Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜುಲೈ, 13 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಮತ್ತಿತರ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್…
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರಿಗೆ ‘ದಹಿ-ಚೀನಿ’ (ಸಿಹಿ ಮೊಸರು) ತಿನ್ನಿಸಿದರು. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಅವರನ್ನು ಸಂಸದೀಯ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ ನಂತರ ಕೇಂದ್ರದಲ್ಲಿ ಸರ್ಕಾರ ರಚಿಸಲು ರಾಷ್ಟ್ರಪತಿಗಳು ಮೋದಿಯವರನ್ನು ಆಹ್ವಾನಿಸಿದರು. ಜೂನ್ 9 ರಂದು (ಭಾನುವಾರ) ಸಂಜೆ 7:15 ಕ್ಕೆ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಧ್ಯಕ್ಷ ಮುರ್ಮು ಅವರನ್ನು ಭೇಟಿಯಾದ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮೋದಿ, ಅವರನ್ನು ಪ್ರಧಾನಿಯಾಗಿ ನೇಮಿಸುವ ಪತ್ರವನ್ನು ಅವರಿಗೆ ನೀಡಿದ್ದೇನೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸೂಕ್ತ ಸಮಯದ ವಿವರಗಳನ್ನು ಕೋರಿದ್ದೇನೆ ಎಂದು ಹೇಳಿದರು. ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸುವ ಸಚಿವರ ಪಟ್ಟಿಯನ್ನು ಸಹ ಅವರು ಕೇಳಿದರು. https://twitter.com/rashtrapatibhvn/status/1799082942163255783 ಇಂದು ಬೆಳಿಗ್ಗೆ ಎನ್ಡಿಎ ಸಭೆ ನಡೆಯಿತು, ಅಲ್ಲಿ ಮೈತ್ರಿಕೂಟದ ಸ್ನೇಹಿತರು ನನ್ನನ್ನು ಈ ಜವಾಬ್ದಾರಿಗೆ ಆಯ್ಕೆ ಮಾಡಿದ್ದಾರೆ. ಎಲ್ಲಾ ಎನ್ಡಿಎ ಮಿತ್ರಪಕ್ಷಗಳು ಈ ಬಗ್ಗೆ…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಸಂಬಂಧ ಸಚಿವ ಸ್ಥಾನಕ್ಕೆ ಬಿ ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದರು. ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ, ತಮ್ಮ ರಾಜೀನಾಮೆ ಪತ್ರವನ್ನು ನಿನ್ನೆ ಸಲ್ಲಿಸಿದ್ದರು. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಚಿವ ಬಿ ನಾಗೇಂದ್ರ ರಾಜೀನಾಮೆ ಅಂಗೀಕರಿಸಿ, ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ ಸಂಪುಟದ ಮೊದಲ ವಿಕೆಟ್ ಪತನಗೊಂಡಿತ್ತು. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿದ್ದಂತ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ಒಂದೇ ಸಾಲಿನಲ್ಲಿ ನನ್ನ ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರೋದಾಗಿ ಉಲ್ಲೇಖಿಸಿ, ಸಲ್ಲಿಸಿದ್ದರು. ಬಿ.ನಾಗೇಂದ್ರ ಸಲ್ಲಿಸಿದ್ದಂತ ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಳುಹಿಸಿಕೊಟ್ಟಿದ್ದರು. ಇಂದು ಬಿ.ನಾಗೇಂದ್ರ ಅವರು ಸಲ್ಲಿಸಿದ್ದಂತ ಸಚಿವ ಸ್ಥಾನದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿ, ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಿದ್ದಾರೆ. ಈ ಮೂಲಕ ಬಿ.ನಾಗೇಂದ್ರ ಸಚಿವ…
ಅಮರಾವತಿ: ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಜೂನ್ 12 ರಂದು ಮೂರನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ಶುಕ್ರವಾರ ತಿಳಿಸಿವೆ. ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್ ನಲ್ಲಿ ನಾಯ್ಡು ಪ್ರಮಾಣವಚನ ಸ್ವೀಕರಿಸಲಿದ್ದಾರೆ. “ಜೂನ್ 12 ರಂದು ಬೆಳಿಗ್ಗೆ 11:27 ಕ್ಕೆ ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್ನಲ್ಲಿ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ” ಎಂದು ಮೂಲಗಳು ಪಿಟಿಐಗೆ ತಿಳಿಸಿವೆ. ನಾಯ್ಡು ಅವರು ಸುಮಾರು 30 ವರ್ಷಗಳ ಹಿಂದೆ 1995 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದರು ಮತ್ತು 2004 ರವರೆಗೆ ಆಡಳಿತ ನಡೆಸಿದರು. ಒಂದು ದಶಕದ ನಂತರ ಮತ್ತು ಅಖಂಡ ರಾಜ್ಯವನ್ನು ತೆಲಂಗಾಣ ಮತ್ತು ಉಳಿದ ಆಂಧ್ರಪ್ರದೇಶವಾಗಿ ವಿಭಜಿಸಿದ ನಂತರ, ನಾಯ್ಡು 2014 ರಲ್ಲಿ ಹೊಸದಾಗಿ ರಚಿಸಲಾದ ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದರು. ಆದಾಗ್ಯೂ, ವೈಎಸ್ಆರ್ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ…
