Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಕುಂಸಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಿವಿಧ ಪ್ರಕರಣಗಳಲ್ಲಿ ಸೀಜ್ ಮಾಡಿದಂತ ವಾಹನಗಳ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲಿಸಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್, ಆ ಬಳಿಕ ಠಾಣಾಧಿಕಾರಿಗಳ ಬಳಿಯಲ್ಲಿ ಎಷ್ಟು ವಾಹನ ಸೀಜ್ ಮಾಡಿದ್ದೀರಿ.? ಯಾವ ಯಾವ ಕೇಸಲ್ಲಿ ವಾಹನಗಳನ್ನು ಹಿಡಿದಿಟ್ಟುಕೊಂಡಿದ್ದೀರಿ ಎಂಬುದಾಗಿ ಲೆಕ್ಕ ಕೇಳಿದರು. ಆಗ ಸರಿಯಾಗಿ ಉತ್ತರಿಸದಂತ ಠಾಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು, ಸೂಕ್ತವಾದ ರಿಜಿಸ್ಟಾರ್ ಇಟ್ಟು, ಎಲ್ಲಾ ಮಾಹಿತಿಯನ್ನು ದಾಖಲಿಸುವಂತೆ ಸೂಚಿಸಿದರು. ಶಾಸಕರಾದ ಗೋಪಾಲಕೃಷ್ಣ ಬೇಳೂರು, ಮಂಜುನಾಥ್ ಭಂಡಾರಿ, ಬಲ್ಕಿಶ್ ಭಾನು, ಪೂರ್ವ ವಲಯ ಐಜಿಪಿ ರಮೇಶ್ ಬಾನೋತ್, SP ಮಿಥುನ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ದೀಪಕ್ ಇದ್ದರು. https://kannadanewsnow.com/kannada/big-shock-to-illegal-building-owners-in-bengaluru-deputy-cm-dk-shivakumar-announces-eviction/ https://kannadanewsnow.com/kannada/qadri-agrees-to-withdraw-from-shiggaon-seat-after-minister-zameer-ahmeds-persuasion-succeeds/
ಬೆಂಗಳೂರು : ಶಿಗ್ಗಾವ್ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿ ಯಾಗಿ ನಾಮಪತ್ರ ಸಲ್ಲಿಸಿದ್ದ ಅಜ್ಜಂ ಪೀರ್ ಖಾದ್ರಿ ಮನವೊಲಿಸುವಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಯಶಸ್ವಿಯಾಗಿದ್ದು, ಕಣ ದಿಂದ ಹಿಂದೆ ಸರಿಯಲು ಒಪ್ಪಿದಾರೆ. ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ವಖ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅನ್ವರ್ ಬಾಷಾ, ಧಾರವಾಡ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟ್ ಗಾರ್ ಜತೆಗೂಡಿ ಖಾದ್ರಿ ಅವರನ್ನು ಶುಕ್ರವಾರ ಮಧ್ಯರಾತ್ರಿ ಶಿಗ್ಗಾವ್ ನಿಂದ ಬೆಂಗಳೂರಿಗೆ ಕರೆತಂದಿದ್ದ ಜಮೀರ್ ಅಹಮದ್ ಖಾನ್ ಅವರು, ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಮಾಡಿಸಿದರು. ಮಾತುಕತೆ ವೇಳೆ, ಖಾದ್ರಿ ಅವರಿಗೆ ರಾಜಕೀಯ ವಾಗಿ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನದ ಭರವಸೆ ನೀಡಲಾಗಿದ್ದು, ಅ . 30 ರಂದು ನಾಮಪತ್ರ ವಾಪಸ್ ಪಡೆಯುವುದು ಬಹುತೇಕ ಖಚಿತ ವಾಗಿದೆ. ಆದರೆ, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ಮಾತನಾಡಿ ಅವರನ್ನು ಒಪ್ಪಿಸಿ ಕಾಂಗ್ರೆಸ್…
