Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ : ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಸತತ ಮೂರನೇ ಅವಧಿಗೆ ಅಧಿಕಾರದಲ್ಲಿದ್ದು, ದೇಶವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ನಡೆದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ ಅನ್ನುದ್ದೇಶಿಸಿ ಪ್ರಧಾನಿ ಮಾತನಾಡಿದರು. ನಮ್ಮ ಮೂರನೇ ಅವಧಿಯಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂಬುದು ಖಚಿತ. ಕಳೆದ 10 ವರ್ಷಗಳಲ್ಲಿ, ಸರ್ಕಾರದ ಪ್ರಯತ್ನಗಳಿಂದಾಗಿ ಸುಮಾರು 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಇಂದಿನ ಭಾರತವು 2047 ರ ವೇಳೆಗೆ ದೇಶವನ್ನು ‘ಅಭಿವೃದ್ಧಿ’ ಮಾಡುವ ಗುರಿಯೊಂದಿಗೆ ಮುಂದುವರಿಯುತ್ತಿದೆ. ಈ ಗುರಿಯನ್ನು ಸಾಧಿಸುವಲ್ಲಿ ಚಲನಶೀಲತೆ ವಲಯವು ದೊಡ್ಡ ಪಾತ್ರ ವಹಿಸುತ್ತದೆ” ಎಂದು ಪಿಎಂ ಮೋದಿ ಹೇಳಿದರು. ಇದು ಸರಿಯಾದ ಸಮಯ ಎಂದು ನಾನು ಯಾವಾಗಲೂ ಹೇಳಿದ್ದೇನೆ. ಈ ಮಂತ್ರವು ಚಲನಶೀಲತೆ ವಲಯಕ್ಕೆ ಚೆನ್ನಾಗಿ ಕುಳಿತುಕೊಳ್ಳುತ್ತದೆ. ಭಾರತವು ಚಂದ್ರನ ಮೇಲಿದೆ ಮತ್ತು ವೇಗವಾಗಿ ಚಲಿಸುತ್ತಿದೆ. ಚಲನಶೀಲತೆ ಕ್ಷೇತ್ರಕ್ಕೆ ಇದು ಸುವರ್ಣ…
ಹೊಸಪೇಟೆ: ರಾಜ್ಯಕ್ಕೆ ಬರಗಾಲ ಬಂದರೂ ಕೇಂದ್ರದಿಂದ ನಮ್ಮ ಪಾಲಿನ ನಯಾಪೈಸೆ ಪರಿಹಾರದ ಹಣ ಇದುವರೆಗೂ ಬಂದಿಲ್ಲ. ಆದರೆ ರಾಜ್ಯ ಸರ್ಕಾರ 30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ಪರಿಹಾರದ ಹಣವನ್ನು ಜಮಾ ಮಾಡಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಐತಿಹಾಸಿಕ ಹಂಪಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ನಮ್ಮ ಗ್ಯಾರಂಟಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳಿಂದ ಪ್ರತೀ ಕುಟುಂಬಕ್ಕೆ ಹಣ ಉಳಿತಾಯ ಆಗಿ ಬರಗಾಲದ ಸಂಕಷ್ಟದಿಂದ ಬಡ ಮತ್ತು ಮಧ್ಯಮ ವರ್ಗದವರನ್ನು ಪಾರು ಮಾಡಿದೆ ಎಂದರು. ನಮ್ಮ ಕಾರ್ಯಕ್ರಮಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವ ಮತ್ತು ಮಧ್ಯಮ ವರ್ಗದವರಿಗೆ ತಲುಪುತ್ತಿದೆ. ವಿಜಯನಗರ ಸಾಮ್ರಾಜ್ಯದ ಕಾಲದ ವೈಭವ ಪುನಃ ರಾಜ್ಯದಲ್ಲಿ ಮರುಕಳಿಸಬೇಕು ಎನ್ನುವುದು ನಮ್ಮ ಸರ್ಕಾರದ ಆಶಯ ಎಂದು ತಿಳಿಸಿದರು. ವಿಜಯನಗರ ಸಾಮ್ರಾಜ್ಯದ ವೈಭವವನ್ನು ಇತಿಹಾಸಕಾರ ಅಬ್ದುಲ್ ರಜಾಕ್ ಚಿತ್ರಿಸಿದ್ದಾರೆ, ಇತಿಹಾಸದ ಅರಿವು ಪ್ರತಿಯೊಬ್ಬರಿಗೂ ಅಗತ್ಯ. ಇತಿಹಾಸ ಗೊತ್ತಿಲ್ಲದವರು ಭವಿಷ್ಯ ರೂಪಿಸಲಾರರು. ಎಂದರು. ಕರ್ನಾಟಕ ದೇಶದಲ್ಲೇ ಅತಿ ಹೆಚ್ಚು ತೆರಿಗೆ…
ನವದೆಹಲಿ : ಪ್ರಸ್ತುತ ಮಾರುಕಟ್ಟೆಯಲ್ಲಿ ಅಕ್ಕಿಯ ಬೆಲೆ ಗಗನಕ್ಕೇರುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಸಾಮಾನ್ಯ ಜನರ ಜೇಬುಗಳು ರಂಧ್ರಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಸಿಹಿ ಸುದ್ದಿ ನೀಡಿದೆ. ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿಯ ಬೆಲೆ ಏರಿಕೆಗೆ ಅಂತ್ಯ ಹಾಡಲು ಮೋದಿ ಸರ್ಕಾರ ಸಜ್ಜಾಗಿದೆ. ಬಡವರು ಮತ್ತು ಸಾಮಾನ್ಯ ಜನರಿಗೆ ಅಗ್ಗದ ದರದಲ್ಲಿ ಅಕ್ಕಿಯನ್ನ ಒದಗಿಸಲು ಭಾರತವು ಬ್ರಾಂಡ್ ಹೆಸರಿನಲ್ಲಿ ಅಕ್ಕಿಯನ್ನ ತರುತ್ತಿದೆ. ಗುಣಮಟ್ಟದ ಅಕ್ಕಿಯನ್ನು 29 ರೂ.ಗೆ ನೀಡಲಾಗುವುದು. ಮುಂದಿನ ವಾರದಿಂದ ಭಾರತ್ ಅಕ್ಕಿ ಮಾರಾಟವನ್ನ ಸರ್ಕಾರ ಪ್ರಾರಂಭಿಸಲಿದೆ ಎಂದು ಆಹಾರ ಸಚಿವಾಲಯದ ಕಾರ್ಯದರ್ಶಿ ಸಂಜೀವ್ ಚೋಪ್ರಾ ಹೇಳಿದ್ದಾರೆ. ದೇಶದಲ್ಲಿ ಅಕ್ಕಿ ಬೆಲೆಯಲ್ಲಿ ತೀವ್ರ ಏರಿಕೆಯ ಹಿನ್ನೆಲೆಯಲ್ಲಿ ಭಾರತ್ ಅಕ್ಕಿಯ ಮಾರಾಟವು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಪರಿಹಾರವನ್ನ ನೀಡುತ್ತದೆ. ಕೆಲವು ಸಮಯದಿಂದ ಅಕ್ಕಿಯನ್ನ ಪ್ರತಿ ಕೆ.ಜಿ.ಗೆ 29 ರೂ.ಗೆ ಮಾರಾಟ ಮಾಡಲಾಗುತ್ತದೆ ಎಂಬ ವದಂತಿ ಇದೆ. ಆದ್ರೆ, ಅಕ್ಕಿಯನ್ನ ಎಲ್ಲಿ ಮಾರಾಟ ಮಾಡಲಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆಯ…
ಹೊಸಪೇಟೆ: ನಮ್ಮ ಗ್ಯಾರಂಟಿಗಳನ್ನು ಟೀಕಿಸುತ್ತಿದ್ದರು, ಈಗ ನಮ್ಮದೇ ಗ್ಯಾರಂಟಿಗಳನ್ನು ಕಾಪಿ ಮಾಡಿ ಅದಕ್ಕೆ, “ಮೋದಿ ಗ್ಯಾರಂಟಿ” ಎಂದು ಹೆಸರಿಟ್ಟಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೇಂದ್ರ ಸರ್ಕಾರವನ್ನು ವ್ಯಂಗ್ಯ ಮಾಡಿದ್ದಾರೆ. ಐತಿಹಾಸಿಕ ಹಂಪಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ ವಿಜಯನಗರ ಕಾಲದ ವೈಭವ ಮತ್ತು ಬಸವಾದಿ ಶರಣರ ಆಶಯಗಳು ಮತ್ತು ಧೀಮಂತ ನಾಯಕರು ಹಾಕಿಕೊಟ್ಟ ಮಾರ್ಗವೇ ಮಾದರಿ. ಆದ್ದರಿಂದ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದರು. ಬಸವಾದಿ ಶರಣರ ಆಶಯ, ಅಂಬೇಡ್ಕರ್ ಅವರ ಸಂವಿಧಾನದ ಆಶಯ ಎರಡೂ ಒಂದೇ ಆಗಿದೆ. ಸಹಿಷ್ಣುತೆ, ಸಹಬಾಳ್ವೆ, ಸಂಪತ್ತಿನ ಸಮಾನ ಹಂಚಿಕೆ, ಅವಕಾಶಗಳ ಸಮಾನ ಹಂಚಿಕೆ ಬಸವಾದಿ ಶರಣರು ಮತ್ತು ಅಂಬೇಡ್ಕರ್ ಅವರ ಆಶಯವಾಗಿದೆ. ಈಗ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕೆ ಅವಕಾಶ ಕೊಡಬಾರದು ಎಂದರು. ಪ್ರತಿಯೊಬ್ಬರೂ ತಮ್ಮ ಧರ್ಮವನ್ನು ಪ್ರೀತಿಸಬೇಕು. ಪರ ಧರ್ಮಗಳನ್ನು ಗೌರವಿಸಬೇಕು. ಧರ್ಮ – ಧರ್ಮದ ನಡುವೆ, ಜಾತಿ-ಜಾತಿಗಳ ನಡುವೆ ದ್ವೇಷ, ವೈಷಮ್ಯ ಹರಡುವವರನ್ನು ತಿರಸ್ಕರಿಸದೇ ಹೋದರೆ ನಾಡಿನ,…
ಬೆಂಗಳೂರು: ರಾಜ್ಯದಲ್ಲಿ ವಿವಾಹ ನೋಂದಣಿ ಮತ್ತಷ್ಟು ಸರಳೀಕರಣಗೊಳಿಸಲಾಗಿದೆ. ಸಬ್ ರಿಜಿಸ್ಟಾರ್ ಕಚೇರಿಗೆ ಅಲೆಯೋದಕ್ಕೆ ಬ್ರೇಕ್ ಹಾಕಿರೋ ರಾಜ್ಯ ಸರ್ಕಾರ, ಕಾವೇರಿ-2 ಆಪ್ ಮೂಲಕ ನೋಂದಣಿಗೆ ಅವಕಾಶ ನೀಡಲಾಗಿದೆ. ಫೆಬ್ರವರಿ.1ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಿವಾಹ ನೋಂದಣಿ ಮಸೂದೆಗೆ ತಿದ್ದುಪಡಿ ತರೋ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಹಿಂದೂ ವಿವಾಹಗಳ ನೋಂದಣಿ(ತಿದ್ದುಪಡಿ) ನಿಯಮಗಳು-2024ಅನ್ನು ಸಚಿವ ಸಂಪುಟ ಸಭೆ ಅನುಮೋದಿಸಲಾಗಿದೆ. ಈ ತಿದ್ದುಪಡಿ ನಿಯಮಗಳಂತೆ ವಿವಾಹ ನೋದಂಣಿ ಇನ್ನೂ ಸುಲಭವಾಗಿದ್ದು, ಕಾವೇರಿ-2 ತಂತ್ರಾಂಶದಲ್ಲಿ ಆನ್ ಲೈನ್ ಮೂಲಕ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಇದರಿಂದ ವಿವಾಹ ನೋಂದಣಿಗೆ ಗ್ರಾಮ ಪಂಚಾಯ್ತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿಯೂ ಅವಕಾಶ ಕಲ್ಪಿಸಲಾಗುತ್ತಿದೆ. ಒಟ್ಟಾರೆಯಾಗಿ ರಾಜ್ಯದಲ್ಲಿ ವಿವಾಹ ನೋಂದಣಿಗಾಗಿ ಸಬ್ ರಿಜಿಸ್ಟರ್ ಕಚೇರಿಗೆ ಅಲೆಯೋದು ಇನ್ಮುಂದೆ ತಪ್ಪಲಿದೆ. ಇನ್ನೂ ಏನಿದ್ದರೂ ಡಿಜಿಟಲ್ ಯುಗದಲ್ಲಿ ವಿವಾಹ ಆಗೋ ಎಲ್ಲರೂ ಮನೆಯಲ್ಲೇ ಕುಳಿತು ಆನ್ ಲೈನ್ ಮೂಲಕ ವಿವಾಹ ನೋಂದಣಿಯನ್ನು ಮಾಡಬಹುದಾಗಿದೆ.
