರನ್ನು ಮೈತ್ರಿಕೂಟದ ಸದನದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಜನಸೇನಾ ಪಕ್ಷದ ಮುಖ್ಯಸ್ಥ ಕೆ.ಪವನ್ ಕಲ್ಯಾಣ್ ಅವರ ಹೆಸರನ್ನು ಪ್ರಸ್ತಾಪಿಸಿದರು ಮತ್ತು ಇದನ್ನು ಬಿಜೆಪಿ ರಾಜ್ಯ ಅಧ್ಯಕ್ಷ ಮತ್ತು ಹೊಸದಾಗಿ ಆಯ್ಕೆಯಾದ ಸಂಸದೆ ಡಿ.ಪುರಂದೇಶ್ವರಿ ಬೆಂಬಲಿಸಿದರು. “ಅಮರಾವತಿ ನಮ್ಮ ರಾಜ್ಯದ ರಾಜಧಾನಿಯಾಗಲಿದೆ. ನಾವು ಕೇವಲ ಕೆಲವು ಸ್ಥಳಗಳನ್ನು ಮಾತ್ರವಲ್ಲ, ಇಡೀ ರಾಜ್ಯವನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇವೆ” ಎಂದು ನಾಯ್ಡು ಹೇಳಿದರು. ಆಂಧ್ರಪ್ರದೇಶದಲ್ಲಿ ಟಿಡಿಪಿ, ಜೆಎಸ್ಪಿ ಮತ್ತು ಬಿಜೆಪಿಯನ್ನು ಒಳಗೊಂಡ ಎನ್ಡಿಎ, ಏಕಕಾಲದಲ್ಲಿ ನಡೆದ ರಾಜ್ಯ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್ಆರ್ಸಿಪಿಯನ್ನು ಸಮಗ್ರವಾಗಿ ಸೋಲಿಸಿತು. ವಿಶಾಖಪಟ್ಟಣಂ ಅನ್ನು ಆಡಳಿತಾತ್ಮಕ ರಾಜಧಾನಿಯಾಗಿ ಅಭಿವೃದ್ಧಿಪಡಿಸುವುದಾಗಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು, ಮುಖ್ಯ ಶಿಕ್ಷಕರು ಸೇರಿದಂತೆ ತತ್ಸಮಾನ ವೃಂದದ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಈ ಬಳಿಕ ಸ್ಥಳ ನಿಯುಕ್ತಿಗಾಗಿ ಕೌನ್ಸಿಲಿಂಗ್ ಗೆ ವೇಳಾಪಟ್ಟಿಯನ್ನು ಪ್ರಕಟಿಸಿ, ಆದೇಶಿಸಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಅವರು ಅಧಿಕೃತ ಜ್ಞಾಪನ ಹೊರಡಿಸಿದ್ದು, 2023-24ನೇ ಸಾಲಿನ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡವು ಬಗ್ಗೆ ಪರೀಕ್ಷೆ ನಡೆಸಲು ಅಧಿಸೂಚನೆಯನ್ನು ಹೊರಡಿಸಲಾಗಿತ್ತು ಎಂದಿದ್ದಾರೆ. ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಇದ್ದ ಪ್ರಯುಕ್ತ ಕೌನ್ಸಿಲಿಂಗ್ ದಿನಾಂಕವನ್ನು ಪ್ರಕಟಿಸಿರಲಿಲ್ಲ. ಆದ್ದರಿಂದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸುವ ಕುರಿತಂತೆ ಪ್ರಸ್ತುತ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಪರಿಷ್ಕರಿಸಿ ಆದೇಶಿಸಿದ್ದಾರೆ. ಹೀಗಿದೆ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು, ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಹುದ್ದೆಗಳಿಗೆ ಆಯ್ಕೆದಾ ಅಭ್ಯರ್ಥಿಗಳಿಗೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ಟ್ವಿಟ್ ನಲ್ಲಿ ರಿಯಾಕ್ಟ್ ಮಾಡಿದ್ದು, ದರ್ಶನ್ ಅವರಿಗೆ ಮರಣದಂಡನೆಯೋ ಅಥವಾ ಜೀವಾವಧಿ ಶಿಕ್ಷೆಯೋ ಅಂತ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ಇಂದು ನಟಿ ರಮ್ಯಾ ಅವರು ಕರ್ನಾಟಕ ಬಾಕ್ಸ್ ಆಫೀಸ್ ಎನ್ನುವಂತವರು ಎಕ್ಸ್ ಪೋಸ್ಟ್ ಅನ್ನು ರೀಪೋಸ್ಟ್ ಮಾಡಿದ್ದಾರೆ. ಆ ಪೋಸ್ಟ್ ನಲ್ಲಿ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ನಟ ದರ್ಶನ್ ವಿರುದ್ಧ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೇಸ್ ದಾಖಲಾಗಿದೆ. ಈ ಸೆಕ್ಷನ್ ಅಡಿಯಲ್ಲಿ ನಟ ದರ್ಶನ್ ಗೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ವಿಧಿಸಬಹುದೇನೋ ಅಂತ ತಿಳಿಸಿದ್ದಾರೆ. ಬೇರೆ ಯಾವುದೇ ಫಲಿತಾಂಶವು ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವ ಪ್ರಕರಣವಾಗಿರುತ್ತದೆ. ಬಲಿಪಶುವಿಗೆ ಅರ್ಹವಾದ ನ್ಯಾಯ ಸಿಗುತ್ತದೆ ಎಂದು ಭಾವಿಸುತ್ತೇನೆ ಎಂಬುದಾಗಿ ಹೇಳಲಾದಂತ ಪೋಸ್ಟ್ ನಟಿ ರಮ್ಯಾ ರೀ ಪೋಸ್ಟ್ ಮಾಡಿದ್ದಾರೆ. https://twitter.com/Karnatakaa_BO/status/1800410187347738894 