ಬೆಂಗಳೂರು: ಬಿಜೆಪಿ ನಿಲುವು ಅತ್ಯಂತ ಸ್ಪಷ್ಟವಾಗಿದೆ. ವಕ್ಫ್ ಕಾಯಿದೆ ಹೆಸರು ಹೇಳಿಕೊಂಡು ರೈತರು ಬೀದಿಪಾಲಾಗಬಾರದು. ಆ ನಿಟ್ಟಿನಲ್ಲಿ ಸರಕಾರ ಎಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಬಿಜೆಪಿ ಯಾವ ಹಂತಕ್ಕೆ ಹೋಗಲೂ ಸಿದ್ಧವಿದೆ ಎಂದು ಪ್ರಕಟಿಸಿದÀರು. ನಾವು ಹೋರಾಟಕ್ಕೂ ಇಳಿಯುತ್ತೇವೆ; ಆದರೆ, ರೈತರಿಗೆ ಅನ್ಯಾಯ ಆಗಲು ನಾವು ಬಿಡುವುದಿಲ್ಲ ಎಂದು ಎಚ್ಚರಿಸಿದರು. ವಕ್ಫ್ ಕಾಯಿದೆ ಹೆಸರಿನಲ್ಲಿ ರೈತರ ಜಮೀನನ್ನು ಹೊಡೆದುಕೊಳ್ಳುವ ಹುನ್ನಾರವೂ ನಡೆಯುತ್ತಿದೆ. ಮೊನ್ನೆ ವಿಜಾಪುರದಲ್ಲಿ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿದ್ದಾರೆ. ರೈತರು ಹಲವಾರು ದಶಕಗಳಿಂದ ಕೃಷಿ ಮಾಡುತ್ತಿದ್ದ ಜಮೀನು ಕೂಡ ವಕ್ಫ್ ಆಸ್ತಿ ಎಂದು ಅಧಿಕಾರಿಗಳ ಮೂಲಕ ನೋಟಿಸ್ ನೀಡುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಸದಾ ತುಷ್ಟೀಕರಣ ಮಾಡುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರದ ಬೆಂಬಲ ವಕ್ಫ್ ಬೋರ್ಡ್ಗೆ ಇರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು…
ಬೆಂಗಳೂರು: “ಅಕ್ರಮವಾಗಿ ನಿರ್ಮಾಣವಾಗುತ್ತಿರುವ ಹಾಗೂ ಕಳಪೆ ಗುಣಮಟ್ಟದ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿಯುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಹಾಗೂ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಸಭೆಯಲ್ಲಿ ಯಾವ ವಿಚಾರವಾಗಿ ಚರ್ಚೆಯಾಯಿತು ಎಂದು ಕೇಳಿದಾಗ, “ಮಳೆಯಿಂದ ಹಾನಿಯಾಗಿರುವ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಜತೆಗೆ ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ನಾವು ಮುಂದಾಗಿದ್ದೇವೆ. ಈ ಹಿಂದೆ ಅಧಿಕಾರಿಗಳಿಗೆ ಇದ್ದ ಅಧಿಕಾರವನ್ನು ಕಳೆದ ಸರ್ಕಾರ ಮೊಟಕುಗೊಳಿಸಿತ್ತು. ಈಗ ನಮ್ಮ ಸರ್ಕಾರ ಬಿಬಿಎಂಪಿ, ಬಿಡಿಎ, ಬಿಎಂಆರ್ ಡಿಎ ಅಧಿಕಾರಿಗಳಿಗೆ ಈ ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ಅಧಿಕಾರ ನೀಡುತ್ತಿದ್ದೇವೆ. ಕೂಡಲೇ ಇಂತಹ ಆಸ್ತಿಗಳ ನೋಂದಣಿ ನಿಲ್ಲಿಸಲಾಗುವುದು. ಇದೇ ವೇಳೆ ಒತ್ತುವರಿ ತೆರವುಗೊಳಿಸುವ ಬಗ್ಗೆಯೂ ಗಮನ ಹರಿಸಲಾಗುತ್ತಿದೆ. ಈ ವಿಚಾರದಲ್ಲಿ ನಾವು ಪ್ರಮುಖ ತೀರ್ಮಾನ ಕೈಗೊಂಡಿದ್ದೇವೆ”ಎಂದು ವಿವರಿಸಿದರು. ಮಳೆಯಿಂದ ಆಗಿರುವ ತೊಂದರೆ ಬಗ್ಗೆ ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ಬೆಂಗಳೂರು ನಗರದಲ್ಲಿ…
ಬೆಂಗಳೂರು: ಕಾರವಾರದ ಬೇಲೆಕೇರಿ ಬಂದರಿನಲ್ಲಿದ್ದಂ 11,312 ಮೆಟ್ರಿಕ್ ಟನ್ ಅದಿರನ್ನು ಶಾಸಕ ಸತೀಶ್ ಸೈಲ್ ಅವರು ಅಕ್ರಮವಾಗಿ ನಾಪತ್ತೆ ಮಾಡಿದ್ದರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲದೇ ಇತ್ತೀಚಿಗಷ್ಟೇ ಕೋರ್ಟ್ ದೋಷಿ ಎಂಬುದಾಗಿ ತೀರ್ಪು ನೀಡಿತ್ತು. ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದು, ಯಾವ ಯಾವ ಕೇಸಲ್ಲಿ ಎಷ್ಟು ಶಿಕ್ಷೆ, ದಂಡ ವಿಧಿಸಲಾಗಿದೆ ಅಂತ ಮುಂದೆ ಓದಿ. ಈ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದವನ್ನು ಆಲಿಸಿ, 2010ರಲ್ಲಿ ಕಾರವಾರದ ಬೇಲೆಕೇರಿ ಬಂಧರಿನಲ್ಲಿ ಇದ್ದಂತ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ ಸಂಬಂಧದ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ದೋಷಿ ಎಂಬುದಾಗಿ ತೀರ್ಪು ನೀಡಿದ್ದರು. ಬೆಲೆಕೇರಿ ಅದಿರು ಅಕ್ರಮ ನಾಪತ್ತೆ ಪ್ರಕರಣ ಸಂಬಂಧ ಒಟ್ಟು 6 ಕೇಸ್ ದಾಖಲಾಗಿದ್ದವು. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದವನ್ನು ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ…
