Author: kannadanewsnow09

ರಾಮನಗರ: ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಚುನಾವಣಾ ಶಾಖಾಧಿಕಾರಿಯೊಬ್ಬರು ಶವವಾಗಿ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾಧಿಕಾರಿಯಾಗಿ ಸುರೇಶ್ ಎಂಬುವರು ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಇಂದು ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಕಚೇರಿಯಲ್ಲೇ ಶವವಾಗಿ ಪತ್ತೆಯಾಗಿದ್ದಾರೆ. ಚುನಾವಣಾ ಶಾಖಾಧಿಕಾರಿ ಸುರೇಶ್ ಅವರು ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರೋದು ಹಲವು ಅನುಮಾನಗಳಿಗೂ ಕಾರಣವಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಕನಕಪುರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/breaking-sensex-nifty-hit-record-highs-investors-gain-rs-3-32-lakh-crore/ https://kannadanewsnow.com/kannada/fir-against-ed-officials-hc-stays-police-probe/

Read More

ನವದೆಹಲಿ: ದಕ್ಷಿಣ ಭಾರತದ ಹಣವನ್ನು ಉತ್ತರ ಭಾರತಕ್ಕೆ ನೀಡುತ್ತಿದ್ದಾರೆ. ಇದರಿಂದ ನಮಗೆ ಅನ್ಯಾಯ ಆಗ್ತಾ ಇದೆ. ಹೀಗಾಗಿ ನಮಗೆ ಪ್ರತ್ಯೇಕ ರಾಷ್ಟ್ರದ ಕೂಗು ಅವಶ್ಯಕತೆ ಇದೆ ಎಂಬ ಸಂಸದ ಡಿ.ಕೆ ಸುರೇಶ್ ಹೇಳಿಕೆ ಸಂಸತ್ತಿನ ಉಭಯ ಸದನಗಳಲ್ಲಿ ಇಂದು ಪ್ರತಿಧ್ವನಿಸಿತು. ಸಂಸದ ಡಿ.ಕೆ ಸುರೇಶ್ ಅವರು ನೀಡಿದಂತ ಪ್ರತ್ಯೇಕ ರಾಷ್ಟ್ರದ ಹೇಳಿಕೆ ಇಂದು ಲೋಕಸಭೆ, ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿತು. ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿದಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಸಂಸದ ಡಿ.ಕೆ ಸುರೇಶ್ ಕ್ಷಮೆಯಾಚಿಸುವಂತೆ ಆಗ್ರಹಿಸಿದರು. ಇದಷ್ಟೇ ಅಲ್ಲದೇ ಸಂಸದ ಡಿ.ಕೆ ಸುರೇಶ್ ಅವರ ಹೇಳಿಕೆಯ ವಿಚಾರವನ್ನು ನೈತಿಕ ಸಮಿತಿಗೆ ಒಪ್ಪಿಸಬೇಕು ಎಂಬುದಾಗಿಯೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಒತ್ತಾಯಿಸಿದರು. ರಾಜ್ಯ ಸಭೆಯಲ್ಲೂ ಇದೇ ವಿಷಯ ಪ್ರಸ್ತಾಪಿಸಿದಾಗ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶ ಒಡೆಯುವ ಮಾತನ್ನು ನಾನು ಕೂಡ ಒಪ್ಪೋದಿಲ್ಲ ಎಂಬುದಾಗಿ ತಿಳಿಸಿದರು. https://kannadanewsnow.com/kannada/fir-against-ed-officials-hc-stays-police-probe/ https://kannadanewsnow.com/kannada/breaking-sensex-nifty-hit-record-highs-investors-gain-rs-3-32-lakh-crore/

Read More

ಚೆನ್ನೈ: ಇಂದು ಹೊಸ ರಾಜಕೀಯ ಪಕ್ಷವನ್ನು ನಟ ದಳಪತಿ ವಿಜಯ್ ಘೋಷಣೆ ಮಾಡಿದ್ದರು. ಈ ಬೆನ್ನಲ್ಲೇ ರಾಜಕೀಯದಲ್ಲಿ ಸಕ್ರೀಯವಾಗೋ ನಿಟ್ಟಿನಲ್ಲಿ ಇನ್ಮುದಂ ಚಲನಚಿತ್ರಗಳಲ್ಲಿ ನಡಿಸೋದಿಲ್ಲ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ನಟನೆಗೆ ದಳಪತಿ ವಿಜಯ್ ಗುಡ್ ಬೈ ಹೇಳಿದ್ದಾರೆ. ಈ ಕುರಿತಂತೆ ಹೊಸ ಪಕ್ಷ ಘೋಷಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಎರಡು ಚಿತ್ರಗಳನ್ನು ಈಗ ಒಪ್ಪಿಕೊಂಡಿದ್ದೇನೆ. ಅವುಗಳ ಶೂಟಿಂಗ್ ನಡೆಯುತ್ತಿದೆ. ಅವುಗಳಲ್ಲಿ ಭಾಗಿಯಾಗೋ ಕಾರಣ, ಸ್ವಲ್ಪ ದಿನ ರಾಜಕೀಯದಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳೋದಕ್ಕೆ ಆಗುತ್ತಿಲ್ಲ ಎಂದರು. ಸದ್ಯ ಎರಡು ಚಿತ್ರಗಳ ಶೂಟಿಂಗ್ ನಡೆಯುತ್ತಿವೆ. ಅವುಗಳು ಮುಕ್ತಾಯಗೊಂಡ ನಂತ್ರ ನಾನು ಚಿತ್ರರಂಗದಲ್ಲಿ ನಟನೆ ಮಾಡೋದಿಲ್ಲ. ನನ್ನ ಹೊಸ ಪಕ್ಷ ತಮಿಳುಗ ವೆಟ್ರಿ ಕಳಗಂ ಪಕ್ಷದಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳುತ್ತೇನೆ ಎಂದರು. ನಮ್ಮ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಯಾವ ಪಕ್ಷಕ್ಕೂ ಬೆಂಬಲ ನೀಡೋದಿಲ್ಲ. ಮುಂಬರುವಂತ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿಯೋದಾಗಿ ತಿಳಿಸಿದರು.

Read More

ಬೆಂಗಳೂರು: ವಿಚಾರಣೆಯ ವೇಳೆಯಲ್ಲಿ ಇಡಿ ಅಧಿಕಾರಿಗಳು ತಮ್ಮನ್ನು ಲಾಟಿಯಿಂದ ಹೊಡೆದಿದ್ದಾರೆ ಎಂಬುದಾಗಿ ಆರೋಪಿಸಿ ಕೋಮುಲ್ ನಿರ್ದೇಶಕ ವೈ.ಬಿ ಅಶ್ವತ್ಥ ನಾರಾಯಣ ನೀಡಿದಂತ ದೂರಿನ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಕೋಮುಲ್ ನಿರ್ದೇಶಕರಾಗಿದ್ದಂತ ವೈ.ಬಿ ಅಶ್ವತ್ಥ ನಾರಾಯಣ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಈ ವೇಳೆಯಲ್ಲಿ ಪ್ಲಾಸ್ಟಿಕ್ ಪೈಪ್ ನಿಂದ ತಮಗೆ ಹೊಡೆಯಲಾಗಿದೆ ಎಂಬುದಾಗಿ ಆರೋಪಿಸಿ ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ಇಡಿ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದರು. ಅವರು ನೀಡಿದಂತ ದೂರಿನ ಆಧಾರದ ಮೇಲೆ ಇಡಿಯ ಉಪ ನಿರ್ದೇಶ ಮನೋಜ್ ಮಿಟ್ಟಲ್ ಹಾಗೂ ಸಹಾಯಕ ನಿರ್ದೇಶ ಅಜಯ್ ಕುಮಾರ್ ವೈದ್ಯರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಇಡಿ ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಪೀಠದ ಮುಂದೆ ದೂರು ದಾರ ವೈ.ಬಿ ಅಶ್ವತ್ಥ ನಾರಾಯಣ್…