https://kannadanewsnow.com/kannada/sc-issues-notice-to-nta-over-alleged-irregularities-in-neet-2024/…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ನೀಟ್-ಯುಜಿ 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಿಂದ (ಎನ್ಟಿಎ) ಪ್ರತಿಕ್ರಿಯೆಯನ್ನು ಕೋರಿದೆ. ಹೆಚ್ಚುವರಿಯಾಗಿ, ನೀಟ್-ಯುಜಿ 2024 ಪರೀಕ್ಷೆಗೆ ಸಂಬಂಧಿಸಿದ ಇದೇ ರೀತಿಯ ಮತ್ತೊಂದು ಅರ್ಜಿಯೊಂದಿಗೆ ನ್ಯಾಯಾಲಯವು ವಿಚಾರಣೆಯನ್ನು ಜುಲೈ 8 ಕ್ಕೆ ನಿಗದಿಪಡಿಸಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ – ಪದವಿಪೂರ್ವ (ನೀಟ್-ಯುಜಿ) 2024 ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್ಟಿಎ) ನೋಟಿಸ್ ನೀಡಿದೆ ಮತ್ತು ಪ್ರತಿಕ್ರಿಯೆ ಕೋರಿದೆ. ಆದಾಗ್ಯೂ, ನಡೆಯುತ್ತಿರುವ ಕಾನೂನು ಪ್ರಕ್ರಿಯೆಗಳ ಹೊರತಾಗಿಯೂ, ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ನಿಲ್ಲಿಸಲು ನ್ಯಾಯಾಲಯ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ರಜಾಕಾಲದ ಪೀಠದ ಮುಂದೆ ಅರ್ಜಿಯನ್ನು ತರಲಾಯಿತು. ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ…
ಬೆಂಗಳೂರು: ನಟ ದರ್ಶನ್ ಸೇರಿದಂತೆ 10 ಮಂದಿಯನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ನಟ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಬೆನ್ನಲ್ಲೇ ಶೆಡ್ ಬಳಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಂತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ನಟ ದರ್ಶನ್ ಸ್ನೇಹಿತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಂತ ಕಾರಣಕ್ಕಾಗೇ ಚಿತ್ರದುರ್ಗಿ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ವಿನಯ್ ಎನ್ನುವವರಿಗೆ ಸೇರಿದ ಶೆಡ್ ಗೆ ಕರೆದೊಯ್ಯಲಾಗಿತ್ತು. ಕಿಡ್ನ್ಯಾಪ್ ಮಾಡಿ, ಅಲ್ಲಿ ಹಲ್ಲೆ ಕೂಡ ಮಾಡಲಾಗಿತ್ತು. ಈ ಹಲ್ಲೆಯ ವೇಳೆಯಲ್ಲಿ ಬಲವಾದ ರಾಡ್ ನಿಂದ ಹೊಡೆದ ಕಾರಣ, ರೇಣುಕಾಸ್ವಾಮಿ ಸಾವನ್ನಪ್ಪಿದ್ದರು. ಈ ಇಡೀ ಘಟನೆ ಬಂಧಿತ ಆರೋಪಿ ವಿನಯ್ ಎಂಬುವರಿಗೆ ಸೇರಿದಂತ ಶೆಡ್ ನಲ್ಲಿ ನಡೆದಿತ್ತು. ಈ ಹಿನ್ನಲೆಯಲ್ಲಿ ಶೆಡ್ ಬಳಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಂತ ವ್ಯಕ್ತಿಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆಯ ಬಳಿಕ ಕಾಮಾಕ್ಷಿ ಪೊಲೀಸ್ ಠಾಣೆಗೆ ಕರೆದೊಯ್ಯೋ ಸಾಧ್ಯತೆ ಇದೆ. https://kannadanewsnow.com/kannada/shivamogga-power-outages-in-these-areas-of-the-district-on-june-13/…
ಶಿವಮೊಗ್ಗ: ಶಿವಮೊಗ್ಗ ನ.ಉ.ವಿ-2ರ ಮಂಡ್ಲಿ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 13 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ಮಿಲ್, ಬೆನಕೇಶ್ವರ ರೈಸ್ಮಿಲ್, ಸವಾಯಿಪಾಳ್ಯ, ಕುರುಬರಪಾಳ್ಯ, ಇಲಿಯಾಜ್ನಗರ 1 ರಿಂದ 4ನೇ ಕ್ರಾಸ್, 100 ಅಡಿರಸ್ತೆ, ಎಫ್-05 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18 ಹೊಸಳ್ಳಿ, ಎಫ್-6 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಆನುಪಿಕಟ್ಟೆ, ಪುರದಾಳು, ರಾಮಿಕೊಪ್ಪ, ಮೈಲಾರಪ್ಪಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 75.60 ಮಿಮಿ ಮಳೆಯಾಗಿದ್ದು,…