ಚಿಕ್ಕಮಗಳೂರು: ನಾನು ಅಣ್ಣಾಮಲೈ ಕೊಪ್ಪಗೆ ಬಂದಾಗಲೇ ಅವರಿಗೆ ಖಾಕಿ ತೊರೆದು ಕಾವಿ ತೊಡ್ತಾರೆ ಅಂತ ಹೇಳಿದ್ದೆ. ಈಗ ಅವರು ತಮಿಳುನಾಡಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದಾಗಿ ವಿನಯ್ ಗುರೂಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ನಡೆದಂತ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ತಮಿಳುನಾಡಿನಲ್ಲಿ ಒಂದು ದಿನ ಅಣ್ಣಾಮಲೈ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದನ್ನು ನಾನು ನೋಡುತ್ತೇನೆ. ನೀವು ನೋಡುತ್ತೀರಿ. ಇದು ಭವಿಷ್ಯ ಎನ್ನುವುದಕ್ಕಿಂತ ಸಾಮಾನ್ಯ ಜ್ಞಾನ ಎಂದರು. ಕೊಪ್ಪದ ಬೊಮ್ಲಾಪುರಕ್ಕೆ ಈ ಹಿಂದೆ ಅಣ್ಣಾಮಲೈ ಬಂದಾಗ ನಾನು ಸೇಬು ಹಣ್ಣು ನೀಡಿ ನೀವು ಖಾಕಿ ತೊರೆದು ಖಾದಿ ಹಾಕ್ತೀರಿ ಅಂತ ಹೇಳಿದ್ದೆ. ಜ್ಞಾನ ಚಕ್ಷುವಿನಲ್ಲಿ ಯಾರೇ ಆದರೂ ಧ್ಯಾನ ಮಾಡಿದಾಗ ಅಂತವರಿಗೆ ಕಾಲದ ಒಂದಷ್ಟು ಘಟನೆಗಳನ್ನು ತಿಳಿದುಕೊಳ್ಳೋಕೆ ಆಗುತ್ತದೆ. ಅದು ನನಗಷ್ಟೇ ಅಲ್ಲ. ಸಣ್ಣ ಮಗುವಿಗೂ ಸಾಧ್ಯ ಎಂದರು.
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ತೆರವಿನ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡುವಂತೆ ಮನವಿ ಮಾಡಲಾಗಿದೆ. ಅಲ್ಲದೇ ಬಿಬಿಎಂಪಿ ನೀಡಿರುವಂತ ವಲಯವಾರು ವಾಟ್ಸ್ ಆಪ್ ಸಂಖ್ಯೆಗಳಿಗೆ ಜಸ್ಟ್ ಪೋಟೋ ಸಹಿತ ಸಂದೇಶ ಕಳುಹಿಸಿದ್ರೇ ಸಾಕು, ಅಧಿಕಾರಿಗಳು ಅಂತಹ ಮರದ ಕೊಂಬೆಗಳನ್ನು ತೆರವು ಮಾಡಲಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರೋ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು, ತನ್ನ ವ್ಯಾಪ್ತಿಯ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ಈಗಾಗಲೆ ತೆರವುಗೊಳಿಸಲಾಗುತ್ತಿದೆ ಎಂದಿದೆ. ಮುಂದುವರಿದು, ಸಾರ್ವಜನಿಕರುಗಳು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಈ ಕೆಳಕಂಡ ಅಧಿಕಾರಿಗಳಿಗಳಿಗೆ ದೂರವಾಣಿ ಮುಖೇನ(ವಾಟ್ಸ್ ಅಪ್ ಮುಖಾಂತರ ಜಿ.ಪಿ.ಎಸ್ ಸಹಿತ ಫೋಟೋ ಲಗತ್ತಿಸಿ) ವಿಳಾಸದೊಂದಿಗೆ ಮಾಹಿತಿ ನೀಡಲು ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಶ್ರೀ ಬಿ.ಜಿ.ಎಲ್ ಸ್ವಾಮಿ ರವರು ಸಾರ್ವಜನಿಕ ಪ್ರಕಟಣೆ ಮೂಲಕ ಕೋರಿದೆ. ಉಪ ವಿಭಾಗ ಹಾಗೂ…
ಚಿಕ್ಕಮಗಳೂರು: ಅಯೋಧ್ಯೆಯಲ್ಲಿ ಶ್ರೀರಾಮನ ಪಟ್ಟಾಭಿಷೇಕವಾದಂತೆ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಟ್ಟಾಭಿಷೇಕ ಸದ್ಯದಲ್ಲೇ ಆಗಲಿದೆ ಎಂಬುದಾಗಿ ವಿನಯ್ ಗುರೂಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಚಿಕ್ಕಮಗಳೂರು ನಗರ ಜಿಲ್ಲಾ ಕಾರಾಗೃಹದಲ್ಲಿ ನಡೆದಂತ ಪಾರ್ಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದ ನಂತ್ರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮನ ಪಟ್ಟಾಭಿಷೇಕ ನೋಡಿ ಆಗಿದೆ. ಸದ್ಯದಲ್ಲೇ ನರೇಂದ್ರ ಮೋದಿಯವರ ಪಟ್ಟಾಭಿಷೇಕವನ್ನು ನಾವು, ನೀವೆಲ್ಲರೂ ನೋಡುತ್ತೇವೆ ಎಂದರು. ಕಳೆದ ಬಾರಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ವಿನಯ್ ಗುರೂಜಿ ಮೋದಿಯವರಿಗೆ ರಾಮನ ಧನಸ್ಸನ್ನು ಉಡುಗೋರೆಯಾಗಿ ನೀಡಿದ್ದನ್ನು ನಾವು ನೆನಪು ಮಾಡಿಕೊಳ್ಳಬಹುದು.