ಬೆಂಗಳೂರು: ಬೇಲೆಕೇರಿ ಅದಿರು ಅಕ್ರಮ ನಾಪತ್ತೆ ಪ್ರಕರಣ ಸಂಬಂಧ ಕಾರವಾರ ಶಾಸಕರಾಗಿದ್ದಂತ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿತ್ತು. ಈ ಬೆನ್ನಲ್ಲೇ ಅವರ ಶಾಸಕತ್ವವನ್ನು ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದೆ. ಇಂದು ಬೇಲೆಕೇರಿ ಬಂದರಿನಲ್ಲಿದ್ದಂ 11,312 ಮೆಟ್ರಿಕ್ ಟನ್ ಅದಿರು ಅಕ್ರಮ ನಾಪತ್ತೆ ಪ್ರಕರಣ ಸಂಬಂಧ ಶಾಸಕ ಸತೀಶ್ ಸೈಲ್ ಅವರಿಗೆ ಮೊದಲ ಕೇಸಲ್ಲಿ 5 ವರ್ಷ, 2ನೇ ಕೇಸಲ್ಲಿ 7 ವರ್ಷ ಕಠಿಣ ಶಿಕ್ಷೆ ಹಾಗೂ 9.6 ಕೋಟಿ ದಂಡವನ್ನು ವಿಧಿಸಿ ಆದೇಶಿಸಿದೆ. ಇದಲ್ಲದೇ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶಾಸಕ ಸತೀಶ್ ಸೈಲ್ ಅವರ ಶಾಸಕ ಸ್ಥಾನವನ್ನು ಶಿಕ್ಷೆಯ ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ರ್ದದುಗೊಳಿಸಿ ಆದೇಶಿಸಿದೆ. ಈ ಮೂಲಕ ಸತೀಸ್ ಸೈಲ್ ಜೈಲುಪಾಲಾಗುವ ಮೂಲಕ, ಶಾಸಕ ಸ್ಥಾನದಿಂದಲೂ ಅನರ್ಹಗೊಂಡಂತೆ ಆಗಿದೆ. https://kannadanewsnow.com/kannada/there-will-be-no-electricity-in-these-areas-on-october-28/ https://kannadanewsnow.com/kannada/now-applying-for-ration-card-in-karnataka-is-simpler-heres-how-to-apply-online/
ಬೆಂಗಳೂರು: ಬೇಲೆಕೇರಿ ಬಂದರಿನಲ್ಲಿದ್ದಂತ ಅದಿರು ನಾಪತ್ತೆ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂಬುದಾಗಿ ಕೋರ್ಟ್ ತೀರ್ಪು ನೀಡಿತ್ತು. ಇಂದು ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿದೆ. 2010ರ ಬೇಲೆಕೇರಿ ಬಂಧರಿನಲ್ಲಿನ ಅದಿರು ನಾಪತ್ತೆ ಪ್ರಕರಣ ಸಂಬಂಧದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂಬುದಾಗಿ ತನ್ನ ತೀರ್ಪಿನಲ್ಲಿ ಕೋರ್ಟ್ ಪ್ರಕಟಿಸಿತ್ತು. ಈ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದವನ್ನು ಆಲಿಸಿತ್ತು. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದ್ದು, ಬೇಲೆಕೇರಿಯಲ್ಲಿ ಸೀಜ್ ಆಗಿದ್ದಂತ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಸಂಬಂಧ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದವನ್ನು ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಅವರನ್ನು…
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂಡಾಯದ ಬಿಸಿ ಮುಟ್ಟಿತ್ತು. ಸಿಎಂ, ಡಿಸಿಎಂ ಮಧ್ಯ ಪ್ರವೇಶದೊಂದಿಗೆ ಇಂದು ಬಂಡಾಯ ಶಮನವಾಗಿದೆ. ಅಜ್ಜಂಪೀರ್ ಅವರ ಮನವೊಲಿಕೆಯಲ್ಲಿ ಯಶಸ್ವಿಯಾಗಿರುವಂತ ನಾಯಕರು, ಅಕ್ಟೋಬರ್.30ರಂದು ನಾಮಪತ್ರ ಹಿಂಪಡೆಯೋದಕ್ಕೂ ಒಪ್ಪಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಶಿಗ್ಗಾಂವಿಯ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಅವರು ನಾಳೆ ಬೆಳಿಗ್ಗೆ ಕಾರ್ಯಕರ್ತರೊಂದಿಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬರುವುದಾಗಿ ತಿಳಿಸಿದ್ದಾರೆ. ನಾನು ಅವರ ಮಾತಿಗೆ ಬದ್ಧವಾಗಿದ್ದೇನೆ. ಕ್ಷೇತ್ರದಲ್ಲಿ ಬಿಜೆಪಿ ಸೋಲಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ ಎಂದರು. ಇನ್ನೂ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ ಶಿಗ್ಗಾಂವಿಯ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಅವರು ತಮ್ಮ ನಾಮಪತ್ರವನ್ನು ಅಕ್ಟೋಬರ್.30, 2024ರಂದು ವಾಪಾಸ್ ಪಡೆಯಲಿದ್ದಾರೆ. ಅವರೊಂದಿಗೆ ಈಗಾಗಲೇ ಮಾತನಾಡಿದ್ದಾಗಿ ತಿಳಿಸಿದ್ದಾರೆ. ಒಟ್ಟಾರೆಯಾಗಿ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಟ್ಟಿದ್ದಂತ ಬಂಡಾಯದ ಬಿಸಿ ಶಮನವಾಗಿದೆ. ಅಜ್ಜಂಪೀರ್ ಅವರ ಬಂಡಾಯ ಶಮನ ಮಾಡಲಾಗಿದ್ದು, ಅಕ್ಟೋಬರ್.30ರಂದು ನಾಮಪತ್ರವನ್ನು ಹಿಂಪಡೆಯೋದು ಬಹುತೇಕ…
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ಇಲಾಖೆಯ ಮಾನ್ಯತಾ ಕಾರ್ಡ್, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. https://twitter.com/KarnatakaVarthe/status/1849811127192125687 ಅರ್ಜಿಯೊಂದಿಗೆ ಮಾಧ್ಯಮ ಮಾನ್ಯತಾ ಕಾರ್ಡ್ನ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದ ದೃಢೀಕೃತ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಹಾಗೂ ಅರ್ಜಿಯಲ್ಲಿ ನಮೂದಿಸಲಾಗಿರುವ ಎಲ್ಲಾ ಮಾಹಿತಿಗಳಿಗೆ ಅಧಿಕೃತ ಪೂರಕ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಲಗತ್ತಿಸಬೇಕು. ಜೊತೆಗೆ ಸರ್ಕಾರದ ವ್ಯಾಪ್ತಿಗೆ ಒಳಪಡುವ ನಿಗಮ,…
ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಮಳೆಯಿಂದಾಗಿ ಭಾರೀ ಅನಾಹುತವೇ ಉಂಟಾಗಿದೆ. ಈ ಹಾನಿಯ ಕುರಿತಂತೆ 3-4 ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸಿ 15 ದಿನಗಳಲ್ಲೇ ಪರಿಹಾರ ವಿತರಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲಿ ಸರಾಸರಿ 10.4 ಸೆಂ.ಮೀ. ವಾಡಿಕೆ ಮಳೆ ಆಗಬೇಕಿತ್ತು. ಆದರೆ 16.6 ಸೆಂ.ಮೀ. ಮಳೆ ಸುರಿದಿದೆ. ಅಂದಾಜು 56,993 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದೆ. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ಇನ್ನು 3 – 4 ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, 15 ದಿನಗಳಲ್ಲಿ ಪರಿಹಾರ ವಿತರಿಸುತ್ತೇವೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. https://twitter.com/KarnatakaVarthe/status/1850099584980386182 https://kannadanewsnow.com/kannada/here-are-the-key-highlights-of-the-rain-damage-relief-meeting-chaired-by-todays-cm-siddaramaiah/ https://kannadanewsnow.com/kannada/bengaluru-power-outages-in-these-areas-to-be-observed-tomorrow-on-october-27/