ದಾವಣಗೆರೆ: ಪ್ರಸಕ್ತ ಸಾಲಿಗೆ ಮೈಸೂರಿನ ರಂಗಾಯಣದ ಭಾರತೀಯ ರಂಗಶಿಕ್ಷಣ ತರಬೇತಿಗೆ ಡಿಪೆÇ್ಲೀಮಾ ಕೋರ್ಸ್ನ್ನು ನಡೆಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಂಗ ತರಬೇತಿ ಕೋರ್ಸ್ ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಮತ್ತು 28 ವರ್ಷದೊಳಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಮಾಹೆಯಾನ ರೂ.5,000/-ಗಳ ವಿದ್ಯಾರ್ಥಿ ವೇತನ ಪಾವತಿಸಲಾಗುವುದು. ಭಾರತೀಯ ರಂಗಶಿಕ್ಷಣ ಕೇಂದ್ರಕ್ಕೆ ಸೇರಬಯಸುವ ವಿದ್ಯಾರ್ಥಿಗಳು ಜೂನ್ 5 ರಿಂದ ರಂಗಾಯಣದ ವೆಬ್ ಸೈಟ್ http://rangayanamysore karnataka gov inನಲ್ಲಿ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿ ಅವಧಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅರ್ಜಿ ಶುಲ್ಕ ಸಾಮಾನ್ಯ ವರ್ಗ ರೂ.230/-, ಪ.ಜಾ. ಪ.ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 180/-ಗಳು…
ನವದೆಹಲಿ: ಇಂದು ಮೋದಿಯವರು ಮತ್ತೊಮ್ಮೆ ಸರ್ಕಾರ ರಚಿಸೋದಕ್ಕೆ ರಾಷ್ಟ್ರಪತಿ ಭೇಟಿಯಾಗಿ ಹಕ್ಕು ಮಂಡನೆ ಮಾಡಿದ್ದರು. ಈ ಬೆನ್ನಲ್ಲೇ ಮೋದಿ ಪ್ರಮಾಣವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಜೂನ್.9ರಂದು ಸಂಜೆ 7.15ಕ್ಕೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕುರಿತಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದು, ಜೂನ್ 09, 2024 ರಂದು ಸಂಜೆ 7.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಮತ್ತು ಕೇಂದ್ರ ಸಚಿವ ಸಂಪುಟದ ಇತರ ಸದಸ್ಯರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದೇನೆ ಎಂದು ತಿಳಿಸಿದ್ದಾರೆ. https://twitter.com/rashtrapatibhvn/status/1799096180137414662 https://kannadanewsnow.com/kannada/chandan-shetty-and-nivedita-granted-divorce-4-years-of-marriage-ends/ https://kannadanewsnow.com/kannada/tumakuru-two-girl-students-fall-ill-after-fire-breaks-out-due-to-short-circuit/
ನವದೆಹಲಿ: 3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಜೂನ್.9ರಂದು ಸಂಜೆ 7.30ಕ್ಕೆ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಗ್ಗೆ ರಾಷ್ಟ್ರಪತಿ ಭವನದ ಕಾರ್ಯಾಲಯದಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಲಾಗಿದೆ. ಜೂನ್.9ರಂದು ಸಂಜೆ 7.15ಕ್ಕೆ ನರೇಂದ್ರ ಮೋದಿ ಪದಗ್ರಹಣ ಮಾಡಲಿದ್ದಾರೆ. 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಅಂತ ತಿಳಿಸಿದೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ಪೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಅಂತ ಹೇಳಿದೆ. https://kannadanewsnow.com/kannada/rashtriya-lok-adalat-to-be-held-across-the-state-on-july-13-all-these-cases-will-get-immediate-relief/