Read More

ವಿಜಯಪುರ: ನಾನು ಬಸವಾದಿ ಶರಣರ ಅನುಯಾಯಿ. ಮೌಡ್ಯ, ಕಂದಾಚಾರ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನ ಕ್ರಾಂತಿ ಆರಂಭಿಸಿದ್ದರಿಂದ ನಾನು ಅವರ ಅನುಯಾಯಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಸರ್ಕಾರದ ಐದು ಐತಿಹಾಸಿಕ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದರು. ದುಡಿಯುವವರು ಯಾರೋ, ದುಡಿದು ತಿನ್ನುವವರು ಇನ್ಯಾರೋ ಎನ್ನುವ ಪರಿಸ್ಥಿತಿ ಸಮಾಜದಲ್ಲಿತ್ತು. ಈ ತಾರತಮ್ಯ ಮತ್ತು ಮೇಲು-ಕೀಳು ಹೋಗಲಾಡಿಸಲು ಬಸವಣ್ಣರ ನೇತೃತ್ವದಲ್ಲಿ ವಚನ ಕ್ರಾಂತಿ ಶುರು ಆಯಿತು. ಈ ಕಾರಣಕ್ಕೆ ನಾನು ಬಸವಾದಿ ಶರಣರ ಅನುಯಾಯಿ. ಇವರು ಕರ್ಮ ಸಿದ್ಧಾಂತವನ್ನು ಸಂಪೂರ್ಣ ತಿರಸ್ಕರಿಸಿತು ಎಂದು ವಿವರಿಸಿದರು. ಆದರೆ, ಕ್ರಾಂತಿಯ ಪ್ರಭಾವದಲ್ಲಿ ಸಮಾಜ ಪೂರ್ಣ ಬದಲಾಗುವ ಮೊದಲೇ ವಚನ ಕ್ರಾಂತಿಗೆ ಅಡ್ಡಗಾಲು ಹಾಕಿದರು. ಆದ್ದರಿಂದ ಇನ್ನೂ ಬಸವಣ್ಣನವರ ಆಶಯದ “ಇವ ನಮ್ಮವ ಇವ ನಮ್ಮವ” ಎನ್ನುವ ಆಶಯ ಈಡೇರದೆ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ನಾಡಿನ…

Read More

ರಾಮನಗರ/ಬೆಂಗಳೂರು: ಭಾರತ ಒಂದಾಗಿರಬೇಕು ಎಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ‌‌‌.ಸುರೇಶ್ ಅವರು ನೀಡಿರುವ ಹೇಳಿಕೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು. ಇಲ್ಲಿ ಕಲ್ಲು ಹೊಡೆಕೊಂಡು ಲೂಟಿ ಮಾಡಿಕೊಂಡು ಇದ್ದೋರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ. ಇಲ್ಲಿ ಬಡ ಜನರನ್ನು ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ. ಅಂತವರನ್ನು ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದರೆ ಕಟ್ಟುತ್ತಾರೆಯೇ? ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಎಂದು ಅವರು ಟಾಂಗ್ ನೀಡಿದರು. ಕೇಂದ್ರ ಸರ್ಕಾರದ ಮುಂದೆ ನಮ್ಮ ಬೇಡಿಕೆಗಳನ್ನು ಸಂಘರ್ಷದಿಂದ ಈಡೇರಿಸಿಕೊಳ್ಳಲು ಸಾಧ್ಯವಿಲ್ಲ. ವಾಸ್ತವವನ್ನು ಅವರಿಗೆ ಮನವರಿಕೆ ಮಾಡಬೇಕು. ಅವರನ್ನು ಒಪ್ಪಿಸಿ, ಮನವರಿಕೆ ಮಾಡಿಕೊಟ್ಟು ಹಣ ಪಡೆಯಬೇಕು‌. ಅದನ್ನು ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ…