ಚಿತ್ರದುರ್ಗ: ಮಾಜಿ ಸಚಿವ ದಿವಂಗತ ಕೆ.ಹೆಚ್ ರಂಗನಾಥ್ ಅವರ ಮೊಮ್ಮಗ ಹರ್ಷವರ್ಧನ್(33) ಶುಕ್ರವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅಕಾಲಿಕವಾಗಿ ನಿಧನರಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದಿಂದ ಆಯ್ಕೆಯಾಗಿ, ಸಚಿವರಾಗಿದ್ದಂತ ದಿ.ಕೆ.ಹೆಚ್ ರಂಗನಾಥ್ ಅವರ ಮೊಮ್ಮಗ ಹರ್ಷವರ್ಧನ್ ಶುಕ್ರವಾರ ನಿಧನರಾಗಿದ್ದಾರೆ. ಅವರ ತಂದೆ ಕೆಪಿಸಿಸಿ ಸದಸ್ಯ ವಿಜಯ್ ಕುಮಾರ್ ಆಗಿದ್ದಾರೆ. ಇಂದು ಹರ್ಷವರ್ಧನ್ ಅವರ ಅಂತ್ಯಕ್ರಿಯೆಯನ್ನು ಹಿರಿಯೂರು ತಾಲೂಕಿನ ಹೊಸಯಳನಾಡು ಸಮೀಪದ ಕಸವನಹಳ್ಳಿ ಗ್ರಾಮದಲ್ಲಿರುವ ಕೆ.ಹೆಚ್ ರಂಗನಾಥ್ ಅವರ ಸಮಾಧಿಯ ಬಳಿಯಲ್ಲಿ ನೆರವೇರಿಸಲಾಗುತ್ತದೆ ಎಂಬುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ಇನ್ನೂ ಮಾಜಿ ಸಚಿವ ಕೆ.ಹೆಚ್ ರಂಗನಾಥ್ ಅವರ ಮೊಮ್ಮಗ ಹರ್ಷವರ್ಧನ್ ನಿಧಕ್ಕೆ ಮಾಜಿ ಸಚಿವ ಹೆಚ್.ಆಂಜನೇಯ ತೀವ್ರ ಸಂತಾಪ ಸೂಚಿಸಿದ್ದಾರೆ.
ಹೊಸಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐತಿಹಾಸಿಕ ಹಂಪಿ ಉತ್ಸವವನ್ನು ವೈಭವದ ಕಲಾತ್ಮಕ ವೇದಿಕೆಯಲ್ಲಿ ನಗಾರಿ ಬಾರಿಸುವುದರ ಮೂಲಕ ಉದ್ಘಾಟಿಸಿದರು. ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್, ಕ್ರೀಡಾ ಮತ್ತು ಯುವಜನ ಸಭಲೀಕರಣ ಸಚಿವ ನಾಗೇಂದ್ರ, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಕೆಎಂಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ, ಶಾಸಕರುಗಳಾದ ಈ.ತುಕಾರಾಮ್, ಕಂಪ್ಲಿ ಗಣೇಶ್, ಲತಾ ಎಂಪಿ ಪ್ರಕಾಶ್, ರಾಘವೇಂದ್ರ ಹಿಟ್ನಾಳ್ , ನಾರಾ ಭರತ್ ರೆಡ್ಡಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು. ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ ಹೊಸಪೇಟೆ : ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಶುಕ್ರವಾರ ಹೊಸಪೇಟೆ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ ಮಾಡಿದರು. ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಮುಖ್ಯಮಂತ್ರಿ…