ಧಾರವಾಡ: ಪ್ರಸಕ್ತ ಸಾಲಿನಲ್ಲಿ ನಿಗದಿ ಗ್ರಾಮದಲ್ಲಿರುವ ಸರಕಾರಿ ಕೈಗರಿಕಾ ತರಬೇತಿ ಸಂಸ್ಥೆಯಿಂದ ಎರಡು ವರ್ಷದ ಫಿಟ್ಟರ್ ಹಾಗೂ ಎಲೆಕ್ಟ್ರಿಷಿಯನ್ ವೃತ್ತಿಪರ ಕೋರ್ಸಗಳಲ್ಲಿ ತರಬೇತಿ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್ಸೈಟ್ www.cite.Karnataka.gov.in ನಲ್ಲಿ ಜೂನ್ 09, 2024 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಿರಿಯ ತರಬೇತಿ ಅಧಿಕಾರಿ ಆನಂದ ನಾಯಕವಾಡಿ (8217627744) ರಾಚಯ್ಯ ಧಾಬಿಮಠ (7760520427) ಅವರನ್ನು ಸಂಪರ್ಕಿಸಬಹುದು ಎಂದು ನಿಗದಿಯ ಸರ್ಕಾರಿ ಕೈಗರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/department-of-social-welfare-invites-applications-for-various-skill-development-trainings/ https://kannadanewsnow.com/kannada/chandan-shetty-and-nivedita-granted-divorce-4-years-of-marriage-ends/
ಧಾರವಾಡ: ಸಮಾಜ ಕಲ್ಯಾಣ ಇಲಾಖೆಯು 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರೆಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಜಿಲ್ಲಾ ಮಟ್ಟದಲ್ಲಿ ಬೆಂಗಳೂರಿನ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಹಾಗೂ ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೊಗದಲ್ಲಿ 60 ದಿನಗಳ ವಿವಿಧ ಕೌಶಲ್ಯಾಭಿವೃದ್ಧಿ (ತಾಂತ್ರಿಕ ನೈಪುಣ್ಯತೆ) ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು, ನಿಗದಿತ ನಮೂನೆ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಧಾರವಾಡ ಅಥವಾ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ತಾಲ್ಲೂಕಾ ಕಾರ್ಯಾಲಯ ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂನ್ 30, 2024 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447201 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/applications-invited-for-direct-recruitment-of-primary-and-secondary-school-teachers/ https://kannadanewsnow.com/kannada/chandan-shetty-and-nivedita-granted-divorce-4-years-of-marriage-ends/
ಧಾರವಾಡ : ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2024-25 ನೇ ಸಾಲಿಗೆ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ಖಾಲಿ ಇರುವ ಒಟ್ಟು 16 ಹುದ್ದೆಗಳಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಇಲಾಖೆಯಿಂದ ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳುವ ಕುರಿತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಡಿಇಡಿ, ಬಿಇಡಿ ಪ್ರಮಾಣ ಪತ್ರ, ಆರ್ಸಿಐ ಪ್ರಮಾಣ ಪತ್ರ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಜೂನ್ 12, 2024 ರಂದು ಸಂಜೆ 5.00 ಗಂಟೆಯೊಳಗಾಗಿ ಸಲ್ಲಿಸಬೇಕು ಈ ಹುದ್ದೆಗಳಲ್ಲಿ ನೇರಗುತ್ತಿಗೆಯ ಸಮನ್ವಯ ಶಿಕ್ಷಕರು ಮಾರ್ಚ್ 31, 2025 ರ ವರೆಗೂ ಕರ್ತವ್ಯ ನಿರ್ವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0836270554 ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ, ಕಚೇರಿಯನ್ನು ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/chandan-shetty-and-nivedita-granted-divorce-4-years-of-marriage-ends/ https://kannadanewsnow.com/kannada/president-draupadi-murmu-appoints-narendra-modi-as-prime-minister-of-india/