Read More

ರಾಯಚೂರು: ಜಿಲ್ಲೆಯಲ್ಲಿ ಅಪರಿಚಿತರಿಂದ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರವನ್ನು ಹಾಕಲಾಗಿತ್ತು. ಇದರಿಂದ ಆಕ್ರೋಶಗೊಂಡು ಪ್ರತಿಭಟನೆಯನ್ನು ಸ್ಥಳೀಯರು ನಡೆಸಿದ್ದರು. ಈ ಘಟನೆ ಸಂಬಂಧ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತುಗೊಳಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆ ರಾಯಚೂರಿನಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪರಿಚಿತ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿದ್ದರು. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಈ ಘಟನೆ ವರದಿಯಾಗಿದ್ದು, ಉದ್ವಿಗ್ನ ಪರಿಸ್ಥಿತಿ ಮತ್ತು ಮುಸ್ಲಿಂ ಸಮುದಾಯದಿಂದ ಭಾರಿ ಪ್ರತಿಭಟನೆಗೆ ಕಾರಣವಾಗಿತ್ತು. ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತದ ಬಳಿ ಈ ಘಟನೆ ನಡೆದ್ದರು. ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ರಸ್ತೆ ಸಂಚಾರ ತಡೆ ನಡೆಸಲಾಗಿತ್ತು. ಮುಸ್ಲಿಂ ಸಮುದಾಯವು ರಸ್ತೆಯ ಮಧ್ಯದಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಈ ಘಟನೆ ಸಂಬಂಧ ಅಂದು ರಾತ್ರಿ ಪಾಳಿಯಲ್ಲಿದ್ದಂತ ಸಿರಿವಾರ ಠಾಣೆಯ ಇಬ್ಬರು ಪೇದೆಗಳಾದಂತ ಇಸ್ಮಾಯಿಲ್ ಹಾಗೂ ರೇವಣ್ಣ ಸಿದ್ಧಪ್ಪ ಕರ್ತವ್ಯ ಲೋಪ ಎಸಗಿರೋದಾಗಿ ತಿಳಿದು ಬಂದಿತ್ತು. ಈ ಘಟನೆಯ ಹಿನ್ನಲೆಯಲ್ಲಿ ಇಬ್ಬರು…

Read More

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಹೀನಾಯವಾಗಿ ಸೋಲು ಕಂಡಿತು. ಹೀಗಿರುವಾಗ, ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಲು ಅವರಿಗೆ ಯಾವ ನೈತಿಕತೆ ಇದೆ ಎಂದು ಭಾರಿ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಶುಕ್ರವಾರ ತಿರುಗೇಟು ನೀಡಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ 135 ಸೀಟುಗಳು ಬಂದಿರುವುದರಲ್ಲಿ ಬೊಮ್ಮಾಯಿ ಅವರ ಕೊಡುಗೆಯೂ ಇದೆ ಎಂದರು. ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದಾಗ ಬುದ್ಧಿವಂತರೊಬ್ಬರು ಆ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆಂದು ನಾವೂ ಖುಷಿಪಟ್ಟಿದ್ದೆವು. ಆದರೆ, ಅದನ್ನು ಉಳಿಸಿಕೊಳ್ಳಲು ಅವರಿಗೆ ಆಗಲಿಲ್ಲ ಎಂದು ಟೀಕಾಸ್ತ್ರ ಪ್ರಯೋಗಿಸಿದರು. ಪ್ರತ್ಯೇಕ ರಾಷ್ಟ್ರ ದ ಬಗ್ಗೆ ಸಂಸದ ಡಿ.ಕೆ ಸುರೇಶ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ದಕ್ಷಿಣದ ರಾಜ್ಯಗಳಿಗೆ ಆದಾಯಕ್ಕೆ ತಕ್ಕ ಪ್ರತಿಫಲ ಸಿಗಲಿ ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಅವರು ಹಾಗೆ ಹೇಳಿದ್ದಾರೆ; ಅದಕ್ಕೆ ಹೆಚ್ಚಿನ ಅರ್ಥಗಳನ್ನು ಕಲ್ಪಿಸುವ ಅಗತ್ಯವಿಲ್ಲ ಎಂದು ಸಮರ್ಥಿಸಿಕೊಂಡರು. ನಿನ್ನೆ ಮುಖ್ಯಮಂತ್ರಿ ಅವರು…

Read More

ಬೆಂಗಳೂರು: ಚೆನ್ನೈ ಸೆಂಟ್ರಲ್ ಹಾಗೂ ಮೈಸೂರು ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು, ಸಾಪ್ತಾಹಿಕವಾಗಿ ಸಂಚರಿಸುತ್ತಿತ್ತು. ಹೀಗೆ ಸಂಚರಿಸುತ್ತಿದ್ದಂತ ವಿಶೇಷ ರೈಲನ್ನು ಮುಂದುವರೆಸಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಮತ್ತು ಮೈಸೂರು ನಿಲ್ದಾಣಗಳ ನಡುವೆ ಸಂಚರಿಸುವ ಸಾಪ್ತಾಹಿಕ ವಂದೇ ಭಾರತ್ ವಿಶೇಷ ರೈಲುಗಳ ಸೇವೆಯನ್ನು ಮುಂದುವರಿಸಲು, ಅಸ್ತಿತ್ವದಲ್ಲಿರುವ ಟಿಕೆಟ್ ದರ್, ಬೋಗಿಗಳ ಸಂಯೋಜನೆ, ನಿಲುಗಡೆಗಳು, ವೇಳಾಪಟ್ಟಿ ಮತ್ತು ಸೇವೆಗಳ ದಿನಗಳೊಂದಿಗೆ ಈ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ಮಾರ್ಚ್ 27, 2024 ರವರೆಗೆ ವಿಸ್ತರಿಸಲಾಗುತ್ತಿದೆ ಎಂದು ದಕ್ಷಿಣ ರೈಲ್ವೆ ವಲಯವು ಸೂಚಿಸಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ: 1. ರೈಲು ಸಂಖ್ಯೆ 06037 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು ವಂದೇ ಭಾರತ್ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಫೆಬ್ರುವರಿ 7 ರಿಂದ ಮಾರ್ಚ್ 27, 2024 ರವರೆಗೆ ಪ್ರತಿ ಬುಧವಾರ (8 ಟ್ರಿಪ್) ಸಂಚರಿಸಲಿದೆ. ಈ ಮೊದಲು ಜನವರಿ 31, 2024…

Read More

ಬೆಂಗಳೂರು: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ವಿರುದ್ಧ ದೂರು ನೀಡಿತು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನರು ಅವರಿಗೆ ಮತ ನೀಡದಿದ್ದರೆ 5 ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಲು ತಮ್ಮ ಪಕ್ಷದೊಂದಿಗೆ ಚರ್ಚಿಸುತ್ತೇನೆ ಎಂಬುದಾಗಿ ಅವರು ಹೇಳಿಕೆ ನೀಡಿರುತ್ತಾರೆ. ಇದು ಸಾರ್ವಜನಿಕರಿಗೆ ಬೆದರಿಕೆ ಮತ್ತು ಅವರ ಮತದಾನದ ನಡವಳಿಕೆಯನ್ನು ಭ್ರಷ್ಟಗೊಳಿಸುವ ಸ್ಪಷ್ಟ ಪ್ರಕರಣವಾಗಿದೆ ಎಂದು ಜೆಡಿಎಸ್ ತನ್ನ ದೂರಿನಲ್ಲಿ ತಿಳಿಸಿದೆ. ಜನತಾ ಪ್ರಾತಿನಿಧ್ಯ ಕಾಯಿದೆಯ ಪ್ರಕಾರ ಭಾರತೀಯ ಸಂವಿಧಾನದ ನಿಬಂಧನೆಗಳನ್ನು ಅಥವಾ 1951ರ ಜನತಾ ಪ್ರಾತಿನಿಧ್ಯ ಕಾಯಿದೆಯನ್ನು ಉಲ್ಲಂಘಿಸಿದ ಪಕ್ಷದಲ್ಲಿ ಆ ರಾಜಕೀಯ ಪಕ್ಷದ ಮಾನ್ಯತೆ ರದ್ದು ಮಾಡುವ ಅಧಿಕಾರವನ್ನು ಚುನಾವಣಾ ಆಯೋಗವು ಹೊಂದಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಬಾಲಕೃಷ್ಣ ಅವರು ಜನತಾ ಪ್ರಾತಿನಿಧ್ಯ ಕಾಯ್ದೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ ಎಂದು ದೂರು ಸಲ್ಲಿಸಿದ…

Read More